ಗುರುವಾರ, ಜೂನ್ 3, 2021

George Fernandes- The Statesman: ಜಾರ್ಜ್... ನೀವು ಸದಾ ನೆನಪಿನಲ್ಲಿರುತ್ತೀರಿ

ಕಾರ್ಮಿಕ ಚಳವಳಿಯ ಅಗ್ರಮಾನ್ಯ ನಾಯಕರಾಗಿ, ಸಮಾಜವಾದಿ ಚಿಂತಕರಾಗಿ ಜಾರ್ಜ್ ಫರ್ನಾಂಡಿಸ್ ಅವರು ಏರಿದ ಎತ್ತರ ಅಷ್ಟಿಷ್ಟಲ್ಲ. ರಾಜಕಾರಣಿಗಳಿಗೆ ಅವರು ರೋಲ್ ಮಾಡೆಲ್. ಜೂನ್ 3 ಜಾರ್ಜ್ ಫರ್ನಾಂಡಿಸ್ ಹುಟ್ಟಿದ ದಿನ. ಅವರ ನೆನಪಿನಲ್ಲಿ...

 

- ಮಲ್ಲಿಕಾರ್ಜುನ ತಿಪ್ಪಾರ
ಹೋರಾಟದ ಮೂಲಕವೇ ರಾಜಕೀಯ ಏಳ್ಗೆ ಕಂಡು, ಜನ ಮತ್ತು ದೇಶಕ್ಕೆ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯದನ್ನು ಮಾಡಿದವರು ಜಾರ್ಜ್ ಫರ್ನಾಂಡಿಸ್. ಅವರನ್ನು ಕೇವಲ ರಾಜಕಾರಣಿ ಎಂಬ ಒಂದೇ ಪದದಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಹೋರಾಟಗಾರ, ಕಾರ್ಮಿಕ ಮುಖಂಡ, ಪ್ರಖರ ಸಮಾಜವಾದಿ, ಸಮತಾವಾದಿ, ಅತ್ಯುತ್ತಮ ವಾಗ್ಮಿ... ಹೀಗೆ ಏನೆಲ್ಲ ವಿಶೇಷಣಗಳನ್ನು ಅವರಿಗೆ ಧಾರಾಳವಾಗಿ ನೀಡಬಹುದು. ಅವರು ಎಂದೂ ತಾವು ನಂಬಿದ ಸಿದ್ಧಾಂತಕ್ಕೆ ತಿಲಾಂಜಲಿ ಇಡಲಿಲ್ಲ. ರಾಜಕೀಯದಲ್ಲಿ ಏರಬೇಕಾದ ಎಲ್ಲ ಮಜಲುಗಳನ್ನು ಏರಿದರು; ಯಾವುದಕ್ಕೂ ರಾಜಿಯಾಗಲಿಲ್ಲ. ಅಧಿಕಾರ ಸುಖ ಅವರನ್ನು ಆಲಸಿಯಾಗಿ ಮಾಡಲಿಲ್ಲ; ಗರ್ವಿಷ್ಠರನ್ನಾಗಿಸಲಿಲ್ಲ. ಅಧಿಕಾರ ಬರುವ ಮುಂಚೆ ಹೇಗಿದ್ದರೋ, ಕುರ್ಚಿಯಲ್ಲಿ ಕುಳಿತಾಗಲೂ ಹಾಗೆಯೇ ಇದ್ದರು. ತಾವು ಏರಿದ ಪ್ರತಿ ಹುದ್ದೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದರು.

ಅವರ ಉಡುಗೆ ತೊಡುಗೆ ಸಿಂಪಲ್‌. ಒಂದು ಖಾದಿ ಪ್ಯಾಂಟ್‌; ಇಸ್ತ್ರಿಯಾಗದ ಖಾದಿ ಜುಬ್ಬಾ, ಇಷ್ಟೆ ಅವರ ತೊಡುಗೆ. ಬಿಳಿ ಕೂದಲು ತುಂಬಿದ ತಲೆ, ಮುಖಕ್ಕೊಂದು ಅಗಲವಾದ ಕನ್ನಡಕ ಅವರ ಒಟ್ಟು ವ್ಯಕ್ತಿತ್ವಕ್ಕೆ ಒಂದು ಗಂಭೀರತೆಯನ್ನು ತಂದುಕೊಟ್ಟಿತ್ತು. ಆದರೆ, ಅವರ ಜೀವನ ಮಾತ್ರ ಸರಳವಾಗಿರಲಿಲ್ಲ. ಮೂಲತಃ ಕರ್ನಾಟಕದವರಾದರೂ ಇಡೀ ಭಾರತವೇ ಅವರ ಹೋರಾಟದ ಅಂಗಣವಾಗಿತ್ತು. ಅವರು ಕಾಲಿಟ್ಟ ಕಡೆ ಹೋರಾಟದ ಹೆಜ್ಜೆಗಳು ಮೂಡುತ್ತಿದ್ದವು. ಮಂಗಳೂರು, ಬೆಂಗಳೂರು, ಮುಂಬಯಿ, ಬಿಹಾರ, ದಿಲ್ಲಿ... ಹೀಗೆ ಅವರ ಕಾರ್ಯಕ್ಷೇತ್ರ ಹರಡಿಕೊಳ್ಳುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಗ್ಗೆ ಯಾವಾಗಲೂ ಚಿಂತನೆಗಳಿರುತ್ತಿದ್ದವು. ಕಾರ್ಮಿಕರ ಶ್ರೇಯೋಭಿವೃದ್ಧಿಯೇ ಮೂಲಮಂತ್ರವಾಗಿತ್ತು. ಅವರ ಹಿತರಕ್ಷ ಣೆಗೆ ಎಂಥ ಹೋರಾಟಕ್ಕೂ ಅಣಿಯಾಗುತ್ತಿದ್ದರು. ಒಮ್ಮೆ ಅವರ ಮುಷ್ಕರ ಕರೆಗೆ ಇಡೀ ದೇಶವೇ ಸ್ತಬ್ಧವಾಗಿತ್ತು; ಅಂಥ ಧೀಃಶಕ್ತಿ ಅವರಲ್ಲಿತ್ತು. ಆದರೆ, ಅವರ ಕೊನೆಯ ದಿನಗಳು ಮಾತ್ರ ಯಾತನಾಮಯವಾಗಿದ್ದವು ಎಂಬುದು ಅವರನ್ನು ಇಷ್ಟಪಡೋರಿಗೆ ಅರಗಿಸಿಕೊಳ್ಳಲಾಗದ ಸಂಗತಿ.

ಕನ್ನಡದ ಕುವರ
ಜಾರ್ಜ್‌ ಫರ್ನಾಂಡಿಸ್‌ ಕನ್ನಡದವರು ಎಂಬುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಅವರು ಕರಾವಳಿಯ ಮಂಗಳೂರಿನವರು.
1930 ಜೂನ್‌ 3ರಂದು ಮಂಗಳೂರಿನ ಕ್ಯಾಥೋಲಿಕ್‌ ಕುಟುಂಬದಲ್ಲಿ ಜನಿಸಿದರು. ತಂದೆ ಜೋಸೆಫ್‌ ಫರ್ನಾಂಡಿಸ್‌, ತಾಯಿ ಅಲಿಶಾ ಮಾರ್ಥಾ ಫರ್ನಾಂಡಿಸ್‌. ಇವರಿಗೆ ಆರು ಮಕ್ಕಳು. ಜಾರ್ಜ್‌ ಹಿರಿಯರು. ಕುಟುಂಬದಲ್ಲಿ ಜಾರ್ಜ್‌ ಅವರನ್ನು ಪ್ರೀತಿಯಿಂದ ಎಲ್ಲರೂ ಜರ್ರಿ ಎಂದು ಕರೆಯುತ್ತಿದ್ದರು. ಜೋಸೆಫ್‌ ಅವರದ್ದು ಕ್ರಿಶ್ಚಿಯನ್‌ ಸಂಪ್ರದಾಯಸ್ಥ ಕುಟುಂಬ. ಹಾಗಾಗಿ, ಹಿರಿಯ ಮಗ ಪಾದ್ರಿಯಾಗಲಿ ಎಂದು ಅವರನ್ನು ಪಾದ್ರಿ ತರಬೇತಿಗೆ ಬೆಂಗಳೂರಿಗೆ ಕಳುಹಿಸಿಕೊಟ್ಟರು. ಆದರೆ ಜಾರ್ಜ್‌ ಪಾದ್ರಿಯಾಗಲಿಲ್ಲ. ಬೆಂಗಳೂರು ಬಿಟ್ಟು ಸೀದಾ ಮುಂಬೈ(ಅಂದಿನ ಬಾಂಬೆ)ಗೆ ತೆರಳಿದರು. ಆಗ ಅವರಿಗೆ ಕೇವಲ 19 ವರ್ಷ. ಮುಂಬೈನ ಬೀದಿಗಳಲ್ಲಿ ಅಲೆಯುತ್ತಿದ್ದ ಜಾರ್ಜ್‌ಗೆ ಪರಿಚಯದವರು ಯಾರೂ ಇರಲಿಲ್ಲ. ಎಷ್ಟೋ ಸಾರಿ ಅವರು ಸಮುದ್ರ ತೀರ ಮತ್ತು ರಸ್ತೆಗಳಲ್ಲಿ ಮಲಗುತ್ತಿದ್ದರು. ಸ್ಥಳೀಯ ಪತ್ರಿಕೆಯೊಂದರಲ್ಲಿ ಕೆಲಸ ಸಿಗುವವರೆಗೂ ಕೈಗೆ ಸಿಕ್ಕ ಕೆಲಸಗಳನ್ನು ಮಾಡಿದರು. ಮುಂಬೈಯಲ್ಲಿ ಅವರದ್ದು ಅಕ್ಷರಶಃ ಕಷ್ಟದ ಜೀವನವೇ ಆಗಿತ್ತು.

ಜಾರ್ಜ್ ಫರ್ನಾಂಡಿಸ್ (ಚಿತ್ರ ಕೃಪೆ-ಇಂಟರ್ನೆಟ್)
ಲೋಹಿಯಾ ಮತ್ತು ಡಿಮೆಲ್ಲೊ ಸಂಪರ್ಕ
ಮುಂಬೈ ಜೀವನದಲ್ಲಿ ಹೋರಾಟ ಬದುಕು ನಡೆಸುತ್ತಿರುವಾಗಲೇ ಸಮಾಜವಾದಿ ನಾಯಕ ರಾಮಮನೋಹರ ಲೋಹಿಯಾ ಮತ್ತು ಹಿರಿಯ ಕಾರ್ಮಿಕ ಮುಖಂಡ ಡಿ'ಮೆಲ್ಲೊ ಅವರ ಸಂಪರ್ಕ ಜಾರ್ಜ್‌ಗೆ ದೊರಕಿತು. ಇಲ್ಲಿಂದಲೇ ಜಾರ್ಜ್‌ ಅವರ ಹೋರಾಟದ ಮಜಲುಗಳು ಆರಂಭವಾದವು. ಅದು ಕಾರ್ಮಿಕ ಚಳವಳಿಕ ಉಚ್ಛ್ರಾಯ ಕಾಲ. ಹಾಗಾಗಿ, ನಿಧಾನವಾಗಿ ಕಾರ್ಮಿಕ ಚಳವಳಿಯಲ್ಲಿ ಜಾರ್ಜ್‌ ಅಗ್ರಗಣ್ಯ ನಾಯಕರಾಗಿ ರೂಪುಗೊಂಡರು. ಅಲ್ಲಿಂದ ಅವರು 1961ರಲ್ಲಿ ಬಾಂಬೆ ಮುನ್ಸಿಪಲ್‌ ಕಾರ್ಪೊರೇಷನ್‌ಗೆ ಸ್ಪರ್ಧಿಸಿ ಆಯ್ಕೆಯಾದರು. ಹೋರಾಟದ ಜತೆಗೆ ರಾಜಕೀಯ ಜೀವನವನ್ನು ಆರಂಭಿಸಿದರು.

ಜಾರ್ಜ್‌ ದಿ ಜೈಂಟ್‌ ಕಿಲ್ಲರ್‌!
ಕಾರ್ಪೊರೇಷನ್‌ಗೆ ಆಯ್ಕೆಯಾದ ಆರು ವರ್ಷದ ಬಳಿಕ ಜಾರ್ಜ್‌ ಲೋಕಸಭೆ ಸ್ಪರ್ಧೆಗೆ ಮುಂದಾದರು. ದಕ್ಷಿಣ ಮುಂಬೈ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸಿದರು. ಅವರ ಎದುರಾಳಿ
, ಮಹಾರಾಷ್ಟ್ರದ ಅಂದಿನ ಪ್ರಖ್ಯಾತ ಕಾಂಗ್ರೆಸ್‌ ನಾಯಕ ಎಸ್‌.ಕೆ.ಪಾಟೀಲ್‌. ಈ ಚುನಾವಣೆಯಲ್ಲಿ ಜಾರ್ಜ್‌ ಅವರನ್ನು ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ, ಫಲಿತಾಂಶ ಪ್ರಕಟವಾದಾಗ ಮಾತ್ರ ಎಲ್ಲರಿಗೂ ಆಶ್ಚರ್ಯವಾಗಿತ್ತು. ಪ್ರಭಾವಿ ಪಾಟೀಲ್‌ರನ್ನು ಸೋಲಿಸಿ ಜಾರ್ಜ್‌ ಆಯ್ಕೆಯಾಗಿದ್ದರು. ಅಲ್ಲಿಂದಲೇ ಅವರಿಗೆ The Giant Killer ಎಂಬ ಹೆಸರು ಬಂತು. ಇಲ್ಲಿಂದ ಅವರು ರಾಜಕೀಯದಲ್ಲಿ ಹಿಂದಿರುಗಿ ನೋಡಲಿಲ್ಲ. ಹೋರಾಟದ ಜತೆಗೆ ರಾಜಕೀಯದಲ್ಲಿ ಒಂದೊಂದೇ ಮೆಟ್ಟಿಲು ಮೇಲೇರಿದರು.

ಭೂಗತ ನಾಯಕ
1974ರ ಹೊತ್ತಿಗೆ ದೇಶದಲ್ಲಿ ಜಾರ್ಜ್‌ ಜನಪ್ರಿಯ ಹೆಸರಾಗಿತ್ತು. ಈ ಅವಧಿಯಲ್ಲಿ ಅವರು ರೇಲ್ವೆ ಕಾರ್ಮಿಕರ ಮುಷ್ಕರಕ್ಕೆ ಕರೆ ಕೊಟ್ಟಿದ್ದರು. ಅದು ಎಷ್ಟು ಪರಿಣಾಮಕಾರಿ ಕರೆಯಾಗಿತ್ತು ಎಂದರೆ, ಇಡೀ ದೇಶ ಅಕ್ಷ ರಶಃ ಸ್ತಬ್ಧವಾಗಿತ್ತು. ಈ ಮುಷ್ಕರಕ್ಕೆ ದೇಶದ ಎಲ್ಲ ಉದ್ಯಮ ವಲಯಗಳಿಂದ ಬೆಂಬಲ ದೊರಕಿತ್ತು. ಮೂರು ವಾರಗಳ ಈ ಮುಷ್ಕರ ಅಂದಿನ ಪ್ರಧಾನಿ ಇಂದಿರಾ ಗಾಂಧಿಯಲ್ಲೂ ಅಭದ್ರತೆ ಹುಟ್ಟು ಹಾಕಿತ್ತು ಎಂದರೆ ಅದರ ಪರಿಣಾವನ್ನು ಯಾರಾದರೂ ಊಹಿಸಬಹುದು. ಇದೇ ಸಂದರ್ಭದಲ್ಲಿ 'ಲೋಕ ನಾಯಕ' ಜಯಪ್ರಕಾಶ್‌ ನಾರಾಯಣ್‌ ಅವರ ಮೂವ್‌ಮೆಂಟ್‌ ಫಾರ್‌ ಚೇಂಜ್‌ ಚಳವಳಿಯಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದರು. ಆಂತರಿಕವಾಗಿ ಹೆಚ್ಚುತ್ತಿದ್ದ ಸರಕಾರ ವಿರೋಧಿ ಧೋರಣೆ ಮತ್ತೊಂದೆಡೆ ಕೋರ್ಟ್‌ನಲ್ಲಾದ ಹಿನ್ನಡೆಯನ್ನು ಅರಗಿಸಿಕೊಳ್ಳಲಾಗದ ಇಂದಿರಾ ಗಾಂಧಿ 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಪ್ರತಿಪಕ್ಷ ನಾಯಕರು ಜೈಲು ಪಾಲಾದರು. ಆಗ ಜಾರ್ಜ್‌ ಮತ್ತು ಅವರ ಜತೆಗಿದ್ದವರು ಭೂಗತರಾದರು. ಈ ಸಂದರ್ಭದಲ್ಲಿ ಬರೋಡಾದಿಂದ ಡೈನಮೈಟ್‌ ತಂದು ಸರಕಾರಿ ಕಚೇರಿಗಳನ್ನು ಧ್ವಂಸಗೊಳಿಸುವ ಯೋಜನೆ ಜಾರ್ಜ್‌ ಅವರದ್ದಾಗಿತ್ತು. ಆದರೆ, ಕೋಲ್ಕತಾ(ಅಂದಿನ ಕಲ್ಕತ್ತಾ)ದಲ್ಲಿ ಸೆರೆ ಸಿಕ್ಕರು. ಡೈನಮೈಟ್‌ ಕದ್ದ ಆರೋಪವನ್ನು ಜಾರ್ಜ್‌ ಮೇಲೆ ಹಾಕಿ ಅವರನ್ನು 9 ತಿಂಗಳು ಕಾಲ ತಿಹಾರ್‌ ಜೈಲಿನಲ್ಲಿ ಇಡಲಾಯಿತು. ಈ ಪ್ರಕರಣವೇ ಮುಂದೆ 'ಬರೋಡಾ ಡೈನಮೈಟ್‌' ಎಂದು ಪ್ರಖ್ಯಾತವಾಯಿತು. ಜೈಲಿನಲ್ಲಿದ್ದುಕೊಂಡೇ ಬಿಹಾರದ ಮುಜಾಫರ್‌ನಗರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ, ಮೂರು ಲಕ್ಷ ಮತಗಳ ಅಂತರದಿಂದ ಗೆದ್ದರು. ಜಾರ್ಜ್‌ ಅವರನ್ನು ಬಂಧಿಸಿದ ಕ್ಷ ಣದಲ್ಲಿ ಅವರ ಕೋಳ ತೊಟ್ಟ ಕೈ ಮೇಲತ್ತಿದ ಫೋಟೋ ಈ ಗೆಲುವಿನಲ್ಲಿ ಭಾರಿ ಪ್ರಭಾವ ಬೀರಿತ್ತು!

