ಸೋಮವಾರ, ಮಾರ್ಚ್ 15, 2021

How to secure your Facebook profile?: ಫೇಸ್‌ಬಕ್ ಖಾತೆ ಸುರಕ್ಷಿತವಾಗಿಡುವುದು ಹೇಗೆ?

- ಮಲ್ಲಿಕಾರ್ಜುನ ತಿಪ್ಪಾರ
ನಾವು ಈಗ ಸೋಷಿಯಲ್ ಮೀಡಿಯಾ ಯುಗದಲ್ಲಿ ಬದುಕುತ್ತಿದ್ದೇವೆ. ಸೋಷಿಯಲ್ ಮೀಡಿಯಾಗಳಿಲ್ಲದೇ ಬದುಕೇ ಇಲ್ಲ ಎನ್ನುವಷ್ಟರಮಟ್ಟಿಗೆ ನಾವು ಅವುಗಳಿಗೆ ದಾಸರಾಗಿದ್ದೇವೆ. ಈ ಜಾಲತಾಣಗಳಿಂದ ನಮಗೆ ಲಾಭ ಮತ್ತು ನಷ್ಟಗಳೆರಡೂ ಉಂಟು. ಅವುಗಳನ್ನು ನಾವು ಹೇಗೆ ಬಳಸಿಕೊಳ್ಳುತ್ತೇವೆ ಎನ್ನುವುದರ ಮೇಲೆ ಅದು ನಿಂತಿದೆ.

ಸೋಷಿಯಲ್ ಮೀಡಿಯಾಗಳ ಪೈಕಿ ಫೇಸ್‌ಬುಕ್ ಜನಪ್ರಿಯವಾಗಿರುವ ತಾಣವಾಗಿದೆ. ಅಂದಾಜು 2.8 ಶತಕೋಟಿ ಬಳಕೆದಾರರು ಫೇಸ್‌ಬುಕ್‌ನಲ್ಲಿ ಸಕ್ರಿಯವಾಗಿದ್ದಾರೆ ಎಂದರೆ ಅದರ ಅಗಾಧತೆಯನ್ನು ನೀವು ತಿಳಿದುಕೊಳ್ಳಬಹುದು. 

ಭಾರತದಲ್ಲಂತೂ ಫೇಸ್‌ಬುಕ್  ಸೇರಿದಂತೆ ಸೋಷಿಯಲ್ ಮೀಡಿಯಾ ತಾಣಗಳಲ್ಲಿ ಜನರು ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಾರೆ. ಆನ್‌ಲೈನ್ ಮೂಲಕ ಸ್ನೇಹಿತರನ್ನು ಸಂಪಾದಿಸುವುದು, ನಿಮ್ಮ ಪ್ರೀತಿ ಪಾತ್ರರೊಂದಿಗೆ ಫೋಟೊ, ವಿಡಿಯೋಗಳನ್ನು ಹಂಚಿಕೊಳ್ಳುವುದು ಇತ್ಯಾದಿ ಚಟುವಟಿಕೆಗಳಿಗೆ ಈ ತಾಣಗಳು ಅವಕಾಶವನ್ನು ಕಲ್ಪಿಸಿಕೊಡುತ್ತೇವೆ. ಈ ಫೇಸ್‌ಬುಕ್ ತಾಣವು ಎಲ್ಲೆಲ್ಲೋ ಇದ್ದವರನ್ನು ಒಂದೇ ಕ್ಲಿಕ್‌ನಲ್ಲಿ ಹತ್ತಿರವಾಗಿಸುತ್ತವೆ ಎಂಬುದು ಅಷ್ಟೇ ಸತ್ಯ. ಆದರೆ, ತಂತ್ರಜ್ಞಾನ ಬಳಕೆ ಹೆಚ್ಚಾದಂತೆ ಅದರಿಂದ ಅಪಾಯಗಳ ಪ್ರಮಾಣವೂ ಹೆಚ್ಚುತ್ತಾ ಹೋಗುತ್ತದೆ ಅಷ್ಟೇ ಖರೆ.

ಸಮುದ್ರದ ರೀತಿಯಲ್ಲಿರುವ ಈ ಫೇಸ್‌ಬುಕ್‌ನಲ್ಲಿ ಕೊಂಚ ಯಾಮಾರಿದರೂ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಫೇಸ್‌ಬುಕ್‌ನಲ್ಲಿ ಒಳ್ಳೆಯವರು ಸಕ್ರಿಯರಾಗಿರುವಂತೆ ಕೆಟ್ಟ ಬುದ್ಧಿಯವರೂ ಇದ್ದಾರೆ. ಹಾಗಾಗಿ ನಿಮ್ಮ ಪ್ರೊಫೈಲ್‌ನಲ್ಲಿರುವ ಮಾಹಿತಿಯನ್ನು, ನಿಮ್ಮ ಫೋಟೊಗಳನ್ನು ಕದ್ದು ಕುಕೃತ್ಯಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ನಾವು ಫೇಸ್‌ಬುಕ್‌ನಲ್ಲಿ ಸಾಕಷ್ಟು ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ಬಳಕೆದಾರರ ಸುರಕ್ಷತೆಗಾಗಿ ಫೇಸ್‌ಬುಕ್ ಕೂಡ ಹಲವು ಟೂಲ್‌ಗಳನ್ನು ಒದಗಿಸಿದೆ. ಅವುಗಳನ್ನು ಬಳಸಿಕೊಂಡು ನಿಮ್ಮ ಫೇಸ್‌ಬುಕ್ ಪುಟಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬಹುದು. 

 ಪ್ರೊಫೈಲ್ ಸುರಕ್ಷತೆಗೆ ಹೀಗೆ ಮಾಡಿ

ಪ್ರೊಫೈಲ್ ಲಾಕ್ ಮಾಡಿ
ಸುರಕ್ಷತೆಯ ದೃಷ್ಟಿಯಿಂದ ಇದೊಂದು ಅತ್ತುತ್ಯಮ ಆಯ್ಕೆಯಾಗಿದೆ. ನೀವು ನಿಮ್ಮ ಪ್ರೊಫೈಲ್‌ ಅನ್ನು ಲಾಕ್ ಮಾಡಿದರೆ, ಯಾರಿಗೂ ನಿಮ್ಮ ಖಾತೆಯ ವಿವರವನ್ನು ನೋಡಿಕೊಳ್ಳಲು ಸಾಧ್ಯವಾಗುವುದಿಲ್ಲ. ನಿಮ್ಮ ಫ್ರೆಂಡ್ ಲಿಸ್ಟ್‌ನಲ್ಲಿದ್ದವರಿಗೆ ಮಾತ್ರವೇ ನಿಮ್ಮ ಪ್ರೊಫೈಲ್‌ ಅಕ್ಸೆಸ್ ಸಾಧ್ಯವಾಗುತ್ತದೆ. ಒಂದೊಮ್ಮೆ ಅಪರಿಚಿತರು ನಿಮ್ಮ  ಪ್ರೊಫೈಲ್‌ ನೋಡಬೇಕಾದರೆ ಅವರು ನಿಮಗೆ ಫ್ರೆಂಡ್‌ ರಿಕ್ವೆಸ್ಟ್ ಕಳುಹಿಸಬೇಕು ಮತ್ತು ಅದನ್ನು ಅಕ್ಸೆಪ್ಟ್ ಮಾಡಿದಾಗ ಮಾತ್ರ ಪ್ರೊಫೈಲ್ ನೋಡಲು ಸಾಧ್ಯವಾಗುತ್ತದೆ. ಪ್ರೊಫೈಲ್ ಲಾಕ್ ಮಾಡಿದರೆ, ಹೊರಗಿನವರಿಗೆ ನಿಮ್ಮ ಟೈಮ್‌ಲೈನ್‌ನಲ್ಲಿರುವ ಯಾವುದೇ ಪೋಸ್ಟ್ ಆಗಲೀ ಅಥವಾ ಇತರ ಮಾಹಿತಿಯನ್ನು ನೋಡಲು ಸಾಧ್ಯವಾಗುವುದಿಲ್ಲ.

ಟೈಮ್‌ಲೈನ್ನಲ್ಲಿ ಏನಿರಬೇಕು?
ಫೇಸ್‌ಬುಕ್‌ ಪುಟದಲ್ಲಿ ನಿಮ್ಮ ಸ್ನೇಹಿತರು ಅನೇಕ ಪೋಸ್ಟ್‌ಗಳಿಗೆ ನಿಮ್ಮನ್ನು ಟ್ಯಗ್ ಮಾಡುತ್ತಿರುತ್ತಾರೆ. ಇದೆಲ್ಲವೂ ನಿಮ್ಮ ಟೈಮ್‌ಲೈನ್‌ನಲ್ಲಿ ಕಾಣಿಸಿಕೊಂಡು ಕಿರಿಕಿರಿ ಮಾಡುತ್ತಿರುತ್ತದೆ. ಇದನ್ನು ತಪ್ಪಿಸಲು  ಫೇಸ್‌ಬುಕ್ ನಿಮಗೆ ಟೈಮ್‌ಲೈನ್ ರಿವ್ಯೂ ಆಯ್ಕೆಯನ್ನು ನೀಡುತ್ತದೆ. ಈ ಟೈಮ್‌ಲೈನ್ ರಿವ್ಯೂ ಟೂಲ್ ಬಳಸಿಕೊಂಡು ಯಾವ ಪೋಸ್ಟ್‌ಗಳು ನಿಮ್ಮ ಟೈಮ್‌ಲೈನ್‌ನಲ್ಲಿ ಕಾಣಿಸಿಕೊಳ್ಳಬಹುದು ಎಂಬುದನ್ನು ನಿರ್ಧರಿಸಿಕೊಳ್ಳಬಹುದು. ಇದರಿಂದ ಅನಾವಶ್ಯಕ ಕಿರಿಕಿರಿಯನ್ನು ತಪ್ಪಿಸಿಕೊಳ್ಳಬಹುದು.

 ಆಡಿಯನ್ಸ್ ನಿರ್ಧರಿಸಿಕೊಳ್ಳಿ
ನೀವು ಪೋಸ್ಟ್ ಮಾಡುವ ಇಲ್ಲವೇ, ಷೇರ್ ಮಾಡುವ ಪೋಸ್ಟ್‌ಗಳನ್ನು ಯಾರು ನೋಡಬೇಕು, ನೋಡಬಾರದು ಎಂಬುದನ್ನು ನೀವೇ ನಿರ್ಧರಿಸಿಕೊಳ್ಳಬಹುದು. ಇದಕ್ಕಾಗಿ ಫೇಸ್‌ಬುಕ್ ಒದಗಿಸುವ ಆಡಿಯನ್ಸ್ ಸೆಲೆಕ್ಟರ್ ಆಯ್ಕೆಯನ್ನು ಬಳಸಿಕೊಳ್ಳಬೇಕು. ಈ ಟೂಲ್‌ನಿಂದ  ಬಳಕೆದಾರರು ಪೋಸ್ಟ್‌ಗಳನ್ನು ಯಾರು ವೀಕ್ಷಿಸಬಹುದು ಎಂದು ಸೆಟ್ ಮಾಡಬಹುದು. ಈ ಟೂಲ್‌ನಲ್ಲಿರುವ ಎವರೀವನ್ ಅಥವಾ ಫ್ರೆಂಡ್ಸ್ ಅಥವಾ ನಿಮಗೆ ಬೇಕಾದವರಿಗೆ ಮಾತ್ರವೇ ನಿಮ್ಮ ಪೋಸ್ಟ್ ತಲುಪುವ ಹಾಗೆ ಕಷ್ಟಮೈಸ್ ಕೂಡ ಮಾಡಿಕೊಳ್ಳಬಹುದು. 

ಮ್ಯಾನೇಜ್ ಆಕ್ಟಿವಿಟಿ
ನಿಮ್ಮ ಪೋಸ್ಟ್‌ಗಳನ್ನು ಡಿಲಿಟ್ ಮಾಡಲು ಇಳ್ಲವೇ ಆರ್ಕೈವ್ ಮಾಡಲು ಮ್ಯಾನೇಜ್ ಆಕ್ಟಿವಿಟಿ ನೆರವು ನೀಡುತ್ತದೆ. ಥ್ರ್ಯಾಶ್‌ಗೆ ಕಳುಹಿಸಲಾದ ಪೋಸ್ಟ್‌ಗಳು 30 ದಿನಗಳವರೆಗೂ ಅಂದರೆ ಆಟೋಮ್ಯಾಟಿಕ್ ಆಗಿ ಡಿಲಿಟ್ ಆಗೋವರೆಗೂ ಅಲ್ಲಿಯೇ ಇರುತ್ತವೆ. ಒಂದು ವೇಳೆ ಈ ಪೋಸ್ಟ್‌ಗಳನ್ನು ನೀವು ರಿಸ್ಟೋರ್ ಮಾಡಿಕೊಳ್ಳುವುದಾದರೆ 30 ದಿನಗಳ ಮುಂಚೆಯೇ ಮಾಡಿಕೊಳ್ಳಬೇಕು. ಆ ಬಳಿಕ ಮತ್ತೆ ಅವು ಸಿಗುವುದಿಲ್ಲ.





















(ಈ ಲೇಖನವು ವಿಜಯ ಕರ್ನಾಟಕದ 2021ರ ಮಾರ್ಚ್ 15ರ ಸಂಚಿಕೆಯಲ್ಲಿ ಪ್ರಕಟವಾಗಿದೆ)

ಭಾನುವಾರ, ಫೆಬ್ರವರಿ 28, 2021

Indian desi Twitter 'Koo': ಬನ್ನಿ... Kooಗು ಹಾಕೋಣ!

- ಮಲ್ಲಿಕಾರ್ಜುನ ತಿಪ್ಪಾರ
ದೇಶಿ ಟ್ವಿಟರ್‌’ ಎಂದೇ ಕರೆಯಿಸಿಕೊಳ್ಳುತ್ತಿರುವ  ಕೂ(Koo) ಎಂಬ ಮೈಕ್ರೊ ಬ್ಲಾಗಿಂಗ್‌ ಆ್ಯಪ್‌ಗೆ ಶುಕ್ರ ದೆಸೆ ಆರಂಭವಾಗಿದೆ. 

