ಸೋಮವಾರ, ಮೇ 23, 2016

ನಾವು ಏನೋ ಅಂದುಕೊಳ್ಳುತ್ತೇವೆ, ಅದು ಇನ್ನೇನೋ ಆಗುತ್ತದೆ!

ಹುಡುಗನೊಬ್ಬನ ಗಜಲ್ ಗಳು-
ಯಾವುದೇ ಕಲ್ಮಶವಿಲ್ಲದೇ ನಿರ್ವ್ಯಾಜ ಪ್ರೀತಿಯಾಗಿದ್ದರೆ ನಾವು ಹೇಗೆ ದೂರು ಆಗುತ್ತಿದ್ದೆವು..

- ಪ್ರದ್ಯುಮ್ನ
ಒಲಿದ ಹೃದಯಗಳು ಒಂದಾದರೆ ಬಾಳು ಇಂಪಾದ ಸಂಗೀತದಂತೆ ಕೇಳಿಸಲಾರಂಭಿಸುತ್ತದೆ. ಒಮ್ಮೊಮ್ಮೆ ಅಪಸ್ವರಗಳೇ ಹೆಚ್ಚಾದರೆ ಬಾಳು ನಾನೊಂದು ತೀರ... ನೀನೊಂದು ತೀರ... ಆಗುವುದು ಗ್ಯಾರಂಟಿ. ಆಗ ಕುಹಕ ಮಾತು, ವ್ಯಂಗ್ಯ ನಿಮ್ಮನ್ನು ಚುಚ್ಚಿ ಹೈರಾಣಾಗಿಸುತ್ತವೆ. ಕ್ರಿಕೆಟಿಗ ವಿರಾ್ ಕೊಹ್ಲಿ ಮತ್ತು ನಟಿ ಅನುಷ್ಕಾ ಜತೆಗಿನ ಮಧುರ ಬಾಂಧವ್ಯ ಇಂಥ ಅಪಸ್ವರದ ಮಧ್ಯೆ ಹೊರಳಾಡುತ್ತಿರುವಾಗಲೇ ಅವಳನ್ನು ಇತ್ತೀಚೆಗೆ ಸಾಮಾಜಿಕ ಜಾಲತಾಣ ಅಪಹಾಸ್ಯ ಮಾಡಿ ನಗುತ್ತಿತ್ತು. ಆದರೆ, ಒಲಿದ ಹೃದಯಕ್ಕೆ ಉಂಟಾದ ನೋವನ್ನು ನೋಡಿ ಸುಮ್ಮನಿರದ ಕೊಹ್ಲಿ, ``ನಿಮಗೆ ನಾಚಿಕೆಯಾಗಲ್ವಾ...? ಆಕೆ ನನಗೆ ಯಾವಾಗಲೂ ಸಕಾರಾತ್ಮಕ ಭಾವನೆಯನ್ನೇ ಕಟ್ಟಿಕೊಟ್ಟಿದ್ದಾಳೆ,'' ಎಂದು ಹೂಂಕರಿಸಿದಾಗಲೇ ಕುಹಕಿಗಳು ಸುಮ್ಮನಾದರು. ಇದೆಲ್ಲ ಯಾಕೆ ಹೇಳುತ್ತಿದ್ದೇನೆ ಎಂದರೆ, ನಮ್ಮಿಬ್ಬರಿಗೂ ಹಾಗೆ ಆಗಿತ್ತಲ್ಲವೇ? ನಾವು ಒಲಿದ ಸ್ವರಾಗಳಾಗಿ ಇಂಪಾದ ಸಂಗೀತ ಹಾಡುತ್ತಿರುವಾಗಲೇ ಅಪಸ್ವರ ನಾದ ಹೆಚ್ಚಾಗಿ ಸಂಗೀತ ಹಳ್ಳ ಹಿಡಿದು, ನಾವಿಬ್ಬರೂ ದೂರ ಆದದ್ದು. ಆಗ ಕಾಲೇ್ ಕಾರಿಡಾ್ನಲ್ಲಿ ನಿನ್ನ ಬಗ್ಗೆ ಆಡಿಕೊಂಡವರೆಷ್ಟು? ನಿನ್ನಡೆಗೆ ಕುಹಕ ನಗೆ ಚೆಲ್ಲಿ, ವ್ಯಂಗ್ಯವಾಗಿ ನಕ್ಕವರೆಷ್ಟು..? ಆಗ ನಾನು ಕೂಡ ಥೇ್ ಕೊಹ್ಲಿ ರೀತಿಯಲ್ಲಿ ಪ್ರತಿಕ್ರಿಯಿಸಿದ್ದೆ. ಕೊಹ್ಲಿ ಈ ಘಟನೆಯು ಆ ನೆನಪುಗಳನ್ನೆಲ್ಲ ಒಂದು ಸಾರಿ ತಿರುವಿ ಹಾಕಿದವು. ಸಿನಿಮಾ ಥಿಯೇಟ್ನ ಪ್ರೊಜೆಕ್ಟ್ನಲ್ಲಿ ಫಿ್‌ಮಗಳು ಒಂದೊಂದಾಗಿ ಒಂದರ ಹಿಂದೆ ಒಂದು ಓಡುವ ಹಾಗೆ ನನ್ನ ಮನಪಟಲದಲ್ಲಿ ಈ ನೆನಪುಗಳು ಮಿಂಚಿ ಮಾಯವಾದವು.
