ಕತ್ತಲೆಯೇ ಬದುಕೆಂದು
ನಂಬಿದ ನಾನು ಈಗೀಗ
ನಗಲು ಪ್ರಯತ್ನಿಸುತ್ತಿದ್ದೇನೆ
ದುಃಖದ ಸಾಗರದಲ್ಲಿ ಕೈ
ಬಿಟ್ಟು ನೀ ಹಿಂತಿರುಗಿ ನೋಡದೆ
ಹೋದಾಗ ಸಾಯಬೇಕೆಂದು
ಕೊಂಡವನಿಗೆ ಅಲೆಗಳೇ
ಈಜು ಕಲಿಸಿ ದಡಕ್ಕೆ ಎಸೆದಿವೆ ನನ್ನನ್ನು.
----
ಈಗೀಗ ಪ್ರತಿ ಸೂರ್ಯನ ಹುಟ್ಟು
ಸಾವು ಕೂಡಾ ಆಸಕ್ತಿ ಹುಟ್ಟಿಸುತ್ತಿದೆ
ರಾತ್ರಿಯಲ್ಲಿ ಚಂದ್ರನ ತಣ್ಣನೆಯ
ಬೆಳಗು ಕೂಡಾ ಹೊಮ್ಮಿಸುತ್ತಿದೆ
ನೂರಾರು ಅರ್ಥ ನನ್ನೆದೆಯ
ಭಾವದೊಳಗೆ ಆದರೆ,
ಅಲ್ಲಿ ನೀನಿಲ್ಲವೆಂಬ
ಅರಿವು ಎಚ್ಚರವಾದಾಗ
ಮತ್ತೆ ಅದೇ ಕತ್ತಲೆ ಇಷ್ಟವಾಗುತ್ತದೆ
ಆದರೂ ಪಣತೊಟ್ಟಿದ್ದೇನೆ
ಕತ್ತಲೆಯನ್ನೇ ಹಿಂಜಿ
ಬೆಳಕನ್ನು ಪಡೆಯಬೇಕೆಂದು
ಆ ಬೆಳಕಲ್ಲಿ ಹೊಸ ಲೋಕ,
ಭಾವ, ಭಾಷೆ ಕಲಿಯಬೇಕೆಂಬ
ಹಂಬಲ ನನ್ನದು.
ಭಾನುವಾರ, ಸೆಪ್ಟೆಂಬರ್ 28, 2008
ಗುರುವಾರ, ಸೆಪ್ಟೆಂಬರ್ 18, 2008
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
Featured Post
Is Signal more secure than Whatsapp?- ವಾಟ್ಸ್ಆ್ಯಪ್ಗಿಂತ ಸಿಗ್ನಲ್ ಹೇಗೆ ಬೆಸ್ಟು?
- ಮಲ್ಲಿಕಾರ್ಜುನ ತಿಪ್ಪಾರ ಜಗತ್ತಿನ ನಂಬರ್ 1 ಶ್ರೀಮಂತ , ಟೆಸ್ಲಾ ಕಂಪನಿಯ ಮಾಲೀಕ ಎಲಾನ್ ಮಸ್ಕ್ ಆ ಒಂದು ಟ್ವೀಟ್ ಮಾಡ ದಿದ್ದರೆ ಈ ಜಗತ್ತು ‘ ಸಿಗ್ನಲ್ ...

-
- ಮಲ್ಲಿಕಾರ್ಜುನ ತಿಪ್ಪಾರ/ಕಿರಣ್ ಕುಮಾರ್ ಡಿ.ಕೆ Yes, the show must go on... ನಾವೀಗ ಕೊರೊನಾ ವೈರಸ್ ಜತೆಗೆ ಬದುಕುವುದನ್ನು ಕಲಿಯಲೇಬೇಕಿದೆ. ಯಾಕೆಂದರೆ, ಸದ್...
-
ಕನಸು ಕಾಣುವ ತುಡಿತ ಹಂಬಲ, ಇಲ್ಲದೆ ಯಾರ ಬೆಂಬಲ ಕಣ್ ಮಂದಿನ ದಾರಿ ಮಬ್ಬು, ಸಾಗಬೇಕು ಇಲ್ಲದೆ ಯಾರ ಬೆಂಬಲ ಯಾರು ಇದ್ದರೇನು, ಇಲ್ಲದಿದ್ದರೇನು, ನೊಗ ಹೊತ್ತು ನಡೆಯ...
-
- ಮಲ್ಲಿಕಾರ್ಜುನ ತಿಪ್ಪಾರ ಗೂಗಲ್ ಹೊರ ತಂದಿರುವ ಅನೇಕ ಉತ್ಪನ್ನಗಳಲ್ಲಿ'ಗೂಗಲ್ ಅಸಿಸ್ಟೆಂಟ್' ಭಿನ್ನವಾಗಿದ್ದು, ಅತ್ಯುಪಯುಕ್ತ ಮತ್ತು ಬಳಕೆದಾರರ ಸ್ನೇಹ...