ರೈತ ಪ್ರತಿಭಟನೆ ಹಾಗೂ ‘ಕೆಂಪು ಕೋಟೆ ಹಿಂಸಾಚಾರ’ದ ಹಿನ್ನೆಲೆಯಲ್ಲಿಕೆಲವು ಟ್ವಿಟರ್‌ ಖಾತೆಗಳನ್ನು ರದ್ದುಗೊಳಿಸುವಂತೆ ಕೇಂದ್ರ ಸರಕಾರ ಪಟ್ಟಿ ನೀಡಿತ್ತು. ನೀವು ಹೇಳಿದಂತೆ ಎಲ್ಲವನ್ನೂ ರದ್ದುಗೊಳಿಸಲು ಸಾಧ್ಯವಿಲ್ಲಎಂದು ಟ್ವಿಟರ್‌ ಹೇಳುತ್ತಿದ್ದಂತೆ, ದೇಶಿ ಮೈಕ್ರೊಬ್ಲಾಗಿಂಗ್‌ ‘ಕೂ’ನತ್ತ ಕೇಂದ್ರ ಸಚಿವರು, ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕ್ರಿಕೆಟಿ ಗರು, ಗಣ್ಯರು, ಸಿನಿಮಾ ನಟ- ನಟಿಯರು ದಾಂಗುಡಿ ಇಟ್ಟರು.

ಅಷ್ಟೇ ಅಲ್ಲದೇ ದೇಶಿ ಆ್ಯಪ್‌ ಕೂ ಬೆಂಬಲಿಸವಂತೆ ಕರೆ ನೀಡಿದರು. ಕೇಂದ್ರ ಸರಕಾರದ ಬಹಳಷ್ಟು ಇಲಾಖೆಗಳು ಕೂ ಆ್ಯಪ್‌ನಲ್ಲಿ ಖಾತೆ ತೆರೆದವು. ಕಳೆದ ಕೆಲವು ದಿನಗಳಿಂದ ಕೂ ಡೌನ್‌ಲೋಡ್‌ಗಳಲ್ಲಿ10 ಪಟ್ಟು ಹೆಚ್ಚಳವಾಗಿದೆ. ಬಹುಶಃ ಈ ಪ್ರಮಾಣ ಇನ್ನೂ ಹೆಚ್ಚಾಗಬಹುದು. ಇದೀಗ ಎಲ್ಲರ ಬಾಯಲ್ಲೂಈ ಆ್ಯಪ್‌ನದ್ದೇ ‘ಕೂ’ಗು. 

ಏತನ್ಮಧ್ಯೆ, ಕೂ ಆ್ಯಪ್‌ ಬಳಕೆದಾರರ ಮಾಹಿತಿಯನ್ನು ಸೋರಿಕೆ ಮಾಡುತ್ತಿದೆ ಎಂದು ಫ್ರೆಂಚ್‌ ಹ್ಯಾಕರ್‌ರೊಬ್ಬರು ಆಪಾದಿಸಿದ್ದರು. ಇದನ್ನು ಕೂ ಆ್ಯಪ್‌ ಅಲ್ಲಗಳೆದಿದೆ. ಜೊತೆಗೆ, ಈ ಆ್ಯಪ್‌ನಲ್ಲಿ ಚೀನಿ ಹೂಡಿಕೆದಾರರು ಬಂಡವಾಳ ತೊಡಗಿಸಿದ್ದಾರೆ ಎಂಬ ಮಾತುಗಳಿದ್ದವು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಕೂ ಆ್ಯಪ್‌ ಸಂಸ್ಥಾಪಕ ಹಾಗೂ ಸಿಇಒ ಅಪ್ರಮೇಯ ರಾಧಾಕೃಷ್ಣನ್‌ 

ಅವರು, ‘‘ಭಾರತೀಯರೇ ಸ್ಥಾಪಿಸಿರುವ ಈ ಕಂಪನಿ ಭಾರತದಲ್ಲಿ ನೋಂದಣಿಯಾಗಿದೆ. ಈ ಮೊದಲು ಹೂಡಿಕೆ ಮಾಡಿದ್ದ ಚೀನಿ ಹೂಡಿಕೆದಾರರು ಶೀಘ್ರವೇ ಹೊರ ಬೀಳಲಿದ್ದಾರೆ. ಅಪ್ಪಟ ಭಾರತೀಯವಾಗಿರುವ 3one4 capital  ನೇತೃತ್ವದ ಸಂಸ್ಥೆ ಬೊಂಬಿನೇಟ್‌ ಟೆಕ್ನಾಲಜಿಸ್‌ಗೆ ಫಂಡ್‌ ಮಾಡುತ್ತಿದೆ ಎಂದು ಹೇಳಿದ್ದಾರೆ. 

ಏನಿದು ಕೂ?
ಕೂ ಆ್ಯಪ್‌ ಕೂಡ ಟ್ವಿಟರ್‌ ರೀತಿಯ ಮೈಕ್ರೊಬ್ಲಾಗಿಂಗ್‌ ವೇದಿಕೆಯಾಗಿದೆ. ಬಳಕೆದಾರರು ಆಡಿಯೊ ಕ್ಲಿಪ್ಸ್ ‌ ಸೇರಿದಂತೆ ಮಲ್ಟಿಮೀಡಿಯಾ ಕಂಟೆಂಟ್‌ ಪೋಸ್ಟ್‌ ಮಾಡಬಹುದು. ಟ್ವಿಟರ್‌ ರೀತಿಯಲ್ಲಿ ನಿಗದಿತ ಪದಗಳೊಳಗೆ ನಿಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು. ಅಂದರೆ, 400 ಅಕ್ಷ ರಗಳ ಮಿತಿಯಲ್ಲಿ ಹೇಳಬೇಕಾಗುತ್ತದೆ. ಇಂಗ್ಲಿಷ್‌ ಮಾತ್ರವಲ್ಲದೇ, ಕನ್ನಡ ಸೇರಿದಂತೆ 6 ಭಾರತೀಯ ಭಾಷೆಗಳಿಗೆ ಸಪೋರ್ಟ್‌ ಮಾಡುತ್ತದೆ ಮತ್ತು ಇನ್ನಷ್ಟು ಸ್ಥಳೀಯ ಭಾಷೆಗಳಲ್ಲಿ ಸೇವೆ ದೊರೆಯಲಿದೆ. ಟ್ವಿಟರ್‌ ರೀತಿಯಲ್ಲೇ ಕೂ ಲೋಗೊ ಕೂಡ ಪಕ್ಷಿಯಾಗಿದ್ದು, ಹಳದಿ ಬಣ್ಣದಲ್ಲಿದೆ. ಹ್ಯಾಷ್‌ಟ್ಯಾಗ್‌(#) ಮತ್ತು ಮೆನ್ಷನ್‌(@)ಗಳಿಗೆ ಇದು ಅವಕಾಶ ಕಲ್ಪಿಸಿ ಕೊಡುತ್ತದೆ. ರಿ-ಟ್ವೀಟ್‌ ರೀತಿಯಲ್ಲಿ‘ರಿ-ಕೂ’ಗೂ ಅವಕಾಶವಿದೆ ಇಲ್ಲಿ. ಚಾಟ್‌ ಬದಲಿಗೆ ಡೈರೆಕ್ಟ್ ಮೆಸೆಜ್‌ ಮಾಡಬಹುದು. 

ಯಾವಾಗ ಆರಂಭವಾಯಿತು?
ಎಂಬಿಎ ಪದವೀಧರರಾದ ಅಪ್ರಮೇಯ ರಾಧಾಕೃಷ್ಣನ್‌ ಮತ್ತು ಮಾಯಾಂಕ್‌ ಬಿಡಾವತ್ಕಾ ಅವರ ಕೂ ಆ್ಯಪ್‌ ಸಂಸ್ಥಾಪಕರು. ಈ ಇಬ್ಬರು ವೋಕಲ್‌ ಸಂಸ್ಥಾಪಕರೂ ಹೌದು. ವೋಕಲ್‌ ಎಂಬುದು ಕೋರಾ ರೀತಿಯಲ್ಲಿ ಆಡಿಯೊ-ವಿಡಿಯೊ ನಾಲೆಡ್ಜ್‌ ಷೇರಿಂಗ್‌ ವೇದಿಕೆಯಾಗಿತ್ತು. 2020ರ ಮಾರ್ಚ್‌ ತಿಂಗಳಲ್ಲಿ ಕೂ ಆ್ಯಪ್‌ ಆರಂಭವಾಯಿತು ಮತ್ತು ಕೇಂದ್ರ ಸರಕಾರದ ಆತ್ಮನಿರ್ಭರ್‌ ಭಾರತ್‌ ಚಾಲೆಂಜ್‌ ಟೆಕ್‌ ಇನ್ನೋವೇಷನ್‌ ಗೆದ್ದುಕೊಂಡಿದೆ. ಬೆಂಗಳೂರಿನಲ್ಲೇ ಇದರ ಕಚೇರಿ ಇದೆ. 

ಹೇಗೆ ಡೌನ್‌ಲೋಡ್‌?
ಕೂ ಉಚಿತ ಆ್ಯಪ್‌ ಆಗಿದ್ದು, ಆಂಡ್ರಾಯ್ಡ್‌ ಮತ್ತು ಐಒಎಸ್‌ ವೇದಿಕೆಗಳಲ್ಲಿಲಭ್ಯವಿದೆ. Koo: Connect with Indians in Indian Languages ಶೀರ್ಷಿಕೆಯಡಿ ಪ್ಲೇ ಸ್ಟೋರ್‌ನಲ್ಲಿದ್ದರೆ, Koo: Connect with Top Indians ಹೆಸರಿನಡಿ ಐಒಎಸ್‌ನಲ್ಲಿ ದೊರೆಯುತ್ತದೆ. 

ಸುಧಾರಣೆ ಅಗತ್ಯ
ದೇಶಿ ಟ್ವಿಟರ್‌ ಎಂಬ ಹೆಗ್ಗಳಿಕೆಯನ್ನು ಪಡೆಯುತ್ತಿರುವ ಕೂ ಆ್ಯಪ್‌ ಇನ್ನೂ ಹಲವು ರೀತಿಯಲ್ಲಿ ಸುಧಾರಣೆ ಕಾಣಬೇಕಿದೆ ಎನ್ನುವುದು ಅದನ್ನು ಬಳಸುತ್ತಿರುವವರ ಅನೇಕರ ಅಭಿಪ್ರಾಯವಾಗಿದೆ. ಟ್ವಿಟರ್‌ ರೀತಿಯಲ್ಲಿ ಇದು ಬಳಕೆದಾರರ ಸ್ನೇಹಿಯಾಗಿಲ್ಲ ಎಂಬುದು ಸಾಮಾನ್ಯ ದೂರು. ಊಹೆಗೆ ನಿಲುಕದ ರೀತಿಯಲ್ಲಿ ಬಳಕೆದಾರರನ್ನು ಪಡೆಯುತ್ತಿರುವ ಕೂ ಮುಂಬರುವ ದಿನಗಳಲ್ಲಿ ಬಹುಶಃ ಈ ಎಲ್ಲಕುಂದು ಕೊರತೆಗಳನ್ನು ನೀಗಿಸಿಕೊಂಡು ಅಂತಾರಾಷ್ಟ್ರೀಯ ಮಟ್ಟದ ಕಂಪನಿಯಾಗಿ ಬೆಳೆಯುವ ಎಲ್ಲ ಅರ್ಹತೆಗಳು ಮತ್ತು ಸಾಮರ್ಥ್ಯವಂತೂ ಇದ್ದೇ ಇದೆ ಎಂಬುದರಲ್ಲಿ ಎರಡು ಮಾತಿಲ್ಲ.



ಭಾನುವಾರ, ಫೆಬ್ರವರಿ 14, 2021

Ghulam Nabi Azad is a Man of Integrity: 'ಆಜಾದ್‌' ಭಾರತದ 'ಬದ್ಧತೆ'ಯ ನಾಯಕ

 ಕಾಂಗ್ರೆಸ್‌ನ ಬಿಕ್ಕಟ್ಟುಗಳಿಗೆ ಪರಿಹಾರ ಸೂಚಿಸುತ್ತಿದ್ದ ಚಾಣಾಕ್ಷ ರಾಜಕಾರಣಿ



- ಮಲ್ಲಿಕಾರ್ಜುನ ತಿಪ್ಪಾರ
ಮೊದಲು ಈ ಘಟನೆ ಓದಿ... ಅದು ರಾಜಮಾತೆ ಸಿಂಧಿಯಾ ಪ್ರತಿಪಕ್ಷ ದ ಉಪ ನಾಯಕಿ­ಯಾಗಿದ್ದ ಸಮಯ. ಸದನದಲ್ಲಿ ಒಮ್ಮೆ ಗುಲಾಂ ನಬಿ ಆಜಾದ್‌ ವಿರುದ್ಧ ಗಂಭೀರ ಆರೋಪ ಮಾಡಿದರು. ಆಗ ಎದ್ದು ನಿಂತ ಆಜಾದ್‌, ‘‘ನಾನು ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಇದರ ತನಿಖೆಗೆ ಸಮಿತಿ ರಚಿಸುವಂತೆ ಕೇಳಿಕೊಳ್ಳುತ್ತೇನೆ. ಸಮಿತಿಯ ನೇತೃತ್ವವನ್ನು ವಾಜಪೇಯಿ ವಹಿಸಿಕೊಳ್ಳಲಿ. ಎಲ್‌.ಕೆ.ಆಡ್ವಾಣಿ ಮತ್ತು ನೀವು(ರಾಜಮಾತಾ) ಸಮಿತಿಯ ಸದಸ್ಯರಾಗಿ. ಹದಿನೈದು ದಿನದಲ್ಲಿ ವರದಿ ನೀಡಲಿ ಮತ್ತು ಅವರು ನೀಡುವ ಶಿಕ್ಷೆಯನ್ನು ಅನುಭವಿಸಲು ಸಿದ್ಧನಾಗಿದ್ದೇನೆ,’’ ಎಂದರು. ಆಗ ಎದ್ದು ನಿಂತ ವಾಜಪೇಯಿ ಸದನದ ಜೊತೆಗೆ ಆಜಾದ್‌ ಅವರಿಗೂ ಕ್ಷ ಮೆ ಕೋರಿ, ‘‘ಅವರ ಬಗ್ಗೆ(ಆಜಾದ್‌) ರಾಜಮಾತಾ ಸಿಂಧಿಯಾಗೆ ಗೊತ್ತಿಲ್ಲ; ನನಗೆ ಅವ­ರೇನು ಎಂಬುದು ಗೊತ್ತು,’’ ಎಂದು ಹೇಳಿ ವಿಷಯವನ್ನು ತಣ್ಣಗಾಗಿಸಿದರು.

ಗುಲಾಂ ನಬಿ ಆಜಾದ್‌ ತಮ್ಮ ರಾಜಕೀಯ ಜೀವನದು­ದ್ದಕ್ಕೂ ಅಂಥದೊಂದು ‘ಪ್ರಾಮಾಣಿಕತೆ’ ಮತ್ತು ‘ಬದ್ಧತೆ’ಯನ್ನು ಕಾಯ್ದು­ಕೊಂಡು ಬಂದಿದ್ದಾರೆ. ಭಾರತೀಯ ರಾಜಕಾರಣದಲ್ಲಿ ಅಜಾತಶತ್ರು ರಾಜಕಾರಣಿಗಳು ವಿರಳ. ಈ ವಿರಳರ ಸಾಲಿನಲ್ಲಿ ಕಾಂಗ್ರೆಸ್‌ನ ಈ ಹಿರಿಯ ನಾಯಕ ನಿಲ್ಲುತ್ತಾರೆ. ನಾಲ್ಕೈದು ದಶಕ ಭಾರತದ ರಾಜಕಾರಣದ ಹಲವು ಪಲ್ಲಟಗಳಿಗೆ ಸಾಕ್ಷಿಯಾದ ಆಜಾದ್‌, ರಾಜ್ಯ­ಸಭೆಯಿಂದ ನಿವೃತ್ತರಾಗುತ್ತಿದ್ದಾರೆ. ಬಿಜೆಪಿ ಸೇರಿ ಹಲವು ಪಕ್ಷ ಗಳು ಅವರ ಮುತ್ಸದ್ದಿತನ, ಬದ್ಧತೆಯನ್ನು ಬಾಯಿತುಂಬ ಕೊಂಡಾಡಿವೆ.

ಪ್ರಧಾನಿ ನರೇಂದ್ರ ಮೋದಿ ಅವರಂತೂ, ಆಜಾದ್‌ ಬಗ್ಗೆ ವಿದಾಯ ಭಾಷಣ ಮಾಡುವಾಗ ಗದ್ಗದಿತರಾದರು. ಮೋದಿ ಅವರು ಆಜಾದ್‌ರನ್ನು ಹೊಗಳಿದ ರೀತಿಯನ್ನು ಹಲವರು, ಹಲವು ರೀತಿ­ಯಲ್ಲೇ ಅರ್ಥೈಯಿಸುತ್ತಿದ್ದಾರೆ. ಕೆಲವರು ಆಜಾದ್‌ ಬಿಜೆಪಿ ತೆಕ್ಕೆಗೆ ಜಾರ­ಬಹುದು; ಬಿಜೆಪಿಗೂ ಕಾಶ್ಮೀರದಲ್ಲಿ ವಿಶ್ವಸನೀಯ, ಮುತ್ಸದ್ದಿಯ ಮುಖ­ವೊಂದು ಆಜಾದ್‌ ರೂಪದಲ್ಲಿ ಸಿಗಬಹುದು ಎಂದು ವಿಶ್ಲೇಷಿಸುತ್ತಿದ್ದಾರೆ. ಆದರೆ, ಅವರು ಬಿಜೆಪಿ ಸೇರುವುದನ್ನು ಒಂದೇ ಏಟಿಗೆ ಹೊಡೆದು ಹಾಕಿದ್ದಾರೆ. ಸಂದರ್ಶನದಲ್ಲಿ, ‘‘ಯಾವಾಗ ಕಾಶ್ಮೀರದಲ್ಲಿ ಕಪ್ಪು ಹಿಮ ಬೀಳುತ್ತದೆಯೋ ಆ ದಿನ ಬಿಜೆಪಿ ಸೇರುತ್ತೇನೆ,’’ ಎಂದು ಸ್ಪಷ್ಪಪಡಿಸಿದ್ದಾರೆ. ಅದರರ್ಥ ಬಿಜೆಪಿ ಮಾತ್ರವಲ್ಲದೇ ಬೇರೆ ಯಾವುದೇ ಪಕ್ಷ ಕ್ಕೂ ಸೇರುವುದಿಲ್ಲಎಂದು ಖಡಕ್ಕಾಗಿ ಹೇಳಿದ್ದಾರೆ. 

ಮೋದಿ ಅವರ ಶ್ಲಾಘನೆ ಹಿಂದಿನ ಕಾರಣವನ್ನು ಬಿಚ್ಚಿಟ್ಟಿ­ದ್ದಾರೆ. 90ರಿಂದಲೂ ಮೋದಿ ಮತ್ತು ನಬಿ ಸ್ನೇಹಿತರು. ಇಬ್ಬರು ತಮ್ಮ ಪಕ್ಷ ದ ಪ್ರಧಾನ ಕಾರ್ಯದರ್ಶಿಗಳಾಗಿದ್ದಾಗ ಟಿವಿ ಚರ್ಚೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು. ಆ ಸಮಯದಲ್ಲಿ ‘ಚಹ ಪೇ ಚರ್ಚಾ’ ನಡೆಯುತ್ತಿತ್ತು. ಬಳಿಕ ಇಬ್ಬರು ಮುಖ್ಯಮಂತ್ರಿಗಳಾದರು. ಪ್ರಧಾನಿ, ಗೃಹ ಸಚಿವರ ಸಭೆಗಳಿಗೆ ಹೋದಾಗ ಭೇಟಿಯಾಗುತ್ತಿದ್ದರು. ಹೀಗೆ ಅವರಿಬ್ಬರ ನಡುವಿನ ಸ್ನೇಹ ಈ ಕ್ಷ ಣದವರೆಗೂ ಜಾರಿಯಲ್ಲಿದೆ. ಕಾಶ್ಮೀರದಲ್ಲಿ 2006ರಲ್ಲಿ ಗುಜರಾತ್‌ನ ಪ್ರವಾಸಿಗರ ಬಸ್‌ ಮೇಲೆ ದಾಳಿ ನಡೆಯಿತು. ಈ ವಿಷಯವನ್ನು ಅಂದು ಸಿಎಂ ಆಗಿದ್ದ ಮೋದಿಗೆ ತಿಳಿಸುವಾಗ ಆಜಾದ್‌ ಅತ್ತಿದ್ದರಂತೆ. ರಾಜ್ಯಸಭೆಯಲ್ಲಿ ಮೋದಿ ಮಾತ­ನಾಡಿದ ಆ ಕ್ಷ ಣವೇ ಅವರಿಬ್ಬರನ್ನು ಭಾವುಕರನ್ನಾಗಿಸಿತು.

ಅದೇನೇ ಇರಲಿ. ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟುಗಳು ಸಂಭವಿಸಿ­ದಾಗ, ಅದನ್ನು ಪರಿಹರಿಸುವ ತಂಡದ ಮುಂಚೂಣಿಯಲ್ಲಿ ಆಜಾದ್‌ ಇರುತ್ತಿದ್ದರು. ಆ ಮೂಲಕ ಅವರೊಬ್ಬ ‘ಟ್ರಬಲ್‌ ಶೂಟರ್‌’ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದರು. ಇಂದಿರಾ ಗಾಂಧಿ ಅವರಿಂದ ಹಿಡಿದು ಸೋನಿಯಾ ಗಾಂಧಿ ತನಕ ಕಾಂಗ್ರೆಸ್‌ನ ಪ್ರಮುಖ­ರೊಂದಿಗೆ ಉತ್ತಮ ಬಾಂಧವ್ಯ ಕಾಪಾಡಿಕೊಂಡು ಬಂದಿದ್ದಾರೆ. ತಾವೊಬ್ಬ ಗಾಂಧಿ ಕುಟುಂಬದ ನಿಷ್ಠ ಎಂಬು­ದನ್ನು ಸಾಬೀತುಪಡಿಸಿದ್ದಾರೆ. ಹಾಗಂತ, ಪಕ್ಷ  ವಿಭಿನ್ನ ದಾರಿಯಲ್ಲಿ ಸಾಗುತ್ತಿ­ದ್ದಾಗ, ವೈಫಲ್ಯ ಸುಳಿಯಲ್ಲಿ ಸಿಲುಕಿದಾಗ ಎಚ್ಚರಿಕೆ ನೀಡುವ ಕೆಲಸವನ್ನು ಮಾಡಿಕೊಂಡು ಬಂದಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ-‘ಜಿ23’. ಪಕ್ಷ ದ ನಾಯಕತ್ವವನ್ನು ವಿಮರ್ಶೆಗೊಳಪಡಿಸುವ ಸಂಬಂಧ ಪತ್ರ ಬರೆದ 23 ನಾಯಕರ ಪೈಕಿ ಇವರು ಒಬ್ಬರು. ಮತ್ತೊಂದು ಅರ್ಥದಲ್ಲಿ‘ಜಿ23’ಯ ‘ಅನಧಿಕೃತ’ ವಕ್ತಾರರು.

ಮೇಲಿಂದ ಮೇಲೆ ಚುನಾವಣೆಯನ್ನು ಕಾಂಗ್ರೆಸ್‌ ಸೋಲುತ್ತಿರುವಾಗ ಪಕ್ಷ ದ ತಳಮಟ್ಟದ ನಾಯಕತ್ವದಿಂದ ಹಿಡಿದು ಉನ್ನತ ಮಟ್ಟದ ನಾಯಕತ್ವವರೆಗೂ ಬದಲಾವಣೆ ಅಗತ್ಯ ಎಂಬುದು ಅವರ ವಾದವಾಗಿತ್ತು. ಈ ವಿಚಾರಗಳು ಕಾಂಗ್ರೆಸ್‌ನ ಹಲವು ನಾಯಕರಿಗೆ ಹಿಡಿಸದೇ ಹೋದವು. ಆದರೆ, ಆಜಾದ್‌ ತಾವು ಹೇಳಬೇಕಿದ್ದ ಸತ್ಯವನ್ನು ಹೇಳಿಯೇ ಬಿಟ್ಟಿದ್ದಾರೆ.  ವಿಮರ್ಶೆಗೊಳಪಡಿಸುವ ಕೆಲಸವನ್ನು ಪಕ್ಷ ದ ನಾಯಕತ್ವ ಮಾಡಬೇಕಷ್ಟೇ. ನಾಲ್ಕೈದು ದಶಕಗಳ ರಾಜಕಾರಣದಲ್ಲಿ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಸಂಸತ್ತಿನಲ್ಲಿಪ್ರತಿಪಕ್ಷ ದ ನಾಯಕನಾಗಿ, ಪಕ್ಷ ದ ಹಲವು ಹುದ್ದೆ ನಿರ್ವಹಿಸಿ, ಹಲವು ರಾಜ್ಯಗಳ ಉಸ್ತುವಾರಿಯಾಗಿ ಅಗಾಧ ಅನುಭವದ ಮೂಟೆ ಆಜಾದ್‌ ಅವರ ಬೆನ್ನಮೇಲಿದೆ.

ಕಾಶ್ಮೀರದ ದೋಡಾ ಜಿಲ್ಲೆಯ ಸೋತಿ ಎಂಬ ಹಳ್ಳಿಯಲ್ಲಿ1949 ಮಾರ್ಚ್‌ 7ರಂದು ಗುಲಾ ನಂಬಿ ಆಜಾದ್‌ ಜನಿಸಿದರು. ರಹಮತುಲ್ಲಾಹ ಬಟ್ಟ ಮತ್ತು ಬಸಾ ಬೇಗಂ ತಂದೆ-ತಾಯಿ. ಹುಟ್ಟಿದೂರಿನಲ್ಲಿಪ್ರಾಥಮಿಕ ಶಿಕ್ಷ ಣ ಮುಗಿಸಿ, ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಜಮ್ಮುಗೆ ತೆರಳಿ, ಜಿಜಿಎಂ ಸೈನ್ಸ್‌ ಕಾಲೇಜಿನಿಂದ ಡಿಗ್ರಿ ಪಡೆದುಕೊಂಡರು ಆಜಾದ್‌. ಶ್ರೀನಗರದ ಕಾಶ್ಮೀರ ವಿವಿಯಿಂದ 1972ರಲ್ಲಿಪ್ರಾಣಿಶಾಸ್ತ್ರದಲ್ಲಿ ಮಾಸ್ಟರ್‌ ಡಿಗ್ರಿ ಸಂಪಾದಿಸಿದರು.

1973ರಲ್ಲಿ ಭಲೆಸ್ಸಾ ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿಯಾಗಿ ಆಯ್ಕೆಯಾ­ಗುವ ಮೂಲಕ ರಾಜಕೀಯ ಜೀವನಕ್ಕೆ ಅಡಿ ಇಟ್ಟರು. ಎರಡು ವರ್ಷದ ಬಳಿಕ ಜಮ್ಮು-ಕಾಶ್ಮೀರ ರಾಜ್ಯ ಯುವ ಕಾಂಗ್ರೆಸ್‌ನ ಅಧ್ಯಕ್ಷ ರಾಗಿ ಆಯ್ಕೆಯಾ­ದರು. 1980ರಲ್ಲಿಅಖಿಲ ಭಾರತ ಯುವ ಕಾಂಗ್ರೆಸ್‌ ಅಧ್ಯಕ್ಷ ರಾಗಿ ಆಯ್ಕೆ ಯಾದ ಬಳಿಕ ಅವರ ರಾಜಕೀಯ ರಥ ಎಲ್ಲೂನಿಲ್ಲದೇ ಓಡಲಾರಂಭಿಸಿತು. ಹಾಗೆ ನೋಡಿದರೆ,  ಭಾರತದ ರಾಜಕಾರಣದಲ್ಲಿ ಸಕ್ರಿಯವಾಗಿ ಗುರುತಿಸಿ­ಕೊಳ್ಳಲು ಇಂದಿರಾ ಗಾಂಧಿ ಅವರು ಕಾರಣ. ಆಜಾದ್‌ ಅವರಲ್ಲಿ ನಾಯ­ಕತ್ವ, ಸಂಘಟನಾ ಶಕ್ತಿ ಮತ್ತು ಬದ್ಧತೆಯನ್ನು ಗುರುತಿಸಿ ಅವರಿಗೆ ಜವಾಬ್ದಾರಿ ನೀಡಿದರು. ಮುಂದೆ ರಾಜೀವ್‌ ಗಾಂಧಿ ಅವರ ಕಾಲದಲ್ಲಿ ಅವರಿಗೆ ಪ್ರಾಧಾನ್ಯತೆ ಸಿಗುತ್ತಾ ಹೋಯಿತು.  

1980ರಲ್ಲಿ ಮಹಾರಾಷ್ಟ್ರದ ವಶಿಮ್‌ ಲೋಕಸಭಾ ಕ್ಷೇತ್ರದಿಂದ ಆಯ್ಕೆ­ಯಾಗುವ ಮೂಲಕ ಲೋಕಸಭೆಯನ್ನು ಪ್ರವೇಶಿಸಿದರು. 1982ರಲ್ಲಿ ಕಾನೂನು, ನ್ಯಾಯ ಮತ್ತು ಕಂಪನಿ ವ್ಯವಹಾರಗಳ ಸಚಿವಾಲಯದ ಉಪಸಚಿವರಾಗಿ ಸರಕಾರದಲ್ಲೂ ಪಾಲ್ಗೊಂಡರು. 1984ರಲ್ಲಿ ಮತ್ತೆ ಲೋಕಸಭೆ ಆಯ್ಕೆಯಾದರು. 1990ರಿಂದ 96ರವರೆಗೂ ರಾಜ್ಯಸಭೆಯಲ್ಲಿ ಮಹಾರಾಷ್ಟ್ರವನ್ನು ಪ್ರತಿನಿಧಿಸಿದರು. ಪಿ.ವಿ.ನರಸಿಂಹರಾವ್‌ ಸರಕಾರದಲ್ಲಿ ಸಂಸದೀಯ ವ್ಯವಹಾರಗಳು ಹಾಗೂ ನಾಗರಿಕ ವಿಮಾನಯಾನ ಸಚಿವಾಲ­ಯಗಳನ್ನು ನಿರ್ವಹಿಸಿದರು. ಆ ನಂತರ ಅವರು ಜಮ್ಮು-ಕಾಶ್ಮೀರದಿಂದ ಸತತವಾಗಿ ರಾಜ್ಯಸಭೆಗೆ ಆಯ್ಕೆಯಾಗುತ್ತಾ ಬಂದಿದ್ದಾರೆ. ಇದರ ಮಧ್ಯೆಯೇ 2005ರಲ್ಲಿ ಕಾಶ್ಮೀರ ಮುಖ್ಯಮಂತ್ರಿಯಾದರು. ಆದರೆ, ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ(ಪಿಪಿಪಿ) ತನ್ನ ಬೆಂಬಲ ವಾಪಸ್‌ ಪಡೆದ ಹಿನ್ನೆಲೆಯಲ್ಲಿ ಅವರು ಸಿಎಂ ಹುದ್ದೆಗೆ ರಾಜಿನಾಮೆ ನೀಡಬೇಕಾಯಿತು.

ಡಾ.ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ­-2ನೇ ಅವಧಿಯಲ್ಲಿ ಆಜಾದ್‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದರು. ನ್ಯಾಷನಲ್‌ ರೂರಲ್‌ ಹೆಲ್ತ್‌ ಮಿಷನ್‌ ವಿಸ್ತರಿಸಿ ಯಶಸ್ವಿಯಾ­ದರು. ಬಳಿಕ ನ್ಯಾಷನಲ್‌ ಅರ್ಬನ್‌ ಹೆಲ್ತ್‌ ಮಿಷನ್‌ ಆರಂಭಿಸಿ, ನಗರ ಪ್ರದೇಶಗಳಲ್ಲಿನ ಕೊಳಗೇರಿ ಮತ್ತು ಬಡವರಿಗೆ ಆರೋಗ್ಯ ಸೇವೆ ಸಿಗುವ ಹಾಗೆ ಮಾಡಿದರು. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್‌ ಕೊರತೆ­ಯಿಂದಾಗಿ ಟಿವಿ ಮನರಂಜನೆ ಸಿಗುವುದಿಲ್ಲ. ಪರಿಣಾಮ­ವಾಗಿ ‘ಜನಸಂಖ್ಯೆ’ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ಹೇಳುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದರು. ಮದುವೆಗೆ ನಿಗದಿ ಪಡಿಸಲಾಗಿರುವ ವಯೋಮಿತಿಯನ್ನು 25 ಮತ್ತು 30ಕ್ಕೆ ಹೆಚ್ಚಿಸುವ ಮೂಲಕ ಜನಸಂಖ್ಯೆಯನ್ನು ನಿಯಂತ್ರಣ ಮಾಡಬಹುದು ಎಂಬುದು ಅವರ ವಾದ.

2014ರ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸೋತು ಸುಣ್ಣವಾಗಿ, ಅಧಿಕಾರವಂಚಿತವಾಯಿತು. ರಾಜ್ಯಸಭೆಯಲ್ಲಿ ಪ್ರತಿಪಕ್ಷ ದ ನಾಯಕನ ಜವಾಬ್ದಾರಿ ಗುಲಾಂ ಹೆಗಲೇರಿತು. ಅಲ್ಲಿಂದ ನಿವೃತ್ತಿಯಾಗೋವರೆಗೂ ಆ ಸ್ಥಾನವನ್ನು ದಕ್ಷ ತೆಯಿಂದ ನಿರ್ವಹಿಸಿದ ಹೆಗ್ಗಳಿಕೆ ಅವರದ್ದು. ಆಜಾದ್‌ ಮತ್ತೆ ರಾಜ್ಯಸಭೆಗೆ ಆಯ್ಕೆಯಾಗುತ್ತಾರೋ, ಪಕ್ಷದಲ್ಲಿ ಉನ್ನತ ಸ್ಥಾನ ಪಡೆಯುತ್ತಾರೋ ಎಂಬ ಬಗ್ಗೆ ಯಾವುದೇ ಖಚಿತ ಮಾಹಿತಿಗಳಿಲ್ಲ. ಆದರೆ, ಅವರ ಸೇವೆ ದೊರೆಯದೇ ಹೋದರೆ ಅದು ಕಾಂಗ್ರೆಸ್‌ ಪಕ್ಷ ಕ್ಕೆ ಹಾನಿಯೇ ಹೊರತು ಅವರಿಗಲ್ಲ. ಜೊತೆಗೆ, ಅವರು ಸ್ವತಂತ್ರ ಜಮ್ಮು ಮತ್ತು ಕಾಶ್ಮೀರ ರಾಜ್ಯ ಹೋರಾಟದ ‘ಮುಖ’ ವಾಗುವ ಸಾಧ್ಯತೆಗಳಿವೆ.


 

(ಈ ಲೇಖನವು ವಿಜಯ ಕರ್ನಾಟಕದ 2020ರ ಫೆಬ್ರವರಿ 14ರ ಸಂಚಿಕೆಯ ವಕ್ತಿಗತದಲ್ಲಿ ಪ್ರಕಟವಾಗಿದೆ)

ಶುಕ್ರವಾರ, ಫೆಬ್ರವರಿ 12, 2021

How to create YouTube shorts?: ಯುಟೂಬ್ ಶಾರ್ಟ್ಸ್ ಕ್ರಿಯೇಟ್ ಮಾಡೋದು ಹೇಗೆ?

- ಮಲ್ಲಿಕಾರ್ಜುನ ತಿಪ್ಪಾರ
ಭಾರತವೂ ಸೇರಿದಂತೆ ವಿಶ್ವದ ಕೆಲವು ರಾಷ್ಟ್ರಗಳಲ್ಲಿಚೀನಾ ಮೂಲದ ಟಿಕ್‌ಟಾಕ್‌ ಕಿರು ವಿಡಿಯೊ ಆ್ಯಪ್‌ ಮೇಲೆ ನಿಷೇಧ ಹೇರಿದ್ದರಿಂದ ಆ ಸ್ಥಾನವನ್ನು ಆಕ್ರಮಿಸಿಕೊಳ್ಳುವ ಅನೇಕ ಆ್ಯಪ್‌ಗಳು ಚಾಲ್ತಿಯಲ್ಲಿವೆ. ಈ ವಿಷಯದಲ್ಲಿಗೂಗಲ್‌ ಒಡೆತನದ ಯುಟ್ಯೂಬ್‌ ಕೂಡ ಹಿಂದೆ ಬಿದ್ದಿಲ್ಲ.

ಕಳೆದ ಸೆಪ್ಟೆಂಬರ್‌ನಲ್ಲಿಯುಟ್ಯೂಬ್‌ ಘೋಷಣೆ­ಯೊಂದನ್ನು ಮಾಡಿ, ಟಿಕ್‌ ಟಾಕ್‌ ರೀತಿಯ ಸೇವೆ ಒದಗಿಸುವ ಶಾರ್ಟ್ಸ್ (ಖhಟ್ಟಠಿs) ಅನ್ನು ಭಾರತದಲ್ಲಿಆರಂಭಿಸುವುದಾಗಿ ಹೇಳಿತ್ತು. ಈ ಆ್ಯಪ್‌ ಇನ್ನೂ ಬೀಟಾ ವರ್ಷನ್‌ನಲ್ಲಿದೆ. ಹಾಗಿದ್ದೂ ಈ ನಾಲ್ಕು ತಿಂಗಳಲ್ಲಿಶಾರ್ಟ್ಸ್ ಸೇವೆಯು ಭಾರತೀಯ ಬಳಕೆದಾರರಲ್ಲಿ ಹೆಚ್ಚು ಜನಪ್ರಿಯವಾಗತೊಡಗಿದೆ.

ಬಹಳಷ್ಟು ಬಳಕೆದಾರರು ತಮ್ಮ ಫೋನ್‌ಗಳನ್ನು ಬಳಸಿಕೊಂಡು ಕಂಟೆಂಟ್‌ ಕ್ರಿಯೇಟ್‌ ಮಾಡುತ್ತಿದ್ದಾರೆ. ಹಾಗಾಗಿಯೇ ಕ್ರಿಯೇಟರ್‌ಗಳಿಗೆ ಹೆಚ್ಚಿನ ಟೂಲ್‌ಗಳನ್ನು ಒದಗಿಸಲು ನಾವು ಹೆಚ್ಚು ಹೂಡಿಕೆ ಮಾಡುತ್ತಿದ್ದೇವೆ. ಭಾರತದಲ್ಲಿಯುಟ್ಯೂಬ್‌ ಶಾರ್ಟ್ಸ್ ಟೆಸ್ಟಿಂಗ್‌ ಮಾಡುತ್ತಿದ್ದೇವೆ.  ಮುಂದಿನ ಜನರೇ­ಷನ್‌ ತಮ್ಮ ವಿಷಯಗಳನ್ನು ಯಾವುದೇ ಅಡೆತಡೆಗಳಿಲ್ಲದೇ ಅಪ್ಲೋಡ್‌ ಮಾಡಲು ನೆರವಾಗಲು ನಾವು ಉತ್ಸುಕರಾಗಿದ್ದೇವೆ. ಇಲ್ಲಿಯ­ವರೆಗೆ ನಮ್ಮ ಯುಟ್ಯೂಬ್‌ 

ಶಾರ್ಟ್ಸ್ನಲ್ಲಿ ದಾಖಲಾಗಿರುವ ವಿಡಿಯೊಗಳು ಜಗತ್ತಿನಾದ್ಯಂತ ಜನರಿಗೆ ನೆರವಾಗಿದ್ದು, ನಿತ್ಯ ಸುಮಾರು 35 ಲಕ್ಷ  ವ್ಯೂಗಳನ್ನು ಕಾಣುತ್ತಿವೆ ಎನ್ನುತ್ತಾರೆ ಯುಟ್ಯೂಬ್‌ ಸಿಇಒ ಸೂಸಾನ್‌ ವೋಜ್ಸಿಕಿ ಅವರು.

ಶಾರ್ಟ್ಸ್ ಹೀಗೆ ಕ್ರಿಯೇಟ್‌ ಮಾಡಿ
ಇಷ್ಟೊಂದು ಜನಪ್ರಿಯವಾಗುತ್ತಿರುವ ಯೂಟ್ಯೂಬ್‌ ಶಾರ್ಟ್ಸ್ ಬಗ್ಗೆ ಇನ್ನೂ ಬಹಳಷ್ಟು ಜನರಿಗೆ ಗೊತ್ತಿಲ್ಲ. 

ಯುಟ್ಯೂಬ್‌ನಲ್ಲಿ ಕಿರು ವಿಡಿಯೊವನ್ನು ಹೇಗೆ ಮಾಡುವುದು ಎಂಬ ಬಗ್ಗೆ  ಹೆಚ್ಚಿನ ಜನರಿಗೆ ಮಾಹಿತಿ ಇಲ್ಲ. ನೋ ಪ್ರಾಬ್ಲೆಂ, ನಾವೀಗ ನಿಮಗೆ ಯುಟ್ಯೂಬ್‌  ಶಾರ್ಟ್ಸ್ ಹೇಗೆ ಮಾಡುವುದು ಎಂಬುದನ್ನು ಇಲ್ಲಿಹಂತಹಂತವಾಗಿ ಹೇಳಿದ್ದೇವೆ.

ಮೊದಲಿಗೆ ನಿಮ್ಮ ಮೊಬೈಲ್‌ನಲ್ಲಿಯುಟ್ಯೂಬ್‌ಗೆ ಸೈನ್‌ ಇನ್‌ ಆಗಿ. ಬಳಿಕ ಕ್ರಿಯೇಟ್‌ ಮೇಲೆ ಟ್ಯಾಪ್‌ ಮಾಡಿ. ಮತ್ತೆ ಕ್ರಿಯೇಟ್‌ ಶಾರ್ಟ್‌ ಮೇಲೆ ಮೊಟಕಿ. ಆಗ ಕ್ಲಿಪ್‌ ರೆಕಾರ್ಡ್‌ ಮಾಡಲು, ಕ್ಯಾಪ್ಚರ್‌ ಬಟನ್‌ ಮೇಲೆ ಟ್ಯಾಪ್‌ ಮಾಡಿ ಮತ್ತು ಅದನ್ನು ಹೋಲ್ಡ… ಮಾಡಿಕೊಂಡಿರಿ. ಅಥವಾ ಸ್ಟಾರ್ಟ್‌ ಮೇಲೆ ಟ್ಯಾಪ್‌ ಮಾಡಿ ರೆಕಾರ್ಡಿಂಗ್‌ ಆರಂಭಿಸಿ ಮತ್ತು ರೆಕಾರ್ಡಿಂಗ್‌ ಮುಗಿದ ಮೇಲೆ ಮತ್ತೆ ಟ್ಯಾಪ್‌ ಮಾಡಿ ಆಗ ಅಂತ್ಯಗೊಳ್ಳುತ್ತದೆ.

ಇಷ್ಟಾದ ಮೇಲೆ, ನಿಮಗೆ ಈ ಹಿಂದಿನ ವಿಡಿಯೊ ಕ್ಲಿಪ್‌ ಏನಾದರೂ ತೆಗೆದು ಹಾಕುವುದಿದ್ದರೆ ಅಥವಾ  ಈಗಾಗಲೇ ತೆಗೆದು ಹಾಕಿರುವ ವಿಡಿಯೊವನ್ನು ಮತ್ತೆ ಸೇರಿಸುವು­ದಿದ್ದರೆ, ಅನ್‌ ಡು  ಮತ್ತು ರೀಡು ಮೇಲೆ ಟ್ಯಾಪ್‌ ಮಾಡಿದರೆ ನಿಮಗೆ ಬೇಕಿರುವ ಹಾಗೆ ಮಾಡಿಕೊಳ್ಳಬಹುದು. 

ಪ್ರಿವ್ಯೂ ವಿಡಿಯೊಗಾಗಿ ನೆಕ್ಸ್ಟ್‌  ಮೇಲೆ ಟ್ಯಾಪ್‌ ಮಾಡಿ. ನಿಮ್ಮ ವಿಡಿಯೊ ವಿವರ ದಾಖಲಿಸಲು ಮತ್ತೆ ನೆಕ್ಸ್ಟ್‌  ಮೇಲೆ ಟ್ಯಾಪ್‌ ಮಾಡಿ. ವಿಡಿಯೊಗೆ ಶೀರ್ಷಿಕೆ ಸೇರಿಸಲು  ಆ್ಯಡ್‌ ಎ ಟೈಟಲ್‌ ಮೇಲೆ ಕ್ಲಿಕ್‌ ಮಾಡಿ. ಗರಿಷ್ಠ 100 ಪದಗಳನ್ನು ಬರೆಯಲು ಅವಕಾಶ ಕಲ್ಪಿಸುತ್ತದೆ. ಒಂದು ವೇಳೆ ನೀವು ಮಾಡಿರುವ ವಿಡಿಯೊ ಮಕ್ಕಳಿಗೆ ಅಲ್ಲದಿದ್ದರೆ, ಯಾರು  ನಿಮ್ಮ ವಿಡಿಯೊವನ್ನು ನೋಡಬೇಕೆಂಬುದನ್ನು ದಾಖಲಿಸಲು ಸೆಲೆಕ್ಟ್  ಆಡಿಯನ್ಸ್‌ ಮೇಲೆ ಟ್ಯಾಪ್‌ ಮಾಡಿ. ಇಷ್ಟಾದ ಮೇಲೆ ಅಪ್ಲೋಡ್‌ ಮೇಲೆ ಟ್ಯಾಪ್‌ ಮಾಡಿದರೆ, ನಿಮ್ಮ ಶಾರ್ಟ್ಸ್ ವಿಡಿಯೊ ಲೈವ್‌ ಹೋಗುತ್ತದೆ. ಅಲ್ಲಿಗೆ ನಿಮ್ಮ ಕಿರು ವಿಡಿಯೊ ಬ್ಲಾಗಿಂಗ್‌ ಮುಕ್ತಾಯವಾಗುತ್ತದೆ.

ರಿಮೈಂಡ್‌ ಸೆಟ್‌ ಮಾಡುವುದು ಹೇಗೆ?
ನೀವು ಹೆಚ್ಚಾಗಿ ಯುಟ್ಯೂಬ್‌ ನೋಡುತ್ತಿದ್ದರೆ ರಾತ್ರಿ ಹೊತ್ತಲ್ಲಿಬೆಡ್‌ ಟೈಮ್‌ ರಿಮೈಂಡರ್‌ ಸೆಟ್‌ ಮಾಡಿಕೊಳ್ಳಬಹುದು. ಈ ಆಯ್ಕೆ ಆಂಡ್ರಾಯ್ಡ… ಮತ್ತು ಐಫೋನ್‌ಗಳಲ್ಲಿ ಮಾತ್ರ ಲಭ್ಯವಿದೆ. ಬೆಡ್‌ ಟೈಮ್‌ ರಿಮೈಂಡರ್‌ ಸೆಟ್‌ ಮಾಡಲು ಹೀಗೆ ಮಾಡಿ:  ಯೂಟ್ಯೂಬ್‌ ಆ್ಯಪ್‌ಗೆ  ಸೈನ್‌ ಇನ್‌ ಆಗಿ, ಸೆಟ್ಟಿಂಗ್ಸ್‌ಗೆ ಹೋಗಿ. ಅಲ್ಲಿಜನರಲ್‌ ಆಯ್ಕೆಗಳಲ್ಲಿರುವ ‘ರಿಮೈಂಡ್‌ ಮೀ ವೆನ್‌ ಇಟ್ಸ್‌ ಬೆಡ್‌ ಟೈಮ್‌’ ಆಯ್ಕೆ ಮಾಡಿಕೊಳ್ಳಿ. ರಿಮೈಂಡರ್‌ ಗಾಗಿ ಬಳಿಕ ಸಮಯ ಆರಂಭ ಮತ್ತು ಮುಕ್ತಾಯವನ್ನು ಸೆಟ್‌ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ನೀವು ವಿಡಿಯೊಗಳನ್ನು ವೀಕ್ಷಿಸುವುದರಲ್ಲಿತಲ್ಲೀನರಾಗಿದ್ದಾಗ ಈ ಆಯ್ಕೆಯು ನಿಮಗೆ  ಬೆಡ್‌ ಟೈಮ್‌ ರಿಮೈಂಡ್‌ ಮಾಡುತ್ತದೆ.



ಭಾನುವಾರ, ಜನವರಿ 31, 2021

Rakesh Tikait is carrying his father's movement legacy, ತಂದೆಗೆ ತಕ್ಕ ಮಗ ರಾಕೇಶ್ ಟಿಕಾಯತ್

೮೦ ಮತ್ತು ೯೦ರ ದಶಕದಲ್ಲಿ ಮಹೇಂದ್ರ ಸಿಂಗ್ ಟಿಕಾಯತ್ ಅವರ ಹೋರಾಟಕ್ಕೆ ಸರಕಾರಗಳು ನಡುಗುತ್ತಿದ್ದವು. ಅವರ ಕಿರಿಯ ಪುತ್ರ ರಾಕೇಶ್ ಟಿಕಾಯತ್ ತಂದೆಯ ದಾರಿಯಲ್ಲಿ ಸಾಗುತ್ತಿದ್ದಾರೆ.

 

- ಮಲ್ಲಿಕಾರ್ಜುನ ತಿಪ್ಪಾರ
ರಾಕೇಶ್ ಟಿಕಾಯತ್ ಎಂಬ ಹೆಸರು ಎರಡು ತಿಂಗಳ ಹಿಂದೆ ಬಹುಶಃ ಉತ್ತರ ಪ್ರದೇಶದ ಜನರನ್ನು ಬಿಟ್ಟು ದೇಶದ ಇತರ ಭಾಗಗಳಿಗೆ ತೀರಾ ಪರಿಚಿತವಾಗಿರಲಿಲ್ಲ. ಆದರೆ, ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯಿದೆಗಳ ವಿರುದ್ಧ ನಡೆಯುತ್ತಿರುವ ಹೋರಾಟದ ‘ಮುಖ’ವಾಗಿ ಅವರೀಗ ದೇಶಪೂರ್ತಿ ಜನಪ್ರಿಯ. ಅಣ್ಣಾ ಹಜಾರೆ ಚಳವಳಿಯ ಮೂಸೆಯಲ್ಲಿ ಅರವಿಂದ ಕೇಜ್ರಿವಾಲ್ ಎಂಬ ನಾಯಕ ಬೆಳಕಿಗೆ ಬಂದಂತೆ ಈ ರೈತ ಹೋರಾಟದ ಫಲವಾಗಿ, ಭಾರತ ಕಿಸಾನ್ ಯೂನಿಯನ್(ಬಿಕೆಯು)ನ ವಕ್ತಾರ ರಾಕೇಶ್ ಟಿಕಾಯತ್ ಅವರು ಪ್ರಭಾವಿ ನಾಯಕರಾಗಿ ಹೊರಹೊಮ್ಮುತ್ತಿದ್ದಾರೆ. ೪೦ಕ್ಕೂ ಹೆಚ್ಚು ರೈತ ಸಂಘಟನೆಗಳು ಒಂದುಗೂಡಿ ನಡೆಸುತ್ತಿರುವ ಹೋರಾಟದ ನೇತೃತ್ವವನ್ನು ತಮ್ಮ ಹೆಗಲ ಮೇಲೇರಿಸಿಕೊಂಡು ಮುನ್ನಡೆಯುತ್ತಿದ್ದಾರೆ.

ರಾಕೇಶ್ ಟಿಕಾಯತ್ ಬಗ್ಗೆ ತಿಳಿದುಕೊಳ್ಳುವ ಮುಂಚೆ ಅವರ ತಂದೆ ಮಹೇಂದ್ರ ಸಿಂಗ್ ಟಿಕಾಯತ್ ಬಗ್ಗೆ ತಿಳಿದುಕೊಂಡರೆ ನಿಮಗೆ ಮತ್ತೊಂದು ಹೊಳಹು ದೊರೆತೀತು. ಅದು ೧೯೮೮ರ ಸಮಯ. ಮಹೇಂದ್ರ ಸಿಂಗ್ ಟಿಕಾಯತ್ ಅವರು ೫ ಲಕ್ಷ ರೈತರೊಂದಿಗೆ ದಿಲ್ಲಿಗೆ ನುಗ್ಗಿದ್ದರು. ಅಂದು ಪ್ರಚಂಡ ಬಹುಮತದೊಂದಿಗೆ ಪ್ರಧಾನಿಯಾಗಿದ್ದ–ವರು ರಾಜೀವ್ ಗಾಂಧಿ ಮತ್ತು ಗೃಹ ಮಂತ್ರಿಯಾಗಿದ್ದವರು ಇತ್ತೀಚೆಗಷ್ಟೇ ನಿಧನರಾದ ಬೂಟಾ ಸಿಂಗ್. ಅಂದು ಮತ್ತು ಇಂದಿನ ಹೋರಾಟಕ್ಕೆ ವ್ಯತ್ಯಾಸ ಏನೆಂದರೆ; ಅಂದಿನ ಸರಕಾರವು ರೈತರನ್ನು ದಿಲ್ಲಿಯ ಗಡಿಯಲ್ಲೇನೂ ತಡೆದಿರಲಿಲ್ಲ. ಬದಲಿಗೆ ನಗರದೊಳಗೆ ಬಿಟ್ಟುಕೊಂಡಿತ್ತು. ರೈತರೆಲ್ಲರೂ ದಿಲ್ಲಿಯ ವಿಜಯ್ ಚೌಕ್‌ನಿಂದ ಇಂಡಿಯಾ ಗೇಟ್‌ವರೆಗೂ ಟೆಂಟ್‌ಗಳನ್ನು ಹಾಕಿ ಪ್ರತಿಭಟನೆ ನಡೆಸಿದ್ದರು. ದಿಲ್ಲಿಯ ಬೋಟ್ ಕ್ಲಬ್ ಲಾನ್‌ನಲ್ಲಿ ಮಹೇಂದ್ರ ಸಿಂಗ್ ಟಿಕಾಯತ್ ರೈತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರೆ ಸರಕಾರವು ಅವರ ಬೇಡಿಕೆಗಳಿಗೆ ಮಣಿಯದೇ ಬೇರೆ ದಾರಿ ಇರಲಿಲ್ಲ. ಇದರ ಮಧ್ಯೆಯೂ ರೈತ ಹೋರಾಟವನ್ನು ತಡೆಯಲು ಬೂಟಾ ಸಿಂಗ್ ಪೊಲೀಸ್ ಬಲ ಪ್ರಯೋಗಿಸಿದರೂ ಮಹೇಂದ್ರ ಸಿಂಗ್ ಟಿಕಾಯತ್ ಹೆದರಲಿಲ್ಲ, ಬೆದರಲಿಲ್ಲ. ವಾರಗಳ ಕಾಲ ನಡೆದ ಹೋರಾಟದ ಬಳಿಕ ರಾಜೀವ್ ಗಾಂಧಿ ಸರಕಾರವು ರೈತರ ಬೇಡಿಕೆಗಳನ್ನು ಒಪ್ಪಿಕೊಂಡಿತು. ಕಬ್ಬಿಗೆ ಹೆಚ್ಚಿನ ಬೆಲೆ, ವಿದ್ಯುತ್ ಮತ್ತು ನೀರು ಶುಲ್ಕ ಮನ್ನಾ ಸೇರಿದಂತೆ ೩೫ ಬೇಡಿಕೆ ಈಡೇರಿಸಿಕೊಂಡೇ ಟಿಕಾಯತ್ ತಮ್ಮ ರೈತ ಸೇನೆಯೊಂದಿಗೆ ಮುಜಫರ್‌ನಗರಕ್ಕೆ ವಾಪಸಾಗಿದ್ದರು. ಅಂದಿನ ಹೋರಾಟದ ಬಗ್ಗೆ ಹಲವಾರು ಲೇಖನಗಳು ಸಾರ್ವಜನಿಕವಾಗಿ ಲಭ್ಯ ಇವೆ. ಅವುಗಳನ್ನು ಓದಿದರೆ ಅಂದಿನ ಹೋರಾಟದ ಸ್ವರೂಪ ಹಾಗೂ ಸರಕಾರದ ಸ್ಪಂದನದ ರೀತಿ ಅರಿವಾದೀತು.

ಈಗ ನಿಮಗೆ ರಾಕೇಶ್ ಟಿಕಾಯತ್ ಅವರ ಹೋರಾಟದ ಹಿನ್ನೆಲೆ ಸ್ವಲ್ಪವಾದರೂ ಅರಿವಾದೀತು. ಜನವರಿ ೨೬ರಂದು ‘ರೈತ ಗಣತಂತ್ರ ಪರೇಡ್’ ವೇಳೆ ಉಂಟಾದ ಹಿಂಸಾಚಾರ ಮತ್ತು ಕೆಂಪುಕೋಟೆ ಸಿಖ್ ಧ್ವಜಾರೋಹಣ ಪ್ರಕರಣ ಹಿನ್ನೆಲೆಯಲ್ಲಿ ರೈತ ಹೋರಾಟ ಸಂಪೂರ್ಣವಾಗಿ ಹಿನ್ನೆಲೆಗೆ ಸರಿಯಿತು ಎಂದು ಬಹುತೇಕ ಮಾಧ್ಯಮಗಳು ಷರಾ ಬರೆದಿದ್ದವು ಮತ್ತು ಕೇಂದ್ರ ಸರಕಾರದ ಉದ್ದೇಶವೂ ಈಡೇರಿತ್ತು! ಉತ್ತರ ಪ್ರದೇಶದ ಸರಕಾರವು ಘಾಜಿಪುರ್ ಬಾರ್ಡರ್‌ನಲ್ಲಿ ಬೀಡುಬಿಟ್ಟಿದ್ದ ರೈತರನ್ನು ಖಾಲಿ ಮಾಡಲು ಬಹುದೊಡ್ಡ ಪೊಲೀಸ್ ಪಡೆಯನ್ನು ಕಳುಹಿಸಿತ್ತು. ವಿದ್ಯುತ್ ಮತ್ತು ನೀರು ಪೂರೈಕೆಯನ್ನು ನಿಲ್ಲಿಸಿತ್ತುಘಿ. ಅಕ್ಷರಶಃ ರೈತರು ಘಾಜಿಪುರ್ ತೊರೆದು ಹೋಗಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಆ ಕ್ಷಣದಲ್ಲಿ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಭಾಷಣವು ಅವರೊಬ್ಬ ತಂದೆಯಂತೆಯೇ ಗಟ್ಟಿ ನಾಯಕ ಎಂಬುದನ್ನು ಸಾಬೀತುಪಡಿಸಿತು. ಈ ವೇಳೆ ಭಾವುಕರಾಗಿ ಕಣ್ಣೀರು ಸುರಿಸಿದ್ದು ಇಡೀ ರೈತ ಹೋರಾಟವನ್ನು ಮತ್ತೆ ಫ್ರಂಟ್‌ಫುಟ್‌ಗೆ ತಂದು ನಿಲ್ಲಿಸಿತು. ಟಿಕಾಯಿತ್ ಕಣ್ಣೀರಿನ ವಿಡಿಯೋ ಕ್ಲಿಪ್ ಕಾಳ್ಗಿಚ್ಚಿನಂತೆ ಹರಡಿ ಘಾಜಿಪುರ್‌ನಿಂದ ೧೫೦ ಕಿ.ಮೀ. ದೂರವಿರುವ ಮುಝಫರ್‌ನಗರದಿಂದ ರಾತ್ರೋರಾತ್ರಿ ರೈತರು ಟ್ರ್ಯಾಕ್ಟರ್ ಏರಿ ಘಾಜಿಪುರ್ ಬಾರ್ಡರ್‌ಗೆ ತಲುಪಿದರು. ಅತ್ತ ಸಿಂಘು ಬಾರ್ಡರ್ ಸೇರಿದಂತೆ ಎಲ್ಲ ಗಡಿಗಳಿಗೂ ಹರಿಯಾಣ, ಪಂಜಾಬ್ ಮತ್ತು ಪಶ್ಚಿಮ ಉತ್ತರ ಪ್ರದೇಶ ರೈತರು ಸಾಗರೋಪಾದಿಯಲ್ಲಿ ಬಂದು ಸೇರಲಾರಂಭಿಸಿದರು. ಗತ್ಯಂತರವಿಲ್ಲದೇ ಉತ್ತರ ಪ್ರದೇಶ ಸರಕಾರವು ಘಾಜಿಪುರ್ ಗಡಿಯಿಂದ ತನ್ನ ಪೊಲೀಸ್ ಪಡೆಯನ್ನು ವಾಪಸ್ ಕರೆಸಿಕೊಂಡಿತು. ರಾಕೇಶ್ ಟಿಕಾಯತ್ ಬಲಿಷ್ಠ ರೈತನಾಯಕನಾಗಿ ಬೆಳೆದು ನಿಂತರು. ಇನ್ನೇನು ಮುಗಿದೇ ಹೋಯಿತು ಎಂಬ ಸ್ಥಿತಿಗೆ ತಲುಪಿದ್ದ ರೈತ ಹೋರಾಟ ಹೊಸ ಹುರುಪಿನಿಂದ ಮತ್ತೆ ಮೈಕೊಡವಿಕೊಂಡು ಎದ್ದು ನಿಲ್ಲಲು ರಾಕೇಶ್ ಕಾರಣರಾದರು.

‘‘ಒಂದು ಹನಿ ಕಣ್ಣೀರು ಸರಕಾರಕ್ಕೆ ಗಂಡಾಂತರ ಸೃಷ್ಟಿಸಲಿದೆ. ಇನ್ನು ಕಣ್ಣುಗಳೇ ಕಡಲಾಗಿ ಉಕ್ಕುವುದನ್ನು ನೀವು ಕಂಡಿರಲಾರಿರಿ,’’ ಎಂಬ ಟಿಕಾಯತ್ ಅವರ ಮಾತುಗಳು ರೈತರ ಒಡಲಾಳದ ಕಿಚ್ಚನ್ನು ಹೊತ್ತಿಸಿದವು.

೧೯೬೯ರ ಜೂನ್ ೪ರಂದು ರಾಕೇಶ್ ಟಿಕಾಯತ್ ಅವರು ಮುಝಫರ್ ನಗರದ ಸಿಸೌಲಿ ಪಟ್ಟಣದಲ್ಲಿ ಜನಿಸಿದರು. ತಂದೆ ಮಹೇಂದ್ರ ಸಿಂಗ್ ಪಶ್ಚಿಮ ಉತ್ತರ ಪ್ರದೇಶದ ಪ್ರಭಾವಿ ರೈತ ನಾಯಕ ಮತ್ತು ಭಾರತ್ ಕಿಸಾನ್ ಯೂನಿಯನ್(ಬಿಕೆಯು) ಸಹ ಸಂಸ್ಥಾಪಕರು. ಟಿಕಾಯತ್ ಕುಟುಂಬವು ಬಿಲಿಯಾನ್ ಖಾಪ್‌ಗೆ ಸೇರಿದ್ದಾಗಿದೆ. ಪಶ್ಚಿಮ ಉತ್ತರಪ್ರದೇಶದಲ್ಲಿ ಬಹುಸಂಖ್ಯೆಯಲ್ಲಿ ಕೃಷಿಕರಾಗಿರುವ ಜಾಟ್ ಸಮುದಾಯದಕ್ಕೆ ಸೇರಿದವರು ಇವರು. ಮೀರತ್ ವಿಶ್ವವಿದ್ಯಾಲಯದಿಂದ ರಾಕೇಶ್ ಎಂಎ ಪದವಿ ಪಡೆದಿದ್ದಾರೆ.

೨೦೧೧ರಲ್ಲಿ ಮಹೇಂದ್ರ ಸಿಂಗ್ ಟಿಕಾಯತ್ ನಿಧನದ ಬಳಿಕ ಅಣ್ಣ ನರೇಶ್ ಟಿಕಾಯತ್ ಯೂನಿಯನ್ ಅಧ್ಯಕ್ಷರಾದರು, ರಾಕೇಶ್ ಬಿಕೆಯುನ ವಕ್ತಾರರಾದರು. ರೈತ ಸಂಘಟನೆಯಲ್ಲಿ ಗುರುತಿಸಿಕೊಳ್ಳುವ ಮುಂಚೆ ರಾಕೇಶ್ ದಿಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿದ್ದರು. ಆ ಬಳಿಕ ಎಸ್‌ಐ ಕೂಡ ಆದರು. ೧೯೯೩ರಲ್ಲಿ ಮಹೇಂದ್ರ ಸಿಂಗ್ ಅವರು ಕೆಂಪುಕೋಟೆಯಲ್ಲಿ ಪ್ರತಿಭಟನೆ ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿ, ತಂದೆಯ ಜೊತೆ ಹೋರಾಟಕ್ಕೆ ಧುಮುಕಿದರು. ನಾಲ್ಕು ವರ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡ ಬಳಿಕ ವಕ್ತಾರರಾಗಿ ನೇಮಕವಾದರು. ಅಲ್ಲಿಂದ ಟಿಕಾಯತ್ ಅವರ ರೈತಪರ ಹೋರಾಟ ಆರಂಭವಾಯಿತು. ಹಲವು ಬಾರಿ ರೈತರ ಪರವಾಗಿ ಹೋರಾಟ ಮಾಡಿ ೪೦ಕ್ಕೂ ಹೆಚ್ಚು ಬಾರಿ ಜೈಲುವಾಸ ಕಂಡಿದ್ದಾರೆ. ೨೦೧೮ರಲ್ಲಿ ಟಿಕಾಯತ್ ಸಂಘಟಿಸಿದ ಉತ್ತರಾಖಂಡದ ಹರಿದ್ವಾರದಿಂದ ದಿಲ್ಲಿಯವರೆಗೆ ನಡೆಸಿದ ಕಿಸಾನ್ ಕ್ರಾಂತಿ ಯಾತ್ರೆ ಗಮನ ಸೆಳೆಯಿತು.

೫೧ ವರ್ಷದ ಟಿಕಾಯತ್ ಸಂಘಟಿಸಿದ ಬಹುತೇಕ ರೈತ ಹೋರಾಟಗಳಲ್ಲಿ ಯಶಸ್ಸು ಕಂಡಿದ್ದಾರೆ. ರಾಜಕೀಯದಲ್ಲೂ ತಮ್ಮ ನಸೀಬು ಪರೀಕ್ಷಿಸಿದರಾದರೂ ಯಶಸ್ಸು ಸಿಕ್ಕಿಲ್ಲ. ಕಾಂಗ್ರೆಸ್ ಬೆಂಬಲದೊಂದಿಗೆ ೨೦೦೭ರಲ್ಲಿ ಉತ್ತರ ಪ್ರದೇಶದ ವಿಧಾನಸಭೆಗೆ ಸ್ಪರ್ಧಿಸಿ ಸೋತರು. ಮತಗಳ ಲೆಕ್ಕದಲ್ಲಿ ಅವರು ಆರನೇ ಸ್ಥಾನದಲ್ಲಿದ್ದರು! ಇನ್ನು ೨೦೧೪ರ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕದಳ(ಆರ್‌ಎಲ್‌ಡಿ) ಟಿಕೆಟ್ ಪಡೆದು ಅಮ್ರೋಹ ಕ್ಷೇತ್ರದಿಂದ ಸ್ಪರ‌್ಸಿ, ಕೇವಲ ಹತ್ತು ಸಾವಿರ ಒಳಗೆ ಮತಗಳನ್ನು ಪಡೆದರು. ರಾಜಕಾರಣದ ಸೋಲು ಅವರನ್ನೇನೂ ಧೃತಿಗೆಡಿಸಲಿಲ್ಲ. ಬದಲಿಗೆ ರೈತ ಹೋರಾಟದಲ್ಲಿ ಇನ್ನು ಹೆಚ್ಚಿಗೆ ತೊಡಗಿಸಿಕೊಳ್ಳುವಂತೆ ಮಾಡಿತು.

ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್ ಸಿಂಗ್ ಅವರೊಂದಿಗೆ ರಾಕೇಶ್ ಅವರದ್ಧು ಕಭೀ ಖುಷಿ ಕಭೀ ಗಮ್ ಸಂಬಂಧ. ಅವರೂ ಟಿಕಾಯತ್ ಬೆಂಬಲಕ್ಕೆ ನಿಂತಿದ್ದಾರೆ. ಇಂಡಿಯನ್ ನ್ಯಾಷನಲ್ ಲೋಕದಳದ ಅಭಯ ಸಿಂಗ್ ಚೌಟಾಲಾ, ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿಯ ಹನುಮಾನ್ ಬೇಣಿವಾಲಾ ಅವರು ಸಂಪೂರ್ಣವಾಗಿ ಟಿಕಾಯತ್ ಬೆಂಬಲಕ್ಕೆ ನಿಲ್ಲುವ ಮೂಲಕ ರೈತರ ಹೋರಾಟಕ್ಕೆ ಹೊಸ ತಿರುವು ದೊರೆಯಲಾರಂಭಿಸಿದೆ. ತಂದೆಯ ದಾರಿಯಲ್ಲೇ ಸಾಗುತ್ತಿರುವ ರಾಕೇಶ್ ಅವರ ಮೇಲೆ ಈಗ ಜವಾಬ್ದಾರಿ ಹೆಚ್ಚಾಗಿದೆ. ಜೊತೆಗಿರುವ ೪೦ಕ್ಕೂ ಹೆಚ್ಚು ರೈತ ಸಂಘಟನೆಗಳ ನಡುವೆ ಸಮನ್ವಯ ಸಾಸುತ್ತಲೇ ರೈತ ಹೋರಾಟವನ್ನು ವಿಫಲಗೊಳಿಸುವ ಒಳಸಂಚುಗಳನ್ನು ಮೆಟ್ಟಿ ರೈತ ಹೋರಾಟವನ್ನು ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಅನೂಹ್ಯವಾಗಿ ವ್ಯಕ್ತವಾಗು ತ್ತಿರುವ ಬೆಂಬಲವನ್ನು ಹಿಡಿದಿಟ್ಟುಕೊಂಡು ಗಮ್ಯ ತಲುಪುವ ಸವಾಲು ಅವರ ಮುಂದಿದೆ. 




ಸೋಮವಾರ, ಜನವರಿ 25, 2021

How to enable Two Step Verification in Telegram? ಟೆಲಿಗ್ರಾಮ್‌ನಲ್ಲಿ ಟು ಸ್ಟೆಪ್‌ ವೆರಿಫಿಕೇಷನ್‌ ಹೇಗೆ?

- ಮಲ್ಲಿಕಾರ್ಜುನ ತಿಪ್ಪಾರ

ಫೇಸ್ಬುಕ್ಒಡೆತನದ ವಾಟ್ಸ್ಆ್ಯಪ್ಈಗಲೂ ಜಗತ್ತಿನ ಅತ್ಯಂತ ಜನಪ್ರಿಯ ಮೆಸೆಂಜರ್ಆ್ಯಪ್ಎನ್ನುವುದು ನಿರ್ವಿವಾದ. ಆದರೆ, ಯಾವಾಗ ವಾಟ್ಸ್ಆ್ಯಪ್ನಲ್ಲಿರುವ ಮಾಹಿತಿಯನ್ನು ಫೇಸ್ಬುಕ್ಜತೆ ಹಂಚಿಕೊಳ್ಳಬೇಕು ಎಂಬ ನೀತಿಯನ್ನು ತರುವುದಾಗಿ ಫೇಸ್ಬುಕ್ಹೇಳಿತೋ ಆಗ  ಬಳಕೆದಾರರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಪರಿಣಾಮ, ಫೇಸ್ಬುಕ್ವಾಟ್ಸ್ಆ್ಯಪ್ಪ್ರೈವೆಸಿ ಪಾಲಿಸಿಯನ್ನು ಒಂದಿಷ್ಟು ಕಾಲ ಮುಂದೂಡಿದೆ. ಏತನ್ಮಧ್ಯೆ, ಸಿಗ್ನಲ್ಮತ್ತು ಟೆಲಿಗ್ರಾಮ್ನಂಥ ಪರ್ಯಾಯ ಮೆಸೆಂಜರ್ಆ್ಯಪ್ಗಳ ಬಗ್ಗೆ ಜನರು ಹೆಚ್ಚೆಚ್ಚು ಮೋಹ ಬೆಳೆಸಿಕೊಳ್ಳುತ್ತಿದ್ದಾರೆಸದ್ಯ 56 ಲಕ್ಷ ಕ್ಕೂ ಅಧಿಕ ಟೆಲಿಗ್ರಾಮ್ಆ್ಯಪ್ಡೌನ್ಲೋಡ್ಆಗಿದ್ದರೆ, ಸಿಗ್ನಲ್ನ ಈ ಪ್ರಮಾಣ 75 ಲಕ್ಷ ಕ್ಕೇರಿಕೆಯಾಗಿದೆ. ಇದೆಲ್ಲವೂ ವಾಟ್ಸ್ಆ್ಯಪ್ಗೆ ಪರ್ಯಾಯವಾಗಿ ಜನರು ಕಂಡುಕೊಳ್ಳುತ್ತಿರುವ ಡಿಜಿಟಲ್ದಾರಿಗಳಾಗಿವೆ.

ವಾಟ್ಸ್ಆ್ಯಪ್ಪ್ರೈವೆಸಿ ಪಾಲಿಸಿ ಘೋಷಣೆ ಬಳಿಕ ಸಿಗ್ನಲ್ಮತ್ತು ಟೆಲಿಗ್ರಾಮ್ಗೆ ಸಿಕ್ಕಾಪಟ್ಟೆ ಬಳಕೆದಾರರು ಹೆಚ್ಚುತ್ತಿರುವ ಸಂಗತಿಗಳು ಈಗ ಗುಟ್ಟಾಗಿ ಉಳಿದಿಲ್ಲ. ಹಾಗೆಂದಮಾತ್ರಕ್ಕೆ ಈ ಎರಡೂ ಆ್ಯಪ್ಗಳು ಗರಿಷ್ಠ ಸುರಕ್ಷಿತವಾಗಿವೆಯೇ? ಖಂಡಿತ ಇಲ್ಲ. ಇಲ್ಲೂಒಂದಿಷ್ಟು ಆತಂಕಗಳಿವೆ. ಆದರೆ, ವಾಟ್ಸ್ಆ್ಯಪ್ನ ಹೊಸ ಪ್ರೈವೆಸಿ ಪಾಲಿಸಿಯಷ್ಟು (ಈಗ ಮುಂದೂಡಲಾಗಿದೆ) ಆತಂಕ­ಕಾರಿಯಲ್ಲ! ಇದು ಒಂದು ಬಾಜುವಿನ ಚರ್ಚೆ; ಮತ್ತೊಂದು ಬಾಜು ನೋಡುವುದಾದರೆ, ಟೆಲಿಗ್ರಾಮ್ಅನ್ನು ಅತ್ಯಂತ ಸುರಕ್ಷಿತವಾಗಿ ಬಳಸುವುದು ಹೇಗೆ ಪ್ರಶ್ನೆ ಮೂಡುತ್ತದೆ. ನಿಮ್ಮ ಮಾಹಿತಿಯನ್ನು ಬೇರೆಯವರು ನೋಡದಂತೆ ಅಥವಾ ನಿಮ್ಮ ಖಾತೆಯನ್ನು ಹೆಚ್ಚು ಸುರಕ್ಷಿತವಾಗಿಸಲು ಕಂಪನಿಯೇ ಒದಗಿಸುವ ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಆ ಪೈಕಿಟು ಸ್ಟೆಪ್ವೆರಿಫಿಕೇಷನ್‌  ಕೂಡ ಒಂದು.

ಟು ಸ್ಟೆಪ್ವೆರಿಫಿಕೇಷನ್ಹೇಗೆ?
ಮೊದಲಿಗೆ ಸ್ಮಾರ್ಟ್ಫೋನ್ನಲ್ಲಿಟೆಲಿಗ್ರಾಮ್ಆ್ಯಪ್ಓಪನ್ಮಾಡಿ. ಬಳಿಕ ಎಡಗಡೆ ಸ್ವೈಪ್ಮಾಡುವ ಮೂಲಕ ಮೆನು ಓಪನ್ಮಾಡಿ ಇಲ್ಲವೇ ಹೆಂಬರ್ಗರ್ಐಕಾನ್ಮೇಲೆ ಟ್ಯಾಪ್ಮಾಡಿ. ಆಗ ಸೆಟ್ಟಿಂಗ್ಸ್ಗೆ ಹೋಗುತ್ತೀರಿ. ಸೆಟ್ಟಿಂಗ್ಸ್ಮೆನುವಿನಲ್ಲಿಪ್ರೈವೆಸಿ ಮತ್ತು ಸೆಕ್ಯುರಿಟಿ ಆಪ್ಷನ್ಅನ್ನು ಆಯ್ಕೆ ಮಾಡಿಕೊಳ್ಳಿ. ಬಳಿಕ ಟು ಸ್ಟೆಪ್ವೆರಿಫಿಕೇಷನ್ಆಯ್ಕೆ ಮೇಲೆ ಟ್ಯಾಪ್ಮಾಡಿ. ಪಾಸ್ವರ್ಡ್ಹಾಕಿದ ಬಳಿಕ ನೀವು ಪಾಸ್ವರ್ಡ್ಹಿಂಟ್ಮತ್ತು ರಿಕವರಿ ಇಮೇಲ್ಸೇರಿಸಬೇಕಾಗುತ್ತದೆ. ಇಷ್ಟಾದ ಮೇಲೆ, ಟೆಲಿಗ್ರಾಮ್ಕಳುಹಿಸುವ ಕೋಡ್ನಮೂದಿಸಿ. ಅಲ್ಲಿಗೆ ಟು ಸ್ಟೆಪ್ವೆರಿಫಿಕೇಷನ್ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

ಇದು ಟೆಲಿಗ್ರಾಮ್ನಲ್ಲಿ ಟು ಸ್ಟೆಪ್ವೆರಿಫಿಕೇಷನ್ಮಾಡಲು ಅನುಸರಿಸಬೇಕಾದ ಮಾದರಿ­ಯಾಗಿದೆ. ಟು ಸ್ಟೆಪ್ವೆರಿಫಿಕೇಷನ್ಸಕ್ರಿಯಗೊಂಡ ಮೇಲೆ, ಹೊಸ ಸಾಧನದಲ್ಲಿಟೆಲಿಗ್ರಾಮ್ಓಪನ್ಮಾಡಲು ಈ ಹಿಂದೆ ಟು ಸ್ಟೆಪ್ವೆರಿಫಿಕೇಷನ್ಗೆ ನೀಡಿದ ಪಾಸ್ವರ್ಡ್ಅನ್ನು ಹಾಕಬೇಕಾಗು­ತ್ತದೆ ಮತ್ತು ಎಸ್ಸೆಮ್ಮೆಸ್ಮೂಲಕ ಟೆಲಿಗ್ರಾಮ್ರವಾನಿಸುವ ಕೋಡ್ಅನ್ನು ಕೂಡ ಹಾಕಬೇಕು. ಆಗ ಮಾತ್ರವೇ ಟೆಲಿಗ್ರಾಮ್ನಿಮ್ಮ ಬಳಕೆಗೆ ತೆರೆದುಕೊಳ್ಳುತ್ತದೆ.

ಲಾಸ್ಟ್ಸೀನ್ಮುಚ್ಚಿಡುವುದು ಹೇಗೆ?
ಟೆಲಿಗ್ರಾಮ್ಆ್ಯಪ್ಓಪನ್ಮಾಡಿ, ಸ್ಕ್ರೀನ್ನ ಎಡಮೂಲೆಯಲ್ಲಿರುವ ಹೆಂಬರ್ಗರ್ಐಕಾನ್ಮೇಲೆ ಟ್ಯಾಪ್ಮಾಡಿ. ಆಗ ಸೆಟ್ಟಿಂಗ್ಸ್ಬಾಕ್ಸ್ನಲ್ಲಿರುವ ಪ್ರೈವೆಸಿ ಮತ್ತು ಸೆಕ್ಯುರಿಟಿ ಆಪ್ಷನ್ಮೇಲೆ ಟ್ಯಾಪ್ಮಾಡಿ. ಬಳಿಕ ಲಾಸ್ಟ್ಸೀನ್ಆಪ್ಷನ್ಮೇಲೆ ಟ್ಯಾಪ್ಮಾಡಿ. ಆಗ ಯಾರು ನಿಮ್ಮ ಲಾಸ್ಟ್ಸೀನ್ನೋಡಬಹುದು ಎಂಬುದಕ್ಕೆ ಆಯ್ಕೆಗಳು ಕಾಣುತ್ತವೆ. Every one to my contacts and Nobody ಪೈಕಿ ಲಾಸ್ಟ್ಸೀನ್ಕಾಣಿಸದಂತೆ ಮಾಡಲು ನೀವು ನೋಬಡಿ ಆಪ್ಷನ್ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಾಗಿ ಸ್ಕ್ರೀನ್ನ ರೈಟ್ಸೈಡ್ನಲ್ಲಿರುವ ಚೆಕ್ಮಾರ್ಕ್ಮೇಲೆ ಟ್ಯಾಪ್ಮಾಡಿ. ಆಗ ಎದುರಾಗುವ ಪಾಪ್ಅಪ್ನಲ್ಲಿ ನೀವು ಯಾರೊಂದಿಗೆ ನಿಮ್ಮ ಲಾಸ್ಟ್ಸೀನ್ಟೈಮ್ನೋಡಲು ಅವಕಾಶ ಕಲ್ಪಿಸುವುದಿಲ್ಲವೋ ಅವರ ಲಾಸ್ಟ್ಸೀನ್

ಅನ್ನು ನೀವು ನೋಡಲು ಸಾಧ್ಯವಾಗುವುದಿಲ್ಲಎಂಬ ಸಂದೇಶವನ್ನು ಕಾಣಬಹುದು. ಇಷ್ಟಾದ ಬಳಿಕ ನೀವು ಎಂದು ಓಕೆ ಎಂದು ಒಪ್ಪಿಗೆ ಕೊಟ್ಟರೆ ಲಾಸ್ಟ್ಸೀನ್ಮುಚ್ಚಿಡುವ ಪ್ರಕ್ರಿಯೆ ಪೂರ್ಣಗೊಳಿಸಿದಂತಾಗುತ್ತದೆ. 




ಬುಧವಾರ, ಜನವರಿ 13, 2021

Is Signal more secure than Whatsapp?- ವಾಟ್ಸ್‌ಆ್ಯಪ್‌ಗಿಂತ ಸಿಗ್ನಲ್‌ ಹೇಗೆ ಬೆಸ್ಟು?

- ಮಲ್ಲಿಕಾರ್ಜುನ ತಿಪ್ಪಾರ
ಜಗತ್ತಿನ ನಂಬರ್‌ 1 ಶ್ರೀಮಂತ, ಟೆಸ್ಲಾ ಕಂಪನಿಯ ಮಾಲೀಕ ಎಲಾನ್ಮಸ್ಕ್ಆ ಒಂದು ಟ್ವೀಟ್ಮಾಡ­ದಿದ್ದರೆ ಈ ಜಗತ್ತುಸಿಗ್ನಲ್‌’ ಎಂಬ ಆ್ಯಪ್ಹಿಂದೆ ಬೀಳುತ್ತಿರ­ಲಿಲ್ಲವೇನೋ? ವಾಟ್ಸ್ಆ್ಯಪ್ಹೊಸ ಪ್ರೈವೆಸಿ ನೀತಿಯನ್ನು ಜಾರಿಗೆ ತರಲು ಮುಂದಾಗುತ್ತಿದ್ದಂತೆ ಎಲಾನ್ಮಸ್ಕ್Use Signal ಅಂತಾ ಸಿಂಪಲ್ಆಗಿ ಮಾಡಿದ ಈ ಟ್ವೀಟ್ಸಿಗ್ನಲ್ಫೌಂಡೇಷನ್ನ ಸರ್ವರ್ ಕ್ರ್ಯಾಶ್ಆಗುವಂತೆ ಮಾಡಿತು! ಐದಾರು ದಿನಗಳಲ್ಲಿಸಿಗ್ನಲ್ಗೆ ಸೈನ್ಇನ್ಆಗುತ್ತಿರುವವರ ಸಂಖ್ಯೆಯಲ್ಲಿವಿಪರೀತ ಹೆಚ್ಚಳವಾಗಿದೆ. ಜಗತ್ತು ಈಗ ಸಿಗ್ನಲ್ಸಮೂಹ ಸನ್ನಿಗೆ ಒಳಗಾಗಿದೆ.

ಜಗತ್ತಿನಾದ್ಯಂತ ಪತ್ರಕರ್ತರು, ಕಾರ್ಯಕರ್ತರು, ವಕೀಲರು, ಸಂಶೋಧ­ಕರು, ರಾಜ­­ಕಾರ­ಣಿ­ಗಳು, ಸುರಕ್ಷತಾ ತಜ್ಞರು ಹೆಚ್ಚಾಗಿ ಈ ಸಿಗ್ನಲ್ಆ್ಯಪ್ಬಳಸು­­ತ್ತಿದ್ದರು. ಆದರೆ ಈಗ ಸಾಮಾ­ನ್ಯರೂ ಸಿಗ್ನಲ್ಗೆ ಅಡಿಯಿಡುತ್ತಿದ್ದಾರೆ. ಲಾಭ­ರಹಿತ ಸಂಸ್ಥೆಯಾಗಿರುವ ಸಿಗ್ನಲ್ಫೌಂಡೇ­­ಷನ್ಒಡೆತನದ ಸಿಗ್ನಲ್ಆ್ಯಪ್‌,  ಸುರ­­­­­­ಕ್ಷ­ತೆಯ ದೃಷ್ಟಿಯಿಂದ ಮಜಬೂತ್ಆಗಿದೆ. ನಿಮ್ಮ ಯಾವ ಮಾಹಿತಿಯೂ 3ನೇ ವ್ಯಕ್ತಿಯ ಪಾಲಾಗುವುದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮ ಡೇಟಾ ಯಾವುದೇ ಅನ್ಯ ಉದ್ದೇಶಕ್ಕೆ ಬಳಕೆಯಾಗುವುದಿಲ್ಲ. ಹಾಗಾಗಿ, ಹೆಚ್ಚಿನವರು ಸಿಗ್ನಲ್ಮೇಲೆ ವಿಶ್ವಾಸ ಇಡುವಂತಾಗಿದೆ. ಹಾಗಾದರೆ, ಸಿಗ್ನಲ್ನಲ್ಲಿ ಏನಿದೆ, ವಾಟ್ಸ್ಆ್ಯಪ್ಗಿಂತಲೂ ಹೇಗೆ ಬೆಸ್ಟು?

ಲಾಭರಹಿತ ಸಂಸ್ಥೆಯ ಒಡೆತನ
ವಾಟ್ಸ್ಆ್ಯಪ್ಗಿಂತ ಸಿಗ್ನಲ್ಯಾಕೆ ಮುಖ್ಯವಾಗುತ್ತದೆ ಎಂದರೆ, ಈ ಆ್ಯಪ್ಯಾವುದೇ ದೊಡ್ಡ ಟೆಕ್ಕಂಪನಿಯದ್ದಲ್ಲ. ಬದಲಿಗೆ, ಲಾಭರಹಿತ ಸಿಗ್ನಲ್ಫೌಂಡೇಷನ್ಗೆ ಸೇರಿದೆ. ಹಾಗಾಗಿ, ಬಳಕೆದಾರರ ಡೇಟಾ­ವನ್ನು ಅದು ವಾಣಿಜ್ಯ ಕಾರಣಕ್ಕೆ ಬಳಸಿಕೊಳ್ಳಲಾರದು. ಜೊತೆಗೆ, ಈ ಆ್ಯಪ್ನಿಗೂಢ ಪಠ್ಯವನ್ನು ಯಾರೂ ಡಿಕೋಡ್ಮಾಡಲು ಆಗೋದಿಲ್ಲ. ಫೌಂಡೇಶನ್ಗೆ ಬರುವ ಡೊನೇಷನ್ಮತ್ತು ಬಳಕೆದಾರರು ನೀಡುವ ಹಣವೇ ಇವರಿಗೆ ಆಧಾರ.

ಎಲ್ಲ ಖುಲ್ಲಂ ಖುಲ್ಲಾ

ಸಿಗ್ನಲ್ಆ್ಯಪ್ಒಂದು ರೀತಿಯಲ್ಲಿ ತೆರೆದ ಪುಸ್ತಕ. ಇಲ್ಲಿ ಯಾವ ಮುಚ್ಚುಮರೆಯೂ ಇಲ್ಲ. ನೀವು ಈ ಆ್ಯಪ್ನ ಸೋರ್ಸ್ಕೋಡ್ನೋಡಬಹುದು. ಅದು ಸಾರ್ವಜನಿಕವಾಗಿ ಲಭ್ಯವಿದೆ. ಅಂದರೆ, ಜಗತ್ತಿನಾದ್ಯಂತ ತಜ್ಞರು ಈ ಕೋಡ್ನೋಡುವುದರಿಂದ ಏನಾದರೂ ಸಮಸ್ಯೆ ಎದುರಾದರೆ ಮೆಸೆಂಜರ್ ಮತ್ತು ವಾಟ್ಸ್ಆ್ಯಪ್ಗಿಂತಲೂ ಫಾಸ್ಟ್ಆಗಿ ಸರಿಪಡಿಸಲು ಸಾಧ್ಯವಾಗುತ್ತದೆ. ಮತ್ತು ಯಾವುದೂ ರಹಸ್ಯವಾಗಿ ಉಳಿಯುವುದಿಲ್ಲ. ಇದೇ ಮಾತನ್ನು ನೀವು ವಾಟ್ಸ್ಆ್ಯಪ್ಗೆ ಹೇಳುವಂತಿಲ್ಲ.

ಎಲ್ಲವೂ ನಿಗೂಢ ಲಿಪಿ
ನಿಮ್ಮ ಪ್ರೊಫೈಲ್ಫೋಟೊ, ನಿಮ್ಮ ಧ್ವನಿ, ವಿಡಿಯೋ ಕಾಲ್ಸ್‌, ಫೋಟೊ ಅಟ್ಯಾಚ್ಮೆಂಟ್ಸ್‌, ಸ್ಟಿಕರ್ಸ್‌, ಲೊಕೇಷನ್ಪಿನ್ಸ್‌. ಅಷ್ಟೇ ಯಾಕೆ ನೀವು ಕಳುಹಿಸುವ ಜಿಐಎಫ್ಕೂಡ ಎನ್ಕ್ರಿಪ್ಟೆಡ್ಆಗಿರುತ್ತದೆ. ಈ ವಿಷಯದಲ್ಲಿ ವಾಟ್ಸ್ಆ್ಯಪ್ಗಿಂತಲೂ ಸಿಗ್ನಲ್ಹೆಚ್ಚು ನಂಬಿಕೆಗೆ ಅರ್ಹವಾಗಿದೆ. ಬಳಕೆದಾರರ ಮಾಹಿತಿ ಸುರಕ್ಷತೆಯ ವಿಷಯದಲ್ಲಿ ಸಿಗ್ನಲ್ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.

ಎಲ್ಲವೂ ಸುರಕ್ಷಿತ
ಸಿಗ್ನಲ್ನ ಇನ್ನೊಂದು ಖಾಸಿಯತ್ಏನೆಂದರೆ, ಇಲ್ಲಿ ಎಲ್ಲವೂ ಸುರಕ್ಷಿತ. ನಿಮ್ಮ ಸುರಕ್ಷಿತ ಮೆಸೆಜ್ಗಳನ್ನು ಸಿಗ್ನಲ್ಕ್ಲೌಡ್ಗೆ ಕಳುಹಿಸು­ವುದಿಲ್ಲ. ಯಾಕೆಂದರೆ, ಈ ಕ್ಲೌಡ್ನಲ್ಲಿರುವ ಸಂದೇಶಗಳನ್ನು

ವಾಟ್ಸ್ಆ್ಯಪ್‌, ಗೂಗಲ್ಸೇರಿದಂತೆ ಯಾರು ಬೇಕಿದ್ದರೂ ಅವುಗಳನ್ನು ಓದಬಹುದು. ಬದಲಿಗೆ, ಇಂಥ ಬ್ಯಾಕ್ಅಪ್ಗಳನ್ನು ನಿಮ್ಮ ಫೋನ್ನ ಡೇಟಾಬೇಸ್ನಲ್ಲಿ ನಿಗೂಢಲಿಪಿ­ಯಲ್ಲಿ ಸಿಗ್ನಲ್ಸೇವ್ಮಾಡುತ್ತದೆ ಮತ್ತು ಅದನ್ನು ನೀವು ಮಾತ್ರ ನೋಡಲು ಸಾಧ್ಯವಾಗುತ್ತದೆ. ಇನ್ನೂ ಆಶ್ಚರ್ಯ ಎಂದರೆ, ಇದು ನಿಮ್ಮ ಫೋನ್ನಲ್ಲಿರುವ ಸಂಪರ್ಕ ಸಂಖ್ಯೆಗಳನ್ನೂ ತನ್ನ ಸರ್ವರ್ನಲ್ಲಿ ಉಳಿಸಿಕೊಳ್ಳುವುದಿಲ್ಲ!

ಕಣ್ಮರೆಯಾಗುವ ಮೆಸೆಜ್
ಇದರಲ್ಲೇನು ವಿಶೇಷ ಎನ್ನಬೇಡಿ. ವಾಟ್ಸ್ಆ್ಯಪ್ನಲ್ಲಿ ಈ ಫೀಚರ್ಇದೆಯಲ್ಲ ಅನ್ನಬಹುದು. ಆದರೆ, ಈ ಫೀಚರ್ಸಿಗ್ನಲ್ನ ಅತ್ಯಂತ ಹಳೆಯ ಮತ್ತು ಅತ್ಯಂತ ಉಪಯುಕ್ತ ಫೀಚರ್ಆಗಿದೆ. ವಾಟ್ಸ್ಆ್ಯಪ್ನಲ್ಲಿ ಅದು ಇತ್ತೀಚೆಗಷ್ಟೇ ಬಂದಿದೆ. ಬಳಕೆದಾರರು ತಮ್ಮ ಸಂದೇಶಕ್ಕೆ ಹತ್ತು ಸೆಕೆಂಡ್ನಿಂದ ವಾರದವರೆಗೂ ಟೈಮರ್ಅಳವಡಿಸ­ಬಹುದು. ಆ ಬಳಿಕ ಅದು ಸ್ವಯಂ ಆಗಿ ಕಣ್ಮರೆಯಾಗುತ್ತದೆ. ಒಂದು ಬಾರಿ ವೀಕ್ಷಿಸಬಹುದಾದ ಮೀಡಿಯಾ ಮತ್ತು ಮೆಸೆಜ್ರಿಕ್ವೆಸ್ಟ್ಗಳು ವಾಟ್ಸ್ಆ್ಯಪ್ನಲ್ಲೂ ಇಲ್ಲ.

ಬೇರೆ ಆ್ಯಪ್ಗಳು ಕನ್ನ ಹಾಕುವಂಗಿಲ್ಲ
ಈ ಫೀಚರ್ ವಾಟ್ಸ್ಆ್ಯಪ್ಸೇರಿದಂತೆ ಸೇರಿದಂತೆ ಇತರ ಯಾವುದೇ ಪ್ರಮುಖ ಮೆಸೆಂಜರ್ಆ್ಯಪ್ಗಳಲ್ಲೂ ಇಲ್ಲ. ಸಿಗ್ನಲ್ನಲ್ಲಿ ಇನ್ಕಾಗ್ನಿಟೋ ಕೀಬೋರ್ಡ್ಆಪ್ಷನ್ಇದ್ದು, ಇದು ನೀವು ಏನನ್ನು ಟೈಪ್ಮಾಡುತ್ತಿದ್ದೀರಿ ಎಂಬುದನ್ನು ಗುರುತಿಸುವುದಿಲ್ಲ. ಸ್ಕ್ರೀನ್ಸೆಕ್ಯುರಿಟಿ ಫೀಚರ್‌, ನಿಮ್ಮ ಸಿಗ್ನಲ್ಆ್ಯಪ್ನಲ್ಲಿರುವ ಮಾಹಿತಿಯನ್ನು ಕದ್ದು ನೋಡುವುದನ್ನು ತಪ್ಪಿಸುತ್ತದೆ. ಇದನ್ನು ಗಮನಿಸಿದರೆ ಜಗತ್ತಿನಲ್ಲೇ ಸಿಗ್ನಲ್ಅತ್ಯಂತ ಸೆಕ್ಯೂರ್ಆಗಿರುವ ಮೆಸೆಂಜರ್ಆ್ಯಪ್ಎನ್ನುವುದು ತಿಳಿಯು­ತ್ತದೆ. ಆದರೆ, ದುರದೃಷ್ಟವಶಾತ್ಈ ಆ್ಯಪ್ಬಗ್ಗೆ ಜಗತ್ತು ತೀರಾ ಇತ್ತೀಚಿನವರೆಗೂ ಅಪರಿಚಿತವಾಗಿರುವುದು ಚೋದ್ಯವೇ ಸರಿ!