ನಾವಿಬ್ಬರೂ ಎಷ್ಟು ಅನ್ಯೋನ್ಯವಾಗಿದ್ದೆವಲ್ಲ. ನಮ್ಮನ್ನು ನೋಡಿ ಇಡೀ ಕ್ಯಾಂಪಸ್ಸೇ ಹೊಟ್ಟೆಕಿಚ್ಚು ಪಡುತ್ತಿತ್ತು. ಕಾಲೇ್ ಚರ್ಚಾಕೂಟಗಳಲ್ಲಿ ನನ್ನನ್ನು ಮೀರಿಸಿದವರೇ ಇರಲಿಲ್ಲ. ಸುತ್ತಲಿನ ಕಾಲೇಜುಗಳಲ್ಲೂ ಪ್ರಖ್ಯಾತಿ ಹಬ್ಬಿತ್ತು. ಚರ್ಚಾಕೂಟದಲ್ಲಿ ಭಾಗವಹಿಸಿದೆನೆಂದರೆ ಅಲ್ಲಿ ಪ್ರಥಮ ಬಹುಮಾನವನ್ನು ಮೊದಲೇ ಮೀಸಲಿಡುತ್ತಿದ್ದರು. ಆದರೆ, ಅಂದಿನ ಆ ಚರ್ಚಾಕೂಟದಲ್ಲಿ ನಾನು ಸೋತು ಹೋಗಿದ್ದೆ. ಅದಕ್ಕೆಲ್ಲ ನೀನೇ ಕಾರಣ ಎಂದು ನನ್ನ ಸ್ನೇಹಿತರಾದಿಯಾಗಿ ಎಲ್ಲರೂ ಕಾರಿಡಾ್ನಲ್ಲಿ ಹಂಗಿಸುತ್ತಿದ್ದರು. ಇದನ್ನೆಲ್ಲ ಹೇಗೆ ಸಹಿಸಿಕೊಳ್ಳಲಿ ಹೇಳು? ನೀನು ಯಾವತ್ತೂ ನನ್ನ ಸಾಧನೆಗೆ ಅಡ್ಡಿಯಾದವಳೇ ಅಲ್ಲ. ನನ್ನ ಸ್ಫೂರ್ತಿ ನೀನು. ನನ್ನ ಯಶಸ್ಸಿನ ಹಿಂದಿನ ಶಕ್ತಿ ನೀನು. ಅದು ನಿನಗೂ ಗೊತ್ತಿತ್ತು. ಆದರೆ, ನೀನು ಮಾತ್ರ ಕಾರಿಡಾ್ ರೂಮ್ಗಳಿಗೆ ಬೆಲೆ ಕೊಟ್ಟು, ಬೆಲೆಕಟ್ಟಲಾಗದ ನನ್ನ ಸ್ನೇಹವನ್ನು ಪೂರ್ತಿ ಕಡಿದುಕೊಂಡೆ. ಇದ್ಯಾವ ನ್ಯಾಯ ಹೇಳು? ನಿನಗೆ ಹಂಗಿಸುತ್ತಿದ್ದವರೆಗೆಲ್ಲ ಸರಿಯಾಗಿಯೇ ನೀರಿಳಿಸಿದ್ದೆ. ಆದರೂ ನಮ್ಮಿಬ್ಬರ ಮಧ್ಯ ಆ ಇಂಪಾದ ಸಂಗೀತ ಮತ್ತೆ ಒಡಮೂಡಲೇ ಇಲ್ಲ. ನಮ್ಮಿಬ್ಬರ ಸ್ನೇಹ-ಪ್ರೀತಿ-ಪ್ರೇಮ ತಿಳಿ ಕೊಳದಲ್ಲಿ ರೂಮ್ ಕಲ್ಲುಗಳು ದೊಡ್ಡ ಅಲ್ಲೋಲ ಕಲ್ಲೋಲ ಅಲೆಗಳನ್ನು ಸೃಷ್ಟಿಸಿದ್ದವು. ಆ ಅಲೆಗಳ ಸುಳಿಯಿಂದ ನಾನು ಹೊರ ಬಂದೆ. ಆದರೆ ನೀನು ಮಾತ್ರ ಅದೇ ಸುಳಿಯಲ್ಲಿ ಆಳವಾಗಿ ಸಿಲುಕುತ್ತಾ, ಮತ್ತಷ್ಟು ಸುಕ್ಕಾಗುತ್ತಾ ಹೋದೆ.
ಈ ಘಟನೆಗಳನ್ನೆಲ್ಲ ಈಗ ರಿವೈಂ್ ಮಾಡಿ ನೋಡಿದಾಗ ಒಂದೊಂದು ಸಾರಿ ಸಿಲ್ಲಿ ಅನ್ನಿಸುತ್ತದೆ. ಮತ್ತೊಂದು ಸಾರಿ ನಾವಿಬ್ಬರೂ ಎಂಥ ಕುಹಕಕ್ಕೆ ಬಲಿಯಾದವೆಲ್ಲ ಎಂಬ ವ್ಯಥೆಯಾಗುತ್ತದೆ. ನಮ್ಮ ನಡುವಿನ ಬಾಂಧವ್ಯ ಅಷ್ಟು ಅಲ್ಪ ಕಾಲದ್ದಾಗಿತ್ತೆಂದರೆ ಅದು ಪೂರಿಪೂರ್ಣವಾಗಿರಲಿಲ್ಲ ಎಂದರ್ಥಲ್ಲವೇ? ಬಾಂಧವ್ಯದ ಬಿಲ್ಡಿಂ್ಗೆ ನಂಬಿಕೆ ಎಂಬ ತಳಪಾಯ ಗಟ್ಟಿಯಾಗಿರಲಿಲ್ಲ.  