ಆ ಮುದುಕಿ ಮಲಗಿದ್ದಾಳೆ
ಚೆನ್ನೈನ ಆ ಜನನಿಬಿಡ ರಸ್ತೆಯಲ್ಲಿ
ಹಾಗೇ ಹೋಗಿ ಬರುವವರನ್ನು ನೋಡುತ್ತಾಳೆ
ಸ್ಥಿತ ಪ್ರಜ್ಞೆ ಕಣ್ಣುಗಳಿಂದ..
ಅವರು ನೋಡುತ್ತಾರೆ ಅವಳನ್ನು.
ಕರುಣೆ ಇದ್ದವರು ಕಾಸು ಎಸೆಯುತ್ತಾರೆ
ಇಲ್ಲದವರು ಕಿಸಕ್ಕೆಂದು ನಕ್ಕು ಮುನ್ನಡೆಯುತ್ತಾರೆ
ಅವಳ ಮಲಗಿದ ಶೈಲಿಯೋ..
ವಿಷ್ಣು ಕಮಲಾರೂಢ ರೀತಿ
ಅವಳಗಿಲ್ಲ ಯಾರದೋ ಭೀತಿ
ದಿನಕರ ದಿನ ಬೆಳಗಿ ಮುಳುಗೋವರೆಗೂ
ಹಾಗೆಯೇ ಮಲಗಿರುತ್ತಾಳೆ
ಅವಳ ಸುತ್ತ ಬಿದ್ದ ಕಾಸು ಒಮ್ಮೊಮ್ಮೆ ಕಿಸಕ್ಕೇನ್ನುತ್ತದೆ..
ಮಹಾನಗರದ ಸಮಸ್ತ ಆಗು ಹೋಗು ಕಂಡು.
ಅವಳು ಈಗಮ್ಮೊ..ಆಗೊಮ್ಮೆ
ತನ್ನಡೆಗೆ ಬರುವ ವಾಹನ, ಸೂಟು-ಬೂಟುಧಾರಿಗಳನ್ನುನೋಡುತ್ತಾಳೆ...
ಏನೋ ಹೇಳಲು ಹೋಗುತ್ತಾಳೆ.
ಮಾತು ಮಾತ್ರ ಗಂಟಲಲ್ಲೇ ಉಳಿಯುತ್ತದೆ
ಮತ್ತ ಅದೇ ಸ್ಥಿತ ಪ್ರಜ್ಞೆ ದೃಷ್ಠಿ, ತದೇಕ ಚಿತ್ತ ಎಲ್ಲರತ್ತ
ಬಸಗಾಗಿ ಕಾಯುತ್ತ
ನೋಡುತ್ತೇನೆ ನಾನು ಅವಳತ್ತ
ಅವಳು ಮಾತ್ರ ಕಾಸು-ಪಾಸು ಎನ್ನುತ್ತ
ಇನ್ನಾವುದರತ್ತ ಹರಿಸಿ ಚಿತ್ತ
ನಗುತ್ತಾಳೆ. ಬಸ್ ಬಂತೆಂದು ಧಾವಿಸುವಾಗ
ಒಂದು- ಎರಡೋ ರೂಪಾಯಿ ಎಸೆಯುತ್ತೇನೆ
ಅವಳು ಮಾತ್ರ ಹಾಗೇ ಮಲಗಿರುತ್ತಾಳೆ.
-ಮಲ್ಲಿ
ಬುಧವಾರ, ಏಪ್ರಿಲ್ 4, 2007
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
-
ಮೂರೂ ಮಾದರಿಯ ಕ್ರಿಕೆಟ್ನಲ್ಲಿಭಾರತೀಯ ಕ್ರಿಕೆಟ್ ತಂಡದ ಕಾಯಂ ಸದಸ್ಯರಾಗಿರುವ ರವೀಂದ್ರ ಜಡೇಜಾ ಅವರೀಗ ಐಪಿಎಲ್ನಲ್ಲಿಸಿಎಸ್ಕೆ ತಂಡದ ನಾಯಕ. - ಮಲ್ಲಿಕಾರ್ಜುನ ತಿಪ್ಪಾ...
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
-
ಹೇ ಒರಟ, "ಈ ಪ್ರೀತಿನೇ ಹಾಗೆ, ಬಾ ಅಂದ್ರ ಬರಲ್ಲ, ಹೋಗು ಅಂದ್ರ ಹೋಗಲ್ಲ" ಅಂತ್ ನೀನೇ ಹೇಳಿದ್ದು. ನೆನಪು ಮಾಡ್ಕೊ. ಶುದ್ಧ ಒರಟ ನೀನು. ನನ್ನ ಬೆನ್ನ ಹಿಂದೆ ಬಿ...
2 ಕಾಮೆಂಟ್ಗಳು:
ಚೆನ್ನಾಗಿದೆ ಕವನ!! :-)
ಬಹಳ ಸುಂದರವಾಗಿದೆ. ಹೈಟೆಕ್ ಯುಗದ ಕ್ರತಕತೆ ಮತ್ತು ಯಾಂತ್ರಿಕತೆಯ ನಡುವೆ ಮುದುಕಿಯ ಬದುಕಿನ ಚಿತ್ರಣ ಚೆನ್ನಾಗಿದೆ...
ಕಾಮೆಂಟ್ ಪೋಸ್ಟ್ ಮಾಡಿ