ಮಂಗಳವಾರ, ಆಗಸ್ಟ್ 10, 2021

WhatsApp Web: ‘ವಾಟ್ಸ್‌ಆ್ಯಪ್‌ ವೆಬ್‌’ ಅಂತ್ಯ ಸನ್ನಿಹಿತವೇ?

- ಮಲ್ಲಿಕಾರ್ಜುನ ತಿಪ್ಪಾರ
ವಾಟ್ಸ್‌ಆ್ಯಪ್‌ ಈಗ ಕೇವಲ ಸಂವಹನದ ಸಾಧನವಾಗಿ ಉಳಿದಿಲ್ಲ. ನಮ್ಮೆಲ್ಲರ ಅಗತ್ಯಗಳನ್ನು ಪೂರೈಸುವ ಮೂಲಸೌಕರ್ಯ ಎನಿಸಿಕೊಂಡಿದೆ. ವಾಟ್ಸ್‌ಆ್ಯಪ್‌ ಇಲ್ಲದ ಬದುಕನ್ನು ನೆನೆಸಿಕೊಳ್ಳುವುದು ಕಷ್ಟ. ಅಷ್ಟರ ಮಟ್ಟಿಗೆ ವಾಟ್ಸ್‌ಆ್ಯಪ್‌ ನಮ್ಮ ಬದುಕಿನ ಅವಿಭಾಜ್ಯವಾಗಿದೆ.

ಸಂವಹನದ ಜತೆಗೆ ನಿತ್ಯದ ನಮ್ಮ ಕೆಲಸಗಳಿಗೆ ಅನುಕೂಲವಾಗುವ ರೀತಿಯಲ್ಲಿವಾಟ್ಸ್‌ಆ್ಯಪ್‌ ಅನೇಕ ಫೀಚರ್‌ಗಳನ್ನು ಒಳಗೊಂಡಿದೆ. ಆ ಪೈಕಿ ‘ವಾಟ್ಸ್‌ಆ್ಯಪ್‌ ವೆಬ್‌’ ಕೂಡ ಒಂದು. ಅಂದರೆ, ನಿಮ್ಮ ವಾಟ್ಸ್‌ಆ್ಯಪ್‌ 

ಅನ್ನು ಲ್ಯಾಪ್‌ಟಾಪ್‌ ಅಥವಾ ಡೆಸ್ಕ್‌ಟಾಪ್‌ನಲ್ಲೇ ಬಳಸುವುದು. ಇದರಿಂದ ವಾಟ್ಸ್‌ಆ್ಯಪ್‌ ಮೂಲಕ ನಡೆಯುವ ನಿಮ್ಮ ಕೆಲಸ ಬಹಳಷ್ಟು ಸುಲಭವಾಗುತ್ತದೆ. ಹಾಗಾಗಿಯೇ ಇತ್ತೀಚಿನ ವರ್ಷಗಳಲ್ಲಿ ವಾಟ್ಸ್‌ಆ್ಯಪ್‌ ವೆಬ್‌ ಫೀಚರ್‌ ಹೆಚ್ಚು ಬಳಕೆಯಾಗುತ್ತಿದೆ. ಆದರೆ, ಈ ಸೌಲಭ್ಯ ನಿಂತು ಹೋಗಲಿದೆಯಾ? ಇಂಥದೊಂದು ಅನುಮಾನ ಬರಲು ಕಾರಣವಿದೆ. ವಾಟ್ಸ್‌ಆ್ಯಪ್‌ ಮಲ್ಟಿ ಡಿವೈಸ್‌ ಸಪೋರ್ಟ್‌ ವೈಶಿಷ್ಟ್ಯವನ್ನು ಪರೀಕ್ಷಿಸುತ್ತಿದೆ. ಸದ್ಯ ಈ ಫೀಚರ್‌ ಬೀಟಾ ವರ್ಷನ್ನಲ್ಲಿದ್ದು, ನಿರ್ದಿಷ್ಟ ಬಳಕೆದಾರರಿಗೆ ಬಳಸಲು ಅವಕಾಶ ನೀಡಲಾಗಿದೆ.

