ಶುಕ್ರವಾರ, ಡಿಸೆಂಬರ್ 31, 2021

83 Hindi Film Review: ತೆರೆಯ ಮೇಲೆ 83ರ ವಿಶ್ವಕಪ್‌ ಗೆಲುವಿನ ರೋಚಕತೆ

- ಮಲ್ಲಿಕಾರ್ಜುನ ತಿಪ್ಪಾರ

ಮೂವತ್ತೆಂಟು ವರ್ಷಗಳ ಹಿಂದೆ ರೇಡಿಯೊಗೆ ಕಿವಿಯಾನಿಸಿ ಕಾಮೆಂಟರಿ ಕೇಳಿ ಪುಳಕಗೊಂಡಿದ್ದ ಒಂದು ತಲೆಮಾರು, ಅಂದಿನ ಯಶಸ್ಸಿನ ಕತೆಯನ್ನು ಆಗಾಗ ಕೇಳುತ್ತಿದ್ದ ಹೊಸ ತಲೆಮಾರಿನ ಕ್ರಿಕೆಟ್ಅಭಿಮಾನಿಗಳಿಗೆ ‘83’ ಸಿನಿಮಾ ಒಂದು ಹೊಸ ಸಂಚಲನ. ಭಾರತವು 1983ರ ಕ್ರಿಕೆಟ್ವರ್ಲ್ಡ್ಕಪ್ಗೆದ್ದ ಪಯಣವನ್ನುಭಜರಂಗಿ ಭಾಯಿಜಾನ್‌’ ಖ್ಯಾತಿಯ ನಿರ್ದೇಶಕ ಕಬೀರ್ಖಾನ್ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಸಿನಿಮಾ ಆರಂಭವಾಗಿಕಪ್ಗೆಲ್ಲುವತನಕ ನಿಮ್ಮ ಕಣ್ಣಂಚಿನಲ್ಲಿರುವ ನೀರು ಹೊರ ಬೀಳಲು ಕಾಯುತ್ತಲೇ ಇರುತ್ತದೆ. ನಡುನಡುವೆ ಒಂಚೂರು ಹಾಸ್ಯ, ವಿಷಾದ, ತುಂಟಾಟ, ನೋವು... ಹೀಗೆ ಹಲವು ಭಾವಗಳು ನಿಮ್ಮನ್ನು ಅಪ್ಪಿಕೊಂಡು, ಸೀಟಿನಂಚಿಗೆ ಬಂದು ಕೂಡುವಂತೆ ಮಾಡುತ್ತವೆ.

ಬಯೋಪಿಕ್ಸಿನಿಮಾಗಳನ್ನು ಮಾಡುವಾಗ ಡಾಕ್ಯುಮೆಂಟರಿಯಾಗುವ ಅಪಾಯವೇ ಹೆಚ್ಚು. ಒಂಚೂರು ಆಚೆ, ಈಚೆಯಾದರೂ ಸಿನಿಮಾ ಚೌಕಟ್ಟು ಮೀರುತ್ತದೆ. ಕೆಲವೊಮ್ಮೆ ನೈಜ ಘಟನೆಗಳ ಜತೆಗೆ ನಿರ್ದೇಶಕ ತನಗಿರುವ ಸೃಜನಾತ್ಮಕ ಸ್ವಾತಂತ್ರ್ಯ­ವನ್ನು ಬಳಸಿಕೊಂಡುಕತೆಯನ್ನೂ ಕಟ್ಟುತ್ತಾನೆ. ಆದರೆ, 83 ಸಿನಿಮಾದಲ್ಲಿಫಿಲ್ಮೀ ಕತೆಗೆ ಅಷ್ಟೇನೂ ಜಾಗವಿಲ್ಲ. ರಿಯಲ್ಕತೆಯನ್ನು ರೀಲ್ನಲ್ಲಿಅಷ್ಟೇ ರಿಯಲ್ಆಗಿ ತೋರಿಸುವಲ್ಲಿಯಶಸ್ವಿಯಾಗಿದ್ದಾರೆ. ಹಾಗಾಗಿ, ಕಪಿಲ್ಆ್ಯಂಡ್ಟೀಂ ಅಂದು ಅನುಭವಿಸಿದ ಎಲ್ಲಟೀಕೆ, ಉಡಾಫೆ, ನಿರ್ಲಕ್ಷ್ಯ ಎಲ್ಲವನ್ನೂ ತೆರೆಯ ಮೇಲೆ ತರಲು ಸಾಧ್ಯವಾಗಿದೆ. ಸುಮಾರು ಎರಡೂವರೆ ಗಂಟೆಯ ಸಿನಿಮಾ ಒಂದೇ ಗಂಟೆಯಲ್ಲಿಮುಗಿದ ಅನುಭವವಾಗುತ್ತದೆ!

ಕತೆ ಏನೆಂದು ಕೇಳಿದರೆ ಅದು ಎಲ್ಲರಿಗೂ ಗೊತ್ತಿರುವಂಥದ್ದೇ! ‘ಅಂಡರ್ಡಾಗ್‌’ ಹಣೆಪಟ್ಟಿ ಹೊತ್ತಿದ್ದ ತಂಡವೊಂದು ಯಾರೂ ನಿರೀಕ್ಷಿಸದ ರೀತಿಯಲ್ಲಿಸಾಹಸ ಮೆರೆಯುವಂಥದ್ದು. 1983ರ ವಿಶ್ವಕಪ್ಪಂದ್ಯಾವಳಿಗೆ ಹೊರಟ ತಂಡದ ಮೇಲೆ ಕ್ರಿಕೆಟ್ಮಂಡಳಿಯ ಅಧಿಕಾರಿಗಳಿಂದ ಹಿಡಿದು ದೇಶ, ವಿದೇಶಗಳಲ್ಲಿರುವ ಅಭಿಮಾನಿಗಳಿಗೆ ಮಾತ್ರವಲ್ಲದೆ ತಂಡಕ್ಕೆ ಆಯ್ಕೆಯಾದ ಆಟಗಾರರಿಗೆಗೆಲ್ಲುವವಿಶ್ವಾಸವಿರುವುದಿಲ್ಲ. ಈ ಹಿಂದಿನ ಎರಡು ವರ್ಲ್ಡ್ಕಪ್ನಲ್ಲಿಭಾರತದ ಪ್ರದರ್ಶನ ಹೀನಾಯವಾಗಿರುತ್ತದೆ. ಹಾಗಾಗಿ, ಯಾರಿಗೂ ಯಾವ ನಿರೀಕ್ಷೆಗಳೂ ಇರುವುದಿಲ್ಲ; ಕಪಿಲ್ದೇವ್ಎಂಬ ಆತ್ಮವಿಶ್ವಾಸದ ನಾಯಕನೊಬ್ಬನನ್ನು ಹೊರತುಪಡಿಸಿ. ಭಾರತದ ತಂಡದ ಬಗ್ಗೆ ತೂರಿ ಬರುವ ಎಲ್ಲ ಅವಮಾನಗಳನ್ನು ಶಾಂತವಾಗಿಯೇ ಸ್ವೀಕರಿಸಿ, ಸಹ ಆಟಗಾರರನ್ನು ಹುರಿದುಂಬಿಸುತ್ತ, ಅವರಲ್ಲಿರುವ ಶಕ್ತಿ ಸಾಮರ್ಥ್ಯದ ಬಗ್ಗೆ ಅರುಹುತ್ತಾ ಹೊಸ ಇತಿಹಾಸಕ್ಕೆ ನಾಂದಿ ಹಾಡುತ್ತಾರೆಇಂಗ್ಲಿಷ್ಮೋಹಿಕಪಿಲ್‌. ಈ ಪಾತ್ರವನ್ನು ನಟ ರಣವೀರ್ಸಿಂಗ್ಅಕ್ಷ ರಶಃ ಜೀವಿಸಿದ್ದಾರೆ. ಅಂದಿನ ಕ್ರಿಕೆಟ್ತಂಡದ ಯಶಸ್ಸಿನ ಶ್ರೇಯದಲ್ಲಿಮ್ಯಾನೇಜರ್ಪಿ. ಆರ್‌. ಮಾನ್ಸಿಂಗ್ಅವರಿಗೂ ಪಾಲು ಸಲ್ಲುತ್ತದೆ. ಆ ಪಾತ್ರದಲ್ಲಿಪ್ರತಿಭಾವಂತ ನಟ ಪಂಕಜ್ತ್ರಿಪಾಠಿ ನಿಮ್ಮನ್ನು ಕಾಡುತ್ತಾರೆ. ಕ್ರಿಕೆಟ್ತಂಡದ ಮ್ಯಾನೇಜರ್ಒಬ್ಬರು, ವಿಮಾನ ಟಿಕೆಟ್ಕ್ಯಾನ್ಸಲ್ಮಾಡಿದರೆ ಎಷ್ಟು ದುಡ್ಡು ಕೊಡಬೇಕಾಗುತ್ತದೆ ಎಂಬ ಲೆಕ್ಕ ಹಾಕುತ್ತಲೇ, ‘ನಮಗೆ ಸ್ವಾತಂತ್ರ್ಯ ಸಿಕ್ಕಿದೆ, ಇನ್ನೂ ಗೌರವ ಸಿಕ್ಕಿಲ್ಲಎಂದು ಹೇಳುತ್ತಾ ವಿಷಾದ ಮತ್ತು ವಾಸ್ತವವನ್ನು ಒಟ್ಟೊಟ್ಟಿಗೆ ತಂದಿಡುತ್ತಾರೆ. ಶ್ರೀಕಾಂತ್‌, ಮೊಹಿಂದರ್ಅಮರನಾಥ್‌, ಮದನಲಾಲ್‌, ಕೀರ್ತಿ ಆಜಾದ್‌, ಸಂದೀಪ್ಪಾಟೀಲ್‌, ಸಯ್ಯದ್ಕೀರ್ಮಾನಿ, ರೋಜರ್ಬಿನ್ನಿ, ಸುನಿಲ್ಗವಾಸ್ಕರ್‌, ಯಶಪಾಲ್ಶರ್ಮಾ, ಬಲ್ವಿಂದರ್ಸಿಂಗ್ಸಂಧು, ದಿಲಿಪ್ವೆಂಗ್ಸರ್ಕಾರ್ಹೀಗೆ ಎಲ್ಲಈ ದಂತಕತೆಗಳಾದ ಆಟಗಾರರ ಪಾತ್ರವನ್ನು ಪೋಷಣೆ ಮಾಡಿರುವ ನಟರು, ಮೂಲ ಕ್ರಿಕೆಟಿಗರನ್ನು ತೆರೆಯ ಮೇಲೆ ಬಹುತೇಕ ಪ್ರಾಮಾಣಿಕವಾಗಿ ತಂದಿದ್ದಾರೆ; ಅವರದ್ದೇ ಆಂಗಿಕ ಭಾಷೆಯನ್ನು ಯಶಸ್ವಿಯಾಗಿ ಬಳಸಿಕೊಂಡಿದ್ದಾರೆ.

1983ರ ವರ್ಲ್ಡ್ಕಪ್ನ ಯಶಸ್ಸು ಭಾರತದಲ್ಲಿಸಾಮಾಜಿಕವಾಗಿ, ಕ್ರೀಡಾ ಕ್ಷೇತ್ರದಲ್ಲಿಹೇಗೆ ಬದಲಾವಣೆಗೆ ಕಾರಣವಾಯಿತು ಎಂಬುದನ್ನು ಸೂಚ್ಯವಾಗಿ ನಿರ್ದೇಶಕರು ಹೇಳುತ್ತಾರೆ. ಫೈನಲ್ಮ್ಯಾಚ್ಆರಂಭವಾದಾಗ, ಬಾಲಕ ಸಚಿನ್ತೆಂಡೂಲ್ಕರ್ಟಿವಿ ಮುಂದೆ ಕುಳಿತುಕೊಳ್ಳುವುದು; ತಂಡ ಗೆದ್ದಾಗ ಭಾರತದ ಪರ ಆಡುವೆ ಎಂದು ಕೂಗುವುದು, ಕೋಮು ಹಿಂಸಾಚಾರದಿಂದಾಗಿ ಒಡೆದಿದ್ದ ಮನಸ್ಸುಗಳು ಒಂದಾಗುವುದು, ಕ್ರಿಕೆಟ್ಅನ್ನೇ ಸಮಸ್ಯೆಗೆ ಪರಿಹಾರವಾಗಿ ಬಳಸಿಕೊಳ್ಳುವ ನಾಯಕತ್ವ, ವಿದೇಶಗಳಲ್ಲಿಭಾರತೀಯ ಕ್ರಿಕೆಟ್ಅಭಿಮಾನಿಗಳು ನೋವು-ನಲಿವು, ಕ್ರಿಕೆಟ್ಅಂಗಣ­ದಲ್ಲಿಭಾರತ ರನ್ಹೊಡೆದಾಗಲೆಲ್ಲ ಗಡಿಯಿಂದ ತೂರಿ ಬರುವ ಗುಂಡುಗಳು... ಹೀಗೆ ಆ ಕಾಲಘಟ್ಟದ ಎಲ್ಲತಳಮಳಗಳನ್ನು ಕ್ರಿಕೆಟ್ನೊಟ್ಟಿಗೆ ಚಿತ್ರಿಸುವಲ್ಲಿಯಶಸ್ವಿಯಾಗಿದ್ದಾರೆ ಕಬೀರ್‌. ಸಿನಿಮಾದಲ್ಲಿಅಲ್ಲಲ್ಲಿಮೂಲ ಪಂದ್ಯಾವಳಿಯ ಫೋಟೊಗ್ರಾಫ್ಗಳನ್ನು, ವಿಡಿಯೊ ತುಣುಕುಗಳನ್ನು ಬಳಸಿಕೊಳ್ಳುವ ಮೂಲಕ ಕತೆ ಹೇಳುವ ರೀತಿಗೆ ಹೊಸ ಶೈಲಿಯನ್ನು ಶೋಧಿಸಿದ್ದಾರೆ ನಿರ್ದೇಶಕರು.

ಬಿಬಿಸಿ ನಿರ್ಲಕ್ಷ್ಯದಿಂದಾಗಿ ಜಿಂಬಾಬ್ವೆ ವಿರುದ್ಧ ಕಪಿಲ್ದೇವ್ಆಟವನ್ನು ನೋಡಲು ಅಂದಿನವರಿಗೆ ಸಾಧ್ಯವಾಗಿರಲಿಲ್ಲ. ಆ ಪಂದ್ಯದಲ್ಲಿಏಕಾಂಗಿಯಾಗಿ ಕಪಿಲ್ಅವರ ವಿಶ್ವದಾಖಲೆಯ ಆಟವನ್ನು ಕಣ್ತುಂಬಿ­ಕೊಳ್ಳಬೇಕಿದ್ದರೆ 83 ಮಿಸ್ಮಾಡಿಕೊಳ್ಳಬೇಡಿ.

 

ನಿರ್ದೇಶನ: ಕಬೀರ್ಖಾನ್‌, ತಾರಾಗಣ: ರಣವೀರ್ಸಿಂಗ್‌, ಜೀವಾ, ಪಂಕಜ್ತ್ರಿಪಾಠಿ, ದೀಪಿಕಾ ಪಡುಕೋಣೆ, ತಾಹಿರ್ರಾಜ್ಬಾಷಿನ್‌, ಜತಿನ್ಸರಣ್ಮತ್ತಿತರರು. ರೇಟಿಂಗ್‌: ****

(ಈ ವಿಮರ್ಶೆ ವಿಜಯ ಕರ್ನಾಟಕದ ಪತ್ರಿಕೆಯಲ್ಲಿ ಪ್ರಕಟವಾಗಿದೆ.)

ಸೋಮವಾರ, ನವೆಂಬರ್ 22, 2021

Nykaa CEO Falguni Nayar: ಫಾಲ್ಗುಣಿ ಯಶಸ್ಸಿನ ಗಣಿ, ಮಹಿಳೆಯರಿಗೆ ಸ್ಫೂರ್ತಿ ಸೆಲೆ

ಫಾಲ್ಗುಣಿ ನಾಯರ್ 50ನೇ ವಯಸ್ಸಿನಲ್ಲಿ ಆರಂಭಿಸಿದನೈಕಾಈಗ ಲಕ್ಷ ಕೋಟಿ ರೂ. ವೌಲ್ಯದ ಕಂಪನಿ. ಉದ್ಯಮದ ಹಿನ್ನೆಲೆ ಇಲ್ಲದೇ ಅವರು ಯಶಸ್ವಿ ಉದ್ಯಮಿಯಾದ ಕತೆ ಇದು.

 

-ಮಲ್ಲಿಕಾರ್ಜುನ ತಿಪ್ಪಾರ
ಉದ್ಯೋಗದಲ್ಲಿದ್ದವರಿಗೆ 50 ವರ್ಷ ವಯಸ್ಸು ಎಂದರೆ ನಿವೃತ್ತಿಯ ಹತ್ತಿರದಲ್ಲಿರುತ್ತಾರೆ, ಮನೆಯಲ್ಲಿದ್ದವರಾದರೆ ಮೊಮ್ಮಕ್ಕಳೊಂದಿಗೆ ಆಟವಾಡಿಕೊಂಡು ಕಾಲ ಕಳೆಯಲು ಮನಸ್ಸನ್ನು ಸಜ್ಜುಗೊಳಿಸುವ ಕಾಲ. ಅಂಥ ವಯಸ್ಸಿನಲ್ಲಿ ಸ್ಟಾರ್ಟ್ಅಪ್ ಆರಂಭಿಸಿ, ಅಲ್ಪ ಕಾಲದಲ್ಲೇಯೂನಿಕಾರ್ನ್ಕಂಪನಿ ಅಂದರೆ ಒಂದು ಶತಕೋಟಿ ಡಾಲರ್ ವೌಲ್ಯದ ಉದ್ಯಮವಾಗಿ ಬೆಳೆಸುವುದೆಂದರೆ ಸಾಮಾನ್ಯದ ಮಾತಲ್ಲಘಿ. ಈ ಅಸಾಮಾನ್ಯ ಸಾನೆಯನ್ನು ಸಾಮಾನ್ಯ ಮಹಿಳೆಯೊಬ್ಬಳು ಮಾಡಿದ್ದಾರೆ.

ಸೆಲ್ ಮೇಡ್ ಬಿಸಿನೆಸ್ ವುಮನ್ಫಾಲ್ಗುಣಿಆ ಯಶಸ್ವಿ ಉದ್ಯಮಿ. ನೈಕಾ(www.nykaa.com) ಎಂಬ ಇ- ಕಾಮರ್ಸ್ ತಾಣವನ್ನು ಸ್ಥಾಪಿಸಿ, ಅದನ್ನೀಗ ಬಹುದೊಡ್ಡ ಕಂಪನಿಯಾಗಿ ಬೆಳೆಸಿದ್ದಾರೆ. ನೈಕಾ ಇತ್ತೀಚೆಗಷ್ಟೇ ಷೇರುಪೇಟೆಯನ್ನು ಪ್ರವೇಶಿಸುತ್ತಿದ್ದಂತೆ ಅದರ ವೌಲ್ಯ ದಿಢೀರ್ನೇ ಏರಿಕೆಯಾಗಿದ್ದು, ಫಾಲ್ಗುಣಿ ದೇಶದ ಟಾಪ್ 20 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಪಡೆದುಕೊಂಡರು. ‘ನೈಕಾಪ್ರವರ್ತಕ ಕಂಪನಿ ಎ್ಎಸ್ಎನ್ ಇ-ಕಾಮರ್ಸ್ ತಲಾ 1125 ರೂ.ವೌಲ್ಯದ ಷೇರು ಬಿಡುಗಡೆ ಮಾಡಿತ್ತು. ಈ ಷೇರಿನ ದರ ಏಕ್ದಮ್ 2,001 ರೂ.ಗೆ ಏರಿಕೆಯಾಗಿ, ಒಂದೇ ದಿನದಲ್ಲಿ ಕಂಪನಿಯ ವೌಲ್ಯ ದುಪ್ಪಟ್ಟಾಯಿತು. ಇದರ ಪರಿಣಾಮ ಕಂಪನಿಯ ಒಟ್ಟು ಮಾರುಕಟ್ಟೆ ವೌಲ್ಯವು 1.04 ಲಕ್ಷ  ಕೋಟಿ ರೂ.ದಾಟಿತು. ‘ನೈಕಾಫಾಲ್ಗುಣಿ ನಾಯರ್ ಲಕ್ಷ ಕೋಟಿ ರೂಪಾಯಿ ವೌಲ್ಯದ ಕಂಪನಿಯ ಒಡತಿಯಾದರು!

ಶೃಂಗಾರ ಮತ್ತು ಸ್ವಾಸ್ಥ, ಫ್ಯಾಷನ್ ಉತ್ಪನ್ನಗಳ ಮಾರಾಟ ವೇದಿಕೆಯಾಗಿರುವ ನೈಕಾ ವೆಬ್ಸೈಟ್ನಲ್ಲಿ 400 ಬ್ರ್ಯಾಂಡುಗಳ 35,000ಕ್ಕೂ ಅಕ ಉತ್ಪನ್ನಗಳಿವೆ. ಫ್ಯಾಷನ್, ಸೌಂದರ್ಯವರ್ಧಕ ದೊಡ್ಡ  ಬ್ರ್ಯಾಂಡ್ಗಳೆಲ್ಲವೂ ಇಲ್ಲಿ ಲಭ್ಯ. ಜನಪ್ರಿಯ ಲ್ಯಾಕ್ಮೆ, ಕಾಯಾ ಸ್ಕಿನ್ ಕ್ಲಿನಿಕ್, ಲೋರಿಯಲ್ ಪ್ಯಾರಿಸ್ ಇತ್ಯಾದಿ ಬ್ರ್ಯಾಂಡುಗಳ ಉತ್ಪನ್ನಗಳು ಇಲ್ಲಿ ಬಿಕರಿಯಾಗುತ್ತವೆ. 70ಕ್ಕೂ ಅಕ ಆ್ಲೈನ್ ಸ್ಟೋರ್ಗಳೂ ದೇಶದ ವಿವಿಧ ಭಾಗಗಳಲ್ಲಿ ಆರಂಭವಾಗಿವೆ. ನೈಕಾ ವೆಬ್ಸೈಟ್ ಪ್ರತಿ ತಿಂಗಳು 4.5 ಕೋಟಿ ವಿಸಿಟರ್ಸ್ ಪಡೆದುಕೊಳ್ಳುತ್ತದೆ.

ಉದ್ಯಮದ ಯಾವುದೇ ಹಿನ್ನೆಲೆಯಿಲ್ಲದೆ ಕೇವಲ ಒಂಬತ್ತು ವರ್ಷದಲ್ಲೇ ಕಂಪನಿಯೊಂದನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯುವುದು ಹುಡುಗಾಟದ ಮಾತನೇಲ್ಲ. ಆದರೆ, 59 ವರ್ಷದ ಫಾಲ್ಗುಣಿ ಅಂಥ ಸಾಧನೆ ಮಾಡಿದ್ದಾರೆ. ಫಾಲ್ಗುಣಿ ಅವರೀಗ ಯಶಸ್ಸಿನ ಗಣಿ; ಭಾರತೀಯ ಮಹಿಳೆಯರಿಗೆ, ಅದರಲ್ಲೂ ಬಿಸಿನೆಸ್, ಉದ್ಯಮದಲ್ಲಿ ಆಸಕ್ತಿ ಹೊಂದಿರುವ ಮಹಿಳೆಯರಿಗೆ ಸ್ಫೂರ್ತಿಯ  ಖನಿ! ಗುಜರಾತಿಗಳಿಗೆ ವ್ಯಾಪಾರ ಸಹಜ. ಯಾಕೆ ಈ ಮಾತು ಹೇಳಬೇಕಾಯಿತು ಎಂದರೆ, ಫಾಲ್ಗುಣಿ ನಾಯರ್ ಕೂಡ ಗುಜರಾತಿ. ಆದರೆ, ಹುಟ್ಟಿ ಬೆಳೆದಿದ್ದು ಎಲ್ಲ ಮಹಾರಾಷ್ಟ್ರದಲ್ಲಿ. 1963ರ ಜನವರಿ 19ರಂದು ಮುಂಬಯಿಯಲ್ಲಿ ಗುಜರಾತಿ ಕುಟುಂಬದಲ್ಲಿ ಫಾಲ್ಗುಣಿ ಜನಿಸಿದರು. ಇವರ ತಂದೆ ಸ್ವಂತ ಮತ್ತು ಚಿಕ್ಕ ಬಿಯರಿಂಗ್ಸ್ ಕಂಪನಿಯನ್ನು ಹೊಂದಿದ್ದರು. ಮುಂಬಯಿಯ ದಿ ನ್ಯೂ ಎರಾ ಸ್ಕೂಲ್ನಲ್ಲಿ ತಮ್ಮ ಪ್ರಾಥಮಿಕ ಹಾಗೂ ಹೈಸ್ಕೂಲ್ ಶಿಕ್ಷಣವನ್ನು ಪೂರೈಸಿದ ಬಳಿಕ, ಕಾಮರ್ಸ್ ಪದವಿಯನ್ನು ಪಡೆದುಕೊಂಡರು. ಬಳಿಕ ಐಐಎಂ ಅಹಮದಾಬಾದ್ ಸಂಸ್ಥೆಯಿಂದ ತಮ್ಮ ಸ್ನಾತಕ ಶಿಕ್ಷಣವನ್ನು ಪಡೆದುಕೊಂಡರು. ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಂತೆ ಸಂಜಯ್ ನಾಯರ್ ಅವರನ್ನು ವರಿಸಿದರು. ಅಂಚಿತ್ ನಾಯರ್ ಮತ್ತು ಅದ್ವಿತಾ ನಾಯರ್ ಎಂಬ ಇಬ್ಬರು ಮಕ್ಕಳಿದ್ದಾರೆ.

ಎಲ್ಲರಂತೆ, ಫಾಲ್ಗುಣಿ ಅವರೂ ವಿದ್ಯಾಭ್ಯಾಸ ಪೂರ್ತಿಯಾದ ಬಳಿಕ ಉದ್ಯೋಗಕ್ಕೆ ಸೇರಿಕೊಂಡರು. ಕೋಟಕ್ ಮಹೀಂದ್ರಾ ಬ್ಯಾಂಕ್ ಸೇರಿದ ಅವರು 18 ವರ್ಷಗಳ ಕಾಲ ದುಡಿದರು. ಈ ಬ್ಯಾಂಕಿನಲ್ಲಿ ಇನ್ವೆಸ್ಟ್ಮೆಂಟ್ ಬ್ಯಾಂಕರ್ನಿಂದ ಕ್ಯಾಪಿಟಲ್ ಇನ್ವೆಸ್ಟ್ಮೆಂಟ್ ಮ್ಯಾನೇಜಿಂಗ್ ಡೈರೆಕ್ಟರ್ವರೆಗೂ ಉನ್ನತಿಯನ್ನು ಪಡೆದುಕೊಂಡರು. ಬಹುಶಃ ಬೇರೆ ಯಾರೇ ಆದರೂ ಅಷ್ಟು ಉನ್ನತ ಹುದ್ದೆಗೆ ತಲುಪಿದ ಮೇಲೆ ಮತ್ಯಾವುದೇ ಯೋಚನೆ ಮಾಡದೇ, ನಿವೃತ್ತಿಯವರೆಗೂ ಕೆಲಸ ಮಾಡುತ್ತಿದ್ದರು. ಆದರೆ, ಫಾಲ್ಗುಣಿ ಅವರಿಗೆ ಮಾತ್ರ ಏನಾದರೂ ಭಿನ್ನವಾದ ಕೆಲಸವನ್ನು ಮಾಡಬೇಕು, ಹೊಸತನ್ನು ಸಾಸಬೇಕೆಂಬ ತುಡಿತ ಸದಾ ಕಾಲ ಇತ್ತು. ಈ ಕನಸು ಅವರನ್ನು ನಿದ್ದೆ ಮಾಡಲು ಬಿಡುತ್ತಿರಲಿಲ್ಲ.  ತನ್ನದೇ ಆದ ಹೆಗ್ಗರುತನ್ನು ಛಾಪಿಸುವ ಹಪಾಹಪಿ ಅವರಲ್ಲಿ ಹೆಡೆಯಾಡುತ್ತಿತ್ತು. ಆದರೆ, ಅಷ್ಟೊತ್ತಿಗಾಗಲೇ 50 ವರ್ಷಗಳು ಸರಿದು ಹೋಗಿದ್ದವು. ಈ ಹಂತದಲ್ಲಿ ಕಂಪನಿಯೊಂದನ್ನು ಆರಂಭಿಸುವುದು ಸರಳವೇನೂ ಆಗಿರಲಿಲ್ಲ. ಅದಕ್ಕೆ ಬೇಕಾದ ಹಣಕಾಸು ನೆರವು ಆಗಲೀ, ಫ್ಯಾಮಿಲಿ ಹಿನ್ನೆಲೆಯಾಗಲೀ ಏನೂ ಇಲ್ಲ. ಆದರೆ ಧೈರ್ಯ, ಛಲ, ಪ್ರಾಮಾಣಿಕ ಪ್ರಯತ್ನಗಳೆಂಬಬಂಡವಾಳ   ಮಾತ್ರ ಹೇರಳವಾಗಿತ್ತು! ಕೊನೆಗೆ ತಮ್ಮ ಕನಸು ಬೆನ್ನು ಹತ್ತಿ 2012ರಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ನೌಕರಿಯನ್ನು ತ್ಯಜಿಸಿದರು. ಧೈರ್ಯದಿಂದ ಮುನ್ನುಗ್ಗಿ, ಎಫ್ಎಸ್ಎನ್ ಇ ಕಾಮರ್ಸ್ ವೆಂಚರ್ ಪ್ರೈವೆಟ್ ಲಿ. ಆರಂಭಿಸಿದರು. ಈ ಕಂಪನಿಯಡಿ ಸೌಂದರ್ಯ, ವೆಲ್ನೆಸ್ ಮತ್ತು ಫ್ಯಾಷನ್ ಸಂಬಂಧಿ ವಸ್ತುಗಳ ಮಾರಾಟ ಇ-ಕಾಮರ್ಸ್ ತಾಣನೈಕಾತೆರೆದರು. ಆ ನಂತರ ಮತ್ತೆ ಅವರು ಹಿಂದಿರುಗಿ ನೋಡಲೇ ಇಲ್ಲ. ಸೌಂದರ್ಯ ಮತ್ತು ಸ್ವಾಸ್ಥ್ಯ ವಲಯದ ನೈಕಾ ಮೂಲಕ ತಮ್ಮ ಹೆಗ್ಗರುತು ಮೂಡಿಸಲು ಅವರು ಯಶಸ್ವಿಯಾದರು. ಚಿಕ್ಕದಾಗಿ ಆರಂಭವಾಗಿದ್ದ ಇ-ಕಾಮರ್ಸ್ ತಾಣ ಇದೀಗ ಹೆಮ್ಮರವಾಗಿ ಬೆಳೆದಿದೆ. ಅದರ ಮಾರುಕಟ್ಟೆ ವೌಲ್ಯ ಲಕ್ಷ ಕೋಟಿ ರೂಪಾಯಿ ಮೀರಿದೆ; 2000ಕ್ಕೂ ಅಧಿಕ ಜನರಿಗೆ ಉದ್ಯೋಗ ನೀಡಿದೆ. ಮಾರುಕಟ್ಟೆ ವೌಲ್ಯದಲ್ಲಿ ನೈಕಾ ಇದೀಗ ಕೋಲ್ ಇಂಡಿಯಾ, ಗೋದ್ರೇಜಾ ಕಂಪನಿಗಳನ್ನು ಮೀರಿಸಿದೆ. ದೇಶದ 20 ಶ್ರೀಮಂತರ ಪಟ್ಟಿಯಲ್ಲಿ ಫಾಲ್ಗುಣಿ 17ನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯ ಅಗ್ರಸ್ಥಾನದಲ್ಲಿ ಮುಖೇಶ್ ಅಂಬಾನಿ, ಗೌತಮ್ ಅದಾನಿಯಂಥವರಿದ್ದಾರೆ. ಮತ್ತೊಂದು ಗಮನಿಸಬೇಕಾದ ಸಂಗತಿ ಏನೆಂದರೆ; ಟಾಪ್ ಸ್ಟಾರ್ಟ್ಅಪ್ ಐಪಿಒಗಳ ಪಟ್ಟಿಯಲ್ಲಿ ಫಾಲ್ಗುಣಿ ಪ್ರಥಮ ಸ್ಥಾನದಲ್ಲಿದ್ದಾರೆ. ಯಾಕೆಂದರೆ, ನೈಕಾದಲ್ಲಿ ಇವರದ್ದೇ ಶೇ.53ರಷ್ಟು ಷೇರಿದೆ. ನಂತರದ ಸ್ಥಾನದಲ್ಲಿ ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಶರ್ಮಾ, ರೆಮಾಟೊದ ದೀಪೇಂದ್ರ ಗೋಯಲ್ನಂಥವರಿದ್ದಾರೆ.

