
ಮಂಗಳವಾರ, ಡಿಸೆಂಬರ್ 16, 2008
ಬುಧವಾರ, ನವೆಂಬರ್ 19, 2008
ಏನು ಬರೆಯಲಿ ಹೇಳು...?

ಅಂತರಂಗವೆಲ್ಲ ಖಾಲಿಯಾದಾಗ
ಸುಟ್ಟು ಹೋದ ಕನಸುಗಳ
ವಾಸನೆ ಮೂಗಿಗೆ ಅಡರುತ್ತಿರುವಾಗ
ಬರೆಯುವದಾದರು ಹೇಗೆ ಹೇಳು..?
ಆಗುಂತಕಳಾಗಿ ಎದುರಾಗಿ, ಮರೆಯಾದೆ
ಮರೆಯಾಗುವ ಮುನ್ನ
ಮಾಸಲಾರದ ಬರೆ ಹಾಕಿದೆ
ಬರೆ ಇನ್ನು ಹಸಿ ಹಸಿಯಾಗಿರುವಾಗಲೇ
ಹಾಳೆಯ ಮೇಲೆ ಗೆರೆಯಾದ್ರೂ
ಹೇಗೆ ಮೊಡಿತು ಹೇಳು...?
ಬದುಕಿದ್ದು ಸತ್ತಂತಿರುವಾಗ
ಭಾವವಾಗುವ ಅಕ್ಷರಗಳಿಗೆ
ಜೀವವನ್ನಾದರೂ ಹೇಗೆ ತುಂಬಲಿ...?
ನಾ ಹಾಳಾಗುವ ಮುನ್ನ
ಒಮ್ಮೆ ನೀ ಹರಸು
ಎಂದೆಂದಿಗೂ ನಾ ನಿನ್ನ
ನೀ ನನ್ನ ನೋಡದಂತೆ
ಸೋಮವಾರ, ನವೆಂಬರ್ 17, 2008
ಮರೆಯೋದಲ್ಲ
ಮಳೆಗೆ ಅಳೋದು ಮಾತ್ರ ಗೊತ್ತು
ನಗೋದಲ್ಲ
ಸೂರ್ಯನಿಗೆ ಸುಡೋದು ಗೊತ್ತು
ಆರಿಸೋದಲ್ಲ
ಆದರೆ
ನನಗೆ ನಿನ್ನ ನೆನಪು
ಮಾಡಿಕೊಳ್ಳುದು ಗೊತ್ತು
ಮರೆಯೋದಲ್ಲ
- ಇದು ನನಗೆ ಇಷ್ಟವಾದ ಒಂದು ಶಾಯರಿಯ ಭಾವಾನುವಾದ
ಗುರುವಾರ, ನವೆಂಬರ್ 13, 2008
ಸೋಮವಾರ, ನವೆಂಬರ್ 10, 2008
ಶುಕ್ರವಾರ, ಅಕ್ಟೋಬರ್ 31, 2008
ಶನಿವಾರ, ಅಕ್ಟೋಬರ್ 18, 2008
ಅಲೆಗಳು ಏಳುತ್ತವೆ
ಭಾನುವಾರ, ಸೆಪ್ಟೆಂಬರ್ 28, 2008
ನಗಲು ಪ್ರಯತ್ನಿಸುತ್ತಿದ್ದೇನೆ
ಕತ್ತಲೆಯೇ ಬದುಕೆಂದು
ನಂಬಿದ ನಾನು ಈಗೀಗ
ನಗಲು ಪ್ರಯತ್ನಿಸುತ್ತಿದ್ದೇನೆ
ದುಃಖದ ಸಾಗರದಲ್ಲಿ ಕೈ
ಬಿಟ್ಟು ನೀ ಹಿಂತಿರುಗಿ ನೋಡದೆ
ಹೋದಾಗ ಸಾಯಬೇಕೆಂದು
ಕೊಂಡವನಿಗೆ ಅಲೆಗಳೇ
ಈಜು ಕಲಿಸಿ ದಡಕ್ಕೆ ಎಸೆದಿವೆ ನನ್ನನ್ನು.
