ಸೋಮವಾರ, ಜನವರಿ 4, 2021

Former home minister Buta Singh: ನಿರ್ದಯ ನಡೆಯ ಬೂಟಾ ಸಿಂಗ್‌

ತಮ್ಮ ಅನಿಯಂತ್ರಿತ ಅಧಿಕಾರದ ಚಲಾವಣೆ ಮೂಲಕ ಪ್ರಜಾಪ್ರಭುತ್ವದ ಲೋಪಗಳನ್ನು ಎತ್ತಿ ತೋರಿಸಿದ, ಆ ನೆಪದಲ್ಲಿಅದನ್ನು ಗಟ್ಟಿಗೊಳಿಸಲು ಕಾರಣರಾದ ಬೂಟಾ ಸಿಂಗ್‌ ಅವರನ್ನು ನೆನಪಿಟ್ಟುಕೊಳ್ಳಲೇಬೇಕು.


- ಮಲ್ಲಿಕಾರ್ಜುನ ತಿಪ್ಪಾರ

ಏಳು ವರ್ಷದ ಬಾಲಕನೊಬ್ಬನಿಗೆ ಆತನ ಚಿಕ್ಕಪ್ಪ, ಕಣಜದ ಗೂಡು ತೋರಿಸಿ ಅದರಲ್ಲಿಜೇನು ಇದೆ ಎಂದು ಹೇಳುತ್ತಾರೆ. ಆ ಬಾಲಕ, ಹಿಂದೆ ಮುಂದೆ ಯೋಚಿಸದೇ ಮರ ಏರಿ, ನಿರ್ದಯವಾಗಿ ಈ ಕಣಜದ ಗೂಡನ್ನು ಕೆಡವುತ್ತಾನೆ. ಗೂಡಿನಲ್ಲಿದ್ದ ಕಣಜದ ಹಾರುಹುಳಗಳು ಬೆನ್ನ ಹತ್ತಿದ್ದರಿಂದ ಮರ ಮೇಲಿಂದ ಬಿದ್ದು ಕಾಲು ಮುರಿದುಕೊಳ್ಳುತ್ತಾನೆ. 

ಆ ಬಾಲಕನೇ ಮುಂದೆ ‘ನಿರ್ದಯಿ’ ರಾಜಕಾರಣಿಯಾಗಿ ರೂಪುಗೊಂಡ ಬೂಟಾ ಸಿಂಗ್‌. ಅವರ ಈ ಸ್ವಭಾವದ ಪರಿಣಾಮಗಳು ಇಂದಿರಾ ಗಾಂಧಿ ಮತ್ತು ರಾಜೀವ್‌ ಗಾಂಧಿ ಕಾಲದಲ್ಲಿಢಾಳಾಗಿ ಎದ್ದು ಕಂಡಿತು.  ಇಂದಿರಾ ಮತ್ತು ರಾಜೀವ್‌ ಅವರ ‘ಪರಮ ನಿಷ್ಠ’ರಾಗಿದ್ದ ಬೂಟಾ, ಅವರ ಎಲ್ಲಕಾರ್ಯಗಳನ್ನು ಯಾವುದನ್ನೂ ಲೆಕ್ಕಿಸದೇ ಮಾಡಿ ಬಿಡುತ್ತಿದ್ದರು. ಪರಿಣಾಮ­ವಾಗಿ ಅವರನ್ನು ಮಾಧ್ಯಮಗಳು ಅತ್ಯಂತ ವಿವಾದಿತ ರಾಜಕಾರಣಿ, ರಾಜೀವ್‌ ಬಂಟ ಎಂದು ಇಂದಿಗೂ ಗುರುತಿಸುತ್ತವೆ. ಅಂಥ ಬೂಟಾ ಸಿಂಗ್‌ ಅವರು, ಕಾಂಗ್ರೆಸ್‌ಗೆ ಏನೆಲ್ಲಮಾಡಿದೆ. ತನ್ನ ನಿಷ್ಠೆಯನ್ನು ಯಾರೂ ಪರಿಗಣಿ ಸಲೇ ಇಲ್ಲಎಂಬ ಕೊರಗಿನಲ್ಲೇ 86ನೇ ವಯಸ್ಸಿನಲ್ಲಿಕೊನೆಯುಸಿರೆಳೆದಿದ್ದಾರೆ. 

ರಾಜೀವ್‌ ಗಾಂಧಿ ಪ್ರಧಾನಿಯಾಗಿದ್ದಾಗ ಅಕ್ಷ ರಶಃ ಅವರು ಕ್ಯಾಬಿನೆಟ್‌ನಲ್ಲಿಎರಡನೇ ಸ್ಥಾನದಲ್ಲಿ­ದ್ದರು. ಇತರ ಎಲ್ಲಸಚಿವರಿಗಿಂತಲೂ ರಾಜೀವ್‌ ಅವರನ್ನು ಬಹಳ ಸಲೀಸಾಗಿ ಭೇಟಿಯಾಗುತ್ತಿದ್ದರು. ದೇಶದ ಗೃಹ ಮಂತ್ರಿಯಾಗಿದ್ದಾಗ ರಾಜ್ಯ ಸರಕಾರಗಳನ್ನು ಕಣ್ಣು ಮಿಟುಕಿಸುವಷ್ಟರಲ್ಲಿಕೆಡವಿ ಬಿಡುತ್ತಿದ್ದರು. ಅಂಥ ನಿರ್ದಯಿ ರಾಜಕಾರಣಿ ಬೂಟಾ ಸಿಂಗ್‌. 

