ಶುಕ್ರವಾರ, ಅಕ್ಟೋಬರ್ 31, 2008
ಶನಿವಾರ, ಅಕ್ಟೋಬರ್ 18, 2008
ಅಲೆಗಳು ಏಳುತ್ತವೆ
ಭಾನುವಾರ, ಸೆಪ್ಟೆಂಬರ್ 28, 2008
ನಗಲು ಪ್ರಯತ್ನಿಸುತ್ತಿದ್ದೇನೆ
ಕತ್ತಲೆಯೇ ಬದುಕೆಂದು
ನಂಬಿದ ನಾನು ಈಗೀಗ
ನಗಲು ಪ್ರಯತ್ನಿಸುತ್ತಿದ್ದೇನೆ
ದುಃಖದ ಸಾಗರದಲ್ಲಿ ಕೈ
ಬಿಟ್ಟು ನೀ ಹಿಂತಿರುಗಿ ನೋಡದೆ
ಹೋದಾಗ ಸಾಯಬೇಕೆಂದು
ಕೊಂಡವನಿಗೆ ಅಲೆಗಳೇ
ಈಜು ಕಲಿಸಿ ದಡಕ್ಕೆ ಎಸೆದಿವೆ ನನ್ನನ್ನು.
----
ಈಗೀಗ ಪ್ರತಿ ಸೂರ್ಯನ ಹುಟ್ಟು
ಸಾವು ಕೂಡಾ ಆಸಕ್ತಿ ಹುಟ್ಟಿಸುತ್ತಿದೆ
ರಾತ್ರಿಯಲ್ಲಿ ಚಂದ್ರನ ತಣ್ಣನೆಯ
ಬೆಳಗು ಕೂಡಾ ಹೊಮ್ಮಿಸುತ್ತಿದೆ
ನೂರಾರು ಅರ್ಥ ನನ್ನೆದೆಯ
ಭಾವದೊಳಗೆ ಆದರೆ,
ಅಲ್ಲಿ ನೀನಿಲ್ಲವೆಂಬ
ಅರಿವು ಎಚ್ಚರವಾದಾಗ
ಮತ್ತೆ ಅದೇ ಕತ್ತಲೆ ಇಷ್ಟವಾಗುತ್ತದೆ
ಆದರೂ ಪಣತೊಟ್ಟಿದ್ದೇನೆ
ಕತ್ತಲೆಯನ್ನೇ ಹಿಂಜಿ
ಬೆಳಕನ್ನು ಪಡೆಯಬೇಕೆಂದು
ಆ ಬೆಳಕಲ್ಲಿ ಹೊಸ ಲೋಕ,
ಭಾವ, ಭಾಷೆ ಕಲಿಯಬೇಕೆಂಬ
ಹಂಬಲ ನನ್ನದು.
ನಂಬಿದ ನಾನು ಈಗೀಗ
ನಗಲು ಪ್ರಯತ್ನಿಸುತ್ತಿದ್ದೇನೆ
ದುಃಖದ ಸಾಗರದಲ್ಲಿ ಕೈ
ಬಿಟ್ಟು ನೀ ಹಿಂತಿರುಗಿ ನೋಡದೆ
ಹೋದಾಗ ಸಾಯಬೇಕೆಂದು
ಕೊಂಡವನಿಗೆ ಅಲೆಗಳೇ
ಈಜು ಕಲಿಸಿ ದಡಕ್ಕೆ ಎಸೆದಿವೆ ನನ್ನನ್ನು.
----
ಈಗೀಗ ಪ್ರತಿ ಸೂರ್ಯನ ಹುಟ್ಟು
ಸಾವು ಕೂಡಾ ಆಸಕ್ತಿ ಹುಟ್ಟಿಸುತ್ತಿದೆ
ರಾತ್ರಿಯಲ್ಲಿ ಚಂದ್ರನ ತಣ್ಣನೆಯ
ಬೆಳಗು ಕೂಡಾ ಹೊಮ್ಮಿಸುತ್ತಿದೆ
ನೂರಾರು ಅರ್ಥ ನನ್ನೆದೆಯ
ಭಾವದೊಳಗೆ ಆದರೆ,
ಅಲ್ಲಿ ನೀನಿಲ್ಲವೆಂಬ
ಅರಿವು ಎಚ್ಚರವಾದಾಗ
ಮತ್ತೆ ಅದೇ ಕತ್ತಲೆ ಇಷ್ಟವಾಗುತ್ತದೆ
ಆದರೂ ಪಣತೊಟ್ಟಿದ್ದೇನೆ
ಕತ್ತಲೆಯನ್ನೇ ಹಿಂಜಿ
ಬೆಳಕನ್ನು ಪಡೆಯಬೇಕೆಂದು
ಆ ಬೆಳಕಲ್ಲಿ ಹೊಸ ಲೋಕ,
ಭಾವ, ಭಾಷೆ ಕಲಿಯಬೇಕೆಂಬ
ಹಂಬಲ ನನ್ನದು.
ಗುರುವಾರ, ಸೆಪ್ಟೆಂಬರ್ 18, 2008
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
-
ಮೂರೂ ಮಾದರಿಯ ಕ್ರಿಕೆಟ್ನಲ್ಲಿಭಾರತೀಯ ಕ್ರಿಕೆಟ್ ತಂಡದ ಕಾಯಂ ಸದಸ್ಯರಾಗಿರುವ ರವೀಂದ್ರ ಜಡೇಜಾ ಅವರೀಗ ಐಪಿಎಲ್ನಲ್ಲಿಸಿಎಸ್ಕೆ ತಂಡದ ನಾಯಕ. - ಮಲ್ಲಿಕಾರ್ಜುನ ತಿಪ್ಪಾ...
-
ಹೇ ಒರಟ, "ಈ ಪ್ರೀತಿನೇ ಹಾಗೆ, ಬಾ ಅಂದ್ರ ಬರಲ್ಲ, ಹೋಗು ಅಂದ್ರ ಹೋಗಲ್ಲ" ಅಂತ್ ನೀನೇ ಹೇಳಿದ್ದು. ನೆನಪು ಮಾಡ್ಕೊ. ಶುದ್ಧ ಒರಟ ನೀನು. ನನ್ನ ಬೆನ್ನ ಹಿಂದೆ ಬಿ...
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...