ಏನಿದು ವಾಟ್ಸ್‌ಆ್ಯಪ್‌ ಮಲ್ಟಿ ಡಿವೈಸ್‌ ಎಂದು ನೀವು ಕೇಳಬಹುದು. ವಾಟ್ಸ್‌ಆ್ಯಪ್‌ ವೆಬ್‌ ಬಳಸಿಕೊಂಡು ಡೆಸ್ಕ್‌ಟಾಪ್‌ನಲ್ಲೂ ವಾಟ್ಸ್‌ಆ್ಯಪ್‌ ಹೇಗೆ ಬಳಸುತ್ತಿವೆಯೋ ಹಾಗೆಯೇ, ವಾಟ್ಸ್‌ಆ್ಯಪ್‌ ಅನ್ನು ನೀವು ನಾಲ್ಕು ಸಾಧನಗಳಲ್ಲಿ ಏಕಕಾಲಕ್ಕೆ ಬಳಸಬಹುದು! ಫೇಸ್‌ಬುಕ್‌ ಒಡೆತನದ ವಾಟ್ಸ್‌ಆ್ಯಪ್‌ ಈ ಫೀಚರ್‌ ಅನ್ನು ಶೀಘ್ರವೇ ಗ್ರಾಹಕರ ಬಳಕೆಗೆ ನೀಡುವ ಸಾಧ್ಯತೆಯಿದೆ.

ವಾಟ್ಸ್‌ಆ್ಯಪ್‌ ವೆಬ್‌ ಬಳಸುವಾಗ ಬಳಕೆದಾರರು ಒಂದಿಷ್ಟು ತೊಂದರೆಗಳನ್ನು ಎದುರಿಸುತ್ತಿದ್ದರು. ಅಂದರೆ, ನಿಮ್ಮ ಫೋನ್‌ ಇಂಟರ್ನೆಟ್‌ ಸಂಪರ್ಕದಿಂದ ಕಡಿತಗೊಂಡರೆ, ಬ್ಯಾಟರಿ ಖಾಲಿಯಾದರೆ ಆ ಕ್ಷ ಣದಿಂದ ನೀವು ಡೆಸ್ಕ್‌ಟಾಪ್‌ನಲ್ಲಿ ವಾಟ್ಸ್‌ಆ್ಯಪ್‌ ವೆಬ್‌ ಬಳಸಲು ಸಾಧ್ಯವಾಗುತ್ತಿರಲಿಲ್ಲ. ಬಹುಶಃ ವಾಟ್ಸ್‌ಆ್ಯಪ್‌ ಮಲ್ಟಿ ಡಿವೈಸ್‌ ವೈಶಿಷ್ಟ್ಯಪೂರ್ಣವಾಗಿ ಬಳಕೆದಾರರಿಗೆ ಸಿಗಲಾರಂಭಿಧಿಸಿಧಿದರೆ ಈ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂಬುದು ವಾಟ್ಸ್‌ಧಿಆ್ಯಪ್‌ನ ಅಭಿಪ್ರಾಯವಾಗಿದೆ. ವಾಟ್ಸ್‌ಧಿಆ್ಯಪ್‌ನಲ್ಲಿಇತ್ತೀಚೆಗೆ ಪರಿಚಯಿಸಲಾದ ಮಲ್ಟಿ-ಡಿವೈಸ್‌ ಬೀಟಾ ಪರೀಕ್ಷೆಯು ಬಳಕೆದಾರರ ಪ್ರಾಥಮಿಕ ಸಾಧನದಲ್ಲಿ(ಸ್ಮಾರ್ಟ್‌ಫೋನ್‌) ಮತ್ತು ಪ್ರಾಥಮಿಕ ಸಾಧನವು ಇಂಟರ್ನೆಟ್‌ ಸಂಪರ್ಕಿತಗೊಂಡಿಲ್ಲದಿದ್ದರೂ ಇತರ ನಾಲ್ಕು ಸಾಧನಗಳಲ್ಲಿಕೆಲಸ ಮಾಡಲು ಅವಕಾಶ ನೀಡುವ ಮೂಲಕ ಈ ಸಮಸ್ಯೆಯನ್ನು ನಿವಾರಿಸುತ್ತದೆ. ಆದಾಗ್ಯೂ, ಬಹು-ಸಾಧನ ಬೆಂಬಲವು ಹೊರಬಂದ ನಂತರ 

ವಾಟ್ಸ್‌ಆ್ಯಪ್‌ ವೆಬ್‌  ಫೀಚರ್‌ ಭವಿಷ್ಯ ಏನು ಎಂಬ ಪ್ರಶ್ನೆ ಇನ್ನೂ ಸ್ಪಷ್ಟವಾದ ಉತ್ತರ ಸಿಕ್ಕಿಲ್ಲ. ವಾಟ್ಸ್‌ಆ್ಯಪ್‌ ವೆಬ್‌ ಬಳಕೆದಾರರಿಗೆ ಒಂದು ಪ್ರಮುಖ ವೇದಿಕೆಯಾಗಿ ಉಳಿದಿದೆ. ಇಲ್ಲಿಯವರೆಗೆ, ವಾಟ್ಸ್‌ಆ್ಯಪ್‌ ಅನ್ನು ಒಂದು ಸಮಯದಲ್ಲಿಒಂದು ಸಾಧನದಲ್ಲಿ

ಮಾತ್ರ ಬಳಸಬಹುದಿತ್ತು. ಡೆಸ್ಕ್‌ಟಾಪ್‌ ಮತ್ತು ವೆಬ್‌ ಬೆಂಬಲವು ನಿಮ್ಮ ಫೋನ್‌ ಅನ್ನು ಪ್ರತಿಬಿಂಬಿಸುವ ಮೂಲಕ ಮಾತ್ರ ಕಾರ್ಯನಿರ್ವಹಿಸುತ್ತದೆ. ಅಂದರೆ ನಿಮ್ಮ ಫೋನ್‌ ಆನ್‌ ಆಗಿರಬೇಕು ಮತ್ತು ಸಕ್ರಿಯ ಇಂಟರ್ನೆಟ್‌ ಸಂಪರ್ಕವನ್ನು ಹೊಂದಿ­ರ­ಬೇಕು. ಆಗಲೇ ಅದು ಕಾರ್ಯ­ನಿರ್ವಹಿಸಲು ಸಾಧ್ಯವಾಗುತ್ತದೆ.

ಮಲ್ಟಿ ಡಿವೈಸ್‌ ಬೆಂಬಲ ಸಕ್ರಿಯವಾದ ಬಳಕೆದಾರರಿಗೆ ಇನ್ನೂ ನಾಲ್ಕು ಸಾಧನಗಳನ್ನು ಸೇರಿಸಲು ಸಾಧ್ಯವಾಗುತ್ತದೆ. ಆದರೆ ವಾಟ್ಸ್‌ ಆ್ಯಪ್‌ ವೆಬ…, ವಾಟ್ಸ್‌ಆ್ಯಪ್‌ ಡೆಸ್ಕ್‌ಟಾಪ್‌ ಅಥವಾ ಫೇಸ್‌ಬುಕ್‌ ಪೋರ್ಟಲ್‌ಗಳನ್ನು ಮಾತ್ರ ಸೇರಿಸಬಹುದು. ಕಂಪನಿಯು ನಂತರದ ಹಂತದಲ್ಲಿಹೆಚ್ಚುವರಿ ಸಾಧನಗಳನ್ನು (ಸ್ಮಾರ್ಟ್‌ಫೋನ್‌ಗಳು ಅಥವಾ ಟ್ಯಾಬ್ಲೆಟ್‌ಗಳಂಥ) ಸೇರಿಸಲು ಬೆಂಬಲವನ್ನು ಸೇರಿಸಬಹುದು ಎನ್ನಲಾಗುತ್ತಿದೆ.

ಸದ್ಯದ ಪರಿಸ್ಥಿತಿಯನ್ನು ಆಧರಿಸಿ ಹೇಳುವುದಾದರೆ ವಾಟ್ಸ್‌ಆ್ಯಪ್‌ ವೆಬ್‌ ಫೀಚರ್‌ ಇರಲಿದೆ. ಜೊತೆಗೆ, ವಾಟ್ಸ್‌ಆ್ಯಪ್‌ ಮಲ್ಟಿ ಸಪೋರ್ಟ್‌ ಸಕ್ರಿಯಗೊಂಡ ಬಳಿಕ ಅದು ಎದುರಿಸುತ್ತಿದ್ದ ಸಮಸ್ಯೆಗಳೂ ನೀಗಲಿವೆ. ಜೊತೆಗೆ, ಒಂದಕ್ಕಿಂತ ಹೆಚ್ಚು ಸಾಧನಗಳಲ್ಲಿವಾಟ್ಸ್‌ಆ್ಯಪ್‌ ಬಳಸಲು ಸಾಧ್ಯವಾಗುವುದರಿಂದ, ಅದರ ಬಳಕೆಯ ಸಾಧ್ಯತೆಗಳು ಇನ್ನೂ ಹೆಚ್ಚಾಗಲಿವೆ.

ಭಾರತದಲ್ಲೇ 39 ಕೋಟಿ ಬಳಕೆದಾರರನ್ನು ಹೊಂದಿರುವ ವಾಟ್ಸ್‌ಆ್ಯಪ್‌ ಸಂವಹನಕ್ಕಾಗಿ ಮಾತ್ರವಲ್ಲದೇ ಬಿಸಿನೆಸ್‌, ಹಣಕಾಸಿನ ಸೇವೆಗೂ ಬಳಕೆಯಾಗುತ್ತಿದೆ. ಹಾಗಾಗಿ, ಅದು ತನ್ನ ಬಳಕೆದಾರರ ಅನುಕೂಲಕ್ಕೆ ತಕ್ಕ ಹಾಗೆ ಫೀಚರ್‌ಗಳನ್ನು ಅಭಿವೃದ್ಧಿಪಡಿಸಿ, ಬಳಕೆಯ ಅನುಭವವನ್ನು ಹೆಚ್ಚಿಸುತ್ತಿದೆ. ವಾಟ್ಸ್‌ಆ್ಯಪ್‌ ಮಲ್ಟಿ ಡಿವೈಸ್‌ ಸಪೋರ್ಟ್‌ ಕೂಡ ಅದೇ ಹಾದಿಯಲ್ಲಿದೆ.

ಈ ಲೇಖನವು ವಿಜಯ ಕರ್ನಾಟಕದ 2021 ಆಗಸ್ಟ್ 9ರ ಸಂಚಿಕೆಯಲ್ಲಿ ಪ್ರಕಟವಾಗಿದೆ.

ಭಾನುವಾರ, ಆಗಸ್ಟ್ 1, 2021

Billionaire investor Rakesh Jhunjhunwala: 'ಷೇರುಪೇಟೆ ಸರದಾರ'ನ ವಿಮಾನಯಾನ

‘ಭಾರತೀಯ ವಾರೆನ್‌ ಬಫೆಟ್‌’ ರಾಕೇಶ್‌ ಜುಂಜುನ್‌ವಾಲಾ ಅವರೀಗ ‘ಆಕಾಶ’ಕ್ಕೆ ಏಣಿ ಹಾಕಲು ಅಣಿಯಾಗುತ್ತಿದ್ದಾರೆ. ಷೇರುಪೇಟೆ ಚತುರ ಹೂಡಿಕೆದಾರನ ವಿಮಾನಯಾನ ಸಂಸ್ಥೆಗೆ ಸಕ್ಸೆಸ್‌ ಸಿಗುತ್ತಾ? 


-ಮಲ್ಲಿಕಾರ್ಜುನ ತಿಪ್ಪಾರ
ಷೇರುಪೇಟೆ ವಹಿವಾಟು ಬಲ್ಲವರಿಗೆ, ಹೂಡಿಕೆದಾರರ ವಲಯಕ್ಕೆ  ರಾಕೇಶ್‌ ಜುಂಜುನ್‌ವಾಲಾ ಚಿರಪರಿಚಿತ ಹೆಸರು. ಆದರೆ, ಸಾಮಾನ್ಯರಿಗೆ ಅವರ ಬಗ್ಗೆ ಗೊತ್ತಾಗಿದ್ದು ಅಗ್ಗದ ವಿಮಾನಯಾನ ಸಂಸ್ಥೆ ಆರಂಭಿಸುವ ಬಗ್ಗೆ ಘೋಷಣೆ ಮಾಡಿದಾಗಲೇ!

‘ಭಾರತದ ವಾರೆನ್‌ ಬಫೆಟ್‌’ ಎಂದು ಕರೆಸಿಕೊಳ್ಳುವ 61 ವರ್ಷದ ಈ ಚಾಣಾಕ್ಷ  ಹೂಡಿಕೆದಾರ ಇಡುವ ನಡೆಗಳೇ ನಿಗೂಢ. ಅವರ ಈ ಗುಣಕ್ಕೆ ಅಲ್ಟ್ರಾ ಲೋ ಕಾಸ್ಟ್‌ ಏರ್‌ಲೈನ್‌ ಸ್ಥಾಪನೆಯೇ ಘೋಷಣೆಯೇ ಸಾಕ್ಷಿ. ಯಾಕೆಂದರೆ, ಕೋವಿಡ್‌ ಸಾಂಕ್ರಾಮಿಕ ಪರಿಸ್ಥಿತಿಯಿಂದಾಗಿ ಇಡೀ ವಿಮಾನಯಾನ ವಲಯದ ಮೇಲೆ ‘ಆಕಾಶ’ವೇ ಕಳಚಿ ಬಿದ್ದಿದೆ. ಅದರಿಂದ ಹೊರಬರಲು ಹರಸಾಹಸ ಪಡುತ್ತಿದೆ. ಸಾಂಕ್ರಾಮಿಕ ಪರಿಸ್ಥಿತಿ ಶುರುವಾಗುವ ಕೆಲವು ವರ್ಷಗಳ ಮೊದಲೇ ಕಿಂಗ್‌ ಫಿಶರ್‌ ಸಂಸ್ಥೆ ಬಾಗಿಲು ಹಾಕಿದ್ದರೆ, 2019ರಲ್ಲಿಜೆಟ್‌ ಏರ್‌ವೇಸ್‌ ಕೂಡ ಸೇವೆ ರದ್ದುಪಡಿಸಿತ್ತು. ಜೊತೆಗೆ, ಸರಕಾರಿ ಸ್ವಾಮ್ಯದ ಏರ್‌ ಇಂಡಿಯಾ ಕೂಡ ಲಾಭದಲ್ಲಿಲ್ಲ. ಟಾಟಾ ಒಡೆತನದ ವಿಸ್ತಾರ, ಸ್ಪೈಸ್‌ಜೆಟ್‌, ಇಂಡಿಗೋ, ಏರ್‌ ಏಷ್ಯಾ ಸೇರಿ ಕೆಲವು ಸಂಸ್ಥೆಗಳು ಸೇವೆಯನ್ನು ಒದಗಿಸುತ್ತಿವೆ. ಬಹುಶಃ ಕೊರೊನಾದಿಂದ ಅತಿ ಹೆಚ್ಚು ಹೊಡೆತ ಬಿದ್ದಿರುವುದು ವಿಮಾನಯಾನ ಕ್ಷೇತ್ರದ ಮೇಲೆ. ಹಾಗಾಗಿ, ಈ ಕ್ಷೇತ್ರದಲ್ಲಿಹೂಡಿಕೆ ಮಾಡುತ್ತಿರುವ ‘ಬಿಗ್‌ ಬುಲ್‌’ ರಾಕೇಶ್‌ ಜುಂಜುನ್‌ವಾಲಾ ಅವರ ನಡೆ ಹೆಚ್ಚು ಚರ್ಚೆಗೆ ಒಳಗಾಗುತ್ತಿದೆ.

ಇಂಥ ವಿಷಮ ಪರಿಸ್ಥಿತಿಯಲ್ಲಿ ಈತ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಆರಂಭಿಸಲು ಹೊರಟಿದ್ದಾರೆ ಎಂದರೆ ಅವರ ಲೆಕ್ಕಾಚಾರದ ಬಗ್ಗೆ ಯೋಚಿಸಲೇಬೇಕಾಗುತ್ತದೆ. ಅವರ ಈ ಸಾಹಸಕ್ಕೆ ಇಂಡಿಗೋ ಹಾಗೂ ಜೆಟ್‌ವೇಸ್‌ನ ಮಾಜಿ ಅಧಿಕಾರಿಗಳೂ ಸಾಥ್‌ ನೀಡುತ್ತಿದ್ದಾರೆ. ತಾವು ಸ್ಥಾಪಿಸಲು ಹೊರಟಿರುವ ವಿಮಾನಯಾನ ಸಂಸ್ಥೆಗೆ ರಾಕೇಶ್‌, ‘ಆಕಾಶ್‌ ಏರ್‌’ ಎಂದು ನಾಮಕರಣ ಮಾಡಲಿದ್ದಾರೆ. ಈ ಸಂಸ್ಥೆಯಲ್ಲಿಅವರು ಶೇ.40 ಪಾಲು ಹೊಂದಲಿದ್ದಾರೆ. ಕೆಲವೇ ದಿನಗಳಲ್ಲಿಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಒಪ್ಪಿಗೆ ನೀಡುವ ಸಾಧ್ಯತೆಯೂ ಇದೆ.

ದೊಡ್ಡ ವಿಮಾನ ತಯಾರಿಕಾ ಕಂಪನಿ ಎನಿಸಿಕೊಂಡಿರುವ ಬೋಯಿಂಗ್‌ ಭಾರತೀಯ ಆಕಾಶದಲ್ಲಿಮತ್ತೆ ರೆಕ್ಕೆ ಬಿಚ್ಚಲು ಜುಂಜುನ್‌ವಾಲಾ ಆರಂಭಿಸಲಿರುವ ಸಂಸ್ಥೆ ಬಲ ನೀಡುವ ಸಾಧ್ಯತೆ ಇದೆ. ಯಾಕೆಂದರೆ, ಭಾರತದಲ್ಲಿಜೆಟ್‌ ಏರ್‌ವೇಸ್‌ ಬೋಯಿಂಗ್‌ನ ಅತಿ ದೊಡ್ಡ ಗ್ರಾಹಕನಾಗಿತ್ತು. ಅದು ಬಾಗಿಲು ಹಾಕಿದ ಮೇಲೆ ಭಾರತದಲ್ಲಿಸ್ಪೈಸ್‌ಜೆಟ್‌ ಬಿಟ್ಟು ಬೋಯಿಂಗ್‌ಗೆ ಅಂಥ ಹೇಳಿಕೊಳ್ಳುವ ಗ್ರಾಹಕರಿರಲಿಲ್ಲ. ಉಳಿದ ವಿಯಾನಯಾನ ಕಂಪನಿಗಳು, ಏರ್‌ಬಸ್‌ ತಯಾರಿಸುವ ಕಡಿಮೆ ಅಗಲದ ವಿಮಾನಗಳನ್ನೇ ಹೆಚ್ಚಾಗಿ ಬಳಸುತ್ತಿವೆ. ಹಾಗಾಗಿ, ‘ಆಕಾಶ್‌ ಏರ್‌’ನಿಂದಾಗಿ ಭಾರತೀಯ ಆಕಾಶದಲ್ಲಿಬೋಯಿಂಗ್‌ ವರ್ಸಸ್‌ ಏರ್‌ಬಸ್‌ ಸ್ಪರ್ಧೆಯನ್ನು ಮತ್ತೆ ಕಾಣಬಹುದು. ಮುಂದಿನ ನಾಲ್ಕು ವರ್ಷಗಳಲ್ಲಿ180 ಆಸನಗಳುಳ್ಳ ಸುಮಾರು 70 ವಿಮಾನಗಳನ್ನು ಖರೀದಿಸುವ ಗುರಿಯನ್ನು ಅವರು ಹಾಕಿಕೊಂಡಿದ್ದಾರೆ.

