
ಸೋಮವಾರ, ಜೂನ್ 30, 2008
ಶುಕ್ರವಾರ, ಮೇ 23, 2008
ಸುರಿ ಮಳೆಯೇ ಸುರಿ

ಸುರಿ ಮಳೆಯೇ ಸುರಿ
ಮೈಗಂಟಿದ ಅವಳ
ಕಂಪು ತೊಳೆಯೋವರೆಗೂ
ನೆನಪುಗಳು ಮಾಸೋವರೆಗೂ
ಎಡಬಿಡದೆ ಸುರಿ... ಹರಿ...
ನಿನ್ನ ಹನಿಗಳನ್ನೇ
ಮುತ್ತುಗಳನ್ನಾಗಿ ಧಾರೆ
ಎರೆದೆ ಅವಳಿಗೆ
ಕನ್ನಿರೋರೆಸುವ ಕೈಗಳಾದೆ
ಹೃದಯ ಒಡೆದ ಮಾರಿಯಾದಳವಳು
ಸುರಿ ಮಳೆಯೇ ಸುರಿ... ಹರಿ...
ನನ್ನ ನೆರಳಾಗಿರುವೆಯೆಂದು
ಆಣೆ ಮಾಡಿದ್ದು ಈ ಮಳೆಯಲ್ಲೇ
ಮುರಿದಿದ್ದು ಇದೇ ಮಳೆಯಲ್ಲೇ
ನನ್ನ ಕನ್ನೀರಿಗೂ, ನಿನ್ನ
ಹನಿಗಳಿಗೂ ವ್ಯತ್ಯಾಸವೇ ಇಲ್ಲ
ಸುರಿ ಮಳೆಯೇ ಸುರಿ.. ಹರಿ..
ಭಾನುವಾರ, ಮೇ 11, 2008
ಶನಿವಾರ, ಏಪ್ರಿಲ್ 12, 2008
ದೂರ ನಿಲ್ಲಿ ಕವನಗಳೇ ..

ಸಾಕಾಗಿದೆ ಕವನಗಳ
ಸಹವಾಸ, ಹೂತ್ತುಗೂತ್ತಿಲ್ಲದೆ
ದಿಗ್ಗನೇ ಎದ್ದು ನಿಲ್ಲುವ ಭಾವಗಳಿಗೆ
ಅಕ್ಷರ ಅಂಗಿ ತೊಡಿಸುವ
ಪದಗಳೇ ದೂರ ನಿಲ್ಲಿ.
ಕಲ್ಪನೆ, ಕೌತುಕ ,
ಕಾಮವಾಂಛೆ ಮೀರಿ
ನಿಲ್ಲಲು ಸೆಣಿಸುತ್ತಿದ್ದೇನೆ
ಅಡ್ಡ ಬಂದು ಸೆಡ್ಡು
ಹೊಡೆಯಬೇಡಿ, ಪದಗಳ
ಬೇಡಿಯೊಳಗೆ ಬಂಧಿಯಾಗಲು
ನನಗಿಷ್ಟವಿಲ್ಲ
ಕನಸು, ಕನವರಿಕೆ
ನೀಗಲೆಂದೇ ದೂರ
ಹೋಗಿ ಎಂಬ ನಿವೇದನೆ
ನಿಮಗೆ, ಅದು ಹಮ್ಮು
ಎಂದರೆ ನಾನಲ್ಲ ಹೂಣೆ
ಆಕಾಶದ ಆಚೆ ಹಾರಿ
ಭೂ ಲೋಕವೆಲ್ಲಾ ತೂರಿ
ಸ್ವತಂತ್ರ, ಸ್ವೇಚ್ಚೆಯಡಿ
ಸಾಗುವ ಹುಮ್ಮಸ್ಸು ನನಗೆ
ತೊದರಗಾಲು ಹಾಕಬೇಡಿ
ದೂರ ನಿಲ್ಲಿ ಕವನಗಳೇ ....
ಶುಕ್ರವಾರ, ಫೆಬ್ರವರಿ 22, 2008
ಕಾಡ್ತಿ ಯಾಕ...?