ರಾಜೀವ್‌ ಕಾಲದಲ್ಲಿಕಾಂಗ್ರೆಸ್‌ನ ದಲಿತ ಹಾಗೂ ಏಕೈಕ ಸಿಖ್‌ ಮುಖವಾಗಿದ್ದ ಬೂಟಾ ಸಿಂಗ್‌ ರಾಜಕಾರಣದ ಹಿನ್ನೆಲೆಯಲ್ಲಿಬೆಳೆದು ಬಂದವರಲ್ಲ. ಪಂಜಾಬ್‌ನ ಜಲಂಧರ್‌ ಜಿಲ್ಲೆಯ ಮುಸ್ತಫಾಪುರದಲ್ಲಿ1934 ಮಾರ್ಚ್‌ 21ರಂದು ಬೂಟಾ ಸಿಂಗ್‌ ಜನಿಸಿದರು. ಬೂಟಾ ಅವರದ್ದು ಸಾಧಾರಣ ಹಿನ್ನೆಲೆಯ ಕುಟುಂಬ. ಲಿಯಾಲ್‌ಪುರ ಖಾಲ್ಸಾ ಕಾಲೇಜ್‌ನಿಂದ ಬಿ.ಎ(ಆನರ್ಸ್‌) ಮತ್ತು ಬಾಂಬೆಯ ಗುರು ನಾನಾಕ್‌ ಖಾಲ್ಸಾ ಕಾಲೇಜ್‌ನಲ್ಲಿಎಂಎ ಪದವಿ ಪಡೆದುಕೊಂಡರು. ಬಳಿಕ ಬುಂದೇಲ್‌ಖಂಡ್‌ ವಿವಿಯಲ್ಲಿಪಿಎಚ್‌ಡಿ ಮಾಡಿದರು. 1964ರಲ್ಲಿಮಂಜಿತ್‌ ಕೌರ್‌ ಅವರನ್ನು ವಿವಾಹವಾದರು. ದಂಪತಿಗೆ ಮೂವರು ಮಕ್ಕಳಿದ್ದಾರೆ. 

ಬೂಟಾ ಸಿಂಗ್‌ ಅವರು ರಾಜಕಾರಣಕ್ಕೆ ಪ್ರವೇಶ ಪಡೆಯುವ ಮುಂಚೆ ಪತ್ರಕರ್ತರಾಗಿದ್ದರು. ಅಕಾಲಿ ದಳದ ಮೂಲಕ ರಾಜಕಾರಣ ಆರಂಭಿಸಿ ಕಾಂಗ್ರೆಸ್‌ನಲ್ಲಿಉತ್ತುಂಗಕ್ಕೇರಿ, ಬಿಜೆಪಿಯಲ್ಲೂಸ್ವಲ್ಪ ಕಾಲ ಇದ್ದು ಮತ್ತೆ ಕಾಂಗ್ರೆಸ್‌ಗೆ ಮರಳಿ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು. 

ಬೂಟಾ ಅವರು ಅಕಾಲಿದಳ ಸೇರುವ ಮುಂಚೆ ಮಾರ್ಕ್ಸ್‌ ವಿಚಾರಗಳಿಗೆ ಮಾರು ಹೋಗಿದ್ದರು. ಬಾಂಬೆಯ ಖಾಲ್ಸಾ ಕಾಲೇಜ್‌ನಲ್ಲಿಇತಿಹಾಸ ಓದುತ್ತಿದ್ದಾಗ ಅವರು ಬೊಲ್ಶೆವಿಕ್‌ ಸಾಹಿತ್ಯದ ಕಟ್ಟಾ ಓದುಗರು. ‘ಫೂಲ್‌ವಾರಿ’ ಮ್ಯಾಗ್‌ಜಿನ್‌ನಲ್ಲಿಪ್ರೂಫ್‌ರೀಡರ್‌ ಆಗಿ ಕೆಲಸ ಮಾಡುತ್ತಿದ್ದಾಗ, 1953ರಲ್ಲಿಜೋಸೆಫ್‌ ಸ್ಟಾಲಿನ್‌ ನಿಧನದ ಸುದ್ದಿ ತಿಳಿದಾಗ ಕಣ್ಣೀರಿಟ್ಟಿದ್ದರು. ಅಂದರೆ, ಮಾರ್ಕ್ಸ್‌ವಾದ ಅವರನ್ನು ಅಷ್ಟೊಂದು ಆವರಿಸಿಕೊಂಡಿತ್ತು. ‘ಅಕಾಲಿ ಪತ್ರಿಕಾ’ದಲ್ಲಿಉಪ ಸಂಪಾದಕರಾಗಿಯೂ ಕೆಲಸ ಮಾಡಿದ್ದಾರೆ. 1962ರಲ್ಲಿಅಕಾಲಿ ದಳ ಬೂಟಾ ಅವರನ್ನು ರೋಪರ್‌ ಮೀಸಲು ಕ್ಷೇತ್ರದಿಂದ ಲೋಕಸಭೆಗೆ ಚುನಾವಣೆಗೆ ಕಣಕ್ಕಿಳಿಸಿತು. ಮುಂದೆ ಅಕಾಲಿ ಇಬ್ಭಾಗ ಆದಾಗ ಅವರು ತಾರಾ ಸಿಂಗ್‌ ಅವರೊಂದಿಗೆ ಹೆಜ್ಜೆ ಹಾಕಿದರಾದರೂ ಅವರೊಂದಿಗೆ ಬಹಳ ದಿನ ನಿಲ್ಲಲಿಲ್ಲ. ಇಂದಿರಾ ಅವರ ಪರಿಚಯವಾದ ಮೇಲೆ ಕಾಂಗ್ರೆಸ್‌ ಸೇರಿದರು. ಆನಂತರ ನಡೆದಿದ್ದೆಲ್ಲಇತಿಹಾಸ. 