ಇಲ್ಲದಿದ್ದರೆ, ರೂಮ್ಗಳೆಂಬ ಸಣ್ಣ ಬಿರುಗಾಳಿಗೆ ಇಡೀ ಬಿಲ್ಡಿಂ್ ಕುಸಿದು ಬಿತ್ತು ಎಂದು ನಂಬುವುದಾದರೂ ಹೇಗೆ? ಆದರೆ, ಅದೇ ವಾಸ್ತವ ಅಲ್ಲವೇ? ನಂಬಲೇ ಬೇಕು. ನಂಬಿದ್ದೇನೆ ಕೂಡ. ಇದನ್ನು ಬಿಟ್ಟು ಇನ್ಯಾವ ದಾರಿ ಇತ್ತು ಹೇಳು ನನಗೆ? ಆದರೆ, ನೀನು ಮಾತ್ರ ಏನೂ ಆಗಿಯೇ ಇಲ್ಲ ಎನ್ನುವ ಹಾಗೇ ಇದ್ದೆ. ನಿನ್ನ ಮನಸ್ಸು ಅದ್ಹೇಗೆ ಅಷ್ಟೊಂದು ಕಠೋರವಾಗಿತ್ತು? ಕಿಂಚಿ್ ಆದರೂ ಕರುಣೆ ಗಾಳಿ ತಾಕಲಿಲ್ಲವೇ? ಬಹುಶಃ ತಾಕಿದ್ದರೆ ನನ್ನಂತೆಯೇ ನೀನು ಕುಹುಕಿಗಳಿಗೆಲ್ಲ ಒಂದು ಪಾಠ ಕಲಿಸುತ್ತಿದ್ದೆ. ಈಗೀಗ ನನಗನ್ನಿಸುತ್ತದೆ ನಮ್ಮಿಬ್ಬರದ್ದು ಒತ್ತಾಯಪೂರ್ವಕವಾಗಿ ನಂಬಿಸಿಕೊಂಡು ಪ್ರೀತಿಯಾಗಿತ್ತಾ.. ಸ್ನೇಹವಾಗಿತ್ತಾ ಅಂತ. ಸಹಜವಾದ ಮತ್ತು ಯಾವುದೇ ಕಲ್ಮಶವಿಲ್ಲದ ನಿರ್ವಾಜ್ಯ ಪ್ರೀತಿಯಾಗಿದ್ದರೆ ನಾವು ಹೇಗೆ ದೂರ ಆಗುತ್ತಿದ್ದೆವು?
ಒಂದು ವಿಷಯವನ್ನು ನೀನು ಮರೆತಿದ್ದೆ. ನನ್ನನ್ನು ಎಷ್ಟು ಸಲೀಸಾಗಿ ದಿಕ್ಕರಿಸಿ ಹೋದೆಯಲ್ಲ ನೀನು. ಆದರೆ, ನೀನಾದರೂ ಸುಖವಾಗಿದ್ದಾ? ಇಲ್ಲ. ಇರಲಿಲ್ಲ. ನಿಮ್ಮ ಮನೆಯವರ ಒತ್ತಾಯಕ್ಕೆ ಕಟ್ಟುಬಿದ್ದು ಅದ್ಯಾವುದೋ ಎಂಜಿನಿಯ್ನನ್ನು ಮದುವೆಯಾಗಿ ಮುಂಬಯಿಗೆ ಹಾರಿ ಹೋದೆ. ಎಲ್ಲರಂತೆ ನಾನು, ನಿನ್ನ ಜೀವನವನ್ನು ನೀನು ಕಟ್ಟಿಕೊಂಡೇ ಬಿಡು ಎಂದು ಭಾವಿಸಿ, ಅದೇ ಹಳೆ ನೆನಪುಗಳ ಕ್ಯಾಸೆ್ ಅನ್ನು ರೀವೈಂ್ ಮಾಡುತ್ತಾ ನನ್ನದೇ ಲೋಕದಲ್ಲಿ ಕಳೆದು ಹೋದೆ. ಹಳೇ ದೇಗುಲ, ಗೋರಿಗಳನ್ನು ಹುಡುಕಿಕೊಂಡು ಹೋದೆ. ಅವುಗಳ ಹಿಂದಿರುವ ಇತಿಹಾಸ ಕೆದಕುತ್ತಾ ನಮ್ಮಿಬ್ಬರ ಗತಪ್ರೇಮ ಮರೆಯಲು ಪ್ರಯತ್ನಿಸುತ್ತಿದ್ದೆ. ಈ ಕೆಲಸ ನನಗೆ ಒಂದಿಷ್ಟು ನೆಮ್ಮದಿ ಮತ್ತು ಇನ್ನೊಂದಿಷ್ಟು ಉತ್ಸಾಹ ತುಂಬುತ್ತಿತ್ತು. ಯಾಕೆ ಗೊತ್ತಾ? ಕೆಲವು ರಾಜರು, ಶ್ರೀಮಂತರು ತಮ್ಮ ಪ್ರೀತಿಯ ಪ್ರತೀಕವಾಗಿ, ಪತ್ನಿಯರ ನೆನಪಿಗೆ ಗುಡಿಯನ್ನೋ, ಗೋರಿಯನ್ನೋ ಕಟ್ಟಿ ತಮ್ಮ ಪ್ರೇಮವನ್ನು ಚಿರಸ್ಥಾಯಿಯಾಗಿಸಲು ಪ್ರಯತ್ನಿಸಿದ್ದರು. ಇಂಥವುಗಳ ಹಿಂದೆ ದಂತಕತೆಗಳು ಹುಟ್ಟಿಕೊಂಡು, ನಿರ್ವಾಜ್ಯ ಪ್ರೇಮವೆಲ್ಲ ಗಾಳಿಗೆ ತೂರಿ ಹೋಗಿತ್ತು. ಸ್ಥಾನಪಲ್ಲಟವಾದ ಪ್ರೇಮದ ಚುಕ್ಕೆಗಳನ್ನು ಸೇರಿಸಿ ಸುಂದರವಾದ ಕಲಾಕೃತಿ ರಚಿಸಲು ಪ್ರಯತ್ನಿಸುತ್ತಿದ್ದೆ. ತುಸು ಮಟ್ಟಿಗೆ ಯಶಸ್ವಿಯಾದೆ ಅಂದುಕೊಂಡರೂ ತಪ್ಪಿಲ್ಲ. ಆದರೆ, ಎದೆಯಾಳದಲ್ಲಿ ನೀನು ಬಿಟ್ಟು ಹೋದ ನೆನಪುಗಳು ಮಾತ್ರ ಸಾಯುತ್ತಲೇ ಇರಲಿಲ್ಲ. ಆಗೆಲ್ಲ ನಾನು ಇನ್ನಾವುದೋ ಗುಡಿಯನ್ನೋ, ಗೋರಿಯನ್ನೋ ಹುಡುಕಿಕೊಂಡು ಹೋಗುತ್ತಿದ್ದೆ.
