ಕಷ್ಟದ ಕಣ್ಣೀರು ಕೋಡಿ ಹರಿದಾಗಲೂ
ಸ್ಥೈರ್ಯ ತುಂಬಿ ಬೆಳೆಸಿದಾಕೆ,
ಬರೀ ಸೋಲು ಕಂಡುವನಿಗೆ
ಗೆಲುವಿನ ದಾರಿ ತೋರಿಸಿದಾಕೆ.. ಅವ್ವ
ಗೆದ್ದು ಬಂದಾಗ...
ಮರೆಯಲ್ಲಿ ನಿಂತು ಆನಂದಭಾಷ್ಪ ಸುರಿಸಿದಾಕೆ
ಎಂಥ ನೋವಿನಲ್ಲೂ ನಗು ತಂದಾಕೆ
ತಾನುಣ್ಣುವ ತುತ್ತನ್ನು
ತನ್ನ ಕರಳು ಕುಡಿಗೆ ತಿನ್ನಿಸಿದಾಕೆ.. ಅವ್ವ
ಮುನ್ನುಗ್ಗಲು ಕಸವು ತುಂಬಲು
ಹಿಮ್ಮೇಳವಾಗಿ ಶಕ್ತಿ ನೀಡಿದಾಕೆ
ರಾಗ ಕೆಟ್ಟು ಭಾವ ಸೋತಾಗ
ತಾನೇ ತಂಬೂರಿ ಕೈಗಿತ್ತಿಕೊಂಡಾಕೆ.. ಅವ್ವ
ಮಾತು ಕಲಿಸಿ; ನೀತಿ ತಿಳಿಸಿ
ಸದ್ಗತಿಯ ಸಾಧ್ಯತೆ ತೋರಿಸಿದಾಕೆ
ಸಾಧ್ಯ-ಅಸಾಧ್ಯಗಳ ತೋಳಲಾಟದಲ್ಲಿ
ತಾನೇ ನಿಂತು ನೆರವಾದಾಕೆ.. ಅವ್ವ
ಆದರೆ
ಆಕೆಗೆ ನೀ ಕೊಟ್ಟಿದ್ದಾರೂ ಏನು
ಬರೀ ಕಣ್ಣೀರು.. ತೋರಿಸಿದ್ದು
ವೃದ್ಧಾಶ್ರಮ ಬಾಗಿಲು...
-ಮಲ್ಲಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
-
ಮೂರೂ ಮಾದರಿಯ ಕ್ರಿಕೆಟ್ನಲ್ಲಿಭಾರತೀಯ ಕ್ರಿಕೆಟ್ ತಂಡದ ಕಾಯಂ ಸದಸ್ಯರಾಗಿರುವ ರವೀಂದ್ರ ಜಡೇಜಾ ಅವರೀಗ ಐಪಿಎಲ್ನಲ್ಲಿಸಿಎಸ್ಕೆ ತಂಡದ ನಾಯಕ. - ಮಲ್ಲಿಕಾರ್ಜುನ ತಿಪ್ಪಾ...
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
-
ಹೇ ಒರಟ, "ಈ ಪ್ರೀತಿನೇ ಹಾಗೆ, ಬಾ ಅಂದ್ರ ಬರಲ್ಲ, ಹೋಗು ಅಂದ್ರ ಹೋಗಲ್ಲ" ಅಂತ್ ನೀನೇ ಹೇಳಿದ್ದು. ನೆನಪು ಮಾಡ್ಕೊ. ಶುದ್ಧ ಒರಟ ನೀನು. ನನ್ನ ಬೆನ್ನ ಹಿಂದೆ ಬಿ...