ಇಂದಿರಾ ಗಾಂಧಿ ಅವರು ‘ಆಪರೇಷನ್‌ ಬ್ಲೂಸ್ಟಾರ್‌’ ಕಾರ್ಯಾಚರಣೆ ಕೈಗೊಂಡಾಗ ಅದರ ಎಲ್ಲನಿರ್ವಹಣೆ ಮಾಡಿವರು ಇದೇ ಬೂಟಾ ಸಿಂಗ್‌. ಸಚಿವರಾಗಿ ‘ಗೋಲ್ಡನ್‌ ಟೆಂಪಲ್‌’ನ ಪುನರ್‌ ನಿರ್ಮಾಣವನ್ನು ನೋಡಿಕೊಂಡರು. ಆದರೆ, ಸಿಖ್‌ ಧಾರ್ಮಿಕ ಗುರುಗಳು ಇವರನ್ನು ‘ಧರ್ಮಭ್ರಷ್ಟ’ ಎಂದು ಘೋಷಿಸಿದರು. ಬೂಟಾ ಸಿಂಗ್‌ ಆ ಬಳಿಕ ಸ್ವರ್ಣಮಂದಿರದಲ್ಲಿಭಕ್ತರ ಚಪ್ಪಲಿ ಕ್ಲೀನ್‌ ಮಾಡಿ ಪ್ರಾಯಶ್ಚಿತ್ತ ಕೂಡ ಮಾಡಿಕೊಂಡರೆನ್ನಿ. 

ರಾಜೀವ್‌ ಗಾಂಧಿ ಅವಧಿಯಲ್ಲಿಬೂಟಾ ಸಿಂಗ್‌ ರಾಜಕಾರಣಿಯಾಗಿ, ಆಡಳಿತಗಾರನಾಗಿ ಗ್ರಾಫ್‌ ಏರುಗತಿಯಲ್ಲಿತ್ತು; ಜೊತೆಗೆ ವಿವಾದಗಳೂ. ರಾಜೀವ್‌ ಸಂಪುಟದಲ್ಲಿಪಿ.ವಿ.ನರಸಿಂಹ ರಾವ್‌ ಮತ್ತು ಪಿ ಶಿವಶಂಕರ್‌ ಅವರಂಥ ಹಿರಿಯರಿದ್ದರೂ ಬೂಟಾ ಸಿಂಗ್‌ ಅಕ್ಷ ರಶಃ ರಾಜೀವ್‌ ನಂತರದ ಸ್ಥಾನದಲ್ಲಿವಿರಾಜಮಾನರಾದರು. ರಾಜೀವ್‌ ಅವರ ಬಂಟ ಎಂದೇ ಖ್ಯಾತರಾದರು. ಈ ಅವಧಿಯಲ್ಲಿಅವರು ಪ್ರತಿಕ್ಷ ಗಳ ಮುಖ್ಯಮಂತ್ರಿಗಳನ್ನು ಅಧಿಕಾರದಿಂದ ಕೆಳಗಿಳಿಸುವಲ್ಲಿಪ್ರಮುಖ ಪಾತ್ರ ವಹಿಸಿದರು. 1988ರಲ್ಲಿಜಾನಕಿ ರಾಮಚಂದ್ರನ್‌ ಸರಕಾರ ವಜಾಗೊಳಿಸಿದರು. ಕಾಂಗ್ರೆಸ್‌ನ ಅನೇಕ ಮುಖ್ಯಮಂತ್ರಿಗಳನ್ನು ಅಧಿಕಾರದಿಂದ ದೂರ ಸರಿಸುವ ಕಾರ್ಯವನ್ನು ಬೂಟಾ ನಿರ್ದಯಿಯಾಗಿ ಮಾಡಿದರು. ರಾಜಸ್ಥಾನದಲ್ಲಿಹರಿದೇವ್‌ ಜೋಶಿ, ಮಧ್ಯ ಪ್ರದೇಶದಲ್ಲಿಮೋತಿಲಾಲ್‌ ವೋರಾ ಇದಕ್ಕೆ ಉದಾಹಣೆಯಾಗಿ ನೀಡಬಹುದು. ರಾಜೀವ್‌ ಗಾಂಧಿ 1989ರಲ್ಲಿಅಯೋಧ್ಯೆಯ ವಿವಾದಿತ ಜಾಗದಲ್ಲಿರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಅದರ ಹಿಂದೆ ಬೂಟಾ ಸಿಂಗ್‌ ಇದ್ದರು ಎಂದು ಇಂದಿಗೂ ಕಾಂಗ್ರೆಸ್‌ನವರು ಮಾತನಾಡಿಕೊಳ್ಳುತ್ತಾರೆ. 