ಅಂದೊಂದು ದಿನ ನಾನು ಯಾವುದನ್ನು ಕೇಳಬಾರದು ಎಂದುಕೊಂಡಿದ್ದೇನೋ ಅದೇ ಸುದ್ದಿಯನ್ನು ಕೇಳಬೇಕಾಯಿತು. ನೀನು ಊರಿಗೆ ಬಂದಿದ್ದು ಗೊತ್ತಾಯಿತು ನಿಜ. ಆದರೆ ನಿನ್ನನ್ನು ನೋಡುವ, ನಿನ್ನ ಎದುರಿಗೆ ಬರುವ ಧೈರ್ಯ ಇರಲಿಲ್ಲ. ವಿಧಿಯಾಟ ಬೇರೆನೇ ಅಲ್ಲವೇ? ಅದೊಂದು ಸಂಜೆ ಊರ ಹೊರಗಿನ ಗುಡಿಯಲ್ಲಿ ನೀನು ನಿನ್ನ ಅಮ್ಮನ ಜತೆ ನಿಂತಿದ್ದೆ,  ಆದರೆ, ನಿನ್ನ ನೋಡಿ ನನ್ನ ನಾನೇ ನಂಬಲಿಲ್ಲ. ನಿಜಕ್ಕೂ ಅದು ನೀನೇನಾ? ಹೇಗಿದ್ದೆ ನೀನು- ಬಳಕುವ ಬಳ್ಳಿ. ಸೂಜಿಮಲ್ಲಿಗೆಯಂಥವಳು. ಸೂಜಿಗಲ್ಲಿನವಳು. ಕಾಲೇ್ನಲ್ಲಿದ್ದಾಗ ಎಲ್ಲ ಹುಡುಗರು ಒಂದು ಕ್ಷಣವಾದರೂ ನಿನ್ನನ್ನು ನೋಡದೆ ಹೋಗುತ್ತಿರಲಿಲ್ಲ. ಅಂಥ ವ್ಯಕ್ತಿತ್ವ ನಿನ್ನದು. ಅವಳೇನಾ ನೀನು ಎಂಬ ಮಟ್ಟಿಗೆ ಬದಲಾಗಿದ್ದೆ. ಮುಖದಲ್ಲಿ ಕಳೆ ಇಲ್ಲ; ನಕ್ಕು ಎಷ್ಟೋ ದಿನಗಳವಾಗಿರುವ ಹಾಗಿತ್ತು. ಕೃಶ ಶರೀರದಲ್ಲಿ ಸುಮ್ಮನೇ ನೆಪಕ್ಕೆ ಮಾತ್ರ ಎನ್ನುವಂಥ ಜೀವ. ನಿನ್ನ ಜೀವನದಲ್ಲಿ ಹೀಗೆಲ್ಲ ಆಗಬಾರದೆಂದು ನಾನು ಬಯಸಿದ್ದೆ. ಆದರೆ, ಅದೇ ಆಗಿ ಹೋಗಿತ್ತು. ನಿನ್ನ ಇಂದಿನ ಪರಿಸ್ಥಿತಿಗೆ ಆ ನಿನ್ನ ಹಣ, ಹೆಣ್ಣುಬಾಕ ಗಂಡನೇ ಕಾರಣ ಎಂಬುದು ಗೊತ್ತಾಗಿದ್ದು ನಿನ್ನ ಗೆಳತಿಯಿಂದಲೇ. ಗೊತ್ತಿದ್ದು ಗೊತ್ತಿದ್ದು ನಿಮ್ಮ ಮನೆಯವರು ಅಂಥವನ ಖೆಡ್ಡಾಕ್ಕೆ ನಿನ್ನನ್ನು ಕೆಡವಿದ್ದರು ಎಂದು ಆಕೆ ಕಣ್ಣೀರಾಗಿದ್ದಳು.
ನೋಡು ಜೀವನವೇ ಹೀಗೆ. ನಾವು ಏನು ಅಂದುಕೊಂಡು ಹೋಗುತ್ತೇವೆ. ಅದು ಇನ್ನೇನೋ ಆಗುತ್ತದೆ. ಕಾರಿಡಾ್ಗಳಲ್ಲಿನ ಹಂಗಿಸುವ ಮಾತುಗಳನ್ನು, ರೂಮ್ಗಳನ್ನು ನೀನು ಅಷ್ಟು ಸೀರಿಯ್ ಆಗಿ ತೆಗೆದುಕೊಳ್ಳದಿದ್ದರೆ ಇಂದು ನಮ್ಮಿಬ್ಬರದೇ ಒಂದು ಪುಟ್ಟ ಸಂಸಾರ ಆನಂದ ಸಾಗರವಾಗಿರುತ್ತಿತ್ತು. ಆದರೆ, ಈಗ ಕಾಲ ಮಿಂಚಿ ಹೋಗಿದೆ. ಚಿಂತಿಸಿ ಫಲವಿಲ್ಲ ಎನ್ನುವ ಹಾಗಿಲ್ಲ. ನಿನ್ನ ನೆನಪಲ್ಲಿ ನಾನು ಇಂದಿಗೂ ಹಾಗೆಯೇ ಇದ್ದೇನೆ. ಅಂದು ಹೇಗಿದ್ದೇನೋ ಹಾಗೆ. ಮುಂದಿನ ನಿರ್ಣಯ ನಿನಗೆ ಬಿಟ್ಟದ್ದು.