ಸಚಿವರಾದರು ಜಾರ್ಜ್‌
ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿತು. ಇದೇ ಮೊದಲ ಬಾರಿಗೆ ಮೊರಾರ್ಜಿ ದೇಸಾಯಿ ನೇತೃತ್ವದ ಪ್ರಥಮ ಕಾಂಗ್ರೆಸ್ಸೇತರ ಸರಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂತು. ತುರ್ತು ಪರಿಸ್ಥಿತಿಯಲ್ಲಿ ಜೈಲುಪಾಲಾಗಿದ್ದ ನಾಯಕರೆಲ್ಲ ಬಿಡುಗಡೆಗೊಂಡರು. ಜಾರ್ಜ್‌ ಅವರು ದೇಸಾಯಿ ಸಂಪುಟದಲ್ಲಿ ಕೈಗಾರಿಕಾ ಸಚಿವರಾದರು. ಬಂಡವಾಳ ಹೂಡಿಕೆ ನಿಯಮಗಳನ್ನು ಉಲ್ಲಂಘಿಸಿದ್ದ ಅಮೆರಿಕ ಐಬಿಎಂ ಮತ್ತು ಕೊಕಾಕೋಲಾ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡ ಫಲವಾಗಿ ಅವರೆಡೂ ಕಂಪನಿಗಳು ಭಾರತದಿಂದ ಕಾಲು ಕೀಳಬೇಕಾಯಿತು. ಮುಂದೆ ಜನತಾ ದಳ ನಾಯಕ ವಿ.ಪಿ. ಸಿಂಗ್‌ ನೇತೃತ್ವದ ಸರಕಾರದಲ್ಲಿ ರೇಲ್ವೆ ಸಚಿವರಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರು. ಪಶ್ಚಿಮ ಕರಾವಳಿಯನ್ನು ಸಂಪರ್ಕಿಸುವ ಕೊಂಕಣ ರೇಲ್ವೆ ಯೋಜನೆ ಅನುಷ್ಠಾನಗೊಳಿಸಿದರು.

ಬಿಜೆಪಿಯ ಸಖ್ಯ
ಜೆಪಿ ಚಳವಳಿಯಲ್ಲಿ ಉದಯಿಸಿದ ನಾಯಕರ ಜನತಾ ಪರಿವಾರ ದಿಕ್ಕಾಪಾಲಾದ ಸಂದರ್ಭ ಅದು. ರಾಜಕೀಯ ಅನಿವಾರ್ಯತೆ ಮತ್ತು ಕಾಂಗ್ರೆಸ್‌ ವಿರೋಧಿ ನೀತಿಯ ಪ್ರಮುಖ ಧ್ಯೇಯದಿಂದಾಗಿ ಜಾರ್ಜ್‌ ಅವರು ಅನಿವಾರ್ಯವಾಗಿ ಬಿಜೆಪಿಯ ಅಟಲ್‌ ಬಿಹಾರಿ ವಾಜಪೇಯಿ, ಎಲ್‌.ಕೆ.ಆಡ್ವಾಣಿ ಜತೆ ಕೈ ಜೋಡಿಸಬೇಕಾಯಿತು. ವಿಶೇಷ ಎಂದರೆ, ಆರ್‌ಎಸ್‌ಎಸ್‌ ನೀತಿಯನ್ನು ಜಾರ್ಜ್‌ ಟೀಕಿಸುತ್ತಿದ್ದರು. ಹಾಗಿದ್ದೂ ಅವರು ಬಿಜೆಪಿ ಜತೆ ಹೆಜ್ಜೆ ಹಾಕಬೇಕಾಯಿತು. ಜತೆಗೆ ಬಿಜೆಪಿ ನೇತೃತ್ವದ ನ್ಯಾಷನಲ್‌ ಡೆಮಾಕ್ರಟಿಕ್‌ ಅಲಯನ್ಸ್‌-ಎನ್‌ಡಿಎ ಸಂಚಾಲಕರಾದರು. ಯಾರೂ ನಿರೀಕ್ಷಿಸದ ರೀತಿಯಲ್ಲಿ
1998ರಲ್ಲಿ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು. ಆಗ ಜಾರ್ಜ್‌ ಅವರಿಗೆ ರಕ್ಷಣಾ ಸಚಿವ ಸ್ಥಾನ ತಾನಾಗಿಯೇ ಒಲಿದು ಬಂತು. ವಿಪರ್ಯಾಸ ಎಂದರೆ, ಜಾರ್ಜ್‌ ತಮ್ಮ ಬದುಕಿನುದ್ದಕ್ಕೂ ಅಣ್ವಸ್ತ್ರಗಳನ್ನು ವಿರೋಧಿಸುತ್ತಲೇ ಬಂದಿದ್ದರು. ಆದರೆ, ಅದೇ ಜಾರ್ಜ್‌ ಅವರು ಅಣ್ವಸ್ತ್ರ ಪರೀಕ್ಷೆಯಲ್ಲಿ ವಾಜಪೇಯಿ ಜತೆ ಪಾಲುದಾರರಾದರು!

ಬೆನ್ನತ್ತಿದ ವಿವಾದಗಳು
ಜಾರ್ಜ್‌ ಅವರು ರಕ್ಷಣಾ ಸಚಿವರಾಗಿದ್ದಾಗಲೇ ಬಾರಾಕ್‌ ಕ್ಷಿಪಣಿ ಮತ್ತು ತೆಹಲ್ಕಾ ಹಗರಣಗಳು ಬೆನ್ನು ಹತ್ತಿದವು. ಇದಕ್ಕಾಗಿ ಅವರು ರಕ್ಷಣಾ ಸಚಿವ ಸ್ಥಾನವನ್ನು ತೊರೆಯಬೇಕಾಯಿತು. ಮುಂದೆ ತನಿಖೆ ವೇಳೆ ಜಾರ್ಜ್‌ ಅವರು ನಿರ್ದೋಷಿ ಎಂದು ಸಾಬೀತಾದ ಮೇಲೆ ಮತ್ತೆ ರಕ್ಷ ಣಾ ಸಚಿವರಾದರು. ಆದರೆ, ಕಾರ್ಗಿಲ್‌ ಯುದ್ಧದ ವೇಳೆ ಖರೀದಿಸಲಾದ ಶವಪೆಟ್ಟಿಗೆಗಳ ಹಗರಣ ಮತ್ತೆ ಜಾರ್ಜ್‌ ತಲೆಯೇರಿತು. ತೀರಾ ಇತ್ತೀಚೆಗಷ್ಟೇ ಈ ಹಗರಣದಲ್ಲೂ ಜಾರ್ಜ್‌ ಅವರು ನಿರ್ದೋಷಿ ಎಂದು ಸಾಬೀತಾಯಿತಾದರೂ, ಅದನ್ನು ಕೇಳಿ ಸಂತೋಷ ಪಡುವ ಸ್ಥಿತಿಯಲ್ಲಿ ಜಾರ್ಜ್‌ ಇರಲಿಲ್ಲ. ಸಾಮಾನ್ಯವಾಗಿ ಭಾರತದ ಮಗ್ಗಲು ಮುಳ್ಳು ಪಾಕಿಸ್ತಾನ ಎಂದು ಬಹುತೇಕ ರಾಜಕಾರಣಿಗಳು ಹೇಳುತ್ತಾರೆ. ಆದರೆ, ಜಾರ್ಜ್‌ ಮಾತ್ರ ಭಾರತದ ನಂ.1ವೈರಿ ಪಾಕಿಸ್ತಾನವಲ್ಲ ಚೀನಾ ಎಂದು ಬಹಿರಂಗವಾಗಿ ಹೇಳುವ ಮೂಲಕ ಭಾರಿ ಸಂಚಲನಕ್ಕೆ ಕಾರಣವಾಗಿದ್ದರು.

ನೇಪಥ್ಯಕ್ಕೆ ಜಾರಿದ ಜಾರ್ಜ್‌
2004ರಲ್ಲಿ ವಾಜಪೇಯಿ ನೇತೃತ್ವದ ಎನ್‌ಡಿಎ ಮರಳಿ ಅಧಿಕಾರ ಹಿಡಿಯಲಿದೆ ಎಂದೇ ಭಾವಿಸಲಾಗಿತ್ತು. ಆದರೆ, ಯಾರೂ ನಿರೀಕ್ಷಿಸದ ರೀತಿಯಲ್ಲಿ ಎನ್‌ಡಿಎ ಸೋಲು ಕಂಡು ಕಾಂಗ್ರೆಸ್‌ ನೇತೃತ್ವದ ಯುಪಿಎ ಅಧಿಕಾರಕ್ಕೆ ಬಂತು. ಈ ಅವಧಿಯಲ್ಲಿ ದೇಶದ ಇಬ್ಬರು ಪ್ರಮುಖ ನಾಯಕರು ನೇಪಥ್ಯಕ್ಕೆ ಜಾರುವಂತಾಯಿತು. ಒಬ್ಬರು ಪ್ರಧಾನಿಯಾಗಿದ್ದ ಅಟಲ್‌ ಬಿಹಾರಿ ವಾಜಪೇಯಿ, ಮತ್ತೊಬ್ಬರು ಜಾರ್ಜ್‌. ನಂತರ ಅವರಿಗೆ ಅಲ್ಜೈಮರ್‌ ಕಾಯಿಲೆ ಉಲ್ಬಣಗೊಂಡು ಸಂಪೂರ್ಣವಾಗಿ ಸಾರ್ವಜನಿಕ ಜೀವನದಿಂದ ಮರೆಯಾಗಬೇಕಾಯಿತು.

ಮರಳಿ ಬಾರದ ಲೋಕಕ್ಕೆ
ಜಾರ್ಜ್‌ ಅದ್ಭುತ ಮಾತುಗಾರರು. ಅವರು ಭಾಷಣಕ್ಕೆ ನಿಂತರೆ ಇಡೀ ಜನಸಮೂಹ ತದೇಕ ಚಿತ್ತದಿಂದ ಆಲಿಸುತ್ತಿತ್ತು. ಸಂಸತ್ತಿನಲ್ಲಿ ಮಾತನಾಡಲು ಆರಂಭಿಸಿದರೆ ಇಡೀ ಸಂಸತ್ತೇ ಕಿವಿಯಾಗುತ್ತಿತ್ತು. ಕೊಂಕಣಿ, ಕನ್ನಡ, ಇಂಗ್ಲಿಷ್‌, ಹಿಂದಿ, ಮರಾಠಿ, ತುಳು, ತಮಿಳು, ಉರ್ದು ಸೇರಿದಂತೆ 10 ಭಾಷೆಗಳಲ್ಲಿ ಜಾರ್ಜ್‌ ನಿರರ್ಗಳವಾಗಿ ಮಾತನಾಡುತ್ತಿದ್ದರು. ಪ್ರಖರ ಸಮಾಜವಾದಿಯಾಗಿದ್ದ ಜಾರ್ಜ್‌ ತುಂಬ ದಿನಗಳ ಕಾಲ ಅನಾರೋಗ್ಯಪೀಡಿತರಾಗಿ ಕೊನೆಯ ದಿನಗಳನ್ನು ಅತ್ಯಂತ ಯಾತನೆಯಲ್ಲಿ ಕಳೆದರು. 2019ರ ಜನವರಿ 29ರಂದು ಇಹಲೋಕ ತ್ಯಜಿಸಿದರು.

ವಿಯೆಟ್ನಾಮಿಯಾಗಿ ಹುಟ್ಟುವೆ!
''ಒಂದು ವೇಳೆ ಪುನರ್ಜನ್ಮ ಎಂಬುದಿದ್ದರೆ ನಾನು ವಿಯೆಟ್ನಾಮಿಯಾಗಿ(ವಿಯೆಟ್ನಾಮ್‌ ಪ್ರಜೆ) ಹುಟ್ಟುವೆ,'' ಎಂದು ಜಾರ್ಜ್‌ ಒಮ್ಮೆ ಹೇಳಿದ್ದರು. ಒಂದುವರೆ ದಶಕದ ಹಿಂದೆ ಬೆಂಗಳೂರಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಈ ಬಯಕೆಯನ್ನು ಅವರು ಹೊರಹಾಕಿದ್ದರು. ''ವಿಯೆಟ್ನಾಮಿ ಜನರು ತಮ್ಮ ಬದ್ಧತೆಯನ್ನು ಪೂರೈಸಲು ಸಾಯಲು ಸಿದ್ಧರಾಗಿರುತ್ತಾರೆ. ಅಂಥ ಶಿಸ್ತು ಅವರಲ್ಲಿರುತ್ತದೆ. ನಾನು ವಿಯೆಟ್ನಾಮ್‌ನ ಅಭಿಮಾನಿ,'' ಎಂದು ಹೇಳಿದ್ದರು.

ಭಾನುವಾರ, ಮೇ 23, 2021

Remembering Sundarlal Bahuguna: ಪರಿಸರದ ಪರಮಾಪ್ತ ಸುಂದರಲಾಲ್ ಬಹುಗುಣ

ಪರಿಸರ ರಕ್ಷಣೆಯಲ್ಲೂ ಗಾಂಧಿ ಮಾರ್ಗದ ಮೂಲಕವೇ ಯಶಸ್ಸು ಕಂಡ ಸುಂದರಲಾಲ್ಬಹುಗುಣ ಅವರು ಚಿಪ್ಕೋ ಚಳವಳಿಯ ಮೂಲಕ ಜಗದ್ವಿಖ್ಯಾತರಾದವರು.


- ಮಲ್ಲಿಕಾರ್ಜುನ ತಿಪ್ಪಾರ 
ಈಗಿನ ತಲೆಮಾರಿಗೆ ಸುಂದರಲಾಲ್ಬಹುಗುಣ ಹೆಸರು ಪರಿಚಿತವಲ್ಲ. 70ರಿಂದ 90ರ ದಶಕದವರೆಗಿನ ಯುವ ಸಮುದಾಯಕ್ಕೆ, ಪರಿಸರ ಪ್ರೇಮಿಗಳಿಗೆ ಸುಂದರಲಾಲ್ಬಹುಗುಣ ಎಂಬುದು ಕೇವಲ ಹೆಸರಾಗಿರಲಿಲ್ಲ. ಅದು ಪ್ರೇರಕ ಮಂತ್ರ; ಹೋರಾಟದ ದೀವಟಿಗೆ. ಪರಿಸರವಾದಿ, ಪರಿಸರ ಚಳವಳಿಗಾರ ಮಾತ್ರವಲ್ಲದೇ ಅವರ ಹೆಸರಿನಂತೆ ಬಹುಗುಣ ಅವರು, ಸ್ವಾತಂತ್ರ್ಯ ಚಳವಳಿಯಿಂದ ಹಿಡಿದು ಮಹಿಳಾ ಹಕ್ಕುಗಳ ಹೋರಾಟದವರೆಗೂ ವ್ಯಕ್ತಿತ್ವ ಆವರಿಸಿಕೊಂಡಿದೆ. ನಮಗೆ ನಿಮಗೆಲ್ಲ ಅವರು ಪರಿಚತರಾಗಿದ್ದೇಚಿಪ್ಕೋ ಚಳವಳಿಯ ಮೂಲಕ. ಗಾಂಧಿ ಮಾರ್ಗದ ಮೂಲಕವೇ ಪರಿಸರ ರಕ್ಷಣೆಯನ್ನೂ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟವರು. 

ಬಹುಶಃ ಹಿಮಾಲಯದ ತಪ್ಪಲಿನಲ್ಲಿಇಂದು ಅರಣ್ಯ ಉಳಿದಿರಲು ಬಹುಗುಣ ರೂಪಿಸಿದ ಚಳವಳಿಯೇ ಕಾರಣ. ಇಲ್ಲದಿದ್ದರೆ ಅಭಿವೃದ್ಧಿಯ ಹೆಸರಲ್ಲಿ ಹಿಮಾಲಯದ ತಪ್ಪಲಿನ ಕಾಡು ನಾಶವಾಗಿ, ಬೋಳು ದಿನ್ನೆಯಾಗಿರುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿಹೆಚ್ಚು ಪ್ರಚಲಿತವಾಗುತ್ತಿರುವ ಗಂಗಾ ಉಳಿಸಿ ಚಳವಳಿಗೂ ಬಹುಗುಣ ಅವರು ಪ್ರೇರಕ ಎಂಬುದನ್ನು ಬಹುತೇಕ ಪರಿಸರ ಹೋರಾಟಗಾರರು ಒಪ್ಪಿಕೊಳ್ಳುತ್ತಾರೆ.