1985ರಿಂದ 89ರ ಅವಧಿಯಲ್ಲಿಕೇಂದ್ರ ಗೃಹ ಸಚಿವರಾಗಿ ಬೂಟಾ ಸಿಂಗ್‌, ಅನೇಕ ರಾಜ್ಯ ಸರಕಾರಗಳನ್ನು ಉರುಳಿಸಲು ರಾಷ್ಟ್ರಪತಿಗೆ ಶಿಫಾರಸು ಮಾಡಿ­ದರು. ‘‘ಬೂಟಾ ಸಿಂಗ್‌ಜೀ, ನಿಮ್ಮ ಕೃಪಾಣ್‌(ಕತ್ತಿ) ಒಳಗಿಡಿ,’’ ಎಂದು ರಾಜೀವ್‌ ಅವರು ಹೇಳಿಧಿದ್ದರಂತೆ. ಅಷ್ಟೊತ್ತಿಗೆ, ಮಧ್ಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ತ್ರಿಪುರಾ, ರಾಜಸ್ಥಾನ, ಬಿಹಾರ ಮತ್ತಿತರ ರಾಜ್ಯ ಸರಕಾರಗಳನ್ನು ಬುಡಮೇಲು ಮಾಡಿಯಾಗಿತ್ತು. ಬಿಹಾರದ ರಾಜ್ಯಪಾಲರಾಗಿ­ದ್ದಾಗ ಅವರ ನಡೆದುಕೊಂಡ ರೀತಿ ಸುಪ್ರೀಂ ಕೋರ್ಟ್‌ ತೀಕ್ಷ ್ಣ ಟೀಕೆಗೂ ಗುರಿಯಾಗಿತ್ತು. 2005ರಲ್ಲಿಜೆಡಿಎಯು-­ಬಿಜೆಪಿಗೆ ಸರಕಾರ ರಚಿಸಲು ಆಹ್ವಾನ ನೀಡುವ ಬದಲು ಅಸೆಂಬ್ಲಿಯನ್ನೇ ವಿಸರ್ಜಿಸಿ ಬಿಟ್ಟಿದ್ದರು. ಕೇಂದ್ರ ಸಂಪುಟಕ್ಕೆ ತಪ್ಪು ಮಾಹಿತಿ, ಸಂಸದೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್‌ ತಪರಾಕಿ ಹಾಕಿತ್ತು. ಇದು ಬಹಳ ಚರ್ಚೆ ಕಾರಣವಾಗಿತ್ತು. ಬಳಿಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. 

ರಾಜೀವ್‌ ಬಳಿಕ ಕಾಂಗ್ರೆಸ್‌ನಲ್ಲಾದ ಬದಲಾ­ವಣೆಗಳು ಬೂಟಾ ಸಿಂಗ್‌ ಅವರನ್ನು ತೆರೆಮರೆಗೆ ಸರಿಯುವಂತೆ ಮಾಡಿದವು. ಆಗ ಅವರು ಬಿಜೆಪಿ ಸೇರಿ ವಾಜಪೇಯಿ ಸರಕಾರದಲ್ಲಿಸಚಿವರೂ ಆದರು. ಆದರೆ, ಜೆಎಂಎಂ ಲಂಚ ಪ್ರಕರಣದಲ್ಲಿಕೋರ್ಟ್‌ ಬೂಟಾ ಅವರ ವಿರುದ್ಧ ದೋಷಾರೋಪಣೆ ಮಾಡಿದ ಹಿನ್ನೆಲೆಯಲ್ಲಿಅವರನ್ನು ವಾಜಪೇಯಿ ಅವರು ಸಂಪುಟದಿಂದ ಕೈ ಬಿಟ್ಟ ಬಳಿಕ ಮತ್ತೆ ಮರಳಿ ಕಾಂಗ್ರೆಸ್‌ ಗೂಡು ಸೇರಿಕೊಂಡರು. ತಮ್ಮ ಅನಿಯಂತ್ರಿತ ಅಧಿಕಾರದ ಚಲಾವಣೆಯ ಮೂಲಕ ಭಾರತೀಯ ಪ್ರಜಾಪ್ರಭುತ್ವದ ಲೋಪಗ­ಳನ್ನು ಎತ್ತಿ ತೋರಿಸಿದ್ದಕ್ಕಾಗಿ ಮತ್ತು ಅದನ್ನು ಗಟ್ಟಿಗೊಳಿಸಲು ಪರೋಕ್ಷ ವಾಗಿ ಕಾರಣರಾದ ಬೂಟಾ ಸಿಂಗ್‌ ಅವರನ್ನು ನೆನಪಿಟ್ಟುಕೊಳ್ಳಲೇಬೇಕು!