ನೀನಿಲ್ಲದ ಈ ಮನಸ್ಸು
ಮಾಗಿ ಕಾಲದ ಎಲೆ
ಉದುರಿಸಿದ ಗಿಡದಂಗಾಗೇತಿ
ಮನಸ್ಸಿನ್ಯಾಗಿನ ಮಾತು
ಹೊರಗ ಬರದ ಗಂಟಲೋಳಗ
ಕೂತು, ತಕರಾರು ಮಾಡೈತಿ
ನೆನಪಿನ ಮರದೊಳಗ
ಕೇರೀದಸ್ಟು ನಿನ್ನ
ಸಂಗಡದ ಆ ಗಳಿಗೆಗಳು
ಮತ್ತ ಹೊಳ್ಳಿ ಹೊಳ್ಳಿ ಬರ್ತಾವ
ಕೇರೀದಾಗ ತೂರಿ ಹೋದ
ಜೋಳ್ಳ ನೆನಪುಗಳೆಲ್ಲಾ ನಂದು
ಉಳಿದ ಗಟ್ಟಿ ಮಾತೆಲ್ಲಾ ನಿಂದು
ಮರೀಬೇಕಂತ ಮನಸ್ಸಿನ್ಯಾಗಿನ
ಮಾತು ಹೊರ ಬಿಟ್ಟಿಲ್ಲ
ಆದ್ರೂ ನೀ ಯಾಕ್ ಹಂಗ ಕಾಡ್ತಿ...?
ಮಾಗಿ ಕಾಲದ ಎಲೆ
ಉದುರಿಸಿದ ಗಿಡದಂಗಾಗೇತಿ
ಮನಸ್ಸಿನ್ಯಾಗಿನ ಮಾತು
ಹೊರಗ ಬರದ ಗಂಟಲೋಳಗ
ಕೂತು, ತಕರಾರು ಮಾಡೈತಿ
ನೆನಪಿನ ಮರದೊಳಗ
ಕೇರೀದಸ್ಟು ನಿನ್ನ
ಸಂಗಡದ ಆ ಗಳಿಗೆಗಳು
ಮತ್ತ ಹೊಳ್ಳಿ ಹೊಳ್ಳಿ ಬರ್ತಾವ
ಕೇರೀದಾಗ ತೂರಿ ಹೋದ
ಜೋಳ್ಳ ನೆನಪುಗಳೆಲ್ಲಾ ನಂದು
ಉಳಿದ ಗಟ್ಟಿ ಮಾತೆಲ್ಲಾ ನಿಂದು
ಮರೀಬೇಕಂತ ಮನಸ್ಸಿನ್ಯಾಗಿನ
ಮಾತು ಹೊರ ಬಿಟ್ಟಿಲ್ಲ
ಆದ್ರೂ ನೀ ಯಾಕ್ ಹಂಗ ಕಾಡ್ತಿ...?
ಶುಕ್ರವಾರ, ಜನವರಿ 25, 2008
ನಾವೇ ಇಲ್ಲಾಗುವಾ...
ಗುರುವಾರ, ನವೆಂಬರ್ 22, 2007
ಸ್ತಬ್ಧಚಿತ್ರ
ಈ ಬಾಲ್ಯವೇ ಹಾಗೇ
ಭಾವನೆಗಳ ಬರಹಕ್ಕೆ ನಿಲುಕದ
ನೀಲಾಕಾಶ... ಎತ್ತ ನೋಡಿದತ್ತ
ಆದಿ-ಅಂತ್ಯವಿಲ್ಲದ ಸ್ತಬ್ದಚಿತ್ರ.
ಊರೂ ಹೊಡೆದು, ಊರಲ್ಲಿ ಭಾಷಣ ಬೀಗಿದು
ಮೊದಲ ಬಹುಮಾನ ತಂದದ್ದು,
ಶಿಕ್ಷಕರು ತಲೆ ನೇವರಿದ ನೆನಪು
ಈಗಲೂ ಹಚ್ಚು-ಹಸಿರು, ನವ-ನವೀರು.
