ಮಲ್ಲಿಗೆಯ ಮುಖಕ್ಕೆ ಮುಂಗಾರು ಸಿಂಚನ
ಚಿತ್ತ ಚಿತ್ತಾರ ಮೂಡಿಸಿದೆ
ಆ ನಿನ್ನ ಕರಿ ಮುಂಗುರುಳಿನ ಕುಂಚ
ನನ್ನೆದೆಯ ಬಾಂದಳವೆಲ್ಲ ಕಂಪನ
ಸ್ನಿಗ್ಧ ಸೌಂದರ್ಯದ ಸುರತಿ
ನನ್ನ ನಗುವೆಲ್ಲಾ ನೀನು
ನನ್ನ ಕನಸು,ಕನವರಿಕೆ ನೀನು
ನೀನಿಲ್ಲದ ಬಾಳು ಬಾಳೇ..?
ಸಾವಿರ ಸಂಕೋಲೆ ದಾಟಿ
ಕೈಹಿಡಿವೆ ಈ ಜಗವ ಮೀಟಿ
ನೀನೊಬ್ಬಳಿದ್ದರೆ ಸಾಕು
ಕಾಲ ಕೆಳಗೆ ಆ ನಾಕು
ನಿನ್ನ ನಗುವಿನ ಅಲೆಗಳು
ನನ್ನ ಯಶಸ್ಸಿನ ಕಲೆಗಳು
ಆ ಅಳು, ದು:ಖ ದುಮ್ಮಾನ
ಇರಲಿ ಕಡಲಾಚೆ....
-Malli
ಶನಿವಾರ, ಮಾರ್ಚ್ 17, 2007
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
-
| ಮಲ್ಲಿಕಾರ್ಜುನ ತಿಪ್ಪಾರ, ಬೆಂಗಳೂರು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನ 50ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆಂಬ ಸುದ್ದಿ ಹೊರ ಬೀಳುತ್ತಿದ್...
-
ಶೋಷಿತರ ಪರ ನಿಲ್ಲುವ ನ್ಯಾಯವಾದಿಯ ಕತೆಯ ಸಿನಿಮಾ ‘ ಜೈ ಭೀಮ್ ’ ಸದ್ದು ಮಾಡುತ್ತಿದೆ . ನೈಜ ಕತೆಯನ್ನಾಧರಿಸಿದ ಈ ಚಿತ್ರದ ಅಸಲಿ ಹೀರೊ ಜಸ್ಟೀಸ್ ಕೆ . ಚಂದ್ರು . ...
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