ಸುಮಾರು ಐದು ದಶಕಗಳ ರಾಜಕೀಯ ಜೀವನದಲ್ಲಿಬೂಟಾ ಸಿಂಗ್‌ ಅವರದ್ದು ವರ್ಣರಂಜಿತ ವ್ಯಕ್ತಿತ್ವ. ವಿವಾದಗಳನ್ನೇ ಮೈಮೇಲೆ ಎಳೆದುಕೊಂಡಷ್ಟೇ ವೇಗವಾಗಿ ಅವುಗಳಿಂದ  ಹೊರಗೆ ಬರುವ ಕಲೆಯ ಅವರಿಗೆ ಗೊತ್ತಿತ್ತು. ಹಾಗಾಗಿಯೇ ಎಂಥದ್ದೇ ವಿವಾದಗಳು ಎದುರಾದರೂ ಎಲ್ಲವನ್ನು ನುಂಗಿಬಿಡುವ ಧಿಮಾಕು ಅವರಲ್ಲಿತ್ತು. ಎಂಟು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಬೂಟಾ ಸಿಂಗ್‌, ಕೇಂದ್ರ ಗೃಹ, ರೈಲ್ವೆ, ವಾಣಿಜ್ಯ, ಬಂದರು ಮತ್ತು ಹೆದ್ದಾರಿ, ಸಂಸದೀಯ ವ್ಯವಹಾರ, ಕ್ರೀಡೆ, ಹೌಸಿಂಗ್‌, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ, ನಾಗರಿಕ ಪೂರೈಕೆ-ಗ್ರಾಹಕ ವ್ಯವಹಾರ,  ಸಂವಹನ ಸೇರಿ ಹಲವು ಇಲಾಖೆಗಳನ್ನು ನಿರ್ವಹಿಸಿದ ಕಸುಬುದಾರರು. ತೀರಾ ಇತ್ತೀಚೆಗೆ ಅಂದರೆ, 2007ರಿಂದ 10ರವರೆಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ರಾಗಿಯೂ ಕೆಲಸ ಮಾಡಿದ್ದಾರೆ. ತಮ್ಮ ಆಡಳಿತಾವಧಿಯಲ್ಲಿಅನೇಕ ಜನೋಪಕಾರಿ ಕೆಲಸ ಮಾಡಿದ್ದರೂ ಜನರು ಅವುಗಳನ್ನು ನೆನಪಿನಲ್ಲಿಟ್ಟುಕೊಂಡಿಲ್ಲ. ಯಾಕೆಂದರೆ, ಬೂಟಾ ಸಿಂಗ್‌ ಈಗಲೂ, ಇಂದಿರಾ ಅವರ ನೆಚ್ಚಿಗ ಮತ್ತು ರಾಜೀವ್‌ ಅವರ ಭಂಟ. ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ವಿವಾದಿತ ರಾಜಕಾರಣಿ ಎಂಬುದು ನಿರ್ವಿವಾದ. ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯೂ ಆಗಿ ಪಕ್ಷ  ಸಂಘಟನೆಯಲ್ಲಿಅಮೂಲ್ಯ ಕೊಡುಗೆ ನೀಡಿದ್ದ ಬೂಟಾ ಸಿಂಗ್‌ ಅವರಿಗೆ ಕೊನೆಯ ದಿನಗಳಲ್ಲಿತಮ್ಮ ನಿಷ್ಠೆಯನ್ನು ಯಾರೂ ಪರಿಗಣಿಸುತ್ತಿಲ್ಲಎಂಬ ಚಿಂತೆ ಕಾಡುತ್ತಿತ್ತು. ತಮ್ಮ ಆಪ್ತರ ಬಳಿಯೂ ಹೇಳಿಕೊಂಡಿದ್ದರು. 



ಬುಧವಾರ, ಡಿಸೆಂಬರ್ 30, 2020

Jhumka Earring- ನೀನೇ ಗೆಲ್ಲುವೆ ಬಿಡು

ಹೇ ಜುಮುಕಿಯೇ, ಅವಳ ಕಿವಿಯಲ್ಲಿ ಓಲಾಡಲು ಲೈಸೆನ್ಸ್ ಯಾರು ಕೊಟ್ಟರು ನಿನಗೆ ?

