ಕಷ್ಟದ ಕಣ್ಣೀರು ಕೋಡಿ ಹರಿದಾಗಲೂ
ಸ್ಥೈರ್ಯ ತುಂಬಿ ಬೆಳೆಸಿದಾಕೆ,
ಬರೀ ಸೋಲು ಕಂಡುವನಿಗೆ
ಗೆಲುವಿನ ದಾರಿ ತೋರಿಸಿದಾಕೆ.. ಅವ್ವ
ಗೆದ್ದು ಬಂದಾಗ...
ಮರೆಯಲ್ಲಿ ನಿಂತು ಆನಂದಭಾಷ್ಪ ಸುರಿಸಿದಾಕೆ
ಎಂಥ ನೋವಿನಲ್ಲೂ ನಗು ತಂದಾಕೆ
ತಾನುಣ್ಣುವ ತುತ್ತನ್ನು
ತನ್ನ ಕರಳು ಕುಡಿಗೆ ತಿನ್ನಿಸಿದಾಕೆ.. ಅವ್ವ
ಮುನ್ನುಗ್ಗಲು ಕಸವು ತುಂಬಲು
ಹಿಮ್ಮೇಳವಾಗಿ ಶಕ್ತಿ ನೀಡಿದಾಕೆ
ರಾಗ ಕೆಟ್ಟು ಭಾವ ಸೋತಾಗ
ತಾನೇ ತಂಬೂರಿ ಕೈಗಿತ್ತಿಕೊಂಡಾಕೆ.. ಅವ್ವ
ಮಾತು ಕಲಿಸಿ; ನೀತಿ ತಿಳಿಸಿ
ಸದ್ಗತಿಯ ಸಾಧ್ಯತೆ ತೋರಿಸಿದಾಕೆ
ಸಾಧ್ಯ-ಅಸಾಧ್ಯಗಳ ತೋಳಲಾಟದಲ್ಲಿ
ತಾನೇ ನಿಂತು ನೆರವಾದಾಕೆ.. ಅವ್ವ
ಆದರೆ
ಆಕೆಗೆ ನೀ ಕೊಟ್ಟಿದ್ದಾರೂ ಏನು
ಬರೀ ಕಣ್ಣೀರು.. ತೋರಿಸಿದ್ದು
ವೃದ್ಧಾಶ್ರಮ ಬಾಗಿಲು...
-ಮಲ್ಲಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
-
ಫಾಲ್ಗುಣಿ ನಾಯರ್ 50 ನೇ ವಯಸ್ಸಿನಲ್ಲಿ ಆರಂಭಿಸಿದ ‘ ನೈಕಾ ’ ಈಗ ಲಕ್ಷ ಕೋಟಿ ರೂ . ವೌಲ್ಯದ ಕಂಪನಿ . ಉದ್ಯಮದ ಹಿನ್ನೆಲೆ ಇಲ್ಲದೇ ಅವರು ಯಶಸ್ವಿ ಉದ್ಯಮಿಯಾದ ಕತೆ ಇದು ....
-
ಕಾರ್ಮಿಕ ಚಳವಳಿಯ ಅಗ್ರಮಾನ್ಯ ನಾಯಕರಾಗಿ, ಸಮಾಜವಾದಿ ಚಿಂತಕರಾಗಿ ಜಾರ್ಜ್ ಫರ್ನಾಂಡಿಸ್ ಅವರು ಏರಿದ ಎತ್ತರ ಅಷ್ಟಿಷ್ಟಲ್ಲ. ರಾಜಕಾರಣಿಗಳಿಗೆ ಅವರು ರೋಲ್ ಮಾಡೆಲ್. ಜೂನ್ 3 ...
-
ಶೋಷಿತರ ಪರ ನಿಲ್ಲುವ ನ್ಯಾಯವಾದಿಯ ಕತೆಯ ಸಿನಿಮಾ ‘ ಜೈ ಭೀಮ್ ’ ಸದ್ದು ಮಾಡುತ್ತಿದೆ . ನೈಜ ಕತೆಯನ್ನಾಧರಿಸಿದ ಈ ಚಿತ್ರದ ಅಸಲಿ ಹೀರೊ ಜಸ್ಟೀಸ್ ಕೆ . ಚಂದ್ರು . ...