ಚೇಳು ಕಡಿಸಿಕೊಂಡಿದ್ದು, ನೋವು ಮರೆಸಲು
ಅವ್ವ ಕಥೆ ಹೇಳಿದ್ದು, ಅವಳ ತೊಡೆಯ
ಮೇಲೆ ನಿದ್ದೆ ಹೊಗಿದ್ದು, ಈಗಲೂ ಚೇಳು
ಎಂದಾಗಲೆಲ್ಲ ಒತ್ತರಿಸುತ್ತದೆ ಮಾಸಿದ ನೆನಪು.
ಅಕ್ಕಳನ್ನು ಕಾಡಿದ್ದು, ತಂಗಿಯನ್ನು ಪೀಡಿಸಿದ್ದು,
ಅವ್ವಳಿಂದ ಬೈಯಿಸಿಕೊಂಡಿದ್ದು, ಗೆಳೆಯನಿಗೆ
ಹೊಡಿದಿದ್ದು, ಮತ್ತೆ ರಮಿಸಿದ್ದು, ಎಲ್ಲವೂ ಹಾಗೆ
ಇದೆ, ಗೆರೆ ಕೊರೆದ ಚಿತ್ರಗಳಂತೆ.
ಮನೆಯ ಎದುರಿಗಿದ್ದ ಟ್ರ್ಯಾಕ್ಟರ್ ಇಂಜಿನ್ ಕ್ಲಚ್ ಒತ್ತಿ
ಕಂಪೌಂಡ್ ಗೋಡೆಗೆ ಡಿಕ್ಕಿ ಹೊಡಿಸಿ, ಬಿಳಿಸಿದ್ದು, ಅಪ್ಪನಿಂದ
ಬಾಸುಂಡೆ ಏಟು ಬೀಗಿಸಿಕೊಂಡಿದ್ದು, ಇನ್ನೂ ಹಾಗೇ
ಇದೆ, ಮೊನ್ನೆ ನಡೆದ ಘಟನೆಯಂತೆ.
ಸ್ಕ್ರ್ಯೂ ಬಿಗಿಯಲು ಬಾರದೇ ಸ್ಕ್ರ್ಯೂಡ್ರೈವರ್
ಅಂಗೈ ಸೇರಿದ್ದು, ಅದ್ನೋಡಿ ಮೇಸ್ತ್ರಿ
ಕೆನ್ನೆಗೆ ಬಾರಿಸಿದ್ದು, ಕಣ್ಣೀರ್ ಕಪಾಳಕ್ಕೆ ಇಳಿದಿದ್ದು,
ರಸ್ತೆ ಬದಿಯಲ್ಲಿ ಗ್ಯಾರೆಜ್ ಕಂಡಾಗಲೆಲ್ಲ
ನೆನಪು ಕಣ್ತೆರೆಯುತ್ತದೆ.
ಇಂದಿನ ವರ್ಣಮಯ ಬದುಕಿನ
ನಡುವೆ, ಅಂದಿನ ಬಾಲ್ಯದ ಕಪ್ಪು-ಬಿಳಪು
(ವಿ)ಚಿತ್ರಗಳು ಈಗ ಬರೀ ಚಿತ್ರ, ಸ್ತಬ್ಧಚಿತ್ರ.
ಭಾವನೆಗಳ ಬರಹಕ್ಕೆ ನಿಲುಕದ
ನೀಲಾಕಾಶ... ಎತ್ತ ನೋಡಿದತ್ತ
ಆದಿ-ಅಂತ್ಯವಿಲ್ಲದ ಸ್ತಬ್ದಚಿತ್ರ.
ಊರೂ ಹೊಡೆದು, ಊರಲ್ಲಿ ಭಾಷಣ ಬೀಗಿದು
ಮೊದಲ ಬಹುಮಾನ ತಂದದ್ದು,
ಶಿಕ್ಷಕರು ತಲೆ ನೇವರಿದ ನೆನಪು
ಈಗಲೂ ಹಚ್ಚು-ಹಸಿರು, ನವ-ನವೀರು.
ಚೇಳು ಕಡಿಸಿಕೊಂಡಿದ್ದು, ನೋವು ಮರೆಸಲು
ಅವ್ವ ಕಥೆ ಹೇಳಿದ್ದು, ಅವಳ ತೊಡೆಯ
ಮೇಲೆ ನಿದ್ದೆ ಹೊಗಿದ್ದು, ಈಗಲೂ ಚೇಳು
ಎಂದಾಗಲೆಲ್ಲ ಒತ್ತರಿಸುತ್ತದೆ ಮಾಸಿದ ನೆನಪು.