ಅವಳು ಕೂದಲು
ತೀಡಿದಾಗೊಮ್ಮೆ
ಲೋಲಕವಾಗುವೆಯಲ್ಲ
ಅಣುಕಿಸುತ ನನ್ನ ?
ಅವಳ ಮುಂಗುರಳ
ಹೊಯ್ದಾಟಕ್ಕೂ
ನಿನ್ನ ಓಲಾಟಕ್ಕೂ
ಸ್ಪರ್ಧೆ ನಡೆದರೆ
ನೀನೇ ಗೆಲ್ಲುವೆ ಬಿಡು
~ ಮಲ್ಲಿಕಾರ್ಜುನ ತಿಪ್ಪಾರ



ಸೋಮವಾರ, ಡಿಸೆಂಬರ್ 28, 2020

How to use Whatsapp Payment- ವಾಟ್ಸಾಪ್‌ನಲ್ಲಿ ಹಣ ಕಳಿಸುವುದು ಹೇಗೆ?

- ಮಲ್ಲಿಕಾರ್ಜುನ ತಿಪ್ಪಾರ

ಫೇಸ್ಬುಕ್ಒಡೆತನದ ವಾಟ್ಸ್ಆ್ಯಪ್ತನ್ನ ಪೇಮೆಂಟ್ಸೇವೆಯನ್ನು ಆರಂಭಿಸುವುದಾಗಿ  ಬಹಳ ದಿನ­ಗಳಿಂ­ದಲೂ ಹೇಳುತ್ತಲೇ ಬಂದಿತ್ತು. ಭಾರತ ಸರಕಾರ ಸೂಚಿಸಿರುವ ಎಲ್ಲಮಾರ್ಗದರ್ಶಿಗಳನ್ನು ಪೂರೈಸಲು ಒಂದಿಷ್ಟು ಸಮಯ ಬೇಕಾಯಿತು. ಬಳಿಕ ಬೀಟಾ ವರ್ಷನ್ನಲ್ಲಿಸ್ವಲ್ಪ ದಿನ ಪೇಮೆಂಟ್ಸೇವೆಯನ್ನು ಜಾರಿಗೆ ತಂದು, ಇದೀಗ ಭಾರತದ ಎಲ್ಲವಾಟ್ಸ್ಆ್ಯಪ್ಬಳಕೆದಾರರಿಗೆ ದೊರೆಯುತ್ತಿದೆ.

ಸಂಪೂರ್ಣ ಡಿಜಿಟಲೀಕರಣವಾಗುತ್ತ ಸಾಗುತ್ತಿರುವ ಭಾರತದ ಮಟ್ಟಿಗೆ ವಾಟ್ಸ್ಆ್ಯಪ್ನ ಈವಾಟ್ಸ್ಆ್ಯಪ್ಪೇಸೇವೆ ಒಂದು ಮೈಲುಗಲ್ಲಾಗಲಿದೆ. ಭಾರತದಲ್ಲಿವಾಟ್ಸ್ಆ್ಯಪ್ಬಳಕೆದಾರರ ಸಂಖ್ಯೆ 34 ಕೋಟಿ. ಇಷ್ಟು ಬೃಹತ್ಪ್ರಮಾಣದ ಬಳಕೆ­ದಾರ­ರನ್ನು ಹೊಂದಿರುವ ಕಾರಣಕ್ಕೆ ಇದೊಂದು ಕ್ರಾಂತಿಕಾರಿ ನಡೆ­ಯಾಗ­ಲಿದೆ ಎಂಬುದರಲ್ಲಿಯಾವುದೇ ಅನುಮಾನವಿಲ್ಲ. ಒಂದೂಮ್ಮೆ ಇಷ್ಟು ಬಳಕೆದಾರರು ಹಣ ವರ್ಗಾವಣೆ ಮತ್ತು ಸ್ವೀಕರಿಸಲು ವಾಟ್ಸ್‌­­­­ಆ್ಯಪ್ಪೇ ಬಳಸಿದರೆ ಅದು ಅತಿದೊಡ್ಡ ಜಾಲವಾಗಬಹುದು.

ಏನಿದು ವಾಟ್ಸ್ಆ್ಯಪ್ಪೇ?