----
ಈಗೀಗ ಪ್ರತಿ ಸೂರ್ಯನ ಹುಟ್ಟು
ಸಾವು ಕೂಡಾ ಆಸಕ್ತಿ ಹುಟ್ಟಿಸುತ್ತಿದೆ
ರಾತ್ರಿಯಲ್ಲಿ ಚಂದ್ರನ ತಣ್ಣನೆಯ
ಬೆಳಗು ಕೂಡಾ ಹೊಮ್ಮಿಸುತ್ತಿದೆ
ನೂರಾರು ಅರ್ಥ ನನ್ನೆದೆಯ
ಭಾವದೊಳಗೆ ಆದರೆ,
ಅಲ್ಲಿ ನೀನಿಲ್ಲವೆಂಬ
ಅರಿವು ಎಚ್ಚರವಾದಾಗ
ಮತ್ತೆ ಅದೇ ಕತ್ತಲೆ ಇಷ್ಟವಾಗುತ್ತದೆ
ಆದರೂ ಪಣತೊಟ್ಟಿದ್ದೇನೆ
ಕತ್ತಲೆಯನ್ನೇ ಹಿಂಜಿ
ಬೆಳಕನ್ನು ಪಡೆಯಬೇಕೆಂದು
ಆ ಬೆಳಕಲ್ಲಿ ಹೊಸ ಲೋಕ,
ಭಾವ, ಭಾಷೆ ಕಲಿಯಬೇಕೆಂಬ
ಹಂಬಲ ನನ್ನದು.
ನಂಬಿದ ನಾನು ಈಗೀಗ
ನಗಲು ಪ್ರಯತ್ನಿಸುತ್ತಿದ್ದೇನೆ
ದುಃಖದ ಸಾಗರದಲ್ಲಿ ಕೈ
ಬಿಟ್ಟು ನೀ ಹಿಂತಿರುಗಿ ನೋಡದೆ
ಹೋದಾಗ ಸಾಯಬೇಕೆಂದು
ಕೊಂಡವನಿಗೆ ಅಲೆಗಳೇ
ಈಜು ಕಲಿಸಿ ದಡಕ್ಕೆ ಎಸೆದಿವೆ ನನ್ನನ್ನು.
----
ಈಗೀಗ ಪ್ರತಿ ಸೂರ್ಯನ ಹುಟ್ಟು
ಸಾವು ಕೂಡಾ ಆಸಕ್ತಿ ಹುಟ್ಟಿಸುತ್ತಿದೆ
ರಾತ್ರಿಯಲ್ಲಿ ಚಂದ್ರನ ತಣ್ಣನೆಯ
ಬೆಳಗು ಕೂಡಾ ಹೊಮ್ಮಿಸುತ್ತಿದೆ
ನೂರಾರು ಅರ್ಥ ನನ್ನೆದೆಯ
ಭಾವದೊಳಗೆ ಆದರೆ,
ಅಲ್ಲಿ ನೀನಿಲ್ಲವೆಂಬ
ಅರಿವು ಎಚ್ಚರವಾದಾಗ
ಮತ್ತೆ ಅದೇ ಕತ್ತಲೆ ಇಷ್ಟವಾಗುತ್ತದೆ
ಆದರೂ ಪಣತೊಟ್ಟಿದ್ದೇನೆ
ಕತ್ತಲೆಯನ್ನೇ ಹಿಂಜಿ
ಬೆಳಕನ್ನು ಪಡೆಯಬೇಕೆಂದು
ಆ ಬೆಳಕಲ್ಲಿ ಹೊಸ ಲೋಕ,
ಭಾವ, ಭಾಷೆ ಕಲಿಯಬೇಕೆಂಬ
ಹಂಬಲ ನನ್ನದು.
ಗುರುವಾರ, ಸೆಪ್ಟೆಂಬರ್ 18, 2008
ಶನಿವಾರ, ಜುಲೈ 26, 2008
ಏನೋ ಆಗಿದೆ
ಭಾನುವಾರ, ಜುಲೈ 20, 2008
ಶನಿವಾರ, ಜುಲೈ 19, 2008
ನೋವು
ಬುಧವಾರ, ಜುಲೈ 16, 2008
ಭಾನುವಾರ, ಜುಲೈ 13, 2008
ಬಾ(ಬ)ಲ ಭೀಮ
ಸೋಮವಾರ, ಜೂನ್ 30, 2008
ಶುಕ್ರವಾರ, ಮೇ 23, 2008
ಸುರಿ ಮಳೆಯೇ ಸುರಿ

ಸುರಿ ಮಳೆಯೇ ಸುರಿ
ಮೈಗಂಟಿದ ಅವಳ
ಕಂಪು ತೊಳೆಯೋವರೆಗೂ
ನೆನಪುಗಳು ಮಾಸೋವರೆಗೂ
ಎಡಬಿಡದೆ ಸುರಿ... ಹರಿ...