ಸೋಮವಾರ, ಮೇ 2, 2016

ವೀಸಾ ಗದ್ದಲ್ಲದಲ್ಲಿ ಸಿಕ್ಕ ಇಸಾ

ಪೂರ್ವ ತುರ್ಕಿಸ್ತಾನ ಎಂದೂ ಕರೆಯಲಾಗುವ ಚೀನಾದ ಕ್ಸಿ್ಜಿಯಾಂ್ ಉಯಿಗು್ ಸ್ವಾಯತ್ತ ಪ್ರದೇಶದ ಪತ್ಯೇಕತಾವಾದಿ ನಾಯಕ ದೋಲ್ಕು್ ಇಸಾ ಅಲ್ಪ ಸಂಖ್ಯಾತ ಉಯಿಗ್ ಪಂಗಡದ ನಾಯಕ.

ದೋಲ್ಕು್ ಇಸಾ.
ಕಳೆದ ವಾರ ಭಾರತದ ಮಾಧ್ಯಮಗಳಲ್ಲಿ ಕಾಣಿಸಿಕೊಂಡು ಪ್ರಸಿದ್ಧಿಯಾದ `ಅಪರಿಚಿತ' ವ್ಯಕ್ತಿ ಇವರು. ಚೀನಾದಲ್ಲಿ ಸ್ವಾಯತ್ತ ಪ್ರಾಂತವಾಗಿರುವ ಕ್ಸಿ್ಜಿಯಾಂ್ ಸ್ವಂತ್ರಗೊಳ್ಳಲು ಹೋರಾಟ ನಡೆಸುತ್ತಿರುವ ನಾಯಕ ಇವರು. ಆದರೆ, ಕಮ್ಯುನಿ್‌ಟ ಚೀನಾ ಸರಕಾರಕ್ಕೆ ಇವರೊಬ್ಬ `ಮೋ್‌ಟ ವಾಂಟೆ್ ಟೇರರಿ ್‌ಟ'.
ಇತ್ತೀಚೆಗಷ್ಟೇ ಭಾರತ ವಿಶ್ವಸಂಸ್ಥೆಯಲ್ಲಿ ತನ್ನ ಪ್ರಭಾವ ಬೀರುವ ಕೆಲಸಕ್ಕೆ ಕೈ ಹಾಕಿತ್ತು. ಪಠಾ್ಕೋ್ ವಾಯು ನೆಲೆ ದಾಳಿಯ ಪ್ರಮುಖ ಸಂಚುಕೋರ ಹಾಗೂ ಜೈಷೆ ಮೊಹಮ್ಮ್ ಉಗ್ರ ಸಂಘಟನೆಯ  ನಾಯಕ ಮಸೂ್ ಅಜ್ನನ್ನು ವಿಶ್ವಸಂಸ್ಥೆಯ ಉಗ್ರರ ಪಟ್ಟಿಗೆ ಸೇರಿಸುವ ಪ್ರಯತ್ನವನ್ನು ಭಾರತ ನಡೆಸಿತ್ತು. ಆದರೆ, ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ವಿಟೋ ಪವ್ ಹೊಂದಿರುವ ಚೀನಾ ಎಂದಿನಂತೆ ಭಾರತದ ಯತ್ನಕ್ಕೆ ಅಡ್ಡಗಾಲು ಹಾಕಿತ್ತು. ಚೀನಾದ ಈ ನಡೆ ಸಹಜ ಕೂಡ. ಪಾಕಿಸ್ತಾನ ಮತ್ತು ಚೀನಾ ಅತ್ಯಾಪ್ತ ರಾಷ್ಟ್ರಗಳೆಂಬುದು ಈಗೇನೂ ಗುಟ್ಟಾಗಿ ಉಳಿದಿಲ್ಲ. ಈ ವಿಷಯದಲ್ಲಿ ಕೊಂಚ ಮುಜಗರ ಎದುರಿಸಿದ್ದ ಭಾರತಕ್ಕೆ, ಚೀನಾಗೆ ತಿರುಗೇಟು ನೀಡಲು ಸಿಕ್ಕಿದ್ದ ಹೊಸ ಅಸ್ತ್ರವೇ ಈ `ದೋಲ್ಕು್ ಇಸಾ'.
