ಮಂಗಳವಾರ, ಮೇ 1, 2007

ಅವ್ವ

ಕಷ್ಟದ ಕಣ್ಣೀರು ಕೋಡಿ ಹರಿದಾಗಲೂ
ಸ್ಥೈರ್ಯ ತುಂಬಿ ಬೆಳೆಸಿದಾಕೆ,
ಬರೀ ಸೋಲು ಕಂಡುವನಿಗೆ
ಗೆಲುವಿನ ದಾರಿ ತೋರಿಸಿದಾಕೆ.. ಅವ್ವ

ಗೆದ್ದು ಬಂದಾಗ...
ಮರೆಯಲ್ಲಿ ನಿಂತು ಆನಂದಭಾಷ್ಪ ಸುರಿಸಿದಾಕೆ
ಎಂಥ ನೋವಿನಲ್ಲೂ ನಗು ತಂದಾಕೆ
ತಾನುಣ್ಣುವ ತುತ್ತನ್ನು
ತನ್ನ ಕರಳು ಕುಡಿಗೆ ತಿನ್ನಿಸಿದಾಕೆ.. ಅವ್ವ

ಮುನ್ನುಗ್ಗಲು ಕಸವು ತುಂಬಲು
ಹಿಮ್ಮೇಳವಾಗಿ ಶಕ್ತಿ ನೀಡಿದಾಕೆ
ರಾಗ ಕೆಟ್ಟು ಭಾವ ಸೋತಾಗ
ತಾನೇ ತಂಬೂರಿ ಕೈಗಿತ್ತಿಕೊಂಡಾಕೆ.. ಅವ್ವ

ಮಾತು ಕಲಿಸಿ; ನೀತಿ ತಿಳಿಸಿ
ಸದ್ಗತಿಯ ಸಾಧ್ಯತೆ ತೋರಿಸಿದಾಕೆ
ಸಾಧ್ಯ-ಅಸಾಧ್ಯಗಳ ತೋಳಲಾಟದಲ್ಲಿ
ತಾನೇ ನಿಂತು ನೆರವಾದಾಕೆ.. ಅವ್ವ

ಆದರೆ

ಆಕೆಗೆ ನೀ ಕೊಟ್ಟಿದ್ದಾರೂ ಏನು
ಬರೀ ಕಣ್ಣೀರು.. ತೋರಿಸಿದ್ದು
ವೃದ್ಧಾಶ್ರಮ ಬಾಗಿಲು...

-ಮಲ್ಲಿ

9 ಕಾಮೆಂಟ್‌ಗಳು:

Unknown ಹೇಳಿದರು...

the last 3 lines are very sad....well its the reality nowadays

nice poem

Poojary ಹೇಳಿದರು...

superb..gud

Unknown ಹೇಳಿದರು...

ellaru hangenu kasta kodalla kanri

ಮಲ್ಲಿಕಾಜು೯ನ ತಿಪ್ಪಾರ ಹೇಳಿದರು...

Thanks for comments

ಯುವಪ್ರೇಮಿ ಹೇಳಿದರು...
ಲೇಖಕರು ಈ ಕಾಮೆಂಟ್‌ ಅನ್ನು ತೆಗೆದು ಹಾಕಿದ್ದಾರೆ.
ಯುವಪ್ರೇಮಿ ಹೇಳಿದರು...
ಲೇಖಕರು ಈ ಕಾಮೆಂಟ್‌ ಅನ್ನು ತೆಗೆದು ಹಾಕಿದ್ದಾರೆ.
Bigbuj ಹೇಳಿದರು...

Kavan Sankalana chennagi mudi bandide..Keep writing

Bigbuj ಹೇಳಿದರು...

Kavan Sankalana chennagi mudi bandide..Keep writing

Bigbuj ಹೇಳಿದರು...

Kavan Sankalana chennagi mudi bandide..Keep writing