ನಿನ್ನ ಹನಿಗಳನ್ನೇ
ಮುತ್ತುಗಳನ್ನಾಗಿ ಧಾರೆ
ಎರೆದೆ ಅವಳಿಗೆ
ಕನ್ನಿರೋರೆಸುವ ಕೈಗಳಾದೆ
ಹೃದಯ ಒಡೆದ ಮಾರಿಯಾದಳವಳು
ಸುರಿ ಮಳೆಯೇ ಸುರಿ... ಹರಿ...
ನನ್ನ ನೆರಳಾಗಿರುವೆಯೆಂದು
ಆಣೆ ಮಾಡಿದ್ದು ಈ ಮಳೆಯಲ್ಲೇ
ಮುರಿದಿದ್ದು ಇದೇ ಮಳೆಯಲ್ಲೇ
ನನ್ನ ಕನ್ನೀರಿಗೂ, ನಿನ್ನ
ಹನಿಗಳಿಗೂ ವ್ಯತ್ಯಾಸವೇ ಇಲ್ಲ
ಸುರಿ ಮಳೆಯೇ ಸುರಿ.. ಹರಿ..
ಭಾನುವಾರ, ಮೇ 11, 2008
ಶನಿವಾರ, ಏಪ್ರಿಲ್ 12, 2008
ದೂರ ನಿಲ್ಲಿ ಕವನಗಳೇ ..

ಸಾಕಾಗಿದೆ ಕವನಗಳ
ಸಹವಾಸ, ಹೂತ್ತುಗೂತ್ತಿಲ್ಲದೆ
ದಿಗ್ಗನೇ ಎದ್ದು ನಿಲ್ಲುವ ಭಾವಗಳಿಗೆ
ಅಕ್ಷರ ಅಂಗಿ ತೊಡಿಸುವ
ಪದಗಳೇ ದೂರ ನಿಲ್ಲಿ.
ಕಲ್ಪನೆ, ಕೌತುಕ ,
ಕಾಮವಾಂಛೆ ಮೀರಿ
ನಿಲ್ಲಲು ಸೆಣಿಸುತ್ತಿದ್ದೇನೆ
ಅಡ್ಡ ಬಂದು ಸೆಡ್ಡು
ಹೊಡೆಯಬೇಡಿ, ಪದಗಳ
ಬೇಡಿಯೊಳಗೆ ಬಂಧಿಯಾಗಲು
ನನಗಿಷ್ಟವಿಲ್ಲ
ಕನಸು, ಕನವರಿಕೆ
ನೀಗಲೆಂದೇ ದೂರ
ಹೋಗಿ ಎಂಬ ನಿವೇದನೆ
ನಿಮಗೆ, ಅದು ಹಮ್ಮು
ಎಂದರೆ ನಾನಲ್ಲ ಹೂಣೆ
ಆಕಾಶದ ಆಚೆ ಹಾರಿ
ಭೂ ಲೋಕವೆಲ್ಲಾ ತೂರಿ
ಸ್ವತಂತ್ರ, ಸ್ವೇಚ್ಚೆಯಡಿ
ಸಾಗುವ ಹುಮ್ಮಸ್ಸು ನನಗೆ
ತೊದರಗಾಲು ಹಾಕಬೇಡಿ
ದೂರ ನಿಲ್ಲಿ ಕವನಗಳೇ ....
ಶುಕ್ರವಾರ, ಫೆಬ್ರವರಿ 22, 2008
ಕಾಡ್ತಿ ಯಾಕ...?
