ಭಾನುವಾರ, ಜೂನ್ 28, 2009

ನಿಶಕ್ತ ಕಾಲುಗಳು

ಚಿಕ್ಕವನಿದ್ದಾಗಲೇ ಮೇಲೆದ್ದ. ಮೇಲದ್ದಾಗಲೇ ಬಿದ್ದ
ಮಕ್ಕಳೇ ದೇವರೆಂದ, ಮಕ್ಕಳಿಗೆ ಇವನೇ ದೆವ್ವೆಂದರು.
ಗೆದ್ದಷ್ಟೇ ಸೋತ. ಸೋತಷ್ಟೇ ಮತ್ತೆ ಚಿಗಿತ.
ಚಿಗಿಯುವಾಗಲೂ, ನೆಗೆಯುವಾಗಲೂ ತಾನೇ ತಾನಾದ.
ಕರಿ ಬಿಳಿ ತೊಗಲಿನ ಮಧ್ಯೆ ಕುಣಿದ, ಕುಪ್ಪಳಿಸಿದಎಲುಬುಗಳು
ಮುರಿಯವಂತೆ ಮೈ ಮಣಿಸಿದ ಕಾಲ್ ಕುಣಿಸಿದ,
ದನಿ ಎತ್ತರಿಸಿ, ತಗ್ಗಿಸಿದ ಪ್ರತಿ ಏರಿಳಿತದಲ್ಲೂ
ನೋವು-ನಲಿವು ನಗಿಸಿದ ಪಾಪ್ ಎಂದು ಮೂಗು ಮುರಿಯೋರೋಮೂಗ್
ಮೇಲೆ ಬೆರಳಿಟ್ಟರು, ಕಣ್ಣೀರಿಟ್ಟರು
ಸರ ಸರ ಸರಿದಾಡುವ, ಹರಿದಾಡುವ ಕಾಲುಗಳಿಗೆ ಕಣ್, ಮನ ಸೋತರು.
ಈಗ ಕಾಲುಗಳೇ ನಿತ್ರಾಣ, ನಿಶಕ್ತ ಹಾಡುವ ರಾಗ, ನಿರಾಗ,
ಕೇಳುವಗಡಿ-ಭಾಷೆ ಬೇಧಿಸಿ, ರಾಗ-ದ್ವೇಷ ಸರಿಸಿ ನಾದ ಹರಿಸಿದ.
ಕೊನೆಗೇ ತಾನೇ ನಿನಾದನಾದ.
ನನ್ನ ಕತ್ತರಿಸಿದರೂ ಹರಿಯೋದುಕೆಂಪ ರಕ್ತ, ಕರಿಯಲ್ಲ
ಎನ್ನುತ್ತಲೇ ಬಿಳಿ ಚರ್ಮಕ್ಕೆ ಮನಸೋತ ಬಣ್ಣ ಬಲಾಯಿಸಿದ
ಬಣ್ಣವೇನೋ ಬದಲಾಯಿತು. ಮನಸ್ಸು?

ಬುಧವಾರ, ನವೆಂಬರ್ 19, 2008

ಏನು ಬರೆಯಲಿ ಹೇಳು...?

ಬರೆಯಲು ಹೊರಟವನ
ಅಂತರಂಗವೆಲ್ಲ ಖಾಲಿಯಾದಾಗ
ಸುಟ್ಟು ಹೋದ ಕನಸುಗಳ
ವಾಸನೆ ಮೂಗಿಗೆ ಅಡರುತ್ತಿರುವಾಗ
ಬರೆಯುವದಾದರು ಹೇಗೆ ಹೇಳು..?
ಆಗುಂತಕಳಾಗಿ ಎದುರಾಗಿ, ಮರೆಯಾದೆ
ಮರೆಯಾಗುವ ಮುನ್ನ
ಮಾಸಲಾರದ ಬರೆ ಹಾಕಿದೆ
ಬರೆ ಇನ್ನು ಹಸಿ ಹಸಿಯಾಗಿರುವಾಗಲೇ
ಹಾಳೆಯ ಮೇಲೆ ಗೆರೆಯಾದ್ರೂ
ಹೇಗೆ ಮೊಡಿತು ಹೇಳು...?
ಬದುಕಿದ್ದು ಸತ್ತಂತಿರುವಾಗ
ಭಾವವಾಗುವ ಅಕ್ಷರಗಳಿಗೆ
ಜೀವವನ್ನಾದರೂ ಹೇಗೆ ತುಂಬಲಿ...?
ನಾ ಹಾಳಾಗುವ ಮುನ್ನ
ಒಮ್ಮೆ ನೀ ಹರಸು
ಎಂದೆಂದಿಗೂ ನಾ ನಿನ್ನ
ನೀ ನನ್ನ ನೋಡದಂತೆ

ಸೋಮವಾರ, ನವೆಂಬರ್ 17, 2008

ಮರೆಯೋದಲ್ಲ

ಮಳೆಗೆ ಅಳೋದು ಮಾತ್ರ ಗೊತ್ತು

ನಗೋದಲ್ಲ

ಸೂರ್ಯನಿಗೆ ಸುಡೋದು ಗೊತ್ತು

ಆರಿಸೋದಲ್ಲ

ಆದರೆ

ನನಗೆ ನಿನ್ನ ನೆನಪು

ಮಾಡಿಕೊಳ್ಳುದು ಗೊತ್ತು

ಮರೆಯೋದಲ್ಲ

- ಇದು ನನಗೆ ಇಷ್ಟವಾದ ಒಂದು ಶಾಯರಿಯ ಭಾವಾನುವಾದ