ಕತ್ತಲೆಯೇ ಬದುಕೆಂದು
ನಂಬಿದ ನಾನು ಈಗೀಗ
ನಗಲು ಪ್ರಯತ್ನಿಸುತ್ತಿದ್ದೇನೆ
ದುಃಖದ ಸಾಗರದಲ್ಲಿ ಕೈ
ಬಿಟ್ಟು ನೀ ಹಿಂತಿರುಗಿ ನೋಡದೆ
ಹೋದಾಗ ಸಾಯಬೇಕೆಂದು
ಕೊಂಡವನಿಗೆ ಅಲೆಗಳೇ
ಈಜು ಕಲಿಸಿ ದಡಕ್ಕೆ ಎಸೆದಿವೆ ನನ್ನನ್ನು.
----
ಈಗೀಗ ಪ್ರತಿ ಸೂರ್ಯನ ಹುಟ್ಟು
ಸಾವು ಕೂಡಾ ಆಸಕ್ತಿ ಹುಟ್ಟಿಸುತ್ತಿದೆ
ರಾತ್ರಿಯಲ್ಲಿ ಚಂದ್ರನ ತಣ್ಣನೆಯ
ಬೆಳಗು ಕೂಡಾ ಹೊಮ್ಮಿಸುತ್ತಿದೆ
ನೂರಾರು ಅರ್ಥ ನನ್ನೆದೆಯ
ಭಾವದೊಳಗೆ ಆದರೆ,
ಅಲ್ಲಿ ನೀನಿಲ್ಲವೆಂಬ
ಅರಿವು ಎಚ್ಚರವಾದಾಗ
ಮತ್ತೆ ಅದೇ ಕತ್ತಲೆ ಇಷ್ಟವಾಗುತ್ತದೆ
ಆದರೂ ಪಣತೊಟ್ಟಿದ್ದೇನೆ
ಕತ್ತಲೆಯನ್ನೇ ಹಿಂಜಿ
ಬೆಳಕನ್ನು ಪಡೆಯಬೇಕೆಂದು
ಆ ಬೆಳಕಲ್ಲಿ ಹೊಸ ಲೋಕ,
ಭಾವ, ಭಾಷೆ ಕಲಿಯಬೇಕೆಂಬ
ಹಂಬಲ ನನ್ನದು.
ಭಾನುವಾರ, ಸೆಪ್ಟೆಂಬರ್ 28, 2008
ಗುರುವಾರ, ಸೆಪ್ಟೆಂಬರ್ 18, 2008
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
-
ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಎಂಬೆರಡು ಹೆಸರು ಬೇಡದ ಕಾರಣಕ್ಕೆ ಪ್ರಸಿದ್ಧಿಯಾಗಿವೆ. ವಿಭಿನ್ನ ವ್ಯಕ್ತಿತ್ವದ ಈ ಇಬ್ಬರು ಹಗರಣದ ಸುಳಿಯಲ್ಲಿಸಿಲುಕಿದ್ದಾರೆ. - ...
-
- ಮಲ್ಲಿಕಾರ್ಜುನ ತಿಪ್ಪಾರ ಪಂಜಾಬ್ ಅನ್ನು ಸೇರಿಸಿಕೊಂಡು ಉತ್ತರ ಭಾರತದ ಕೆಲವು ರಾಜ್ಯಗಳನ್ನೊಳಗೊಂಡ ಖಲಿಸ್ತಾನ್ ಪ್ರತ್ಯೇಕ ರಾಷ್ಟ್ರಕ್ಕಾಗಿ ಹುಟ್ಟಿಕೊಂಡಿದ್ದೇ ಖಾಲ್...
-
ಕಣ್ಣ ಮುಂದೆಯೇ ಮಕ್ಕಳ ಸಾವಿನಿಂದಾಗಿ ರಾಜಕಾರಣದಿಂದ ದೂರವೇ ಸರಿದಿದ್ದ ಏಕನಾಥ ಶಿಂಧೆ ಮತ್ತೆ ಅಗ್ರಗಣ್ಯ ನಾಯಕರಾಗಿ ಬೆಳೆದಿದ್ದೇ ಅಚ್ಚರಿ - ಮಲ್ಲಿಕಾರ್ಜುನ ತಿಪ್ಪಾರ ಏಕನಾ...