 ಅರಣ್ಯ ಗುತ್ತಿಗೆದಾರರು ನಡೆಸುತ್ತಿದ್ದ ಅರಣ್ಯ ನಾಶ ತಪ್ಪಿಸುವುದಕ್ಕಾಗಿಯೇ ಸುಂದರಲಾಲ್ಬಹುಗುಣ ನೇತೃತ್ವದಲ್ಲಿ 1974ರ ಮಾರ್ಚ್‌ 26ರಂದು ಉತ್ತರ ಪ್ರದೇಶದಲ್ಲಿ ಮೊದಲಿಗೆ ಚಿಪ್ಕೋ ಚಳವಳಿ ಆರಂಭವಾಯಿತು. ಅಂದಿನ ಉತ್ತರ ಪ್ರದೇಶದ ಅರಣ್ಯದ ಒಂದಿಷ್ಟು ಭಾಗವನ್ನು ಕಡಿಯಲು ಗುತ್ತಿಗೆದಾರರಿಗೆ ಅನುಮತಿ ನೀಡಲಾಯಿತು. ಆಗ ಅಲಕನಂದಾ ಕಣಿವೆಯ ಮೇಲ್ಭಾಗದ ಮಂಡಲ್ಹಳ್ಳಿಯಲ್ಲಿ ಜನರು ಮರ ಕಡಿಯುವುದನ್ನು ಪ್ರತಿಭಟಿಸಿದರು. ಹಾಗೆ, ಚಿಪ್ಕೋ ಚಳವಳಿ ಆರಂಭವಾಯಿತು. ಅದಕ್ಕೆ ಬಹುಗುಣ ನಾಯಕತ್ವವನ್ನು ವಹಿಸಿ, ವಿಶ್ವವ್ಯಾಪಿ ಮಾನ್ಯತೆ­ಯನ್ನು ದೊರಕಿಸಿಕೊಟ್ಟರು. ಹಿಂದಿ ಭಾಷೆಯಲ್ಲಿ ಚಿಪ್ಕೋಅಂದರೆಅಪ್ಪಿಕೊಳ್ಳುಎಂಬರ್ಥವಿದೆ. ಮರಗಳನ್ನು ಕಡಿಯಲು ಮುಂದಾದಾಗ ಚಳವಳಿ ನಿರತರು ಮರಗಳನ್ನು ತಬ್ಬಿಕೊಂಡು ಅವುಗಳ ರಕ್ಷ ಣೆಗೆ ಮುಂದಾದರು. ಈ ಚಳವಳಿ ಆ ನಂತರ ಜನರ ಚಳವಳಿಯಾಯಿತು; ರೈತರ ಚಳವಳಿಯಾಯಿತು; ಯುವ ಜನತೆಯ ಚಳವಳಿಯಾಯಿತು. ಚಿಪ್ಕೋ ಚಳವಳಿಯ ವ್ಯಾಪಕತೆ ಹೆಚ್ಚುತ್ತಾ ಹೋದಂತೆ ಬಹುಗುಣ ಅವರ ಪರಿಸರ ಕಾಳಜಿ ಸಂದೇಶಗಳು, ಗಾಂಧಿ ಹಾದಿಯ ಹೋರಾಟ ಜನರನ್ನು ಸೆಳೆಯಿತು. ಚಿಪ್ಕೋ ಚಳವಳಿ ಮತ್ತು ಪರಿಸರ ಹೋರಾಟಕ್ಕೆ ಬಹುಗುಣ ಅವರ ಅನನ್ಯ ಕೊಡುಗೆ ಎಂದರೆ, ಅವರು ಚಳವಳಿಗೆ ರೂಪಿಸಿದ Ecology is permanent economy ಸ್ಲೋಗನ್‌. ಹಾಗೆ ನೋಡಿದರೆ, ಇದು ಕೇವಲ ಘೋಷಣೆಯಲ್ಲ. ಅವರ ಹೋರಾಟದ ತಿರುಳು; ಪ್ರತಿಪಾದಿಸಿದ ಫಿಲಾಸಫಿ.

ಚಿಪ್ಕೋ ಚಳವಳಿ ಭಾಗವಾಗಿ ಬಹುಗುಣ ಅವರು, ಅಂದಿನ ಉತ್ತರ ಪ್ರದೇಶದ ಹಿಮಾಲಯದ ವ್ಯಾಪ್ತಿಯ ಹಳ್ಳಿಹಳ್ಳಿಗಳಿಗೆ ನಡೆದುಕೊಂಡೇ ಹೋಗಿ ಜನರನ್ನು ಜಾಗೃತಗೊಳಿಸಿದರು. 1981ರಿಂದ 1983ರ ಅವಧಿಯಲ್ಲಿ ಹಿಮಾಲಯದ ಸುಮಾರು 5000 ಕಿ.ಮೀ. ಕಾಲ್ನಡಿಗೆಯಲ್ಲಿ ಪ್ರವಾಸ ಮಾಡಿದರು. ಚಳವಳಿಗೆ ಸ್ಥಳೀಯರಿಂದ ದೊಡ್ಡ ಮಟ್ಟದ ಬೆಂಬಲ ಪಡೆ­ದರು. ಇದರ ಪರಿಣಾಮ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹಿಮಾಲಯ ವ್ಯಾಪ್ತಿಯ ಕಾಡು ನಾಶಕ್ಕೆ ಅಂಕುಶ ಹಾಕುವ ಕಾನೂನನ್ನು ಜಾರಿಗೆ ತರಬೇಕಾ­ಯಿತು. ಇಲ್ಲಿಂದ ಭಾರತದ ಪರಿಸರ ಹೋರಾಟಕ್ಕೆ ಬಹುಗುಣ ಅವರು ಮುಖವಾದರು, ವಕ್ತಾರರೆನಿಸಿಕೊಂಡರು. 

ದಶಕಗಳವರೆಗೆ ನಡೆದ ತೆಹ್ರಿ ಡ್ಯಾಮ್ವಿರೋಧಿ ಹೋರಾಟಕ್ಕೆ ಬಹುಗುಣ ಚಾಲಕಶಕ್ತಿಯಾಗಿದ್ದರು. ಈ ಡ್ಯಾಮ್ನಿರ್ಮಾಣ ವಿರೋಧಿಸಿ ಹಲವು ಬಾರಿ ಸತ್ಯಾಗ್ರಹ ಕೈಗೊಂಡರು. ಉತ್ತರಾಖಂಡದಲ್ಲಿ ಹರಿಯುವ ಭಾಗಿರಥಿ ನದಿಗೆ ತೆಹ್ರಿ ಎಂಬ ಹಳ್ಳಿಯ ಸಮೀಪ ಡ್ಯಾಮ್ನಿರ್ಮಾಣ ಮಾಡಲಾಗುತ್ತಿತ್ತು. ಈ ಡ್ಯಾಮ್ನಿಂದ ಪರಿಸರದ ಮೇಲಾಗುವ ದುಷ್ಪರಿಣಾಮದ ಬಗ್ಗೆ ಬಹುಗುಣ ಜಾಗೃತಿ ಮೂಡಿಸಿದರು. ಆಡಳಿತ ಶಕ್ತಿಗಳು ಹೋರಾಟಕ್ಕೆ ಬೆಲೆ ನೀಡದೇ ಇದ್ದಾಗ ಸತ್ಯಾಗ್ರಹಗಳನ್ನು ಕೈಗೊಂಡರು.

1995ರಲ್ಲಿ ಬಹುಗುಣ ಅವರು ಭಾಗಿರಥಿ ನದಿಯ ದಂಡೆಯಲ್ಲಿ 45 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದರು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ಡ್ಯಾಮ್ಗೆ ಸಂಬಂಧಿಸಿ ಪರಿಶೀಲನಾ ಸಮಿತಿ ನೇಮಕ ಮಾಡಿದ ನಂತರವೇ ತಮ್ಮ ಸತ್ಯಾಗ್ರಹವನ್ನು ಹಿಂತೆಗೆದುಕೊಂಡರು. ಇಷ್ಟಾಗಿಯೂ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಮತ್ತೆ ದಿಲ್ಲಿಯ ರಾಜಘಾಟ್ನಲ್ಲಿ ಗಾಂಧಿ ಸಮಾಧಿ ಬಳಿ 74 ದಿನ ಉಪವಾಸ ಸತ್ಯಾಗ್ರಹ ಕೈಗೊಂಡರು. ಆಗ ಪ್ರಧಾನಿಯಾಗಿದ್ದವರು ಎಚ್‌.ಡಿ.ದೇವೇಗೌಡ. ಯೋಜನೆಯ ಬಗ್ಗೆ ಪರಿಶೀಲಿಸುವ ವಾಗ್ದಾನವನ್ನು ದೇವೇಗೌಡರು ನೀಡಿದ ಬಳಿಕ ಬಹುಗುಣ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದರು. ಡ್ಯಾಮ್ನಿರ್ಮಾಣವೇನೂ ಸ್ಥಗಿತಗೊಳ್ಳಲಿಲ್ಲ. ಈ ಪ್ರಕರಣ ಸ್ಥಳೀಯ ನ್ಯಾಯಾಲಯ ಮತ್ತು ಸುಪ್ರೀಂ ಕೋರ್ಟ್ನಲ್ಲಿ ದಶಕಗಳ ಕಾಲ ನಡೆದು, 2001ರಲ್ಲಿ ಡ್ಯಾಮ್ನಿರ್ಮಾಣವು ಪುನರಾರಂಭವಾಯಿತು. ಇಷ್ಟಾದರೂ ಬಹುಗುಣ ಹೋರಾಟವನ್ನು ಕೈಬಿಡಲಿಲ್ಲ. ಅವರನ್ನು 2004ರಲ್ಲಿ ಡೆಹ್ರಾಡೂನ್ಗೆ ಸ್ಥಳಾಂತರಿಸಲಾಯಿತು.

ಬಹುಗುಣ ಅವರು ಹಿಮಾಲಯ ಜನರ ಬದುಕನ್ನು ರಕ್ಷಿಸಲು ಕಂಕಣಬದ್ಧರಾಗಿದ್ದರು. ವಿಶೇಷವಾಗಿ ಬೆಟ್ಟಗಳಲ್ಲಿ ದುಡಿಯುವ ಮಹಿಳೆಯರ ಹಕ್ಕುಗಳ ಪರವಾಗಿದ್ದರು. ಪರಿಸರ ಹೋರಾಟದ ಜತೆಗೆ ನದಿಗಳ ರಕ್ಷಣೆಗೂ ಮುಂದಾಳತ್ವ ವಹಿಸಿಕೊಂಡಿದ್ದರು. ಅವರ ಹೋರಾಟದ ಹಾದಿ ಸರಳ ರೇಖೆಯಲ್ಲ; ಅದು ಟಿಸಿಲೊಡೆದ ಅನೇಕ ಹಾದಿಗಳ ಸಂಗಮ. ತಮ್ಮ ಜೀವಿತಾವಧಿಯ ಪೈಕಿ ಒಟ್ಟು 76 ವರ್ಷಗಳನ್ನು ಸಾಮಾಜಿಕ ಹೋರಾಟಗಳಿಗೆ ತ್ಯಾಗ ಮಾಡಿದ್ದಾರೆ.

ಉತ್ತರಾಖಂಡದ ಮರೋದಾ ಎಂಬ ಸಣ್ಣ ಹಳ್ಳಿಯಲ್ಲಿ 1927 ಜನವರಿ 9ರಂದು ಬಹುಗುಣ ಜನಿಸಿದರು. ಇವರ ತಂದೆ ಅಂಬಾದತ್ತ ಅವರು ಅಂದಿನ ತೆಹ್ರಿ ಗರ್ವಾಲ್ರಾಜ್ಯಾಡಳಿತದಲ್ಲಿ ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ದೇಶದೆಲ್ಲೆಡೆ ಸ್ವಾತಂತ್ರ್ಯದ ಕಿಡಿ ಹೊತ್ತಿದ ಸಂದರ್ಭವದು. ಬಹುಗುಣ 14 ವರ್ಷ ಇದ್ದಾಗಲೇ ಮಹಾತ್ಮ ಗಾಂಧಿ ಅವರಿಂದ ಪ್ರಭಾವಿತರಾದರು. ಅಹಿಂಸೆ, ಸತ್ಯಾಗ್ರಹಗಳು ಅವರನ್ನು ಬಹುವಾಗಿ ಆಕರ್ಷಿಸಿದವು. ಗಾಂಧಿ ನಂತರ ಬಹುಗುಣರನ್ನು ಪ್ರಭಾವಿಸಿದವರು ಎಂದರೆ ಶ್ರೀದೇವ್ಸುಮನ್ಅವರು. ತೆಹ್ರಿ ಗರ್ವಾಲ್ರಾಜ್ಯಾಡಳಿತವನ್ನು ಕೊನೆಗಾಣಿಸಲು ಅವರು ಹೋರಾಟ ನಡೆಸುತ್ತಿದ್ದರು.

ಗಾಂಧಿ ಮತ್ತು ಸುಮನ್ಅವರಿಂದ ಬಹಳಷ್ಟು ಪ್ರಭಾವಿತಗೊಂಡಿದ್ದ ಬಹುಗುಣ ಚಿಕ್ಕವಯಸ್ಸಿನಲ್ಲೇ ಹೋರಾಟಕ್ಕೆ ಧುಮುಕಿದರು. ತೆಹ್ರಿ ಗರ್ವಾಲ್ರಾಜ್ಯಾಡಳಿತ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡರು. ಪರಿಣಾಮ ಏಳು ತಿಂಗಳು ಸೆರೆವಾಸ ಅನುಭವಿಸಬೇಕಾಯಿತು. ತಮ್ಮ 24ನೇ ವಯಸ್ಸಿನಲ್ಲಿ ಬಹುಗುಣ ಕಾಂಗ್ರೆಸ್ಪಾರ್ಟಿ ಸೇರಿದರು. 1947ರಲ್ಲಿ ಭಾರತ ಸ್ವತಂತ್ರಗೊಂಡರೂ ತೆಹ್ರಿ ರಾಜ್ಯಾಡಳಿತದ ವಿರುದ್ಧ ಹೋರಾಟ ಮುಂದುವರಿದೇ ಇತ್ತು. ಅಂತಿಮವಾಗಿ 1949 ಆಗಸ್ಟ್‌ 1ರಂದು ತೆಹ್ರಿ ರಾಜ್ಯ ಭಾರತದ ಒಕ್ಕೂಟವನ್ನು ಸೇರಿತು.

ಸ್ವಾತಂತ್ರ್ಯ ಹೋರಾಟದ ಬಳಿಕ ಬಹುಗುಣ ಅವರು ಮದ್ಯಪಾನ ವಿರೋಧಿ, ಮಹಿಳೆಯರ ಹಕ್ಕು ಹೋರಾಟಗಳಲ್ಲಿ ತೊಡಗಿಸಿಕೊಂಡರು. ಕೊನೆಗೆ ಚಿಪ್ಕೋ ಚಳವಳಿ ಮೂಲಕ ಪರಿಸರ ಸಂರಕ್ಷ ಣೆಯ ಪ್ರತಿನಿಧಿಯಾದರು. ವ್ಯಕ್ತಿಯೊಬ್ಬ ನಿಸ್ವಾರ್ಥವಾಗಿ ಸಮಾಜ ಸೇವೆಗೆ ತೊಡಗಿಸಿಕೊಂಡಾಗ ಅವರನ್ನು ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತವೆ. ಚಿಪ್ಕೋ ಚಳವಳಿಗೆ 1987ರಲ್ಲಿ ರೈಟ್ಲೈವ್ಲೀಹುಡ್ಅವಾರ್ಡ್ಸಂದಿತು. ದೇಶದ ಪರಮೋಚ್ಚ ನಾಗರಿಕ ಗೌರವಗಳಾದ ಪದ್ಮಶ್ರೀ(1981) ಮತ್ತು  ಪದ್ಮವಿಭೂಷಣ(2009) ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಐಐಟಿಗಳು, ಸಂಘ ಸಂಸ್ಥೆಗಳು ಬಹುಗುಣ ಅವರನ್ನು ಸನ್ಮಾನಿಸಿವೆ. ಅವರ ಜೀವನ, ಹೋರಾಟ, ಫಿಲಾಸಫಿಗಳು ಹಲವು ಪುಸ್ತಕಗಳಿಗೆ ವಿಷಯಗಳಾಗಿವೆ. ಬಹುಗುಣ ಕೆಲವು ಕೃತಿಗಳನ್ನು ರಚಿಸಿದ್ದಾರೆ.

ಅವರು ಕರ್ನಾಟಕಕ್ಕೆ ಹಲವು ಬಾರಿ ಭೇಟಿ ನೀಡಿದ್ದಾರೆ. ಇಲ್ಲಿನ ಪರಿಸರ ಚಳವಳಿಗಳಿಗೆ ಪ್ರತ್ಯಕ್ಷ  ಹಾಗೂ ಪರೋಕ್ಷವಾಗಿ ಪ್ರೇರಕ ಶಕ್ತಿಯಾಗಿದ್ದರು. 94 ವರ್ಷ ವಯಸ್ಸಾಗಿದ್ದ ಬಹುಗುಣ ಕೋವಿಡ್ಸೋಂಕಿನಿಂದಾಗಿ ದಿಲ್ಲಿಯ ಏಮ್ಸ್ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮೇ 21ರಂದು ಕೊನೆಯುಸಿರೆಳೆದರು. ಪರಿಸರ ಮೇಲಿನ ಪ್ರೀತಿ, ಬದುಕಿನ ಮೇಲಿನ ವ್ಯಾಮೋಹದಿಂದಾಗಿ ಅವರು ಚಿರಸ್ಥಾಯಿ. ಅವರನ್ನು ಕಳೆದುಕೊಂಡ ಹಿಮಾಲಯದ ಮರ ಗಿಡಗಳು ಕಣ್ಣೀರು ಸುರಿಸುತ್ತಿರಬಹುದು!


