ಶುಕ್ರವಾರ, ಏಪ್ರಿಲ್ 13, 2007

ಮಾತನಾಡು...

ಕೆಂಡವಾದ ಭೂ ಒಡಲಿಗೆ
ತಂಪನೆರದ ಬೆಸಿಗೆಯ ಬಿರು ಮಳೆ
ಈ ಬೆಂದ ಹೃದಯಕ್ಕೆ
ಪ್ರೀತಿಯಮಳೆಗರೆಯಬಾರದೇ..?

ಆ ನಿನ್ನ ನಿರವ ಮೌನ,
ನನ್ನಲ್ಲೆಬ್ಬಿಸಿದೆ ನೂರಾರು ಅನುಮಾನ
ನಿನ್ನ ಮಾತಿಗೆ, ಹೂ ನಗೆಗೆ
ನಿರೀಕ್ಷೆ ನೊಗ ಹೊತ್ತು.

ನೊಗಭಾರ ಇಳಿಸಿ
ಭಾರವಾದ ಹೃದಯವನ್ನು
ಬರಸೆಳೆಯಬಾರದೇ..?

ಅಷ್ಟುಕ್ಕೂ ಯಾಕೆ ಮೌನ
ಮೌನ ಮಾತಾಗಿ, ಮೆತ್ತಗಾಗಿ
ಮುತ್ತಿಕ್ಕಬಾರದೇ, ಕಾಯುವ ಹೃದಯವನ್ನ.

ಕನಸು ಕಟ್ಚಿಕೊಂಡು ಅಲೆಮಾರಿಯಾಗಿದ್ದೇನೆ
ಕಾಣದ ದಾರಿಯಲ್ಲಿ ಕಾಲಿಡುತ್ತಿದ್ದೇನೆ
ನಿನ್ನ ಮೌನ ಮಾತಾಗುತ್ತದೆ, ಉಸಿರಾಗುತ್ತದೆ ಎಂದು

ಹೇಳು ಮಾತನಾಡಲಾರೆಯಾ..?

-ಮಲ್ಲಿ

ಸೋಮವಾರ, ಏಪ್ರಿಲ್ 9, 2007

ಎಲ್ಲಿರುವೆ..?


ಪ್ರತಿ ವರುಷ ವಸಂತ
ನನಗೆ ಮಾತ್ರ ನಿತ್ಯ ನವ ದಿಗಂತ
ಭಾನತ್ತೆರಕ್ಕೆ ಹಾರಿ ಬಾನಾಡಿಯಂತೆ
ಹುಡುಕುತ್ತಿದ್ದೇನೆ ಕಾಣದ ಚೆಲವು, ಮೂಡದ ಒಲವು..

ನಾನು ಅರಸುತ್ತಿದ್ದೇನೆ ಪ್ರೀತಿ,
ನೀ ಸಿಕ್ಕು ಸಿಗದಂತಿರುವ ಆತ್ಮ ಸಂಗಾತಿ
ಬಳಕುವ ಲತೆಯಲ್ಲಿ, ಬಿರಿವ ಹೂ ಮೊಗ್ಗೆ
ಸೂರ್ಯಕಾಂತಿಗೆ ಕಾಯುವಂತೆ
ಮೊಡದ ಮರೆಯಲಿ ಮುಖ ತೋರಿಸಿ
ಮರೆಯಾಗುವ ಚಂದಿರನಂತೆ
ಕನಸಲ್ಲಿ ಕಣ್ಣು ಮಿಟುಕಿಸಿ
ಎಲ್ಲಿ ಮಾಯಾವಾದೇ ಅಂದಗಾತಿಯೇ..?

ಎಲೆಯ ಮೇಲಿನ ಮಂಜಿನ ಹನಿಯಂತೆ
ಸಿಗದೆ ಜಾರುವ ಜಾಯಮಾನದವಳೆ
ಕಂಡಷ್ಟು, ಕಾಣದಷ್ಟು ನೀ ಸನಿಹ
ನನ್ನ ಕಲ್ಪನಾ ಲೋಕದಲಿ...