ಯಶಸ್ಸಿನ ತುದಿಯನ್ನು ತಲುಪಿರುವ ಫಾಲ್ಗುಣಿ ನಾಯರ್  ತಮ್ಮ ತಂದೆಯಿಂದ ಸಾಕಷ್ಟು ಪ್ರಭಾವಿತರಾದರೆ, ಉದ್ಯಮಿ ಉದಯ್ ಕೋಟಕ್ ಮತ್ತು ಪತಿ ಸಂಜಯ್ ನಾಯರ್ರಿಂದ ಸ್ಫೂರ್ತಿ ಪಡೆದುಕೊಂಡಿದ್ದಾರೆ. ‘ಕರ್ಮಣ್ಯೇವಾಕಾರಸ್ತೇ ಮಾ ಫಲೇಷು ಕದಾಚನಎಂಬಂತೆ ತಮ್ಮ ಕೆಲಸವನ್ನು ತಾವು ಮಾಡುತ್ತಾ ಹೊರಟಿದ್ದಾರೆ, ಫಲಾಫಲ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಯಾವುದೇ ಸಕ್ಸೆಸ್ ಆಗಲೀ ಶಾರ್ಟ್ಕಟ್ನಲ್ಲಿ ಬರುವಂಥದ್ದಲ್ಲ. ಅದಕ್ಕಾಗಿ ತನುಮನಧನವೆನ್ನಲ್ಲ ಅರ್ಪಿಸಬೇಕಾಗುತ್ತದೆ. ಅರ್ಪಣೆ, ಸಮರ್ಪಣೆಗಳಿದ್ದಾಗ ಮಾತ್ರವೇ ಅಂದುಕೊಂಡ ಗುರಿಯನ್ನು ಮುಟ್ಟಲು ಸಾಧ್ಯ ಎಂಬುದಕ್ಕೆ ಫಾಲ್ಗುಣಿ ಈಗ ಉದಾಹರಣೆಯಾಗಿದ್ದಾರೆ.

ಈಗಿನದ್ದು ಮೈಕ್ರೋಬ್ಲಾಗಿಂಗ್ ಜಮಾನಾ. ಬಹುತೇಕ ಉದ್ದಿಮೆದಾರರು ಟ್ವಿಟರ್, ಫೇಸ್‌ಬುಕ್ನಂಥ ಸೋಷಿಯಲ್ ಮೀಡಿಯಾಗಳಲ್ಲಿದ್ದಾರೆ. ಆದರೆ, ಫಾಲ್ಗುಣಿ ಅವರು ಇದಕ್ಕೆ ಅಪವಾದ. ನೈಕಾ ಕಂಪನಿ ಶುರು ಮಾಡಿದಾಗಿನಿಂದ ಈ ಒಂಬತ್ತು ವರ್ಷಗಳಲ್ಲಿ ಅವರು ಒಮ್ಮೆ ಮಾತ್ರ ಟ್ವೀಟ್ ಮಾಡಿದ್ದಾರಂತೆ! ಸೋಷಿಯಲ್ ಮೀಡಿಯಾದಲ್ಲಿ ವ್ಯಸ್ತವಾಗುವುದೆಂದರೆ ಸಾಕಷ್ಟು ಸಮಯ ಮತ್ತು ಪ್ರಯತ್ನ ಬೇಕಾಗುತ್ತದೆ ಎಂಬುದು ಅವರ ಈ ನಿರ್ಧಾರಕ್ಕೆ ಕಾರಣ.

ಯಾವುದೇ ಉದ್ಯಮಶೀಲತೆಯೊಂದು ಯಶಸ್ಸು ಗಳಿಸಬೇಕಾದರೆ ಸಾಕಷ್ಟು ಉತ್ಸಾಹ, ಕಠಿಣ ಪರಿಶ್ರಮ, ದೃಢತೆ ಮತ್ತು ಸಮಯವನ್ನು ಬೇಡುತ್ತದೆ ಎಂಬುದು ಅವರು ಖಚಿತ ನುಡಿಗಳಾಗಿವೆ. ‘‘ನಾನು ನೈಕಾವನ್ನು 50ನೇ ವಯಸ್ಸಿನಲ್ಲಿ ಆರಂಭಿಸಿದೆ. ನೈಕಾಪಯಣವು ಪ್ರತಿಯೊಬ್ಬ ಹುಡುಗಿಯ ತನ್ನ ಬದುಕಿನಲ್ಲಿ ತಾನೇನಾಯಕಿಯಾಗಲು ಪ್ರೇರಣೆ ನೀಡಲಿ ಎಂಬುದು ನನ್ನ ಆಶಯ,’’ ಎಂದು ಹೇಳಿಕೊಂಡಿದ್ದರು. ಅನುಮಾನವೇ ಬೇಡ. ನೈಕಾ ಹಾಗೂ ಫಾಲ್ಗುಣಿ ನಾಯರ್ ಅವರ ಯಶಸ್ಸಿನ ಪಯಣವು ಮುಂಬರುವ ಅಸಂಖ್ಯ ಮಹಿಳೆಯರಿಗೆ ಸ್ಫೂರ್ತಿ ನೀಡಲಿದೆ. ಸಮರ್ಪಣೆಯಿಂದ, ಪ್ರಾಮಾಣಿಕ ಪ್ರಯತ್ನದಿಂದ ಮುನ್ನಡೆದರೆ ಯಶಸ್ಸು ಸಿಕ್ಕೇ ಸಿಗುತ್ತದೆ ಎಂಬುದಕ್ಕೆ ಯಶಸ್ಸಿನ ಮಾದರಿಯನ್ನು ನಮ್ಮ ಮುಂದೆ ಫಾಲ್ಗುಣಿ ಕಡೆದು ನಿಲ್ಲಿಸಿದ್ದಾರೆ.

 
ಈ ಲೇಖನವು ವಿಜಯ ಕರ್ನಾಟಕದ ವ್ಯಕ್ತಿಗತ ಅಂಕಣದಲ್ಲಿ 2021 ನವೆಂಬರ್ 21ರ ಸಂಚಿಕೆಯಲ್ಲಿ ಪ್ರಕಟವಾಗಿದೆ.


ಭಾನುವಾರ, ನವೆಂಬರ್ 21, 2021

'Jai Bhim' Real Hero Justice K Chandru: ಶೋಷಿತರ ರಿಯಲ್‌ ಹೀರೊ ಜಸ್ಟೀಸ್ ಕೆ ಚಂದ್ರು

ಶೋಷಿತರ ಪರ ನಿಲ್ಲುವ ನ್ಯಾಯವಾದಿಯ ಕತೆಯ ಸಿನಿಮಾಜೈ ಭೀಮ್‌’ ಸದ್ದು ಮಾಡುತ್ತಿದೆ. ನೈಜ ಕತೆಯನ್ನಾಧರಿಸಿದ ಈ ಚಿತ್ರದ ಅಸಲಿ ಹೀರೊ ಜಸ್ಟೀಸ್ಕೆ.ಚಂದ್ರು.


- ಮಲ್ಲಿಕಾರ್ಜುನ ತಿಪ್ಪಾರ
ದೃಶ್ಯ ಮಾಧ್ಯಮದ ಬಹು ಸಾಧ್ಯತೆಗಳನ್ನು ಬಳಸಿಕೊಳ್ಳುವುದಲ್ಲಿ ತಮಿಳು ಚಿತ್ರರಂಗದ್ದು ಎತ್ತಿದ ಕೈ. ನೈಜ ಕತೆಗಳನ್ನು ಬೆಳ್ಳಿತೆರೆಗೆ ಅನ್ವಯಿಸಿ, ಜನರಿಗೆ ನಾಟುವಂತೆ ದಾಟಿಸುವ ಕಲೆಯನ್ನು ಕರಗತ ಮಾಡಿಕೊಂಡಿದೆ. ಈಗ ಸೂರ್ಯ ನಟನೆಯಜೈ ಭೀಮ್‌’ ಸಿನಿಮಾ ಕೂಡ ಇದೇ ನೆಲೆಯಲ್ಲಿ ರೂಪುಗೊಂಡಿದ್ದು, ನೈಜ ಕತೆಯಾಧರಿಸಿ ಇತರ ಸಿನಿಮಾಗಳಿಗಿಂತ ಭಿನ್ನವಾಗಿ ನಿಂತಿದೆ. ಅಪರಿಮಿತ ಅಧಿಕಾರ ಹೊಂದಿರುವ ಪೊಲೀಸ್ವ್ಯವಸ್ಥೆ ತನ್ನ ಸಂವೇದನೆ ಕಳೆದುಕೊಂಡು, ಅಪ್ರಮಾಣಿಕವಾಗಿ, ಅಧಿಕಾರದ ದರ್ಪದಿಂದ ವರ್ತಿಸಿದಾಗ ಧ್ವನಿ ಇಲ್ಲದವರು, ಸಮಾಜದಲ್ಲಿಯಾವ ರೀತಿಯಲ್ಲಿಶೋಷಣೆಗೊಳಗಾಗುತ್ತಾರೆ, ನಿರ್ದೋಷಿಗಳು ಹೇಗೆ ಬಲಿಯಾಗುತ್ತಾರೆಂಬ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಈ ಚಿತ್ರದಲ್ಲಿಮುಖ್ಯ ಪಾತ್ರ ನ್ಯಾಯವಾದಿ ಚಂದ್ರು. ಈ ಪಾತ್ರವನ್ನು ನಟ ಸೂರ್ಯ ಪರಕಾಯ ಪ್ರವೇಶ ಮಾಡಿದ್ದು, ವಿಮರ್ಶಕರಿಂದಲೂ ಮೆಚ್ಚುಗೆ ದೊರೆತಿದೆ. ಇದಿಷ್ಟುರೀಲ್‌’ ಕತೆಯಾದರೆ, ಸೈಡ್ವಿಂಗ್ನಲ್ಲಿ ರಿಯಲ್ಕತೆಯನ್ನು ಬಿಚ್ಚುತ್ತಾ ಹೋದರೆ ಅದು ಇನ್ನೊಂದು ರೋಮಾಂಚನ. ಚಿತ್ರದ ಮುಖ್ಯ ಪಾತ್ರವಾಗಿರುವ ಚಂದ್ರು, ನಿಜ ಜೀವನದ ಜಸ್ಟೀಸ್ಕೆ. ಚಂದ್ರು. ಮದ್ರಾಸ್ಹೈಕೋರ್ಟ್ನ ನ್ಯಾಯಮೂರ್ತಿಯಾಗಿ ದಕ್ಷ ತೆಯಿಂದ ಕೆಲಸ ಮಾಡಿದ ವ್ಯಕ್ತಿ ಅವರು. ತಮಿಳುನಾಡಿನಲ್ಲಿ ತುಂಬ ಹೆಸರಿದೆ. ಆದರೆ, ‘ಜೈ ಭೀಮ್‌’ ತೆರೆಗೆ ಬರುವವರೆಗೂ ಜ.ಕೆ. ಚಂದ್ರು ಅವರ ಬಗ್ಗೆ ತಮಿಳುನಾಡಿನಾಚೆ ಅಷ್ಟೇನೂ ಗೊತ್ತಿರಲಿಲ್ಲ.

ಕೆ.ಚಂದ್ರು ಅವರು ಮದ್ರಾಸ್ಹೈಕೋರ್ಟ್ನ್ಯಾಯಮೂರ್ತಿಯಾಗಿ ಅದ್ವಿತೀಯ ಕೆಲಸ ಮಾಡಿದ್ದಾರೆ. ಸಾಮಾನ್ಯಧಿವಾಗಿ ಒಬ್ಬ ಜಡ್ಜ್ತಮ್ಮ ಅವಧಿಯಲ್ಲಿ 10 ಸಾವಿರದಿಂದ 20 ಸಾವಿರದವರೆಗೆ ಕೇಸ್ಗಳನ್ನು ಇತ್ಯರ್ಥಪಡಿಸುತ್ತಾರೆ. ಆದರೆ, . ಚಂದ್ರು ತಮ್ಮ ಆರೂವರೆ ವರ್ಷಗಳ ಅವಧಿಯಲ್ಲಿ90 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥಪಡಿಸಿ, ಕ್ಷೀಪ್ರ ನ್ಯಾಯದಾನ ಮಾಡಿದ್ದಾರೆ.

ಕೆಂಪು ಗೂಟದ ಕಾರನ್ನು ಯಾರು ಬಳಸಬೇಕು ಎಂಬ ಬಗ್ಗೆ ಚರ್ಚೆಗಳು ನಡೆದೇ ಇವೆ. ಕೋರ್ಟ್ಆದೇಶದ ಪ್ರಕಾರ, ಕೆಲವು ಸಂವಿಧಾನಬದ್ಧ ಹುದ್ದೆ ಅಲಂಕರಿಸಿದವರನ್ನು ಹೊರತುಪಡಿಸಿ ಉಳಿದವರಿಗೆ ಈ ಸೇವೆ ಇಲ್ಲ. ಈ ಬಗ್ಗೆ ಆದೇಶವಾಗುವುದಕ್ಕಿಂತ ಮುಂಚೆಯೇ ಚಂದ್ರು ತಮ್ಮ ಕಾರಿನ ಕೆಂಪು ದೀಪವನ್ನು ತೆಗೆಸಿದ್ದರು. ವಕೀಲರು ನ್ಯಾಯಾಧೀಶರನ್ನು ಉದ್ದೇಶಿಸಿ ಬಳಸುವಮೈ ಲಾರ್ಡ್‌’ ಪದವನ್ನು ತಮಗೆ ಬಳಸದಂತೆ ಸೂಚಿಸಿದ್ದರು! ಇದೆಲ್ಲವೂ ಅವರ ಸರಳತೆಯನ್ನು ಬಹಿರಂಗಗೊಳಿಸುತ್ತದೆ.

2006ರಲ್ಲಿಚಂದ್ರು ಮದ್ರಾಸ್ಹೈಕೋರ್ಟ್ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2009ರಲ್ಲಿಕಾಯಂ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಯಿತು. ಅವರ ಸರಳತೆಗೆ ಮತ್ತೊಂದು ಉದಾಹರಣೆ ಎಂದರೆ, ಅವರು ನ್ಯಾಯಮೂರ್ತಿಯಾಗಿ ನಿವೃತ್ತಿಯಾದ ದಿನ ಬೆಳಗ್ಗೆ ಸರಕಾರಿ ಕಾರ್ಉಪಯೋಗಿಸಿದ್ದರೆ, ಸಾಯಂಕಾಲ ಸರಕಾರಿ ಕಾರನ್ನು ಬಿಟ್ಟು  ಲೋಕಲ್ಟ್ರೈನ್ನಲ್ಲಿಮನೆಗೆ ಪ್ರಯಾಣಿಸಿದ್ದರು. ಸರಳತೆ, ಪ್ರಮಾಣಿಕತೆ, ಬದ್ಧತೆ ಹಾಗೂ ನಿಸ್ವಾರ್ಥ ಮೌಲ್ಯಗಳು ಅವರನ್ನು ಒಬ್ಬ ಪರಿಪೂರ್ಣ ನ್ಯಾಯಮೂರ್ತಿಯಾಗಿ ಮಾಡಿದ್ದಲ್ಲದೆ, ಒಬ್ಬ ಕ್ರೂಸೆಡರ್ರೀತಿಯಲ್ಲಿ ಕೆಲಸ ಮಾಡಲು ಸಾಧ್ಯವಾಯಿತು.

ನ್ಯಾಯಮೂರ್ತಿಯಾಗುವ ಮೊದಲು ಅವರು ಮದ್ರಾಸ್ಹೈಕೋರ್ಟ್ನಲ್ಲಿವಕೀಲಿಕೆ ಮಾಡುತ್ತಿದ್ದರು. ಆಗಲೂ ಅಷ್ಟೇ ವಕೀಲರಾಗಿ ಸಮಾಜದಲ್ಲಿನ ಬಡವರು, ಬುಡಕಟ್ಟು ಜನಾಂಗದವರು, ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಕಾನೂನು ಸೇವೆಯನ್ನು ಒದಗಿಸಿದ್ದಾರೆ. ಒಂದು ಪೈಸೆ ತೆಗೆದುಕೊಳ್ಳದೇ ಅವರ ಪರವಾಗಿ ಹೋರಾಡಿದ್ದಾರೆ. ‘ಜೈ ಭೀಮ್‌’ ಚಿತ್ರದಲ್ಲಿಅಳವಡಿಸಿಧಿಕೊಳ್ಳಲಾಗಿಧಿರುವುದು ಅವರ ವೃತ್ತಿ ಬದುಕಿನ ಒಂದು ಎಪಿಸೋಡ್ಅಷ್ಟೇ.

ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬನನ್ನು ಪೊಲೀಸರು ಕಳ್ಳತನದ (ಸುಳ್ಳು ಪ್ರಕರಣ) ಆರೋಪದ ಮೇಲೆ ಬಂಧಿಸುತ್ತಾರೆ. ಮಾಡದೇ ಇರುವ ತಪ್ಪನ್ನು ಒಪ್ಪಿಕೊಳ್ಳುವಂತೆ ಕಿರುಕುಳ ನೀಡುತ್ತಾರೆ. ಇದರಿಂದ ಆತ ಸತ್ತು ಹೋಗುಧಿತ್ತಾನೆ. ಕೇಸ್ಮುಚ್ಚಿ ಹಾಕುವುದಕ್ಕಾಗಿ ಆರೋಪಿ ಪರಾರಿಧಿಯಾಗಿದ್ದಾನೆಂಬ ಕತೆ ಕಟ್ಟುತ್ತಾರೆ. ಆದರೆ, ಮೃತನ ಪತ್ನಿ ನಂಬುವುದಿಲ್ಲ. ಆಕೆಗೆ ಕಂಡಿದ್ದೇ ಈ ನ್ಯಾಯವಾದಿ ಚಂದ್ರು. ಪ್ರಕರಣವನ್ನು ಕೈಗೆತ್ತಿಕೊಳ್ಳುವ ಅವರು 13 ವರ್ಷ ಹೋರಾಡಿ, ಆರೋಪಿ ಪೋಲೀಸರಿಗೆ 14 ವರ್ಷ ಕಾಲ ಜೈಲು ಶಿಕ್ಷೆಯಾಗುವಂತೆ ಮಾಡುತ್ತಾರೆ. ಈ ಕೇಸಿಧಿನಿಂದ ಹಿಂದೆ ಸರಿಯಲು ಸಾಕಷ್ಟು ಆಮಿಷಗಳನ್ನು ಒಡ್ಡಿದರೂ ಚಂದ್ರು ತಮ್ಮ ಬದ್ಧತೆಯನ್ನು ಎಲ್ಲೂಬಿಟ್ಟುಕೊಡುಧಿವುದಿಲ್ಲ, ಹಣ ತುಂಬಿದ ಸೂಟ್ಕೇಸ್ಅನ್ನೇ ರೂಮಿನಿಂದ ಆಚೆ ಎಸೆದಂಥ ಘಟನೆಗಳಿವೆ. ಇಂಥ ಹತ್ತಾರು ಕತೆಗಳು, ಪ್ರಕರಣಗಳು ಅವರಲ್ಲಿವೆ.

ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಶ್ರೀರಂಗಮ್ನ ಮಧ್ಯಮ ವರ್ಗದ ಕುಟುಂಬದಲ್ಲಿ1951 ಮೇ 8ರಂದು ಜನಿಸಿದರು. ಸತ್ಯದ ಪರವಾಗಿ ಹೋರಾಟ ಅವರಿಗೆ ವಿದ್ಯಾರ್ಥಿ ದೆಸೆಯಿಂದಲೇ ಬಂದ ಗುಣ. ಕಾಲೇಜಿನಲ್ಲಿದ್ದಾಧಿಗಲೇ ಸಿಪಿಎಂ ವಿದ್ಯಾರ್ಥಿ ನಾಯಕರಾಗಿದ್ದರು. ಇದರಿಂದಾಗಿ ಚೆನ್ನೈನಲ್ಲಿಲೋಯೋಲಾ ಕಾಲೇಜ್ನಲ್ಲಿ ಸಾಕಷ್ಟು ತೊಂದರೆ ಎದುರಿಸಬೇಕಾಯಿತು. ವಿದ್ಯಾರ್ಥಿಗಳ ಹೋರಾಟದ ನಾಯಕತ್ವ ವಹಿಸಿಕೊಂಡಿದ್ದಕ್ಕಾಗಿ ಲೋಯೋಲಾ ಕಾಲೇಜ್ಆಡಳಿತ ಮಂಡಳಿ ಇವರನ್ನು ಕಾಲೇಜಿನಿಂದ ಹೊರ ಹಾಕಿತು. ನಂತರ ಅವರು ಕ್ರಿಶ್ಚಿಯನ್ಕಾಲೇಜ್ನಲ್ಲಿಅಧ್ಯಯನ ಮುಂದುವರಿಸಬೇಕಾಯಿತು.

ವಿದ್ಯಾರ್ಥಿ ನಾಯಕನಾಗಿ, ಟ್ರೇಡ್ಯೂನಿಯನ್ನಾಯಕನಾಗಿ ಅವರು ಇಡೀ ತಮಿಳುನಾಡನ್ನು ಲಾರಿ ಮತ್ತು ಬಸ್ಗಳ ಮೂಲಕವೇ ಸುತ್ತಿದ್ದಾರೆ; ಜನರನ್ನು ಸಂಘಟಿಸಿದ್ದಾರೆ. ಈ ಸಂದರ್ಭದಲ್ಲಿದಲಿತರು, ಕಾರ್ಮಿಕರು, ಕೃಷಿ ಕಾರ್ಮಿಕರು, ಟ್ರೇಡ್ಯೂನಿಯನ್ನಾಯಕರನ್ನು ಭೇಟಿ ಮಾಡುವ ಅವಕಾಶ ಅವರಿಗೆ ಸಿಕ್ಕಿದೆ. ಈ ವ್ಯವಸ್ಥೆಯು ಶಕ್ತಿಹೀನರನ್ನು ಹೇಗೆ ಶೋಷಣೆ ಮಾಡುತ್ತದೆ ಎಂಬ ಸ್ಪಷ್ಟವಾದ ಪರಿಕಲ್ಪನೆ, ಅನುಭವ ಅವರಿಗಾಗಿದೆ.

ಚಂದ್ರು ಅವರು ವಕೀಲಿ ವೃತ್ತಿಗೆ ಬರಲು ಅಣ್ಣಾ ವಿವಿ ವಿದ್ಯಾರ್ಥಿಯೊಬ್ಬ ಪೊಲೀಸರ ಲಾಠಿ ಏಟಿಗೆ ಮೃತಪಟ್ಟ ಘಟನೆ ಕಾರಣವಾಯಿತು. ಈ ಘಟನೆಯ ತನಿಖೆಗೆ ಎಂ ಕರುಣಾನಿಧಿ ಅವರು ಹೆಚ್ಚುವರಿ ನ್ಯಾಯಧಿಮೂರ್ತಿ ನೇತೃತ್ವದಲ್ಲಿಆಯೋಗ ನೇಮಕ ಮಾಡಿದ್ದರು. ಈ ಆಯೋಗದ ಎದುರು ಚಂದ್ರು ಅವರು ವಿದ್ಯಾರ್ಥಿಗಳ ಪರವಾಗಿ ಹಾಜರಾಗಿಧಿದ್ದರು. ಅವರ ವಾದ ಮಂಡನೆ ಮತ್ತು ಜಾಣತನವನ್ನು ಗುರುತಿಸಿದ ನ್ಯಾಯಧಿಮೂರ್ತಿ, ಕಾನೂನು ವೃತ್ತಿಗೆ ಬರುವಂತೆ ಸೂಚಿಸಿದರು. ಪರಿಣಾಮ ಚಂದ್ರು 1973ರಲ್ಲಿಕಾನೂನು ಕಾಲೇಜಿಗೆ ದಾಖಲಾದರು. ಆದರೆ, ಹಾಸ್ಟೆಲ್ಪ್ರವೇಶಧಿವನ್ನು ನಿರಾಕರಿಸಲಾಯಿತು. ವಿದ್ಯಾರ್ಥಿ ನಾಯಕರಾಗಿ ಅವರು ಕೈಗೊಂಡ ಹೋರಾಟಗಳೇ ಇದಕ್ಕೆ ಕಾರಣವಾಗಿತ್ತು. ಆದರೆ, ಪಟ್ಟು ಸಡಿಲಿಸದ ಅವರು ಮೂರು ದಿನ ಉಪವಾಸ ಸತ್ಯಾಗ್ರಹ ಕೈಗೊಂಡರು. ಅಂತಿಮವಾಗಿ ಅಧಿಕಾರಿಗಳು ಹಾಸ್ಟೆಲ್ಪ್ರವೇಶ ನೀಡಬೇಕಾಯಿತು

 ಕಾಲೇಜಿನಲ್ಲಿದ್ದಾಗಲೇ ಬಡವರಿಗೆ ಕಾನೂನು ಸೇವೆ ಒದಗಿಸಲಾರಂಭಿಸಿದರು. ಬಡವರು, ಶೋಷಿತರಿಗೆ ಕಾನೂನು ಸೇವೆಯನ್ನು ಒದಗಿಸುತ್ತಿದ್ದ ರಾವ್ಆಂಡ್ರೆಡ್ಡಿ ಸಂಸ್ಥೆಯನ್ನು ಸೇರಿದರು. 8 ವರ್ಷ ಇಲ್ಲಿಕೆಲಸ ಮಾಡಿ, ಸ್ವತಂತ್ರವಾಗಿ ವಕೀಲಿಕೆಯನ್ನು ಆರಂಭಿಸಿದರು. ತಮಿಳುನಾಡು ಬಾರ್ಕೌನ್ಸಿಲ್ಗೆ ಆಯ್ಕೆಯಾದ ಅತ್ಯಂತ ತರುಣ ನ್ಯಾಯವಾದಿ ಎನಿಸಿಕೊಂಡರು. ಇದರ ಮಧ್ಯೆಯೇ, ಶ್ರೀಲಂಕಾ ವಿಷಯದಲ್ಲಿ ರಾಜೀವ್ಗಾಂಧಿ ಆಡಳಿತ ನಡೆದುಕೊಂಡ ರೀತಿಗೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯದಿಂದಾಗಿ ಸಿಪಿಎಂ ಪಕ್ಷ ವನ್ನೂ ತೊರೆದರು.

ಮದ್ರಾಸ್ಹೈಕೋರ್ಟ್ನ್ಯಾಯಮೂರ್ತಿಯಾಗಿ ಕ್ಷೀಪ್ರವಾಗಿ ನ್ಯಾಯದಾನ ಮಾಡಿದ್ದೂ ಮಾತ್ರವಲ್ಲದೇ ಹಲವು ಐತಿಹಾಸಿಕ ತೀರ್ಪುಗಳನ್ನು ನೀಡಿದ್ದಾರೆ. ಆ ಪೈಕಿ ಮಹಿಳೆಯರಿಗೆ ಅರ್ಚಕರಾಗಲು ಅವಕಾಶ ಕಲ್ಪಿಸುವುದು, ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿಕೆಲಸ ಮಾಡುತ್ತಿದ್ದ 25 ಸಾವಿರ ಬಡ ಹೆಣ್ಣುಮಕ್ಕಳಿಗೆ ಉದ್ಯೋಗ ಭದ್ರತೆ ಒದಗಿಸುವ ತೀರ್ಪು ಸೇರಿದಂತೆ ಅನೇಕ ಜನಪರ ತೀರ್ಪುಗಳನ್ನು ನೀಡಿದ್ದಾರೆ. ನ್ಯಾಯವಾದಿಯಾಗಿದ್ದಾಗ ಪಾಲಿಸಿಕೊಂಡಿದ್ದ ಶೋಷಿತರಿಗೆ ಧ್ವನಿಯಾಗುವ ಕೆಲಸವನ್ನು ನ್ಯಾಯಾಧೀಶಧಿರಾದಾಗಲೂ ಮುಂದುವರಿಸಿಕೊಂಡು ಬಂದು, 2013ರಲ್ಲಿನಿವೃತ್ತರಾದರು.

ಅವರು ಕೇವಲ ಒಬ್ಬ ನ್ಯಾಯವಾದಿ, ಜಸ್ಟಿಸ್ಮಾತ್ರವಲ್ಲದೆ ಬರಹಗಾರರೂ ಹೌದು. ನಿವೃತ್ತಿಯಾದ ಮೇಲೂ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪತ್ರಿಕೆಗಳಿಗೆ ಅಂಕಣಗಳನ್ನು ಬರೆಯುತ್ತಾರೆ; ಪುಸ್ತಕಗಳನ್ನು ಬರೆದಿದ್ದಾರೆ. Listen to My Case!: When Women Approach the Courts of Tamil Naduಅವರ ಇತ್ತೀಚಿನ ಕೃತಿ. ಈ ಪುಸ್ತಕದಲ್ಲಿ ಚಂದ್ರು ಅವರು, ನ್ಯಾಯಕ್ಕಾಗಿ ಹೋರಾಡಿದ 20 ಮಹಿಳೆಯರ  ಬಗ್ಗೆ ಬರೆದಿದ್ದಾರೆ. ಜಸ್ಟೀಸ್ಕೆ.ಚಂದ್ರು ಅವರಂಥ ಬದ್ಧತೆಯುಳ್ಳ ನ್ಯಾಯವಾದಗಳು, ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಾದರೆ ಬಹುಶಃ ದೀನ ದಲಿತರಿಗೆ, ಬಡವರಿಗೆ, ಕಾನೂನು ಎಂಬುದು ಗಗನಕುಸುಮವಾಗಲಾರದು.



ಸೋಮವಾರ, ಅಕ್ಟೋಬರ್ 25, 2021

NCB Mumbai Zonal Director Sameer Wankhede: ಡ್ರಗ್ಸ್ ವಿರುದ್ಧ ಸಮೀರ್ ವಾಂಖೆಡೆ ಸಮರ

 ಮುಂಬಯಿಯಲ್ಲಿ ಐಆರ್‌ಎಸ್ ಅಧಿಕಾರಿ ವಾಂಖೆಡೆ ಅವರು ಡ್ರಗ್ಸ್ ಜಾಲದ ವಿರುದ್ಧ ಸಮರವನ್ನೇ ಸಾರಿದ್ದಾರೆ. ಮಾದಕ ದ್ರವ್ಯ ಹಾಗೂ ಬಾಲಿವುಡ್ ನಡುವಿನ ನಂಟನ್ನು ಭೇದಿಸುವಲ್ಲಿ ನಿರತರಾಗಿದ್ದಾರೆ.

- ಮಲ್ಲಿಕಾರ್ಜುನ ತಿಪ್ಪಾರ
ಸಮೀರ್ ವಾಂಖೆಡೆ. ಈ ಹೆಸರನ್ನು ಕೇಳಿದರೆ ಬಾಲಿವುಡ್ ಸೆಲೆಬ್ರಿಟಿಗಳು ಬೆಚ್ಚಿ ಬೀಳುತ್ತಿದ್ದಾರೆ. ಮಾದಕ ದ್ರವ್ಯ ಸೇವೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾತ್ರವಲ್ಲಘಿ, ಈ ಹಿಂದೆ ಅವರು ಕಸ್ಟಮ್ಸ್ ಸೇವೆಯಲ್ಲಿದ್ದಾಗಲೂ ಸೆಲೆಬ್ರಿಟಿಗಳು ಥರಗುಟ್ಟಿದ್ದರು! ಅವರು ಮುಂಬಯಿ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದ ಕಸ್ಟಮ್ಸ್‌ನಲ್ಲಿದ್ದರು. ಆಗಲೂ ಹೊರ ದೇಶಗಳಿಂದ ತರುತ್ತಿದ್ದ ಬೆಲೆ ಬಾಳುವ ವಸ್ತುಗಳಿಗೆ ತೆರಿಗೆ ಪಾವತಿಸದೇ ಬಿಟ್ಟುಕೊಡುತ್ತಿರಲಿಲ್ಲ ಈ ಖಡಕ್ ಅಧಿಕಾರಿ. ಹಾಗಾಗಿ, ಬಾಲಿವುಡ್ ಹಾಗೂ ವಾಂಖೆಡೆ ಅವರ ಮಧ್ಯೆ ಮೊದಲಿನಿಂದಲೂ ಒಂಥರಾ ಲವ್ ಆ್ಯಂಡ್ ಹೇಟ್ ಸಂಬಂಧ!