ಈ ಲೇಖನವು ವಿಜಯ ಕರ್ನಾಟಕದ 2021ರ ಮೇ 23ರ ಸಂಚಿಕೆಯಲ್ಲಿ ಪ್ರಕಟವಾಗಿದೆ.


ಮಂಗಳವಾರ, ಮೇ 18, 2021

Mirza Ghalib: ಯಾವಾಗ ಪ್ರೀತಿಸಬೇಕು?

 ಯಾರೋ ಗಾಲಿಬನಿಗೆ ಕೇಳಿದರು

ಯಾವಾಗ ಪ್ರೀತಿಸಬೇಕು..?
ಮದುವೆಗೆ ಮೊದಲೋ
ಇಲ್ವೇ ಮದುವೆಯ ನಂತರ...!
ಗಾಲಿಬ್ ಹೇಳಿದ
ಯಾವಾಗಲಾದರೂ ಪ್ರೀತಿಸಿ
ಆದರೆ, ಹೆಂಡತಿಗೆ ಗೊತ್ತಾಗಬಾರದಷ್ಟೇ
~ ಅನಾಮಿಕ
ಕನ್ನಡಕ್ಕೆ : ಮಂಜುಳ ಕಿರುಗಾವಲು



ಭಾನುವಾರ, ಮೇ 9, 2021

BMC Commissioner Iqbal Singh Chahal: ಕೋವಿಡ್ ನಿಯಂತ್ರಣಕ್ಕೆ 'ಮುಂಬೈ ಮಾಡೆಲ್‌' ಸೃಷ್ಟಿಸಿದ ಚಹಲ್

ಫಿಟ್ನೆಸ್ಫ್ರೀಕ್ಐಎಎಸ್ಅಧಿಕಾರಿ, ಬಿಎಂಸಿ ಆಯುಕ್ತ ಇಕ್ಬಾಲ್ಸಿಂಗ್ಚಹಲ್ಅವರು ಮುಂಬೈನಲ್ಲಿ ಕೋವಿಡ್ನಿಯಂತ್ರಣಕ್ಕೆ ತಂದು, ‘ಮುಂಬೈ ಮಾಡೆಲ್‌’ ಸೃಷ್ಟಿಸಿದ್ದಾರೆ.


- ಮಲ್ಲಿಕಾರ್ಜುನ ತಿಪ್ಪಾರ
ಕೋವಿಡ್ಎರಡನೇ ಅಲೆಯಲ್ಲಿ ಇಡೀ ದೇಶವೇ ಸಿಲುಕಿ ಸಂಕಟದಲ್ಲಿ ಒದ್ದಾಡುತ್ತಿದೆ. ಬೆಡ್ಗಳು ಸಿಗುತ್ತಿಲ್ಲ; ಆಕ್ಸಿಜನ್ಸಾಕಾಗುತ್ತಿಲ್ಲ; ವೆಂಟಿಲೇಟರ್ಗಳಿಲ್ಲ. ಎಲ್ಲ ಇದ್ದರೂ ವೈದ್ಯರಿಲ್ಲ,

ನರ್ಸ್ಗಳಿಲ್ಲ ಅನ್ನೋ ಪರಿಸ್ಥಿತಿ ಎಲ್ಲ ಕಡೆ ಇದೆ. ಕೋವಿಡ್ನಿರ್ವಹಿಸಬೇಕಾದ ಸ್ಥಳೀಯ ಸಂಸ್ಥೆಗಳು ಕೈ ಚೆಲ್ಲಿ ಕುಳಿತಿವೆ. ಅಧಿಕಾರಿಗಳಿಗೆ ಏನು ಮಾಡಬೇಕೆಂಬುದೇ ತೋಚುತ್ತಿಲ್ಲ. ಇಡೀ ವ್ಯವಸ್ಥೆಯೇ ವಿಫಲವಾಗಿದೆ. ಒಬ್ಬರು ಇನ್ನೊಬ್ಬರು ಮೇಲೆ ದೂರುತ್ತಿದ್ದಾರೆ. ಇಂಥ ಬಿಕ್ಕಟ್ಟಿನ ಸ್ಥಿತಿಯಲ್ಲಿ ದೇಶದ ವಾಣಿಜ್ಯ ರಾಜಧಾನಿ ಮುಂಬಯಿ ನಗರ ಮಾತ್ರ ಭರವಸೆಯ ಬೆಳಕಾಗಿದೆ.

ಬೃಹನ್ಮುಂಬಯಿ ಮಹಾನಗರ ಪಾಲಿಕೆ(ಬಿಎಂಸಿ)ಯುಕೋವಿಡ್ಏರುಗತಿ ರೇಖೆಯನ್ನು ತಡೆ ಹಿಡಿಯುವಲ್ಲಿ ಯಶಸ್ವಿಯಾಗುತ್ತಿದೆ. ಕೋವಿಡ್ನಿರ್ವಹಣೆಯಲ್ಲಿ ಉಳಿದ ನಗರಗಳಿಗೆ ದಾರಿದೀಪವಾಗಿದೆ. ಸ್ವತಃ ಸುಪ್ರೀಂ ಕೋರ್ಟ್‌, ಬಿಎಂಸಿ ಅನುಸರಿಸಿದ ಮಾದರಿಯನ್ನು ಮುಕ್ತಕಂಠದಿಂದ ಹೊಗಳಿದೆ; ನೀವೂ ನೋಡಿ ಕಲಿಯಿರಿ ಎಂದು ತಾಕೀತು ಮಾಡಿದೆ!

ಮುಂಬಯಿಯ ಈ ಸಕ್ಸೆಸ್ಸ್ಟೋರಿಯ ನಾಯಕ ಇಕ್ಬಾಲ್ಸಿಂಗ್ಚಹಲ್‌. ಚಹಲ್ಬೃಹನ್ಮುಂಬಯಿ ಮಹಾನಗರ ಪಾಲಿಕೆಯ ಆಯುಕ್ತರು. ಪಾಲಿಕೆ ಕಮಿಷನರ್ಆಗಿ ಒಂದು ವರ್ಷವಷ್ಟೇ ಆಗಿದೆ. ಈ ಕಡಿಮೆ ಅವಧಿಯಲ್ಲಿ ಅವರು ಅತಿದೊಡ್ಡ ಬಿಕ್ಕಟ್ಟನ್ನು ಎದುರಿಸಿದ ರೀತಿ ಮಾತ್ರ ಅನನ್ಯ. ಒಂದು ಕಾಲು ಕೋಟಿ ಜನಸಂಖ್ಯೆ ಇರುವ ದೇಶದ ಅತಿದೊಡ್ಡ ನಗರ, 39,038.83 ಕೋಟಿ ರೂಪಾಯಿ ಬಜೆಟ್ಮಂಡಿಸುವ ಪಾಲಿಕೆಯ ಆಡಳಿತವೇನೂ ತಮಾಷೆಯಲ್ಲ. ನಮ್ಮ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್‌ 10 ಸಾವಿರ ಕೋಟಿ ರೂ. ಅಚೆ ಈಚೆ ಇದೆ! ಇಂಥ ಮುಂಬಯಿಗೆ ಕೋವಿಡ್ಅಪ್ಪಳಿಸಿದರೆ ಅದನ್ನು ಹತೋಟಿಗೆ ತರುವುದು ಕೂಡ ಅಷ್ಟು ಸಲೀಸಲ್ಲ. ಆದರೆ, ಕಮಿಷನರ್ಚಹಲ್ಮತ್ತು ಅವರ ತಂಡ ದಿನದ 24 ಗಂಟೆಯೂ ಕೆಲಸ ಮಾಡಿ, ಅಸಾಧ್ಯವಾದುದನ್ನು ಸಾಧಿಸಿ ತೋರಿಸುತ್ತಿದೆ, ಬಿಎಂಸಿಯ ಕಾರ್ಯಕ್ಕೆ ಅಲ್ಲಿನ ರಾಜ್ಯ ಸರಕಾರವೂ ಅಷ್ಟೇ ಸಹಾಯ, ಸಹಕಾರ ನೀಡುತ್ತಿದೆ.

ಮೊದಲು ಅವರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ; ನಂತರ ನಿಮ್ಮನ್ನು ನೋಡಿ ನಗುತ್ತಾರೆ; ನಂತರ ಸಂಘರ್ಷ ಮಾಡುತ್ತಾರೆ; ಆ ನಂತರ ಗೆಲವು ನಿನ್ನದುಎಂಬ ಮಹಾತ್ಮ ಗಾಂಧಿ ಅವರ ಉಕ್ತಿ ಇಕ್ಬಾಲ್ಸಿಂಗ್ಚಹಲ್  ವಿಷಯದಲ್ಲಿನಿಜವಾಗಿದೆ. ಯಾಕೆಂದರೆ, ಎರಡ್ಮೂರು ತಿಂಗಳ ಹಿಂದೆ ಭಾರತ ಸರಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಹಲ್ಅವರ ಸಹೋದ್ಯೋಗಿ ಮಿತ್ರರೇ ಕರೆ ಮಾಡಿ, ಮಹಾರಾಷ್ಟ್ರದಲ್ಲಿ ಮಾತ್ರವೇ ಯಾಕೆ ಕೊರೊನಾ ಇದೆ ಎಂದು ನಗುತ್ತಿದ್ದರಂತೆ! ಆದರೆ, ಈಗ ನಗುವ ಸರದಿ ಯಾರಿಗೆ ಬಂದಿದೆ ನೋಡಿ. ಮುಂಬಯಿಯಲ್ಲಿ ಶೇ.24.97ರಷ್ಟಿದ್ದ ಪಾಸಿಟಿವಿಟಿ ರೇಟ್ಶೇ.9ಕ್ಕೆ ಇಳಿಕೆಯಾಗಿದೆ. ದಿನದಿಂದ ದಿನಕ್ಕೆ ಕೋವಿಡ್ಪ್ರಕರಣಗಳೂ ಕಡಿಮೆಯಾಗುತ್ತಿವೆ. ವಿದೇಶಿ ಮಾಧ್ಯಮಗಳಲ್ಲೂ ಬಿಎಂಸಿ ಸಾಧನೆ ಮತ್ತು ಮಾದರಿಯ ಬಗ್ಗೆ ಮುಕ್ತ ಪ್ರಶಂಸೆ ದೊರೆಯುತ್ತಿದೆ.

ಚಹಲ್ಅವರೇನೂ ಮಂತ್ರದಂಡ ಪ್ರಯೋಗಿಸಿ, ರಾತ್ರೋರಾತ್ರಿ ಚಮತ್ಕಾರ ಮಾಡಲಿಲ್ಲ. ಕಳೆದ ವರ್ಷ ಮೊದಲನೆ ಅಲೆ ಏರುಗತಿಯಲ್ಲಿದ್ದಾಗಲೇ ಚಹಲ್ಬಿಎಂಸಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ಆ ಕ್ಷಣದಿಂದಲೇ ಕೋವಿಡ್ನಿರ್ವಹಣೆಗೆ ತಮ್ಮನ್ನು ಒಡ್ಡಿಕೊಂಡರು. ಮೊದಲನೇ ಅಲೆ ವೇಳೆ ಮಾಡಿದ ತಪ್ಪುಗಳಿಂದ ಪಾಠ ಕಲಿತು, ಸ್ಥಳೀಯಾಡಳಿತವನ್ನು ಎರಡನೇ ಅಲೆಗೆ ಸಜ್ಜುಗೊಳಿಸಿದರು. ಎರಡನೇ ಅಲೆಯ ಗಂಭೀರತೆಯನ್ನು ಗ್ರಹಿಸಿ ಅದಕ್ಕೆ ತಕ್ಕಂತೆ ವ್ಯವಸ್ಥೆಯನ್ನು ರೂಪಿಸಿದರು. ಫೆಬ್ರವರಿಯಿಂದಲೇ ಇಡೀ ಬಿಎಂಸಿ ಯುದ್ಧ ಸನ್ನದ್ಧವಾಗಿತ್ತು!

ತ್ವರಿತ ಕೋವಿಡ್ಟೆಸ್ಟ್ಗಳು, 24 ಗಂಟೆಯೂ ಕಾರ್ಯನಿರ್ವಹಿಸುವ 24 ವಾರ್ರೂಮ್ಗಳು, ಎಲ್ಲರಿಗೂ ವೈದ್ಯಕೀಯ ಸೇವೆ, ಖಾಸಗಿ ಆಸ್ಪತ್ರೆಗಳ ಜತೆಗಿನ ಸಮನ್ವಯ, ಸ್ಮಶಾನಗಳ ನಿರ್ವಹಣೆ... ಹೀಗೆ ಕೋವಿಡ್ಗೆ ಅಂತರ್ಗತವಾಗಿರುವ ಎಲ್ಲವನ್ನೂ ಬಿಎಂಸಿ ಅಚ್ಚುಕಟ್ಟಾಗಿ ನಿರ್ವಹಿಸಲು ಯಶಸ್ವಿಯಾಯಿತು. ಅದರ ಪರಿಣಾಮ ಈಗ ಕೋವಿಡ್ಹತೋಟಿಗೆಮುಂಬಯಿ ಮಾಡೆಲ್‌’ ಸೃಷ್ಟಿಯಾಗಿ ನಿಂತಿದೆ. ಇದೆಲ್ಲದರ ಹಿಂದೆ 55 ವರ್ಷದ ಕಮಿಷನರ್ಚಹಲ್ದೂರದೃಷ್ಟಿ ಚಿಂತನೆ ಮತ್ತು ಪ್ರಯತ್ನಶೀಲತೆಯನ್ನು ಇಡೀ ಜಗತ್ತೇ ಗುರುತಿಸುತ್ತಿದೆ.

ರಾಜಸ್ಥಾನದ ಜೋಧಪುರದ ಮೇಲ್ಮಧ್ಯಮ ವರ್ಗದ ಕುಟುಂಬದಲ್ಲಿ 1966ರ ಜನವರಿ 20ರಂದು ಇಕ್ಬಾಲ್ಸಿಂಗ್ಚಹಲ್ಜನಿಸಿದರು. ಶಾಲಾ ದಿನಗಳಿಂದಲೇ ಕಲಿಕೆಯಲ್ಲಿ ಅಗ್ರಸ್ಥಾನಿ. 12ನೇ ತರಗತಿಯ ಬೋರ್ಡ್ಎಕ್ಸಾಮ್ನಲ್ಲಿ ನ್ಯಾಷಲ್ಮೆರಿಟ್ಲಿಸ್ಟ್ನಲ್ಲಿ ಕಾಣಿಸಿಕೊಂಡವರು. ಎಲೆಕ್ಟ್ರಾನಿಕ್ಸ್ಮತ್ತು ಕಮ್ಯುನಿಕೇಷನ್ನಲ್ಲಿ ಬಿಟೆಕ್ಪದವಿ ಪಡೆದುಕೊಂಡಿದ್ದಾರೆ. ಹಾರ್ವರ್ಡ್ಯೂನಿವರ್ಸಿಟಿಗೆ ತೆರಳಿ ಸಾರ್ವಜನಿಕ ಆಡಳಿತದಲ್ಲಿ ಪದವಿ ಗಳಿಸಿದ್ದಾರೆ. ಅಲ್ಲಿಂದ ಹಿಂದಿರುಗಿದ ಬಳಿಕ 1988ರ ಯುಪಿಎಸ್ಸಿ ಪರೀಕ್ಷೆ ಬರೆದರು. ಮೊದಲ ಯುಪಿಎಸ್ಸಿ ಪರೀಕ್ಷೆಯಲ್ಲೇ ಅತ್ಯುತ್ತಮ ಅಂಕ ಪಡೆದು ಪಾಸಾದರು. ಮಹಾರಾಷ್ಟ್ರ ಕೆಡರ್ಐಎಎಸ್ಅಧಿಕಾರಿಯಾಗಿ ಸೇರ್ಪಡೆಯಾದರು.

ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿಕೆಲಸ ಮಾಡಿರುವ ಚಹಲ್‌, ಕೆಲವು ಕಾಲ ಕೇಂದ್ರ ಸೇವೆಯಲ್ಲಿಯೂ ಇದ್ದರು. ಮಹಾರಾಷ್ಟ್ರದ ಔರಂಗಾಬಾದ್ಮತ್ತು ಥಾಣೆಯ ಜಿಲ್ಲಾಧಿಕಾರಿಯಾಗಿ ಅವರು ಮಾಡಿದ ಕಾರ್ಯಗಳನ್ನು ಜನ ಈಗಲೂ ನೆನೆಯುತ್ತಾರೆ. ಈ ಜಿಲ್ಲೆಗಳಲ್ಲಿನ ಕೆಲಸದಿಂದಾಗಿ ಜನರ ಅಧಿಕಾರಿ ಎನಿಸಿಕೊಂಡರು. ಮುಂಬಯಿನಧಾರಾವಿಏಷ್ಯಾದ ಅತಿದೊಡ್ಡ ಕೊಳಗೇರಿ. ಈ ಕೊಳಗೇರಿ ಅಭಿವೃದ್ಧಿಗೆ ಮಹಾರಾಷ್ಟ್ರ ಸರಕಾರಧಾರಾವಿ ರಿಡೆವಲಪ್ಮೆಂಟ್ಪ್ರಾಜೆಕ್ಟ್ಆರಂಭಿಸಿ, ಸಾರಥ್ಯವನ್ನು ಚಹಲ್ಗೆ ವಹಿಸಿತ್ತು. ಈ ಪ್ರಾಜೆಕ್ಟ್‌ ನ ಸಿಇಒ ಆಗಿ ಕಾರ್ಯನಿರ್ವಹಿಸಿದ್ದಾರೆ. ಮೊದಲ ಕೊರೊನಾ ಅಲೆಯಲ್ಲಿ ಧಾರಾವಿಯನ್ನು ದೊಡ್ಡ ಅಪಾಯದಿಂದ ಪಾರು ಮಾಡುವಲ್ಲಿಯೂ ಯಶಸ್ವಿಯಾಗಿದ್ದರು. ಈ ಪ್ರಾಜೆಕ್ಟ್ನ ಯಶಸ್ಸು ಅವರನ್ನು ಬಿಎಂಸಿ ಕಮಿಷನರ್ಹುದ್ದೆಗೆ ಕರೆದುಕೊಂಡು ಬಂತು.

ಚಹಲ್ಅವರನ್ನುಫಿಟ್ನೆಸ್ಫ್ರೀಕ್‌’ ಎಂದೂ ಗುರುತಿಸಲಾಗುತ್ತದೆ. ಚಹಲ್ಫಿಜಿಕಲ್ಫಿಟ್ಐಎಎಸ್ಆಫೀಸರ್‌! ಹಲವು ಮ್ಯಾರಥಾನ್ಗಳಲ್ಲಿ ಭಾಗವಹಿಸಿದ್ದಾರೆ. 2004ರಿಂದಲೂ ಮುಂಬಯಿ ಮ್ಯಾರಥಾನ್ನಲ್ಲಿ ಓಡುತ್ತಿದ್ದಾರೆ. ಯೋಗ, ಫಿಟ್ನೆಸ್‌, ಓಟದ ಫೋಟೊಗಳನ್ನು ಆಗಾಗ ತಮ್ಮ ಸೋಷಿಯಲ್ಮೀಡಿಯಾ ವೇದಿಕೆಗಳಲ್ಲಿ ಷೇರ್ಮಾಡಿಕೊಳ್ಳುತ್ತಾರೆ.

ಕೋವಿಡ್ಅತ್ಯುತ್ತಮ ನಿರ್ವಹಣೆಗಾಗಿ ಇಂಡೋ ಅಮೆರಿಕನ್ಚೇಂಬರ್ಸ್ಆಫ್ಕಾಮರ್ಸ್‌(ಐಎಸಿಸಿ) ‘ಕೋವಿಡ್ಕ್ರುಸೆಡರ್ಅವಾರ್ಡ್‌-2020’ ನೀಡಿ ಗೌರವಿಸಿದೆ. ಲೋಕಮತ್  ಮಹಾರಾಷ್ಟ್ರಿಯನ್ಆಫ್ಇಯರ್‌-2020’ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ. ಕೇಂದ್ರ ಹಾಗೂ ರಾಜ್ಯ ಸರಕಾರದಿಂದಲೂ ಗೌರವಗಳು ಸಂದಿವೆ. ಕೋವಿಡ್ಎರಡನೇ ಅಲೆಯನ್ನು ನಿರ್ವಹಿಸುತ್ತಲೇ ಬಿಎಂಸಿಯನ್ನು ಸಂಭಾವ್ಯ ಮೂರನೇ ಅಲೆಗೆ ಸಜ್ಜುಗೊಳಿಸುವ ಕೆಲಸವನ್ನು ಚಹಲ್ಮಾಡುತ್ತಿದ್ದಾರೆ. ಹಲವು ತಜ್ಞರ ಪ್ರಕಾರ, ಮೂರನೇ ಅಲೆಯು ಎರಡನೇ ಅಲೆಗಿಂತಲೂ ಭೀಕರವಾಗಿದ್ದು, ಮಕ್ಕಳು ಹೆಚ್ಚು ಅಪಾಯಕ್ಕೆ ಈಡಾಗಲಿಧಿದ್ದಾರೆ. ಈ ಹಿನ್ನೆಲೆಯಲ್ಲಿ, ಬಿಎಂಸಿಯು ಮಕ್ಕಳ ಕೋವಿಡ್ಕೇರ್ಸೆಂಟರ್ಗಳನ್ನು ಈಗಿನಿಂದಲೇ ಆರಂಭಿಸುತ್ತಿದೆ.

ಚಹಲ್ಅವರನ್ನು ವಿವಾದಗಳೇನೂ ಬಿಟ್ಟಿಲ್ಲ. ಶಿವಸೇನೆ ಮತ್ತು ನಟಿ ಕಂಗನಾ ರಣಾವತ್ನಡುವಿನ ಬೀದಿ ಕಾಳಗದಲ್ಲಿ ಬಿಎಂಸಿಯೂ ಭಾಗಿಯಾಗಬೇಕಾಯಿತು. ನಿಯಮ ಮೀರಿ ಬಿಲ್ಡಿಂಗ್ಕಟ್ಟಿದ್ದಾರೆಂದು ಬಿಎಂಸಿ ಕಂಗನಾಳ ಮನೆಯನ್ನು ಧ್ವಂಸ ಮಾಡಿತ್ತು. ಆಗ, ಪಾಲಿಕೆ ಆಯುಕ್ತ ಚಹಲ್ವಿರುದ್ಧವೂ ಆರೋಪಗಳು ಕೇಳಿ ಬಂದವು. ಕೋರ್ಟ್ಕೂಡ ಪಾಲಿಕೆ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಅದೇನೇ ಇರಲಿ, ಕೋವಿಡ್ಬಿಕ್ಕಟ್ಟನ್ನು ನಿರ್ವಹಿಸುತ್ತಿರುವ ಅವರ ರೀತಿ ಎಲ್ಲ ಅಧಿಕಾರಿಗಳಿಗೂ ದಾರಿದೀಪವಾಗಿದೆ.


* ಈ ಲೇಖನವು ವಿಜಯ ಕರ್ನಾಟಕ ಪತ್ರಿಕೆಯ 2021ರ ಮೇ 9ರ ಸಂಚಿಕೆಯಲ್ಲಿ ಪ್ರಕಟವಾಗಿದೆ.


ಭಾನುವಾರ, ಮೇ 2, 2021

Nandurbar DM Dr Rajendra Bharud: 'ಪ್ರಾಣವಾಯು' ನೀಡಿದ ನಂದೂರಬಾರ್ ಡಿಸಿ ಡಾ.ರಾಜೇಂದ್ರ ಭಾರೂಡ್

ಕೋವಿಡ್ಬಿಕ್ಕಟ್ಟಿನ ನಡುವೆ ಆಕ್ಸಿಜನ್ಉತ್ಪಾದನೆಯಲ್ಲಿಜಿಲ್ಲೆಯನ್ನೇ ಸ್ವಾವಲಂಬಿಯಾಗಿಸಿರುವ ನಂದೂರಬಾರ್ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭಾರೂಡ್ಅವರ ಜೀವನಗಾಥೆ ಸ್ಫೂರ್ತಿದಾಯಕ. 

 

- ಮಲ್ಲಿಕಾರ್ಜುನ ತಿಪ್ಪಾರ
ಇಡೀ ದೇಶವೇ ಕೋವಿಡ್ಎರಡನೇ ಅಲೆಗೆ ಕೊಚ್ಚಿ ಹೋಗುತ್ತಿದೆ. ವ್ಯವಸ್ಥೆಯ ವೈಫಲ್ಯದ ಪರಿಣಾಮ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರಕದೇ ಜನರು ಸಾವಿಗೀಡಾಗುತ್ತಿದ್ದಾರೆ; ಸ್ಮಶಾನಗಳು ಗಿಜಿಗಿಡುತ್ತಿವೆ; ದೂರದೃಷ್ಟಿ ಮತ್ತು ಸಿದ್ಧತೆಯ ಕೊರತೆಯ ಫಲವಾಗಿ ಇಡೀ ದೇಶ ಅನಾಥಪ್ರಜ್ಞೆಯನ್ನು ಎದುರಿಸುತ್ತಿದೆ. ಇದರ ನಡುವೆ ಮಹಾರಾಷ್ಟ್ರದ ನಂದೂರಬಾರ್ಜಿಲ್ಲೆಮಾತ್ರ ವಿಭಿನ್ನವಾಗಿ ನಿಂತಿದೆ; ಸೋಂಕನ್ನು ಸಮರ್ಥವಾಗಿ ನಿಭಾಯಿಸುತ್ತಿದೆ.

ದೂರದೃಷ್ಟಿ ಮತ್ತು ದಕ್ಷತೆಯ ಜಿಲ್ಲಾಧಿಕಾರಿಯೊಬ್ಬರಿದ್ದರೆ ಒಂದು ಜಿಲ್ಲೆಯ ವ್ಯವಸ್ಥೆಯು ಯಾವ ರೀತಿ ಕಾರ್ಯನಿರ್ವಹಿಸಬಲ್ಲದು ಎಂಬುದಕ್ಕೆ ನಂದೂರ್ಬಾರ್ಜಿಲ್ಲೆ ದೃಷ್ಟಾಂತ. ಮಹಾರಾಷ್ಟ್ರದಲ್ಲಿ ಆಕ್ಸಿಜನ್ಕೊರತೆಯಿಂದ ಜನರು ಸಾಯುತ್ತಿದ್ದ ಸಂದರ್ಭದಲ್ಲಿ ನಂದೂರಬಾರ್ಎಂಬ ಬುಡಕಟ್ಟು ಜನರೇ ಹೆಚ್ಚಿರುವ ಜಿಲ್ಲೆ ಆಕ್ಸಿಜನ್ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿ ಚಿಕಿತ್ಸೆಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಲು ಯಶಸ್ವಿಯಾಗಿದೆ. ನಂದರೂಬಾರ್ಯಶಸ್ಸಿನ ಹಿಂದೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭಾರೂಡ್ಮತ್ತು ಅವರ ತಂಡದ ಪರಿಶ್ರಮವಿದೆ; ದೂರದೃಷ್ಟಿಯ ಚಿಂತನೆಯಿದೆ. ಸ್ವತಃ ವೈದ್ಯರಾಗಿರುವ ರಾಜೇಂದ್ರ ಅವರಿಗೆ ಕೊರೊನಾದಿಂದ ಉಂಟಾಗಬಹುದಾದ ಅಪಾಯದ ಸ್ಪಷ್ಟತೆ ಇತ್ತು. ತಮ್ಮ ಆಡಳಿತದ ಜಿಲ್ಲೆಯನ್ನು ಕೊರೊನಾ ಎದುರಿಸಲು ಎಲ್ಲರಿಗಿಂತಲೂ ಮುಂಚೆಯೇ ಸನ್ನದ್ಧ ಮಾಡಿ, ಯಶಸ್ವಿಯಾಗಿದ್ದಾರೆ.

ಕಳೆದ ವರ್ಷ ಕೋವಿಡ್‌-19 ಸ್ಫೋಟವಾಗುವ ಮುಂಚೆ ನಂದೂರಬಾರ್ಜಿಲ್ಲೆಯಲ್ಲಿಒಂದೂ ಲಿಕ್ವಿಡ್ಆಕ್ಸಿಜನ್ತಯಾರಿಕಾ ಘಟಕಗಳು ಇರಲಿಲ್ಲ. ಕೋವಿಡ್ಕೇಸ್ಗಳು ಇಳಿಕೆಯಾಗುತ್ತಿದ್ದಂತೆ ಸೆಪ್ಟೆಂಬರ್ನಲ್ಲಿ ಡಾ. ರಾಜೇಂದ್ರ ಅವರು ನಂದೂರಬಾರ್ಜಿಲ್ಲಾಸ್ಪತ್ರೆಯಲ್ಲಿ 85 ಲಕ್ಷ  ರೂ. ವೆಚ್ಚದಲ್ಲಿ ಲಿಕ್ವಿಡ್ಆಕ್ಸಿಜನ್ಘಟಕ ಸ್ಥಾಪಿಸಿದರುಈ ವರ್ಷದ ಜನವರಿ ಮತ್ತು ಫೆಬ್ರವರಿಯಲ್ಲಿಮತ್ತೆ ಎರಡು ಘಟಕಗಳನ್ನು ನಿರ್ಮಿಸಿದರು. ಪರಿಣಾಮ ಜಿಲ್ಲೆಯಲ್ಲಿ ಪ್ರತಿ ನಿಮಿಷಕ್ಕೆ 2,400 ಲೀಟರ್ಲಿಕ್ವಿಡ್ಆಕ್ಸಿಜನ್ಉತ್ಪಾದನೆಯ ಸಾಮರ್ಥ್ಯವನ್ನು ಪಡೆದುಕೊಂಡಿತು. ಮೊದಲನೇ ಅಲೆ ವೇಳೆ ಜಿಲ್ಲೆಯಲ್ಲಿ 190 ಕೇಸ್ಗಳಿದ್ದವು. ಆದರೆ, ಸೋಂಕಿನ ಅಪಾಯದ ಬಗ್ಗೆ ಮತ್ತು ದೂರದೃಷ್ಟಿಯ ಚಿಂತನೆಯಿಂದಾಗಿ ಡಾ. ಭಾರೂಡ್ಅವರು ಆಕ್ಸಿಜನ್ಉತ್ಪಾದನೆಯಲ್ಲಿಇಡೀ ಜಿಲ್ಲೆಯನ್ನೇ ಸ್ವಾವಲಂಬಿಯಾಗಿಸಿದರು.

ಮಹಾರಾಷ್ಟ್ರದಲ್ಲಿ ಯಾವಾಗ ಕೋವಿಡ್ಎರಡನೇ ಅಲೆ ತೀವ್ರವಾಯಿತೋ ಈ ಬುಡಕಟ್ಟು ಜಿಲ್ಲೆಯಲ್ಲಿ24 ಗಂಟೆಯೊಳಗೆ 1,200 ಪ್ರಕರಣಗಳು ಪತ್ತೆಯಾದವು. ಆದರೆ, ಆಕ್ಸಿಜನ್ಕೊರತೆಯಿಂದಾಗಿಯೇ ಯಾವುದೇ ಸಾವು ನೋವು ಸಂಭವಿಸಲಿಲ್ಲ. ಸರಕಾರಿ ಘಟಕಗಳಿಂದ ಪ್ರತಿ ನಿಮಿಷಕ್ಕೆ 1,800 ಲೀ., ಖಾಸಗಿ ಕಂಪನಿಗಳಿಂದ ನಿಮಿಷಕ್ಕೆ 1,200 ಲೀ. ಲಿಕ್ವಿಡ್ಆಕ್ಸಿಜನ್ಉತ್ಪಾದನೆ ಸಾಧ್ಯವಾಗಿದೆ. ಜನರು ಇಡೀ ಜಿಲ್ಲಾಡಳಿತವನ್ನು ಹಾಡಿ ಹೊಗಳುತ್ತಿದ್ದಾರೆ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭಾರೂಡ್ಮತ್ತು ಅವರ ತಂಡದ  ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಾರಂಭಿಸಿದೆ.

ದಿಲ್ಲಿ, ಮುಂಬಯಿ, ಬೆಂಗಳೂರಿನಂಥ ಮೆಟ್ರೋ ಸಿಟಿಗಳೇ ಆಕ್ಸಿಜನ್ಕೊರತೆಯಿಂದ ಬಳಲುತ್ತಿವೆ. ಈ ನಗರಗಳಲ್ಲಿ ಹೆಜ್ಜೆ ಹೆಜ್ಜೆಗೂ ಆಸ್ಪತ್ರೆಗಳಿದ್ದರೂ ಕೋವಿಡ್ಸೋಂಕಿತ ಗಂಭೀರ ರೋಗಿಗಳಿಗೆ ಪ್ರಾಣವಾಯು ಸಿಗುತ್ತಿಲ್ಲ; ಪ್ರಾಣ ಉಳಿಸಲಾಗುತ್ತಿಲ್ಲ. ಅಂಥದ್ದರಲ್ಲಿ ಅಷ್ಟೇನೂ ಸಂಪನ್ಮೂಲಗಳು ಇಲ್ಲದೇ ಬುಡಕಟ್ಟು ಜಿಲ್ಲೆಯೊಂದು ಆಕ್ಸಿಜನ್ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿರುವುದು ಇವರ ಕರ್ತೃತ್ವ ಶಕ್ತಿಗೆ ಉದಾಹರಣೆಯಾಗಿದೆ. ತಮ್ಮ ದೂರದೃಷ್ಟಿಯ ಆಡಳಿತದಿಂದಾಗಿ ಪ್ರಸಿದ್ಧಿಯಾಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಭಾರೂಡ್ಅವರ ಜೀವನ ಕತೆಯೂ ಯಾವುದೇ ಥ್ರಿಲ್ಲರ್ಸಿನಿಮಾಗಿಂತಲೂ ಕಡಿಮೆ ಇಲ್ಲ. ಪ್ರತಿಭಾವಂತ ಯಾವುದೇ ವಿದ್ಯಾರ್ಥಿಗೆ ಅವರ ಜೀವನಯಶೋಗಾಥೆ ಸೂಧಿರ್ತಿ.

ರಾಜೇಂದ್ರ ಭಾರೂಡ್‌ 1988ರ ಜನವರಿ 7ರಂದು ಮಹಾರಾಷ್ಟ್ರದ ಧುಳೆ ಜಿಲ್ಲೆಯ ಸಕ್ರಿ ತಾಲೂಕಿನ ಸಾಮೋಡೆ ಹಳ್ಳಿಯಲ್ಲಿ ಜನಿಸಿದರು. ತಂದೆ ಬಂಡು ಭಾರೂಡ್‌, ತಾಯಿ ಕಮಲಾಬಾಯಿ. ಒಟ್ಟು ಮೂವರು ಮಕ್ಕಳು. ರಾಜೇಂದ್ರ ಕಮಲಾಬಾಯಿ ಗರ್ಭದಲ್ಲಿದ್ದಾಗಲೇ ಬಂಡು ಇಹಲೋಕ ತ್ಯಜಿಸಿದರು. ಇಂದಿಗೂ ತಂದೆ ನೋಡಲು ಯಾವ ರೀತಿ ಇದ್ದರು ಎಂಬುದು ರಾಜೇಂದ್ರಗೆ ಗೊತ್ತಿಲ್ಲ! ಅವರ ತಂದೆಯ ಒಂದೂ ಫೋಟೊ ಅವರ ಬಳಿಯಿಲ್ಲ. ಅಷ್ಟು ಕಡು ಬಡತನದಲ್ಲಿರಾಜೇಂದ್ರ ಅವರು ಬೆಳೆದು ಬಂದಿದ್ದಾರೆ.

ಬಡತನವನ್ನೇ ಹಾಸಿ ಹೊದ್ದುಕೊಂಡಿದ್ದ ಕುಟುಂಬ ನಿರ್ವಹಣೆ ಕಷ್ಟವೇ ಆಗಿತ್ತು. ತಾಯಿ ಮತ್ತು ಅಜ್ಜಿ ಇಬ್ಬರು ಸೇರಿ ಮೂವರು ಮಕ್ಕಳನ್ನು ಕಷ್ಟಪಟ್ಟು ಬೆಳೆಸಿದರು. ಇವರಿಬ್ಬರೂ ದೇಸಿ ಸಾರಾಯಿಯನ್ನು ತಯಾರಿಸಿ ಮಾರಾಟ ಮಾಡಿ ಕುಟುಂಬವನ್ನು ಸಾಕುತ್ತಿದ್ದರು. ದಿನಕ್ಕೆ ನೂರು ರೂಪಾಯಿ ಸಿಗುತ್ತಿತ್ತು. ಕಬ್ಬಿನ ರವದಿಯಿಂದ ಮಾಡಿದ ಒಂದು ಸಣ್ಣ ಗುಡಿಸಲೇ ಇವರಿಗೆ ಅರಮನೆಯಾಗಿತ್ತು. ಅಂಥ ಕಡುಬಡತನದಲ್ಲೇ ಬೆಳೆದ ರಾಜೇಂದ್ರ ವೈದ್ಯರಾಗಿ, ಐಎಸ್ಐ ಅಧಿಕಾರಿಯಾಗುವವರೆಗಿನ ಸಾಧನೆಯನ್ನು ಅಕ್ಷ ರಗಳಲ್ಲಿಹಿಡಿದಿಡಲು ಸಾಧ್ಯವಿಲ್ಲ.

ರಾಜೇಂದ್ರ ಮತ್ತು ಅವರ ಸಹೋದರಿ ಅದೇ ಹಳ್ಳಿಯ ಜಿಲ್ಲಾ ಪರಿಷತ್ಶಾಲೆಗೆ ಹೋಗುತ್ತಿದ್ದರು. ಮತ್ತೊಬ್ಬ ಸಹೋದರ ಬುಡಕಟ್ಟು ಶಾಲೆಯಲ್ಲಿ ಕಲಿಯುತ್ತಿದ್ದರು. ರಾಜೇಂದ್ರ ಅವರು 5ನೇ ತರಗತಿಯಲ್ಲಿದ್ದಾಗ, ಅವರಲ್ಲಿದ್ದ ವಿಶಿಷ್ಟ ಪ್ರತಿಭೆಯನ್ನು ಶಿಕ್ಷಕರೊಬ್ಬರು ಗುರುತಿಸಿ, ತಾಯಿಗೆ ತಿಳಿಸಿದರು. ಯಾವುದೇ ಕಾರಣಕ್ಕೂ ರಾಜೇಂದ್ರ ವಿದ್ಯಾಭ್ಯಾಸವನ್ನು ಕಡಿತಗೊಳಿಸಿದಂತೆ ಕೇಳಿಕೊಂಡಿದ್ದರು. ಅಂದು ಅವರ ಕಂಡ ಪ್ರತಿಭೆ ಇಂದು ಜಗದ್ವಿಖ್ಯಾತವಾಗುತ್ತಿದೆ! ಬಳಿಕ ರಾಜೇಂದ್ರ ಅವರು ಜವಾಹರ ನವೋದಯ ವಿದ್ಯಾಲಯಕ್ಕೆ ಸೇರಿಕೊಂಡರು. ಈ ಶಾಲೆ ಅವರಿದ್ದ ಹಳ್ಳಿಯಿಂದ 15 ಕಿ.ಮೀ. ದೂರದಲ್ಲಿತ್ತು. ತಾಯಿ ಈಗಲೂ ದೇಸಿ ಸಾರಾಯಿ ಮಾರಾಟ ಮಾಡಿ ಮಕ್ಕಳ ಶಾಲೆ ಮತ್ತು ಕುಟಂಬದ ನಿರ್ವಹಣೆ ಮಾಡಬೇಕಾದ ಅನಿವಾರ್ಯತೆ ಇತ್ತು. ಆದರೆ, ನವೋದಯ ಶಾಲೆಯಿಂದ ರಾಜೇಂದ್ರ ಅವರ ಭವಿಷ್ಯವೇ  ಬದಲಾಯಿತು.

ಗಣಿತ ಮತ್ತು ವಿಜ್ಞಾನ ವಿಷಯಗಳತ್ತ ಆಸಕ್ತಿ ಬೆಳೆಸಿಕೊಂಡ ರಾಜೇಂದ್ರ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸುತ್ತಿದ್ದರು. 10 ಮತ್ತು 12ನೇ ತರಗತಿ ಬೋರ್ಡ್ಎಕ್ಸಾಮ್ನಲ್ಲಿ ಟಾಪರ್ಆಗಿದ್ದರು. ಪರಿಣಾಮ ವಿದ್ಯಾರ್ಥಿ ವೇತನ ಪಡೆದುಕೊಂಡು ಮುಂಬೈನ ಸೇಠ್ಜಿಎಸ್ಮೆಡಿಕಲ್ಕಾಲೇಜ್ಗೆ ಪ್ರವೇಶ ಪಡೆದುಕೊಂಡರು. ಬಾಲ್ಯದಿಂದಲೂ ಅವರಿಗೆ ವೈದ್ಯನಾಗಬೇಕೆಂಬ ಕನಸು. ಆದರೆ, ಅರಿವು ಹೆಚ್ಚಾಗುತ್ತಾ ಹೋದಂತೆ ತನ್ನ ಸುತ್ತಮುತ್ತ ಇರುವ ಜನರಿಗೆ ಜಾಗೃತಿ ಮೂಡಿಸುವುದು ಅಗತ್ಯ ಎಂಬುದನ್ನು ಮನಗಂಡ ರಾಜೇಂದ್ರ ಅವರು ವೈದ್ಯರಾದರೂ ನಾಗರಿಕ ಆಡಳಿತ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರು. ಹಾಗಾಗಿಯೇ ಎಂಬಿಬಿಎಸ್ಓದುತ್ತಿರುವಾಗಲೇ ನಾಗರಿಕ ಸೇವಾ ಪರೀಕ್ಷೆಗೂ ತಯಾರಿ ಮಾಡಲಾರಂಭಿಸಿದರು. ಪಟ್ಟಾಗಿ ಕೂತು ಯುಪಿಎಸ್ಸಿ ಎಕ್ಸಾಮ್ಗೆ ಸಿದ್ಧತೆ ಮಾಡಿಕೊಂಡರು. ವೈದ್ಯ ಕೋರ್ಸ್ಗೆ ಸಂಬಂಧಿಸಿದ ಅಧ್ಯಯನದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಾಗಿರುವ ಅಧ್ಯಯನವನ್ನು ಮುಂದುವರಿಸಿದರು. ಇದಕ್ಕಾಗಿ ಕಠಿಣ ಪರಿಶ್ರಮಪಟ್ಟರು.

ಯುಪಿಎಸ್ಸಿ ಎಕ್ಸಾಮ್ರಿಸಲ್ಟ್ಗೊತ್ತಾಗುವ ಹೊತ್ತಿಗೆ ರಾಜೇಂದ್ರ ಹಳ್ಳಿಯಲ್ಲಿದ್ದರು. ಅವರ ತಾಯಿಗೆ ಮಗ ಯಾವ ಪರೀಕ್ಷೆಯನ್ನು ಪಾಸು ಮಾಡಿದ್ದಾನೆಂಬುದರ ಬಗ್ಗೆ ಸಣ್ಣ ಕಲ್ಪನೆಯೂ ಇರಲಿಲ್ಲ. 2012ರಲ್ಲಿ ಫರೀದಾಬಾದ್ನಲ್ಲಿ ಐಆರ್ಎಸ್ಅಧಿಕಾರಿಯಾಗಿ ನಿಯುಕ್ತಿಗೊಂಡರು. ಈ ವೇಳೆ, 2ನೇ ಬಾರಿಗೆ ಯುಪಿಎಸ್ಸಿ ಎಕ್ಸಾಮ್ಬರೆದು, ಐಎಎಸ್ಹುದ್ದೆಗೆ ಆಯ್ಕೆಯಾದರು. 2015ರಲ್ಲಿ ನಾಂದೇಡ್ಜಿಲ್ಲೆಯಲ್ಲಿ ಅಸಿಸ್ಟೆಂಟ್ಕಲೆಕ್ಟರ್ಆಗಿ ಕೆಲಸ ಆರಂಭಿಸಿದರು. ಬಳಿಕ 2017ರಲ್ಲಿ ಸೋಲಾಪುರ ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾದರು. 2018ರಲ್ಲಿ ಅವರನ್ನು ನಂದೂರಬಾರ್ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಯಿತು.

ತಮ್ಮ ಸಂಘರ್ಷದ ಬದುಕಿನ ಜೀವನದ ಸಾರವನ್ನೇ ಸೃಜನಶೀಲ ಸಾಹಿತ್ಯವಾಗಿಸಿರುವ ರಾಜೇಂದ್ರಮಿ ಏಕ್ಸ್ವಪ್ನ ಪಹಿಲ್‌’ ಎಂಬ ಕೃತಿಯನ್ನು ರಚಿಸಿದ್ದಾರೆ. ಇದರಲ್ಲಿ ಮೂವರು ಮಕ್ಕಳನ್ನು ಬೆಳೆಸಲು ತಮ್ಮ ತಾಯಿ ಪಟ್ಟ ಕಷ್ಟ, ಸಂಘರ್ಷದ ಬದಕನ್ನು ಚಿತ್ರಿಸಿದ್ದಾರೆ. ರಾಜೇಂದ್ರ ಅವರು ಈಗ ತಾಯಿ, ಪತ್ನಿ ಮತ್ತು ಮಕ್ಕಳ ಜತೆ ಸರಕಾರ ನೀಡಿರುವ ಕ್ವಾರ್ಟರ್ಸ್ನಲ್ಲಿದ್ದಾರೆ. ನಂದೂರಬಾರ್ಜಿಲ್ಲಾಧಿಕಾರಿಯಾಗುವ ಮುಂಚೆ ಎಲ್ಲೆಲ್ಲಿ ಕೆಲಸ ಮಾಡಿದ್ದಾರೋ ಅಲ್ಲೆಲ್ಲ ತಮ್ಮ ದಕ್ಷ  ಕಾರ್ಯನಿರ್ವಹಣೆಯ ದಟ್ಟ ಪ್ರಭಾವವನ್ನು ಬಿಟ್ಟು ಬಂದಿದ್ದಾರೆ. ಸರಕಾರದ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಬಡವರು, ನಿರ್ಗತಿಕರ ಬದುಕನ್ನು ಸಹನೀಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಾಗಿಯೇ ಈಗಲೂ ಅವರನ್ನು ಜನರು ಸ್ಮರಿಸಿಕೊಳ್ಳುತ್ತಾರೆ. ಇಂಥ ಜಿಲ್ಲಾಧಿಕಾರಿ ಪ್ರತಿ ಜಿಲ್ಲೆಗೆ ಸಿಕ್ಕರೆ ಕೋವಿಡ್ಏನು, ಯಾವುದೇ ಸಮಸ್ಯೆಯನ್ನೂ ಆಡಳಿತ ಅನಾಯಸವಾಗಿ ಎದುರಿಸಬಹುದು.



ಸೋಮವಾರ, ಏಪ್ರಿಲ್ 26, 2021

Next Super star of Indian Cricket: 'ದೈವದತ್ತ' ಕ್ರಿಕೆಟ್‌ ಪ್ರತಿಭೆ

ಐಪಿಎಲ್‌ ಕ್ರಿಕೆಟ್‌ ಟೂರ್ನಿಯಲ್ಲಿಮಿಂಚುತ್ತಿರುವ ಕರ್ನಾಟಕದ ಎಡಗೈ ಬ್ಯಾಟ್ಸ್‌ಮನ್‌ ದೇವದತ್ತ ಪಡಿಕ್ಕಲ್‌ ಭಾರತೀಯ ಕ್ರಿಕೆಟ್‌ ತಂಡದ ಕದವನ್ನು ತಟ್ಟುತ್ತಿದ್ದಾರೆ. 


- ಮಲ್ಲಿಕಾರ್ಜುನ ತಿಪ್ಪಾರ

ದೇವದತ್‌ ಪಡಿಕ್ಕಲ್‌ ಅದ್ಭುತ ಪ್ರತಿಭೆ ಎನ್ನುವುದರಲ್ಲಿಅನುಮಾನವೇ ಇಲ್ಲ. ಭವಿಷ್ಯದ ಆಟಗಾರರಲ್ಲಿಅವರೂ ಒಬ್ಬರು.
- ವಿರಾಟ್‌ ಕೊಹ್ಲಿ ಭಾರತೀಯ ಕ್ರಿಕೆಟ್‌ ತಂಡದ ನಾಯಕ

ದೇವದತ್‌ ಪಡಿಕ್ಕಲ್‌ ಪ್ರಥಮ ದರ್ಜೆ ಹಾಗೂ ರಣಜಿ ಕ್ರಿಕೆಟ್‌ನಲ್ಲಿರನ್‌ ರಾಶಿಗಳನ್ನೇ ಗುಡ್ಡೆ ಹಾಕಿದ್ದಾರೆ. ಅವರಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯ‌ಕ್ಕೆ ಅನುಗುಣವಾಗಿ ಮುಂಬರುವ ದಿನಗಳಲ್ಲಿಕ್ರಿಕೆಟ್‌ನ ಯಾವುದಾದರೂ ಮಾದರಿಯಲ್ಲಿಭಾರತೀಯ ತಂಡವನ್ನು ಪ್ರತಿನಿಧಿಸಿದರೆ ಅಚ್ಚರಿಪಡಬೇಕಾಗಿಲ್ಲ.
- ಸುನೀಲ್‌ ಗವಾಸ್ಕರ್‌ ಮಾಜಿ ಕ್ರಿಕೆಟಿಗ

ಭಾರತೀಯ ಕ್ರಿಕೆಟ್‌ನ ಈ ಇಬ್ಬರು ದಿಗ್ಗಜರ ಮಾತುಗಳೇ ಕರ್ನಾಟಕದ ಪ್ರತಿಭಾವಂತ ದೇವದತ್‌ ಪಡಿಕ್ಕಲ್‌ ಕ್ರಿಕೆಟ್‌ ಬದುಕಿನ ಮುನ್ನುಡಿಗಳಾಗಿವೆ. ಕಳೆದ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌)ನಲ್ಲಿತನ್ನ ಬ್ಯಾಂಟಿಂಗ್‌ ಸ್ಥಿರ ಪ್ರದರ್ಶನದ ಮೂಲಕ ಕ್ರಿಕೆಟ್‌ ಪಂಡಿತರು, ಅಭಿಮಾನಿಗಳ ಗಮನ ಸೆಳೆದಿದ್ದ ದೇವದತ್‌, ಈ ಬಾರಿಯ ಐಪಿಎಲ್‌ನಲ್ಲಿ ತಮ್ಮ ಆಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದು ‘ಭಾರತೀಯ ಕ್ರಿಕೆಟ್‌ನ ಭವಿಷ್ಯದ ಸ್ಟಾರ್‌’ ಎಂಬುದನ್ನು ನಿರೂಪಿಸುತ್ತಿದ್ದಾರೆ. 

21 ವರ್ಷದ ಈ ಎಡಗೈ ಬ್ಯಾಟ್ಸ್‌ಮನ್‌ ಪಡಿಕ್ಕಲ್‌ ಆಟ ನೋಡುವುದೇ ಚೆಂದ. ಆಧುನಿಕ ಚುಟುಕು ಕ್ರಿಕೆಟ್‌ಗೆ ಬೇಕಾಗಿರುವ ಆಕ್ರಮಣಶೀಲತೆ ಮತ್ತು ತಾಂತ್ರಿಕವಾಗಿಯೂ ಪರಿಪೂರ್ಣ ಎನಿಸುವಂಥ ಆಟವನ್ನು ಅವರು ಮೈಗೂಡಿಸಿಕೊಂಡಿದ್ದಾರೆ. 6.3 ಅಡಿ ಎತ್ತರದ ದೇವದತ್‌, ಈಗ ಐಪಿಎಲ್‌ನಲ್ಲಿಆಡುತ್ತಿರುವ ವೈಭವವನ್ನು ನೋಡಿದರೆ, ಶೀಘ್ರವೇ ಭಾರತೀಯ ರಾಷ್ಟ್ರೀಯ ಕ್ರಿಕೆಟ್‌ ತಂಡದ ಬಾಗಿಲನ್ನು ತಟ್ಟದೇ ಇರಲಾರರು. ಆಯ್ಕೆಗಾರರಿಗೂ ಪಡಿಕ್ಕಲ್‌ ಅವರನ್ನು ಬಿಟ್ಟುಕೊಡಲು ಸಾಧ್ಯವಾಗದೇ ಇರಬಹುದು. ಸದ್ಯದ ಮಟ್ಟಿಗೆ, ಕ್ರಿಕೆಟ್‌ನ ಮೂರೂ ಫಾಮ್ರ್ಯಾಟ್‌ಗಳಲ್ಲಿ ಆರಂಭಿಕ ಸ್ಥಾನದಲ್ಲಿ ಘಟಾನುಘಟಿ ಕ್ರಿಕೆಟರ್ಸ್‌ ಇದ್ದಾರೆ. ಜೊತೆಗೆ, ಬೆಂಚ್‌ ಸ್ಟ್ರೆಂಥ್‌ ಕೂಡ ಬಲಿಷ್ಠವಾಗಿದೆ. ಹಾಗಿದ್ದೂ, ಪಡಿಕ್ಕಲ್‌ ತೋರುತ್ತಿರುವ ಗಮನಾರ್ಹ ಪ್ರದರ್ಶನವು ಅವರನ್ನು ಭಾರತೀಯ ಕ್ರಿಕೆಟ್‌ ತಂಡಕ್ಕೆ ಕರೆತರಬಹುದು. 

‘ಟೀಮ್‌ ಫಸ್ಟ್‌’ ಎಂಬ ಮನೋಭಾವ ಕೂಡ ಪಡಿಕ್ಕಲ್‌ ಅವರಲ್ಲಿ ಇರುವುದನ್ನು ನಾವು ಈ ಸೀಸನ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ನೋಡಿದೆವು. ಐಪಿಎಲ್‌ ವೃತ್ತಿಜೀವನದ ಮೊದಲನೇ ಶತಕ ಗಳಿಸುವ ಅವಕಾಶ ಸಿಕ್ಕರೂ, ಆಟ ಬೇಗನೆ ಮುಗಿಸುವಂತೆ ನಾಯಕ ವಿರಾಟ್‌ ಕೊಹ್ಲಿ ಅವರಲ್ಲಿ ಕೇಳಿಕೊಂಡಿದ್ದರಂತೆ ದೇವದತ್‌. ‘‘ನಾನು ಶತಕ ಗಳಿಸುವುದಕ್ಕಿಂತ ತಂಡ ಗೆಲ್ಲುವುದು ಮುಖ್ಯ,’’ ಎಂದು ದೇವದತ್‌ ಬಳಿಕ ಹೇಳಿದ್ದರು. ಇದು ಅವರಲ್ಲಿರುವ ಟೀಮ್‌ ಫಸ್ಟ್‌ ಎಂಬ ಮನೋಭಾವವನ್ನು ಸಾರಿ ಹೇಳುತ್ತದೆ. ವೃತ್ತಿಪರ ಕ್ರಿಕೆಟರ್‌ನಲ್ಲಿರಬೇಕಾದ ಗುಣವಿದು.

ಐಪಿಎಲ್‌ನಲ್ಲಿ ಮಿಂಚುತ್ತಿರುವ ದೇವದತ್‌ ಪಡಿಕ್ಕಲ್‌, ಕರ್ನಾಟಕದ ಪರವಾಗಿ ರಣಜಿ, ಲಿಸ್ಟ್‌ ಎ ಕ್ರಿಕೆಟ್‌ ಆಡುತ್ತಿದ್ದಾರೆ. ಕರ್ನಾಟಕ ಪ್ರೀಮಿಯಲ್‌ ಲೀಗ್‌(ಕೆಪಿಎಲ್‌)ನ ಬಳ್ಳಾರಿ ಟಸ್ಕರ್‌ ಪರವಾಗಿ 2017ರಲ್ಲಿಆಡಿದ್ದಾರೆ. 2019ರಲ್ಲಿಬೆಂಗಳೂರು ರಾಯಲ್‌ ಚಾಲೆಂಜರ್ಸ್‌(ಆರ್‌ಸಿಬಿ) ಅವರನ್ನು ತಂಡಕ್ಕೆ ಸೇರಿಸಿಕೊಂಡಿತು. 2020ರ ಐಪಿಎಲ್‌ ಟೂರ್ನಿಯಲ್ಲಿಆರ್‌ಸಿಬಿ ಪರವಾಗಿ ಓಪನಿಂಗ್‌ ಸ್ಥಾನಕ್ಕೆ ಲಗ್ಗೆ ಹಾಕಿದ ಪಡಿಕ್ಕಲ್‌ ಮೊದಲ ಮೂರು ಪಂದ್ಯಗಳಲ್ಲಿ50 ಪ್ಲಸ್‌ ರನ್‌ ಗಳಿಸಿ ದಾಖಲೆ ಬರೆದರು. ಭಾರತೀಯ ಕ್ರಿಕೆಟ್‌ ತಂಡದ ನಾಯಕ ಕೊಹ್ಲಿಯಂಥ ಆಟಗಾರರ ಜತೆ ಡ್ರೆಸ್ಸಿಂಗ್‌ ರೂಮ್‌ ಹಂಚಿಕೊಳ್ಳುವುದು ಯಾವುದೇ ಆಟಗಾರನಿಗೆ ದೊರೆಯುವ ಅದೃಷ್ಟವೇ ಸರಿ. ಅಂಥದ್ದರಲ್ಲಿ ಪಡಿಕ್ಕಲ್‌ಗೆ ಕೊಹ್ಲಿಜತೆ ಇನ್ನಿಂಗ್ಸ್‌ ಕೂಡ ಆರಂಭಿಸುವ ಅವಕಾಶ ದೊರೆತಿರುವುದು ಅವರಲ್ಲಿರುವ ಪರಿಪೂರ್ಣ ಕ್ರಿಕೆಟ್‌ ಅನ್ನು ಹೊರ ತರಲು ಸಾಧ್ಯವಾಯಿತು. ಕೊಹ್ಲಿಗಿಂತಲೂ ಪಡಿಕ್ಕಲ್‌ಗೆ ದೊಡ್ಡ ಮೆಂಟರ್‌ ಸಿಗಲು ಸಾಧ್ಯವೆ? ಈ ದೃಷ್ಟಿಯಲ್ಲಿ ನೋಡಿದರೆ ದೇವದತ್‌ ಅದೃಷ್ಟವಂತ.

ಪಡಿಕ್ಕಲ್‌ ಮೊದಲ ಸೀಸನ್‌ನಲ್ಲಿ ಆರ್‌ಸಿಬಿ ಪರ 15 ಪಂದ್ಯ ಆಡಿದ್ದಾರೆ. 124 ಸ್ಟ್ರೈಕ್‌ ರೇಟ್‌ನಲ್ಲಿ, 31.53 ಸರಾಸರಿಯಲ್ಲಿ 473 ರನ್‌ ಕಲೆ ಹಾಕಿದ್ದಾರೆ. ಯುವ ಕ್ರಿಕೆಟರ್‌ ತಂಡಕ್ಕೆ ಪದಾರ್ಪಣೆ ಮಾಡಿದ ಟೂರ್ನಿಯಲ್ಲಿ ಇಷ್ಟೊಂದು ಸರಾಸರಿ ಮತ್ತು ಸ್ಟ್ರೈಕ್‌ ರೇಟ್‌ನಲ್ಲಿರನ್‌ ಗಳಿಸುವುದೇನೂ ಸುಲಭವಲ್ಲ. ಆ ಆವೃತ್ತಿಯಲ್ಲಿ ಆರ್‌ಸಿಬಿ ಪರ ಪಡಿಕ್ಕಲ್‌ ಗರಿಷ್ಠ ಸ್ಕೋರರ್‌ ಆಗಿದ್ದರು. ಮೊದಲ ನಾಲ್ಕು ಪಂದ್ಯಗಳಲ್ಲಿ ಮೂರು 50 ರನ್‌ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಪಡಿಕ್ಕಲ್‌ಗೆ ಕೊರೊನಾ ಸೋಂಕು ತಗುಲಿದ್ದರಿಂದ ಈಗ ನಡೆಯುತ್ತಿರುವ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಆರ್‌ಸಿಬಿ ಪರ ಆಡಲು ಸಾಧ್ಯವಾಗಲಿಲ್ಲ. ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಅಂಗಣಕ್ಕೆ ಇಳಿದ ಪಡಿಕ್ಕಲ್‌ ತಮ್ಮ ನೈಜಸಾಮರ್ಥ್ಯ‌ ಪ್ರದರ್ಶಿಸಿದ್ದಾರೆ. ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಅವರ ಆಟವಂತೂ ಹಬ್ಬವಾಗಿತ್ತು. 

ಕೇರಳದ ಎಡಪ್ಪಾಳ್‌ ಎಂಬಲ್ಲಿ2000 ಜುಲೈ 7ರಂದು ದೇವದತ್‌ ಜನಿಸಿದರು. ತಂದೆ ಬಾಬು ಕುನ್ನಥ್‌ ಮತ್ತು ತಾಯಿ ಅಂಬಿಲಿ ಪಡಿಕ್ಕಲ್‌ ಅವರು ಬೆಂಗಳೂರಿಗೆ ತಮ್ಮ ನೆಲೆಯನ್ನು ಬದಲಾಯಿಸುವ ಮುನ್ನ ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದರು. 11ನೇ ವಯಸ್ಸಿನಲ್ಲಿ ದೇವದತ್‌ ಕ್ರಿಕೆಟ್‌ ಅನ್ನು ಗಂಭೀರವಾಗಿ ಪರಿಗಣಿಸಿ ಅಭ್ಯಾಸ ಆರಂಭಿಸಿದರು. ಕರ್ನಾಟಕ ಇನ್ಸ್‌ಟಿಟ್ಯೂಟ್‌ ಆಫ್‌ ಕ್ರಿಕೆಟ್‌ನಲ್ಲಿ 2014ರಿಂದ ತರಬೇತಿ ಪಡೆಯಲಾರಂಭಿಸಿದರು. ಅಂಡರ್‌ 16 ಮತ್ತು ಅಂಡರ್‌ 19 ಕ್ರಿಕೆಟ್‌ ವಿಭಾಗದಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. 

2018-19ರ ಸಾಲಿನಲ್ಲಿ ಕರ್ನಾಟಕದ ಪರವಾಗಿ ರಣಜಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. 2018ರಲ್ಲಿ ಆರ್‌ಸಿಬಿ ಮ್ಯಾನೇಜ್‌ಮೆಂಟ್‌ ಕಣ್ಣಿಗೆ ಬಿದ್ದ ದೇವದತ್‌ ಐಪಿಎಲ್‌ನಲ್ಲಿ ಆಡಲು ವೇದಿಕೆ ಸೃಷ್ಟಿಸಿಕೊಂಡರು. 2019ರ ಸೆ.26ರಂದು ಕರ್ನಾಟಕ ಪರವಾಗಿ ಲಿಸ್ಟ್‌ ಎ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ವಿಜಯ ಹಜಾರೆ ಪಂದ್ಯಾವಳಿಯಲ್ಲಿ ಕರ್ನಾಟಕದ ಪರ ಅತಿ ಹೆಚ್ಚು ರನ್‌ ಗಳಿಸಿದರು. ಈ ಟೂರ್ನಿಯಲ್ಲಿ 11 ಪಂದ್ಯಗಳಿಂದ 609 ರನ್‌ ಗಳಿಸಿ ಎಲ್ಲರ ಗಮನ ಸೆಳೆದರು. 2019ರ ಅಕ್ಟೋಬರ್‌ನಲ್ಲಿ ಭಾರತೀಯ ಎ ತಂಡದ ಸದಸ್ಯರಾದರು. 2019ರ ನವೆಂಬರ್‌ನಲ್ಲಿದೇಶಿ ಟ್ವೆಂಟಿ20ಗೂ ಅಡಿಯಿಟ್ಟರೂ. 2019-20ರ ಸಾಲಿನ ಮಸ್ತಾಕ್‌ ಅಲಿ ಟ್ರೋಫಿ ಟೂರ್ನಿಯಲ್ಲಿಕರ್ನಾಟಕವನ್ನು ಪ್ರತಿನಿಧಿಸಿದ್ದರು. ಮುಂದೆ 2021ರ ಸಾಲಿನ ಸಯ್ಯದ್‌ ಮಸ್ತಾಕ್‌ ಅಲಿ ಟ್ರೂಫಿ ಟೂರ್ನಿಗೆ ಕರ್ನಾಟಕ ತಂಡದ ಭಾಗವಾದರು.

ಗೌತಮ್‌ ಗಂಭೀರ್‌ ಅವರನ್ನು ಮೆಚ್ಚುವ ಪಡಿಕ್ಕಲ್‌ ಸದ್ಯ 15 ಪ್ರಥಮ ದರ್ಜೆ ಪಂದ್ಯಗಳನ್ನಾಡಿ 34.88ರ ಸರಾಸರಿಯಲ್ಲಿ907 ರನ್‌ ಕಲೆ ಹಾಕಿದ್ದಾರೆ. ಇದರಲ್ಲಿ ಹತ್ತು ಅರ್ಧ ಶತಕಗಳು ಸೇರಿವೆ. ಇನ್ನು 20 ಲಿಸ್ಟ್‌ ಎ ಕ್ರಿಕೆಟ್‌ ಪಂದ್ಯಗಳನ್ನಾಡಿರುವ ದೇವದತ್‌, 86.68ರ ಸರಾಸರಿಯಲ್ಲಿ1387 ರನ್‌ ಗಳಿಸಿದ್ದಾರೆ. ಇದರಲ್ಲಿ 6 ಶತಕ ಮತ್ತು 8 ಅರ್ಧ ಶತಕಗಳಿವೆ. 36 ಟ್ವೆಂಟಿ20 ಪಂದ್ಯಗಳನ್ನಾಡಿ, 45.41 ಸರಾಸರಿಯಲ್ಲಿ 1408 ರನ್‌ ಪೇರಿಸಿದ್ದಾರೆ. ತುಂಬ ಕಡಿಮೆ ಅವಧಿಯಲ್ಲಿಸಾಕಷ್ಟು ರನ್‌ ಗಳಿಸುವ ಮೂಲಕ ಕ್ರಿಕೆಟ್‌ ಪಂಡಿತರ ಮನಸ್ಸು ಗೆದ್ದಿದ್ದಾರೆ. 

ಐಪಿಎಲ್‌ನ ಪ್ರದರ್ಶನವಂತೂ ಅವರನ್ನು ಸ್ಟಾರ್‌ ಪಟ್ಟಕ್ಕೇರಿಸಿದೆ. ಶೀಘ್ರವೇ ಭಾರತೀಯ ಕ್ರಿಕೆಟ್‌ ತಂಡವನ್ನು ದೇವದತ್‌ ಪ್ರತಿನಿಧಿಸಬಹುದು ಎಂಬ ಭವಿಷ್ಯವನ್ನು ಬಹುತೇಕರು ನುಡಿಯುತ್ತಿದ್ದಾರೆ. ಜಿ.ಆರ್‌.ವಿಶ್ವನಾಥ, ರಾಹುಲ್‌ ದ್ರಾವಿಡ್‌ ಮತ್ತು ಕೆ.ಎಲ್‌ ರಾಹುಲ್‌  ಅವರಂಥ  ಬ್ಯಾಟ್ಸಮನ್‌ಗಳನ್ನು ನೀಡಿರುವ ಕರ್ನಾಟಕದಿಂದ ಮತ್ತೊಬ್ಬ ಪ್ರತಿಭಾನ್ವಿತ ಬ್ಯಾಟ್ಸಮನ್‌ ಆಗಿ ದೇವದತ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಂಚುವ ದಿನಗಳು ದೂರವಿಲ್ಲ. ದೇವದತ್‌ಗೆ ಈಗಿನ್ನೂ 21 ವರ್ಷ. ಅವರ ಮುಂದೆ ಬೇಕಾದಷ್ಟು ಕ್ರಿಕೆಟ್‌ ಜೀವನವಿದೆ.


ಈ ಲೇಖನವು ವಿಜಯ ಕರ್ನಾಟಕದ 2021ರ ಮೇ 25ರ ಸಂಚಿಕೆಯಲ್ಲಿ ಪ್ರಕಟವಾಗಿದೆ.


 

Chief Justice N V Ramana: ನ್ಯಾಯ ನಿಪುಣ ನ್ಯಾ.ರಮಣ

ಕಾನೂನು ಪಾಂಡಿತ್ಯ, ಸಮಚಿತ್ತ, ನ್ಯಾಯನಿಷ್ಠ ವ್ಯಕ್ತಿತ್ವದ ನ್ಯಾ. ಎನ್‌ ವಿ ರಮಣ ಅವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗುತ್ತಿರುವುದು ಈ ಕ್ಷ ಣದ ಅಗತ್ಯವೂ ಹೌದು.


- ಮಲ್ಲಿಕಾರ್ಜುನ ತಿಪ್ಪಾರ

ನ್ಯಾಯ ಪರಿಪಾಲನೆಯಲ್ಲಿನೈಪುಣ್ಯತೆಯನ್ನು ಸಾಧಿಸಿರುವ, ಅಪಾರ ಕಾನೂನು ಪಾಂಡಿತ್ಯವನ್ನು ಹೊಂದಿರುವ ನ್ಯಾ. ಎನ್‌ ವಿ ರಮಣ ಅವರು ದೇಶದ ಅಗ್ರ ನ್ಯಾಯಾಲಯ, ಸುಪ್ರೀಂ ಕೋರ್ಟ್‌ನ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ಬಹುಶಃ ಈ ಘನ ಹುದ್ದೆಗೆ ರಮಣ ಅವರು ಪ್ರತಿಶತ ಸಮರ್ಥನೀಯ ವ್ಯಕ್ತಿಯಾಗಿದ್ದಾಧಿರೆಂಬುದು ಕಾನೂನು ವಲಯದಲ್ಲಿಕೇಳಿ ಬರುತ್ತಿರುವ ಮೆಚ್ಚುಗೆ ಮಾತು. 

ಪತ್ರಿಕೆಯಲ್ಲಿ‘ಸುದ್ದಿ’ ಬರೆಯುತ್ತಿದ್ದ ರಮಣ ಅವರು ‘ತೀರ್ಪು’ ಬರೆಯುವವರೆಗೂ ತಲುಪಿದ ಜೀವನದ ಪಯಣವೂ ಸಾಕಷ್ಟು ರೋಚಕ ಹಾಗೂ ಸೂಧಿರ್ತಿದಾಯಕ. ರೈತನ ಮಗನೊಬ್ಬ ಇಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗುತ್ತಾರೆಂದರೆ ಅದು ಈ ದೇಶದ ಪ್ರಜಾಪ್ರಭುತ್ವದ ದೊಡ್ಡ ಶಕ್ತಿ; ಸಂವಿಧಾನ ಒದಗಿಸಿದ ಅವಕಾಶ. 

ಸದಾ ಶಾಂತಚಿತ್ತರಾಗಿರುವ ರಮಣ ನ್ಯಾಯ ಪರಿಪಾಲನೆಯಲ್ಲಿಮಾತ್ರ ಕಠೋರ. ನ್ಯಾಯದ ಹಾದಿಯಲ್ಲಿಎಷ್ಟೇ ಎಡರು ತೊಡರುಗಳು ಎದುರಾದರೂ ಅವರು ಎದೆಗುಂದಿದ ಪ್ರಕರಣವಿಲ್ಲ. ಸತ್ಯವನ್ನು ಯಾವುದೇ ಅಂಜಿಕೆ ಇಲ್ಲದೇ ಹೇಳಿದ್ದಾರೆ ಮತ್ತು ನಾಗರಿಕ ಹಕ್ಕುಗಳನ್ನು ಸಂರಕ್ಷಿಸಿದ್ದಾರೆ. ಇದಕ್ಕೆ ಉದಾಹರಣೆ ಎಂದರೆ; ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಬಳಿಕ ಕೇಂದ್ರ ಸರಕಾರ ಮುಂಜಾಗ್ರತಾ ಕ್ರಮವಾಗಿ ಇಂಟರ್ನೆಟ್‌ ಸೇವೆಯನ್ನು ಬಂದ್‌ ಮಾಡಿತ್ತು. ಸರಕಾರದ ನಿಷೇಧ ವರ್ಷಗಟ್ಟಲೆ ಮುಂದುವರಿಯಿತು ಮತ್ತು ಈ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದಾಗ, ಅದರ ವಿಚಾರಣೆ ನಡೆಸಿದ್ದು ಇದೇ ನ್ಯಾ. ಎನ್‌.ವಿ.ರಮಣ ನೇತೃತ್ವದ ಪೀಠ. ‘‘ಈ ಪ್ರಕರಣದಲ್ಲಿ ಅನಿರ್ದಿಷ್ಟಾವಧಿಗೆ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸುವುದು ಕಾನೂನುಬಾಹಿರವಾಗುತ್ತದೆ,’’ ಎಂದು ಹೇಳಿ, ಸಂವಿಧಾನದಡಿಯಲ್ಲಿ ಇಂಟರ್ನೆಟ್‌ ಸೇವೆಯೂ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವೇ ಆಗಿದೆ. ಹಾಗಾಗಿ, ಇಂಟರ್ನೆಟ್‌ ಕೂಡ ಮೂಲಭೂತ ಹಕ್ಕು ಎಂದು ಪೀಠ ಹೇಳಿತು ಮತ್ತು ಕಾಶ್ಮೀರ ಕಣಿವೆಯಲ್ಲಿ ಇಂಟರ್ನೆಟ್‌ ಸೇವೆ ಮರು ಆರಂಭಿಸಲು ಆದೇಶಿಸಿತು. 

ಇದೇ ರೀತಿಯ ಹಲವು ಐತಿಹಾಸಿಕ ತೀರ್ಪುಗಳನ್ನು ಅವರು ನೀಡಿದ್ದಾರೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಕಚೇರಿಯನ್ನು ಮಾಹಿತಿ ಹಕ್ಕು ಕಾಯಿದೆ(ಆರ್‌ಟಿಐ) ವ್ಯಾಪ್ತಿಗೆ ತರುವಲ್ಲಿ ಇವರು ನೀಡಿದ ತೀರ್ಪು ಕಾರಣ. ಉದ್ಯಮಿ ಹಾಗೂ ಆರ್‌ಟಿಐ ಕಾರ್ಯಕರ್ತ ಸುಭಾಶ್‌ಚಂದ್ರ ಅಗರ್ವಾಲ್‌ ಅವರು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ಆಸ್ತಿ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಗೆ(ಸಿಪಿಐಒ) ಆರ್‌ಟಿಐನಡಿ ಕೇಳಿಕೊಂಡಿದ್ದರು. ಆದರೆ, ಗೌಪ್ಯ ಮಾಹಿತಿ ಎಂಬ ಕಾರಣ ನೀಡಿ, ಈ ಅರ್ಜಿಯನ್ನು ಸಿಪಿಐಒ ವಜಾ ಮಾಡಿದರು. ಈ ಪ್ರಕರಣ ಕಡೆಗೆ ಸುಪ್ರೀಂ ಕೋರ್ಟ್‌ನ ಸಂವಿಧಾನಪೀಠಕ್ಕೆ ವರ್ಗವಾಗಿ, ಸುಪ್ರೀಂ ಕೋರ್ಟ್‌ ಕೂಡ ಸಾರ್ವಜನಿಕ ಕಚೇರಿಯಾಗಿರುವು­ದರಿಂದ 2005ರ ಮಾಹಿತಿ ಹಕ್ಕು ಕಾಯಿದೆ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಐತಿಹಾಸಿಕ ತೀರ್ಪು ಹೊರ ಬಿತ್ತು. ಈ ತೀರ್ಪಿನ ಹಿಂದೆ ನ್ಯಾ.ರಮಣ ಅವರ ಮಹತ್ತರ ಕಾಣಿಕೆ ಇದೆ. ಈ ತೀರ್ಪಿನೊಂದಿಗೆ ಹಾಲಿ ನ್ಯಾಯಮೂರ್ತಿ­ಗಳು ತಮ್ಮ ಆಸ್ತಿ ವಿವರವನ್ನು ಬಹಿರಂಗಗೊಳಿಸಬೇಕಾಯಿತು. 

ವಾಣಿಜ್ಯ ವ್ಯಾಜ್ಯಗಳನ್ನು ಬಗೆಹರಿಸುವಲ್ಲೂರಮಣರ ಕಾನೂನು ಪಾಂಡಿತ್ಯ ನೆರವಿಗೆ ಬಂದಿದೆ. ಅನೇಕ ಪ್ರಕರಣಗಳಲ್ಲಿ ಮೈಲುಗಲ್ಲುತೀರ್ಪುಗಳನ್ನು ನೀಡಿದ್ದಾರೆ. ಇದಕ್ಕೆ ವಿದ್ಯಾ ದ್ರೋಲಿಯಾ, ಅಲ್ಕನೋ ವರ್ಸಸ್‌ ಸಲೇಮ್‌ ಪ್ರಕರಣಗಳ ತೀರ್ಪನ್ನು ಉದಾಹರಣೆಯಾಗಿ ನೀಡಬಹುದು. ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾದ ಹಲವು ಪ್ರಕರಣಗಳಲ್ಲಿ ಅವರು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್‌ ಶಾಸಕರ ಅನರ್ಹ ಪ್ರಕರಣದಲ್ಲಿ, ಸ್ಪೀಕರ್‌ ನೀಡಿದ ತೀರ್ಮಾನವನ್ನು ಎತ್ತಿ ಹಿಡಿದಿದ್ದರು. 2019ರಲ್ಲಿ ಮಹಾರಾಷ್ಟ್ರದಲ್ಲಿಸರಕಾರ ರಚನೆ ಸಂಬಂಧ ಉಂಟಾಗಿದ್ದ ಬಿಕ್ಕಟ್ಟು ವೇಳೆ, ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿ ಸಂವಿಧಾನಬದ್ಧ ಪ್ರಕ್ರಿಯೆಗೆ ಅನುವು ಮಾಡಿಕೊಟ್ಟಿದ್ದರು.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗುವ ಮುಂಚೆ ರಮಣ, ಆಂಧ್ರಪ್ರದೇಶ ಹೈಕೋರ್ಟ್‌, ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ, ಆಂಧ್ರಪ್ರದೇಶ ರಾಜ್ಯ ಆಡಳಿತಾತ್ಮಕ ನ್ಯಾಯಾಧಿಕರಣ, ಸುಪ್ರೀಂ ಕೋರ್ಟ್‌ ನಲ್ಲಿ ವಕೀಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ವಕೀಲಿಕೆ ಮಾಡುವಾಗ ಸಾಂವಿಧಾನಿಕ, ಅಪರಾಧ, ಸೇವೆ ಮತ್ತು ಅಂತಾರಾಜ್ಯ ಕಾನೂನುಗಳ ವಿಷಯತಜ್ಞತೆಯನ್ನು ಸಾಧಿಸಿದ್ದರು. ಜೊತೆಗೆ ಸಿವಿಲ್‌, ಕ್ರಿಮಿನಲ್‌, ಲೇಬರ್‌, ಸವೀಸ್, ಚುನಾವಣಾ ಸಂಬಂಧಿಸಿದ ಪ್ರಕರಣಗಳನ್ನು ನಿರ್ವಹಿಸಿದ್ದಾರೆ. ಹಲವು ಕೇಸ್‌ಗಳಲ್ಲಿ ಕೇಂದ್ರ ಸರಕಾರ, ರೇಲ್ವೆಯನ್ನು ಪ್ರತಿನಿಧಿಸಿದ್ದಾರೆ. ಆಂಧ್ರಪ್ರದೇಶದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಆಗಿ ಕಾರ್ಯನಿರ್ವಹಿಸಿದ್ದಾರೆ. ವಕೀಲಿಕೆಯಲ್ಲಿ ಅಪಾರ ಅನುಭವವನ್ನು ಹೊಂದಿದ್ದ ಅವರನ್ನು 2000 ಜೂನ್‌ 27ರಂದು ಆಂಧ್ರಪ್ರದೇಶದ ಶಾಶ್ವತ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಯಿತು. 2013 ಮಾರ್ಚ್‌ 10ರಿಂದ 2013 ಮೇ 20ರವರೆಗೂ ಆಂಧ್ರಪ್ರದೇಶ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿಯೂ ಕೆಲಸ ಮಾಡಿದ್ದಾರೆ. ಬಳಿಕ ಅವರನ್ನು 2013 ಸೆಪ್ಟೆಂಬರ್‌ 2ರಂದು ದಿಲ್ಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಯಿತು. ಇದಾದ ಒಂದೇ ವರ್ಷದಲ್ಲಿ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ 2014 ಫೆಬ್ರವರಿ 17ರಂದು ನೇಮಕಗೊಂಡರು. 

ಅಪಾರ ಕಾನೂನು ಪಾಂಡಿತ್ಯ ಮತ್ತು ಸಮಚಿತ್ತ, ದೃಢ ನಿಲುವು ಹೊಂದಿದ ವ್ಯಕ್ತಿಯೊಬ್ಬರು ಮುಖ್ಯ ನ್ಯಾಯಮೂರ್ತಿ ಗಳಾಗುತ್ತಿರುವುದು ಈ ಕ್ಷ ಣದ ಅಗತ್ಯವೂ ಆಗಿತ್ತು. ಕಾನೂನು ಪ್ರೀತಿಸುವಷ್ಟೇ ಕಲೆ ಮತ್ತು ಸಾಹಿತ್ಯವನ್ನೂ ಇಷ್ಟ ಪಡುತ್ತಾರೆ. 

ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಪೊನ್ನಾವರಂ ಹಳ್ಳಿಯ ಕೃಷಿಕ ಕುಟುಂಬದಲ್ಲಿ ಎನ್‌ ವಿ ರಮಣ ಅವರು 1957 ಆಗಸ್ಟ್‌ 27ರಂದು ಜನಿಸಿದರು. ಇವರ ತಂದೆ ಗಣಪತಿ ರಾವ್‌ ಮತ್ತು ತಾಯಿ ಸರೋಜನಿ ದೇವಿ ಕೃಷಿಕರು. ಬಿಎಸ್‌ಸಿ ಪದವಿ ಪಡೆದ ನಂತರ ಕಾನೂನು ಪದವಿ ಸಂಪಾದಿಸಿದರು. 1975ರಲ್ಲಿ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿಧಿದಾಗ ರಮಣ ಅವರು ಒಂದು ಶೈಕ್ಷ ಣಿಕ ವರ್ಷವನ್ನು ತ್ಯಜಿಸಬೇಕಾದ ಪರಿಸ್ಥಿತಿ ಉಂಟಾಯಿತು. ಬಳಿಕ ಅವರು, ಎರಡು ವರ್ಷಗಳ ಕಾಲ ತೆಲುಗು ಪತ್ರಿಕೆಯೊಂದರಲ್ಲಿ ಕೆಲಸ ಮಾಡಿ, ನಂತರ ಕಾನೂನು ಪದವಿಯನ್ನು ಪಡೆದುಕೊಂಡು ವಕೀಲಿಕೆ ಆರಂಭಿಸಿದರು. ಪೊನ್ನಾವರಮ್‌ ಹಳ್ಳಿಯಿಂದ ವಕೀಲಿಕೆ ಆರಂಭಿಸಿದ ಮೊದಲಿಗರು ಇವರು. 

ವಿದ್ಯಾರ್ಥಿಯಾಗಿದ್ದಾಗಲೇ ರೈತರು, ಕಾರ್ಮಿಕರು ಮತ್ತು ಇತರ ಸಾಮಾಜಿಕ ಸಮಸ್ಯೆಗಳಿಗೆ ಸಂಬಂಧಿಸಿದ ಹೋರಾಟದಲ್ಲಿ ಪಾಲ್ಗೊಳ್ಳುವ ಮೂಲಕ ಸಾಮಾಜಿಕ ಕಾರ್ಯಕರ್ತರಾಗಿದ್ದರು. ನಾಗರಿಕರ ಹಕ್ಕುಗಳ ಪರವಾಗಿದ್ದರು. ವಿದ್ಯಾರ್ಥಿ ದಿಸೆಯಿಂದಲೇ ಅವರಲ್ಲಿ ಸಾಮಾಜಿಕ ಬದ್ಧತೆ ಮೈಗೂಡಿರುವುದನ್ನು ನಾವು ಕಾಣಬಹುದು ಮತ್ತು ಅದು ಅವರ ತೀರ್ಪುಗಳಲ್ಲಿ ಪ್ರತಿಫಲನವಾಗಿದೆ. ಸರಳ ಜೀವನವನ್ನು ಮೈಗೂಡಿಸಿಕೊಂಡಿ­ರುವ ನ್ಯಾ.ರಮಣ ನೈತಿಕವಾಗಿ ಯಾವುದಾದರೂ ವಿಷಯ ಸರಿ ಅಲ್ಲಎಂದು ತೋರಿದರೆ ಅದನ್ನು ಟೀಕಿಸುವುದರಲ್ಲಿಎಂದೂ ಹಿಂದೆ ಬಿದ್ದಿಲ್ಲ. ಇತ್ತೀಚೆಗೆ ಅವರು ನಮ್ಮ ದೇಶದ ಶಿಕ್ಷ ಣ ವ್ಯವಸ್ಥೆಗೆ ಬಗ್ಗೆ ಮಾಡಿದ ಟೀಕೆಯನ್ನು ಉದಾಹರಿಸಬಹುದು. 

ಇಷ್ಟೆಲ್ಲ ಹೆಗ್ಗಳಿಕೆಯ ಮಧ್ಯೆಯೂ ಅವರು ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದರು. ಆಂಧ್ರಪ್ರದೇಶದ ಸಿಎಂ ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರು, ಸುಪ್ರೀಂ ಕೋರ್ಟ್‌ನ ಸಿಜೆಐಗೆ ಪತ್ರ ಬರೆದು ರಮಣ ಹಾಗೂ ಅವರ ಸಂಬಂಧಿಕರು ಅಮರಾವತಿಯ ಭೂಸ್ವಾಧೀನದಲ್ಲಿ ಭ್ರಷ್ಟಾಚಾರ ಎಸಗುತ್ತಿದ್ದಾರೆ. ಜತೆಗೆ ತಮ್ಮ ಸರಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾ­ರೆಂದು ಆರೋಪಿಸಿದ್ದರು. ಈ ಪತ್ರ ಭಾರಿ ಸಂಚಲನವನ್ನೇ ಸೃಷ್ಟಿಸಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು. 

63 ವರ್ಷದ ನ್ಯಾ. ರಮಣ ಅವರು, ಏಪ್ರಿಲ್‌ 24ರಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಲಿದ್ದು, ಅವರ ಅಧಿಕಾರಾವಧಿ 2022 ಆಗಸ್ಟ್‌ 26ಕ್ಕೆ ಕೊನೆಗೊಳ್ಳಲಿದೆ. ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಮಾತ್ರವಲ್ಲದೆ ಅವರು ಸುಪ್ರೀಂ ಕೋರ್ಟ್‌ನ ಆಡಳಿತಾತ್ಮಕ ವ್ಯವಸ್ಥೆಯ ಮುಖ್ಯಸ್ಥರೂ ಆಗಿಯೂ ಕಾರ್ಯನಿರ್ವಹಿಸಬೇಕಾಗುತ್ತದೆ. ಅವರ ಮುಂದೆ ಸಾಕಷ್ಟು ಸವಾಲುಗಳಂತೂ ಇದ್ದೇ ಇವೆ.