- ಮಲ್ಲಿ

ಗುರುವಾರ, ಏಪ್ರಿಲ್ 5, 2007

ಕನ್ನಡ ಚಂದ್ರ

ಕನ್ನಡದ ಪೂರ್ಣಚಂದ್ರ
ಅಸ್ತಂಗತ
ಕಂಬಿನಿ ಮೀಡಿಯುತ್ತಿವೆ
ಅಸಂಖ್ಯಾತ

ಕನ್ನಡ ಕಷ್ಟಕ್ಕೆ ಬಿದ್ದಾಗ
ಅಲ್ಲಿ ಎಲ್ಲೋ ಹೂಂಕರಿಸುತ್ತಿತ್ತು
ಧ್ವನಿಯೊಂದು..
ಈಗ ಸ್ತಬ್ಧ-ನಿಶ್ಯಬ್ಧ
ಪರಿಸರ-ಅಕ್ಷರ ಎರಡು ಉಸಿರು
ಮಹಾ ಚೇತನದ ಅನಿಕೇತನಕೆ

ಕನ್ನಡಿಗರಿಗೆ ತಬರನ ಕಥೆ -ವ್ಯಥೆ
ಹೇಳಿದವ ಕಥೆಯಾದ ಈಗ
ವಿಜ್ಞಾನದ ಅಜ್ಞಾನ ತೊಲಗಿಸಿ
ಪರಿಸರ, ಪಕ್ಷಿ, ಛಾಯಚಿತ್ರ
ಎನುತ ಸಾಹಿತ್ಯ ಸಮುದ್ರ ಈಜಿದ
ಕನ್ನಡದ ಚಂದ್ರ ಅಸ್ತಂಗತ...

- ದುಃಖಿ

ಬುಧವಾರ, ಏಪ್ರಿಲ್ 4, 2007

ಆ ಮುದುಕಿ

ಆ ಮುದುಕಿ ಮಲಗಿದ್ದಾಳೆ
ಚೆನ್ನೈನ ಆ ಜನನಿಬಿಡ ರಸ್ತೆಯಲ್ಲಿ

ಹಾಗೇ ಹೋಗಿ ಬರುವವರನ್ನು ನೋಡುತ್ತಾಳೆ
ಸ್ಥಿತ ಪ್ರಜ್ಞೆ ಕಣ್ಣುಗಳಿಂದ..
ಅವರು ನೋಡುತ್ತಾರೆ ಅವಳನ್ನು.
ಕರುಣೆ ಇದ್ದವರು ಕಾಸು ಎಸೆಯುತ್ತಾರೆ
ಇಲ್ಲದವರು ಕಿಸಕ್ಕೆಂದು ನಕ್ಕು ಮುನ್ನಡೆಯುತ್ತಾರೆ

ಅವಳ ಮಲಗಿದ ಶೈಲಿಯೋ..
ವಿಷ್ಣು ಕಮಲಾರೂಢ ರೀತಿ
ಅವಳಗಿಲ್ಲ ಯಾರದೋ ಭೀತಿ
ದಿನಕರ ದಿನ ಬೆಳಗಿ ಮುಳುಗೋವರೆಗೂ
ಹಾಗೆಯೇ ಮಲಗಿರುತ್ತಾಳೆ
ಅವಳ ಸುತ್ತ ಬಿದ್ದ ಕಾಸು ಒಮ್ಮೊಮ್ಮೆ ಕಿಸಕ್ಕೇನ್ನುತ್ತದೆ..
ಮಹಾನಗರದ ಸಮಸ್ತ ಆಗು ಹೋಗು ಕಂಡು.

ಅವಳು ಈಗಮ್ಮೊ..ಆಗೊಮ್ಮೆ
ತನ್ನಡೆಗೆ ಬರುವ ವಾಹನ, ಸೂಟು-ಬೂಟುಧಾರಿಗಳನ್ನುನೋಡುತ್ತಾಳೆ...
ಏನೋ ಹೇಳಲು ಹೋಗುತ್ತಾಳೆ.
ಮಾತು ಮಾತ್ರ ಗಂಟಲಲ್ಲೇ ಉಳಿಯುತ್ತದೆ
ಮತ್ತ ಅದೇ ಸ್ಥಿತ ಪ್ರಜ್ಞೆ ದೃಷ್ಠಿ, ತದೇಕ ಚಿತ್ತ ಎಲ್ಲರತ್ತ

ಬಸಗಾಗಿ ಕಾಯುತ್ತ
ನೋಡುತ್ತೇನೆ ನಾನು ಅವಳತ್ತ
ಅವಳು ಮಾತ್ರ ಕಾಸು-ಪಾಸು ಎನ್ನುತ್ತ
ಇನ್ನಾವುದರತ್ತ ಹರಿಸಿ ಚಿತ್ತ
ನಗುತ್ತಾಳೆ. ಬಸ್ ಬಂತೆಂದು ಧಾವಿಸುವಾಗ
ಒಂದು- ಎರಡೋ ರೂಪಾಯಿ ಎಸೆಯುತ್ತೇನೆ
ಅವಳು ಮಾತ್ರ ಹಾಗೇ ಮಲಗಿರುತ್ತಾಳೆ.

