ಗುರುವಾರ, ಜೂನ್ 30, 2022

Rebel Leader Eknath Shinde: ‘ರೆಬೆಲ್‌ ಲೀಡರ್‌’ ಏಕನಾಥಗೆ ಮುಖ್ಯಮಂತ್ರಿ ಪಟ್ಟ

ಕಣ್ಣ ಮುಂದೆಯೇ ಮಕ್ಕಳ ಸಾವಿನಿಂದಾಗಿ ರಾಜಕಾರಣದಿಂದ ದೂರವೇ ಸರಿದಿದ್ದ ಏಕನಾಥ ಶಿಂಧೆ ಮತ್ತೆ ಅಗ್ರಗಣ್ಯ ನಾಯಕರಾಗಿ ಬೆಳೆದಿದ್ದೇ ಅಚ್ಚರಿ


- ಮಲ್ಲಿಕಾರ್ಜುನ ತಿಪ್ಪಾರ
ಏಕನಾಥ ಶಿಂಧೆ ಎಂಬ ಏಕವ್ಯಕ್ತಿ ಮೇಲೆ ಇಡೀ ದೇಶ ಕುತೂಹಲದ ಕಣ್ಣಿಟ್ಟಿದೆ. ಮಹಾರಾಷ್ಟ್ರದ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌  ನೇತೃತ್ವದ ‘ಮಹಾ ವಿಕಾಸ್‌ ಅಘಾಡಿ’ ಸರಕಾರವನ್ನು ಖೆಡ್ಡಾಗೆ ಕೆಡವಿರುವ ಏಕನಾಥ, ಶಿವಸೇನೆಯ ಪ್ರಮುಖ ಹಾಗೂ ಭಾರಿ ಪ್ರಭಾವಿ ನಾಯಕ. ತಮ್ಮ ಪಕ್ಷ ವು ‘ಹಿಂದುತ್ವ’ವನ್ನು ಕೈಬಿಟ್ಟಿದೆ ಎಂದು ಆರೋಪಿಸಿ, 30ಕ್ಕೂ ಅಧಿಕ ಶಾಸಕರೊಂದಿಗೆ ಅಸ್ಸಾಂನ ಗುವಾಹಟಿ ಹೋಟೆಲ್‌ನಲ್ಲಿತಳವೂರಿದ್ದಾರೆ. ಮೇಲ್ನೋಟಕ್ಕೆ, ಶಿವಸೇನೆಯ ಸೈದ್ಧಾಂತಿಕ ವೈರುಧ್ಯದ ಕಾರಣಕ್ಕೇ ಬಂಡಾಯ ಬಾವುಟ ಹಾರಿಸಿದ್ದಾರೆ ಎನಿಸಿದರೂ ಆಳದಲ್ಲಿಅವರನ್ನು ಪಕ್ಷ ದಲ್ಲಿ ಮೂಲೆಗುಂಪು ಮಾಡಲಾಗುತ್ತಿದ್ದ ಪಿಸುಮಾತುಗಳಿವೆ!

ಹಣಬಲ ಮತ್ತು ತೋಳ್ಬಲದಲ್ಲಿಏಕನಾಥ ಶಿಂಧೆ ಅವರನ್ನು ಸರಿಗಟ್ಟುವವರಿಲ್ಲ. ಪಕ್ಷ ಕ್ಕೆ ಬೇಕಿರುವ ಮತಗಳನ್ನು ಕ್ರೋಡೀಕರಿಸುವಲ್ಲಿಸಿದ್ಧಹಸ್ತರು. ವಿಶೇಷವಾಗಿ ಠಾಣೆ ವ್ಯಾಪ್ತಿಯಲ್ಲಿಏಕನಾಥ ಅವರೇ ಶಿವಸೇನೆಯ ಅಸಲಿ ನಾಯಕ. ಅಷ್ಟರ ಮಟ್ಟಿಗೆ ವರ್ಚಸ್ಸಿದೆ. ಏಕನಾಥ ಅವರು ಹೇಗೆ ಇಷ್ಟು ಪ್ರಸಿದ್ಧಿಯಾದರು ಎಂದು ತಿಳಿದುಕೊಳ್ಳಧಿಬೇಕಿದ್ದರೆ ಅವರ ರಾಜಕೀಯ ಗುರು ‘ಆನಂದ್‌ ದಿಘೆ ಅವರ ಕುರಿತು ಕೊಂಚ ತಿಳಿದುಕೊಳ್ಳಬೇಕು. ‘ಧರ್ಮವೀರ್‌’ ಆನಂದ ದಿಘೆ ಠಾಣೆಯಲ್ಲಿಅಕ್ಷ ರಶಃ ಸಮಾನಂತರ ಸರಕಾರವನ್ನೇ ನಡೆಸುಧಿತ್ತಿದ್ದರು. ತಮ್ಮದೇ ಶೈಲಿಯಲ್ಲಿನಿತ್ಯವೂ ದರ್ಬಾರ್‌ ನಡೆಸಿ, ಸಮಸ್ಯೆಧಿಗಳನ್ನು ಆಲಿಸುತ್ತಿದ್ದರು. ಬಾಳಾಸಾಹೇಬ್‌ ಠಾಕ್ರೆ ಅವರ ಪರಮ ನಿಷ್ಠರು. ಈ ನಿಷ್ಠೆ ಯಾವ ಪರಿ ಇತ್ತೆಂದರೆ, 1989ರಲ್ಲಿಶ್ರೀಧರ ಖೋಪ್ಕರ್‌ ಎಂಬ ಸದಸ್ಯ ಕಾಂಗ್ರೆಸ್‌ ಪರವಾಗಿ ಮತ ಹಾಕಿದ್ದಕ್ಕೆ ಅವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿಆನಂದ ದಿಘೆ ಅವರನ್ನು ಬಂಧಿಸಲಾಗಿತ್ತು. ಜಾಮೀನು ಮೇಲೆ ಹೊರ ಬಂದಿದ್ದರು. 2001ರಲ್ಲಿಹೃದಯಾಘಾತದಿಂದ ಸಾವಿಗೀಡಾದರು. ದಿಘೆ ಬಳಿಕ ಉಂಟಾಗಿದ್ದ ನಿರ್ವಾತವನ್ನು ತುಂಬಿದ್ದು ಇದೇ ಏಕನಾಥ ಶಿಂಧೆ. ಅವರದ್ದೇ ರಾಜಕೀಯ ಪಟ್ಟು, ಶೈಲಿಯನ್ನು ಕರಗತ ಮಾಡಿಕೊಂಡಿ­ದ್ದಾರೆ. ದಿಘೆ ಅವರಂತೆ ಏಕನಾಥ ಅವರದ್ದೂ ‘ಆಕ್ರಮಣಕಾರಿ’ ರಾಜಕಾರಣ; ಎಲ್ಲವೂ ತಾಬಡತೋಬಡ ಆಗಬೇಕು. ಎಂವಿಎ ಸರಕಾರದಲ್ಲಿಲೋಕೋಪಯೋಗಿ ಸಚಿವರಾಗಿರುವ 58 ವರ್ಷದ ಏಕನಾಥ ಅವರಿಗೇನೂ ರಾಜಕೀಯ ಕೌಟುಂಬಿಕ ಹಿನ್ನೆಲೆ ಇಲ್ಲ. 

ಸಾತಾರಾ ಮೂಲದವರು: ಏಕನಾಥ ಸಾತಾರಾ ಜಿಲ್ಲೆಜವಳಿ ತಾಲೂಧಿಕಿಧಿನವರು. ಹುಟ್ಟಿದ್ದು ಮರಾಠ ಕುಟುಂಬದಲ್ಲಿ1964 ಫೆಬ್ರವರಿ 9ರಂದು. ತಂದೆ ಸಂಭಾಜಿ. ಏಕನಾಥ ಚಿಕ್ಕವರಿದ್ದಾಗಲೇ ಅವರ ಕುಟುಂಬ ಠಾಣೆಗೆ ಸ್ಥಳಾಂತಧಿರವಾಯಿತು. ಮಂಗಳಾ ಹೈಸ್ಕೂಲ್‌ ಮತ್ತು ಜೂನಿಯರ್‌ ಕಾಲೇಜ್‌ನಲ್ಲಿ11ನೇ ತರಗತಿವರೆಗೆ ಓದಿದ್ದಾರೆ. ಮುಂದೆ ಓದುವ ಆಸೆ ಇದ್ದರೂ ಕುಟುಂಬಕ್ಕಾಗಿ ತಮ್ಮ ಶಿಕ್ಷ ಣವನ್ನು ಅರ್ಧಕ್ಕೆ ಮೊಟಕುಗೊಳಿಸಿ, ದಿನಗೂಲಿ ಕೆಲಸಗಳನ್ನು ಮಾಡಬೇಕಾಯಿತು. ತುಂಬಾ ಕಷ್ಟಪಟ್ಟು ಕೊನೆಗೆ ಆಟೊರಿಕ್ಷಾ ಚಾಲಕರಾದರು. 70 ಮತ್ತು 80ರ ದಶಕದಲ್ಲಿಮಹಾರಾಷ್ಟ್ರದ ಎಲ್ಲಯುವಕರಂತೆ ಏಕನಾಥ ಅವರಿಗೆ ಸೇನೆ ಚಟುವಟಿಕೆಗಳು ಆಕರ್ಷಿಸಿದವು. 1980ರಲ್ಲಿಶಿವಸೇನೆ ಸೇರಿದರು. ಠಾಣೆ ಜಿಲ್ಲಾಶಿವಸೇನೆ ಪ್ರಮುಖರಾಗಿದ್ದ ಆನಂದ್‌ ದಿಘೆ ಅವರ ‘ನೀಲಿಗಣ್ಣಿನ ಹುಡುಗ’ನಾಗಲು ಬಹಳ ದಿನಗಳೇನೂ ಬೇಕಾಗಲಿಲ್ಲ. ಪ್ರಾಮಾಧಿಣಿಕತೆ, ಕಠಿಣ ಪರಿಶ್ರಮಗಳಿಂದಾಗಿ ಬಾಳಾಸಾಹೇಬ್‌ ಠಾಕ್ರೆ ಕಣ್ಣಿಗೂ ಬಿದ್ದರು. ಠಾಕ್ರೆ ಮತ್ತು ಆನಂದ್‌ ದಿಘೆ ಅವರ ಆಶ್ರಯದಲ್ಲಿಏಕನಾಥ, ಶಿವಸೇನೆಧಿಯಲ್ಲಿಒಂದೊಂದೇ ಹುದ್ದೆಗಳನ್ನೇರುತ್ತಾ ಮುನ್ನಡೆದರು. 

ಕಣ್ಣ ಮುಂದೆ ಮಕ್ಕಳು ಜಲಸಮಾಧಿ: ಏಕನಾಥ ಅವರಿಗೆ 2000 ಕಹಿ ನೀಡಿದ ವರ್ಷ. ಕಣ್ಣ ಮುಂದೆಯೇ ಅವರ ಮೂವರು ಮಕ್ಕಳ ಪೈಕಿ ಇಬ್ಬರು ಜಲಧಿ ಸಮಾಧಿಧಿಯಾದರು. ಅದು ಜೂನ್‌ 2ನೇ ತಾರೀಖು. 11 ವರ್ಷದ ಪುತ್ರ ದಿಪೇಶ್‌,  7 ವರ್ಷದ ಮಗಳು ಶುಭದಾ ಅವರು ಊರಿನ ಕೆರೆಯಲ್ಲಿಬೋಟಿಂಗ್‌ ಮಾಡುತ್ತಿದ್ದರು. ಬೋಟ್‌ ಮುಗುಚಿ ಮಕ್ಕಳಿಬ್ಬರು ಜಲ ಸಮಾಧಿಯಾದರು. ಮಕ್ಕಳ ಸಾವು ಅವರಿಗೆ ಬಾಧಿಸಿತು. ಖಿನ್ನತೆಗೆ ಜಾರಿದರು. ಸಕ್ರಿಯ ರಾಜಕಾರಣದಿಂದಲೇ ವಿಮುಖರಾದರು. ಹೀಗೆ ಬಿಟ್ಟರೆ ಏಕನಾಥ ಕೈಗೆ ಸಿಗುವುದಿಲ್ಲಎಂದು ಭಾವಿಸಿದ ದಿಘೆ, ಏಕನಾಥ ಅವರನ್ನು ಠಾಣೆ ಮುನ್ಸಿಪಲ್‌ ಕಾರ್ಪೊರೇಷನ್‌(ಟಿಎಂಸಿ) ಸದನ ನಾಯಕಧಿರನ್ನಾಗಿ ಮಾಡಿದರು. ನಿಧಾನವಾಗಿ ಏಕನಾಥ, ಮಕ್ಕಳ ಸಾವಿನ ನೋವಿನಿಂದ ಹೊರ ಬಂದರು. ರಾಜಕಾರಣದಲ್ಲಿಮತ್ತೆ ಸಕ್ರಿಯರಾದರು. ಶಿಂಧೆ ಅವರ ಮತ್ತೊಬ್ಬ ಪುತ್ರ ಡಾ.ಶ್ರೀಕಾಂತ್‌ ಅವರು ಕಲ್ಯಾಣ್‌ ಕ್ಷೇತ್ರದಿಂದ 2014ರಿಂದಲೂ ಸಂಸತ್‌ ಸದಸ್ಯರು. 

ಬಳ್ಳಾರಿ ಜೈಲಿನಲ್ಲಿದ್ದರು: ಏಕನಾಥ ಮತ್ತು ಕರ್ನಾಟಕದ ನಡುವೆ ‘ಬೇಡವಾದ ಕಾರಣಕ್ಕೆ’ ನಂಟಿದೆ. 1985ರಲ್ಲಿಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಉಚ್ಚ್ರಾಯದ ಕಾಲ. ಆಗ ಮಹಾರಾಷ್ಟ್ರದಲ್ಲಿಈ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪ್ರತಿಭಟನೆ, ಗಲಾಟೆಗಳಾಗುಧಿತ್ತಿದ್ದವು. ಅಂಥ ಒಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಏಕನಾಥ ಅವರನ್ನು ಬಂಧಿಸಿ ಸುಮಾರು 40 ದಿನಗಳ ಕಾಲ ಬಳ್ಳಾರಿ ಜೈಲಿನಧಿಲ್ಲಿಡಲಾಗಿತ್ತು. ಏಕನಾಥ ಅವರು ಶಿವಸೇನೆಯ ಮುಂಚೂಣಿಯ ನಾಯಕಧಿರಾಗಿ, ಬೆಲೆ ಏರಿಕೆ, ಕಾಳದಂಧೆ ಸೇರಿದಂತೆ ಇನ್ನಿತರ ವಿಷಯಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದ್ದಾರೆ. 

ನಾಲ್ಕು ಬಾರಿ ಶಾಸಕ, ಸಚಿವ: 1997ರಲ್ಲಿಠಾಣೆ ಮುನ್ಸಿಪಲ್‌ ಕಾರ್ಪೊರೇಷನ್‌ (ಟಿಎಂಸಿ)ಗೆ ಆಯ್ಕೆಧಿಯಾಗಿ, 2001ರಿಂದ ಸಭಾನಾಯಕರಾಗಿದ್ದರು ಏಕನಾಥ್‌. ಟಿಎಂಸಿಗೆ ಸಂಬಂಧಿಸಿದ ಕೆಲಸಗಳಿಗೆ ಮಾತ್ರ ತಮ್ಮನ್ನು ಸೀಮಿತಧಿಗೊಳಿಸಲಿಲ್ಲ. ಬದಲಿಗೆ ಇಡೀ ಥಾಣೆ ಜಿಲ್ಲೆಗೆ ಸಂಬಂಧಿಸಿದ ಎಲ್ಲವಿಷಯಗಳಲ್ಲೂಮುಂಚೂಣಿಧಿಯಲ್ಲಿರುತ್ತಿದ್ದರು. ಪರಿಣಾಮವಾಗಿ, ಕೋಪರಿ-ಪಾಚಪಾಖಾಡಿಧಿ (2004)ಕ್ಷೇತ್ರದಿಂದ ಸ್ಪರ್ಧಿಸಲು ಶಿವಸೇನೆ ಟಿಕೆಟ್‌ ನೀಡಿತು. ಗೆದ್ದರು. ಆ ಬಳಿಕ ಸತತವಾಗಿ 2009, 2014 ಮತ್ತು 2019ರಲ್ಲಿಆಯ್ಕೆಧಿಯಾದರು. ಬಾಳಾಸಾಹೇಬ್‌ ಠಾಕ್ರೆ ಅವರು 2005ರಲ್ಲಿಥಾಣೆ ಜಿಲ್ಲಾಶಿವಸೇನೆಯ ಮುಖ್ಯಸ್ಥರನ್ನಾಗಿ ಮಾಡಿದರು. ಶಿವಸೇನೆಯಲ್ಲಿಈ ರೀತಿ ಶಾಸಕ- ಜಿಲ್ಲಾಮುಖ್ಯಸ್ಥ ಜವಾಬ್ದಾರಿ ಹೊಂದಿದ ಮೊದಲನೇ ವ್ಯಕ್ತಿಧಿಯಾದರು. 2014ರ ಚುನಾವಣೆ ಬಳಿಕ ಮಹಾರಾಷ್ಟ್ರ ವಿಧಾನಸಭೆಯಲ್ಲಿಪ್ರತಿಪಕ್ಷ ದ ನಾಯಕ ಹುದ್ದೆ ಒಲಿಯಿತು. ಇದಾದ ತಿಂಗಳಲ್ಲಿಶಿವಸೇನೆಯು ಬಿಜೆಪಿ ಸರಕಾರದಲ್ಲಿಭಾಗವಹಿಸುತ್ತಿದ್ದಂತೆ ಏಕನಾಥ್‌ ಅವರು ಲೋಕೋಪಯೋಗಿ ಸಚಿವರಾದರು. ಈ ವೇಳೆ, ಯಶವಂತರಾಯ ಚವಾಣ್‌ ಮುಕ್ತ ವಿಶ್ವವಿದ್ಯಾಲಯ ನೋಂದಣಿ ಮಾಡಿಕೊಂಡರು. ಶೇ.77.25 ಅಂಕಗಳೊಂದಿಗೆ ಬಿ ಎ ಡಿಗ್ರಿಯನ್ನು ಪಡೆದುಕೊಂಡರು. ಮರಾಠಿ ಮತ್ತು ರಾಜ್ಯಶಾಸ್ತ್ರ ಮುಖ್ಯ ವಿಷಯಗಳಾಗಿದ್ದವು.  2019ರ ಎಂವಿಎ ಸರಕಾರದಲ್ಲಿಲೋಕೋಪಧಿಯೋಗಿ ಜತೆಗೆ ಜತೆಗೆ ಹೆಚ್ಚುವರಿಯಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಣೆ ಹೆಗಲೇರಿತು. ಸಚಿವರಾಗಿ ಅವರು ತುಂಬಾ ಚುರುಕಾಗಿದ್ದರು. ತಮ್ಮ ಬಳಿ ಬರುವ ಎಲ್ಲಶಾಸಕರ ಬೇಕು ಬೇಡಗಳನ್ನು ಈಡೇರಿಸುತ್ತಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು ಉನ್ನತ ಹುದ್ದೆಯ ನಾಯಕರವರೆಗೂ ಅವರು ಕೈಗೆ ಸಿಗುತ್ತಿದ್ದರು. ಇದರಿಂದಾಗಿ ಪಕ್ಷ ದೊಳಗೆ ಜನಪ್ರಿಯರಾದರು.  ಬಹುಶಃ ಈ ಗುಣಗಳೇ ಅವರ ಹಿಂದೆ 30ಕ್ಕೂ ಅಧಿಕ ಶಾಸಕರು ಬರಲು ಕಾರಣವಾಗಿರಬಹುದು!

ಅದೇನೇ ಇರಲಿ, ಮಹಾರಾಷ್ಟ್ರದಲ್ಲಿಬಹುದೊಡ್ಡ ರಾಜಕೀಯ ಪಲ್ಲಟಕ್ಕೆ ಏಕನಾಥ ಅವರು ಶ್ರೀಕಾರ ಹಾಕಿದ್ದಾರೆ. ತಮ್ಮದೇ ನಿಜವಾದ ಶಿವಸೇನೆ ಎಂದು ಹೇಳಿಕೊಳ್ಳುತ್ತಿರುವ ಅವರ ಮಂದೆ ಸಾಕಷ್ಟು ಸವಾಲುಗಳಿವೆ. ಅವರ ಬಂಡಾಯಕ್ಕೆ ಬಿಜೆಪಿ ಕೂಡ ಸಾಥ್‌ ನೀಡಿರುವ ಸಾಧ್ಯತೆಗಳಿರುವುದರಿಂದ ಸದ್ಯಧಿಕ್ಕಂತೂ ಬಂಡಾಯದಲ್ಲಿಗೆಲುವು ಅವರಿಗೇ ಒಲಿಯಧಿಬಹುದು. ಆದರೆ, ಮುಂದಿನ ಚುನಾವಣೆಗೆ ಪರಿಸ್ಥಿತಿ ಹೇಗಿರಲಿದೆ ಎಂಬುದನ್ನು ಕಾಲವೇ ಉತ್ತರಿಸಬೇಕು.



(ಈ ಲೇಖನವು ವಿಜಯ ಕರ್ನಾಟಕದ ಭಾನುವಾರ ಸಂಚಿಕೆಯ ವ್ಯಕ್ತಿಗತ ಅಂಕಣದಲ್ಲಿ ಪ್ರಕಟವಾಗಿದೆ)

 

ಬುಧವಾರ, ಜೂನ್ 8, 2022

Khalistan 2.0: ಖಲಿಸ್ತಾನ್‌ ನಿಶ್ಚಲವಷ್ಟೇ ಅದಿನ್ನೂ ಅಂತ್ಯವಾಗಿಲ್ಲ

- ಮಲ್ಲಿಕಾರ್ಜುನ ತಿಪ್ಪಾರ
ಪಂಜಾಬ್‌ ಅನ್ನು ಸೇರಿಸಿಕೊಂಡು ಉತ್ತರ ಭಾರತದ ಕೆಲವು ರಾಜ್ಯಗಳನ್ನೊಳಗೊಂಡ ಖಲಿಸ್ತಾನ್‌ ಪ್ರತ್ಯೇಕ ರಾಷ್ಟ್ರಕ್ಕಾಗಿ ಹುಟ್ಟಿಕೊಂಡಿದ್ದೇ ಖಾಲ್ಸಾ ಚಳವಳಿ. ಪ್ರತ್ಯೇಕತೆಯನ್ನು ಪ್ರತಿಪಾದಿಸುತ್ತಿದ್ದ ಈ ಚಳವಳಿ ಮುಂದೆ ಉಗ್ರಗಾಮಿ ಸಂಘಟನೆಯಾಗಿ ಬದಲಾಯಿತು. ಪ್ರತ್ಯೇಕ ಸಾರ್ವಭೌಮ ರಾಷ್ಟ್ರ ಬೇಡಿಕೆ ಹೆಸರಿನಲ್ಲಿಅಮಾಯಕ ಹಿಂದೂಗಳನ್ನು, ಸಿಖ್ಖರೇತರನ್ನು, ತಮ್ಮ ಬೇಡಿಕೆಯನ್ನು ವಿರೋಧಿಸುವ ಸಹ ಸಿಖ್ಖರನ್ನು ಕೊಲ್ಲುವ ಮೂಲಕ ಭಯೋತ್ಪಾದನೆಯ ಹಾದಿಯನ್ನು ತುಳಿಯಿತು. ಜರ್ನೈಲ್‌ ಸಿಂಗ್‌ ಭಿಂದ್ರಾನ್‌ವಾಲೆ ಈ ಖಲಿಸ್ತಾನ್‌ ಚಳವಳಿಗೆ ಹಿಂಸಾರೂಪ ನೀಡಿದ. ಸಿಖ್ಖರ ಪವಿತ್ರ ಕ್ಷೇತ್ರವಾಗಿರುವ ಅಮೃತಸರದ ಸ್ವರ್ಣ ದೇಗುಲವನ್ನೇ ತನ್ನ ಕಾರಸ್ಥಾನವನ್ನಾಗಿ ಮಾಡಿಕೊಂಡಿದ್ದ.

ಪಾಕಿಸ್ತಾನದ ಕುಮ್ಮಕ್ಕಿನಿಂದ ದೇಶದ ಸಾರ್ವಭೌಮತ್ವಕ್ಕೆ ಸವಾಲಾಗಿದ್ದ ಆತನನ್ನು ಹಿಮ್ಮೆಟ್ಟಿಸುವುದು ಅಂದಿನ ಕೇಂದ್ರ ಸರಕಾರಕ್ಕೆ ತುರ್ತು ಅಗತ್ಯವಾಗಿತ್ತು. ಅದರ ಫಲವಾಗಿ ನಡೆದಿದ್ದೇ ‘ಆಪರೇಷನ್‌ ಬ್ಲೂಸ್ಟಾರ್‌’. ಭಾರತ ಕಂಡ ಅತ್ಯಂತ ದಕ್ಷ  ಹಾಗೂ ಪ್ರಭಾವಶಾಲಿ ಪ್ರಧಾನಿಯಾದ ಇಂದಿರಾ ಗಾಂಧಿ ಅವರು ಗಟ್ಟಿ ನಿರ್ಧಾರ ಮಾಡಿ, ಅಮೃತಸರದಲ್ಲಿಬೀಡುಬಿಟ್ಟಿದ್ದ ಭಿಂದ್ರನ್‌ವಾಲೆಯನ್ನು ಮಟ್ಟ ಹಾಕಲು ಸೇನೆಗೆ ಸೂಚಿಸಿದ್ದರು. ಅವರು ಅಂದು ಕೈಗೊಂಡ ಈ ನಿರ್ಧಾರ ಸರಿಯೋ, ತಪ್ಪೋ ಎಂದು ಮೂರು ದಶಕಗಳ ಬಳಿಕವೂ ಚರ್ಚೆಯಾಗುತ್ತಲೇ ಇದೆ. ಕೆಲವು ಇತಿಹಾಸಕಾರರು ಸ್ವರ್ಣ ಮಂದಿರಕ್ಕೆ ಸೇನೆಯನ್ನು ನುಗ್ಗಿಸುವುದರ ಬದಲು ಬೇರೆ ಮಾರ್ಗದ ಮೂಲಕ ಭಿಂದ್ರನ್‌ವಾಲೆಯನ್ನು ಮಟ್ಟ ಹಾಕಬಹುದಿತ್ತು ಎಂದು ಹೇಳಿದರೆ, ಇನ್ನು ಕೆಲವರು ಇಂದಿರಾ ಕೈಗೊಂಡ ನಿರ್ಧಾರ ಸರಿಯಾಗಿತ್ತು ಎಂದು ವಾದಿಸುತ್ತಾರೆ. ಆದರೆ, ಬ್ಲೂಸ್ಟಾರ್‌ ಕಾರ್ಯಾಚರಣೆ ನಡೆದ ನಂತರದ ಘಟನೆಗಳು ಇದನ್ನು ಪುಷ್ಟಿಕರಿಸುತ್ತವೆ. ಕಾರ್ಯಾಚರಣೆಯ ಪ್ರತೀಕಾರಕ್ಕೆ ಮೊದಲಿಗೆ ಬಲಿಯಾಗಿದ್ದೇ ಪ್ರಧಾನಿ ಇಂದಿರಾ ಗಾಂಧಿ ಅವರು. ನಂತರ, ಆಪರೇಷನ್‌ ಬ್ಲೂಸ್ಟಾರ್‌ ವೇಳೆ ಸೇನಾ ನಾಯಕರಾಗಿದ್ದು ಜನರಲ್‌(ನಿವೃತ್ತ) ಎ.ಎಸ್‌. ವೈದ್ಯ, ಲೆಫ್ಟಿನೆಂಟ್‌ ಕರ್ನಲ್‌ ಕುಲ್ದಿಪ್‌ ಸಿಂಗ್‌ ಬ್ರಾರ್‌ ಅವರ ಹತ್ಯೆಯಾಯಿತು. ಇದಕ್ಕೂ ಮುಂಚೆ, ಕೆನಡಾದಲ್ಲಿದ್ದ ಖಲಿಸ್ತಾನದ ಇಬ್ಬರು ಬಂಡುಕೋರರು ಏರ್‌ ಇಂಡಿಯಾ ಕನಿಷ್ಕ ವಿಮಾನವನ್ನು ಆಕಾಶದಲ್ಲೆ ಸೊಧೀಟಿಸಿ, 329 ಜನರ ಆಹುತಿ ತೆಗೆದುಕೊಂಡರು. ಇದಿಷ್ಟು ಆಪರೇಷನ್‌ ಬ್ಲೂಸ್ಟಾರ್‌ಗೆ ಪ್ರತಿಯಾಗಿ ಪ್ರತೀಕಾರದ ಘಟನೆಗಳಾದರೆ, ಇಂದಿರಾ ಗಾಂಧಿ ಹತ್ಯೆ ಮತ್ತೊಂದು ಮಗ್ಗಲನ್ನು ಪಡೆಯಿತು. ಇದಕ್ಕೆ ಪ್ರತಿಯಾಗಿ ದಿಲ್ಲಿಸೇರಿದಂತೆ ದೇಶದೆಲ್ಲೆಡೆ ಸಾವಿರಾರು ಸಿಖ್ಖರ ಮಾರಣಹೋಮವೇ ನಡೆಯಿತು.

1984ರ ಜೂನ್‌ 3ರಿಂದ 8ರವರೆಗೆ ನಡೆದ ಬ್ಲೂಸ್ಟಾರ್‌ ಕಾರ್ಯಾಚರಣೆಗೀಗ 38 ವರ್ಷ. ವರ್ಷಾಚರಣೆ ನೆಪದಲ್ಲಿಈಗಲೂ ಖಲಿಸ್ತಾನಿ ಪರ ಘೋಷಣೆಗಳು, ಭಿಂದ್ರನ್‌ವಾಲೆಯನ್ನು ಹುತಾತ್ಮನ ರೀತಿ ನೋಡುವುದನ್ನು ನಿಂತಿಲ್ಲ. ‘ಖಲಿಸ್ತಾನ್‌ 2.0’ ನಿಧಾನವಾಗಿ ಮರುಹುಟ್ಟು ಪಡೆದುಕೊಳ್ಳುತ್ತಿರುವುದಕ್ಕೆ ಇದೆಲ್ಲವೂ ಸಾಕ್ಷಿ. ಇತ್ತೀಚಿನ ಕೆಲವು ವರ್ಷಗಳಲ್ಲಿಭಾರತ ಹಾಗೂ ಭಾರತದ ಆಚೆ ಅಂದರೆ, ಯುರೋಪ್‌ ಮತ್ತು ಅಮೆರಿಕದ ಕೆಲವು ರಾಷ್ಟ್ರಗಳಲ್ಲಿವಾಸವಾಗಿರುವ ಸಿಖ್‌ ಸಮುದಾಯದಲ್ಲಿಖಲಿಸ್ತಾನ್‌ ಚಳವಳಿಯನ್ನು ಮತ್ತೆ ಮುನ್ನೆಲೆಗೆ ತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಈ ಬಗ್ಗೆ ಭಾರತೀಯ ತನಿಖಾ ಏಜೆನ್ಸಿಗಳಲ್ಲಿಸಾಕಷ್ಟು ಸಾಕ್ಷ್ಯಾಧಾರಗಳಿವೆ ಮತ್ತು ಈ ಖಲಿಸ್ತಾನದ ಬಂಡುಕೋರರನ್ನು ಬಳಸಿಕೊಂಡು ಭಾರತದೊಳಗೆ ಅಶಾಂತಿ ಸೃಷ್ಟಿಸುವ ಪ್ರಯತ್ನವನ್ನು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಖಲಿಸ್ತಾನ್‌ ಚಳವಳಿ ನಿಶ್ಚಲವಾಗಿದೆಯಷ್ಟೇ, ಸಂಪೂರ್ಣವಾಗಿ ಸತ್ತಿಲ್ಲಎಂಬುದಕ್ಕೆ ಇತ್ತೀಚಿನ ಕೆಲವು ಘಟನೆಗಳು ನಮ್ಮ ಮುಂದಿವೆ.

ಸಿಖ್‌ ರ್ಫಾ ಜಸ್ಟೀಸ್‌ (ಎಸ್‌ಎಫ್‌ಜೆ) ಕಳೆದ ವರ್ಷ ಫೆಬ್ರವರಿಧಿಯಲ್ಲಿಪಂಜಾಬ್‌ನಲ್ಲಿಖಲಿಸ್ತಾನ್‌ ಚಳವಳಿಯನ್ನು ಪುನಃಶ್ಚೇತನಧಿಗೊಳಿಸುವುದು ಮತ್ತು ಭಾವನೆಗಳನ್ನು ಬಡಿದೆಬ್ಬಿಸುವ ಕೆಲಸವನ್ನು ಮಾಡುತ್ತಿದ್ದ ಬಗ್ಗೆ ವರದಿಗಳಿವೆ. ಎನ್‌ಐಎ ತಂಡವೊಂದು ಕಳೆದ ನವೆಂಬರ್‌ನಲ್ಲಿಕೆನಡಾಗೆ ತೆರಳಿ ಪರಿಶೀಲಿಸಿದಾಗ, ರೈತ ಚಳವಳಿಯ ಹೆಸರಿನಲ್ಲಿಒಂದು ಲಕ್ಷ ಕ್ಕೂ ಅಧಿಕ ಅಮೆರಿಕನ್‌ ಡಾಲರ್‌ ಸಂಗ್ರಹಿಸಿದ್ದನ್ನು ಪತ್ತೆ ಹಚ್ಚಿತ್ತು ಎನ್ನಲಾಗಿದೆ. ಮೇ 5ರಂದು ಖಲಿಸ್ತಾನ್‌ ಧ್ವಜವನ್ನು ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ವಿಧಾನಸಭೆ ಸಂಕೀರ್ಣದ ಮುಖ್ಯ ದ್ವಾರದಲ್ಲಿಕಟ್ಟಲಾಗಿತ್ತು. ಈ ಹಿನ್ನೆಲೆಯಲ್ಲೇ ಎಸ್‌ಎಫ್‌ಜೆ ನಾಯಕ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ವಿರುದ್ಧ ಹಿಮಾಚಲ ಪ್ರದೇಶ ಪೊಲೀಸರು ಯುಎಪಿಎ ಅಡಿ ಕೇಸ್‌ ದಾಖಲಿಸಿಕೊಂಡಿದ್ದಾರೆ. ರಾಜ್ಯದಲ್ಲಿಖಲಿಸ್ತಾನ್‌ ಪರ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಮೇ 9ರಂದು ಪಂಜಾಬ್‌ ಪೊಲೀಸ್‌ ಬೇಹುಗಾರಿಕಾ ಮುಖ್ಯ ಕಚೇರಿ ಮೇಲೆ, ಪಾಕಿಸ್ತಾನ ನಿರ್ಮಿತ ರಾಕೆಟ್‌ ಪೊ›ಪೆಲ್ಡ… ಗ್ರೆನೇಡ್‌ ದಾಳಿ ನಡೆದಿತ್ತು. ಈ ರೀತಿಯ ಘಟನೆಗಳು ನಿರಂತರವಾಗಿ ಪಂಜಾಬ್‌ ಹಾಗೂ ಸುತ್ತಮುತ್ತಲಿನ ರಾಜ್ಯಗಳಲ್ಲಿಕಂಡು ಬರುತ್ತಿವೆ.

ಖಲಿಸ್ತಾನ್‌ ಚಳವಳಿಯು ಈಗಲೂ ಸಿಖ್‌ ಸಮುದಾಯದ ಒಂದು ವರ್ಗದಲ್ಲಿಸುಪ್ತವಾಗಿದ್ದು, ಯಾವಾಗಲಾದರೂ ಅದು ಸೊಧೀಟಿಸಬಹುದು ಎಂಬುದನ್ನು ಈ ಘಟನೆಗಳು ಸಾಬೀತುಪಡಿಸುತ್ತವೆ. ಇದಕ್ಕೆಲ್ಲಭಾರತದ ಹೊರಗಡೆ ಇದ್ದುಕೊಂಡೇ ಹಲವರು ನೀರೆರೆಧಿಯುತ್ತಿದ್ದಾರೆ. ಅಂಥ ಒಂಬತ್ತು ಜನರನ್ನು ಭಾರತ ಸರಕಾರವು ಗುರುತಿಸಿದ್ದು, ಅವರನ್ನು ಉಗ್ರಗಾಮಿಗಳೆಂದು ಹೆಸರಿಸಿದೆ.  ಗುರ್ಮೀತ್‌ ಸಿಂಗ್‌ ಬಗ್ಗಾ. ಜರ್ಮನಿಯಲ್ಲಿರಾಧಾಸ್ವಾಮಿ ಪಂಥದ ಮುಖ್ಯಸ್ಥನನ್ನು ಕೊಲೆ ಮಾಡಿಸಿದ ಆರೋಪ ಈತನ ಮೇಲಿದೆ. 2019ರಲ್ಲಿಪಾಕಿಸ್ತಾನದಲ್ಲಿರುವ ಉಗ್ರ ರಂಜೀತ್‌ ಸಹಾಯದಿಂದ ಡ್ರೋನ್‌ ಮೂಲಕ ಭಾರತದೊಳಕ್ಕೆ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಾನೆ. ಬಗ್ಗಾ ಆಪ್ತ ಭೂಪೀಂದೇರ್‌ ಸಿಂಗ್‌ ಭಿಂಡಾ ಕೂಡ ಇದೇ ಕೆಲಸ ಮಾಡುತ್ತಾನೆ. ನೀತಾ ಅಲಿಯಾಸ್‌ ರಂಜೀತ್‌ ಸಿಂಗ್‌ ಪಾಕಿಸ್ತಾನಧಿದಲ್ಲಿದ್ಡುಕೊಂಡೇ ಐಎಸ್‌ಐ ಸಹಾಯದಿಂದ ಭಾರತದೊಳಗೆ ನಕಲಿ ಕರೆನ್ಸಿ, ಮಾದಕ ವಸ್ತುಗಳು ಮತ್ತು ಸೊಧೀಟಕಗಳನ್ನು ಕಳುಹಿಸುವ ಕೆಲಸ ಮಾಡುತ್ತಾನೆ.  ವಾಧ್ವಾ ಸಿಂಗ್‌ ಮತ್ತೊಬ್ಬ ಉಗ್ರಗಾಮಿ. ಈತ ಬಬ್ಬರ್‌ ಖಾಲ್ಸಾ ಅಂತಾರಾಷ್ಟ್ರೀಯ ಸಂಘಟನೆಯ ಮುಖ್ಯಸ್ಥ. ಪಂಜಾಬ್‌ನಲ್ಲಿಹಲವು ಪೊಲೀಸರನ್ನು ಕೊಂದಿರುವ ಆರೋಪವಿದೆ. ಲಕ್‌ಬಿರ್‌ ಸಿಂಗ್‌ ರೋಡೆ ಹಾಗೂ ಈತನ ಮಗ ಭಗತ್‌ ಬ್ರಾರ್‌ ಇಬ್ಬರು ಕೆನಡಾದಲ್ಲಿದ್ದು ಅಲ್ಲಿಂದಲೇ ಖಲಿಸ್ತಾನ ಚಟುವಟಿಕೆಗಳ ಜತೆ  ಕೈಜೋಡಿಸಿದ್ದಾರೆ. ಬ್ರಿಟನ್‌ಲ್ಲಿರುವ ಪ್ರಂಜಿತ್‌ ಸಿಂಗ್‌ ಪಮ್ಮಾ ಖಲಿಸ್ತಾನಿ ಉಗ್ರರಿಗೆ ಹಣಕಾಸು ನೆರವು ಒದಗಿಸುತ್ತಾನೆ. 2018ರಲ್ಲಿಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟನ್‌ಗೆ ಭೇಟಿ ನೀಡಿದಾಗ ಅವರ ವಿರುದ್ಧ ಸ್ಥಳೀಯರಲ್ಲಿಪ್ರಂಜಿತ್‌ ಸಿಂಗ್‌ ಪಮ್ಮಾ ದ್ವೇಷ ಪ್ರಚೋದಿಸುವ ಕೆಲಸ ಮಾಡಿದ್ದ. ಪರಮ್‌ಜಿತ್‌ ಸಿಂಗ್‌ ಪಂಜ್ವರ್‌ ಖಲಿಸ್ತಾನ್‌ ಕಮಾಂಡೋ ಫೋರ್ಸ್‌ ಎಂಬ ಸಂಘಟನೆಯ ನಾಯಕನೀತ. ಅಫಘಾನ್‌ಲ್ಲಿದ್ದು, ಖಲಿಸ್ತಾನಿಗಳಿಗೆ ತರಬೇತಿ ನೀಡುತ್ತಾನೆ. ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಖಲಿಸ್ತಾನ್‌ ಭಯೋತ್ಪಾದನೆಗೆ ಮರುಜೀವ ನೀಡುತ್ತಿರುವ 2020ರ ‘ನಿರ್ಣಯ’ದ ಜನಕ. ಹರ್ದೀಪ್‌ ಸಿಂಗ್‌ ನಿಜ್ಜರ್‌ ಪಾಕಿಸ್ತಾನದ ಜೈಷೆ ಮೊಹಮ್ಮದ್‌ ಸಂಘಟನೆಯೊಂದಿಗೆ ಸೇರಿಕೊಂಡು ಉಗ್ರ ಚಟುವಟಿಕೆ ನಡೆಸುತ್ತಾನೆ. ಇವರೆಲ್ಲರೂ ‘ಖಲಿಸ್ತಾನ್‌’ ಎಂಬ ಎಂದೂ ಕೈಗೂಡದ ವಿಚಾರಧಾರೆಯನ್ನು ಸದಾ ಜೀವಂತವಾಗಿಡುವ ಉದ್ದೇಶಕ್ಕಾಗಿ ಭಯೋತ್ಪಾದನೆಯಲ್ಲಿತೊಡಗಿಸಿಕೊಂಡಿದ್ದಾರೆ. 