ಇದೊಂದು ಯುಪಿಐ ಆಧರಿತ ಪೇಮೆಂಟ್ಸೇವೆ ನೀಡುವ ವ್ಯವಸ್ಥೆಯಾಗಿದ್ದು, ಕಳೆದ ವರ್ಷ ಫೆಬ್ರವರಿಯಲ್ಲಿಬೀಟಾ ವರ್ಷನ್ನಲ್ಲಿವಾಟ್ಸ್ಆ್ಯಪ್ಪೇ ಚಾಲನೆಗೊಂಡಿತ್ತು. ಈಗ ಅದು ಎಲ್ಲಬಳಕೆದಾರರಿಗೂ ಲಭ್ಯವಾಗುತ್ತಿದೆ. ವಾಟ್ಸ್ಆ್ಯಪ್ಪೇ ಬಳಸಿಕೊಂಡು ಬಳಕೆದಾರರು ತಮ್ಮ ಯುಪಿಐಸಕ್ರಿಯಗೊಂಡ  ಬ್ಯಾಂಕ್ಖಾತೆಗಳನ್ನು ಸಂಪ­­ರ್ಕಿಸ­­­ಬಹುದು ಮತ್ತು ಆ ಮೂಲಕ ಹಣವನ್ನು ವರ್ಗಾವಣೆ ಮಾಡಬಹುದು. ಎಚ್ಡಿಎಫ್ಸಿ, ಐಸಿಐಸಿಐ, ಸ್ಟೇಟ್ಬ್ಯಾಂಕ್ಆಫ್ಇಂಡಿಯಾ, ಆಕ್ಸಿಸ್ಬ್ಯಾಂಕ್‌, ಏರ್ಟೆಲ್ಪೇಮೆಂಟ್ಸ್ಬ್ಯಾಂಕ್ಸೇರಿದಂತೆ ಭಾರತದಲ್ಲಿರುವ ಬಹುತೇಕ ಬ್ಯಾಂಕ್ಗಳ ಸೇವೆಯನ್ನು ವಾಟ್ಸ್ಆ್ಯಪ್ಪೇ ಒದಗಿಸುತ್ತದೆ.

ಸೆಟ್ಅಪ್ಮಾಡುವುದು ಹೇಗೆ?
ನಿಮ್ಮ ಸ್ಮಾರ್ಟ್ಫೋನ್ನಲ್ಲಿವಾಟ್ಸ್ಆ್ಯಪ್ಇದೆ ಎಂದಾಕ್ಷ ಣ ಹಣವನ್ನು ವರ್ಗಾವಣೆ ಮಾಡಲು ಅಥವಾ ಸ್ವೀಕರಿಸಲು ಬರುವುದಿಲ್ಲ. ನಿಮ್ಮ ವಾಟ್ಸ್ಆ್ಯಪ್ನಂಬರ್ಯುಪಿಐ ಜೊತೆ ಸಂಪರ್ಕ ಹೊಂದಿದ್ದರೆ, ಅಂಥ ವಾಟ್ಸ್ಆ್ಯಪ್ಅಪ್ಡೇಟ್ಮಾಡಿ. ಆಗ ವಾಟ್ಸ್ಆ್ಯಪ್ಪೇಮೆಂಟ್ಆಪ್ಷನ್ನಿಮ್ಮ ಸೆಟ್ಟಿಂಗ್ಸ್ನಲ್ಲಿಕಾಣಿಸಿಕೊಳ್ಳುತ್ತದೆ. ಒಂದೊಮ್ಮೆ ಈ ಮೊದಲು ನೀವು ಯುಪಿಐ ಜತೆ ನಿಮ್ಮ ನಂಬರ್‌, ಖಾತೆ ಸಂಪರ್ಕಿಸಿಲ್ಲವಾದರೆ ಮೊದಲು ನೀವು ವಾಟ್ಸ್ಆ್ಯಪ್ನಲ್ಲಿಯುಪಿಐ ಅಕೌಂಟ್ಸೆಟ್ಅಪ್ಮಾಡಿಕೊಳ್ಳಬೇಕು. ಆ ಬಳಿಕ ನೀವು ಹಣವನ್ನು ಕಳುಹಿಸಲು ಇಲ್ಲವೇ ಸ್ವೀಕರಿಸಲು ಸಾಧ್ಯವಾಗುತ್ತದೆ.

ಬಳಸುವುದು ಹೇಗೆ?
ಮಜಾ ಏನ್ಗೊತ್ತಾ, ನೀವು ವಾಟ್ಸ್ಆ್ಯಪ್ನಿಂದ ಫೋಟೊ, ವಿಡಿಯೋಗಳನ್ನು ಕಳಿಸುವಷ್ಟು ಸಲೀಸಾಗಿಯೇ ಹಣವನ್ನು ಕಳುಹಿಸಬಹುದು ಮತ್ತು ಸ್ವೀಕರಿಸಬಹುದು! ಚಾಟ್ಬಾರ್‌­­ನಲ್ಲಿರುವ ಷೇರ್ಫೈಲ್ಐಕಾನ್ಮೇಲೆ ಟ್ಯಾಪ್ ಮಾಡಿ ಮತ್ತು ಪೇಮೆಂಟ್ಸೆಲೆಕ್ಟ್ ಮಾಡುವುದರ  ಮೂಲಕವು ನೀವು ನೇರ­ವಾಗಿ ಹಣವನ್ನು ವರ್ಗಾವಣೆ  ಮಾಡ­ಬಹುದು. ಹಾಗೆಯೇ, ಪ್ರತ್ಯೇಕವಾಗಿ ಹಣ ವರ್ಗಾ­ವಣೆಗೋಸ್ಕರವೇ ಶಾರ್ಟ್ಕಟ್ಮೆನ್ಯುವಿನಲ್ಲಿಪೇಮೆಂಟ್ಸೆಕ್ಷ ನ್ಇದೆ. ಇಲ್ಲಿಬಳಕೆದಾರರು ಅಕೌಂಟ್ಡಿಟೇಲ್ಸ್‌, ವಹಿವಾಟು ಮತ್ತು ಹಣ ಕಳುಹಿಸಿದ ಮಾಹಿತಿ­ಯನ್ನು ತಿಳಿದುಕೊಳ್ಳಬಹುದು.