-ಮಲ್ಲಿ

ಬುಧವಾರ, ಮಾರ್ಚ್ 21, 2007

ಸಾವಿನ ಮನೆಯೆಡೆಗೆ...

ಎದ್ದು ನಡೆಯುತ್ತಿದ್ದೇನೆ ಸಾವಿನ ಮನೆಯೆಡೆಗೆ

ಸಂಬಂಧಗಳ ಸಹವಾಸ ಸಾಕು ಎಂದು

ಇರಬಹುದು ಬದುಕುವದಕ್ಕೆ ಕಾರಣಗಳು ನೂರಾರು

ನಾಯುವುದಕ್ಕೆ ನನಗೆ ಕಾರಣಗಳು ಸಾವಿರಾರು

ಬಂಧ-ಅನುಬಂಧಗಳ ಹುಡಕಾಟದಲ್ಲಿ

ದೇಹ-ಮನಸ್ಸು ಜರ್ಜರಿತ

ಕೊನೆಗೂ ನಿಲುಕುಲಿಲ್ಲ

ನಾ ಬಯಿಸಿದ ಸಬಂಧ
ಬಯಿಸಿದ್ದಾದರೂ ಏನು...

ಬೊಗೆಸೆಯಷ್ಟು ಪ್ರೀತಿ

ಸಿಕ್ಕಿದ್ದೇಷ್ಟು ಸಾಸಿವೆ ಕಾಳದಷ್ಟು ಅಲ್ಲ.

ಎದ್ದು ನಡೆಯುತ್ತಿದ್ದೇನೆ ಸಾವಿನ ಮನೆಯೆಡೆಗೆ


ಅಲ್ಲಿ ಎಲ್ಲೋ ನಗುತ್ತಿವೆ

ಹಳಸಿದ ಸಂಬಂಧಗಳು

ನನ್ನ ಕಥೆ-ವ್ಯಥೆ ಕಂಡು..
ನಗಲಿ, ನಕ್ಕು ನಕ್ಕು ಅಳಲಿ

ಬಳಲಿ ಬೆಂಡಾಗಲಿ..

ನನಗಿಲ್ಲ ಅದರ ಚಿಂತೆ

ಜೀವವನ್ನೇ ಧಿಕ್ಕರಿಸೇದ್ದವನಿಗೆ

ಇನ್ನಾವದರ ಚಿಂತೆ

ತೊಡೆದು ಹಾಕಿ ಎಲ್ಲ ಭ್ರಾಂತಿ

ಸಾಗುತ್ತಿದ್ದೇನೆ ಎಲ್ಲಿಯೂ ನಿಲ್ಲದಂತೆ

ಸಾವಿನ ಮನೆಯೆಡೆಗೆ..

ನಗುವನ್ನೇ ಮರೆತವನಿಗೆ ಅಳುವಿನ ಚಿಂತೆಯೇ

ಬದುಕನ್ನು ಬೇಡ ಎಂದವನಿಗೆ ಸಾವಿನ ಅಂಜಿಕಿಯೇ

ಬದುಕು ಬವಣೆಗಳ ತಲ್ಲಣದಿಂದ

ಹೊರಬರುವುದೇ ಈ ಕ್ಷಣದ ಸತ್ಯ; ಸಾವೇ ಸಾಂಗತ್ಯ

ನೀವು ಅನ್ನಬಹುದು ನಿರಾಶಾವಾದಿ

ಆದರೆ, ಇದು ಸತ್ಯ ಆಶೆಯಲ್ಲಿ ನಿರಾಶೆ

ಮನಗಂಡವರಿಗೆ ಮಾತ್ರ

ನನ್ನ ಭಾವ ಆಗುವುದು ಅರ್ಥ

ಎದ್ದು ನಡೆಯುತ್ತಿದ್ದೇನೆ ಸಾವಿನ ಮನೆಯೆಡೆಗೆ

-ಮಲ್ಲಿ

ಸಾವಿನ ಮನೆಯೆಡೆಗೆ...

ಎದ್ದು ನಡೆಯುತ್ತಿದ್ದೇನೆ ಸಾವಿನ ಮನೆಯೆಡೆಗೆ

ಸಂಬಂಧಗಳ ಸಹವಾಸ ಸಾಕು ಎಂದು

ಇರಬಹುದು ಬದುಕುವದಕ್ಕೆ ಕಾರಣಗಳು ನೂರಾರು

ನಾಯುವುದಕ್ಕೆ ನನಗೆ ಕಾರಣಗಳು ಸಾವಿರಾರು

ಬಂಧ-ಅನುಬಂಧಗಳ ಹುಡಕಾಟದಲ್ಲಿ

ದೇಹ-ಮನಸ್ಸು ಜರ್ಜರಿತ

ಕೊನೆಗೂ ನಿಲುಕುಲಿಲ್ಲ

ನಾ ಬಯಿಸಿದ ಸಬಂಧ
ಬಯಿಸಿದ್ದಾದರೂ ಏನು...

