ಗುರುವಾರ, ಮಾರ್ಚ್ 7, 2019

ಟಿಎಂಸಿ, ಮಮತಾ ಎಂಬ ಗಟ್ಟಿಗಿತ್ತಿಯ ರಾಜಕಾರಣದ ವೇದಿಕೆ

ಜನತಾ ಪಾರ್ಟಿ ಹೇಗೆ ಅನೇಕ ಹೊಸ ಪ್ರಾದೇಶಿಕ ಪಕ್ಷ ಗಳ ಹುಟ್ಟಿಗೆ ಕಾರಣವಾಯಿತೋ, ಹಾಗೆಯೇ ಕಾಂಗ್ರೆಸ್‌ ಕೂಡ ಅನೇಕ ಪಕ್ಷ ಗಳ ಅಸ್ತಿತ್ವಕ್ಕೆ ದಾರಿ ಮಾಡಿಕೊಟ್ಟಿದೆ. ನಾಯಕತ್ವ ಕಾರಣದಿಂದಾಗಿ ಅನೇಕ ಕಾಂಗ್ರೆಸ್‌ ನಾಯಕರು ತಮ್ಮದೇ ಆದ ಪಕ್ಷ ವನ್ನು ಸಂಘಟಿಸಿ ಯಶಸ್ವಿಯಾಗಿದ್ದಾರೆ. ಈ ಪೈಕಿ ಮಮತಾ ಬ್ಯಾನರ್ಜಿ ಅವರೂ ಪ್ರಮುಖರು. 26 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿ ದುಡಿದಿದ್ದ ಅವರು, 1998 ಜನವರಿ 1ರಂದು ತಮ್ಮದೇ ಆದ ತೃಣಮೂಲ ಕಾಂಗ್ರೆಸ್‌ ಪಕ್ಷ ವನ್ನು ಆರಂಭಿಸಿದರು. 'ಮಾ ಮಾತಿ ಮಾನೂಷ್‌'(ಜನನಿ, ಜನ್ಮಭೂಮಿ ಮತ್ತು ಜನರು) ಎಂಬದು ತೃಣಮೂಲ ಪಕ್ಷ ದ ಧ್ಯೇಯವಾಕ್ಯ ಮತ್ತು ಜನಪ್ರಿಯ ಘೋಷಣೆಯೂ ಹೌದು. 2014ರ ಲೋಕಸಭೆಯ ಚುನಾವಣೆಯಲ್ಲಿ ಶೇ.6ರಷ್ಟು ಮತ ಪಡೆದ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ಈ ಪಕ್ಷ ಕ್ಕೆ ರಾಷ್ಟ್ರೀಯ ಪಕ್ಷ ದ ಮಾನ್ಯತೆ ಹೊಂದಿದೆ. 30 ವರ್ಷಗಳ ಕಾಲ ಎಡ ಪಕ್ಷ ಗಳು ಪಶಿಮ ಬಂಗಾಳದಲ್ಲಿ ಹೊಂದಿದ್ದ ಹಿಡಿತವನ್ನು ಸಡಿಲಿಸಿದ್ದೇ ಈ ಮಮತಾ ಬ್ಯಾನರ್ಜಿ. ಹೋರಾಟದಿಂದಲೇ ತೃಣಮೂಲ ಕಾಂಗೆÜ್ರಸ್‌ ಅನ್ನು ಅಧಿಕಾರದ ಪಡಸಾಲೆಗೆ ತಂದು ನಿಲ್ಲಿಸಿದರು. ಸಜವಾಗಿಯೇ, ಅವರು ಮುಖ್ಯಮಂತ್ರಿಯೂ ಆದರು. ಒಟ್ಟು 42 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಪಶ್ಚಿಮ ಬಂಗಾಳದ ಮೇಲೆ ಪ್ರಭುತ್ವ ಸಾಧಿಸಲು ಪ್ರತಿ ಪಕ್ಷ ವೂ ಹಾತೊರೆಯುತ್ತಿದೆ. ಯಾರು ಹೆಚ್ಚು ಸೀಟುಗಳನ್ನು ಗೆಲ್ಲುತ್ತಾರೋ ಅವರು ಸಜವಾಗಿ ಕೇಂದ್ರ ರಾಜಕಾರಣದಲ್ಲಿ ಪ್ರಭಾವವನ್ನು ಗಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಹೊರತಾದ ಕೂಟದ ಚರ್ಚೆ ಬಂದಾಗಲೆಲ್ಲ, ಮಮತಾ ಬ್ಯಾನರ್ಜಿ ಅವರು ಹೆಸರು ಮುಂಚೂಣಿಯಲ್ಲಿರುತ್ತದೆ ಮತ್ತು ಅವರು ಪ್ರಧಾನಿ ಹುದ್ದೆಯ ಆಕಾಂಕ್ಷಿಯೂ ಹೌದು. ಪಶ್ಚಿಮ ಬಂಗಾಳ, ತ್ರಿಪುರಾ, ಮಣಿಪುರ, ಜಾರ್ಖಂಡ್‌ ಮತ್ತು ಅಸ್ಸಾಮ್‌ನಲ್ಲಿ ತನ್ನ ಪ್ರಭಾವ ಹೊಂದಿರುವ ತೃಣಮೂಲ ಕಾಂಗ್ರೆಸ್‌ ಲೋಕಸಭೆಯಲ್ಲಿ ಒಟ್ಟು 34 ಸಂಸದರನ್ನು ಹೊಂದಿದ್ದು, ರಾಜ್ಯಸಭೆಯಲ್ಲಿ 13 ಪ್ರತಿನಿಧಿಗಳಿದ್ದಾರೆ. 295 ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ತೃಣಮೂಲ ಕಾಂಗ್ರೆಸ್‌ 213 ಶಾಸಕರನ್ನು ಹೊಂದಿದೆ. 2011ರಲ್ಲಿ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ತನ್ನ ಮಿತ್ರ ಪಕ್ಷ ಗಳ ಸಹಾಯದೊಂದಿಗೆ ಅಧಿಕಾರಕ್ಕೆ ಬಂತು. 2016ರ ವಿಧಾನಸಭೆ ಚುನಾವಣೆಯಲ್ಲೂ ಭರ್ಜರಿ ಜಯ ಗಳಿಸಿತು.

ಕಾಮೆಂಟ್‌ಗಳಿಲ್ಲ: