ಬುಧವಾರ, ಜನವರಿ 30, 2019

ಜಾರ್ಜ್ ನೆನಪು: ನಂದಿದ ಸಮಾಜವಾದದ ಕಿಡಿ

ಮಲ್ಲಿಕಾರ್ಜುನ ತಿಪ್ಪಾರ 

ಭಾರತೀಯ ರಾಜಕೀಯ ದಿಗಂತದಲ್ಲಿ ಜಾರ್ಜ್‌ ಫರ್ನಾಂಡಿಸ್‌ ಎಂಬ ಧ್ರುವತಾರೆ ಅಸ್ತಂಗತವಾಗಿದೆ. ಜಾರ್ಜ್‌ ಅವರು 'ಹೋರಾಟ ರಾಜಕಾರಣ'ದ ಕೊನೆಯ ಕೊಂಡಿ. ಹೋರಾಟದ ಮೂಲಕವೇ ರಾಜಕೀಯ ಏಳ್ಗೆ ಕಂಡು, ಜನ ಮತ್ತು ದೇಶಕ್ಕೆ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯದನ್ನು ಮಾಡಿದವರು. ಅವರನ್ನು ಕೇವಲ ರಾಜಕಾರಣಿ ಎಂಬ ಒಂದೇ ಪದದಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಹೋರಾಟಗಾರ, ಕಾರ್ಮಿಕ ಮುಖಂಡ, ಪ್ರಖರ ಸಮಾಜವಾದಿ, ಸಮತಾವಾದಿ, ಅತ್ಯುತ್ತಮ ವಾಗ್ಮಿ... ಹೀಗೆ ಏನೆಲ್ಲ ವಿಶೇಷಣಗಳನ್ನು ಅವರಿಗೆ ಧಾರಾಳವಾಗಿ ನೀಡಬಹುದು. ಅವರು ಎಂದೂ ತಾವು ನಂಬಿದ ಸಿದ್ಧಾಂತಕ್ಕೆ ತಿಲಾಂಜಲಿ ಇಡಲಿಲ್ಲ. ರಾಜಕೀಯದಲ್ಲಿ ಏರಬೇಕಾದ ಎಲ್ಲ ಮಜಲುಗಳನ್ನು ಏರಿದರು; ಯಾವುದಕ್ಕೂ ರಾಜಿಯಾಗಲಿಲ್ಲ. ಅಧಿಕಾರ ಸುಖ ಅವರನ್ನು ಆಲಸಿಯಾಗಿ ಮಾಡಲಿಲ್ಲ; ಗರ್ವಿಷ್ಠರನ್ನಾಗಿಸಲಿಲ್ಲ. ಅಧಿಕಾರ ಬರುವ ಮುಂಚೆ ಹೇಗಿದ್ದರೋ, ಕುರ್ಚಿಯಲ್ಲಿ ಕುಳಿತಾಗಲೂ ಹಾಗೆಯೇ ಇದ್ದರು. ತಾವು ಏರಿದ ಪ್ರತಿ ಹುದ್ದೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದು ಅವರ ದೊಡ್ಡತನ. 

ಅವರ ಉಡುಗೆ ತೊಡುಗೆ ಸಿಂಪಲ್‌. ಒಂದು ಖಾದಿ ಪ್ಯಾಂಟ್‌; ಇಸ್ತ್ರಿಯಾಗದ ಖಾದಿ ಜುಬ್ಬಾ, ಇಷ್ಟೆ ಅವರ ತೊಡುಗೆ. ಬಿಳಿ ಕೂದಲು ತುಂಬಿದ ತಲೆ, ಮುಖಕ್ಕೊಂದು ಅಗಲವಾದ ಕನ್ನಡಕ ಅವರ ಒಟ್ಟು ವ್ಯಕ್ತಿತ್ವಕ್ಕೆ ಒಂದು ಗಂಭೀರತೆಯನ್ನು ತಂದುಕೊಟ್ಟಿತ್ತು. ಆದರೆ, ಅವರ ಜೀವನ ಮಾತ್ರ ಸರಳವಾಗಿರಲಿಲ್ಲ. ಮೂಲತಃ ಕರ್ನಾಟಕದವರಾದರೂ ಇಡೀ ಭಾರತವೇ ಅವರ ಹೋರಾಟದ ಅಂಗಣವಾಗಿತ್ತು. ಅವರು ಕಾಲಿಟ್ಟ ಕಡೆ ಹೋರಾಟದ ಹೆಜ್ಜೆಗಳು ಮೂಡುತ್ತಿದ್ದವು. ಮಂಗಳೂರು, ಬೆಂಗಳೂರು, ಮುಂಬಯಿ, ಬಿಹಾರ, ದಿಲ್ಲಿ... ಹೀಗೆ ಅವರ ಕಾರ್ಯಕ್ಷೇತ್ರ ಹರಡಿಕೊಳ್ಳುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಗ್ಗೆ ಯಾವಾಗಲೂ ಚಿಂತನೆಗಳಿರುತ್ತಿದ್ದವು. ಕಾರ್ಮಿಕರ ಶ್ರೇಯೋಭಿವೃದ್ಧಿಯೇ ಮೂಲಮಂತ್ರವಾಗಿತ್ತು. ಅವರ ಹಿತರಕ್ಷ ಣೆಗೆ ಎಂಥ ಹೋರಾಟಕ್ಕೂ ಅಣಿಯಾಗುತ್ತಿದ್ದರು. ಒಮ್ಮೆ ಅವರ ಮುಷ್ಕರ ಕರೆಗೆ ಇಡೀ ದೇಶವೇ ಸ್ತಬ್ಧವಾಗಿತ್ತು; ಅಂಥ ಧೀಃಶಕ್ತಿ ಅವರಲ್ಲಿತ್ತು. ಆದರೆ, ಅವರ ಕೊನೆಯ ದಿನಗಳು ಮಾತ್ರ ಯಾತನಾಮಯವಾಗಿದ್ದವು ಎಂಬುದು ಅವರನ್ನು ಇಷ್ಟಪಡೋರಿಗೆ ಅರಗಿಸಿಕೊಳ್ಳಲಾಗದ ಸಂಗತಿ. 

ಕನ್ನಡದ ಕುವರ:ಜಾರ್ಜ್‌ ಫರ್ನಾಂಡಿಸ್‌ ಕನ್ನಡದವರು ಎಂಬುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಅವರು ಕರಾವಳಿಯ ಮಂಗಳೂರಿನವರು. 1930 ಜೂನ್‌ 3ರಂದು ಮಂಗಳೂರಿನ ಕ್ಯಾಥೋಲಿಕ್‌ ಕುಟುಂಬದಲ್ಲಿ ಜನಿಸಿದರು. ತಂದೆ ಜೋಸೆಫ್‌ ಫರ್ನಾಂಡಿಸ್‌, ತಾಯಿ ಅಲಿಶಾ ಮಾರ್ಥಾ ಫರ್ನಾಂಡಿಸ್‌. ಇವರಿಗೆ ಆರು ಮಕ್ಕಳು. ಜಾರ್ಜ್‌ ಹಿರಿಯರು. ಕುಟುಂಬದಲ್ಲಿ ಜಾರ್ಜ್‌ ಅವರನ್ನು ಪ್ರೀತಿಯಿಂದ ಎಲ್ಲರೂ ಜರ್ರಿ ಎಂದು ಕರೆಯುತ್ತಿದ್ದರು. ಜೋಸೆಫ್‌ ಅವರದ್ದು ಕ್ರಿಶ್ಚಿಯನ್‌ ಸಂಪ್ರದಾಯಸ್ಥ ಕುಟುಂಬ. ಹಾಗಾಗಿ, ಹಿರಿಯ ಮಗ ಪಾದ್ರಿಯಾಗಲಿ ಎಂದು ಅವರನ್ನು ಪಾದ್ರಿ ತರಬೇತಿಗೆ ಬೆಂಗಳೂರಿಗೆ ಕಳುಹಿಸಿಕೊಟ್ಟರು. ಆದರೆ ಜಾರ್ಜ್‌ ಪಾದ್ರಿಯಾಗಲಿಲ್ಲ. ಬೆಂಗಳೂರು ಬಿಟ್ಟು ಸೀದಾ ಮುಂಬೈ(ಅಂದಿನ ಬಾಂಬೆ)ಗೆ ತೆರಳಿದರು. ಆಗ ಅವರಿಗೆ ಕೇವಲ 19 ವರ್ಷ. ಮುಂಬೈನ ಬೀದಿಗಳಲ್ಲಿ ಅಲೆಯುತ್ತಿದ್ದ ಜಾರ್ಜ್‌ಗೆ ಪರಿಚಯದವರು ಯಾರೂ ಇರಲಿಲ್ಲ. ಎಷ್ಟೋ ಸಾರಿ ಅವರು ಸಮುದ್ರ ತೀರ ಮತ್ತು ರಸ್ತೆಗಳಲ್ಲಿ ಮಲಗುತ್ತಿದ್ದರು. ಸ್ಥಳೀಯ ಪತ್ರಿಕೆಯೊಂದರಲ್ಲಿ ಕೆಲಸ ಸಿಗುವವರೆಗೂ ಕೈಗೆ ಸಿಕ್ಕ ಕೆಲಸಗಳನ್ನು ಮಾಡಿದರು. ಮುಂಬೈಯಲ್ಲಿ ಅವರದ್ದು ಅಕ್ಷ ರಶಃ ಕಷ್ಟದ ಜೀವನವೇ ಆಗಿತ್ತು. 

ಲೋಹಿಯಾ ಮತ್ತು ಡಿಮೆಲ್ಲೊ ಸಂಪರ್ಕ: 
ಮುಂಬೈ ಜೀವನದಲ್ಲಿ ಹೋರಾಟ ಬದುಕು ನಡೆಸುತ್ತಿರುವಾಗಲೇ ಸಮಾಜವಾದಿ ನಾಯಕ ರಾಮಮನೋಹರ ಲೋಹಿಯಾ ಮತ್ತು ಹಿರಿಯ ಕಾರ್ಮಿಕ ಮುಖಂಡ ಡಿ'ಮೆಲ್ಲೊ ಅವರ ಸಂಪರ್ಕ ಜಾರ್ಜ್‌ಗೆ ದೊರಕಿತು. ಇಲ್ಲಿಂದಲೇ ಜಾರ್ಜ್‌ ಅವರ ಹೋರಾಟದ ಮಜಲುಗಳು ಆರಂಭವಾದವು. ಅದು ಕಾರ್ಮಿಕ ಚಳವಳಿಕ ಉಚ್ಛ್ರಾಯ ಕಾಲ. ಹಾಗಾಗಿ, ನಿಧಾನವಾಗಿ ಕಾರ್ಮಿಕ ಚಳವಳಿಯಲ್ಲಿ ಜಾರ್ಜ್‌ ಅಗ್ರಗಣ್ಯ ನಾಯಕರಾಗಿ ರೂಪುಗೊಂಡರು. ಅಲ್ಲಿಂದ ಅವರು 1961ರಲ್ಲಿ ಬಾಂಬೆ ಮುನ್ಸಿಪಲ್‌ ಕಾರ್ಪೊರೇಷನ್‌ಗೆ ಸ್ಪರ್ಧಿಸಿ ಆಯ್ಕೆಯಾದರು. ಹೋರಾಟದ ಜತೆಗೆ ರಾಜಕೀಯ ಜೀವನವನ್ನು ಆರಂಭಿಸಿದರು. 

ಜಾರ್ಜ್‌ ದಿ ಜೈಂಟ್‌ ಕಿಲ್ಲರ್‌! 
ಕಾರ್ಪೊರೇಷನ್‌ಗೆ ಆಯ್ಕೆಯಾದ ಆರು ವರ್ಷದ ಬಳಿಕ ಜಾರ್ಜ್‌ ಲೋಕಸಭೆ ಸ್ಪರ್ಧೆಗೆ ಮುಂದಾದರು. ದಕ್ಷಿಣ ಮುಂಬೈ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸಿದರು. ಅವರ ಎದುರಾಳಿ, ಮಹಾರಾಷ್ಟ್ರದ ಅಂದಿನ ಪ್ರಖ್ಯಾತ ಕಾಂಗ್ರೆಸ್‌ ನಾಯಕ ಎಸ್‌.ಕೆ.ಪಾಟೀಲ್‌. ಈ ಚುನಾವಣೆಯಲ್ಲಿ ಜಾರ್ಜ್‌ ಅವರನ್ನು ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ, ಫಲಿತಾಂಶ ಪ್ರಕಟವಾದಾಗ ಮಾತ್ರ ಎಲ್ಲರಿಗೂ ಆಶ್ಚರ್ಯವಾಗಿತ್ತು. ಪ್ರಭಾವಿ ಪಾಟೀಲ್‌ರನ್ನು ಸೋಲಿಸಿ ಜಾರ್ಜ್‌ ಆಯ್ಕೆಯಾಗಿದ್ದರು. ಅಲ್ಲಿಂದಲೇ ಅವರಿಗೆ ಎಛಿಟ್ಟಜಛಿ, Thಛಿ ಎಜಿa್ಞಠಿ ಓಜ್ಝ್ಝಿಛ್ಟಿ ಎಂಬ ಹೆಸರು ಬಂತು. ಇಲ್ಲಿಂದ ಅವರು ರಾಜಕೀಯದಲ್ಲಿ ಹಿಂದಿರುಗಿ ನೋಡಲಿಲ್ಲ. ಹೋರಾಟದ ಜತೆಗೆ ರಾಜಕೀಯದಲ್ಲಿ ಒಂದೊಂದೇ ಮೆಟ್ಟಿಲು ಮೇಲೇರಿದರು. 

ಭೂಗತ ನಾಯಕ:1974ರ ಹೊತ್ತಿಗೆ ದೇಶದಲ್ಲಿ ಜಾರ್ಜ್‌ ಜನಪ್ರಿಯ ಹೆಸರಾಗಿತ್ತು. ಈ ಅವಧಿಯಲ್ಲಿ ಅವರು ರೇಲ್ವೆ ಕಾರ್ಮಿಕರ ಮುಷ್ಕರಕ್ಕೆ ಕರೆ ಕೊಟ್ಟಿದ್ದರು. ಅದು ಎಷ್ಟು ಪರಿಣಾಮಕಾರಿ ಕರೆಯಾಗಿತ್ತು ಎಂದರೆ, ಇಡೀ ದೇಶ ಅಕ್ಷ ರಶಃ ಸ್ತಬ್ಧವಾಗಿತ್ತು. ಈ ಮುಷ್ಕರಕ್ಕೆ ದೇಶದ ಎಲ್ಲ ಉದ್ಯಮ ವಲಯಗಳಿಂದ ಬೆಂಬಲ ದೊರಕಿತ್ತು. ಮೂರು ವಾರಗಳ ಈ ಮುಷ್ಕರ ಅಂದಿನ ಪ್ರಧಾನಿ ಇಂದಿರಾ ಗಾಂಧಿಯಲ್ಲೂ ಅಭದ್ರತೆ ಹುಟ್ಟು ಹಾಕಿತ್ತು ಎಂದರೆ ಅದರ ಪರಿಣಾವನ್ನು ಯಾರಾದರೂ ಊಹಿಸಬಹುದು. ಇದೇ ಸಂದರ್ಭದಲ್ಲಿ 'ಲೋಕ ನಾಯಕ' ಜಯಪ್ರಕಾಶ್‌ ನಾರಾಯಣ್‌ ಅವರ ಮೂವ್‌ಮೆಂಟ್‌ ಫಾರ್‌ ಚೇಂಜ್‌ ಚಳವಳಿಯಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದರು. ಆಂತರಿಕವಾಗಿ ಹೆಚ್ಚುತ್ತಿದ್ದ ಸರಕಾರ ವಿರೋಧಿ ಧೋರಣೆ ಮತ್ತೊಂದೆಡೆ ಕೋರ್ಟ್‌ನಲ್ಲಾದ ಹಿನ್ನಡೆಯನ್ನು ಅರಗಿಸಿಕೊಳ್ಳಲಾಗದ ಇಂದಿರಾ ಗಾಂಧಿ 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಪ್ರತಿಪಕ್ಷ ನಾಯಕರು ಜೈಲು ಪಾಲಾದರು. ಆಗ ಜಾರ್ಜ್‌ ಮತ್ತು ಅವರ ಜತೆಗಿದ್ದವರು ಭೂಗತರಾದರು. ಈ ಸಂದರ್ಭದಲ್ಲಿ ಬರೋಡಾದಿಂದ ಡೈನಮೈಟ್‌ ತಂದು ಸರಕಾರಿ ಕಚೇರಿಗಳನ್ನು ಧ್ವಂಸಗೊಳಿಸುವ ಯೋಜನೆ ಜಾರ್ಜ್‌ ಅವರದ್ದಾಗಿತ್ತು. ಆದರೆ, ಕೋಲ್ಕತಾ(ಅಂದಿನ ಕಲ್ಕತ್ತಾ)ದಲ್ಲಿ ಸೆರೆ ಸಿಕ್ಕರು. ಡೈನಮೈಟ್‌ ಕದ್ದ ಆರೋಪವನ್ನು ಜಾರ್ಜ್‌ ಮೇಲೆ ಹಾಕಿ ಅವರನ್ನು 9 ತಿಂಗಳು ಕಾಲ ತಿಹಾರ್‌ ಜೈಲಿನಲ್ಲಿ ಇಡಲಾಯಿತು. ಈ ಪ್ರಕರಣವೇ ಮುಂದೆ 'ಬರೋಡಾ ಡೈನಮೈಟ್‌' ಎಂದು ಪ್ರಖ್ಯಾತವಾಯಿತು. ಜೈಲಿನಲ್ಲಿದ್ದುಕೊಂಡೇ ಬಿಹಾರದ ಮುಜಾಫರ್‌ನಗರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ, ಮೂರು ಲಕ್ಷ ಮತಗಳ ಅಂತರದಿಂದ ಗೆದ್ದರು. ಜಾರ್ಜ್‌ ಅವರನ್ನು ಬಂಧಿಸಿದ ಕ್ಷ ಣದಲ್ಲಿ ಅವರ ಕೋಳ ತೊಟ್ಟ ಕೈ ಮೇಲತ್ತಿದ ಫೋಟೋ ಈ ಗೆಲುವಿನಲ್ಲಿ ಭಾರಿ ಪ್ರಭಾವ ಬೀರಿತ್ತು! 

ಸಚಿವರಾದರು ಜಾರ್ಜ್‌:
 
ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿತು. ಇದೇ ಮೊದಲ ಬಾರಿಗೆ ಮೊರಾರ್ಜಿ ದೇಸಾಯಿ ನೇತೃತ್ವದ ಪ್ರಥಮ ಕಾಂಗ್ರೆಸ್ಸೇತರ ಸರಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂತು. ತುರ್ತು ಪರಿಸ್ಥಿತಿಯಲ್ಲಿ ಜೈಲುಪಾಲಾಗಿದ್ದ ನಾಯಕರೆಲ್ಲ ಬಿಡುಗಡೆಗೊಂಡರು. ಜಾರ್ಜ್‌ ಅವರು ದೇಸಾಯಿ ಸಂಪುಟದಲ್ಲಿ ಕೈಗಾರಿಕಾ ಸಚಿವರಾದರು. ಬಂಡವಾಳ ಹೂಡಿಕೆ ನಿಯಮಗಳನ್ನು ಉಲ್ಲಂಘಿಸಿದ್ದ ಅಮೆರಿಕ ಐಬಿಎಂ ಮತ್ತು ಕೊಕಾಕೋಲಾ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡ ಫಲವಾಗಿ ಅವರೆಡೂ ಕಂಪನಿಗಳು ಭಾರತದಿಂದ ಕಾಲು ಕೀಳಬೇಕಾಯಿತು. ಮುಂದೆ ಜನತಾ ದಳ ನಾಯಕ ವಿ.ಪಿ. ಸಿಂಗ್‌ ನೇತೃತ್ವದ ಸರಕಾರದಲ್ಲಿ ರೇಲ್ವೆ ಸಚಿವರಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರು. ಪಶ್ಚಿಮ ಕರಾವಳಿಯನ್ನು ಸಂಪರ್ಕಿಸುವ ಕೊಂಕಣ ರೇಲ್ವೆ ಯೋಜನೆ ಅನುಷ್ಠಾನಗೊಳಿಸಿದರು. 

ಬಿಜೆಪಿಯ ಸಖ್ಯ:ಜೆಪಿ ಚಳವಳಿಯಲ್ಲಿ ಉದಯಿಸಿದ ನಾಯಕರ ಜನತಾ ಪರಿವಾರ ದಿಕ್ಕಾಪಾಲಾದ ಸಂದರ್ಭ ಅದು. ರಾಜಕೀಯ ಅನಿವಾರ್ಯತೆ ಮತ್ತು ಕಾಂಗ್ರೆಸ್‌ ವಿರೋಧಿ ನೀತಿಯ ಪ್ರಮುಖ ಧ್ಯೇಯದಿಂದಾಗಿ ಜಾರ್ಜ್‌ ಅವರು ಅನಿವಾರ್ಯವಾಗಿ ಬಿಜೆಪಿಯ ಅಟಲ್‌ ಬಿಹಾರಿ ವಾಜಪೇಯಿ, ಎಲ್‌.ಕೆ.ಆಡ್ವಾಣಿ ಜತೆ ಕೈ ಜೋಡಿಸಬೇಕಾಯಿತು. ವಿಶೇಷ ಎಂದರೆ, ಆರ್‌ಎಸ್‌ಎಸ್‌ ನೀತಿಯನ್ನು ಜಾರ್ಜ್‌ ಟೀಕಿಸುತ್ತಿದ್ದರು. ಹಾಗಿದ್ದೂ ಅವರು ಬಿಜೆಪಿ ಜತೆ ಹೆಜ್ಜೆ ಹಾಕಬೇಕಾಯಿತು. ಜತೆಗೆ ಬಿಜೆಪಿ ನೇತೃತ್ವದ ನ್ಯಾಷನಲ್‌ ಡೆಮಾಕ್ರಟಿಕ್‌ ಅಲಯನ್ಸ್‌-ಎನ್‌ಡಿಎ ಸಂಚಾಲಕರಾದರು. ಯಾರೂ ನಿರೀಕ್ಷಿಸದ ರೀತಿಯಲ್ಲಿ 1998ರಲ್ಲಿ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು. ಆಗ ಜಾರ್ಜ್‌ ಅವರಿಗೆ ರಕ್ಷ ಣಾ ಸಚಿವ ಸ್ಥಾನ ತಾನಾಗಿಯೇ ಒಲಿದು ಬಂತು. ವಿಪರ್ಯಾಸ ಎಂದರೆ, ಜಾರ್ಜ್‌ ತಮ್ಮ ಬದುಕಿನುದ್ದಕ್ಕೂ ಅಣ್ವಸ್ತ್ರಗಳನ್ನು ವಿರೋಧಿಸುತ್ತಲೇ ಬಂದಿದ್ದರು. ಆದರೆ, ಅದೇ ಜಾರ್ಜ್‌ ಅವರು ಅಣ್ವಸ್ತ್ರ ಪರೀಕ್ಷೆಯಲ್ಲಿ ವಾಜಪೇಯಿ ಜತೆ ಪಾಲುದಾರರಾದರು! 

ಬೆನ್ನತ್ತಿದ ವಿವಾದಗಳು:ಜಾರ್ಜ್‌ ಅವರು ರಕ್ಷ ಣಾ ಸಚಿವರಾಗಿದ್ದಾಗಲೇ ಬಾರಾಕ್‌ ಕ್ಷಿಪಣಿ ಮತ್ತು ತೆಹಲ್ಕಾ ಹಗರಣಗಳು ಬೆನ್ನು ಹತ್ತಿದವು. ಇದಕ್ಕಾಗಿ ಅವರು ರಕ್ಷ ಣಾ ಸಚಿವ ಸ್ಥಾನವನ್ನು ತೊರೆಯಬೇಕಾಯಿತು. ಮುಂದೆ ತನಿಖೆ ವೇಳೆ ಜಾರ್ಜ್‌ ಅವರು ನಿರ್ದೋಷಿ ಎಂದು ಸಾಬೀತಾದ ಮೇಲೆ ಮತ್ತೆ ರಕ್ಷ ಣಾ ಸಚಿವರಾದರು. ಆದರೆ, ಕಾರ್ಗಿಲ್‌ ಯುದ್ಧದ ವೇಳೆ ಖರೀದಿಸಲಾದ ಶವಪೆಟ್ಟಿಗೆಗಳ ಹಗರಣ ಮತ್ತೆ ಜಾರ್ಜ್‌ ತಲೆಯೇರಿತು. ತೀರಾ ಇತ್ತೀಚೆಗಷ್ಟೇ ಈ ಹಗರಣದಲ್ಲೂ ಜಾರ್ಜ್‌ ಅವರು ನಿರ್ದೋಷಿ ಎಂದು ಸಾಬೀತಾಯಿತಾದರೂ, ಅದನ್ನು ಕೇಳಿ ಸಂತೋಷ ಪಡುವ ಸ್ಥಿತಿಯಲ್ಲಿ ಜಾರ್ಜ್‌ ಇರಲಿಲ್ಲ. ಸಾಮಾನ್ಯವಾಗಿ ಭಾರತದ ಮಗ್ಗಲು ಮುಳ್ಳು ಪಾಕಿಸ್ತಾನ ಎಂದು ಬಹುತೇಕ ರಾಜಕಾರಣಿಗಳು ಹೇಳುತ್ತಾರೆ. ಆದರೆ, ಜಾರ್ಜ್‌ ಮಾತ್ರ ಭಾರತದ ನಂ.1ವೈರಿ ಪಾಕಿಸ್ತಾನವಲ್ಲ ಚೀನಾ ಎಂದು ಬಹಿರಂಗವಾಗಿ ಹೇಳುವ ಮೂಲಕ ಭಾರಿ ಸಂಚಲನಕ್ಕೆ ಕಾರಣವಾಗಿದ್ದರು. 

ನೇಪಥ್ಯಕ್ಕೆ ಜಾರಿದ ಜಾರ್ಜ್‌:
 
2004ರಲ್ಲಿ ವಾಜಪೇಯಿ ನೇತೃತ್ವದ ಎನ್‌ಡಿಎ ಮರಳಿ ಅಧಿಕಾರ ಹಿಡಿಯಲಿದೆ ಎಂದೇ ಭಾವಿಸಲಾಗಿತ್ತು. ಆದರೆ, ಯಾರೂ ನಿರೀಕ್ಷಿಸದ ರೀತಿಯಲ್ಲಿ ಎನ್‌ಡಿಎ ಸೋಲು ಕಂಡು ಕಾಂಗ್ರೆಸ್‌ ನೇತೃತ್ವದ ಯುಪಿಎ ಅಧಿಕಾರಕ್ಕೆ ಬಂತು. ಈ ಅವಧಿಯಲ್ಲಿ ದೇಶದ ಇಬ್ಬರು ಪ್ರಮುಖ ನಾಯಕರು ನೇಪಥ್ಯಕ್ಕೆ ಜಾರುವಂತಾಯಿತು. ಒಬ್ಬರು ಪ್ರಧಾನಿಯಾಗಿದ್ದ ಅಟಲ್‌ ಬಿಹಾರಿ ವಾಜಪೇಯಿ, ಮತ್ತೊಬ್ಬರು ಜಾರ್ಜ್‌. ನಂತರ ಅವರಿಗೆ ಅಲ್ಜೈಮರ್‌ ಕಾಯಿಲೆ ಉಲ್ಬಣಗೊಂಡು ಸಂಪೂರ್ಣವಾಗಿ ಸಾರ್ವಜನಿಕ ಜೀವನದಿಂದ ಮರೆಯಾಗಬೇಕಾಯಿತು. 

ಮರಳಿ ಬಾರದ ಲೋಕಕ್ಕೆ:ಜಾರ್ಜ್‌ ಅದ್ಭುತ ಮಾತುಗಾರರು. ಅವರು ಭಾಷಣಕ್ಕೆ ನಿಂತರೆ ಇಡೀ ಜನಸಮೂಹ ತದೇಕ ಚಿತ್ತದಿಂದ ಆಲಿಸುತ್ತಿತ್ತು. ಸಂಸತ್ತಿನಲ್ಲಿ ಮಾತನಾಡಲು ಆರಂಭಿಸಿದರೆ ಇಡೀ ಸಂಸತ್ತೇ ಕಿವಿಯಾಗುತ್ತಿತ್ತು. ಕೊಂಕಣಿ, ಕನ್ನಡ, ಇಂಗ್ಲಿಷ್‌, ಹಿಂದಿ, ಮರಾಠಿ, ತುಳು, ತಮಿಳು, ಉರ್ದು ಸೇರಿದಂತೆ 10 ಭಾಷೆಗಳಲ್ಲಿ ಜಾರ್ಜ್‌ ನಿರರ್ಗಳವಾಗಿ ಮಾತನಾಡುತ್ತಿದ್ದರು. ಪ್ರಖರ ಸಮಾಜವಾದಿಯಾಗಿದ್ದ ಜಾರ್ಜ್‌ ತುಂಬ ದಿನಗಳ ಕಾಲ ಅನಾರೋಗ್ಯಪೀಡಿತರಾಗಿ ಕೊನೆಯ ದಿನಗಳನ್ನು ಅತ್ಯಂತ ಯಾತನೆಯಲ್ಲಿ ಕಳೆದರು. ಅವರೀಗ ಯಾರೂ ಮರಳಿ ಬಾರದ ಲೋಕಕ್ಕೆ ಪಯಣಿಸಿದ್ದಾರೆ. 

ಜಾರ್ಜ್‌ ಮ್ಯಾಥ್ಯೂ ಫರ್ನಾಂಡಿಸ್‌ 
ಜನನ: 3 ಜೂನ್‌ 1930, ಮಂಗಳೂರು 
ನಿಧನ: 29 ಜನವರಿ 2019 
ಪತ್ನಿ: ಲೈಲಾ ಕಬೀರ್‌ 
ಪಕ್ಷ ಗಳು: ಸಮತಾ, ಜನತಾ ದಳ, ಜನತಾ ಪಾರ್ಟಿ, ಸಂಯುಕ್ತ ಸೋಷಿಯಲಿಸ್ಟ್‌ ಪಾರ್ಟಿ, ಎನ್‌ಡಿಎ 
ಸಿದ್ಧಾಂತ: ಸಮಾಜವಾದ 
ನಿರ್ವಹಿಸಿದ ಖಾತೆಗಳು: ರಕ್ಷ ಣೆ, ಕೈಗಾರಿಕೆ ಮತ್ತು ರೈಲ್ವೆ

ವಿಯೆಟ್ನಾಮಿಯಾಗಿ ಹುಟ್ಟುವೆ! ''ಒಂದು ವೇಳೆ ಪುನರ್ಜನ್ಮ ಎಂಬುದಿದ್ದರೆ ನಾನು ವಿಯೆಟ್ನಾಮಿಯಾಗಿ(ವಿಯೆಟ್ನಾಮ್‌ ಪ್ರಜೆ) ಹುಟ್ಟುವೆ,'' ಎಂದು ಜಾರ್ಜ್‌ ಒಮ್ಮೆ ಹೇಳಿದ್ದರು. ಒಂದುವರೆ ದಶಕದ ಹಿಂದೆ ಬೆಂಗಳೂರಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಈ ಬಯಕೆಯನ್ನು ಅವರು ಹೊರಹಾಕಿದ್ದರು. ''ವಿಯೆಟ್ನಾಮಿ ಜನರು ತಮ್ಮ ಬದ್ಧತೆಯನ್ನು ಪೂರೈಸಲು ಸಾಯಲು ಸಿದ್ಧರಾಗಿರುತ್ತಾರೆ. ಅಂಥ ಶಿಸ್ತು ಅವರಲ್ಲಿರುತ್ತದೆ. ನಾನು ವಿಯೆಟ್ನಾಮ್‌ನ ಅಭಿಮಾನಿ,'' ಎಂದು ಹೇಳಿದ್ದರು. 



(ಈ ಲೇಖನವು ವಿಜಯ ಕರ್ನಾಟಕದ 2019ರ ಜನವರಿ 30ರ ಸಂಚಿಕೆಯಲ್ಲಿ ಪ್ರಕಟವಾಗಿದೆ) ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:  

ಸೋಮವಾರ, ಮಾರ್ಚ್ 5, 2018

ಕ್ಷಣ ಕ್ಷಣ ಅನುಭವಿಸಿ, ನೆಮ್ಮದಿಯಾಗಿ ಬದುಕಿ

- ಮಲ್ಲಿಕಾರ್ಜುನ ತಿಪ್ಪಾರ
ರಾಜೇಶ್ ದೊಡ್ಡ ಕಂಪನಿಯೊಂದರಲ್ಲಿ ಒಳ್ಳೆಯ ಹುದ್ದೆಯಲ್ಲಿದ್ದಾನೆ. ಕೈ ತುಂಬ ಸಂಬಳ. ಆದರೂ ಆತನಿಗೆ ಸಂತೋಷವೇ ಇಲ್ಲಘಿ. ಯಾವಾಗಲೂ ಭವಿಷ್ಯದ ಚಿಂತೆ. ಮುಂದೆ ಹಾಗಾದರೆ, ಹೀಗಾದರೆ ಎಂಬ ಕೊರಗು. ಆತನ ಹೆಂಡತಿ ಸುಮಾ ಮಾತ್ರ ತುಂಬ ಪ್ರಾಕ್ಟಿಕಲ್. ಭವಿಷ್ಯದ ಬಗ್ಗೆ ವಿನಾಕಾರಣ ಯೋಚಿಸದೆ, ಭಯಭೀತಗೊಳ್ಳದೇ ವರ್ತಮಾನದ ಬದುಕನ್ನು ಸಂತೋಷವಾಗಿ ಕಳೆಯುವ ಗುಣದವಳು. ತನ್ನ ಗಂಡನಿಗೆ, ಈ ಕ್ಷಣದ ಸಂತೋಷ ಅನುಭವಿಸು, ಯಾಕೆ ಸುಮ್ಮನೇ ಭವಿಷ್ಯದ ಬಗ್ಗೆ ಯೋಚಿಸಿ ಈಗಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುತ್ತೀಯಾ ಎಂದು ಹೇಳುತ್ತಲೇ ಇರುತ್ತಾಳೆ.
***
ಸುರೇಶ್ ಎಂಬಿಎ ೈನಲ್ ಇಯರ್‌ನಲ್ಲಿ ಓದುತ್ತಿದ್ದಾನೆ. ಆತನಿಗೂ ಯಾವಾಗಲೂ ಭವಿಷ್ಯದ ಬಗ್ಗೆಯೇ ಕಾಳಜಿ. ಪರೀಕ್ಷೆ ಬಗ್ಗೆ ವಿಪರೀತ ಭಯ. ೇಲ್ ಆದರೆ ಏನು ಮಾಡುವುದು ಎನ್ನುವಂಥ ಪ್ರಶ್ನೆಗಳ ಮೂಟೆಯನ್ನು ತಲೆಯಲ್ಲಿ ತುಂಬಿಕೊಂಡು, ಓದಿನ ಮೇಲೂ ಏಕಾಗ್ರತೆ ಸಾಧಿಸಲು ಆಗುತ್ತಿಲ್ಲ. ಆತನ ಗೆಳೆಯ ಸುಜಿತ್ ಮಾತ್ರಘಿ, ಪರೀಕ್ಷೆಯ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೇ ಈ ಕ್ಷಣದಲ್ಲಿ ಓದುವುದಷ್ಟೇ ಮುಖ್ಯ ಎಂದು ಭಾವಿಸಿ, ಅದನ್ನು ಆನಂದಿಸುತ್ತಲೇ ಮಾಡುತ್ತಾನೆ. ಸುರೇಶ್‌ನಿಗೆ ಸುಜಿತ್ ತಿಳಿ ಹೇಳುತ್ತಾನೆ; ಪರೀಕ್ಷೆಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡ. ನಮ್ಮ ಕೆಲಸ ಚೆನ್ನಾಗಿ ಓದುವುದು. ಹಾಗಂತ ಬರೀ ಓದುವುದಲ್ಲ; ಎಂಜಾಯ್ ಮಾಡುತ್ತಾ ಓದುವುದು. ಹಾಗೆ ಮಾಡಿದರೆ, ನಿನಗೆ ಭಯ ಇರುವುದಿಲ್ಲಘಿ. ಸುಮ್ಮನೆ ಯಾಕೆ ಏನೇನೊ ನಿನ್ನಷ್ಟಕ್ಕೆ ನೀನು ಯೋಚನೆ ಮಾಡಿಕೊಂಡು, ಈ ಕ್ಷಣದ ಸಂತೋಷ ಹಾಳು ಮಾಡಿಕೊಳ್ಳುತ್ತೀಯಾ ಎನ್ನುತ್ತಾನೆ.
***
ಈ ತರಹದ ಸಮಸ್ಯೆಯ ಸುಳಿಯಲ್ಲಿ ಬಹಳಷ್ಟು ಜನರು ಸಿಲುಕಿಕೊಂಡಿದ್ದಾರೆ. ಮುಂದೆ ಆಗಬಹುದಾದ  ಇಲ್ಲವೇ ಘಟಿಸಲು ಸಾಧ್ಯವೇ ಇಲ್ಲದಂಥ ಸಂಗತಿಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುತ್ತೇವೆ. ಅದೇ ವೇಳೆಯಲ್ಲಿ ಈ ಹೊತ್ತಿನಲ್ಲಿ ನಮಗೆ ದೊರೆಯಬಹುದಾದ ಚಿಕ್ಕ, ಪುಟ್ಟ ಸಂತೋಷ, ನೆಮ್ಮದಿಗಳನ್ನೆಲ್ಲ ಮರೆತು, ನಮ್ಮ ಇಡೀ ಜೀವನವನ್ನು ಗೋಳುಮಯ ಮಾಡಿಕೊಳ್ಳುತ್ತೇವೆ. ಇಂಥ ಸಂದರ್ಭದಲ್ಲಿ ಭಗವಾನ್ ಬುದ್ಧ ಹೇಳಿದ ಮಾತು ಹೆಚ್ಚು ಆಪ್ತವಾಗುತ್ತದೆ. ‘ಭೂತಕಾಲದಲ್ಲಿ ವಾಸಿಸಬೇಡ, ಭವಿಷ್ಯದ  ಬಗ್ಗೆ ಚಿಂತಿಸಬೇಡ; ಈ ಕ್ಷಣದ ಬಗ್ಗೆ ಮನಸ್ಸಿನ ಮೇಲೆ ಏಕಾಗ್ರತೆಯನ್ನು ಸಾಧಿಸು’ ಎನ್ನುತ್ತಾರೆ ಬುದ್ಧಘಿ. ಅಂದರೆ, ನಾವು ಈಗ ಏನು ಮಾಡುತ್ತಿದ್ದೇವೊ ಅದನ್ನೇ ಅಚ್ಚುಕಟ್ಟಾಗಿ, ಯಾವುದಕ್ಕೂ ಚ್ಯುತಿ ಬಾರದಂತೆ ಮಾಡಿಬಿಡಬೇಕು. ಅದು ಬಿಟ್ಟುಘಿ, ಅಯ್ಯೊ ನನಗೆ ಹಿಂದೆ ಹೀಗೆ ಆಗಿತ್ತಲ್ಲ ಎಂಬ ಕೊರಗನ್ನು ವರ್ತಮಾನಕ್ಕೆ ಅನ್ವಯಿಸಿಕೊಂಡು ಕುಳಿತುಕೊಳ್ಳಬಾರದು. ಇದರಿಂದ ನಿಮ್ಮ ಈಗಿನ ಕೆಲಸಗಳ್ಯಾವುವೂ ಸುಗಮವಾಗಿ ಮುಗಿಯುವುದಿಲ್ಲಘಿ. ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮ ಮನಸ್ಸಿನ ಆರೋಗ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ. ಹಾಗೆಯೇ, ಭವಿಷ್ಯದ ಬಗ್ಗೆ ವಿನಾಕಾರಣ ಅತಿಯಾಗಿ ಚಿಂತಿಸುವುದು ಒಳ್ಳೆಯದಲ್ಲಘಿ. ಕಾರಣವಿಲ್ಲದ ಭಯಪಡುವುದು ತರವಲ್ಲಘಿ. ಹಾಗಂತ, ಭವಿಷ್ಯದ ಕುರಿತು ಯೋಚಿಸುವುದೇ ತಪ್ಪು ಎಂದಲ್ಲಘಿ. ಭವಿಷ್ಯದ ಬಗ್ಗೆ ಯೋಜನೆ ರೂಪಿಸಿಕೊಳ್ಳಿಘಿ, ಗುರಿಗಳನ್ನು ಹಾಕಿಕೊಳ್ಳಿಘಿ. ಆದರೆ, ಭಯಗೊಳ್ಳಬೇಡಿ. ಮೇಲಿಂದ ಮೇಲೆ ಆ ಕುರಿತು ಚಿಂತಿಸುವುದು ಮತ್ತು ಅದರಲ್ಲೇ ಕೊರಗುವುದು ವ್ಯಸನವಾಗಬಾರದಷ್ಟೇಘಿ.
ಹಾಗಾದರೆ, ಈ ಕ್ಷಣದಲ್ಲಿ ಬದುಕುವುದು ಹೇಗೆ? ಈ ಪ್ರಶ್ನೆಗೆ ಜರ್ಮನಿಯ ಖ್ಯಾತ ಟೆನ್ನಿಸ್ ತಾರೆ ಏಂಜಿಲಿಕ್ ಕೆರ್ಬರ್ ಅವರ ಮಾತುಗಳು ಉತ್ತರ ನೀಡಬಲ್ಲವು. ‘‘ಯಾವುದೇ ಸಮಸ್ಯೆಘಿ, ಸಂಗತಿಗಳನ್ನು ತುಂಬಾ ಸಂಕೀರ್ಣಗೊಳಿಸಲು ಹೋಗಬೇಡಿ. ರಿಲಾಕ್ಸ್ ಆಗಿರಲು ಪ್ರಯತ್ನಿಸಿ, ಪ್ರತಿ ಕ್ಷಣವನ್ನು ಎಂಜಾಯ್ ಮಾಡಿ ಮತ್ತು ಅದರ ಸದ್ಬಳಕೆ ಮಾಡಿಕೊಳ್ಳಿ,’’ ಎಂದೆನ್ನುವ ಕೆರ್ಬರ್ ಮಾತುಗಳಲ್ಲಿ ಸತ್ಯವಿದೆ. ನಾವೆಲ್ಲರೂ ತಮ್ಮ ಜೀವನದ ಪ್ರತಿ ಕ್ಷಣಗಳನ್ನು ಸಂಕೀರ್ಣಗೊಳಿಸುತ್ತಲೇ ಹೋಗುತ್ತೇವೆ. ತುಂಬ ಸರಳವಾಗಿ ಬಗೆಹರಿಯಬಹುದಾದ ಸಮಸ್ಯೆಯನ್ನು ಗುಡ್ಡ ಮಾಡಿಟ್ಟು ಬಿಡುತ್ತೇವೆ. ಅಯ್ಯೋ ಹೀಗಾಯ್ತಲ್ಲ ಎಂದು ಕರಬುತ್ತೇವೆ. ಸರಳವಾಗಿ ಮುಗಿಯಬಹುದಾದ ಯಾವುದೋ ಕೆಲಸವನ್ನು ತುಂಬ ದಿನಗಳವರೆಗೆ ಎಳೆದುಕೊಂಡು ಹೋಗುತ್ತೇವೆ. ನಮಗೆ ನಾವೇ ಕಲ್ಪಿತ ಶತ್ರುಗಳನ್ನುಘಿ ಸೃಷ್ಟಿಸಿಕೊಂಡು, ಅವರಿಂದಾಗುವ ಅಪಾಯವನ್ನು ಊಹೆ ಮಾಡಿಕೊಂಡು, ಈಗಿನ ಜೀವನದ, ಈ ಕ್ಷಣದ ಸಂತೋಷವನ್ನು ಕೈ ಚೆಲ್ಲಿ ಬಿಡುತ್ತೇವೆ.
‘ಸಮಯ ಮತ್ತು ಅಲೆಗಳು ಯಾರಿಗೂ ಕಾಯುವುದಿಲ್ಲ’ ಎಂಬ ಮಾತಿದೆ. ಅಂದರೆ, ಪ್ರತಿ ಕ್ಷಣವೂ ಅತ್ಯಮೂಲ್ಯಘಿ. ಅಂಥ ಕ್ಷಣವನ್ನು ಗೋಳಾಟದಿಂದ, ಇನ್ನಾವುದೇ ಭಯದಿಂದ ಕಳೆದುಕೊಳ್ಳುವುದು ಬೇಡ. ಆ ಕ್ಷಣವನ್ನು ಸಂಪೂರ್ಣವಾಗಿ ಅನುಭವಿಸಿ. ವರ್ತಮಾನವೇ ನಿಜವಾದ ಬದುಕು ಎಂಬುದನ್ನು ಅರಿತುಕೊಳ್ಳಿಘಿ. ಈ ಹಿಂದೆ ಆಗಿ ಹೋದ ಘಟನೆಗಳನ್ನು ಈಗ ಮತ್ತೆ ತರಲಾಗುವುದಿಲ್ಲಘಿ. ಹಾಗೆಯೇ, ಮುಂದೆ ಬರಬಹುದಾದುದನ್ನು ತಡೆಯಲಾಗುವುದಿಲ್ಲ. ವಾಸ್ತವ ಹೀಗಿರುವಾಗ ನಾವೇಕೆ, ಈ ಕ್ಷಣದ ಸಂತೋಷವನ್ನು ಹಾಳು ಮಾಡಿಕೊಳ್ಳಬೇಕು ಹೇಳಿ? ನೀವು ಮಾಡುವ ಪ್ರತಿ ಕೆಲಸವನ್ನು ಸಂತೋಷದಿಂದ ಮಾಡಿ, ಪ್ರೀತಿಯಿಂದ ಮಾಡಿ. ಆಗ ಅದರಲ್ಲಿ ದೊರೆಯುವ ಆನಂದ ಪದಗಳಿಗೂ ನಿಲುಕದ್ದುಘಿ. ಅದನ್ನು ಅನುಭವಿಸಿಯೇ ಸವಿಯಬೇಕು. ನಾವು ಯಾವಾಗ, ಬದುಕಿನ ಪ್ರತಿ ಕ್ಷಣವನ್ನು ಅನುಭವಿಸುತ್ತೇವೆಯೋ ಆಗಲೇ ನೆಮ್ಮದಿ ದೊರೆಯುತ್ತದೆ ಎಂಬುದನ್ನು ನೆನಪಿಟ್ಟುಕೊಳ್ಳಿಘಿ.

 ಪ್ರತಿ ಕ್ಷಣ ಆನಂದಿಸುವುದು ಹೇಗೆ?
- ಸದ್ಯ ನೀವು ಮಾಡುವ ಕೆಲಸದ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಿ. ಆ ನಿಟ್ಟಿನಲ್ಲಿ ಮನಸ್ಸನ್ನು ತರಬೇತುಗೊಳಿಸಿ.
- ಖಾಲಿಯಾಗಿ ಇರಬೇಡಿ. ಏನಾದರೂ ಮಾಡುತ್ತಲೇ ಇರಿ ಮತ್ತು ಆ ಪ್ರಕ್ರಿಯೆಯನ್ನು ಅನುಭವಿಸಿ.
- ಪ್ರತಿ ಕ್ಷಣವನ್ನು ವರ್ತಮಾನದಲ್ಲೇ ಅನುಭವಿಸುವ ಮತ್ತು ರಿಲಾಕ್ಸ್ ಆಗುವ ತಂತ್ರಗಳನ್ನು ಕರಗತ ಮಾಡಿಕೊಳ್ಳಿ
- ನಿಮ್ಮ ಸುತ್ತಲಿನ ಬಗ್ಗೆ ಗಮನವಿರಲಿ. ಅಂದರೆ, ದೃಶ್ಯಗಳು, ಧ್ವನಿ, ವಾಸನೆ, ವ್ಯಕ್ತಿಗಳು.. ಇತ್ಯಾದಿ.
- ಇತರರ ಮಾತುಗಳನ್ನು ಗಮನವಿಟ್ಟು ಕೇಳಿ. ಸಂಗೀತವನ್ನು ಆಲಿಸಿ. ಅಷ್ಟೇ ಯಾಕೆ, ವೌನವನ್ನೂ ಗಮನವಿಟ್ಟುಕೊಂಡೇ ಅನುಭವಿಸಿ.
- ನೀವು ತಿನ್ನುವ ಆಹಾರವನ್ನು ಸಂತೋಷವಾಗಿಯೇ ತಿನ್ನಿಘಿ. ಆಗ ಸಿಗುವ ಆನಂದವೇ ಬೇರೆ.


(ಈ ಲೇಖನ ಬೋಧಿವೃಕ್ಷದ ಮಾರ್ಚ್ 4ನೇ ತಾರಿಖಿನ ಸಂಚಿಕೆಯಲ್ಲಿ ಪ್ರಕಟವಾಗಿದೆ)

http://www.bodhivrukshaepaper.com/Details.aspx?id=977&boxid=16579717