***

ಖಲಿಸ್ತಾನದ ಬೀಜಗಳು ಮೊಳೆತಿದ್ದು 1800ರ ಅಂತ್ಯ ಮತ್ತು 1900ರ ಆರಂಭದಲ್ಲಿ. ಅಂದಿನ ಬ್ರಿಟಿಷ್‌ ಸರಕಾರದ ನೀತಿಗಳೇ ಇದಕ್ಕೆ ಕಾರಣವಾಯಿತು. 1940ರಲ್ಲೇ ಖಲಿಸ್ತಾನದ ಚಿಂತನೆಯ ಬೀಜಗಳು ಒಡೆದು ಸಸಿಗಳಾಗಲಾರಂಭಿಸಿದವು.  ಪಂಜಾಬ್‌ ಕೇಂದ್ರವಾಗಿಟ್ಟುಕೊಂಡು ಬಲೂಚಿಸ್ತಾನ, ಹಿಮಾಚಲ, ಹರಿಯಾಣ, ಜಮ್ಮು- ಕಾಶ್ಮೀರದ ಕೆಲ ಭಾಗಗಳನ್ನು ಸೇರಿಸಿಕೊಂಡು ಪ್ರತ್ಯೇಕ ಖಲಿಸ್ತಾನ್‌ ರಚಿಸುವ ಪ್ರಯತ್ನವಿದು. ಶ್ರೀಮಂತ ಹಾಗೂ ಪ್ರತ್ಯೇಕತಾವಾದಿ ಸಿಖ್ಖರ ಹಣಕಾಸು ಹಾಗೂ ಪಾಕಿಸ್ತಾನದ ಬೆಂಬಲದಿಂದ 70-80ರ ದಶಕದಲ್ಲಿಉಗ್ರವಾಗಿ ಬೆಳೆಯಿತು. 1980ರಲ್ಲಿಜಗಜಿತ್‌ ಸಿಂಗ್‌ ಚೌಹಾಣ್‌ ಎಂಬಾತ ನ್ಯಾಷನಲ್‌ ಕೌನ್ಸಿಲ್‌ ಆಫ್‌ ಖಲಿಸ್ತಾನ್‌ ಎಂಬ ಸಂಘಟನೆ ಕಟ್ಟಿದ. ಬ್ರಿಟನ್‌ಗೆ ಹೋಗಿ ಅಲ್ಲಿಂದಲೇ ಖಲಿಸ್ತಾನ್‌ ರಚನೆಯನ್ನೂ ಘೋಷಿಸಿದ. ನಂತರ ಜರ್ನೈಲ್‌ ಸಿಂಗ್‌ ಭಿಂದ್ರಾನ್‌ವಾಲೆ ಎಂಬ ಮತಾಂಧ ಧಾರ್ಮಿಕ ಗುರು ಹುಟ್ಟಿಕೊಂಡ. ಉಗ್ರ ಖಾಲ್ಸಾ ವಿಚಾರವನ್ನು ಪ್ರೋತ್ಸಾಹಿಸಿದ. ಈತನ ಕಾಲದಲ್ಲಿಪಂಜಾಬ್‌ನಲ್ಲಿಹಿಂಸೆ ತಾಂಡವವಾಡಿತು. ಅಂತಿಮವಾಗಿ 1984ರಲ್ಲಿಆಪರೇಷನ್‌ ಬ್ಲೂಸ್ಟಾರ್‌ ಮೂಲಕ ಖಲಿಸ್ತಾನ್‌ ಚಳವಳಿಯನ್ನು ಒಂದು ಹಂತಕ್ಕೆ ಹುಟ್ಟಡಗಿಸಲಾಯಿತು. ಆದರೂ, ಖಲಿಸ್ತಾನದ  ಪಳೆಯುಳಿಕೆಗಳು ಅಲ್ಲಲ್ಲಿಉಳಿದುಕೊಂಡು ಈಗ ಮತ್ತೆ ಜೀವ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತಿವೆ. ಖಲಿಸ್ತಾನ್‌ ಬಗ್ಗೆ ಸಹಾನುಭೂತಿ ಹೊಂದಿದ ಬಹಳ ಮಂದಿ ಜರ್ಮನಿ, ಬ್ರಿಟನ್‌, ಕೆನಡಾ ಮತ್ತು ಅಮೆರಿಕದಲ್ಲಿದ್ದಾರೆ. ಖಲಿಸ್ತಾನ್‌ ಜಿಂದಾಬಾದ್‌ ಫೋರ್ಸ್‌ ಎಂಬ ಹೊಸ ಸಂಘಟನೆಯೊಂದನ್ನು ಪೊಲೀಸರು 2019ರಲ್ಲಿಭೇದಿಸಿದ್ದರು. ಇದರ ನಾಯಕರಲ್ಲಿಹೆಚ್ಚಿನವರು ಜರ್ಮನಿಯಲ್ಲಿದ್ದಾರೆ.

***

ಆಪರೇಷನ್‌ ಬ್ಲೂಸ್ಟಾರ್‌ನ ಭಯಂಕರ ಪರಿಣಾಮದ ಹೊರತಾಗಿಯೂ ಅಂಥದ್ದೇ ಕಾರ್ಯಾಚರಣೆಯನ್ನು ಭಾರತವು, ‘ಆಪರೇಷನ್‌ ಬ್ಲ್ಯಾಕ್‌ ಥಂಡರ್‌’ ಹೆಸರಿನಲ್ಲಿಮತ್ತೆ ಕೈಗೊಂಡಿತು. ಆಪರೇಷನ್‌ ಬ್ಲೂಸ್ಟಾರ್‌ ವೇಳೆ ಅಳಿದುಳಿದ ಖಲಿಸ್ತಾನ ಬಂಡುಕೋರರು ಮತ್ತೆ ತಮ್ಮ ಕಾರ್ಯಾಚರಣೆಗೆ ಗೋಲ್ಡನ್‌ ಟೆಂಪಲ್‌ ಅನ್ನೇ ಬಳಸಿಕೊಳ್ಳಲಾರಂಭಿಸಿದ್ದರು. ಈ ಪ್ರಯತ್ನವನ್ನು ಹಿಮ್ಮೆಟ್ಟಿಸುವುದಕ್ಕಾಗಿಯೇ ನಡೆದ ಕಾರ್ಯಾಚರಣೆಯೇ ‘ಆಪರೇಷನ್‌ ಬ್ಲ್ಯಾಕ್‌ ಥಂಡರ್‌’. ಮೊದಲನೆ ಬಾರಿಗೆ ಕಾರ್ಯಾಚರಣೆ ನಡೆದಿದ್ದು 1986 ಏಪ್ರಿಲ್‌ 30ರಂದು. ಇದಕ್ಕಾಗಿ ರಾಷ್ಟ್ರೀಯ ಭದ್ರತಾ ದಳದ ‘ಬ್ಲ್ಯಾಕ್‌ ಕ್ಯಾಟ್‌’ ಕಮಾಂಡೋ ಪಡೆಯನ್ನು ಬಳಸಿಕೊಳ್ಳಲಾಯಿತು. ಎರಡನೇ ಬಾರಿಗೆ ಕಾರ್ಯಾಚರಣೆ ನಡೆದಿದ್ದು 1988 ಮೇ 9ರಂದು. ಎರಡೂ ಆಪರೇಷನ್‌ಗಳ ನೇತೃತ್ವ ವಹಿಸಿದ್ದವರು ಕೆ.ಪಿ.ಗಿಲ್‌. ಅವರು ಆಗ ಪಂಜಾಬ್‌ ಪೊಲೀಸ್‌ ಡಿಜಿಪಿ ಆಗಿದ್ದರು. ಅಳಿದುಳಿದ ಬಂಡುಕೋರರನ್ನು ಮಟ್ಟಹಾಕುವಲ್ಲಿಈ ಬ್ಲ್ಯಾಕ್‌ ಥಂಡರ್‌ ಕಾರ್ಯಾಚರಣೆ ಯಶಸ್ವಿಯಾಗಿತ್ತು.

ಆದರೆ, ಈಗ ಖಲಿಸ್ತಾನ್‌ 2.0 ಸಕ್ರಿಯವಾಗುತ್ತಿರುವುದು ಸ್ಪಷ್ಟ. ಹಲವು ಘಟನೆಗಳು ಇದಕ್ಕೆ ಸಾಕ್ಷ ್ಯ ಒದಗಿಸಿವೆ. ಸರಕಾರ ಈಗಲೇ ಗದಾಪ್ರಹಾರ ಮಾಡದಿದ್ದರೆ, ಮುಂದೊಂದು ದಿನ ಮತ್ತೆ ಪಂಜಾಬ್‌ ಹೊತ್ತಿ ಉರಿಯಬಹುದು, ಭಾರತದ ಸಾರ್ವಭೌಮತ್ವಕ್ಕೆ ಸವಾಲು ಎದುರಾಗಬಹುದು.