ಎಚ್ಚರ ಇರಲಿ
- ವಾಟ್ಸ್ಆ್ಯಪ್ಪೇಮೆಂಟ್ಸೇವೆ  ಎಷ್ಟು ಸರಳವಾಗಿದೆಯೋ ಅಷ್ಟೇ ಅಪಾಯಕಾರಿಯೂ ಆಗಬಹುದಾದ ಸಾಧ್ಯತೆ ಇದೆ. ಹಾಗಾಗಿ, ವಾಟ್ಸ್ಆ್ಯಪ್ಪೇ ಸೇವೆಯನ್ನು ಬಳಸುವ ಮುನ್ನ ಒಂದಿಷ್ಟು ಎಚ್ಚರಿಕೆಗಳನ್ನು ಬಳಕೆದಾರರು ವಹಿಸಲೇಬೇಕು.

- ಪೇಮೆಂಟ್ಸ್ಸಕ್ರಿಯಗೊಳಿಸುವ ಸಂಬಂಧ ವಾಟ್ಸ್ಆ್ಯಪ್ಎಂದಿಗೂ ದೂರವಾಣಿ ಕರೆ ಅಥವಾ ಸಂದೇಶಗಳನ್ನು ರವಾನಿಸುವುದಿಲ್ಲಎಂಬುದನ್ನು ನೆನಪಿಡಿ.

- ವಾಟ್ಸ್ಆ್ಯಪ್ಪೇಮೆಂಟ್ಸ್ಗೆ ಯಾವುದೇ ಅಧಿಕೃತ ಕಸ್ಟಮ್ಕೇರ್ನಂಬರ್ಇಲ್ಲ. ಹಾಗಾಗಿ, ಯಾರಾದರೂ ವಾಟ್ಸ್ಆ್ಯಪ್ಪೇ ಕಸ್ಟಮರ್ಕೇರ್ನಿಂದ ಕರೆ ಮಾಡಿದ್ದೇವೆ ಎಂದರೆ ನಂಬಲು ಹೋಗಬೇಡಿ. ಯಾಕೆಂದರೆ, ನಿಮ್ಮನ್ನು ಮೋಸಗೊಳಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.

- ನಿಮ್ಮ ಡೆಬಿಟ್ಮತ್ತು ಕ್ರೆಡಿಟ್ಕಾರ್ಡ್ವಿವರ, ಒಟಿಪಿ ಅಥವಾ ಯುಪಿಐ ಪಿನ್ನಂಬರ್ಅನ್ನು ಯಾರೊಂದಿಗೂ ವಾಟ್ಸ್ಆ್ಯಪ್ಪೇಮೆಂಟ್ಗಾಗಿ ಹಂಚಿಕೊಳ್ಳಲು ಹೋಗಬೇಡಿ.

- ವಾಟ್ಸ್ಆ್ಯಪ್ನಲ್ಲಿನಿಮಗೆ ಕಳುಹಿಸಲಾಗುವ ಅಪರಿಚಿತ, ಸಂಶಾಯಸ್ಪದ ಲಿಂಕ್ಗಳನ್ನು ಕ್ಲಿಕ್ಮಾಡಲು ಹೋಗಲೇಬೇಡಿ.

- ವಾಟ್ಸ್ಆ್ಯಪ್ನಲ್ಲಿನಿಮಗೆ ಪರಿಚಿತರಾದವರಿಂದ ಮಾತ್ರವೇ ವಾಟ್ಸ್ಆ್ಯಪ್ಪೇ ರಿಕ್ವೆಸ್ಟ್ಗಳನ್ನು

ಸ್ವೀಕರಿಸಿ. ಅಪರಿಚಿತ ರಿಕ್ವೆಸ್ಟ್ಗಳನ್ನು ಸ್ವೀಕರಿಸಲು ಹೋಗಬೇಡಿ. ಖದೀಮರು ನಿಮ್ಮ ಖಾತೆಯಿಂದ ಹಣವನ್ನು ಲಪಟಾಯಿಸಬಹುದು. ಹುಷಾರಾಗಿರಿ.

 

(ಈ ಲೇಖನವು 2020 ಡಿಸೆಂಬರ್ 27ರ ವಿಜಯ ಕರ್ನಾಟಕ ಸಂಚಿಕೆಯಲ್ಲಿ ಪ್ರಕಟವಾಗಿದೆ)