ಅಕ್ಕಳನ್ನು ಕಾಡಿದ್ದು, ತಂಗಿಯನ್ನು ಪೀಡಿಸಿದ್ದು,
ಅವ್ವಳಿಂದ ಬೈಯಿಸಿಕೊಂಡಿದ್ದು, ಗೆಳೆಯನಿಗೆ
ಹೊಡಿದಿದ್ದು, ಮತ್ತೆ ರಮಿಸಿದ್ದು, ಎಲ್ಲವೂ ಹಾಗೆ
ಇದೆ, ಗೆರೆ ಕೊರೆದ ಚಿತ್ರಗಳಂತೆ.
ಮನೆಯ ಎದುರಿಗಿದ್ದ ಟ್ರ್ಯಾಕ್ಟರ್ ಇಂಜಿನ್ ಕ್ಲಚ್ ಒತ್ತಿ
ಕಂಪೌಂಡ್ ಗೋಡೆಗೆ ಡಿಕ್ಕಿ ಹೊಡಿಸಿ, ಬಿಳಿಸಿದ್ದು, ಅಪ್ಪನಿಂದ
ಬಾಸುಂಡೆ ಏಟು ಬೀಗಿಸಿಕೊಂಡಿದ್ದು, ಇನ್ನೂ ಹಾಗೇ
ಇದೆ, ಮೊನ್ನೆ ನಡೆದ ಘಟನೆಯಂತೆ.
ಸ್ಕ್ರ್ಯೂ ಬಿಗಿಯಲು ಬಾರದೇ ಸ್ಕ್ರ್ಯೂಡ್ರೈವರ್
ಅಂಗೈ ಸೇರಿದ್ದು, ಅದ್ನೋಡಿ ಮೇಸ್ತ್ರಿ
ಕೆನ್ನೆಗೆ ಬಾರಿಸಿದ್ದು, ಕಣ್ಣೀರ್ ಕಪಾಳಕ್ಕೆ ಇಳಿದಿದ್ದು,
ರಸ್ತೆ ಬದಿಯಲ್ಲಿ ಗ್ಯಾರೆಜ್ ಕಂಡಾಗಲೆಲ್ಲ
ನೆನಪು ಕಣ್ತೆರೆಯುತ್ತದೆ.
ಇಂದಿನ ವರ್ಣಮಯ ಬದುಕಿನ
ನಡುವೆ, ಅಂದಿನ ಬಾಲ್ಯದ ಕಪ್ಪು-ಬಿಳಪು
(ವಿ)ಚಿತ್ರಗಳು ಈಗ ಬರೀ ಚಿತ್ರ, ಸ್ತಬ್ಧಚಿತ್ರ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
-
ಮೂರೂ ಮಾದರಿಯ ಕ್ರಿಕೆಟ್ನಲ್ಲಿಭಾರತೀಯ ಕ್ರಿಕೆಟ್ ತಂಡದ ಕಾಯಂ ಸದಸ್ಯರಾಗಿರುವ ರವೀಂದ್ರ ಜಡೇಜಾ ಅವರೀಗ ಐಪಿಎಲ್ನಲ್ಲಿಸಿಎಸ್ಕೆ ತಂಡದ ನಾಯಕ. - ಮಲ್ಲಿಕಾರ್ಜುನ ತಿಪ್ಪಾ...
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
-
ಹೇ ಒರಟ, "ಈ ಪ್ರೀತಿನೇ ಹಾಗೆ, ಬಾ ಅಂದ್ರ ಬರಲ್ಲ, ಹೋಗು ಅಂದ್ರ ಹೋಗಲ್ಲ" ಅಂತ್ ನೀನೇ ಹೇಳಿದ್ದು. ನೆನಪು ಮಾಡ್ಕೊ. ಶುದ್ಧ ಒರಟ ನೀನು. ನನ್ನ ಬೆನ್ನ ಹಿಂದೆ ಬಿ...