ಒಂದು ವರ್ಷದಿಂದ ವಾಂಖೆಡೆ ಅವರು, ಗಣ್ಯ ವಲಯದಲ್ಲಿ ಹೆಪ್ಪುಗಟ್ಟಿರುವ ಮಾದಕ ಸೇವನೆ, ಮಾರಾಟದ ಜಾಲವನ್ನು ಭೇದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. 2020ರ ಜೂನ್ ತಿಂಗಳಲ್ಲಿ ಬಾಲಿವುಡ್‌ನ ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ರಜಪೂತ ಆತ್ಮಹತ್ಯೆ ಪ್ರಕರಣ ತನಿಖೆಯು ವಿಸ್ತಾರಗೊಳ್ಳುತ್ತಿದ್ದಂತೆ ಡ್ರಗ್ಸ್‌ನ ಭಯಾನಕತೆಗಳು ಅನಾವರಣಗೊಂಡವು. ಅಲ್ಲಿಂದ ಶುರುವಾದ ವಾಂಖೆಡೆ ಅವರ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯು ಸದ್ಯ ‘ಸೂಪರ್ ಸ್ಟಾರ್’ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನವರೆಗೂ ಸಾಗಿದೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಮಾದಕ ದ್ರವ್ಯ ಬಳಕೆಯ ಸಂಗತಿಗಳು ಬಯಲಾಗಿದ್ದವು. ಆಗ ಸುಶಾಂತ್‌ನ ಗೆಳತಿ ರೇಹಾ ಚಕ್ರವರ್ತಿ ಹಾಗೂ ಆಕೆಯ ಸಹೋದರನನ್ನು ಬಂಧಿಸಲಾಗಿತ್ತು. ಜೊತೆಗೆ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್‌ಪ್ರೀತ್ ಸಿಂಗ್, ಭಾರ್ತಿ ಸಿಂಗ್ ಇತ್ಯಾದಿ ನಟಿಯರನ್ನು ಡ್ರಗ್ಸ್ ಸಂಬಂಧ ವಿಚಾರಣೆಗೊಳಪಡಿಸಲಾಗಿತ್ತು. ಇದೀಗ ಆರ್ಯನ್ ಖಾನ್ ಪ್ರಕರಣವು ಬಾಲಿವುಡ್‌ನ ಇತರೆ ಸೆಲೆಬ್ರಿಟಿಗಳ ಕೊರಳಿಗೆ ಸುತ್ತಿಕೊಳ್ಳುತ್ತಿದೆ. ಈಗಾಗಲೇ ನಟಿ ಅನನ್ಯಾ ಪಾಂಡೆ ಎರಡು ಬಾರಿ ವಿಚಾರಣೆ ಎದುರಿಸಿದ್ದಾಳೆ. ಈ ಎಲ್ಲದರ ಹಿಂದೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಮುಂಬಯಿ ರೆನಲ್ ಡೈರೆಕ್ಟರ್ ಸಮೀರ್ ವಾಂಖೆಡೆ ಕರ್ತವ್ಯ ಎದ್ದು ಕಾಣುತ್ತಿದೆ. ಕಾನೂನು ಪಾಲನೆಯೊಂದನ್ನೇ ಕೇಂದ್ರವಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಅವರಿಗೆ, ಸೆಲೆಬ್ರಿಟಿ ಅಥವಾ ಸಾಮಾನ್ಯರು ಎಂಬ ತಾರತಮ್ಯವಿಲ್ಲಘಿ. ಯಾರು ತಪ್ಪು ಮಾಡುತ್ತಾರೋ ಅವರನ್ನು ಹೆಡೆಮುರಿ ಕಟ್ಟುವ ಕೆಲಸವನ್ನು ಮಾಡುತ್ತಿದ್ದಾರೆ. 

ಇಷ್ಟಾಗಿಯೂ ಅವರು ಆರೋಪಗಳಿಂದ ಹೊರತಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿರುವುದಕ್ಕಾಗಿ ವಾಂಖೆಡೆ ಸೆಲೆಬ್ರಿಟಿಗಳ  ಬೆನ್ನು ಹಿಂದೆ ಬಿದ್ದಿದ್ದಾರೆ ಎಂಬ ಆರೋಪ ಸಾಮಾನ್ಯವಾಗಿದೆ. ಜೊತೆಗೆ ಎನ್‌ಸಿಪಿಯ ನಾಯಕ ನವಾಬ್ ಮಲಿಕ್ ಅವರಂತೂ, ಬಾಲಿವುಡ್ ಸೆಲೆಬ್ರಿಟಿಗಳಿಂದ ವಾಂಖೆಡೆ ಅವರು ಸುಲಿಗೆಗಿಳಿದಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದುಘಿ, ಅವರನ್ನು ಜೈಲಿಗೆ ಕಳುಹಿಸುವವರೆಗೂ ವಿರಮಿಸುವುದಿಲ್ಲ ಎಂದಿದ್ದಾರೆ. ಜೊತೆಗೆ, ದುಬೈ ಮತ್ತು ಮಾಲ್ಡೀವ್ಸ್‌ಗೆ ವಾಂಖೆಡೆ ತೆರಳಿದ್ದ ೆಟೊಗಳನ್ನು ಬಿಡುಗಡೆ ಮಾಡಿದ್ದಾರೆ. ಇದಕ್ಕೆಲ್ಲಘಿ, ಸಮೀರ್ ಪ್ರತ್ಯುತ್ತರ ಕೊಟ್ಟಿದ್ದಾರೆ. ಜೊತೆಗೆ, ಆರ್ಯನ್ ಖಾನ್ ಬಂಧನದ ವೇಳೆಯ ಹಾಜರಿದ್ದ ಕೆಲವು ಖಾಸಗಿ ವ್ಯಕ್ತಿಗಳಿಂದಾಗಿ ವಾಂಖೆಡೆ ಅವರ ಒಟ್ಟಾರೆ ಉದ್ದೇಶದ ಮೇಲೂ ಶಂಕೆ ಮೂಡುತ್ತಿರುವುದು ಸುಳ್ಳಲ್ಲಘಿ. ಇದಕ್ಕೆಲ್ಲ ಅವರು ಸಮರ್ಥನೆ ನೀಡಿದ್ದಾರೆಂಬುದು ಬೇರೆ ಮಾತು. 

ವಿಶೇಷ ಏನೆಂದರೆ, ಸಮೀರ್ ಪತ್ನಿ ಕ್ರಾಂತಿ ರೇಡ್ಕರ್ ಕೂಡಾ ಒಬ್ಬ ನಟಿ. ಮರಾಠಿ ಚಿತ್ರರಂಗದಲ್ಲಿ ಅವರಿಗೆ ದೊಡ್ಡ ಹೆಸರಿದೆ. ಅಜಯ್ ದೇವಗನ್ ನಟನೆಯ ‘ಗಂಗಾಜಲ್’ ಚಿತ್ರದಲ್ಲೂ ಕ್ರಾಂತಿ ನಟಿಸಿದ್ದಾರೆ. ಹಾಗಾಗಿ, ಸಮೀರ್ ಅವರಿಗೆ ಚಿತ್ರರಂಗ ಹೊಸದಲ್ಲ. ಅಲ್ಲಿ ನಡೆಯುವ ಬೆಳವಣಿಗೆಗಳು, ಹೈಕ್ಲಾಸ್ ಸೊಸೈಟಿಯಲ್ಲಾಗುವ ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಅರಿವು ಅವರಿಗಿದೆ.

ಎನ್‌ಸಿಬಿಯ ಮುಂಬಯಿ ರೆನಲ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುವ ಮೊದಲು ಮಹಾರಾಷ್ಟ್ರ ಸರ್ವೀಸ್ ಟ್ಯಾಕ್ಸ್ ವಿಭಾಗದಲ್ಲಿದ್ದರು. ಆಗ ಅವರು ತೆರಿಗೆ ವಂಚಿಸುತ್ತಿದ್ದ ಸುಮಾರು 2,500 ಮಂದಿ ವಿರುದ್ಧ ಕ್ರಮ ಕೈಗೊಂಡಿದ್ದರು. ಈ ಪೈಕಿ 200 ಸೆಲೆಬ್ರಿಟಿಗಳಿದ್ದರು. ಎರಡು ವರ್ಷದಲ್ಲಿ ಮುಂಬಯಿನಲ್ಲೇ ಒಟ್ಟು 87 ಕೋಟಿ ರೂಪಾಯಿಯನ್ನು ಖಜಾನೆಗೆ ಹರಿದು ಬರುವಂತೆ ಮಾಡಿದ್ದರು. 2011ರಲ್ಲಿ ಭಾರತೀಯ ಕ್ರಿಕೆಟ್ ತಂಡವು ವಿಶ್ವಕಪ್ ಗೆದ್ದಿತು. ಆಗ ತಂಡಕ್ಕೆ ನೀಡಲಾಗಿದ್ದ ಟ್ರೋಫಿಯಲ್ಲಿ  ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಇದೆ. ಹಾಗಾಗಿ, ತೆರಿಗೆ ಪಾವತಿಸಿಯೇ ಪಡೆದುಕೊಳ್ಳಬೇಕೆಂದು ಇವರು ಪಟ್ಟು ಹಿಡಿದಿದ್ದರು. ಕಸ್ಟಮ್ಸ್ ತೆರಿಗೆ ಕೊಟ್ಟ ಮೇಲೆಯೇ ಟ್ರೋಫಿಯನ್ನು ಕ್ಲಿಯರ್ ಮಾಡಿದ್ದರು. ಅವರ ಈ ನಡೆಯೂ ಭಾರೀ ಚರ್ಚೆಗೆ ಕಾರಣವಾಗಿತ್ತುಘಿ.

2013ರಲ್ಲಿ ವಿದೇಶಿ ಕರೆನ್ಸಿಯನ್ನು ಹೊಂದಿದ್ದ ಗಾಯಕ ಮಿಕಾ ಸಿಂಗ್ ಮುಂಬಯಿ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದರು. ಅದೇ ರೀತಿ, ಅನುರಾಗ್ ಕಶ್ಯಪ್, ವಿವೇಕ್ ಒಬೇರಾಯ್ ಮತ್ತು ರಾಮಗೋಪಾಲ್ ವರ್ಮಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ವಾಂಖೆಡೆ ಅವರ ತನಿಖಾ ಕ್ಷಕಿರಣಕ್ಕೆ ಒಳಗಾಗಿದ್ದಾರೆ. ಕಳೆದ ಎರಡು ವರ್ಷದಲ್ಲಿ ಮುಂಬಯಿಯೊಂದರಲ್ಲೇ ವಾಂಖೆಡೆ ಹಾಗೂ ಅವರ ತಂಡವು 17 ಸಾವಿರ ಕೋಟಿ ರೂ. ವೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದೆ! ಮಾದಕ ದ್ರವ್ಯ ಜಾಲ ಭೇದಿಸುವ ಅವರ ಈ ಕಾರ್ಯದಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದಾರೆ. ದೈಹಿಕ ಹಲ್ಲೆಗೂ ಒಳಗಾಗಿದ್ದಾರೆ ವಾಂಖೆಡೆ. 2020 ನವೆಂಬರ್ 22ರಂದು 60 ಮಂದಿ ಇದ್ದ ಡ್ರಗ್ ಪೆಡ್ಲರ್‌ಗಳ ಗುಂಪೊಂದು ವಾಂಖೆಡೆ ಹಾಗೂ ಎನ್‌ಸಿಬಿಯ ಇತರ ಐದು ಅಧಿಕಾರಿಗಳ ಮೇಲೆ ದಾಳಿ ನಡೆಸಿತ್ತು. ಈ ದಾಳಿ ವೇಳೆ ವಾಂಖೆಡೆ ಅವರಿಗೆ ಸಣ್ಣ ಪುಟ್ಟ ಗಾಯಳಾದವು. ಆದರೆ, ತಂಡದ ಇತರ ಸದಸ್ಯರು ತೀವ್ರವಾಗಿ ಗಾಯಗೊಂಡರು. ಅವರನ್ನು ಬೆದರಿಸುವ ಹಲವು ಘಟನೆಗಳು ನಡೆಯುತ್ತಲೇ ಇವೆ. ಆದರೆ, ವಾಂಖೆಡೆ ಅದಾವುದಕ್ಕೂ ತಲೆಕೆಡಿಸಿಕೊಳ್ಳದೇ ಬಾಲಿವುಡ್ ಹಾಗೂ ಮಾದಕ ದ್ರವ್ಯ ಜಾಲ ನಡುವಿನ ನಂಟನ್ನು ಭೇದಿಸುವ ಕೆಲಸವನ್ನು ಮುಂದುವರಿಸಿದ್ದಾರೆ. 

2008ರ ಬ್ಯಾಚಿನ ಐಆರ್‌ಎಸ್ ಅಧಿಕಾರಿಯಾಗಿರುವ ಸಮೀರ್ ಅವರ ಮೊದಲಿಗೆ ಮುಂಬಯಿನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನದ ನಿಲ್ದಾಣದಲ್ಲಿ ಡೆಪ್ಯುಟಿ ಕಸ್ಟಮ್ಸ್ ಕಮಿಷನರ್ ಆಗಿದ್ದರು. ಆ ಬಳಿಕ ಅವರನ್ನು ದಿಲ್ಲಿ ಹಾಗೂ ಆಂಧ್ರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಅಲ್ಲಿಂದ ಅವರು ಡೆಪ್ಯುಟಿ ಕಮಿಷನರ್ ಆ್ ಏರ್ ಇಂಟೆಲಿಜೆನ್ಸ್ ಯುನಿಟ್(ಎಐಯು), ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ(ಎನ್‌ಐಎ) ಹೆಚ್ಚುವರಿ ಎಸ್‌ಪಿಯಾಗಿಯೂ ಕೆಲಸ ಮಾಡಿದ್ದಾರೆ. ಇದೀಗ ಎನ್‌ಸಿಬಿ ಮುಂಬಯಿ ರೆನಲ್ ನಿರ್ದೇಶಕರಾಗಿ ದಕ್ಷವಾಗಿ ಕೆಲಸ ಮಾಡುತ್ತಿದ್ದಾರೆ. 

ಮೂಲತಃ ಮುಂಬೈನವರೇ ಆಗಿರುವ ಸಮೀರ್ ಅವರ ತಂದೆ ಪೊಲೀಸ್ ಅಧಿಕಾರಿಯಾಗಿದ್ದರು. ಸಮೀರ್-ಕ್ರಾಂತಿ ರೇಡ್ಕರ್ ದಂಪತಿಗೆ ಅವಳಿ ಮಕ್ಕಳಿದ್ದಾರೆ.  42 ವರ್ಷದ ಸಮೀರ್ ವಾಂಖೆಡೆ ಅವರು ಸಾರ್ವಜನಿಕ ಅಧಿಕಾರಿಯಾಗಿ ತೋರಿದ ದಕ್ಷತೆಗಾಗಿ ಮಹಾರಾಷ್ಟ್ರದ ಜಮದಾರ್ ಬಾಪು ಲಕ್ಷ್ಮಣ್ ಲಮಖೆಡೆ ಅವಾರ್ಡ್ ಕೂಡ ಬಂದಿದೆ.

ಮುಂಬಯಿನಲ್ಲಿ ಮಾದಕ ದ್ರವ್ಯ ಮಾರಾಟ, ಸೇವನೆ ವಿರುದ್ಧ ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುತ್ತಿರುವ ವಾಂಖೆಡೆಗೆ ಸಾಜರ್ವನಿಕರಿಂದ ಮೆಚ್ಚುಗೆಯೂ ವ್ಯಕ್ತವಾಗಿದೆ. ಅವರು ತಮ್ಮ ಕೆಲಸದಲ್ಲಿ ತೋರುತ್ತಿರುವ ಧೈರ್ಯ, ಸ್ಥೈರ್ಯ, ಕರ್ತವ್ಯ ಪ್ರಜ್ಞೆಘಿ, ವೃತ್ತಿಪರತೆಯೇ ಅವರಿಗೆ ‘ಗಣ್ಯ’ ಸ್ಥಾನವು ಲಭ್ಯವಾಗುವಂತೆ ಮಾಡಿದೆ. ಆದರೆ, ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಯಾವ ಅಧಿಕಾರಿಯಾಗಿ ಪ್ರಮಾಣಿಕವಾಗಿ, ನಿರ್ಭೀತಿಯಿಂದ ಕೆಲಸ ಮಾಡಲು ಆರಂಭಿಸುತ್ತಾನೋ ಆಗ ಆತನನ್ನು ಹಿಂದಕ್ಕೆ ಎಳೆಯುವ  ಪ್ರಯತ್ನಗಳು ಬೇಕಾದಷ್ಟು ನಡೆಯುತ್ತವೆ. ಇದಕ್ಕೆ ವಾಂಖೆಡೆ ಕೂಡ ಅವರು ಹೊರತಾಗಿಲ್ಲಘಿ. ಈಗಾಗಲೇ ಅದು ಅವರ ಅನುಭವವಕ್ಕೂ ಬಂದಿದೆ. ಇದು ವ್ಯವಸ್ಥೆಯ ದೋಷ. ಇದೆಲ್ಲವನ್ನೂ ಮೀರಿ ಮುನ್ನಡೆಯುವ ಛಾತಿ ವಾಂಖೆಡೆ ಅವರಿಗಿದೆ ಎಂಬುದು ಈಗಾಗಲೇ  ಹಲವು ಸಂದರ್ಭಗಳಲ್ಲಿ ಸಾಬೀತಾಗಿದೆ.


ಈ ಲೇಖನವು ವಿಜಯ ಕರ್ನಾಟಕದ, 2021ರ ಅಕ್ಟೋಬರ್ 24ರ ಸಂಚಿಕೆಯಲ್ಲಿ ಪ್ರಕಟವಾಗಿದೆ.

ಭಾನುವಾರ, ಸೆಪ್ಟೆಂಬರ್ 19, 2021

Captain Amarinder Singh: ಅಮರೀಂದರ್ ಸಿಂಗ್ 'ಜನರ ಮಹಾರಾಜ'

ನವಜೋತ್‌ ಸಿಧು ಜೊತೆಗಿನ ಒಳಜಗಳದಲ್ಲಿ ಕೈಸೋತ ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ರಾಜೀನಾಮೆ ನೀಡಿದ್ದಾರೆ.


- ಮಲ್ಲಿಕಾರ್ಜುನ ತಿಪ್ಪಾರ
‘‘ಇನ್ನು ನಾನು ಅವಮಾನ ಸಹಿಸಲಾರೆ,’’ ಎನ್ನುತ್ತಲೇ ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಂಜಾಬ್‌ ಕಾಂಗ್ರೆಸ್‌ನ ನೂತನ ಅಧ್ಯಕ್ಷ , ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧು ಹಾಗೂ ಅಮರೀಂದರ್‌ ಸಿಂಗ್‌ ನಡುವಿನ ಕಿತ್ತಾಟ ಒಂದು ಹಂತಕ್ಕೆ ತಲುಪಿದೆ. 

ಅನುಮಾನವೇ ಬೇಡ; ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಪಂಜಾಬ್‌ ಕಾಂಗ್ರೆಸ್‌ನ ದಿಗ್ಗಜ ಧುರೀಣ. ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಬೇರುಮಟ್ಟದಿಂದ ಸಂಘಟಿಸಿ, ಅದಕ್ಕೊಂದು ಸಾಂಸ್ಥಿಕ ರೂಪ ನೀಡಿ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಅವರ ಕೊಡುಗೆ ಅನನ್ಯ, ಅನುಪಮ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಅವರು ಮುಖ್ಯಮಂತ್ರಿ ಆಯ್ಕೆಯ ಮೊದಲ ಆದ್ಯತೆಯಾ­ಗುತ್ತಿದ್ದರು. ಪರಿಣಾಮ ಎರಡು ಬಾರಿ ಸಿಎಂ ಆಗಿದ್ದಾರೆ. ಪಂಜಾಬ್‌ ಕಾಂಗ್ರೆಸ್‌ ಮೇಲೆ ಬಿಗಿ ಹಿಡಿತ ಹೊಂದಿದ್ದ ‘ಕ್ಯಾಪ್ಟನ್‌’ ವಿರುದ್ಧವೇ ಶಾಸಕರು, ಕೆಲವು ನಾಯಕರು ಬಂಡೆದ್ದ ಪರಿಣಾಮ, ಕಳೆದ ಎರಡ್ಮೂರು ವರ್ಷದಲ್ಲಿ ಪಂಜಾಬ್‌ ಕಾಂಗ್ರೆಸ್‌ ಬೀದಿ ಜಗಳವನ್ನು ಇಡೀ ರಾಷ್ಟ್ರವೇ ನೋಡಿದೆ. ಹಾಗೆ ನೋಡಿದರೆ, 2017ರಲ್ಲಿ ಪ್ರಚಂಡ ಬಹುಮತದಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂತಲ್ಲ, ಆಗಲೇ ಈ ಬಂಡಾಯದ ಕಿಚ್ಚು ಶುರವಾಗಿದ್ದು! ಹೇಗೆಂದರೆ, ಬಿಜೆಪಿಯಿಂದ ವಲಸೆ ಬಂದು ಕಾಂಗ್ರೆಸ್‌ ಸೇರಿದ್ದ ಮಾಜಿ ಕ್ರಿಕೆಟಿಗ ‘ಸಿಕ್ಸರ್‌’ ಸಿಧು, ಉಪಮುಖ್ಯಮಂತ್ರಿಯ ಹುದ್ದೆಗೆ ಹಕ್ಕು ಚಲಾಯಿಸಿದ್ದರು. 

ಆದರೆ, ಅಂದಿನ ಸನ್ನಿವೇಶದಲ್ಲಿ ಅಮರೀಂದರ್‌ ಸಿಂಗ್‌ ಏರಿದ್ದ ಎತ್ತರಕ್ಕೆ ದಿಲ್ಲಿ ವರಿಷ್ಠ ಮಂಡಳಿ ಎದುರಾಡುವ ಮಾತೇ ಇರಲಿಲ್ಲ, ಪರಿಣಾಮ ಸಿಧು ಡಿಸಿಎಂ ಸ್ಥಾನದಿಂದ ವಂಚಿತರಾಗಿ, ಸಚಿವ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾ­ಯಿತು. ಆದರೆ, ಅವರೊಳಗಿನ ಮಹತ್ವಾಕಾಂಕ್ಷಿ ಸಿಧು ತೃಪ್ತನಾಗಲಿಲ್ಲ. ಸ್ವಲ್ಪ ದಿನಗಳಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಧು, ಕ್ಯಾಪ್ಟನ್‌ ವಿರುದ್ಧ ಬಂಡಾಯ ಸಾರಿದರು. ಇಷ್ಟೇ ಆದರೆ ಪರ್ವಾಗಿರಲಿಲ್ಲ. ಸಿಎಂ ಆಗಿದ್ದ ಅಮರೀಂದರ್‌ ಅವರು ನಿಧಾನವಾಗಿ ಪಕ್ಷ ದ ಮೇಲಿನ ಹಿಡಿತ ಕಳೆದುಕೊಳ್ಳುವುದಕ್ಕೂ, ಅತೃಪ್ತ ಶಾಸಕರ ಸಂಖ್ಯೆ ಹೆಚ್ಚಾಗುವುದಕ್ಕೂ, ಸಿಧು ಅತೃಪ್ತ ಶಾಸಕರ ನಾಯಕನಾಗಿ ಹೊರಹೊಮ್ಮುವುದಕ್ಕೂ ಸರಿಹೋಗಿದೆ. ಹಲವು ಬಾರಿ ಕಾಂಗ್ರೆಸ್‌ನ ಕೇಂದ್ರ ನಾಯಕತ್ವ ಪಂಜಾಬ್‌ ಬಿಕ್ಕಟ್ಟನ್ನು ಶಮನ ಮಾಡಿದರು, ಅದು ತಾತ್ಕಾಲಿಕವಾಗಿತ್ತಷ್ಟೇ. ನವಜೋತ್‌ ಸಿಂಗ್‌ ಸಿಧು ಅವರನ್ನು ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥರನ್ನಾಗಿ ಮಾಡಿದ ಮೇಲೆ ಒಳಜಗಳ ಮತ್ತಷ್ಟು ಬಿಗಡಾಯಿಸಿತು. 

ಅಮರೀಂದರ್ ರಾಜೀನಾಮೆಯು ಪಂಜಾಬ್‌ ಕಾಂಗ್ರೆಸ್‌ನ ಒಳಜಗಳದ ಫಲಿತಾಂಶವಾದರೂ ಅದಕ್ಕೆ ಸಾಕಷ್ಟು ಆಯಾಮಗಳಿವೆ. 2017ರ ಚುನಾವಣೆ ವೇಳೆಗೆ ಪ್ರಶ್ನಾತೀತ ನಾಯಕರಾಗಿದ್ದ ಅಮರೀಂದರ್‌ ಸಿಂಗ್‌ 2022ರ ಚುನಾವಣೆ ಹೊಸ್ತಿಲಲ್ಲಿ ಜನಪ್ರಿಯತೆಯಲ್ಲಿ ಕುಸಿದಿದ್ದಾರೆ. ‘ಜನರ ಮಹಾರಾಜ’ ಎಂದು ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಅವರು ಕೊನೆ ಕೊನೆಗೆ ಜನರಿಗೆ ಸಿಗುವುದೇ ಕಷ್ಟವಾಗಿತ್ತು. ಅಮರೀಂದರ್‌ ನೇತೃತ್ವದಲ್ಲಿ ಚುನಾವಣೆ ಎದುರಿಸಿದರೆ ಗೆಲುವು ಸಿಗಲಾರದು ಎಂಬ ಸಮೀಕ್ಷೆಯೂ ಅವರು ನಿರ್ಗಮನಕ್ಕೆ ಕಾರಣವಾಯಿತು. ಅವರ ನೆರಳಾಗಿದ್ದ ಬಹಳಷ್ಟು ಶಾಸಕರು ಪಾಳಯ ಬದಲಿಸಿದ್ದಾರೆ ಎನ್ನುತ್ತಾರೆ  ಪಂಜಾಬ್ ರಾಜಕಾರಣ ಬಲ್ಲ ವಿಶ್ಲೇಷಕರು. 

‘ಸೇನೆ ಇಲ್ಲದ ವಯೋವೃದ್ಧ ಸೇನಾನಿ’ಯಾಗಿರುವ ಅಮರೀಂದರ್‌ ಸಿಂಗ್‌ ವ್ಯಕ್ತಿತ್ವ ಕೇವಲ ರಾಜಕಾರಣಕ್ಕೆ ಸೀಮಿತವಾಗಿಲ್ಲ. ಯೋಧ, ಸೇನಾ ಇತಿಹಾಸಿಕಾರ, ಶೆಫ್‌, ತೋಟಗಾರ, ಬರಹಗಾರ.. ಹೀಗೆ ನಾನು ಮುಖಗಳಿವೆ. ಅವರು ಅಪರೂಪದ ರಾಜಕೀಯ ನಾಯಕರು. ರಾಯಲ್‌ ಫ್ಯಾಮಿಲಿಯ ಅಮರೀಂದರ್‌ ರಾಜಕಾರಣಕ್ಕೆ ಬಂದಿದ್ದು, ತಮ್ಮ ಶಾಲಾ ದಿನಗಳ ಸ್ನೇಹಿತ ರಾಜೀವ್‌ ಗಾಂಧಿಯ ಒತ್ತಾಸೆಯಿಂದಾಗಿ. 1942 ಮಾರ್ಚ್‌ 11ರಂದು ಪಟಿಯಾಲಾದ ರಾಜಮನೆತನದಲ್ಲಿ ಜನಿಸಿದರು. ತಂದೆ ಮಹಾರಾಜ ಸರ್‌ ಯಾದವೀಂದ್ರ ಸಿಂಗ್‌ ಮತ್ತು ತಾಯಿ ಮಹಾರಾಣಿ ಮೊಹೀಂದರ್‌ ಕೌರ್‌. ಶಿಮ್ಲಾದ ಲೊರೆಟೋ ಕಾನ್ವೆಂಟ್‌, ಸನಾವರ್‌ದ ಲಾವರೆನ್ಸ್‌ ಸ್ಕೂಲ್‌ನಲ್ಲಿ ಆರಂಭದ ಶಿಕ್ಷ ಣ ಪಡೆದು, ಡೆಹ್ರಾಡೂನ್‌ನ ದಿ ಡೂನ್‌ ಸ್ಕೂಲ್‌ಗೆ ಸೇರಿದರು. ಅಮರೀಂದರ್‌ ಅವರ ಪತ್ನಿ ಪ್ರಣೀತ್‌ ಕೌರ್‌. ರಣೀಂದರ್‌ ಸಿಂಗ್‌ ಮತ್ತು ಜೈ ಇಂದೇರ್‌ ಕೌರ್‌ ಮಕ್ಕಳು. ಪತ್ನಿ ಪ್ರಣೀತ್‌ ಕೌರ್‌ ಅವರು ಸಂಸದೆಯಾಗಿದ್ದರು ಮತ್ತು 2009ರಿಂದ ಅಕ್ಟೋಬರ್‌ 2012ರವರೆಗೆ ವಿದೇಶಾಂಗ ಇಲಾಖೆಯ ರಾಜ್ಯ ಸಚಿವೆಯಾಗಿ ಕೆಲಸ ನಿರ್ವಹಿಸಿದ್ದಾರೆ. ಅಮರೀಂದರ್‌ ಅವರ ಸಹೋದರಿ ಹೇಮಿಂದರ್‌ ಕೌರ್‌ ಮಾಜಿ ವಿದೇಶಾಂಗ ಸಚಿವರಾಗಿದ್ದ ಕೆ. ನಟ್ವರ್‌ ಸಿಂಗ್‌ ಅವರ ಪತ್ನಿ. ಹಾಗೆಯೇ, ಶಿರೋಮಣಿ ಅಕಾಲಿ ದಳ(ಎ)ದ ಮುಖ್ಯಸ್ಥ ಸಿಮ್ರಂಜಿತ್‌ ಸಿಂಗ್‌ ಮನ್‌ ಕೂಡ ಇವರ ಸಂಬಂಧಿ. ಅಮರೀಂದರ್‌ ಸಿಂಗ್‌ ಅವರ ಒಟ್ಟು ಫ್ಯಾಮಿಲಿ ರಾಜಕೀಯ ಹಿನ್ನೆಲೆಯನ್ನು ಹೊಂದಿದೆ.

ರಾಜಕಾರಣಕ್ಕೆ ಕಾಲಿಡುವ ಮುನ್ನ ಅಮರೀಂದರ್‌ ಅವರು, ಸೇನೆಯಲ್ಲಿ ಕ್ಯಾಪ್ಟನ್‌ ಆಗಿದ್ದರು. 1963ರಿಂದ 1966ವರೆಗೆ ಸೇವೆ ಸಲ್ಲಿಸಿದ್ದಾರೆ. ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ ಮತ್ತು ಮಿಲಿಟರಿ ಅಕಾಡೆಮಿ ಪದವೀಧರರೂ ಹೌದು. ಅವರ ಸೇನೆಯಲ್ಲಿ ಸಿಖ್‌ ರೆಜಿಮಂಟ್‌ನಲ್ಲಿದ್ದರು. 1965ರ ಇಂಡೋ-ಪಾಕ್‌ ಯುದ್ಧದಲ್ಲಿಸಕ್ರಿಯವಾಗಿ ಪಾಲ್ಗೊಂಡ ಹಿರಿಮೆ ಅವರಿಗಿದೆ. ರಾಜೀವ್‌ ಗಾಂಧಿಯ ಒತ್ತಾಸೆಯ ಮೇರೆಗೆ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿ 1980ರಲ್ಲಿಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆಯಾದರು. ಆದರೆ, ಆಪರೇಷನ್‌ ಬ್ಲೂಸ್ಟಾರ್‌ ಕಾರ್ಯಾಚರಣೆ ವಿರೋಧಿಸಿ ತಮ್ಮ ಲೋಕಸಭಾ ಸದಸ್ಯತ್ವ ಹಾಗೂ ಕಾಂಗ್ರೆಸ್‌ ಪಾರ್ಟಿಗೆ ರಾಜೀನಾಮೆ ನೀಡಿ ಹೊರಬಂದರು. ಬಳಿಕ ಶಿರೋಮಣಿ ಅಕಾಲಿ ದಳ ಸೇರ್ಪಡೆಯಾಗಿ ತಲವಂಡಿ ಸಾಬೋ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿ ಸಚಿವರೂ ಆದರು. ಕೃಷಿ, ಅರಣ್ಯ, ಅಭಿವೃದ್ಧಿ ಮತ್ತು ಪಂಚಾಯತ್‌ ಇಲಾಖೆಗಳನ್ನು ನಿರ್ವಹಣೆ ಮಾಡಿ ಅನುಭವ ಪಡೆದುಕೊಂಡರು. 