ಅಮೆರಿಕ ನೆರವಿನಿಂದ ಭಾರತದ ಧರ್ಮಶಾಲಾದಲ್ಲಿ ಏಪ್ರಿ್ 30ರಿಂದ ಎರಡು ದಿನಗಳ ಕಾಲ ನಡೆದ `ಇನಿಶಿಯೇಟಿ್‌ಸ ಫಾ್ ಚೀನಾ' ಸಮಾವೇಶದಲ್ಲಿ ಪಾಲ್ಗೊಳ್ಳಲು ವಿಶ್ವ ಉಯಿಗು್ ಕಾಂಗ್ರೆ್(ಡಬ್ಲ್ಯೂಯುಸಿ)ನ ಪ್ರಧಾನ ಕಾರ್ಯದರ್ಶಿ ದೋಲ್ಕು್ ಇಸಾಗೆ ಆಹ್ವಾನ ನೀಡಲಾಗಿತ್ತು. ಇದಕ್ಕಾಗಿ ಇಸಾ ಭಾರತಕ್ಕೆ ಬರುವ ಸಿದ್ಧತೆ ನಡೆಸಿದ್ದರು. ವೀಸಾ ಕೂಡ ಸಿಕ್ಕಿತ್ತು. ಈ ವಿಷಯ ಭಾರತೀಯ ಮಾಧ್ಯಮಗಳಲ್ಲಿ `ಚೀನಾಗೆ ಭಾರತದ ಎದಿರೇಟು' ಎಂದು ಬಿಂಬಿತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಚೀನಾ; ಭಾರತದ ಮೇಲೆ ಒತ್ತಡ ತಂದು, ದೋಲ್ಕು್ಗೆ ನೀಡಿದ್ದ ವೀಸಾ ರದ್ದಾಗುವಂತೆ ನೋಡಿಕೊಂಡಿತು. ಇಸಾ ಚೀನಾಕ್ಕೆ ಬೇಕಾಗಿರುವ ಮೋ್‌ಟ ವಾಟೆಂ್ ಉಗ್ರ ನಾಯಕ. ಆತನ ವಿರುದ್ಧ ಇಂಟ್ಪೋ್ನಲ್ಲಿ ರೆ್ ಕಾರ್ನ್ ನೋಟಿ್ ನೀಡಲಾಗಿದೆ. ಅಂಥವನಿಗೆ ಹೇಗೆ ವೀಸಾ ನೀಡುತ್ತೀರಿ ಎಂದು ಪ್ರಶ್ನಿಸಿತು. ಚೀನಾದ ಒತ್ತಡಕ್ಕೆ ಕೊನೆಗೂ ಮಣಿದ ಭಾರತ, ಯಾವುದೇ ವಿವರ ನೀಡದೆ ದೋಲ್ಕು್ ಇಸಾ ಅವರಿಗೆ ನೀಡಲಾಗಿದ್ದ ವೀಸಾ ರದ್ದು ಮಾಡಿತು. ಅಲ್ಲಿಗೆ ಮತ್ತೊಂದು ಬಾರಿ ಭಾರತ ಅಂತಾರಾಷ್ಟ್ರೀಯವಾಗಿ ಮುಜಗರ ಎದುರಿಸುವಂತಾಯಿತು. ಯಾವುದೇ ದೂರದೃಷ್ಟಿ ಇಲ್ಲದೆ, ಭಾವನಾತ್ಮಕ, ಸೇಡಿನ ಕ್ರಮಗಳಿಂದ ನಿರ್ಧಾರ ಕೈಗೊಂಡರೆ ಇಂಥ ಮುಜಗರದ ಸನ್ನಿವೇಶಗಳು ಎದುರಿಸಲೇಬೇಕಾಗುತ್ತದೆ. ಇದಕ್ಕೆ ಭಾರತ ಕೂಡ ಹೊರತಾಗಿಲ್ಲ.
ಇದೆಲ್ಲ ಸರಿ. ಆದರೆ, ಈ ದೋಲ್ಕು್ ಇಸಾ ಯಾರು? ಆತನ ಮೇಲೇಕೆ ಚೀನಾಗೆ ಮುನಿಸು? ಎಂಬಂಥ ಪ್ರಶ್ನೆಗಳು ಹುಟ್ಟಿಕೊಳ್ಳುವುದು ಸಹಜ. ಚೀನಾದ ವಾಯವ್ಯ ಭಾಗಕ್ಕಿರುವ ವಿಶಾಲವಾದ ಭೂ ಪ್ರದೇಶವೇ `ಕ್ಸಿ್ಜಿಯಾಂ್ ಉಯಿಗು್ ಸ್ವಾಯತ್ತ ಪ್ರದೇಶ.' ಖನಿಜಗಳು ಮತ್ತು ನೈಸರ್ಗಿಕ ಅನಿಲ ಹೇರಳವಾಗಿರುವ ಈ ಪ್ರದೇಶ ಚೀನಾಗೆ ಅಕ್ಷರಶಃ ಚಿನ್ನದ ಗಣಿ. ಈ ಪ್ರದೇಶದಲ್ಲಿ ಅನೇಕ ಪಂಗಡಗಳಿದ್ದು ಈ ಪೈಕಿ ಉಯಿಗು್ ಪಂಗಡದವರೇ ಹೆಚ್ಚಾಗಿದ್ದಾರೆ. ಚೀನಾದಲ್ಲಿ ಅಲ್ಪಸಂಖ್ಯಾತರಾಗಿರುವ ಇವರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದ್ದಾರೆ. `ವಿಶ್ವ ಉಯಿಗು್ ಕಾಂಗ್ರೆ್' ಎಂಬ ಸಂಘಟನೆ ಈ ಹೋರಾಟದ ನೇತೃತ್ವ ವಹಿಸಿಕೊಂಡಿದೆ. ಇದರ ಅಧ್ಯಕ್ಷ ರೆಬಿಯಾ ಖಾದಿ್. ಇವರು ಅಮೆರಿಕದಲ್ಲಿದ್ದಾರೆ. ಈ ಸಂಘಟನೆಯ ಪ್ರಧಾನ ಕಾರ್ಯದರ್ಶಿಯೇ ಈ ದೋಲ್ಕು್ ಇಸಾ. ಸದ್ಯ ಜರ್ಮನಿಯಲ್ಲಿ ವಾಸವಾಗಿರುವ ಇಸಾ, ಪ್ರಜಾಪ್ರಭುತ್ವದ ಪರ ಹೋರಾಟಗಾರ. 1997ರಲ್ಲಿ ಚೀನಾದಿಂದ ಪಲಾಯನ ಮಾಡಿ ಜರ್ಮನಿಯಲ್ಲಿ ಆಶ್ರಯ ಪಡೆದರು. 2006ರಲ್ಲಿ ಜರ್ಮನಿ ಇವರಿಗೆ ಅಲ್ಲಿನ ಪೌರತ್ವ ನೀಡಿದೆ.
ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ವಿಶ್ವ ಉಯಿಗು್ ಕಾಂಗ್ರೆ್ ಚಟುವಟಿಕೆಗಳನ್ನು ಚೀನಾ ಸರಕಾರ ಉಗ್ರ ಕೃತ್ಯಗಳಂದೇ ಪರಿಗಣಿಸುತ್ತದೆ. ಹೀಗಾಗಿ, ಈ ಹೋರಾಟದಲ್ಲಿ ಪಾಲ್ಗೊಳ್ಳುವವರೆಲ್ಲರೂ ಉಗ್ರರೇ. ಕ್ಸಿ್ಜಿಯಾಂ್ಗೆ ಪೂರ್ವ ತುರ್ಕಿಸ್ತಾನ ಎಂದೂ ಕರೆಯಲಾಗುತ್ತದೆ. ಹಾಗೆ ನೋಡಿದರೆ, ವೀಸಾಗೆ ಸಂಬಂಧಿಸದಂತೆ ಇಸಾ ಇದೇ ಮೊದಲ ಬಾರಿಗೇನೂ ತೊಂದರೆಯಲ್ಲಿ ಸಿಕ್ಕಿ ಹಾಕಿಕೊಂಡಿಲ್ಲ. 2003ರಿಂದಲೇ ದೋಲ್ಕು್ ಚೀನಾದ ಉಗ್ರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಉಯಿಗು್ರ  ಹೋರಾಟಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ ತಂದುಕೊಡಲು 2008ರಲ್ಲಿ ಬೀಜಿಂ್ನಲ್ಲಿ ನಡೆದ ಒಲಿಂಪಿಕ ಬಹಿಷ್ಕರಿಸುವಂತೆಯೂ ದೋಲ್ಕು್ ಕರೆ ನೀಡಿದ್ದರು. ಇದಕ್ಕೂ ಮುಂಚೆ 2006ರಲ್ಲಿ ತೈವಾ್ಗೆ ೇಟಿ ನೀಡಿ, ಅಲ್ಲಿನ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಇದು ಚೀನಾಕ್ಕೆ ಗೊತ್ತಾಗುತ್ತಿದ್ದಂತೆ ಒತ್ತಡ ತಂದು, ತೈವಾ್ ಪ್ರವೇಶವನ್ನು ನಿರಾಕರಿಸುವಂತೆ ಮಾಡಿತು. ಇದೇ ವೇಳೆ, ವಿಶ್ವ ಉಯಿಗು್ ಕಾಂಗ್ರೆ್ನ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ದೋಲ್ಕು್ ಹಿಂದೆ ಸರಿದರೆ ಅವರ ಮೇಲಿರುವ ನಿಷೇಧವನ್ನು ಹಿಂತೆಗದುಕೊಳ್ಳಲಾಗುವುದು ಎಂದೂ ಪ್ರಕಟಿಸಿತು. ಆದರೆ, ದೋಲ್ಕು್ ಇದಾವುದಕ್ಕೂ ಬಗ್ಗದೆ, ಉಯಿಗು್ ಪ್ರತ್ಯೇಕತೆಯ ಹೋರಾಟದ ಮುಂಚೂಣಿಯಲ್ಲೇ ಇದ್ದಾರೆ. ಇಸಾ ಮತ್ತೊಮ್ಮೆ ಇಂಥ ತೊಂದರೆಗೆ ಸಿಕ್ಕಿ ಹಾಕಿಕೊಂಡಿದ್ದು ದಕ್ಷಿಣ ಕೊರಿಯಾಗೆ ಹೋದಾಗ. ಅದು 2009ನೇ ಇಸ್ವಿ. ದಕ್ಷಿಣ ಕೊರಿಯಾದಲ್ಲಿ `ಏಷ್ಯಾ ಪ್ರಜಾಪ್ರಭುತ್ವೀಕರಣ ವಿಶ್ವ ವೇದಿಕೆ'ಯ ಸಮಾವೇಶ ಆಯೋಜನೆಯಾಗಿತ್ತು. ಇದಕ್ಕೆ ಇಸಾ ಕೂಡ ಆಮಂತ್ರಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ದಕ್ಷಿಣ ಕೊರಿಯಾಕ್ಕೆ ತೆರಳುತ್ತಿದ್ದಂತೆ ಅವರನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಈ ಬಗ್ಗೆಯೂ ಇಸಾ ತಮ್ಮ ವಿರೋಧವನ್ನು ದಾಖಲಿಸಿದ್ದರು. ಅಲ್ಲದೆ, ಅ್ರೀಪ್ರಸೆಂಟೆ್ ಆ್ಯಂ್ ಪೀಪ್‌ಸ ಆರ್ಗನೈಷೇ್ ಕೂಡ, ದಕ್ಷಿಣ ಕೊರಿಯಾದ ಕ್ರಮವನ್ನು ಖಂಡಿಸಿತ್ತು. ಇಸಾ ವಿರುದ್ಧ ಚೀನಾ ಮಾಡುತ್ತಿರುವ ಆರೋಪಗಳೆಲ್ಲವೂ ನಿರಾಧಾರ. ಅವರು ಯಾವುದೇ ಉಗ್ರ ಚಟುವಟಿಕೆ ನಡೆಸಿಲ್ಲ ಮತ್ತು ಅಂಥ ಸಂಘಟನೆಗಳ ಜತೆ ಗುರುತಿಸಿಕೊಂಡಿಲ್ಲ ಎಂದು ಹೇಳಿತು. ಎರಡು ದಿನಗಳ ಕಾಲ ದಕ್ಷಿಣ ಕೊರಿಯಾ ವಶದಲ್ಲಿದ್ದ ಇಸಾರನ್ನು ಬಿಡುಗಡೆ ಮಾಡಲಾಯಿತಾದರೂ, ಅವರಿಗೆ ದಕ್ಷಿಣ ಕೊರಿಯಾ ಪ್ರವೇಶಕ್ಕೆ ಅವಕಾಶ ಸಿಗಲೇ ಇಲ್ಲ. ಇದೀಗ ಭಾರತಕ್ಕೆ ಪ್ರವೇಶಿಸುವ ವಿಷಯದಲ್ಲೂ ಇಸಾ ಇಂಥದ್ದೇ ಸಮಸ್ಯೆಯನ್ನು ಎದುರಿಸಿದ್ದಾರೆ.