ನೀನಿಲ್ಲದ ಈ ಮನಸ್ಸು
ಮಾಗಿ ಕಾಲದ ಎಲೆ
ಉದುರಿಸಿದ ಗಿಡದಂಗಾಗೇತಿ
ಮನಸ್ಸಿನ್ಯಾಗಿನ ಮಾತು
ಹೊರಗ ಬರದ ಗಂಟಲೋಳಗ
ಕೂತು, ತಕರಾರು ಮಾಡೈತಿ
ನೆನಪಿನ ಮರದೊಳಗ
ಕೇರೀದಸ್ಟು ನಿನ್ನ
ಸಂಗಡದ ಆ ಗಳಿಗೆಗಳು
ಮತ್ತ ಹೊಳ್ಳಿ ಹೊಳ್ಳಿ ಬರ್ತಾವ
ಕೇರೀದಾಗ ತೂರಿ ಹೋದ
ಜೋಳ್ಳ ನೆನಪುಗಳೆಲ್ಲಾ ನಂದು
ಉಳಿದ ಗಟ್ಟಿ ಮಾತೆಲ್ಲಾ ನಿಂದು
ಮರೀಬೇಕಂತ ಮನಸ್ಸಿನ್ಯಾಗಿನ
ಮಾತು ಹೊರ ಬಿಟ್ಟಿಲ್ಲ
ಆದ್ರೂ ನೀ ಯಾಕ್ ಹಂಗ ಕಾಡ್ತಿ...?
ಮಾಗಿ ಕಾಲದ ಎಲೆ
ಉದುರಿಸಿದ ಗಿಡದಂಗಾಗೇತಿ
ಮನಸ್ಸಿನ್ಯಾಗಿನ ಮಾತು
ಹೊರಗ ಬರದ ಗಂಟಲೋಳಗ
ಕೂತು, ತಕರಾರು ಮಾಡೈತಿ
ನೆನಪಿನ ಮರದೊಳಗ
ಕೇರೀದಸ್ಟು ನಿನ್ನ
ಸಂಗಡದ ಆ ಗಳಿಗೆಗಳು
ಮತ್ತ ಹೊಳ್ಳಿ ಹೊಳ್ಳಿ ಬರ್ತಾವ
ಕೇರೀದಾಗ ತೂರಿ ಹೋದ
ಜೋಳ್ಳ ನೆನಪುಗಳೆಲ್ಲಾ ನಂದು
ಉಳಿದ ಗಟ್ಟಿ ಮಾತೆಲ್ಲಾ ನಿಂದು
ಮರೀಬೇಕಂತ ಮನಸ್ಸಿನ್ಯಾಗಿನ
ಮಾತು ಹೊರ ಬಿಟ್ಟಿಲ್ಲ
ಆದ್ರೂ ನೀ ಯಾಕ್ ಹಂಗ ಕಾಡ್ತಿ...?
ಶುಕ್ರವಾರ, ಜನವರಿ 25, 2008
ನಾವೇ ಇಲ್ಲಾಗುವಾ...
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
-
ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಎಂಬೆರಡು ಹೆಸರು ಬೇಡದ ಕಾರಣಕ್ಕೆ ಪ್ರಸಿದ್ಧಿಯಾಗಿವೆ. ವಿಭಿನ್ನ ವ್ಯಕ್ತಿತ್ವದ ಈ ಇಬ್ಬರು ಹಗರಣದ ಸುಳಿಯಲ್ಲಿಸಿಲುಕಿದ್ದಾರೆ. - ...
-
- ಮಲ್ಲಿಕಾರ್ಜುನ ತಿಪ್ಪಾರ ಪಂಜಾಬ್ ಅನ್ನು ಸೇರಿಸಿಕೊಂಡು ಉತ್ತರ ಭಾರತದ ಕೆಲವು ರಾಜ್ಯಗಳನ್ನೊಳಗೊಂಡ ಖಲಿಸ್ತಾನ್ ಪ್ರತ್ಯೇಕ ರಾಷ್ಟ್ರಕ್ಕಾಗಿ ಹುಟ್ಟಿಕೊಂಡಿದ್ದೇ ಖಾಲ್...
-
ಕಣ್ಣ ಮುಂದೆಯೇ ಮಕ್ಕಳ ಸಾವಿನಿಂದಾಗಿ ರಾಜಕಾರಣದಿಂದ ದೂರವೇ ಸರಿದಿದ್ದ ಏಕನಾಥ ಶಿಂಧೆ ಮತ್ತೆ ಅಗ್ರಗಣ್ಯ ನಾಯಕರಾಗಿ ಬೆಳೆದಿದ್ದೇ ಅಚ್ಚರಿ - ಮಲ್ಲಿಕಾರ್ಜುನ ತಿಪ್ಪಾರ ಏಕನಾ...