ಸೋಮವಾರ, ಜೂನ್ 18, 2007

ಸ್ವಗತ

ಮನದ ಮೂಲೆಯಲ್ಲಿ
ಬಯಕೆಗಳು ಪವಡಿಸುತ್ತಿವೆ.
ಮರಳುಗಾಡಿನಂತಿರುವ ಮನದಲಿ
ಓಯಸಿಸ್‍ಗಳಾಗಲು,
ಒಮ್ಮೊಮ್ಮೆ ಎಚ್ಚೆತ್ತುಕೊಳ್ಳಲು ಹವಣಿಸುತ್ತಿವೆ.
ಪರಿಸ್ಥಿತಿಯ ಒತ್ತಡಕ್ಕೆ ಮಣಿಯುತ್ತಿವೆ.
ತನ್ನತನವನ್ನು ಉಳಿಸಲು ಆಶ್ರಯಿಸುತ್ತಿವೆ
ಇನ್ನೊಬ್ಬರನ್ನು, ಬೇಡವೆಂದಾಗ ಮತ್ತೊಬ್ಬರನ್ನು
ಬೇಡುತ್ತವೆ, ಮತ್ತೊಮ್ಮೆ ತಿರಸ್ಕರಿಸುತ್ತಿವೆ
ಸ್ವಂತಕ್ಕಾಗಿ, ಸ್ವಹಿತಕ್ಕಾಗಿ
ಆಗಲೂ ಈಗಲೂ ಬಯಕೆಗಳಾಗಿಯೇ
ಉಳಿಯುತ್ತಿವೆ, ಬೆಳೆಯುತ್ತಿವೆ.

-ಮಲ್ಲಿ

ಓ.. ಗುಲಾಬಿಯೇ

ಮುಂಜಾನೆಯ ಮಂಜಿನಲಿ
ಮಿಂದೆದ್ದ ಗುಲಾಬಿಯೇ
ಯಾರಿಗಾಗಿ ಕಾಯುತ್ತಿರುವೇ
ದಿನಕರನ ದಿನಾರಂಭಕ್ಕಾಗಿಯೇ..?

ಮೆಲ್ಲನೆ ಅರಳುತ್ತ
ತಂಪನೆಯ ಕಂಪು ಬೀರುತ್ತ
ನಗೆ ಚೆಲ್ಲುತ್ತಾ
ಯಾರಿಗಾಗಿ ಕಾಯುತ್ತಿರುವೆ..?

ತಂಗಾಳಿಗೆ ಮೈ ಒಡ್ಡುತ್ತಾ
ಮೆಲ್ಲನೆ ಭೂತಾಯಿಗೆ ನಮಿಸುತ್ತಾ
ನನ್ನದೇನೂ ಇಲ್ಲಎಲ್ಲವೂ ನಿನ್ನದೆನ್ನುತ್ತಾ

ನಿರವತೆಯ ಮೌನ ಮುರಿಯತ್ತ
ಕಲ್ಲು ಹೃದಯವನ್ನೂ ಅಲಗಿಸುತ್ತ
ಹೂಗಳ ರಾಣಿಯೇ ಹೇಳು
ಯಾರಿಗಾಗಿ ಈ ಚಿತ್ತ....?

ಕನಸುಗಳಿಗೆ ಆಶೆ ನೀಡಿ
ಮನಸ್ಸುಗಳನ್ನು ಒಂದುಗೂಡಿಸುತ್ತಾ
ಸಂಜೆಯಾಗುತ್ತಲೇ ನೀ ಬಾಡುವೆ
ನಶ್ವರತೆಯನ್ನು ಸೂಚಿಸುತ್ತಾ....


-ಮಲ್ಲಿ