ದೋಲ್ಕು್ ಇಸಾ ಅವರ ವೈಯಕ್ತಿಕ ಜೀವನದ ಬಗ್ಗೆ ಅಷ್ಟೊಂದು ಮಾಹಿತಿ ಇಲ್ಲ. ಆದರೆ, ಅವರು ವಿದ್ಯಾರ್ಥಿ ದೆಸೆಯಿಂದಲೂ ಹೋರಾಟರರಾಗಿದ್ದರು ಎಂಬುದಂತೂ ಸತ್ಯ. 1980ರ ದಶಕದಲ್ಲಿ ಅವರು ಕ್ಸಿ್ಜಿಯಾಂ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವಾಗಲೇ ಪ್ರಜಾಪ್ರಭುತ್ವ ಪರ ಹೋರಾಟಗಳನ್ನು ಸಂಘಟಿಸುತ್ತಿದ್ದರು. ಇದರಿಂದಾಗಿಯೇ ಅವರು ವಿಶ್ವವಿದ್ಯಾಲಯದಿಂದ ಹೊರಬೀಳಬೇಕಾಯಿತು. ಈ ವೇಳೆಯಲ್ಲಿ ಚೀನಾದ ಕಮ್ಯುನಿ್‌ಟ ಶಾಲೆಗಳಲ್ಲಿ ಕಲಿಯುತ್ತಿರುವ ಉಯಿಗು್ ಮಕ್ಕಳಿಗೆ, ಉಯಿಗು್ ಪಂಗಡದ ನಿಜವಾದ ಇತಿಹಾಸ, ಸಂಸ್ಕೃತಿ ತಿಳಿಸುವ ಪುಸ್ತಕಗಳನ್ನ ಹಂಚಲಾರಂಭಿಸಿದರು. ಇದು ಕೂಡ ಅಲ್ಲಿನ ಸರಕಾರದ ಕಣ್ಣು ಕೆಂಪಗಾಗುವಂತೆ ಮಾಡಿತು. ಅವರನ್ನು ಗಡಿಪಾರು ಮಾಡಿದ್ದರಿಂದ ಇಸಾ ಟರ್ಕಿಗೆ ತೆರಳಬೇಕಾಯಿತು. ಅರ್ಧಕ್ಕೆ ನಿಂತಿದ್ದ ಉನ್ನತ ವಿದ್ಯಾಭ್ಯಾಸವನ್ನು ಮುಂದುವರಿಸಲು ನಿರ್ಧರಿಸಿದ ಇಸಾ, ಟರ್ಕಿಯ ಘಾಜಿ ವಿಶ್ವವಿದ್ಯಾಲಯದಿಂದ ಪಾಲಿಟಿಕ ಮತ್ತು ಸೋಸಿಯಾಲಾಜಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು.
ಕಮ್ಯುನಿ್‌ಟ ಸರಕಾರದ ಹತ್ತಿಕ್ಕುವ ಧೋರಣೆಯ ವಿರುದ್ಧ ಹೋರಾಟ ನಡೆಸುತ್ತಲೇ ಬಂದಿರುವ ಇಸಾ, ಅಲ್ಪಸಂಖ್ಯಾತ ಉಯಿಗು್ ಮುಸ್ಲಿಮರ ಆಶಾಕಿರಣ. ಇಂದಲ್ಲ ನಾಳೆ, ಕ್ಸಿ್ಜಿಯಾಂ್ ಉಯಿಗು್ ಸ್ವಾಯತ್ತ ಪ್ರದೇಶ ಪೂರ್ವ ತುರ್ಕಿಸ್ತಾನವಾಗಿ ಬದಲಾಗುತ್ತದೆ ಎಂಬ ನಂಬಿಕೆಯಲ್ಲಿದ್ದಾರೆ. ಆದರೆ, ಅದು ಅಷ್ಟು ಸರಳವಲ್ಲ. ಟಿಬೆಟಿಯನ್ನರು ಮತ್ತು ಉಯಿಗು್ರು ಸಮಾನ ದುಃಖಿಗಳು. ಟಿಬೆಟಿಯನ್ನರು ಕೂಡ ಪ್ರತ್ಯೇಕತೆಗಾಗಿ ದಶಕಗಳಿಂದಲೂ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಏಷ್ಯಾದಲ್ಲೇ ಆರ್ಥಿಕ ಬಲಾಢ್ಯ ರಾಷ್ಟ್ರವಾಗಿರುವ ಚೀನಾದಲ್ಲಿ  ಪ್ರಜಾಪ್ರಭುತ್ವದ ಬೀಜಗಳನ್ನು ಬಿತ್ತುವ ಕೆಲಸವನ್ನು ದೋಲ್ಕು್ ಇಸಾ ಸೇರಿದಂತೆ ಕೆಲವರು ಮಾಡುತ್ತಿದ್ದಾರೆ. ಈ ಬೀಜ ಮೊಳಕೆಯೊಡೆಯುತ್ತಿದ್ದಂತೆ ಚೀನಾ ಅದನ್ನು ಹಿಸುಕುವುದರಲ್ಲಿ ಯಶಸ್ವಿಯಾಗುತ್ತದೆ. ವ್ಯಕ್ತಿಗಳನ್ನು ಹತ್ತಿಕ್ಕಬಹುದು. ಆದರೆ ಚಳವಳಿಗಳನ್ನ ಹತ್ತಿಕ್ಕಲಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ದೋಲ್ಕು್ ಇಸಾರಂಥ ಅನೇಕ ಹೋರಾಟಗಾರರು ಮಹತ್ವದ ವ್ಯಕ್ತಿಗಳು ಎನಿಸಿಕೊಳ್ಳುತ್ತಾರೆ.

This article published in VK on May 1, 2016 Edition