ಆದರೆ, ಅಕಾಲಿದಳದಲ್ಲೂ ತುಂಬ ದಿನಗಳ ಕಾಲ ಅಮರೀಂದರ್‌ ಉಳಿಯಲಿಲ್ಲ. 1992ರಲ್ಲಿ ಆ ಪಕ್ಷ ವನ್ನು ತೊರೆದು ತಮ್ಮದೇ ಆದ ಶಿರೋಮಣಿ ಅಕಾಲಿ ದಳ(ಪ್ಯಾಂಥಿಕ್‌) ಸ್ಥಾಪಿಸಿದರು. ಆದರೆ, ವಿಧಾಸಭೆ ಚುನಾವಣೆಯಲ್ಲಿ ಹೀನಾಯವಾಗಿ ಅವರ ಪಕ್ಷ  ಸೋಲು ಕಂಡಿತು. ಸ್ವತಃ ಅಮರೀಂದರ್‌ ಅವರು ಕೇವಲ 856 ಮತಗಳನ್ನು ಪಡೆದು ಠೇವಣಿ ಕಳೆದುಕೊಂಡರು. ಪರಿಣಾಮ ತಮ್ಮ ಪಕ್ಷ ವನ್ನು ಅವರು 1998ರಲ್ಲಿಕಾಂಗ್ರೆಸ್‌ ಜತೆ ವಿಲೀನಗೊಳಿಸಿದರು. ಆಗ ಕಾಂಗ್ರೆಸ್‌ ನಾಯಕತ್ವ ಸೋನಿಯಾ ಗಾಂಧಿ ಹೆಗಲಿಗೇರಿತ್ತು. 1998ರಲ್ಲಿ ಮತ್ತೆ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡರು. ಆದರೆ, ಪಂಜಾಬ್‌ನಲ್ಲಿ ಕಾಂಗ್ರೆಸ್‌ ಪಕ್ಷ  ಕಟ್ಟುವ ಹೊಣೆಗಾರಿಕೆ ಅವರನ್ನು ಮುಂಚೂಣಿಯ ನಾಯಕನನ್ನಾಗಿ ಮಾಡಿತು. 1999ರಿಂದ 2002, 2010ರಿಂದ 2013 ಮತ್ತು 2015ರಿಂದ 2017, ಹೀಗೆ ಮೂರು ಬೇರೆ ಬೇರೆ ಅವಧಿಯಲ್ಲಿ ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರದ ಮೊಗಸಾಲೆಗೆ ತರುವಲ್ಲಿ ಯಶಸ್ವಿಯಾಗಿ, 2002ರಿಂದ 2007ರವರೆ ಮೊದಲ ಬಾರಿಗೆ  ಪಂಜಾಬ್‌ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರು. ಅಮರೀಂದರ್‌ 2013ರಿಂದಲೂ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ ಕಾಯಂ ಆಹ್ವಾನಿತ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 2014ರ ಚುನಾವಣೆಯಲ್ಲಿ ಕಾಂಗ್ರೆಸ್‌ ಧೂಳಿಪಟವಾಯಿತು. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂತು. ಆದರೆ, ಪಂಜಾಬ್‌ನಲ್ಲಿ ಮೋದಿ ಅಲೆಯ ನಡುವೆಯೂ ಅರುಣ್‌ ಜೇಟ್ಲಿ ಅವರನ್ನು ಸೋಲಿಸುವಲ್ಲಿ ಅಮರೀಂದರ್‌ ಯಶಸ್ವಿಯಾಗಿದ್ದರು. ಪಟಿಯಾಲ ನಗರ ಮೂರು ಬಾರಿ, ಸಮನಾ ಹಾಗೂ ತಲ್ವಾಂಡಿ ಸಾಬೋ ವಿಧಾನಸಭೆ ಕ್ಷೇತ್ರಗಳನ್ನು ತಲಾ ಒಂದು ಬಾರಿ ಪ್ರತಿನಿಧಿಸಿದ್ದಾರೆ. 2015ರಲ್ಲಿ ಕಾಂಗ್ರೆಸ್‌ ನಾಯಕತ್ವ ಇವರನ್ನು ಮತ್ತೆ ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥರನ್ನಾಗಿ ನೇಮಿಸಿತು. ಪರಿಣಾಮ 2017ರಲ್ಲಿ ಎಲೆಕ್ಷ ನ್‌ನಲ್ಲಿ ಕಾಂಗ್ರೆಸ್‌ ಭರ್ಜರಿ ಜಯ ದಾಖಲಿಸಿ ಮತ್ತೆ ಅಧಿಕಾರಕ್ಕೇರಿತು. ಅಮರೀಂದರ್‌ ಸಿಂಗ್‌ ಎರಡನೇ ಬಾರಿಗೆ ಮುಖ್ಯಮಂತ್ರಿಯಾದರು. 

ಪಂಜಾಬ್‌ನಲ್ಲಿ ತಾವೊಬ್ಬ ನಿರ್ಣಾಯಕ ನಾಯಕ ಎಂಬುದನ್ನು ಕಾಲಕಾಲಕ್ಕೆ ಅವರು ಸಾಬೀತುಪಡಿಸುತ್ತಾ ಬಂದಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಹಿತಾಸಕ್ತಿ ವಿಷಯಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕತ್ವದ ತದ್ವಿರುದ್ಧವಾದ ಹೇಳಿಕೆಗಳನ್ನು ನೀಡಲು ಅವರು ಯಾವತ್ತೂ ಹಿಂಜರಿದಿಲ್ಲ. ಈಗ ಕಾಲ ಬದಲಾಗಿದೆ; ಪಂಜಾಬ್‌ನ ನದಿಗಳಲ್ಲಿ ಸಾಕಷ್ಟು ನೀರು ಹರಿದು ಹೋಗಿದೆ. 79 ವರ್ಷದ ಅಮರೀಂದರ್‌ ಅವರಿಗೀಗ ಮೊದಲಿದ್ದ ಚಾರ್ಮ್‌ ಇಲ್ಲ ಎಂಬುದನ್ನು ಅರಿತ ಹಲವು ಶಾಸಕರು, ನಾಯಕರು ಅವರ ವಿರುದ್ಧವೇ ನಿಂತು ಕಾಳಗ ಮಾಡುತ್ತಿದ್ದಾರೆ. ಈ ಹಂತದಲ್ಲಿ ಅವರು ನೀಡಿರುವ ರಾಜೀನಾಮೆ ಯಾವ ಪರಿಣಾಮ ಬೀರಲಿದೆ ಎಂಬುದನ್ನು ಸದ್ಯಕ್ಕೆ ಹೇಳುವುದು ಕಷ್ಟ. ಆರೇಳು ತಿಂಗಳು ಕಳೆದರೂ ಸಾಕು, ಎಲ್ಲವೂ ನಿಚ್ಚಳವಾಗಲಿದೆ.



Virtual RAM: ವರ್ಚುವಲ್‌ RAM ಇದ್ದರೆ ಆರಾಮ್‌!

- ಮಲ್ಲಿಕಾರ್ಜುನ ತಿಪ್ಪಾರ
ಇಂದಿದ್ದ ಟೆಕ್ನಾಲಜಿ ಮಾರನೇ ದಿನಕ್ಕೆ ಹಳೆಯದ್ದಾಗಿ­ರುತ್ತದೆ. ಈ ಕಾರಣಕ್ಕಾಗಿಯೇ ತಂತ್ರಜ್ಞಾನವನ್ನು ನಿತ್ಯ ನೂತನ ಎಂದು ಕರೆಯುವುದು. ಇತ್ತೀಚಿನ ದಿನಗಳಲ್ಲಿಹೆಚ್ಚು ಸದ್ದು ಮಾಡುತ್ತಿರುವ ವರ್ಚವಲ್‌ RAM (Virutval RAM) ಬಗ್ಗೆ ಕೇಳಿರಬಹುದು. ಸ್ಯಾಮ್ಸಂಗ್‌ನಂಥ ಪ್ರಮುಖ ಕಂಪನಿಗಳು ಈ ವರ್ಚುವಲ್‌ RAM ಬಳಸುತ್ತಿವೆ. ಸ್ಯಾಮ್ಸಂಗ್‌, ‘RAM ಪ್ಲಸ್‌’ ಮೂಲಕ ಈ ವರ್ಚುವಲ್‌ RAM ಈಗಾಗಲೇ ಕಂಪ್ಯೂಟರ್‌ ಬಳಕೆಯಲ್ಲಿಹೆಚ್ಚು ಪ್ರಸಿದ್ಧಿಯಾಗಿವೆ. ಆದರೆ, ಸ್ಮಾರ್ಟ್‌ಫೋನ್‌ ವಿಷಯಕ್ಕೆ ಬಂದಾಗ ಅದು ಸ್ವಲ್ಪ ಭಿನ್ನವಾಗಿ ಕಾರ್ಯ ನಿರ್ವಹಿಸುತ್ತದೆ. ಸ್ಯಾಮ್ಸಂಗ್‌ ಮಾತ್ರವಲ್ಲದೇ 2022ರ ಹೊತ್ತಿಗೆ ಒಪ್ಪೋ, ಶವೋಮಿ, ರಿಯಲ್‌ಮಿ ಮತ್ತು ಒನ್‌ಪ್ಲಸ್‌ನಂಥ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿಈ ವರ್ಚುವಲ್‌ RAM ಬಳಸುವ ಸಾಧ್ಯತೆಗಳಿವೆ. 

ಸ್ಯಾಮ್ಸಂಗ್‌ ಇತ್ತೀಚೆಗಷ್ಟೇ ತನ್ನ ಗ್ಯಾಲಕ್ಸಿ ಎ52ಎಸ್‌ 5ಜಿ ಸ್ಮಾರ್ಟ್‌ ಫೋನ್‌ಗೆ ಹೊಸ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡಿತು. ಈ ಮೂಲಕ ಅದು ವರ್ಚುವಲ್‌ RAM ಕಾರ್ಯಕ್ಕೆ ಅನುಮತಿ ನೀಡಿದೆ. ಈಗ  ಈ ಫೋನ್‌ ಬಳಕೆ­ದಾರರು 4 ಜಿಬಿ ವರ್ಚುವಲ್‌ RAM ಪಡೆಯಲಿದ್ದಾರೆ. ಈ ಸಾಧನವು 4 ಜಿಬಿ ಮತ್ತು 8 ಜಿಬಿ RAMಗಳಲ್ಲಿ ಲಭ್ಯವಿದ್ದು, ಇದೀಗ ಹೆಚ್ಚುವರಿಯಾಗಿ 4 ಜಿಬಿ ವರ್ಚುವಲ್‌ RAM ಕೂಡ ದೊರೆಯಲಿದೆ. ಇನ್ನು ಕೆಲವೇ ವರ್ಷಗಳಲ್ಲಿ ವರ್ಚುವಲ್‌ RAM ಬಳಕೆ ತೀರಾ ಸಾಮಾನ್ಯವಾಗ­ಬಹುದು. ಸದ್ಯಕ್ಕೆ ಕಂಪ್ಯೂಟರ್‌ನಲ್ಲೇ ಮಾತ್ರವೇ ಬಳಕೆ­ಯಾಗು­ತ್ತಿದೆ. ತಂತ್ರಜ್ಞಾನದ ಹೊಸ ಸಾಧ್ಯತೆ ಇದಾಗಿದ್ದು, ವರ್ಚುವಲ್‌ ಮೆಮೊರಿ ಬಳಕೆಯಿಂದಾಗಿ ಒಟ್ಟಾರೆ ಸಾಧನದ ವೆಚ್ಚ ತಗ್ಗಲೂ ಕಾರಣವಾದರೂ ಆಗಬಹುದು.

ವರ್ಚುವಲ್‌ RAM ಯಾಕೆ?
ಫಿಜಿಕಲ್‌ RAM ಹೆಚ್ಚು ತುಟ್ಟಿಯಾದ ಪರಿಣಾಮ ವರ್ಚು­ವಲ್‌ ಮೆಮೊರಿ ಬಳಕೆಯ ಸಾಧ್ಯತೆಗಳು ಹುಟ್ಟಿಕೊಂಡವು ಮತ್ತು ಅದನ್ನು ಸಾಧ್ಯ ಕೂಡ ಮಾಡಲಾಯಿತು. ಸ್ಟೋರೇಜ್‌ ಮಧ್ಯಮಗಳಾದ ಹಾರ್ಡ್‌ ಡಿಸ್ಕ್‌ ಮತ್ತು ಇತರ ಸಾಧನಗಳಿಗೆ ಹೋಲಿಸಿದರೆ ಪ್ರತಿ ಗಿಗಾಬೈಟ್‌ಗೆ ಫಿಸಿಕಲ್‌ RAM ಈಗಲೂ ತುಟ್ಟಿಯೇ ಆಗಿದೆ. ಈ ಕಾರಣಕ್ಕಾಗಿಯೇ ಅಗ್ಗದ RAM ಬಳಕೆಯ ಫಲವಾಗಿ ವರ್ಚುವಲ್‌ ಮೆಮೋರಿಯನ್ನು ಬಳಸಿಕೊಳ್ಳಲಾಗುತ್ತಿದೆ. ಪರಿಣಾಮ ಯಾವುದೇ ಕಂಪ್ಯೂಟರ್‌ಗೆ ಈಗ ಫಿಸಿಕಲ್‌ RAM ಜತೆಗೆ ಹೆಚ್ಚುವರಿಯಾಗಿ ವರ್ಚುವಲ್‌ RAM ಬಳಕೆಯಾಗುತ್ತಿರು­ವುದರಿಂದ ಹೆಚ್ಚು ಮೆಮೊರಿ ದೊರೆಯುತ್ತಿದೆ. ಇನ್ನೊಂದು ಕಾರಣ ಏನೆಂದರೆ-ಎಲ್ಲಾಕಂಪ್ಯೂಟರ್‌ಗಳಲ್ಲಿಫಿಜಿಕಲ್‌ RAM ಇನ್‌ಸ್ಟಾಲ್‌ ಮಾಡಲು ಮಿತಿಯನ್ನು ಹೊಂದಿವೆ. ಈ ಮಿತಿಯನ್ನು ಮೀರಿ ಮೆಮೊರಿ ಬಳಕೆಗೆ ವರ್ಚುವಲ್‌ RAM ಅನುವು ಮಾಡಿಕೊಡುತ್ತದೆ. ಹಾಗಾಗಿ ಇತ್ತೀಚಿನ ದಿನಗಳಲ್ಲಿವರ್ಚುವಲ್‌ ಮೆಮೊರಿ ಬಳಕೆಯೂ ಹೆಚ್ಚಾಗುತ್ತಿದೆ.

ಪ್ರಯೋಜನಗಳೇನು?
ವರ್ಚುವಲ್‌ RAM ಬಳಕೆಯಿಂದ ಏಕಕಾಲಕ್ಕೆ ಹೆಚ್ಚೆಚ್ಚು ಅಪ್ಲಿಕೇಷನ್‌ಗಳನ್ನು ರನ್‌ ಮಾಡಲು ಸಾಧ್ಯವಾಗುತ್ತದೆ. ಫಿಜಿಕಲ್‌ ರಾರ‍ಯಮ್‌ನಲ್ಲಿರನ್‌ ಮಾಡಲು ಸಾಧ್ಯವಾಗದೇ ಇರುವ ಬೃಹತ್‌ ಅಪ್ಲಿಕೇಷನ್‌ಗಳನ್ನು ರನ್‌ ಮಾಡಲು ವರ್ಚುವಲ್‌ ರಾರ‍ಯಮ್‌ ನೆರವು ನೀಡುತ್ತದೆ. ಫಿಸಿಕಲ್‌ RAM ವೆಚ್ಚಕ್ಕೆ ಹೋಲಿಸಿದರೆ ಇದು ಅಗ್ಗ. ಕಡಿಮೆ ವೆಚ್ಚದಲ್ಲೇ ಹೆಚ್ಚು ಮೆಮೊರಿಯನ್ನು ಬಳಸಿಕೊಳ್ಳಬಹುದು. ಹಾರ್ಡ್‌ವೇರ್‌ ಮತ್ತು ಆಪರೇಟಿಂಗ್‌ ಸಿಸ್ಟಮ್‌ ಬೆಂಬಲಿಸುವ ಗರಿಷ್ಠ ಪ್ರಮಾಣದ ರಾರ‍ಯಮ್‌ ಹೊಂದಿರುವ ಸಿಸ್ಟಂನಲ್ಲಿಮೆಮೊರಿಯನ್ನು ಹೆಚ್ಚಿಸುವ ಅವಕಾಶವನ್ನು ಸೃಷ್ಟಿಸುತ್ತದೆ. ವರ್ಚುವಲ್‌ ರಾರ‍ಯಮ್‌ ಬಳಕೆಯ ಪ್ರಯೋಜನಗಳ ಜತೆಗೆ ಒಂದಿಷ್ಟು ಅನಾನುಕೂಲಗಳೂ ಇವೆ; ಫಿಸಿಕಲ್‌ RAMಗೆ ಹೋಲಿಸಿದರೆ ವರ್ಚುವಲ್‌ ಮೆಮೊರಿಯ ದಕ್ಷ ತೆಯ ಪ್ರಮಾಣ ಕಡಿಮೆ. ಸಿಸ್ಟಮ್‌ನ ಒಟ್ಟಾರೆ ಪ್ರದರ್ಶನದ ಮೇಲೆ ಋುಣಾತ್ಮಕ ಪರಿಣಾಮ ಬೀರಬಲ್ಲದು.

ಏನಿದು RAM?
RAM ಎಂದರೆ random-access memory. ಇದು ಕಂಪ್ಯೂಟರ್‌ನ ಪ್ರಮುಖ  ಭಾಗ. ಕಿರು ಅವಧಿಯ ಮೆಮೊರಿಯಾಗಿರುವ ರಾರ‍ಯಮ್‌ನಲ್ಲಿಪ್ರೊಸೆಸರ್‌ನ ಅಗತ್ಯಕ್ಕೆ ತಕ್ಕಂತೆ ಡೇಟಾ ಸಂಗ್ರಹವಾಗುತ್ತದೆ. RAM ಮೆಮೊರಿ ಹೆಚ್ಚಾದಷ್ಟು ಕಂಪ್ಯೂಟರ್‌ನ ಕಾರ್ಯಕ್ಷ ಮತೆಯೂ ಹೆಚ್ಚಾಗುತ್ತದೆ. ಏಕಕಾಲಕ್ಕೆ ಹತ್ತಾರು ಅಪ್ಲಿಕೇಷನ್‌ಗಳ ಮೂಲಕ ಕೆಲಸ ಮಾಡುವವರಿಗೆ RAM ಹೆಚ್ಚಿರುವ ಕಂಪ್ಯೂಟರ್‌ಗಳೇ ಬೇಕಾಗುತ್ತವೆ. ಹಾಗಾಗಿ, ಇದು ಕಂಪ್ಯೂಟರ್‌ನ ಪ್ರಮುಖ ಭಾಗ ಎಂದು ಪರಿಗಣಿಸಲಾಗುತ್ತದೆ.



ಮಂಗಳವಾರ, ಆಗಸ್ಟ್ 10, 2021

WhatsApp Web: ‘ವಾಟ್ಸ್‌ಆ್ಯಪ್‌ ವೆಬ್‌’ ಅಂತ್ಯ ಸನ್ನಿಹಿತವೇ?

- ಮಲ್ಲಿಕಾರ್ಜುನ ತಿಪ್ಪಾರ
ವಾಟ್ಸ್‌ಆ್ಯಪ್‌ ಈಗ ಕೇವಲ ಸಂವಹನದ ಸಾಧನವಾಗಿ ಉಳಿದಿಲ್ಲ. ನಮ್ಮೆಲ್ಲರ ಅಗತ್ಯಗಳನ್ನು ಪೂರೈಸುವ ಮೂಲಸೌಕರ್ಯ ಎನಿಸಿಕೊಂಡಿದೆ. ವಾಟ್ಸ್‌ಆ್ಯಪ್‌ ಇಲ್ಲದ ಬದುಕನ್ನು ನೆನೆಸಿಕೊಳ್ಳುವುದು ಕಷ್ಟ. ಅಷ್ಟರ ಮಟ್ಟಿಗೆ ವಾಟ್ಸ್‌ಆ್ಯಪ್‌ ನಮ್ಮ ಬದುಕಿನ ಅವಿಭಾಜ್ಯವಾಗಿದೆ.

ಸಂವಹನದ ಜತೆಗೆ ನಿತ್ಯದ ನಮ್ಮ ಕೆಲಸಗಳಿಗೆ ಅನುಕೂಲವಾಗುವ ರೀತಿಯಲ್ಲಿವಾಟ್ಸ್‌ಆ್ಯಪ್‌ ಅನೇಕ ಫೀಚರ್‌ಗಳನ್ನು ಒಳಗೊಂಡಿದೆ. ಆ ಪೈಕಿ ‘ವಾಟ್ಸ್‌ಆ್ಯಪ್‌ ವೆಬ್‌’ ಕೂಡ ಒಂದು. ಅಂದರೆ, ನಿಮ್ಮ ವಾಟ್ಸ್‌ಆ್ಯಪ್‌ 

ಅನ್ನು ಲ್ಯಾಪ್‌ಟಾಪ್‌ ಅಥವಾ ಡೆಸ್ಕ್‌ಟಾಪ್‌ನಲ್ಲೇ ಬಳಸುವುದು. ಇದರಿಂದ ವಾಟ್ಸ್‌ಆ್ಯಪ್‌ ಮೂಲಕ ನಡೆಯುವ ನಿಮ್ಮ ಕೆಲಸ ಬಹಳಷ್ಟು ಸುಲಭವಾಗುತ್ತದೆ. ಹಾಗಾಗಿಯೇ ಇತ್ತೀಚಿನ ವರ್ಷಗಳಲ್ಲಿ ವಾಟ್ಸ್‌ಆ್ಯಪ್‌ ವೆಬ್‌ ಫೀಚರ್‌ ಹೆಚ್ಚು ಬಳಕೆಯಾಗುತ್ತಿದೆ. ಆದರೆ, ಈ ಸೌಲಭ್ಯ ನಿಂತು ಹೋಗಲಿದೆಯಾ? ಇಂಥದೊಂದು ಅನುಮಾನ ಬರಲು ಕಾರಣವಿದೆ. ವಾಟ್ಸ್‌ಆ್ಯಪ್‌ ಮಲ್ಟಿ ಡಿವೈಸ್‌ ಸಪೋರ್ಟ್‌ ವೈಶಿಷ್ಟ್ಯವನ್ನು ಪರೀಕ್ಷಿಸುತ್ತಿದೆ. ಸದ್ಯ ಈ ಫೀಚರ್‌ ಬೀಟಾ ವರ್ಷನ್ನಲ್ಲಿದ್ದು, ನಿರ್ದಿಷ್ಟ ಬಳಕೆದಾರರಿಗೆ ಬಳಸಲು ಅವಕಾಶ ನೀಡಲಾಗಿದೆ.

ಏನಿದು ವಾಟ್ಸ್‌ಆ್ಯಪ್‌ ಮಲ್ಟಿ ಡಿವೈಸ್‌ ಎಂದು ನೀವು ಕೇಳಬಹುದು. ವಾಟ್ಸ್‌ಆ್ಯಪ್‌ ವೆಬ್‌ ಬಳಸಿಕೊಂಡು ಡೆಸ್ಕ್‌ಟಾಪ್‌ನಲ್ಲೂ ವಾಟ್ಸ್‌ಆ್ಯಪ್‌ ಹೇಗೆ ಬಳಸುತ್ತಿವೆಯೋ ಹಾಗೆಯೇ, ವಾಟ್ಸ್‌ಆ್ಯಪ್‌ ಅನ್ನು ನೀವು ನಾಲ್ಕು ಸಾಧನಗಳಲ್ಲಿ ಏಕಕಾಲಕ್ಕೆ ಬಳಸಬಹುದು! ಫೇಸ್‌ಬುಕ್‌ ಒಡೆತನದ ವಾಟ್ಸ್‌ಆ್ಯಪ್‌ ಈ ಫೀಚರ್‌ ಅನ್ನು ಶೀಘ್ರವೇ ಗ್ರಾಹಕರ ಬಳಕೆಗೆ ನೀಡುವ ಸಾಧ್ಯತೆಯಿದೆ.

ವಾಟ್ಸ್‌ಆ್ಯಪ್‌ ವೆಬ್‌ ಬಳಸುವಾಗ ಬಳಕೆದಾರರು ಒಂದಿಷ್ಟು ತೊಂದರೆಗಳನ್ನು ಎದುರಿಸುತ್ತಿದ್ದರು. ಅಂದರೆ, ನಿಮ್ಮ ಫೋನ್‌ ಇಂಟರ್ನೆಟ್‌ ಸಂಪರ್ಕದಿಂದ ಕಡಿತಗೊಂಡರೆ, ಬ್ಯಾಟರಿ ಖಾಲಿಯಾದರೆ ಆ ಕ್ಷ ಣದಿಂದ ನೀವು ಡೆಸ್ಕ್‌ಟಾಪ್‌ನಲ್ಲಿ ವಾಟ್ಸ್‌ಆ್ಯಪ್‌ ವೆಬ್‌ ಬಳಸಲು ಸಾಧ್ಯವಾಗುತ್ತಿರಲಿಲ್ಲ. ಬಹುಶಃ ವಾಟ್ಸ್‌ಆ್ಯಪ್‌ ಮಲ್ಟಿ ಡಿವೈಸ್‌ ವೈಶಿಷ್ಟ್ಯಪೂರ್ಣವಾಗಿ ಬಳಕೆದಾರರಿಗೆ ಸಿಗಲಾರಂಭಿಧಿಸಿಧಿದರೆ ಈ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂಬುದು ವಾಟ್ಸ್‌ಧಿಆ್ಯಪ್‌ನ ಅಭಿಪ್ರಾಯವಾಗಿದೆ. ವಾಟ್ಸ್‌ಧಿಆ್ಯಪ್‌ನಲ್ಲಿಇತ್ತೀಚೆಗೆ ಪರಿಚಯಿಸಲಾದ ಮಲ್ಟಿ-ಡಿವೈಸ್‌ ಬೀಟಾ ಪರೀಕ್ಷೆಯು ಬಳಕೆದಾರರ ಪ್ರಾಥಮಿಕ ಸಾಧನದಲ್ಲಿ(ಸ್ಮಾರ್ಟ್‌ಫೋನ್‌) ಮತ್ತು ಪ್ರಾಥಮಿಕ ಸಾಧನವು ಇಂಟರ್ನೆಟ್‌ ಸಂಪರ್ಕಿತಗೊಂಡಿಲ್ಲದಿದ್ದರೂ ಇತರ ನಾಲ್ಕು ಸಾಧನಗಳಲ್ಲಿಕೆಲಸ ಮಾಡಲು ಅವಕಾಶ ನೀಡುವ ಮೂಲಕ ಈ ಸಮಸ್ಯೆಯನ್ನು ನಿವಾರಿಸುತ್ತದೆ. ಆದಾಗ್ಯೂ, ಬಹು-ಸಾಧನ ಬೆಂಬಲವು ಹೊರಬಂದ ನಂತರ 

ವಾಟ್ಸ್‌ಆ್ಯಪ್‌ ವೆಬ್‌  ಫೀಚರ್‌ ಭವಿಷ್ಯ ಏನು ಎಂಬ ಪ್ರಶ್ನೆ ಇನ್ನೂ ಸ್ಪಷ್ಟವಾದ ಉತ್ತರ ಸಿಕ್ಕಿಲ್ಲ. ವಾಟ್ಸ್‌ಆ್ಯಪ್‌ ವೆಬ್‌ ಬಳಕೆದಾರರಿಗೆ ಒಂದು ಪ್ರಮುಖ ವೇದಿಕೆಯಾಗಿ ಉಳಿದಿದೆ. ಇಲ್ಲಿಯವರೆಗೆ, ವಾಟ್ಸ್‌ಆ್ಯಪ್‌ ಅನ್ನು ಒಂದು ಸಮಯದಲ್ಲಿಒಂದು ಸಾಧನದಲ್ಲಿ

ಮಾತ್ರ ಬಳಸಬಹುದಿತ್ತು. ಡೆಸ್ಕ್‌ಟಾಪ್‌ ಮತ್ತು ವೆಬ್‌ ಬೆಂಬಲವು ನಿಮ್ಮ ಫೋನ್‌ ಅನ್ನು ಪ್ರತಿಬಿಂಬಿಸುವ ಮೂಲಕ ಮಾತ್ರ ಕಾರ್ಯನಿರ್ವಹಿಸುತ್ತದೆ. ಅಂದರೆ ನಿಮ್ಮ ಫೋನ್‌ ಆನ್‌ ಆಗಿರಬೇಕು ಮತ್ತು ಸಕ್ರಿಯ ಇಂಟರ್ನೆಟ್‌ ಸಂಪರ್ಕವನ್ನು ಹೊಂದಿ­ರ­ಬೇಕು. ಆಗಲೇ ಅದು ಕಾರ್ಯ­ನಿರ್ವಹಿಸಲು ಸಾಧ್ಯವಾಗುತ್ತದೆ.

ಮಲ್ಟಿ ಡಿವೈಸ್‌ ಬೆಂಬಲ ಸಕ್ರಿಯವಾದ ಬಳಕೆದಾರರಿಗೆ ಇನ್ನೂ ನಾಲ್ಕು ಸಾಧನಗಳನ್ನು ಸೇರಿಸಲು ಸಾಧ್ಯವಾಗುತ್ತದೆ. ಆದರೆ ವಾಟ್ಸ್‌ ಆ್ಯಪ್‌ ವೆಬ…, ವಾಟ್ಸ್‌ಆ್ಯಪ್‌ ಡೆಸ್ಕ್‌ಟಾಪ್‌ ಅಥವಾ ಫೇಸ್‌ಬುಕ್‌ ಪೋರ್ಟಲ್‌ಗಳನ್ನು ಮಾತ್ರ ಸೇರಿಸಬಹುದು. ಕಂಪನಿಯು ನಂತರದ ಹಂತದಲ್ಲಿಹೆಚ್ಚುವರಿ ಸಾಧನಗಳನ್ನು (ಸ್ಮಾರ್ಟ್‌ಫೋನ್‌ಗಳು ಅಥವಾ ಟ್ಯಾಬ್ಲೆಟ್‌ಗಳಂಥ) ಸೇರಿಸಲು ಬೆಂಬಲವನ್ನು ಸೇರಿಸಬಹುದು ಎನ್ನಲಾಗುತ್ತಿದೆ.

ಸದ್ಯದ ಪರಿಸ್ಥಿತಿಯನ್ನು ಆಧರಿಸಿ ಹೇಳುವುದಾದರೆ ವಾಟ್ಸ್‌ಆ್ಯಪ್‌ ವೆಬ್‌ ಫೀಚರ್‌ ಇರಲಿದೆ. ಜೊತೆಗೆ, ವಾಟ್ಸ್‌ಆ್ಯಪ್‌ ಮಲ್ಟಿ ಸಪೋರ್ಟ್‌ ಸಕ್ರಿಯಗೊಂಡ ಬಳಿಕ ಅದು ಎದುರಿಸುತ್ತಿದ್ದ ಸಮಸ್ಯೆಗಳೂ ನೀಗಲಿವೆ. ಜೊತೆಗೆ, ಒಂದಕ್ಕಿಂತ ಹೆಚ್ಚು ಸಾಧನಗಳಲ್ಲಿವಾಟ್ಸ್‌ಆ್ಯಪ್‌ ಬಳಸಲು ಸಾಧ್ಯವಾಗುವುದರಿಂದ, ಅದರ ಬಳಕೆಯ ಸಾಧ್ಯತೆಗಳು ಇನ್ನೂ ಹೆಚ್ಚಾಗಲಿವೆ.

ಭಾರತದಲ್ಲೇ 39 ಕೋಟಿ ಬಳಕೆದಾರರನ್ನು ಹೊಂದಿರುವ ವಾಟ್ಸ್‌ಆ್ಯಪ್‌ ಸಂವಹನಕ್ಕಾಗಿ ಮಾತ್ರವಲ್ಲದೇ ಬಿಸಿನೆಸ್‌, ಹಣಕಾಸಿನ ಸೇವೆಗೂ ಬಳಕೆಯಾಗುತ್ತಿದೆ. ಹಾಗಾಗಿ, ಅದು ತನ್ನ ಬಳಕೆದಾರರ ಅನುಕೂಲಕ್ಕೆ ತಕ್ಕ ಹಾಗೆ ಫೀಚರ್‌ಗಳನ್ನು ಅಭಿವೃದ್ಧಿಪಡಿಸಿ, ಬಳಕೆಯ ಅನುಭವವನ್ನು ಹೆಚ್ಚಿಸುತ್ತಿದೆ. ವಾಟ್ಸ್‌ಆ್ಯಪ್‌ ಮಲ್ಟಿ ಡಿವೈಸ್‌ ಸಪೋರ್ಟ್‌ ಕೂಡ ಅದೇ ಹಾದಿಯಲ್ಲಿದೆ.

ಈ ಲೇಖನವು ವಿಜಯ ಕರ್ನಾಟಕದ 2021 ಆಗಸ್ಟ್ 9ರ ಸಂಚಿಕೆಯಲ್ಲಿ ಪ್ರಕಟವಾಗಿದೆ.

ಭಾನುವಾರ, ಆಗಸ್ಟ್ 1, 2021

Billionaire investor Rakesh Jhunjhunwala: 'ಷೇರುಪೇಟೆ ಸರದಾರ'ನ ವಿಮಾನಯಾನ

‘ಭಾರತೀಯ ವಾರೆನ್‌ ಬಫೆಟ್‌’ ರಾಕೇಶ್‌ ಜುಂಜುನ್‌ವಾಲಾ ಅವರೀಗ ‘ಆಕಾಶ’ಕ್ಕೆ ಏಣಿ ಹಾಕಲು ಅಣಿಯಾಗುತ್ತಿದ್ದಾರೆ. ಷೇರುಪೇಟೆ ಚತುರ ಹೂಡಿಕೆದಾರನ ವಿಮಾನಯಾನ ಸಂಸ್ಥೆಗೆ ಸಕ್ಸೆಸ್‌ ಸಿಗುತ್ತಾ? 


-ಮಲ್ಲಿಕಾರ್ಜುನ ತಿಪ್ಪಾರ
ಷೇರುಪೇಟೆ ವಹಿವಾಟು ಬಲ್ಲವರಿಗೆ, ಹೂಡಿಕೆದಾರರ ವಲಯಕ್ಕೆ  ರಾಕೇಶ್‌ ಜುಂಜುನ್‌ವಾಲಾ ಚಿರಪರಿಚಿತ ಹೆಸರು. ಆದರೆ, ಸಾಮಾನ್ಯರಿಗೆ ಅವರ ಬಗ್ಗೆ ಗೊತ್ತಾಗಿದ್ದು ಅಗ್ಗದ ವಿಮಾನಯಾನ ಸಂಸ್ಥೆ ಆರಂಭಿಸುವ ಬಗ್ಗೆ ಘೋಷಣೆ ಮಾಡಿದಾಗಲೇ!

‘ಭಾರತದ ವಾರೆನ್‌ ಬಫೆಟ್‌’ ಎಂದು ಕರೆಸಿಕೊಳ್ಳುವ 61 ವರ್ಷದ ಈ ಚಾಣಾಕ್ಷ  ಹೂಡಿಕೆದಾರ ಇಡುವ ನಡೆಗಳೇ ನಿಗೂಢ. ಅವರ ಈ ಗುಣಕ್ಕೆ ಅಲ್ಟ್ರಾ ಲೋ ಕಾಸ್ಟ್‌ ಏರ್‌ಲೈನ್‌ ಸ್ಥಾಪನೆಯೇ ಘೋಷಣೆಯೇ ಸಾಕ್ಷಿ. ಯಾಕೆಂದರೆ, ಕೋವಿಡ್‌ ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ಇಡೀ ವಿಮಾನಯಾನ ವಲಯದ ಮೇಲೆ ‘ಆಕಾಶ’ವೇ ಕಳಚಿ ಬಿದ್ದಿದೆ. ಅದರಿಂದ ಹೊರಬರಲು ಹರಸಾಹಸ ಪಡುತ್ತಿದೆ. ಸಾಂಕ್ರಾಮಿಕ ಪರಿಸ್ಥಿತಿ ಶುರುವಾಗುವ ಕೆಲವು ವರ್ಷಗಳ ಮೊದಲೇ ಕಿಂಗ್‌ ಫಿಶರ್‌ ಸಂಸ್ಥೆ ಬಾಗಿಲು ಹಾಕಿದ್ದರೆ, 2019ರಲ್ಲಿಜೆಟ್‌ ಏರ್‌ವೇಸ್‌ ಕೂಡ ಸೇವೆ ರದ್ದುಪಡಿಸಿತ್ತು. ಜೊತೆಗೆ, ಸರಕಾರಿ ಸ್ವಾಮ್ಯದ ಏರ್‌ ಇಂಡಿಯಾ ಕೂಡ ಲಾಭದಲ್ಲಿಲ್ಲ. ಟಾಟಾ ಒಡೆತನದ ವಿಸ್ತಾರ, ಸ್ಪೈಸ್‌ಜೆಟ್‌, ಇಂಡಿಗೋ, ಏರ್‌ ಏಷ್ಯಾ ಸೇರಿ ಕೆಲವು ಸಂಸ್ಥೆಗಳು ಸೇವೆಯನ್ನು ಒದಗಿಸುತ್ತಿವೆ. ಬಹುಶಃ ಕೊರೊನಾದಿಂದ ಅತಿ ಹೆಚ್ಚು ಹೊಡೆತ ಬಿದ್ದಿರುವುದು ವಿಮಾನಯಾನ ಕ್ಷೇತ್ರದ ಮೇಲೆ. ಹಾಗಾಗಿ, ಈ ಕ್ಷೇತ್ರದಲ್ಲಿಹೂಡಿಕೆ ಮಾಡುತ್ತಿರುವ ‘ಬಿಗ್‌ ಬುಲ್‌’ ರಾಕೇಶ್‌ ಜುಂಜುನ್‌ವಾಲಾ ಅವರ ನಡೆ ಹೆಚ್ಚು ಚರ್ಚೆಗೆ ಒಳಗಾಗುತ್ತಿದೆ.

ಇಂಥ ವಿಷಮ ಪರಿಸ್ಥಿತಿಯಲ್ಲಿ ಈತ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಆರಂಭಿಸಲು ಹೊರಟಿದ್ದಾರೆ ಎಂದರೆ ಅವರ ಲೆಕ್ಕಾಚಾರದ ಬಗ್ಗೆ ಯೋಚಿಸಲೇಬೇಕಾಗುತ್ತದೆ. ಅವರ ಈ ಸಾಹಸಕ್ಕೆ ಇಂಡಿಗೋ ಹಾಗೂ ಜೆಟ್‌ವೇಸ್‌ನ ಮಾಜಿ ಅಧಿಕಾರಿಗಳೂ ಸಾಥ್‌ ನೀಡುತ್ತಿದ್ದಾರೆ. ತಾವು ಸ್ಥಾಪಿಸಲು ಹೊರಟಿರುವ ವಿಮಾನಯಾನ ಸಂಸ್ಥೆಗೆ ರಾಕೇಶ್‌, ‘ಆಕಾಶ್‌ ಏರ್‌’ ಎಂದು ನಾಮಕರಣ ಮಾಡಲಿದ್ದಾರೆ. ಈ ಸಂಸ್ಥೆಯಲ್ಲಿಅವರು ಶೇ.40 ಪಾಲು ಹೊಂದಲಿದ್ದಾರೆ. ಕೆಲವೇ ದಿನಗಳಲ್ಲಿಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಒಪ್ಪಿಗೆ ನೀಡುವ ಸಾಧ್ಯತೆಯೂ ಇದೆ.

ದೊಡ್ಡ ವಿಮಾನ ತಯಾರಿಕಾ ಕಂಪನಿ ಎನಿಸಿಕೊಂಡಿರುವ ಬೋಯಿಂಗ್‌ ಭಾರತೀಯ ಆಕಾಶದಲ್ಲಿಮತ್ತೆ ರೆಕ್ಕೆ ಬಿಚ್ಚಲು ಜುಂಜುನ್‌ವಾಲಾ ಆರಂಭಿಸಲಿರುವ ಸಂಸ್ಥೆ ಬಲ ನೀಡುವ ಸಾಧ್ಯತೆ ಇದೆ. ಯಾಕೆಂದರೆ, ಭಾರತದಲ್ಲಿಜೆಟ್‌ ಏರ್‌ವೇಸ್‌ ಬೋಯಿಂಗ್‌ನ ಅತಿ ದೊಡ್ಡ ಗ್ರಾಹಕನಾಗಿತ್ತು. ಅದು ಬಾಗಿಲು ಹಾಕಿದ ಮೇಲೆ ಭಾರತದಲ್ಲಿಸ್ಪೈಸ್‌ಜೆಟ್‌ ಬಿಟ್ಟು ಬೋಯಿಂಗ್‌ಗೆ ಅಂಥ ಹೇಳಿಕೊಳ್ಳುವ ಗ್ರಾಹಕರಿರಲಿಲ್ಲ. ಉಳಿದ ವಿಯಾನಯಾನ ಕಂಪನಿಗಳು, ಏರ್‌ಬಸ್‌ ತಯಾರಿಸುವ ಕಡಿಮೆ ಅಗಲದ ವಿಮಾನಗಳನ್ನೇ ಹೆಚ್ಚಾಗಿ ಬಳಸುತ್ತಿವೆ. ಹಾಗಾಗಿ, ‘ಆಕಾಶ್‌ ಏರ್‌’ನಿಂದಾಗಿ ಭಾರತೀಯ ಆಕಾಶದಲ್ಲಿಬೋಯಿಂಗ್‌ ವರ್ಸಸ್‌ ಏರ್‌ಬಸ್‌ ಸ್ಪರ್ಧೆಯನ್ನು ಮತ್ತೆ ಕಾಣಬಹುದು. ಮುಂದಿನ ನಾಲ್ಕು ವರ್ಷಗಳಲ್ಲಿ180 ಆಸನಗಳುಳ್ಳ ಸುಮಾರು 70 ವಿಮಾನಗಳನ್ನು ಖರೀದಿಸುವ ಗುರಿಯನ್ನು ಅವರು ಹಾಕಿಕೊಂಡಿದ್ದಾರೆ.

‘ಫೋರ್ಬ್ಸ್‌ ಇಂಡಿಯಾ’ ಪ್ರಕಾರ ರಾಕೇಶ್‌ ಭಾರತದ 48ನೇ ಶ್ರೀಮಂತ ವ್ಯಕ್ತಿ. ಸುಮಾರು 34,387 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಸಾಧಾರಣ ವ್ಯಕ್ತಿಯೊಬ್ಬ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿರುವ ಕತೆಯೂ ರಣರೋಚಕವಾಗಿದೆ. ರಾಕೇಶ್‌ ಅವರ ತಂದೆ ಮುಂಬೈಯಲ್ಲಿಆದಾಯ ತೆರಿಗೆ ಅಧಿಕಾರಿಯಾಗಿದ್ದರು. ಇವರದ್ದು ಮಧ್ಯಮ ವರ್ಗದ ಕುಟುಂಬ. ರಾಕೇಶ್‌ ಹುಟ್ಟಿದ್ದು 1960 ಜುಲೈ 5ರಂದು ಇಂದಿನ ತೆಲಂಗಾಣದ ಹೈದ್ರಾಬಾದ್‌ನಲ್ಲಿ. ಬೆಳೆದಿದ್ದೆಲ್ಲಮುಂಬಯಿಯಲ್ಲಿ. ತಂದೆ ಆದಾಯ ತೆರಿಗೆ ಅಧಿಕಾರಿಯಾಗಿದ್ದರಿಂದ ಮನೆಯಲ್ಲಿಷೇರು ಪೇಟೆ ಬಗೆಗಿನ ಮಾತುಕತೆಗಳು ಸಾಮಾನ್ಯವಾಗಿದ್ದವು. ಅದು ಯುವಕ ರಾಕೇಶ್‌ ಕಿವಿಯ ಮೇಲೆ ಬೀಳುತ್ತಿತ್ತು. ಪರಿಣಾಮ ಕಾಲೇಜಿನಲ್ಲಿರುವಾಗಲೇ ರಾಕೇಶ್‌ಗೆ ಷೇರು ಪೇಟೆ ವ್ಯವಹಾರ, ಹೂಡಿಕೆಯ ಮೇಲೆ ಆಸಕ್ತಿ ಬೆಳೆಯಿತು. 1985ರಲ್ಲಿಸಿಡನ್‌ಹಮ್‌ ಕಾಲೇಜಿನಿಂದ ಪದವಿ ಪಡೆದ ಬಳಿಕ ಇನ್ಸ್‌ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟಂಟ್‌ ಆಫ್‌ ಇಂಡಿಯಾ ಸಂಸ್ಥೆ ಸೇರಿದರು. 

1986ರಲ್ಲಿಅವರು ಕೇವಲ 43 ರೂಪಾಯಿಗೆ 5000 ಟಾಟಾ ಟೀ ಷೇರುಗಳನ್ನು ಖರೀದಿಸಿದ್ದರು. ಮೂರು ತಿಂಗಳ ಬಳಿಕ ಷೇರು ಮೌಲ್ಯ 143 ರೂ.ಗೆ ಏರಿಕೆಯಾಯಿತು. ಹೂಡಿಕೆಗೆಗಿಂತ ಮೂರು ಪಟ್ಟು ಲಾಭ ಮಾಡಿಕೊಂಡ ರಾಕೇಶ್‌ ಮುಂದಿನ ಮೂರು ವರ್ಷಗಳಲ್ಲಿಷೇರು ಹೂಡಿಕೆಗಳಲ್ಲಿ20ರಿಂದ 25 ಲಕ್ಷ  ರೂಪಾಯಿ ಲಾಭ ಮಾಡಿಕೊಂಡರಂತೆ!

1987ರಲ್ಲಿರಾಕೇಶ್‌ ಅವರು ರೇಖಾ ಎಂಬವರನ್ನು ವಿವಾಹವಾದರು. ಪತ್ನಿ ಕೂಡ ಷೇರು ಪೇಟೆ ಹೂಡಿಕೆದಾರೆ. 2003ರಲ್ಲಿಇವರಿಬ್ಬರು ತಮ್ಮದೇ ಸ್ಟಾಕ್‌ ಟ್ರೇಡಿಂಗ್‌ ಕಂಪನಿ ಶುರು ಮಾಡಿದರು. ಅದಕ್ಕೆ ತಮ್ಮಿಬ್ಬರ ಹೆಸರಿನ ಮೊದಲನೇ ಅಕ್ಷ ರಗಳನ್ನು ಸೇರಿಸಿ ‘ರೇರಾ(್ಕಛ್ಟಿa) ಎಂಟರ್‌ಪ್ರೈಸಸ್‌’ ಎಂದು ಕರೆದಿದ್ದಾರೆ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಷೇರುಪೇಟೆ ವ್ಯವಹಾರದಲ್ಲಿರಾಕೇಶ್‌ ಅವರನ್ನೇ ಅನುಸರಿಸುವ ಬಹುದೊಡ್ಡ ವರ್ಗವೇ ಇದೆ. ಅವರ ಒಂದು ಸಣ್ಣ ಇಶಾರೆಯೂ ಕಂಪನಕ್ಕೆ ಕಾರಣವಾಗುತ್ತದೆ. ತಮ್ಮ ಖಾಸಗಿ ರೇರಾ ಸ್ಟಾಕ್‌ ಟ್ರೇಡಿಂಗ್‌ ಕಂಪನಿ ಮೂಲಕ ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಟೈಟನ್‌, ಕ್ರಿಸಿಲ್‌, ಅರಬಿಂದೋ ಫಾರ್ಮಾ, ಪ್ರಜ್‌ ಇಂಡಸ್ಟ್ರೀಜ್‌, ಎನ್‌ಸಿಸಿ, ಆಪ್ಟೇಕ್‌ ಲಿ., ಅಯಾನ್‌ ಎಕ್ಸ್‌ಚೇಂಜ್‌, ಎಂಸಿಎಕ್ಸ್‌, ಫೋರ್ಟಿಸ್‌ ಹೆಲ್ತ್‌ಕೇರ್‌, ಲುಪಿನ್‌, ವಿಐಪಿ ಇಂಡಸ್ಟ್ರೀಜ್‌, ಜಿಯೋಜಿತ್‌ ಫೈನಾನ್ಷಿಯಲ್‌ ಸವೀರ್‍ಸಸ್‌, ರಾರ‍ಯಲಿಸ್‌ ಇಂಡಿಯಾ, ಜುಬಿಲಿಯೆಂಟ್‌ ಲೈಫ್‌ ಸೈನ್ಸೀಸ್‌, ಸ್ಟಾರ್‌ ಹೆಲ್ತ್‌ ಇನ್ಶೂರೆನ್ಸ್‌ ಹೀಗೆ ಹಲವಾರು ಕಂಪನಿಗಳಲ್ಲಿರಾಕೇಶ್‌ ಹೂಡಿಕೆ ಮಾಡಿದ್ದಾರೆ. ಜೊತೆಗೆ, ಷೇರು ವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆಯನ್ನೂ ಎದುರಿಸುತ್ತಿದ್ದಾರೆ!

ಷೇರುಪೇಟೆ ಬಿಟ್ಟು ಅವರ ಮತ್ತೊಂದು ಆಸಕ್ತಿಯ ಕ್ಷೇತ್ರ ಬಾಲಿವುಡ್‌. ಹಲವು ಹಿಂದಿ ಚಿತ್ರಗಳನ್ನು ನಿರ್ಮಿಸಿದ್ದಾರೆ. ಶ್ರೀದೇವಿ ಅಭಿಯನದ ‘ಇಂಗ್ಲಿಷ್‌ ವಿಂಗ್ಲಿಷ್‌’, ಕರಿನಾ ಕಪೂರ್‌ ಅಭಿನಯದ ‘ಕೀ ಆ್ಯಂಡ್‌ ಕಾ’ ಚಿತ್ರಗಳನ್ನು ಹೆಸರಿಸಬಹುದು. ರಾಕೇಶ್‌ ಮಾನವ ಹಿತಾಕಾಂಕ್ಷಿ ಆಗಿಯೂ ಹೆಸರುವಾಸಿಯಾಗಿದ್ದಾರೆ. ವಿಶೇಷವಾಗಿ ಷೌಷ್ಟಿಕತೆ ಮತ್ತು ಶಿಕ್ಷ ಣಕ್ಕೆ ಸಂಬಂಧಿಸಿ ತೊಡಗಿಸಿಕೊಂಡಿದ್ದಾರೆ. ತಮ್ಮ ಆದಾಯದ ಶೇ.25ರಷ್ಟು ಹಣವನ್ನು ಸಮಾಜಮುಖಿ ಕೆಲಸಗಳಿಗೆ ಬಳುಸುತ್ತಿದ್ದಾರೆ. ಕ್ಯಾನ್ಸರ್‌ಪೀಡಿತ ಮಕ್ಕಳಿಗೆ ಆಶ್ರಯ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ಜಾಗೃತಿ ಮೂಡಿಸುವ ಸಂಸ್ಥೆಗಳಿಗೆ ಸಹಾಯ ಮಾಡುತ್ತಿದ್ದಾರೆ. ಮುಂಬೈಯಲ್ಲಿಕಣ್ಣಿನ ಆಸ್ಪತ್ರೆ ಕಟ್ಟಿಸಿ ಅದರ ಮೂಲಕ ಉಚಿತವಾಗಿ 15,000 ಕಣ್ಣಿನ ಚಿಕಿತ್ಸೆ ನಡೆಸುವ ಗುರಿ. 

ಹೂಡಿಕೆ ಮಾಡಿದರೆ ‘ಹೊಳೆಯಲ್ಲಿಹುಣಸೆ ಹಣ್ಣು ತೊಳೆ’ದಂತೆ ಭಾವಿಸಲಾಗುತ್ತಿರುವ ವಿಮಾನಯಾನ ಕ್ಷೇತ್ರದಲ್ಲಿಹಣ ಸುರಿಯಲು ಜುಂಜುನ್‌ವಾಲಾ ಮುಂದಾಗಿದ್ದಾರೆಂದರೆ, ಅವರ ಲೆಕ್ಕಾಚಾರ ಸರಿಯಾಗೇ ಇರಬೇಕು. ಸದ್ಯ ಬಸವಳಿದಂತೆ ಕಾಣುತ್ತಿರುವ ವಿಮಾನಯಾನ ಮುಂಬರುವ ವರ್ಷಗಳಲ್ಲಿಪುಟಿದೇಳುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಸೊರಗುತ್ತಿರುವ ಭಾರತೀಯ ವಿಮಾನಯಾನ ಕ್ಷೇತ್ರಕ್ಕೆ ರಾಕೇಶ್‌ ಜುಂಜುನ್‌ವಾಲಾ ಅವರ ಆಕಾಶ್‌ ಏರ್‌ ಸಂಸ್ಥೆ ಬಲ ನೀಡಲಿದೆ ಎಂಬ ವಿಶ್ಲೇಷಣೆಗಳೂ ನಡೆಯುತ್ತಿವೆ. ಎಲ್ಲವೂ ಲೆಕ್ಕಾಚಾರದಂತೆ ನಡೆದರೆ ಈ ವರ್ಷಾಂತ್ಯ ಇಲ್ಲವೇ ಮುಂದಿನ ವರ್ಷದ ಆರಂಭದಲ್ಲಿಜುಂಜುನ್‌ವಾಲಾ ಅವರ ‘ಆಕಾಶ ಏರ್‌’ ವಿಮಾನದಲ್ಲಿಹಾರಾಡಬಹುದು.


ಈ ಲೇಖನವು ವಿಜಯ ಕರ್ನಾಟಕದ 2021ರ ಆಗಸ್ಟ್ 1ರ ಸಂಚಿಕೆಯಲ್ಲಿ ಪ್ರಕಟವಾಗಿದೆ


ಶುಕ್ರವಾರ, ಜುಲೈ 23, 2021

clubhouse vs twitter spaces: ಕ್ಲಬ್‌ಹೌಸ್ ಬೇಡ್ವಾ, ಸ್ಪೇಸಸ್‌ಗೆ ಬನ್ನಿ!

- ಮಲ್ಲಿಕಾರ್ಜುನ ತಿಪ್ಪಾರ
ಪಾಡ್‌ಕಾಸ್ಟ್‌ಗೆ ಅಷ್ಟೇ ಸೀಮಿತವಾಗಿದ್ದ ಆಡಿಯೋ ವೇದಿಕೆಗೆ ಹೊಸ ಖದರ್ ತಂದುಕೊಟ್ಟಿದ್ದು ‘ಕ್ಲಬ್‌ಹೌಸ್’ ಆ್ಯಪ್. ಈ ವರ್ಷದ ಆರಂಭದಲ್ಲಿ ಆಂಡ್ರಾಯ್ಡ್ ಸಾಧನಗಳಲ್ಲೂ ಬಳಕೆಗೆ ಅವಕಾಶ ಸಿಗುತ್ತಿದಂತೆ ಕ್ಲಬ್‌ಹೌಸ್‌ನ ಬಳಕೆಯ ಒಟ್ಟು ಸಾಧ್ಯತೆಯೇ ಬದಲಾಗಿ ಹೋಗಿದೆ. ಭಾರತದಲ್ಲಂತೂ ಈ ಕ್ಲಬ್‌ಹೌಸ್ ನಾಗಾಲೋಟದಲ್ಲಿ ಓಡುತ್ತಿದೆ. ಅತಿ ಕಡಿಮೆ ಅವಧಿಯಲ್ಲಿ 20 ಲಕ್ಷ ಸಕ್ರಿಯ ಬಳಕೆದಾರರನ್ನು ಹೊಂದಿರುವ ಈ ಆ್ಯಪ್ ಒಟ್ಟು 50 ಲಕ್ಷಕ್ಕೂ ಅಧಿಕ ಡೌನ್‌ಲೋಡ್ ಕಂಡಿದೆ. 

ಕ್ಲಬ್‌ಹೌಸ್‌ನ ಈ ಜನಪ್ರಿಯತೆಗೆ ಬೆಚ್ಚಿಬಿದ್ದಿರುವ ಸೋಷಿಯಲ್ ಮೀಡಿಯಾ ದೈತ್ಯ ಕಂಪನಿಗಳಾದ ೇಸ್‌ಬುಕ್, ಟ್ವಿಟರ್ ಅಂಥದ್ದೇ ವೇದಿಕೆಯನ್ನು ಸೃಷ್ಟಿಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ಟ್ವಿಟರ್‌ನ ‘ಸ್ಪೇಸಸ್’ ವೇದಿಕೆ ಸಕ್ರಿಯವಾಗಿದೆ. ಇದು ಕೂಡ ಕ್ಲಬ್‌ಹೌಸ್ ಆ್ಯಪ್ ರೀತಿಯಲ್ಲೇ ಆಡಿಯೋ ವೇದಿಕೆಯಾಗಿದೆ. ಐಒಎಸ್ ಮತ್ತು ಆಂಡ್ರಾಯ್ಡ್ ಸಾಧನಗಳಿಗೆ ಇದು ಸಪೋರ್ಟ್ ಮಾಡುತ್ತದೆ. ನೀವು ಟ್ವಿಟರ್‌ನ ಈ ಸ್ಪೇಸಸ್‌ನಲ್ಲಿ ಮಾತುಗಳನ್ನು ಕೇಳಬಹುದು; ನೀವೇ ಸ್ಪೀಕರ್ ಆಗಬಹುದು; ನಿಮಗೆ ಬೇಕಾದ ವೇದಿಕೆಗಳಿಗೆ ಹೋಗಿ ಕುಳಿತುಕೊಳ್ಳಬಹುದು. ಸದ್ಯಕ್ಕೆ ಈ ಸ್ಪೇಸ್ ವೆಬ್‌ನಲ್ಲಿ ಸಿಗುವುದಿಲ್ಲ, ಆದರೆ ನೀವು ಕೇಳುಗರಾಗಿ ಸೇರಿಕೊಳ್ಳಬಹುದು.

ಸ್ಪೇಸಸ್ ಶುರು ಮಾಡುವುದು ಹೇಗೆ?

ನೀವು ಐಒಎಸ್ ಬಳಕೆದಾರರಾಗಿದ್ದರೆ, ಎರಡು ರೀತಿಯಲ್ಲಿ ಟ್ವಿಟರ್‌ನಲ್ಲಿ ಸ್ಪೇಸ್ ಚರ್ಚೆ ಆರಂಭಿಸಬಹುದು. ನಿಮ್ಮ ಹೋಮ್ ಟೈಮ್‌ಲೈನ್ ಟ್ವೀಟ್ ಕಾಂಪೋಸ್ ಮೇಲೆ ದೀರ್ಘಾವಧಿಗೆ ಒತ್ತಿ ಹಿಡಿಯಬೇಕು. ಆಗ ಕಾಣಿಸಿಕೊಳ್ಳುವ ಸ್ಪೇಸಸ್ ಐಕಾನ್ ಮೇಲೆ ಟ್ಯಾಪ್ ಮಾಡಿ, ಆಗ ನೀವು ಸ್ಪೇಸ್ ಹಾಸ್ಟ್ ಆಗಿ ಎಂಟ್ರಿ ಪಡೆದುಕೊಳ್ಳುತ್ತೀರಿ. ಅಥವಾ ನಿಮ್ಮ ಪ್ರೊೈಲ್ ಇಮೇಜ್ ಮೇಲೆ ಟ್ಯಾಪ್ ಮಾಡಿ ಮತ್ತು ಬಲಬದಿಗೆ ಸ್ಕ್ರಾಲ್ ಮಾಡಿ ಮತ್ತು ಸ್ಪೇಸಸ್ ಮೇಲೆ ಟ್ಯಾಪ್ ಮಾಡುವ ಮೂಲಕ ಆರಂಭಿಸಬಹುದು. ಆಂಡ್ರಾಯ್ಡ್ ೆನ್‌ಗಳಲ್ಲಾದರೆ, ಮೊದಲಿಗೆ ಟ್ವಿಟರ್ ಆ್ಯಪ್ ಓಪನ್ ಮಾಡಿ, ಸ್ಕ್ರೀನ್‌ನ ಬಲಬದಿಯ ಕೆಳ ತುದಿಯಲ್ಲಿ ಕಾಣುವ ಟ್ವೀಟ್ ಕಾಂಪೋಸ್ ಮಾಡುವ ಐಕಾನ್ ಮೇಲೆ ಟ್ಯಾಪ್ ಮಾಡಿ. ಆಗ ನಿಮಗೆ ಸ್ಪೇಸಸ್, ೆಟೋಸ್, ಜಿಐಎ್ ಮತ್ತು ಟ್ವೀಟ್ ಎಂಬ ಪದಗಳು ಐಕಾನ್ ಸಹಿತ ಕಾಣುತ್ತವೆ. ಸ್ಪೇಸಸ್ ಐಕಾನ್ ಮೇಲೆ ಟ್ಯಾಪ್ ಮಾಡಿದಾಗ,  ಸ್ಟಾರ್ಟ್ ಯುವರ್ ಸ್ಪೇಸ್ ಪಾಪ್ ಅಪ್ ಕಾಣಿಸಿಕೊಳ್ಳುತ್ತದೆ. ಅಲ್ಲಿಯೇ ನಿಮ್ಮ ಚರ್ಚೆಗೆ ಹೆಸರನ್ನು ಕೂಡ ದಾಖಲಿಸಬಹುದು. ಬಳಿಕ ಸ್ಟಾರ್ಟ್ ಯುವರ್ ಸ್ಪೇಸ್ ಬಟನ್ ಮೇಲೆ ಟ್ಯಾಪ್ ಮಾಡಿದಾಗ ನೀವು ಹೋಸ್ಟ್ ಆಗಿ  ಸಕ್ರಿಯರಾಗುತ್ತೀರಿ ಮತ್ತು ನಿಮ್ಮ ಚಾಟ್ ರೂಮ್‌ಗೆ ಉಳಿದವರನ್ನು ಆಮಂತ್ರಿಸಬಹುದು.

ಯಾರೆಲ್ಲ ಜಾಯಿನ್ ಆಗಬಹುದು? 
ಸ್ಪೇಸಸ್ ವೇದಿಕೆ ಮುಕ್ತವಾಗಿದ್ದು, ಯಾರು ಬೇಕಾದರೂ ಕೇಳುಗರಾಗಿ ಸೇರಿಕೊಳ್ಳಬಹುದು. ಟ್ವಿಟರ್‌ನಲ್ಲಿ ನಿಮ್ಮನ್ನು ಾಲೋ ಮಾಡದೇ ಇರುವುವರು ಕೂಡ ಇದರಲ್ಲಿ ಕೇಳುಗರಾಗಿ ಬಂದು ಕುಳಿತುಕೊಳ್ಳಲು ಅವಕಾಶವಿದೆ. ಲಿಂಕ್ ಕಳುಹಿಸುವ ಮೂಲಕ ನೇರವಾಗಿ ಕೇಳುಗರನ್ನೂ ಆಮಂತ್ರಿಸಬಹುದು. ನಿಮ್ಮ ಸ್ಪೇಸಸ್ ಲಿಂಕ್ ಅನ್ನು ಟ್ವೀಟ್ ಮಾಡುವ ಮೂಲಕ ಅಥವಾ ಇತರೆ ವೇದಿಕೆಗಳಲ್ಲಿ ಅದನ್ನು ಷೇರ್ ಮಾಡುವುದರೊಂದಿಗೆ ಕೇಳುಗರನ್ನು ಕರೆದುಕೊಳ್ಳಬಹುದಾಗಿದೆ.

ಒದಗಿಸಲಾದ ನಿಗದಿತ ವೇಳೆಯಲ್ಲಿ  ಈ ವೇದಿಕೆಯಲ್ಲಿ 11 ಜನರು ಮಾತ್ರವೇ ಸ್ಪೀಕರ್ ಆಗಲು ಅವಕಾಶವಿದೆ. ಯಾವಾಗ ನೀವು ಹೊಸ ಸ್ಪೇಸ್ ಸೃಷ್ಟಿಸುತ್ತೀರಿ ಆಗ ನಿಮ್ಮ ಸ್ಪೇಸ್‌ಗೆ ಹೆಸರು ಕೊಡಲು ಅವಕಾಶವಿರುವುದನ್ನು ಕಾಣಬಹುದು ಮತ್ತು ಆ ಮೂಲಕ ಸ್ಪೇಸ್ ಸ್ಟಾರ್ಟ್ ಮಾಡಬಹುದು. ನೀವು ನಿಮ್ಮ ಸ್ಪೇಸ್ ಅನ್ನು ಶೆಡ್ಯೂಲ್ ಮಾಡಬಹುದು ಕೂಡ. 

ಒಮ್ಮೆ ಸ್ಪೇಸಸ್ ಶುರುವಾದ ಮೇಲೆ ಹೋಸ್ಟ್ ಮಾಡುವವರು, ಪೀಪಲ್ ಐಕಾನ್ ಮೇಲೆ ಟ್ಯಾಪಿಂಗ್ ಮಾಡುವ ಮೂಲಕ ಸ್ಪೀಕರ್ ಆಗಲು ಕೇಳುಗರಿಗೆ ರಿಕ್ವೆಸ್ಟ್ ಕಳುಹಿಸಬಹುದು. ಹಾಗೆಯೇ, ಕೇಳುಗರಲ್ಲಿ ಯಾರಿಗಾದರೂ ಮಾತನಾಡಬೇಕು ಎನಿಸಿದರೆ, ಮೈಕೋ್ರೆನ್ ಕೆಳಗಡೆ ಕಾಣುವ ರಿಕ್ವೆಸ್ಟ್ ಐಕಾನ್ ಮೇಲೆ ಟ್ಯಾಪ್ ಮಾಡುವ ಮೂಲಕ ಅನುಮತಿಯನ್ನು ಪಡೆದುಕೊಳ್ಳಬಹುದು. 

ಕ್ಲಬ್‌ಹೌಸ್ ಆ್ಯಪ್‌ಗೆ ಒಗ್ಗಿಕೊಂಡವರಿಗೆ ಟ್ವಿಟರ್‌ನ ಸ್ಪೇಸಸ್ ತುಸು ಕಷ್ಟ ಎನ್ನಬಹುದು. ಕ್ಲಬ್‌ಹೌಸ್‌ನಷ್ಟು ಇದು ಬಳಕೆದಾರಸ್ನೇಹಿಯಂತೆ ಕಾಣುತ್ತಿಲ್ಲಘಿ. ಸ್ಪೇಸಸ್ ಈಗಷ್ಟೇ ಆರಂಭವಾಗಿದೆ. ಮುಂಬರುವ ದಿನಗಳಲ್ಲಿ ಟ್ವಿಟರ್ ಈ ವೇದಿಕೆಯನ್ನು ಇನ್ನಷ್ಟು ಹೆಚ್ಚು ಆಪ್ತವಾಗಿಸಬಹುದು.


ಈ ಲೇಖನವು ವಿಜಯ ಕರ್ನಾಟಕ ಟೆಕ್ ನೋ ಪುರವಣಿಯಲ್ಲಿ 2021ರ ಜುಲೈ 23ರಂದು ಪ್ರಕಟವಾಗಿದೆ.


ಭಾನುವಾರ, ಜುಲೈ 18, 2021

India-Born Sirisha Bandla flies to Space ಆಕಾಶದೆತ್ತರದ ಕನಸು ಬೆಂಬತ್ತಿದ ಬಾಂಡ್ಲಾ

ಬಾಹ್ಯಾಕಾಶ ಯಾನ ಕೈಗೊಳ್ಳಲಿರುವ ರಿಚರ್ಡ್‌ ಬ್ರಾನ್ಸನ್‌ ನೇತೃತ್ವದ ತಂಡದಲ್ಲಿಭಾರತೀಯ ಸಂಜಾತೆ, 34 ವರ್ಷದ ಸಿರಿಶಾ ಬಾಂಡ್ಲಾಇರುವುದು ಭಾರತೀಯರಾದ ನಮಗೆ ಹೆಮ್ಮೆ.

ಮಲ್ಲಿಕಾರ್ಜುನ ತಿಪ್ಪಾರ
ಭಾನುವಾರ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಲಿರುವ ಭಾರತೀಯ ಸಂಜಾತೆ ಅಮೆರಿಕನ್‌ ಸಿರಿಶಾ ಬಾಂಡ್ಲಾಅವರ ವಿಷಯದಲ್ಲಿ ‘ಕನಸು ಕಂಡರಷ್ಟೇ ಅದನ್ನು ಸಾಕಾರಗೊಳಿಸುವುದು ಸಾಧ್ಯ’ ಎಂಬ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್‌ ಕಲಾಂ ಅವರ ಉಕ್ತಿ ಅಕ್ಷ ರಶಃ ನಿಜವಾಗಿದೆ!

ಕಂಡ ಕನಸನ್ನು ಬೆನ್ನಟ್ಟಿ ಅದನ್ನು ನಿಜವಾಗಿಸುವ ಪ್ರಯತ್ನದ ಅನುಭವ ಕೊಡುವ ಥ್ರಿಲ್‌ ಬೇರೆ ಯಾವುದರಿಂದಲೂ ದೊರೆಯಲು ಸಾಧ್ಯವಿಲ್ಲ. ಅಮೆರಿಕದ ಬಾಹ್ಯಾಕಾಶದ ಚಟುವಟಿಕೆಗಳ ಕೇಂದ್ರ ಸ್ಥಾನ ನಾಸಾದ ಜಾನ್ಸನ್‌ ಸ್ಪೇಸ್‌ ಸೆಂಟರ್‌ ಸಮೀಪದ ಹೂಸ್ಟನ್‌ನಲ್ಲಿ ಆಡಿ ಬೆಳೆದ ಹುಡುಗಿ ಗಗನಯಾತ್ರಿಯಾಗುವ ಕನಸು ಕಾಣುವುದು ಸಾಮಾನ್ಯ. ಆದರೆ, ಆ ಕನಸನ್ನು ಬೆಂಬತ್ತಿ ಅದನ್ನು ನನಸಾಗಿಸಿಕೊಳ್ಳುವ ಗುಣ ಸಿರಿಶಾ ಅವರಿಗೆ ಚಿಕ್ಕಂದಿನಿಂದಲೇ ಇತ್ತು. ನಾಸಾದಲ್ಲಿಗಗನಯಾತ್ರಿಯಾಗುವ ಕನಸು ಕಂಡರು. ಆದರೆ, ದೃಷ್ಟಿ ದೋಷದಿಂದಾಗಿ ಪೈಲಟ್‌ ಅಥವಾ ಗಗನಯಾತ್ರಿಧಿಯಾಗುವ ಅರ್ಹತೆಗಳನ್ನು ಪೂರೈಸಲು ಸಾಧ್ಯವಾಗಲಿಲ್ಲ. ಹಾಗಾಗಿ, ಏರ್‌ಫೋರ್ಸ್‌ ಮೂಲಕ ನಾಸಾ ಕದ ತಟ್ಟುವ ಕನಸು ಕೈಗೂಡಲಿಲ್ಲ. ಆದರೇನಂತೆ, ಒಂದಿಲ್ಲಒಂದು ದಿನ ಬಾಹ್ಯಾಕಾಶಕ್ಕೆ ನೆಗೆದೇ ನೆಗೆಯುತ್ತೇನೆ ಎಂಬ ಛಲದಲ್ಲಿಯಾವುದೇ ಕೊರತೆ ಇರಲಿಲ್ಲ. ಕಂಡ ಕನಸನ್ನು ನಿಜವಾಗಿಸಿಕೊಳ್ಳುವ ಯಾವುದೇ ಪ್ರಯತ್ನವನ್ನು ಅವರು ಬಿಡಲಿಲ್ಲ. ಅದಕ್ಕೀಗ ಫಲ ದೊರೆಯುತ್ತಿದೆ. ಅಗತ್ಯ ವಿದ್ಯಾಭ್ಯಾಸವನ್ನು ಪೂರೈಸಿಕೊಂಡ ಅವರೀಗ ತಮ್ಮ ಕನಸನ್ನು ನಿಜವಾಗಿಸಿಕೊಧಿಳ್ಳುತ್ತಿಧಿದ್ದಾರೆ; ಬಾಹ್ಯಾಕಾಶಕ್ಕೆ ಕಾಲಿಡುತ್ತಿರುವ ನಾಲ್ಕನೇ ಭಾರತೀಯ ಸಂಜಾತೆ ಎಂಬ ಕೀರ್ತಿಗೆ ಪಾತ್ರರಾಗುತ್ತಿದ್ದಾರೆ. 

ನಾಸಾ ಗಗನಯಾತ್ರಿಯಾಗಿದ್ದ ಕಲ್ಪನಾ ಚಾವ್ಲಾಅವರು 2003ರಲ್ಲಿಕೊಲಂಬಿಯಾ ಬಾಹ್ಯಾಕಾಶ ನೌಕೆಯಲ್ಲಿಭೂಮಿಗೆ ಮರಳುವಾಗ ದುರ್ಘಟನೆ ಸಂಭವಿಸಿ ಮೃತಧಿರಾಗಿದ್ದರು. ಇದಕ್ಕೂ ಮೊದಲ ರಾಕೇಶ್‌ ಶರ್ಮಾ ಬಾಹ್ಯಾಕಾಶಕ್ಕೆ ತೆರಳಿದ ಮೊದಲ ಇಂಡಿಯನ್‌. ಮತ್ತೊಬ್ಬರು ಭಾರತೀಯ ಮೂಲದ ಸುನೀತಾ ವಿಲಯಮ್ಸ್‌. ಸಿರಿಶಾ ಬಾಹ್ಯಾಕಾಶಕ್ಕೆ ತಲುಪಿದರೆ ಈ ವರೆಗೆ ಭಾರತ ಮೂಲದ ನಾಲ್ವರು ಇಂಥ ಸಾಧನೆ ಮಾಡಿದ ಕೀರ್ತಿಗೆ ಪಾತ್ರರಾಗುತ್ತಾರೆ. ಸಿರಿಶಾ ಬಾಹ್ಯಾಕಾಶ ಕನಸಿಗೆ ಪ್ರೇರಣೆಯಾದವರು ರಾಕೇಶ್‌ ಶರ್ಮಾ! 

ಬಾಹ್ಯಾಕಾಶಕ್ಕೆ ತೆರಳಲಿರುವ ವರ್ಜಿನ್‌ ಸಂಸ್ಥಾಪಕ ಸರ್‌ ರಿಚರ್ಡ್‌ ಬ್ರಾನ್ಸನ್‌ ನೇತೃತ್ವದ ತಂಡದಲ್ಲಿಒಟ್ಟು ಆರು ಜನರಿದ್ದು, ರಿಚರ್ಡ್‌ ಬ್ರಾನ್ಸ್‌ನ ಗಗನಯಾತ್ರಿ 001 ಆದರೆ ಸಿರಿಶಾ ಗಗನಯಾತ್ರಿ 004. ಇವರ ಜೊತೆಗೆ, ಮುಖ್ಯ ಗಗನಯಾತ್ರಿ ಬೆಥ್‌ ಮೋಸೆಸ್‌(ಗಗನಯಾತ್ರಿ 002), ಮುಖ್ಯ ಕಾರ್ಯಾಚರಣೆ ಎಂಜಿನಿಯರ್‌ ಕೊಲಿನ್‌ ಬೆನ್ನೆಟ್‌(ಗಗನಯಾತ್ರಿ 003) ಹಾಗೂ ಡೇವ್‌ ಮ್ಯಾಕೆ ಮತ್ತು ಮಸೂಚಿ ಇಬ್ಬರು ಪೈಲಟ್‌ಗಳಿದ್ದಾರೆ. ಈ ಆರು ಜನರನ್ನು ಹೊತ್ತ ವರ್ಜಿನ್‌ ಗ್ಯಾಲಕ್ಟಿಕ್‌ ವಿಎಸ್‌ಎಸ್‌ ಯೂನಿಟಿ ಗಗನ ನೌಕೆ  ಭಾನುವಾರ ನ್ಯೂ ಮೆಕ್ಸಿಕೊದಿಂದ ಬಾಹ್ಯಾಕಾಶಕ್ಕೆ ಪ್ರಯಾಣ ಆರಂಭಿಸಲಿದೆ. ಇದರಲ್ಲಿಕಂಪನಿಯ ಮಾಲೀಕ ಬ್ರಾನ್ಸನ್‌ ಅವರದ್ದು ‘ಗ್ರಾಹಕರ ಬಾಹ್ಯಾಕಾಶ ಹಾರಾಟದ ಅನುಭವವ ಮೌಲ್ಯಮಾಪನ’ ಮಾಡುವ ಜವಾಬ್ದಾರಿಯಾದರೆ, ಏರೋನಾಟಿಕಲ್‌ ಎಂಜಿನಿಯರ್‌ ಆಗಿರುವ ಸಿರಿಶಾ ಅವರದ್ದು ‘ಸಂಶೋಧಕರ ಅನುಭವ’ವನ್ನು ಕಟ್ಟಿಕೊಡುವ ಹೊಣೆಯನ್ನ ಹೊತ್ತುಕೊಡಿದ್ದಾರೆ. ಬೆಳಕಿನ ವೇಗಕ್ಕಿಂತಲೂ ಮೂರುವರೆ ಪಟ್ಟು ವೇಗದಲ್ಲಿಈ ಸ್ಪೇಸ್‌ ಪ್ಲೇನ್‌ ಹಾರಲಿದೆ. 

ಬ್ರಾನ್ಸ್‌ನ ಒಡೆತನದ ‘ವರ್ಜಿನ್‌ ಗ್ಯಾಲಕ್ಟಿಕ್‌’ನಲ್ಲಿ ಸರಕಾರಕ್ಕೆ ಸಂಬಂಧಿಸಿದ ವ್ಯವಹಾರ ವಿಭಾಗ ಮತ್ತು ಸಂಶೋಧನಾ ಕಾರ್ಯಚರಣೆಗಳ ವೈಸ್‌ ಪ್ರೆಸಿಡೆಂಟ್‌ ಆಗಿ ಕಾರ್ಯಧಿನಿರ್ವಧಿಹಿಸುತ್ತಿದ್ದಾರೆ.  ಆಂಧ್ರದ ಗುಂಟೂರು ಜಿಲ್ಲೆಧಿಯಲ್ಲಿ1988ರಲ್ಲಿಸಿರಿಶಾ ಜನಿಸಿದರು. ತಂದೆ ಕೃಷಿ ವಿಜ್ಞಾನಿ ಡಾ.ಮುರಳಿ, ತಾಯಿ ಅನುರಾಧಾ. ಸಿರಿಶಾಗೆ ನಾಲ್ಕು ವರ್ಷವಿದ್ದಾಗ ಅವರ ಕುಟುಂಬವು ಅಮೆರಿಕದ ಹೂಸ್ಟನ್‌, ಟೆಕ್ಸಾಸ್‌ಗೆ ಸ್ಥಳಾಂತಧಿರಗೊಂಡಿತು. ಸದ್ಯ ವಾಷಿಂಗ್ಟನ್‌ನಲ್ಲಿವಾಸವಾಗಿದ್ದಾರೆ. ಟೆಕ್ಸಾಸ್‌ನ ಸ್ಥಳೀಯ ಶಾಲೆಯಲ್ಲಿಶಿಕ್ಷ ಣ ಪೂರೈಸಿದ ಬಳಿಕ 2006ರಲ್ಲಿಸಿರಿಶಾ ಪರ್ಡೂ್ಯ ವಿವಿ ಸೇರಿದರು. ಏರೋನಾಟಿಕಲ್‌, ಏರೋ ಸ್ಪೇಸ್‌ ಮತ್ತು ಆಸ್ಟ್ರೋನಾಟಿಕಲ್‌ ಎಂಜಿನಿಧಿಯರಿಂಗ್‌ ಪದವಿಯನ್ನು 2011ರಲ್ಲಿಪಡೆದುಕೊಂಡರು. 2015ರಲ್ಲಿಜಾರ್ಜಿಯಾ ವಾಷಿಂಗ್ಟನ್‌ ವಿಶ್ವವಿದ್ಯಾಲಯದಿಂದ ಬಿಸಿನೆಸ್‌ ಅಡ್ಮಿನಿಸ್ಪ್ರೇಷನ್‌ನಲ್ಲಿಸ್ನಾತಕೋತ್ತರ ಪದವಿಯನ್ನು ಗಳಿಸಿಕೊಂಡರು. 

ಸಿರಿಶಾ ಅವರು ಶಿಕ್ಷ ಣದ ಜೊತೆ ಜತೆಗೆಯೇ 2012ರಲ್ಲಿಕಮರ್ಷಿಯಲ್‌ ಸ್ಪೇಸ್‌ಫ್ಲೈಟ್‌ ಫೆಡರೇಷನ್‌ನಲ್ಲಿಅಸೋಸಿಯೇಟ್‌ ಡೈರೆಕ್ಟರ್‌ ಆಗಿ ಮೂರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಬಹುಶಃ 2015ರ ನಂತರ ಅವರು ಕನಸು ಕೈಗೂಡುವ ದಿನಗಳ ಶುರುವಾದವು ಎನ್ನಬಹುದು! ಯಾಕೆಂದರೆ, 2015ರಲ್ಲಿಅವರು ವರ್ಜಿನ್‌ ಗ್ಯಾಲಕ್ಟಿಕ್‌ ಕಂಪನಿ ಸೇರಿ, 2020ರವರೆಗೂ ವ್ಯವಹಾರ ಅಭಿವೃದ್ಧಿ ಮತ್ತು ಸರಕಾರಿ ವ್ಯವಹಾರಗಳ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದರು. ಬಳಿಕ ಅವರು ವರ್ಜಿನ್‌ ಆರ್ಬಿಟ್‌ನಲ್ಲಿವಾಷಿಂಗ್ಟನ್‌ ಆಪರೇಷನ್‌ನ ಡೈರೆಕ್ಟರ್‌ ಆಗಿದ್ದರು. 

2021ರಿಂದ ಸಿರಿಶಾ ವರ್ಜಿನ್‌ ಗ್ಯಾಲಕ್ಟಿಕ್‌ನ ಸರಕಾರ ವ್ಯವಹಾರಗಳ ಉಪಾಧ್ಯಕ್ಷ ರಾಗಿ ಬಡ್ತಿ ಪಡೆದುಕೊಂಡರು. ವರ್ಜಿನ್‌ ಗ್ಯಾಲಕ್ಟಿಕ್‌ ಎನ್ನುವುದು ರಿಚರ್ಡ್‌ ಬ್ರಾನ್ಸನ್‌ ಅವರು ಸ್ಥಾಪಿಸಿದ ಅಮೆರಿಕನ್‌ ಸ್ಪೇಸ್‌ಕ್ರಾಫ್ಟ್‌ ಕಂಪನಿಯಾಗಿದೆ. ಬಾಹ್ಯಾಕಾಶ ಪ್ರವಾಸೋದ್ಯಮ ಹಿನ್ನೆಲೆಯಲ್ಲಿವರ್ಜನ್‌ ಕಂಪನಿ ಕೈಗೊಂಡಿರುವ ಬಾಹ್ಯಾಕಾಶದಂಚಿನ ಪಯಣವು ಮೈಲುಗಲ್ಲಾಗಲಿದೆ. ಆ ಐತಿಹಾಸಿಕ ಪ್ರಯತ್ನದಲ್ಲಿಭಾರತೀಯ ಸಂಜಾತೆಯೊಬ್ಬಳು ಭಾಗಿಯಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. 

ಭೂಮಿಯಿಂದ ಮೂರು ಲಕ್ಷ  ಅಡಿ ಎತ್ತರದಲ್ಲಿಹಾರಾಟ ನಡೆಸಲಿರುವ ಸಿರಿಶಾಗೆ ಅಮ್ಮ ಮಾಡುವ ಊಟ ತಂಬ ಇಷ್ಟ. ಹಾಗಂತಲೇ ಅವರ ತಾಯಿ, ಫೇವರಿಟ್‌ ಮಟನ್‌ ಬಿರಿಯಾನಿ ಮಾಡಿಕೊಂಡು ಬಂದಿಧಿದ್ದರಂತೆ. ಅವರಿಗೆ ಆಂಧ್ರದ ವಿಶಿಷ್ಟ ‘ಪಪ್ಪು’(ಅನ್ನ) ತುಂಬ ಇಷ್ಟ. ಬಾಹ್ಯಾಕಾಶದಿಂದ ಮರಳಿದ ಬಳಿಕ ಅಮ್ಮನ ಕೈಯಿಂದ ಮಾಡಿದ ‘ಪಪ್ಪು’ ತಿನ್ನವ ಬಯಕೆಯನ್ಯೂ ಹೊಂದಿದ್ದಾರೆ.

ರಿಚರ್ಡ್‌  ಬ್ರಾನ್ಸನ್‌ ಬಳಿಕ ಅಮೆಜಾನ್‌ ಸಂಸ್ಥಾಪಕ ಜೆಫ್‌ ಬೆಜೂಸ್‌ ಕೂಡ ಜುಲೈ 20ರಂದು ಬ್ಲೂಒರಿಜಿನ್‌ ಕಂಪನಿಯ ನ್ಯೂ ಶೇಪರ್ಡ್‌ ಮೂಲಕ ಬಾಹ್ಯಾಕಾಶ ಯಾನ ಕೈಗೊಳ್ಳಲಿದ್ದಾರೆ. ಜಗತ್ತಿನ ಇಬ್ಬರು ಶ್ರೀಮಂತ ಉದ್ದಿಮೆದಾರರು ನಡೆಸುತ್ತಿರುವ ಈ ಯಾನವು ಮುಂಬರುವ ದಿನಗಳಲ್ಲಿಹೊಸ ‘ಉದ್ಯಮ ಸ್ಥಾಪನೆ’ಗೂ ಕಾರಣವಾಗಬಹುದು!

ಈ ಎಲ್ಲಕಾರಣಗಳಿಂದಾಗಿಯೇ ಖಾಸಗಿ ಬಾಹ್ಯಾಕಾಶ ಯಾನ ಹೆಚ್ಚು ಚರ್ಚಿತವಾಗುತ್ತಿದೆ ಮತ್ತು ಅಂಥ ಒಂದು ಪ್ರಯತ್ನದಲ್ಲಿಭಾರತ ಸಂಜಾತೆ ಸಿರಿಶಾ ಭಾಗಿಯಾಗುತ್ತಿದ್ದಾರೆ. ಬಾಹ್ಯಾಕಾಶಕ್ಕೆ ತೆರಳುತ್ತಿರುವ ಸಿರಿಶಾ, ತನ್ನೊಂದಿಗೆ ಭಾರತವನ್ನು ಎತ್ತರಕ್ಕೆ ಕೊಂಡೊಯ್ಯುವ ಹೆಮ್ಮೆಯ  ಭಾವ ಹೊಂದಿದ್ದಾರೆ. ಇದನ್ನು ಅವರು ಸ್ವತಃ ಹೇಳಿಕೊಂಡಿದ್ದಾರೆ ಕೂಡ, ‘‘ನಾನು ಸ್ವಲ್ಪ ಭಾರತವನ್ನು ನನ್ನೊಂದಿಗೆ ಕರೆದೊಯ್ಯುತ್ತಿದ್ದೇನೆ ಎಂದು ನನಗೆ ಅನಿಸುತ್ತದೆ’’ ಎಂದು ಹೇಳಿಕೊಂಡಿದ್ದಾರೆ. 

ಬಾಹ್ಯಾಕಾಶದ ಗೀಳಿನ ಹೊರತಾಗಿಯೂ ಸಿರಿಶಾ ಹಲವು ವಿಷಯಗಳಲ್ಲಿವಿಶಿಷ್ಟ ಆಸಕ್ತಿಗಳನ್ನು ಬೆಳೆಸಿಕೊಂಡಿದ್ದಾರೆ. ಹೊಸ ಹೊಸ ಸಂಗತಿಗಳಿಗೆ ಬಹಳ ಬೇಗ ಆಕರ್ಷಿತವಾಗಿವ ಅವರಿಗೆ ಬೋಟಿಂಗ್‌ ಮಾಡುವುದು ತುಂಬ ಇಷ್ಟ. ಇದರ ಜತೆಗೆ ಬಾಸ್ಕೆಟ್‌ಬಾಲ್‌ ಆಟವನ್ನು ನೋಡುವುದು ತುಂಬ ಎಂಜಾಯ್‌ ಮಾಡುತ್ತಾರೆ. ಬೆಕ್ಕು ಮತ್ತು ನಾಯಿ ಅಕ್ಕರೆ ಸಂಗಾತಿಗಳು. ನೆಚ್ಚಿನ ನಾಯಿ ‘ಚಾನ್ಸ್‌’ ಅವರ ಜೀವನದ ಭಾಗವೇ ಆಗಿದೆ. ಸಹೋದರಿ ಹಾಗೂ ಕುಟುಂಬದ ಸದಸ್ಯರೊಂದಿಗೆ ಎಲ್ಲಹಬ್ಬಗಳನ್ನು ಆಚರಿಸುತ್ತಾರೆ. ಪ್ರವಾಸವನ್ನು ಹೆಚ್ಚಿಗೆ ಇಷ್ಟ ಪಡುವ ಸಿರಿಶಾ ಭಾರತವು ಸೇರಿದಂತೆ ಹಲವು ದೇಶಗಳನ್ನು ಸುತ್ತಿ ವಿಶಿಷ್ಟ ಅನುಭವವನ್ನು ಪಡೆದುಕೊಂಡಿದ್ದಾರೆ. 

ರಿಚರ್ಡ್‌ ಬ್ರಾನ್ಸನ್‌ ತಂಡದೊಂದಿಗೆ ಸಿರಿಶಾ ಬಾಂಡ್ಲಾ ಕೈಗೊಳ್ಳುತ್ತಿರುವ ಬಾಹ್ಯಾಕಾಶ ಯಾನ ಇತಿಹಾಸ ಸೃಷ್ಟಿಸುವುದು ಖಚಿತ. ಜೊತೆಗೆ, ಏನಾದರೂ ಹೊಸದನ್ನು ಮಾಡುವ ಹುಮ್ಮಸ್ಸು ಹೊಂದಿರುವ, ಜಗತ್ತಿನ ಪ್ರತಿಭಾವಂತ ಅಸಂಖ್ಯ ಹೆಣ್ಣುಮಕ್ಕಳಿಗೆ ಸಿರಿಶಾ ಅವರ ಈ ಜರ್ನಿ ಹುರುಪು ತುಂಬಲಿದೆ; ಕನಸುಗಳನ್ನು ಕಾಣಲು ದಾರಿ ಮಾಡಿಕೊಡಲಿದೆ. ಅಂಥದೊಂದು ಪ್ರೇರಣೆಗೆ ಕಾರಣವಾಧಿಗುತ್ತಿರುವ ಸಿರಿಶಾ ಬಾಹ್ಯಾಕಾಶ ಪಯಣಕ್ಕೆ ಗುಡ್‌ಲಕ್‌ ಹೇಳೋಣ.


ಈ ಲೇಖನವು ವಿಜಯ ಕರ್ನಾಟಕದ 2021 ಜುಲೈ 10 ಸಂಚಿಕೆಯಲ್ಲಿ ಪ್ರಕಟವಾಗಿದೆ



ಸೋಮವಾರ, ಜೂನ್ 14, 2021

Sunil Chhetri overtakes Lionel Messi - ಕಾಲ್ಚೆಂಡು ಮಾಂತ್ರಿಕ ಸುನಿಲ್‌ ಛೆತ್ರಿ

ರಾಷ್ಟ್ರೀಯ ಫುಟ್ಬಾಲ್‌ ತಂಡದ ನಾಯಕ ಸುನಿಲ್‌ , ಅಂತಾರಾಷ್ಟ್ರೀಯ ಸಕ್ರಿಯ ಫುಟ್ಬಾಲಿಗರ ಪೈಕಿ ಅತಿ ಹೆಚ್ಚು ‘ಗೋಲ್‌’ ಬಾರಿಸಿದವರ ಪಟ್ಟಿಯಲ್ಲಿಮೆಸ್ಸಿಯನ್ನೇ ಮೀರಿಸಿದ್ದಾರೆ!


ಮಲ್ಲಿಕಾರ್ಜುನ ತಿಪ್ಪಾರ
ಆರಾಧಿಸುವ ವ್ಯಕ್ತಿಯ ಸಾಧನೆಯನ್ನು ನೀವೇ ಹಿಂದಿಕ್ಕಿ ಮುನ್ನಡೆದರೆ ಆಗ ಆಗುವ ಆನಂದವನ್ನು ಅಭಿವ್ಯಕ್ತಿಸಲಾದೀತೆ? ಏನಿದ್ದರೂ ಆ ಅನುಭವವನ್ನು ಅನುಭವಿಸಬೇಕಷ್ಟೇ. ಇಂಥದ್ದೇ ಮನಸ್ಥಿತಿಯಲ್ಲಿದ್ದಾರೆ ಭಾರತೀಯ ಫುಟ್ಬಾಲ್‌ ತಂಡದ ನಾಯಕ ಸುನಿಲ್‌ ಛೆತ್ರಿ. 

‘ಜಗತ್ತಿನ ಸಾರ್ವಕಾಲಿಕ  ಶ್ರೇಷ್ಠ ಫುಟ್ಬಾಲಿಗ’ ಎಂದು ಗುರುತಿಸಿಕೊಳ್ಳುತ್ತಿ­ರುವ ಅರ್ಜೆಂಟೀನಾದ ಆಟಗಾರ ಲಿಯೋನೆಲ್‌ ಮೆಸ್ಸಿ ಸಾಧನೆಯನ್ನು ನಮ್ಮ ಸುನಿಲ್‌ ಹಿಂದಿಕ್ಕಿದ್ದಾರೆ. ಸಕ್ರಿಯ ಫುಟ್ಬಾಲ್‌ ಆಟಗಾರರ ಪೈಕಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಗೋಲ್‌ಗಳನ್ನು ಗಳಿಸಿದವರು ಪಟ್ಟಿಯಲ್ಲಿಪೋರ್ಚುಗಲ್‌ ಫುಟ್ಬಾಲ್‌ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ(103) ಅಗ್ರ ಸ್ಥಾನದಲ್ಲಿದ್ದರೆ, ಲಿಯೋನೆಲ್‌ ಮೆಸ್ಸಿ 72 ಗೋಲುಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರು. ಈಗ ಭಾರತದ ಸುನಿಲ್‌ ಬಾಂಗ್ಲಾದೇಶದ ವಿರುದ್ಧ ಏಷ್ಯಾ ಕಪ್‌ ಅರ್ಹತಾ ಸುತ್ತಿನ ಪಂದ್ಯದಲ್ಲಿ2 ಗೋಲು ಬಾರಿಸಿ, ತಮ್ಮ ಗೋಲುಗಳ ಸಂಖ್ಯೆಯನ್ನು 74ಕ್ಕೆ ಹೆಚ್ಚಿಸಿಕೊಂಡು, ಮೆಸ್ಸಿ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈವರೆಗೆ ಅವರು 117 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

ಅಂತಾರಾಷ್ಟ್ರೀಯ ಗೋಲುಗಳ ಪಟ್ಟಿಯಲ್ಲಿಮೆಸ್ಸಿಯನ್ನು ಅವರು ಹಿಂದೆ ಹಾಕುತ್ತಿದ್ದಂತೆ, ಮೆಸ್ಸಿಗಿಂತ ಯೇ ಶ್ರೇಷ್ಠ ಎಂಬ ವಾದ ಸೋಷಿಯಲ್‌ ಮೀಡಿಯಾಗಳಲ್ಲಿಜೋರಾಗಿತ್ತು. ಇದಕ್ಕೆಲ್ಲಉತ್ತರ ನೀಡಿರುವ ಸುನಿಲ್‌, ‘‘ಮೆಸ್ಸಿಯ ಅಸಂಖ್ಯ ಅಭಿಮಾನಿಗಳಲ್ಲಿನಾನೂ ಒಬ್ಬ. ನನ್ನ ಮತ್ತು ಅವರ(ಮೆಸ್ಸಿ) ಮಧ್ಯೆ ಹೋಲಿಕೆ ಸರಿ­ಯಲ್ಲ,’’ ಎಂದಿದ್ದಾರೆ. ‘‘ಲಿಯೋನೆಲ್‌ ಮೆಸ್ಸಿ­ಯನ್ನು ಭೇಟಿ ಮಾಡುವ ಅವಕಾಶ ಸಿಕ್ಕರೆ, ಕೈ ಕುಲುಕಿ ನಾನು ನಿಮ್ಮ ದೊಡ್ಡ ಅಭಿಮಾನಿ ಎಂದು ಹೇಳುವೆ,’’ ಎನ್ನುವ ಅವರಿಗೆ ಅದು ಪಕ್ಕಾ ಫ್ಯಾನ್‌ಬಾಯ್‌ ಮೊಮೆಂಟ್‌!

ಕ್ರಿಕೆಟ್‌ನ್ನೇ ಉಸಿರಾಡುವ ಭಾರತದಂಥ ರಾಷ್ಟ್ರದಲ್ಲಿಫುಟ್ಬಾಲ್‌ ಆಟಗಾರರೊಬ್ಬರ ಈ ಸಾಧನೆಗೆ ಹೆಚ್ಚಿನ ಮಹತ್ವವಿದೆ. ಕ್ರಿಕೆಟ್‌ನ ಅಬ್ಬರದಲ್ಲಿಫುಟ್ಬಾಲ್‌ ಸೇರಿದಂತೆ ಇತರ ಆಟಗಳಿಗೆ ಪ್ರಾಧಾನ್ಯ, ಪ್ರಾಯೋಜಕತ್ವ ಸಿಗು­ವುದು ಕಷ್ಟ. ಹಾಗಿದ್ದೂ, ಹಲವು ಗುಂಪು ಆಟಗಾರರು ಮತ್ತು ಅಥ್ಲೀಟ್‌ಗಳು ದೇಶದ ಕೀರ್ತಿಯನ್ನು ಆಗಾಗ ಗಗನಕ್ಕೆ ಏರಿಸುತ್ತಲೇ ಇರುತ್ತಾರೆ. ಅಂಥ ಅಭಿಮಾನದ ಕ್ಷ ಣಕ್ಕೆ ಸುನಿಲ್‌ ಈಗ ಕಾರಣವಾಗಿದ್ದಾರೆ.

ದಂತಕತೆ ಬೈಚುಂಗ್‌ ಭುಟಿಯಾ ಬಳಿಕ ಸುನಿಲ್‌ ಛೆತ್ರಿ ಭಾರತೀಯ ಫುಟ್ಬಾಲ್‌ ನೊಗವನ್ನು ಸಮರ್ಥವಾಗಿ ಎಳೆಯುತ್ತಿದ್ದಾರೆ. ಇಂಡಿಯನ್‌ ಸೂಪರ್‌ ಲೀಗ್‌(ಐಸಿಎಲ್‌)ನಲ್ಲಿಬೆಂಗಳೂರು ಫುಟ್ಬಾಲ್‌ ಕ್ಲಬ್‌(ಬಿಎಫ್‌ಸಿ) ಪರವಾಗಿಯೂ ಆಡುತ್ತಿರುವ  ‘ಕ್ಯಾಪ್ಟನ್‌ ಫೆಂಟಾಸ್ಟಿಕ್‌’ ಸುನೀಲ್‌ ಛೆತ್ರಿ ಹುಟ್ಟಿದ್ದು ಈಗಿನ ತೆಲಂಗಾಣದ ಸಿಕಂದರಾಬಾದ್‌ನಲ್ಲಿ1984ರ ಆಗಸ್ಟ್‌ 3ರಂದು. ತಂದೆ ಕೆ.ಬಿ.ಛೆತ್ರಿ, ತಾಯಿ ಸುಶೀಲಾ. ತಂದೆ ಭಾರತೀಯ ಸೇನೆಯಲ್ಲಿಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಮೆಕಾನಿಕಲ್‌ ಎಂಜಿನಿಯರ್‌ ಅಧಿಕಾರಿ. ಸುನಿಲ್‌ ಅವರು ತಂದೆ ಅವರೂ ಭಾರತೀಯ ಸೇನೆಯ ಪರವಾಗಿ ಫುಟ್ಬಾಲ್‌ ಆಡಿದ್ದಾರೆ. ತಾಯಿ ಸುಶೀಲಾ ಹಾಗೂ ಅವರ ಇಬ್ಬರು ಅವಳಿ ಸಹೋದರಿಯರು ನೇಪಾಳದ ಮಹಿಳಾ ರಾಷ್ಟ್ರೀಯ ಫುಟ್ಬಾಲ್‌ ತಂಡಕ್ಕೆ ಆಡುತ್ತಿದ್ದರು. ತಂದೆ ತಾಯಿ ಇಬ್ಬರೂ ಫುಟ್ಬಾಲ್‌ ಆಟಗಾರರು; ಸುನಿಲ್‌ಗೆ ಫುಟ್ಬಾಲ್‌ ರಕ್ತಗತ.

ತಂದೆ ಸೇನೆಯಲ್ಲಿಅಧಿಕಾರಿಯಾಗಿದ್ದರಿಂದಾಗಿ ಸುನಿಲ್‌ ಶಾಲಾ ಶಿಕ್ಷ ಣ ಒಂದೇ ರಾಜ್ಯಕ್ಕೆ ಸಿಮೀತವಾಗಲಿಲ್ಲ. ಸಿಕ್ಕಿಮ್‌ನ ಗ್ಯಾಂಗ್ಟಕ್‌ನ ಬಹಾಯಿ ಸ್ಕೂಲ್‌, ಪಶ್ಚಿಮ ಬಂಗಾಳದ ಡಾರ್ಜೀಲಿಂಗ್‌ ಬೆತ್ನೀಸ್‌ ಸ್ಕೂಲ್‌, ಕೋಲ್ಕೊತಾದ ಲೊಯೊಲಾ ಸ್ಕೂಲ್‌ ಮತ್ತು ದಿಲ್ಲಿಯ ಆರ್ಮಿ ಪಬ್ಲಿಕ್‌ ಸ್ಕೂಲ್‌ನಲ್ಲಿಶಾಲಾ ಶಿಕ್ಷ ಣವನ್ನು ಪೂರೈಸಿದ್ದಾರೆ. ಕೋಲ್ಕೊತಾದ ಅಶುತೋಷ ಕಾಲೇಜ್‌ನಲ್ಲಿಪ್ರವೇಶ ಪಡೆದು, 12ನೇ ತರಗತಿಯಲ್ಲಿಓದುತ್ತಿದ್ದಾಗಲೇ 2001ರಲ್ಲಿಮಲೇಷ್ಯಾದಲ್ಲಿಆಯೋಜಿಸಲಾಗಿದ್ದ ಏಷ್ಯನ್‌ ಸ್ಕೂಲ್‌ ಚಾಂಪಿಯನ್‌ಶಿಪ್‌ಗೆ ಭಾರತೀಯ ತಂಡಧಿವನ್ನು ಪ್ರತಿನಿಧಿಸುವ ಅವಕಾಶ ಒದಗಿ ಬಂತು. ಕಾಲೇಜು ಶಿಕ್ಷ ಣಧಿಧಿಧಿವನ್ನು ಅರ್ಧಕ್ಕೆ ಮೊಟಕುಧಿಗೊಳಿಸಧಿಬೇಕಾ­ಧಿಯಿತು. ಮುಂದಿನ ನಾಲ್ಕೈದು ವರ್ಷದಲ್ಲಿಅವರು ಭಾರತೀಯ ರಾಷ್ಟ್ರೀಯ ಫುಟ್ಬಾಲ್‌ ತಂಡಕ್ಕೆ ಪ್ರವೇಶ ಪಡೆದರು. ನಂತರ ನಡೆದಿದ್ದೆಲ್ಲಇತಿಹಾಸ.

ಸುನಿಲ್‌ ತಮ್ಮ ಬಹುಕಾಲದ ಗೆಳತಿ ಸೋನಂ ಭಟ್ಟಾಚಾರ್ಯ ಅವರನ್ನು 2017ರಲ್ಲಿಮದುವೆಯಾದರು. ಈ ಸೋನಮ್‌ ಬೇರೆ ಯಾರೂ ಅಲ್ಲ. ರಾಷ್ಟ್ರೀಯ ಫುಟ್ಬಾಲ್‌ ತಂಡದ ಮಾಜಿ ಆಟಗಾರ, ಮೋಹನ್‌ ಬಗಾನ್‌ ತಂಡದ ದಂತಕತೆ ಸುಬ್ರತ ಭಟ್ಟಾಚಾರ್ಯ ಅವರ ಪುತ್ರಿ. ಇವರು ಛೆತ್ರಿ ಮೆಂಟರ್‌ ಕೂಡ. ಸುನಿಲ್‌ ಅವರ ಆಟ ಹಾಗೂ ವ್ಯಕ್ತಿತ್ವದ ಮೇಲೆ ಅವರ ತಾಯಿ ದಟ್ಟ ಪ್ರಭಾವ ಬೀರಿದ್ದಾರೆಂಬುದು ಅವರ ಮಾತುಗಳನ್ನು ಕೇಳಿದರೆ ಅರಿವಾ­ಗುತ್ತದೆ. ‘‘ಆಟದ ಬಗ್ಗೆ ಹೇಳುವುದಾದರೆ ಅದು ನನ್ನ ತಂದೆ, ತಾಯಿಂದಲೇ ಆರಂಭವಾಗುತ್ತದೆ, ವಿಶೇಷವಾಗಿ ನನ್ನ ತಾಯಿ. ತಾಯಿಯೊಂದಿಗೆ ಕೇರಂ, ಚೆಸ್‌, ಚೀನೀಸ್‌ ಚೆಕರ್ಸ್‌ ಮತ್ತು ಇತರ ಹೊರಾಂಗಣ ಕ್ರೀಡೆಗಳನ್ನು ಆಡುವುದು ತೀರಾ ಸಾಮಾನ್ಯವಾಗಿತ್ತು. ನನಗೆ 13 ವರ್ಷವಾಗೋವರೆಗೂ ಈ ಯಾವುದೇ ಆಟದಲ್ಲೂನನ್ನ ತಾಯಿಯನ್ನು ಸೋಲಿಸಲು ನನ್ನಿಂದಾ­ಗಲಿಲ್ಲ. ಅವರೂ ಎಂದು ಸೋಲಲು ಒಪ್ಪುತ್ತಿರಲಿಲ್ಲ. ಸೋಲು ಒಪ್ಪಿಕೊಳ್ಳ­ದಿರುವ ಗುಣ ನನ್ನ ತಾಯಿಯಿಂದಲೇ ಬಂದಿದೆ ನನಗೂ ಬಂದಿದೆ,’’  ಎನ್ನುತ್ತಾರೆ ಅವರು. ಬೈಚುಂಗ್‌ ಭುಟಿಯಾ ಅವರಿಂದಲೂ ಸಾಕಷ್ಟು ಕಲಿತಿದ್ದೇನೆ. ಅವರ ಸರಳ ವ್ಯಕ್ತಿತ್ವ ತುಂಬಾ ಇಷ್ಟ ಎನ್ನುತ್ತಾರೆ ಅವರು.

ರಾಷ್ಟ್ರೀಯ ತಂಡದ ಪರವಾಗಿ ಅತಿ ಹೆಚ್ಚು ಪಂದ್ಯಗಳು ಹಾಗೂ ಗೋಲು ಬಾರಿಸಿರುವ ದಾಖಲೆಯನ್ನು ಹೊಂದಿರುವ ಸುನಿಲ್‌ಅವರು ತಮ್ಮ ವೃತ್ತಿಪರ ಫುಟ್ಬಾಲ್‌ ಆಟವನ್ನು 2002ರಲ್ಲಿಏಷ್ಯಾದ ಹಳೆಯ ಕ್ಲಬ್‌ಗಳಲ್ಲಿಒಂದಾಗಿರುವ ಮೋಹನ್‌ ಬಗಾನ್‌ ಕ್ಲಬ್‌ನೊಂದಿಗೆ ಆರಂಭಿಸಿಧಿದರು. ಬಳಿಕ ಜೆಸಿಟಿ ಕ್ಲಬ್‌ಗೆ ವಲಸೆ ಬಂದು, 48 ಪಂದ್ಯಗಳಲ್ಲಿ21 ಗೋಲು ಬಾರಿಸಿ ಗಮನ ಸೆಳೆದರು. 2010ರಲ್ಲಿಮೇಜರ್‌ ಲೀಗ್‌ ಸಾಕರ್‌ನಲ್ಲಿಕನ್ಸಾಸ್‌ ಸಿಟಿ ವಿಜಾರ್ಡ್ಸ್‌ನೊಂದಿಗೆ ಗುರುಧಿತಿಸಿಧಿಕೊಂಡರು. ಈ ಮೂಲಕ ವಿದೇಶದ ಕ್ಲಬ್‌ ಪರವಾಗಿ ಆಟವಾಡಿದ ಭಾರತೀಯ ಉಪಖಂಡದ ಮೂರನೇ ಆಟಗಾರ ಎನಿಸಿಕೊಂಡರು. ಅಲ್ಲಿಂದ ಹಿಂದಿರುಗಿದ ಬಳಿಕ ಚಿರಾಗ್‌ ಯುನೈಟೆಡ್‌, ಮೋಹನ್‌ ಬಗಾನ್‌ ಪರವಾಗಿ ಐ ಲೀಗ್‌ನಲ್ಲಿಆಡಿದರು. ಮತ್ತೆ ವಿದೇಶಕ್ಕೆ ತೆರಳಿ ಪೋರ್ಚುಗಲ್‌ನ ಸ್ಪೋರ್ಟಿಂಗ್‌ ಕ್ಲಬ್‌ ಸೇರಿದರು. 2005ರಲ್ಲಿಭಾರತೀಯ ರಾಷ್ಟ್ರೀಯ ಫುಟ್ಬಾಲ್‌ ತಂಡವನ್ನು ಸೇರಿ, ತಮ್ಮ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಿದರು. ಈ ಪಂದ್ಯದಲ್ಲಿಅವರು ತಮ್ಮ ಮೊದಲ ಅಂತಾರಾಷ್ಟ್ರೀಯ ಗೋಲು ಹೊಡೆದರು.

ಸುನಿಲ್‌ ಛೆತ್ರಿ ಅವರ ನೆರವಿನಿಂದಾಗಿ ಭಾರತ ತಂಡವು 2007, 2009 ಮತ್ತು 2012ರಲ್ಲಿನೆಹರು ಕಪ್‌ ಮತ್ತು 2011ರ ಎಸ್‌ಎಎಫ್‌ಎಫ್‌ ಚಾಂಪಿ­ಯನ್‌ಶಿಪ್‌ ಗೆದ್ದುಕೊಂಡಿತು. 2008ರ ಏಷ್ಯನ್‌ ಫುಟ್ಬಾಲ್‌ ಕಾನೆಧಿಡೆರಷನ್‌(ಎಎಫ್‌ಸಿ) ಚಾಲೆಂಜ್‌ ಕಪ್‌ ಗೆಲ್ಲುವಲ್ಲಿಯೂ ಅವರ ಪಾತ್ರ ಮಹತ್ವ­ದ್ದಾಗಿತ್ತು. ಈ ಗೆಲುವಿನಿಂದಾಗಿಯೇ ಭಾರತವು 27 ವರ್ಷಗಳ ಬಳಿಕ ಎಎಫ್‌ಸಿ ಏಷ್ಯನ್‌ ಕಪ್‌ ಪಂದ್ಯಾವಳಿಯಲ್ಲಿಆಡಲು ಅರ್ಹತೆ ಪಡೆದು­ಕೊಂಡಿತು. 2007, 2011, 2013, 2014, 2017 ಮತ್ತು 2019 ಹೀಗೆ ದಾಖಲೆಯ ಆರು ಬಾರಿ ಎಐಎಫ್‌ಎಫ್‌(ಆಲ್‌ ಇಂಡಿಯಾ ಫುಟ್ಬಾಲ್‌ ಫೆಡರೆಷನ್‌) ವರ್ಷದ ಆಟಗಾರ ಎಂದು ಅವರನ್ನು ಹೆಸರಿಸಲಾಗಿದೆ. 2014ರಲ್ಲಿಇವರ ನೇತೃತ್ವದಲ್ಲಿಬೆಂಗಳೂರು ಫುಟ್ಬಾಲ್‌ ಕ್ಲಬ್‌ ಚೊಚ್ಚಿಲ ಋುತುವಿನಲ್ಲಿಪ್ರಶಸ್ತಿ ಗೆದ್ದುಕೊಂಡಿತು.

ಭಾರತದಲ್ಲಿಕ್ರಿಕೆಟ್‌ ನಂತರ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆಟ ಫುಟ್ಬಾಲ್‌. 36 ವರ್ಷದ ಸುನಿಲ್‌  ಭಾರಧಿತೀಯ ಫುಟ್ಬಾಲ್‌ ತಂಡದ ಧ್ರುವತಾರೆ. ಹೊಸ ಪೀಳಿಗೆಯ ಆಟಗಾರರಿಗೆ ಅವರು ರೋಲ್‌ಮಾಡೆಲ್‌. ಭಾರತದ ಕ್ರೀಡಾಕ್ಷೇತ್ರದ ಪ್ರಮುಖ ಪ್ರಶಸ್ತಿ ಅರ್ಜುನ್‌ ಅವಾರ್ಡ್‌ಧಿ (2011), ದೇಶದ ನಾಲ್ಕನೇ ಅತ್ಯುಚ್ಚ ನಾಗರಿಕ ಪ್ರಶಸ್ತಿ ಪದ್ಮಶ್ರೀ ಮತ್ತು ದಿಲ್ಲಿಫುಟ್ಬಾಲ್‌ ಅಸೋಷಿಯೇಷನ್‌ನ ಫುಟ್ಬಾಲ್‌ ರತ್ನ ಅವಾರ್ಡ್‌  ಸಾಧನೆಯ ಕಿರೀಟಧಿವನ್ನು ಅಲಂಕರಿಸಿವೆ. ಶಾರುಖ್‌ ಖಾನ್‌ ಮತ್ತು ಸಚಿನ್‌ ತೆಂಡೂಲ್ಕರ್‌ ಅವರನ್ನು ಇಷ್ಟಪಡುವ ಅವರಿಗೆ ಸಂಗೀತ ಕೇಳುವುದು ಸಿಕ್ಕಾಪಟ್ಟೆ ಇಷ್ಟ. ಹಾಬಿಯಾಗಿ ಕ್ರಿಕೆಟ್‌, ಬ್ಯಾಡ್ಮಿಂಟ್‌, ಟೆನ್ನಿಸ್‌ ಕೂಡ ಆಡುತ್ತಾರೆ. ಬೆಂಗಳೂರು ಎಫ್‌ಸಿ ಮೂಲಕ  ಅವರು ಕನ್ನಡ ನಾಡಿಗೆ ಇನ್ನಷ್ಟು ಹತ್ತಿರವಾಗಿದ್ದೆರಂಬುದೂ ನಮಗೆ ಹೆಮ್ಮೆಯೇ ಸರಿ.


ಈ ಲೇಖನವು ವಿಜಯ ಕರ್ನಾಟಕ ಪತ್ರಿಕೆಯ 2021ರ ಜೂನ್ 13ರ ಸಂಚಿಕೆಯಲ್ಲಿ ಪ್ರಕಟವಾಗಿದೆ.


ಶನಿವಾರ, ಜೂನ್ 12, 2021

Dr siddalingaiah- 'ಊರು ಕೇರಿ' ಬಿಟ್ಟು ನಡೆದ ಕವಿ ಸಿದ್ದಲಿಂಗಯ್ಯ

 ಕವಿ ಡಾ. ಸಿದ್ದಲಿಂಗಯ್ಯ ನಿಧನದಿಂದಾಗಿ ನಮ್ಮ ನೆಲದ ಹೋರಾಟದ, ಸಾಂಸ್ಕೃತಿಕ ಚಿಂತನೆಯ ದೊಡ್ಡದೊಂದು ಸತ್ವ ನಮ್ಮೊಳಗಿಂದ ಕಳೆದುಹೋದ ಭಾವ. ನಾಡಿನೆಲ್ಲೆಡೆ ದಲಿತ ಪ್ರಜ್ಞೆ ವಿಸ್ತರಿಸಿ, ಸಾಮೂದಾಯಿಕ ಜಾಗೃತಿಯನ್ನು ತಮ್ಮ ಬಂಡಾಯ ಭಾವದ ಕವಿತೆಗಳ ಮೂಲಕವೇ ಇವರು ಅಭಿವ್ಯಕ್ತಿಸಿದ್ದರು. ಇವರ ಬರಹ, ಹೋರಾಟಗಳೆಲ್ಲವೂ ಅನುಕರಣೀಯ, ದಾರಿದೀಪ.


ಡಾ.  ಸಿದ್ದಲಿಂಗಯ್ಯ ಅವರು ದಲಿತ ಸಮುದಾಯದ ಒಳಬೇಗುದಿ, ನೋವು, ಶೋಷಣೆ, ಅಪಮಾನ, ಮಡುಗಟ್ಟಿದ ಆಕ್ರೋಶವನ್ನು ಅಭಿವ್ಯಕ್ತಿಸಲು ಬಳಸಿದ ಪದಗಳು ನಿಗಿ ನಿಗಿ ಕೆಂಡ. ಅವು ಅಷ್ಟೇ ಆಗಿದ್ದರೆ, ವ್ಯಕ್ತಿಗತ ಆಕ್ರೋಶದ ನುಡಿಗಳಾ ಗಿರುತ್ತಿದ್ದವು; ಹಾಗಾಗಲಿಲ್ಲ. ಬಂಡಾಯ, ಪ್ರತಿಭಟನೆಯ ಸತ್ವ ದೊಂದಿಗೆ ಸಾಹಿತ್ಯಿಕ ಗುಣ ಅವರ ಕವಿತೆಗಳಲ್ಲಿದ್ದುದರಿಂದ ಸಾರ್ವತ್ರಿಕ ಎನಿಸಿಕೊಂಡವು. 

ಅವರ ಪ್ರಸಿದ್ಧ ಕವಿತೆ ‘ಇಕ್ರಲಾ ವದೀರ್ಲಾ...’ ಸಾಲುಗಳು ಮೇಲ್ನೋಟಕ್ಕೆ ರೋಷವನ್ನು ಅಭಿವ್ಯಕ್ತಿಸಿದರೂ ಆಳದಲ್ಲಿನೋವಿನ ನುಡಿಗಳೇ ಆಗಿವೆ. ನೋವು ಮತ್ತು ಆಕ್ರೋಶದ ಮೂಲಕವೇ ಅಭಿಧಿಧಿವ್ಯಕ್ತಿಯ ದಾರಿಯನ್ನು ಕಂಡುಕೊಂಡವರು ಅವರು. 

ಬರೆದ ಪ್ರತಿ ಕವಿತೆಯೂ, ಪ್ರತಿ ಪದವೂ ಸ್ವರೂಪದಲ್ಲಿಬಂಡಾಯವನ್ನು ಪ್ರತಿನಿಧಿಸುತ್ತವೆ. ಅವರು ಸಾಹಿತ್ಯ ಕೃಷಿ ಆರಂಭಿಸಿದ ಕಾಲದ ಸಂದರ್ಭವು ಕಾವ್ಯಕ್ಕೆ ಸೂಧಿರ್ತಿಯಾಗಿತ್ತು. ಡಾ. ಸಿದ್ದಲಿಂಗಯ್ಯ ಅವರು ತಮ್ಮ ಕವಿತೆ, ನಾಟಕ, ಪ್ರಬಂಧ, ವಿಮರ್ಶೆ, ಗದ್ಯದ ಮೂಲಕ ದಲಿತರ ಪ್ರಜ್ಞೆಯನ್ನು ವಿಸ್ತರಿಸಿಧಿದರು; ಸಾಮೂದಾಯಿಕ ಜಾಗೃತಿ ಹೆಚ್ಚಿಸಿದರು.  ಈ ಮೂಲಕ ನಾಡಿನ ಬಂಡಾಯ ಮತ್ತು ದಲಿತ ಸಾಹಿತ್ಯಕ್ಕೆ ಹೊಸ ಕಸುವು ತುಂಬಿದರು. ಪ್ರತಿಭಟನಾಸ್ತ್ರವನ್ನಾಗಿ ಸಾಹಿತ್ಯವನ್ನು ಬಳಸಿಕೊಂಡು ಜಾಗೃತಿಯ ದೀವಿಟಿಗೆಯನ್ನು ಮತ್ತೊಂದು ಪೀಳಿಗೆಗೆ ದಾಟಿಸಿದರು. ಕರ್ನಾಟಕದ ಮಟ್ಟಿಗೆ ದಲಿತ ಸಾಹಿತ್ಯದ ಇತಿಹಾಸವನ್ನು ಬರೆದರೆ ಅದು ಡಾ. ಸಿದ್ದಲಿಂಗಯ್ಯ ಅವರ ಸಾಹಿತ್ಯದ ಇತಿಹಾಸವೂ ಆಗುತ್ತದೆ. 

ಈಗಿನ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದ ಬಡ, ಶೋಷಿತ ಕುಟುಂಬದಲ್ಲಿ1954 ಫೆಬ್ರವರಿ 3ರಂದು ಸಿದ್ದಲಿಂಗಯ್ಯ ಅವರು ಜನಿಸಿದರು. ತಂದೆ ದೇವಯ್ಯ, ತಾಯಿ ವೆಂಕಮ್ಮ. ಹಳ್ಳಿಯಲ್ಲಿಪ್ರಾಥಮಿಕ ಶಾಲೆ ಮುಗಿಸಿ ಬಂದು ಸೇರಿದ್ದು ಬೆಂಗಳೂರಿನ ಮಲ್ಲೇಶ್ವರದ ಸರಕಾರಿ ಹೈಸ್ಕೂಲ್‌ಗೆ. ಹಾಸ್ಟೆಲ್‌ನಲ್ಲಿವಾಸ್ತವ್ಯ. ಬಳಿಕ ಬೆಂಗಳೂರು ವಿವಿಯಿಂದ ಕನ್ನಡದಲ್ಲಿಎಂಎ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪದವಿ ಪಡೆದುಕೊಂಡರು. ಕವಿ ಜಿ ಎಸ್‌ ಶಿವರುದ್ರಪ್ಪ ಅವರು ಸಿದ್ದಲಿಂಗಯ್ಯ ಅವರನ್ನು ಸಂಶೋಧಕ ಸಹಾಯಕರನ್ನಾಗಿ ನೇಮಕ ಮಾಡಿಕೊಂಡರು. ಮುಂದೆ ಬೆಂಗಳೂರು ವಿವಿಯ ಕನ್ನಡ ಪ್ರಧ್ಯಾಪಕರಾಗಿ, ಕನ್ನಡ ವಿಭಾಗ ಮುಖ್ಯಸ್ಥರಾದರು. ಡಾ. ಅಂಬೇಡ್ಕರ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. 

ಸಾಹಿತ್ಯ ಕೃತಿಗಳು: 1975ರಲ್ಲಿಪ್ರಕಟಗೊಂಡ ‘ಹೊಲೆ ಮಾದಿಗರ ಹಾಡು’ ಸಿದ್ದಲಿಂಗಯ್ಯರ ಮೊದಲ ಕವನ ಸಂಕಲನ.  ಆ ಬಳಿಕ ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು, ಮೆರವಣಿಗೆ, ನನ್ನ ಜನಗಳು ಮತ್ತು ಇತರ ಕವಿತೆಗಳು, ಆಯ್ದ ಕವನಗಳು, ಅಲ್ಲೆಕುಂತವರೆ ಕವನ ಸಂಕಲನಗಳು ಪ್ರಕಟಗೊಂಡು ಜನಮನ್ನಣೆ ಗಳಿಸಿದವು.  ಏಕಲವ್ಯ(1986), ನೆಲಸಮ(1980), ಪಂಚಮ (1980) ಅವರು ರಚಿಸಿದ ನಾಟಕಗಳು. ಹಕ್ಕಿ ನೋಟ, ರಸಗಳಿಗೆಗಳು, ಎಡಬಲ, ಉರಿಕಂಡಾಯ ಅವರ ವಿಮರ್ಶಾ ಕೃತಿಗಳು. ‘ಊರು ಕೇರಿ’ ಅವರ ಸಿದ್ದಲಿಂಗಯ್ಯ ಆತ್ಮಚರಿತ್ರೆಯಾಗಿದೆ. ಇದು ಸಂಪುಟಗಳಲ್ಲಿಪ್ರಕಟವಾಗಿದೆ. ಅವತಾರಗಳು, ಸದನದಲ್ಲಿಸಿದ್ದಲಿಂಗಯ್ಯ ಭಾಗ -1, ಸದನದಲ್ಲಿಸಿದ್ದಲಿಂಗಯ್ಯ ಭಾಗ -2 ಮತ್ತು ಜನಸಂಸ್ಕೃತಿ ಅವರ ಲೇಖನ ಸಂಗ್ರಹಗಳು.

ಎರಡು ಬಾರಿ ಎಂಎಲ್ಸಿ
ಡಾ. ಸಿದ್ದಲಿಂಗಯ್ಯ ಅವರು 1988ರಿಂದ 1994 ಮತ್ತು  1995ರಿಂದ 2001ರ ತನಕ ಎರಡು ಅವಧಿಗೆ ಕರ್ನಾಟಕ ವಿಧಾನ ಪರಿಷತ್‌ ಸದಸ್ಯರಾಗಿದ್ದರು. ಈ ಅವಧಿಯಲ್ಲಿನಾಡು ನುಡಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಗಮನ ಸೆಳೆಯುವಲ್ಲಿಯಶಸ್ವಿಯಾಗಿದ್ದರು. ಜೊತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಪುಸ್ತಕ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಗಿಯೂ ಗಮನಾರ್ಹ ಕೆಲಸ ಮಾಡಿದ್ದಾರೆ.

ಇಕ್ರಲಾ ವದಿರ್ಲಾ...!
ಸಿದ್ದಲಿಂಗಯ್ಯ ಅವರ ಕವಿತೆಗಳು ಬಂಡಾಯದ ಕಹಳೆಯೂದಿ ಕ್ರಾಂತಿ ಗೀತೆಗಳು ಎನಿಸಿಧಿಕೊಂಡವು. ಆ ಪೈಕಿ ‘ಇಕ್ರಲಾ ವದೀರ್ಲಾ/ ಈ ನನ್ನ ಮಕ್ಕಳ ಚರ್ಮ ಎಬ್ರಲಾ...’, ‘ನಿನ್ನೆ ದಿನ/ ನನ್ನ ಜನ/ ಬೆಟ್ಟದಂತೆ ಬಂದರು...’, ‘ಯಾರಿಗೆ ಬಂತು, ಎಲ್ಲಿಗೆ ಬಂತು ನಲ್ವತ್ತೇಳರ ಸ್ವಾತಂತ್ರ್ಯ..’,  ‘ಹಸಿವಿನಿಂದ ಸತ್ತೋರು, ಸೈಜುಗಲ್ಲುಹೊತ್ತೋರು/ ವದಿಸಿಕೊಂಡು ವರಗಿದವರು ನನ್ನ ಜನರು...’ ಕವಿತೆಗಳು ಪ್ರಮುಖವಾದವು. ಇಕ್ರಲಾ ವದೀರ್ಲಾ ಕವಿತೆಯಂತೂ ಧ್ವನಿಸುವ ಪ್ರತಿಭಟನೆ, ಬಂಡಾಯ, ಆಕ್ರೋಶದಿಂದಾಗಿ ಹೆಚ್ಚು ಜನಪ್ರಿಯವಾಗಿತ್ತು. ಇಂಥ ಕವಿತೆಗಳನ್ನು ಬರೆದಿದ್ದ ಸಿದ್ದಲಿಂಗಯ್ಯನವರು, ಆ ಬೆಟ್ಟದಲಿ ಸುಳಿದಾಡ ಬೇಡ ಗೆಳತಿ... ಎಂಬ ನವಿರು ಪ್ರೇಮಗೀತೆಯನ್ನು ಬರೆದು ಅಚ್ಚರಿ ಮೂಡಿಸಿದ್ದರು.