ಬೊಗೆಸೆಯಷ್ಟು ಪ್ರೀತಿ

ಸಿಕ್ಕಿದ್ದೇಷ್ಟು ಸಾಸಿವೆ ಕಾಳದಷ್ಟು ಅಲ್ಲ.

ಎದ್ದು ನಡೆಯುತ್ತಿದ್ದೇನೆ ಸಾವಿನ ಮನೆಯೆಡೆಗೆ


ಅಲ್ಲಿ ಎಲ್ಲೋ ನಗುತ್ತಿವೆ

ಹಳಸಿದ ಸಂಬಂಧಗಳು

ನನ್ನ ಕಥೆ-ವ್ಯಥೆ ಕಂಡು..
ನಗಲಿ, ನಕ್ಕು ನಕ್ಕು ಅಳಲಿ

ಬಳಲಿ ಬೆಂಡಾಗಲಿ..

ನನಗಿಲ್ಲ ಅದರ ಚಿಂತೆ

ಜೀವವನ್ನೇ ಧಿಕ್ಕರಿಸೇದ್ದವನಿಗೆ

ಇನ್ನಾವದರ ಚಿಂತೆ

ತೊಡೆದು ಹಾಕಿ ಎಲ್ಲ ಭ್ರಾಂತಿ

ಸಾಗುತ್ತಿದ್ದೇನೆ ಎಲ್ಲಿಯೂ ನಿಲ್ಲದಂತೆ

ಸಾವಿನ ಮನೆಯೆಡೆಗೆ..

ನಗುವನ್ನೇ ಮರೆತವನಿಗೆ ಅಳುವಿನ ಚಿಂತೆಯೇ

ಬದುಕನ್ನು ಬೇಡ ಎಂದವನಿಗೆ ಸಾವಿನ ಅಂಜಿಕಿಯೇ

ಬದುಕು ಬವಣೆಗಳ ತಲ್ಲಣದಿಂದ

ಹೊರಬರುವುದೇ ಈ ಕ್ಷಣದ ಸತ್ಯ; ಸಾವೇ ಸಾಂಗತ್ಯ

ನೀವು ಅನ್ನಬಹುದು ನಿರಾಶಾವಾದಿ

ಆದರೆ, ಇದು ಸತ್ಯ ಆಶೆಯಲ್ಲಿ ನಿರಾಶೆ

ಮನಗಂಡವರಿಗೆ ಮಾತ್ರ

ನನ್ನ ಭಾವ ಆಗುವುದು ಅರ್ಥ

ಎದ್ದು ನಡೆಯುತ್ತಿದ್ದೇನೆ ಸಾವಿನ ಮನೆಯೆಡೆಗೆ

-ಮಲ್ಲಿ

ಶನಿವಾರ, ಮಾರ್ಚ್ 17, 2007

ಮುಂಗಾರು ಸಿಂಚನ

ಮಲ್ಲಿಗೆಯ ಮುಖಕ್ಕೆ ಮುಂಗಾರು ಸಿಂಚನ
ಚಿತ್ತ ಚಿತ್ತಾರ ಮೂಡಿಸಿದೆ
ಆ ನಿನ್ನ ಕರಿ ಮುಂಗುರುಳಿನ ಕುಂಚ
ನನ್ನೆದೆಯ ಬಾಂದಳವೆಲ್ಲ ಕಂಪನ

ಸ್ನಿಗ್ಧ ಸೌಂದರ್ಯದ ಸುರತಿ
ನನ್ನ ನಗುವೆಲ್ಲಾ ನೀನು
ನನ್ನ ಕನಸು,ಕನವರಿಕೆ ನೀನು
ನೀನಿಲ್ಲದ ಬಾಳು ಬಾಳೇ..?

ಸಾವಿರ ಸಂಕೋಲೆ ದಾಟಿ
ಕೈಹಿಡಿವೆ ಈ ಜಗವ ಮೀಟಿ
ನೀನೊಬ್ಬಳಿದ್ದರೆ ಸಾಕು
ಕಾಲ ಕೆಳಗೆ ಆ ನಾಕು

ನಿನ್ನ ನಗುವಿನ ಅಲೆಗಳು
ನನ್ನ ಯಶಸ್ಸಿನ ಕಲೆಗಳು
ಆ ಅಳು, ದು:ಖ ದುಮ್ಮಾನ
ಇರಲಿ ಕಡಲಾಚೆ....

-Malli