ಪ್ರಶಸ್ತಿಗಳು
ಪಂಪ, ನೃಪತುಂಗ, ಆಳ್ವಾಸ್‌ ನುಡಿಸಿರಿ, ನಾಡೋಜ, ಸಂದೇಶ, ಡಾ. ಅಂಬೇಡ್ಕರ್‌, ಜಾನಪದ ತಜ್ಞ, ರಾಜ್ಯೋತ್ಸವ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ. ಉತ್ತಮ ಚಲನಚಿತ್ರ ಗೀತ ರಚನೆಗಾಗಿ ಕರ್ನಾಟಕ ಸರಕಾರದಿಂದ ಪ್ರಶಸ್ತಿ ಕೂಡ ಬಂದಿದೆ.  ಶ್ರವಣಬೆಳಗೊಳ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ರಾಗಿದ್ದರು.

(2021ರ ಜೂನ್ 12ರ ವಿಜಯ ಕರ್ನಾಟಕ ವರದಿಯಲ್ಲಿ ಪ್ರಕಟವಾದ ವರದಿ)

ಗುರುವಾರ, ಜೂನ್ 3, 2021

George Fernandes- The Statesman: ಜಾರ್ಜ್... ನೀವು ಸದಾ ನೆನಪಿನಲ್ಲಿರುತ್ತೀರಿ

ಕಾರ್ಮಿಕ ಚಳವಳಿಯ ಅಗ್ರಮಾನ್ಯ ನಾಯಕರಾಗಿ, ಸಮಾಜವಾದಿ ಚಿಂತಕರಾಗಿ ಜಾರ್ಜ್ ಫರ್ನಾಂಡಿಸ್ ಅವರು ಏರಿದ ಎತ್ತರ ಅಷ್ಟಿಷ್ಟಲ್ಲ. ರಾಜಕಾರಣಿಗಳಿಗೆ ಅವರು ರೋಲ್ ಮಾಡೆಲ್. ಜೂನ್ 3 ಜಾರ್ಜ್ ಫರ್ನಾಂಡಿಸ್ ಹುಟ್ಟಿದ ದಿನ. ಅವರ ನೆನಪಿನಲ್ಲಿ...

 

- ಮಲ್ಲಿಕಾರ್ಜುನ ತಿಪ್ಪಾರ
ಹೋರಾಟದ ಮೂಲಕವೇ ರಾಜಕೀಯ ಏಳ್ಗೆ ಕಂಡು, ಜನ ಮತ್ತು ದೇಶಕ್ಕೆ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯದನ್ನು ಮಾಡಿದವರು ಜಾರ್ಜ್ ಫರ್ನಾಂಡಿಸ್. ಅವರನ್ನು ಕೇವಲ ರಾಜಕಾರಣಿ ಎಂಬ ಒಂದೇ ಪದದಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಹೋರಾಟಗಾರ, ಕಾರ್ಮಿಕ ಮುಖಂಡ, ಪ್ರಖರ ಸಮಾಜವಾದಿ, ಸಮತಾವಾದಿ, ಅತ್ಯುತ್ತಮ ವಾಗ್ಮಿ... ಹೀಗೆ ಏನೆಲ್ಲ ವಿಶೇಷಣಗಳನ್ನು ಅವರಿಗೆ ಧಾರಾಳವಾಗಿ ನೀಡಬಹುದು. ಅವರು ಎಂದೂ ತಾವು ನಂಬಿದ ಸಿದ್ಧಾಂತಕ್ಕೆ ತಿಲಾಂಜಲಿ ಇಡಲಿಲ್ಲ. ರಾಜಕೀಯದಲ್ಲಿ ಏರಬೇಕಾದ ಎಲ್ಲ ಮಜಲುಗಳನ್ನು ಏರಿದರು; ಯಾವುದಕ್ಕೂ ರಾಜಿಯಾಗಲಿಲ್ಲ. ಅಧಿಕಾರ ಸುಖ ಅವರನ್ನು ಆಲಸಿಯಾಗಿ ಮಾಡಲಿಲ್ಲ; ಗರ್ವಿಷ್ಠರನ್ನಾಗಿಸಲಿಲ್ಲ. ಅಧಿಕಾರ ಬರುವ ಮುಂಚೆ ಹೇಗಿದ್ದರೋ, ಕುರ್ಚಿಯಲ್ಲಿ ಕುಳಿತಾಗಲೂ ಹಾಗೆಯೇ ಇದ್ದರು. ತಾವು ಏರಿದ ಪ್ರತಿ ಹುದ್ದೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದರು.

ಅವರ ಉಡುಗೆ ತೊಡುಗೆ ಸಿಂಪಲ್‌. ಒಂದು ಖಾದಿ ಪ್ಯಾಂಟ್‌; ಇಸ್ತ್ರಿಯಾಗದ ಖಾದಿ ಜುಬ್ಬಾ, ಇಷ್ಟೆ ಅವರ ತೊಡುಗೆ. ಬಿಳಿ ಕೂದಲು ತುಂಬಿದ ತಲೆ, ಮುಖಕ್ಕೊಂದು ಅಗಲವಾದ ಕನ್ನಡಕ ಅವರ ಒಟ್ಟು ವ್ಯಕ್ತಿತ್ವಕ್ಕೆ ಒಂದು ಗಂಭೀರತೆಯನ್ನು ತಂದುಕೊಟ್ಟಿತ್ತು. ಆದರೆ, ಅವರ ಜೀವನ ಮಾತ್ರ ಸರಳವಾಗಿರಲಿಲ್ಲ. ಮೂಲತಃ ಕರ್ನಾಟಕದವರಾದರೂ ಇಡೀ ಭಾರತವೇ ಅವರ ಹೋರಾಟದ ಅಂಗಣವಾಗಿತ್ತು. ಅವರು ಕಾಲಿಟ್ಟ ಕಡೆ ಹೋರಾಟದ ಹೆಜ್ಜೆಗಳು ಮೂಡುತ್ತಿದ್ದವು. ಮಂಗಳೂರು, ಬೆಂಗಳೂರು, ಮುಂಬಯಿ, ಬಿಹಾರ, ದಿಲ್ಲಿ... ಹೀಗೆ ಅವರ ಕಾರ್ಯಕ್ಷೇತ್ರ ಹರಡಿಕೊಳ್ಳುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಗ್ಗೆ ಯಾವಾಗಲೂ ಚಿಂತನೆಗಳಿರುತ್ತಿದ್ದವು. ಕಾರ್ಮಿಕರ ಶ್ರೇಯೋಭಿವೃದ್ಧಿಯೇ ಮೂಲಮಂತ್ರವಾಗಿತ್ತು. ಅವರ ಹಿತರಕ್ಷ ಣೆಗೆ ಎಂಥ ಹೋರಾಟಕ್ಕೂ ಅಣಿಯಾಗುತ್ತಿದ್ದರು. ಒಮ್ಮೆ ಅವರ ಮುಷ್ಕರ ಕರೆಗೆ ಇಡೀ ದೇಶವೇ ಸ್ತಬ್ಧವಾಗಿತ್ತು; ಅಂಥ ಧೀಃಶಕ್ತಿ ಅವರಲ್ಲಿತ್ತು. ಆದರೆ, ಅವರ ಕೊನೆಯ ದಿನಗಳು ಮಾತ್ರ ಯಾತನಾಮಯವಾಗಿದ್ದವು ಎಂಬುದು ಅವರನ್ನು ಇಷ್ಟಪಡೋರಿಗೆ ಅರಗಿಸಿಕೊಳ್ಳಲಾಗದ ಸಂಗತಿ.

ಕನ್ನಡದ ಕುವರ
ಜಾರ್ಜ್‌ ಫರ್ನಾಂಡಿಸ್‌ ಕನ್ನಡದವರು ಎಂಬುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಅವರು ಕರಾವಳಿಯ ಮಂಗಳೂರಿನವರು.
1930 ಜೂನ್‌ 3ರಂದು ಮಂಗಳೂರಿನ ಕ್ಯಾಥೋಲಿಕ್‌ ಕುಟುಂಬದಲ್ಲಿ ಜನಿಸಿದರು. ತಂದೆ ಜೋಸೆಫ್‌ ಫರ್ನಾಂಡಿಸ್‌, ತಾಯಿ ಅಲಿಶಾ ಮಾರ್ಥಾ ಫರ್ನಾಂಡಿಸ್‌. ಇವರಿಗೆ ಆರು ಮಕ್ಕಳು. ಜಾರ್ಜ್‌ ಹಿರಿಯರು. ಕುಟುಂಬದಲ್ಲಿ ಜಾರ್ಜ್‌ ಅವರನ್ನು ಪ್ರೀತಿಯಿಂದ ಎಲ್ಲರೂ ಜರ್ರಿ ಎಂದು ಕರೆಯುತ್ತಿದ್ದರು. ಜೋಸೆಫ್‌ ಅವರದ್ದು ಕ್ರಿಶ್ಚಿಯನ್‌ ಸಂಪ್ರದಾಯಸ್ಥ ಕುಟುಂಬ. ಹಾಗಾಗಿ, ಹಿರಿಯ ಮಗ ಪಾದ್ರಿಯಾಗಲಿ ಎಂದು ಅವರನ್ನು ಪಾದ್ರಿ ತರಬೇತಿಗೆ ಬೆಂಗಳೂರಿಗೆ ಕಳುಹಿಸಿಕೊಟ್ಟರು. ಆದರೆ ಜಾರ್ಜ್‌ ಪಾದ್ರಿಯಾಗಲಿಲ್ಲ. ಬೆಂಗಳೂರು ಬಿಟ್ಟು ಸೀದಾ ಮುಂಬೈ(ಅಂದಿನ ಬಾಂಬೆ)ಗೆ ತೆರಳಿದರು. ಆಗ ಅವರಿಗೆ ಕೇವಲ 19 ವರ್ಷ. ಮುಂಬೈನ ಬೀದಿಗಳಲ್ಲಿ ಅಲೆಯುತ್ತಿದ್ದ ಜಾರ್ಜ್‌ಗೆ ಪರಿಚಯದವರು ಯಾರೂ ಇರಲಿಲ್ಲ. ಎಷ್ಟೋ ಸಾರಿ ಅವರು ಸಮುದ್ರ ತೀರ ಮತ್ತು ರಸ್ತೆಗಳಲ್ಲಿ ಮಲಗುತ್ತಿದ್ದರು. ಸ್ಥಳೀಯ ಪತ್ರಿಕೆಯೊಂದರಲ್ಲಿ ಕೆಲಸ ಸಿಗುವವರೆಗೂ ಕೈಗೆ ಸಿಕ್ಕ ಕೆಲಸಗಳನ್ನು ಮಾಡಿದರು. ಮುಂಬೈಯಲ್ಲಿ ಅವರದ್ದು ಅಕ್ಷರಶಃ ಕಷ್ಟದ ಜೀವನವೇ ಆಗಿತ್ತು.

ಜಾರ್ಜ್ ಫರ್ನಾಂಡಿಸ್ (ಚಿತ್ರ ಕೃಪೆ-ಇಂಟರ್ನೆಟ್)
ಲೋಹಿಯಾ ಮತ್ತು ಡಿಮೆಲ್ಲೊ ಸಂಪರ್ಕ
ಮುಂಬೈ ಜೀವನದಲ್ಲಿ ಹೋರಾಟ ಬದುಕು ನಡೆಸುತ್ತಿರುವಾಗಲೇ ಸಮಾಜವಾದಿ ನಾಯಕ ರಾಮಮನೋಹರ ಲೋಹಿಯಾ ಮತ್ತು ಹಿರಿಯ ಕಾರ್ಮಿಕ ಮುಖಂಡ ಡಿ'ಮೆಲ್ಲೊ ಅವರ ಸಂಪರ್ಕ ಜಾರ್ಜ್‌ಗೆ ದೊರಕಿತು. ಇಲ್ಲಿಂದಲೇ ಜಾರ್ಜ್‌ ಅವರ ಹೋರಾಟದ ಮಜಲುಗಳು ಆರಂಭವಾದವು. ಅದು ಕಾರ್ಮಿಕ ಚಳವಳಿಕ ಉಚ್ಛ್ರಾಯ ಕಾಲ. ಹಾಗಾಗಿ, ನಿಧಾನವಾಗಿ ಕಾರ್ಮಿಕ ಚಳವಳಿಯಲ್ಲಿ ಜಾರ್ಜ್‌ ಅಗ್ರಗಣ್ಯ ನಾಯಕರಾಗಿ ರೂಪುಗೊಂಡರು. ಅಲ್ಲಿಂದ ಅವರು 1961ರಲ್ಲಿ ಬಾಂಬೆ ಮುನ್ಸಿಪಲ್‌ ಕಾರ್ಪೊರೇಷನ್‌ಗೆ ಸ್ಪರ್ಧಿಸಿ ಆಯ್ಕೆಯಾದರು. ಹೋರಾಟದ ಜತೆಗೆ ರಾಜಕೀಯ ಜೀವನವನ್ನು ಆರಂಭಿಸಿದರು.

ಜಾರ್ಜ್‌ ದಿ ಜೈಂಟ್‌ ಕಿಲ್ಲರ್‌!
ಕಾರ್ಪೊರೇಷನ್‌ಗೆ ಆಯ್ಕೆಯಾದ ಆರು ವರ್ಷದ ಬಳಿಕ ಜಾರ್ಜ್‌ ಲೋಕಸಭೆ ಸ್ಪರ್ಧೆಗೆ ಮುಂದಾದರು. ದಕ್ಷಿಣ ಮುಂಬೈ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸಿದರು. ಅವರ ಎದುರಾಳಿ
, ಮಹಾರಾಷ್ಟ್ರದ ಅಂದಿನ ಪ್ರಖ್ಯಾತ ಕಾಂಗ್ರೆಸ್‌ ನಾಯಕ ಎಸ್‌.ಕೆ.ಪಾಟೀಲ್‌. ಈ ಚುನಾವಣೆಯಲ್ಲಿ ಜಾರ್ಜ್‌ ಅವರನ್ನು ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ, ಫಲಿತಾಂಶ ಪ್ರಕಟವಾದಾಗ ಮಾತ್ರ ಎಲ್ಲರಿಗೂ ಆಶ್ಚರ್ಯವಾಗಿತ್ತು. ಪ್ರಭಾವಿ ಪಾಟೀಲ್‌ರನ್ನು ಸೋಲಿಸಿ ಜಾರ್ಜ್‌ ಆಯ್ಕೆಯಾಗಿದ್ದರು. ಅಲ್ಲಿಂದಲೇ ಅವರಿಗೆ The Giant Killer ಎಂಬ ಹೆಸರು ಬಂತು. ಇಲ್ಲಿಂದ ಅವರು ರಾಜಕೀಯದಲ್ಲಿ ಹಿಂದಿರುಗಿ ನೋಡಲಿಲ್ಲ. ಹೋರಾಟದ ಜತೆಗೆ ರಾಜಕೀಯದಲ್ಲಿ ಒಂದೊಂದೇ ಮೆಟ್ಟಿಲು ಮೇಲೇರಿದರು.

ಭೂಗತ ನಾಯಕ
1974ರ ಹೊತ್ತಿಗೆ ದೇಶದಲ್ಲಿ ಜಾರ್ಜ್‌ ಜನಪ್ರಿಯ ಹೆಸರಾಗಿತ್ತು. ಈ ಅವಧಿಯಲ್ಲಿ ಅವರು ರೇಲ್ವೆ ಕಾರ್ಮಿಕರ ಮುಷ್ಕರಕ್ಕೆ ಕರೆ ಕೊಟ್ಟಿದ್ದರು. ಅದು ಎಷ್ಟು ಪರಿಣಾಮಕಾರಿ ಕರೆಯಾಗಿತ್ತು ಎಂದರೆ, ಇಡೀ ದೇಶ ಅಕ್ಷ ರಶಃ ಸ್ತಬ್ಧವಾಗಿತ್ತು. ಈ ಮುಷ್ಕರಕ್ಕೆ ದೇಶದ ಎಲ್ಲ ಉದ್ಯಮ ವಲಯಗಳಿಂದ ಬೆಂಬಲ ದೊರಕಿತ್ತು. ಮೂರು ವಾರಗಳ ಈ ಮುಷ್ಕರ ಅಂದಿನ ಪ್ರಧಾನಿ ಇಂದಿರಾ ಗಾಂಧಿಯಲ್ಲೂ ಅಭದ್ರತೆ ಹುಟ್ಟು ಹಾಕಿತ್ತು ಎಂದರೆ ಅದರ ಪರಿಣಾವನ್ನು ಯಾರಾದರೂ ಊಹಿಸಬಹುದು. ಇದೇ ಸಂದರ್ಭದಲ್ಲಿ 'ಲೋಕ ನಾಯಕ' ಜಯಪ್ರಕಾಶ್‌ ನಾರಾಯಣ್‌ ಅವರ ಮೂವ್‌ಮೆಂಟ್‌ ಫಾರ್‌ ಚೇಂಜ್‌ ಚಳವಳಿಯಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದರು. ಆಂತರಿಕವಾಗಿ ಹೆಚ್ಚುತ್ತಿದ್ದ ಸರಕಾರ ವಿರೋಧಿ ಧೋರಣೆ ಮತ್ತೊಂದೆಡೆ ಕೋರ್ಟ್‌ನಲ್ಲಾದ ಹಿನ್ನಡೆಯನ್ನು ಅರಗಿಸಿಕೊಳ್ಳಲಾಗದ ಇಂದಿರಾ ಗಾಂಧಿ 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಪ್ರತಿಪಕ್ಷ ನಾಯಕರು ಜೈಲು ಪಾಲಾದರು. ಆಗ ಜಾರ್ಜ್‌ ಮತ್ತು ಅವರ ಜತೆಗಿದ್ದವರು ಭೂಗತರಾದರು. ಈ ಸಂದರ್ಭದಲ್ಲಿ ಬರೋಡಾದಿಂದ ಡೈನಮೈಟ್‌ ತಂದು ಸರಕಾರಿ ಕಚೇರಿಗಳನ್ನು ಧ್ವಂಸಗೊಳಿಸುವ ಯೋಜನೆ ಜಾರ್ಜ್‌ ಅವರದ್ದಾಗಿತ್ತು. ಆದರೆ, ಕೋಲ್ಕತಾ(ಅಂದಿನ ಕಲ್ಕತ್ತಾ)ದಲ್ಲಿ ಸೆರೆ ಸಿಕ್ಕರು. ಡೈನಮೈಟ್‌ ಕದ್ದ ಆರೋಪವನ್ನು ಜಾರ್ಜ್‌ ಮೇಲೆ ಹಾಕಿ ಅವರನ್ನು 9 ತಿಂಗಳು ಕಾಲ ತಿಹಾರ್‌ ಜೈಲಿನಲ್ಲಿ ಇಡಲಾಯಿತು. ಈ ಪ್ರಕರಣವೇ ಮುಂದೆ 'ಬರೋಡಾ ಡೈನಮೈಟ್‌' ಎಂದು ಪ್ರಖ್ಯಾತವಾಯಿತು. ಜೈಲಿನಲ್ಲಿದ್ದುಕೊಂಡೇ ಬಿಹಾರದ ಮುಜಾಫರ್‌ನಗರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ, ಮೂರು ಲಕ್ಷ ಮತಗಳ ಅಂತರದಿಂದ ಗೆದ್ದರು. ಜಾರ್ಜ್‌ ಅವರನ್ನು ಬಂಧಿಸಿದ ಕ್ಷ ಣದಲ್ಲಿ ಅವರ ಕೋಳ ತೊಟ್ಟ ಕೈ ಮೇಲತ್ತಿದ ಫೋಟೋ ಈ ಗೆಲುವಿನಲ್ಲಿ ಭಾರಿ ಪ್ರಭಾವ ಬೀರಿತ್ತು!

ಸಚಿವರಾದರು ಜಾರ್ಜ್‌
ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿತು. ಇದೇ ಮೊದಲ ಬಾರಿಗೆ ಮೊರಾರ್ಜಿ ದೇಸಾಯಿ ನೇತೃತ್ವದ ಪ್ರಥಮ ಕಾಂಗ್ರೆಸ್ಸೇತರ ಸರಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂತು. ತುರ್ತು ಪರಿಸ್ಥಿತಿಯಲ್ಲಿ ಜೈಲುಪಾಲಾಗಿದ್ದ ನಾಯಕರೆಲ್ಲ ಬಿಡುಗಡೆಗೊಂಡರು. ಜಾರ್ಜ್‌ ಅವರು ದೇಸಾಯಿ ಸಂಪುಟದಲ್ಲಿ ಕೈಗಾರಿಕಾ ಸಚಿವರಾದರು. ಬಂಡವಾಳ ಹೂಡಿಕೆ ನಿಯಮಗಳನ್ನು ಉಲ್ಲಂಘಿಸಿದ್ದ ಅಮೆರಿಕ ಐಬಿಎಂ ಮತ್ತು ಕೊಕಾಕೋಲಾ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡ ಫಲವಾಗಿ ಅವರೆಡೂ ಕಂಪನಿಗಳು ಭಾರತದಿಂದ ಕಾಲು ಕೀಳಬೇಕಾಯಿತು. ಮುಂದೆ ಜನತಾ ದಳ ನಾಯಕ ವಿ.ಪಿ. ಸಿಂಗ್‌ ನೇತೃತ್ವದ ಸರಕಾರದಲ್ಲಿ ರೇಲ್ವೆ ಸಚಿವರಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರು. ಪಶ್ಚಿಮ ಕರಾವಳಿಯನ್ನು ಸಂಪರ್ಕಿಸುವ ಕೊಂಕಣ ರೇಲ್ವೆ ಯೋಜನೆ ಅನುಷ್ಠಾನಗೊಳಿಸಿದರು.

ಬಿಜೆಪಿಯ ಸಖ್ಯ
ಜೆಪಿ ಚಳವಳಿಯಲ್ಲಿ ಉದಯಿಸಿದ ನಾಯಕರ ಜನತಾ ಪರಿವಾರ ದಿಕ್ಕಾಪಾಲಾದ ಸಂದರ್ಭ ಅದು. ರಾಜಕೀಯ ಅನಿವಾರ್ಯತೆ ಮತ್ತು ಕಾಂಗ್ರೆಸ್‌ ವಿರೋಧಿ ನೀತಿಯ ಪ್ರಮುಖ ಧ್ಯೇಯದಿಂದಾಗಿ ಜಾರ್ಜ್‌ ಅವರು ಅನಿವಾರ್ಯವಾಗಿ ಬಿಜೆಪಿಯ ಅಟಲ್‌ ಬಿಹಾರಿ ವಾಜಪೇಯಿ, ಎಲ್‌.ಕೆ.ಆಡ್ವಾಣಿ ಜತೆ ಕೈ ಜೋಡಿಸಬೇಕಾಯಿತು. ವಿಶೇಷ ಎಂದರೆ, ಆರ್‌ಎಸ್‌ಎಸ್‌ ನೀತಿಯನ್ನು ಜಾರ್ಜ್‌ ಟೀಕಿಸುತ್ತಿದ್ದರು. ಹಾಗಿದ್ದೂ ಅವರು ಬಿಜೆಪಿ ಜತೆ ಹೆಜ್ಜೆ ಹಾಕಬೇಕಾಯಿತು. ಜತೆಗೆ ಬಿಜೆಪಿ ನೇತೃತ್ವದ ನ್ಯಾಷನಲ್‌ ಡೆಮಾಕ್ರಟಿಕ್‌ ಅಲಯನ್ಸ್‌-ಎನ್‌ಡಿಎ ಸಂಚಾಲಕರಾದರು. ಯಾರೂ ನಿರೀಕ್ಷಿಸದ ರೀತಿಯಲ್ಲಿ
1998ರಲ್ಲಿ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು. ಆಗ ಜಾರ್ಜ್‌ ಅವರಿಗೆ ರಕ್ಷಣಾ ಸಚಿವ ಸ್ಥಾನ ತಾನಾಗಿಯೇ ಒಲಿದು ಬಂತು. ವಿಪರ್ಯಾಸ ಎಂದರೆ, ಜಾರ್ಜ್‌ ತಮ್ಮ ಬದುಕಿನುದ್ದಕ್ಕೂ ಅಣ್ವಸ್ತ್ರಗಳನ್ನು ವಿರೋಧಿಸುತ್ತಲೇ ಬಂದಿದ್ದರು. ಆದರೆ, ಅದೇ ಜಾರ್ಜ್‌ ಅವರು ಅಣ್ವಸ್ತ್ರ ಪರೀಕ್ಷೆಯಲ್ಲಿ ವಾಜಪೇಯಿ ಜತೆ ಪಾಲುದಾರರಾದರು!

ಬೆನ್ನತ್ತಿದ ವಿವಾದಗಳು
ಜಾರ್ಜ್‌ ಅವರು ರಕ್ಷಣಾ ಸಚಿವರಾಗಿದ್ದಾಗಲೇ ಬಾರಾಕ್‌ ಕ್ಷಿಪಣಿ ಮತ್ತು ತೆಹಲ್ಕಾ ಹಗರಣಗಳು ಬೆನ್ನು ಹತ್ತಿದವು. ಇದಕ್ಕಾಗಿ ಅವರು ರಕ್ಷಣಾ ಸಚಿವ ಸ್ಥಾನವನ್ನು ತೊರೆಯಬೇಕಾಯಿತು. ಮುಂದೆ ತನಿಖೆ ವೇಳೆ ಜಾರ್ಜ್‌ ಅವರು ನಿರ್ದೋಷಿ ಎಂದು ಸಾಬೀತಾದ ಮೇಲೆ ಮತ್ತೆ ರಕ್ಷ ಣಾ ಸಚಿವರಾದರು. ಆದರೆ, ಕಾರ್ಗಿಲ್‌ ಯುದ್ಧದ ವೇಳೆ ಖರೀದಿಸಲಾದ ಶವಪೆಟ್ಟಿಗೆಗಳ ಹಗರಣ ಮತ್ತೆ ಜಾರ್ಜ್‌ ತಲೆಯೇರಿತು. ತೀರಾ ಇತ್ತೀಚೆಗಷ್ಟೇ ಈ ಹಗರಣದಲ್ಲೂ ಜಾರ್ಜ್‌ ಅವರು ನಿರ್ದೋಷಿ ಎಂದು ಸಾಬೀತಾಯಿತಾದರೂ, ಅದನ್ನು ಕೇಳಿ ಸಂತೋಷ ಪಡುವ ಸ್ಥಿತಿಯಲ್ಲಿ ಜಾರ್ಜ್‌ ಇರಲಿಲ್ಲ. ಸಾಮಾನ್ಯವಾಗಿ ಭಾರತದ ಮಗ್ಗಲು ಮುಳ್ಳು ಪಾಕಿಸ್ತಾನ ಎಂದು ಬಹುತೇಕ ರಾಜಕಾರಣಿಗಳು ಹೇಳುತ್ತಾರೆ. ಆದರೆ, ಜಾರ್ಜ್‌ ಮಾತ್ರ ಭಾರತದ ನಂ.1ವೈರಿ ಪಾಕಿಸ್ತಾನವಲ್ಲ ಚೀನಾ ಎಂದು ಬಹಿರಂಗವಾಗಿ ಹೇಳುವ ಮೂಲಕ ಭಾರಿ ಸಂಚಲನಕ್ಕೆ ಕಾರಣವಾಗಿದ್ದರು.

ನೇಪಥ್ಯಕ್ಕೆ ಜಾರಿದ ಜಾರ್ಜ್‌
2004ರಲ್ಲಿ ವಾಜಪೇಯಿ ನೇತೃತ್ವದ ಎನ್‌ಡಿಎ ಮರಳಿ ಅಧಿಕಾರ ಹಿಡಿಯಲಿದೆ ಎಂದೇ ಭಾವಿಸಲಾಗಿತ್ತು. ಆದರೆ, ಯಾರೂ ನಿರೀಕ್ಷಿಸದ ರೀತಿಯಲ್ಲಿ ಎನ್‌ಡಿಎ ಸೋಲು ಕಂಡು ಕಾಂಗ್ರೆಸ್‌ ನೇತೃತ್ವದ ಯುಪಿಎ ಅಧಿಕಾರಕ್ಕೆ ಬಂತು. ಈ ಅವಧಿಯಲ್ಲಿ ದೇಶದ ಇಬ್ಬರು ಪ್ರಮುಖ ನಾಯಕರು ನೇಪಥ್ಯಕ್ಕೆ ಜಾರುವಂತಾಯಿತು. ಒಬ್ಬರು ಪ್ರಧಾನಿಯಾಗಿದ್ದ ಅಟಲ್‌ ಬಿಹಾರಿ ವಾಜಪೇಯಿ, ಮತ್ತೊಬ್ಬರು ಜಾರ್ಜ್‌. ನಂತರ ಅವರಿಗೆ ಅಲ್ಜೈಮರ್‌ ಕಾಯಿಲೆ ಉಲ್ಬಣಗೊಂಡು ಸಂಪೂರ್ಣವಾಗಿ ಸಾರ್ವಜನಿಕ ಜೀವನದಿಂದ ಮರೆಯಾಗಬೇಕಾಯಿತು.

ಮರಳಿ ಬಾರದ ಲೋಕಕ್ಕೆ
ಜಾರ್ಜ್‌ ಅದ್ಭುತ ಮಾತುಗಾರರು. ಅವರು ಭಾಷಣಕ್ಕೆ ನಿಂತರೆ ಇಡೀ ಜನಸಮೂಹ ತದೇಕ ಚಿತ್ತದಿಂದ ಆಲಿಸುತ್ತಿತ್ತು. ಸಂಸತ್ತಿನಲ್ಲಿ ಮಾತನಾಡಲು ಆರಂಭಿಸಿದರೆ ಇಡೀ ಸಂಸತ್ತೇ ಕಿವಿಯಾಗುತ್ತಿತ್ತು. ಕೊಂಕಣಿ, ಕನ್ನಡ, ಇಂಗ್ಲಿಷ್‌, ಹಿಂದಿ, ಮರಾಠಿ, ತುಳು, ತಮಿಳು, ಉರ್ದು ಸೇರಿದಂತೆ 10 ಭಾಷೆಗಳಲ್ಲಿ ಜಾರ್ಜ್‌ ನಿರರ್ಗಳವಾಗಿ ಮಾತನಾಡುತ್ತಿದ್ದರು. ಪ್ರಖರ ಸಮಾಜವಾದಿಯಾಗಿದ್ದ ಜಾರ್ಜ್‌ ತುಂಬ ದಿನಗಳ ಕಾಲ ಅನಾರೋಗ್ಯಪೀಡಿತರಾಗಿ ಕೊನೆಯ ದಿನಗಳನ್ನು ಅತ್ಯಂತ ಯಾತನೆಯಲ್ಲಿ ಕಳೆದರು. 2019ರ ಜನವರಿ 29ರಂದು ಇಹಲೋಕ ತ್ಯಜಿಸಿದರು.

ವಿಯೆಟ್ನಾಮಿಯಾಗಿ ಹುಟ್ಟುವೆ!
''ಒಂದು ವೇಳೆ ಪುನರ್ಜನ್ಮ ಎಂಬುದಿದ್ದರೆ ನಾನು ವಿಯೆಟ್ನಾಮಿಯಾಗಿ(ವಿಯೆಟ್ನಾಮ್‌ ಪ್ರಜೆ) ಹುಟ್ಟುವೆ,'' ಎಂದು ಜಾರ್ಜ್‌ ಒಮ್ಮೆ ಹೇಳಿದ್ದರು. ಒಂದುವರೆ ದಶಕದ ಹಿಂದೆ ಬೆಂಗಳೂರಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಈ ಬಯಕೆಯನ್ನು ಅವರು ಹೊರಹಾಕಿದ್ದರು. ''ವಿಯೆಟ್ನಾಮಿ ಜನರು ತಮ್ಮ ಬದ್ಧತೆಯನ್ನು ಪೂರೈಸಲು ಸಾಯಲು ಸಿದ್ಧರಾಗಿರುತ್ತಾರೆ. ಅಂಥ ಶಿಸ್ತು ಅವರಲ್ಲಿರುತ್ತದೆ. ನಾನು ವಿಯೆಟ್ನಾಮ್‌ನ ಅಭಿಮಾನಿ,'' ಎಂದು ಹೇಳಿದ್ದರು.