‘ಫೋರ್ಬ್ಸ್‌ ಇಂಡಿಯಾ’ ಪ್ರಕಾರ ರಾಕೇಶ್‌ ಭಾರತದ 48ನೇ ಶ್ರೀಮಂತ ವ್ಯಕ್ತಿ. ಸುಮಾರು 34,387 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಸಾಧಾರಣ ವ್ಯಕ್ತಿಯೊಬ್ಬ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿರುವ ಕತೆಯೂ ರಣರೋಚಕವಾಗಿದೆ. ರಾಕೇಶ್‌ ಅವರ ತಂದೆ ಮುಂಬೈಯಲ್ಲಿಆದಾಯ ತೆರಿಗೆ ಅಧಿಕಾರಿಯಾಗಿದ್ದರು. ಇವರದ್ದು ಮಧ್ಯಮ ವರ್ಗದ ಕುಟುಂಬ. ರಾಕೇಶ್‌ ಹುಟ್ಟಿದ್ದು 1960 ಜುಲೈ 5ರಂದು ಇಂದಿನ ತೆಲಂಗಾಣದ ಹೈದ್ರಾಬಾದ್‌ನಲ್ಲಿ. ಬೆಳೆದಿದ್ದೆಲ್ಲಮುಂಬಯಿಯಲ್ಲಿ. ತಂದೆ ಆದಾಯ ತೆರಿಗೆ ಅಧಿಕಾರಿಯಾಗಿದ್ದರಿಂದ ಮನೆಯಲ್ಲಿಷೇರು ಪೇಟೆ ಬಗೆಗಿನ ಮಾತುಕತೆಗಳು ಸಾಮಾನ್ಯವಾಗಿದ್ದವು. ಅದು ಯುವಕ ರಾಕೇಶ್‌ ಕಿವಿಯ ಮೇಲೆ ಬೀಳುತ್ತಿತ್ತು. ಪರಿಣಾಮ ಕಾಲೇಜಿನಲ್ಲಿರುವಾಗಲೇ ರಾಕೇಶ್‌ಗೆ ಷೇರು ಪೇಟೆ ವ್ಯವಹಾರ, ಹೂಡಿಕೆಯ ಮೇಲೆ ಆಸಕ್ತಿ ಬೆಳೆಯಿತು. 1985ರಲ್ಲಿಸಿಡನ್‌ಹಮ್‌ ಕಾಲೇಜಿನಿಂದ ಪದವಿ ಪಡೆದ ಬಳಿಕ ಇನ್ಸ್‌ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟಂಟ್‌ ಆಫ್‌ ಇಂಡಿಯಾ ಸಂಸ್ಥೆ ಸೇರಿದರು. 

1986ರಲ್ಲಿಅವರು ಕೇವಲ 43 ರೂಪಾಯಿಗೆ 5000 ಟಾಟಾ ಟೀ ಷೇರುಗಳನ್ನು ಖರೀದಿಸಿದ್ದರು. ಮೂರು ತಿಂಗಳ ಬಳಿಕ ಷೇರು ಮೌಲ್ಯ 143 ರೂ.ಗೆ ಏರಿಕೆಯಾಯಿತು. ಹೂಡಿಕೆಗೆಗಿಂತ ಮೂರು ಪಟ್ಟು ಲಾಭ ಮಾಡಿಕೊಂಡ ರಾಕೇಶ್‌ ಮುಂದಿನ ಮೂರು ವರ್ಷಗಳಲ್ಲಿಷೇರು ಹೂಡಿಕೆಗಳಲ್ಲಿ20ರಿಂದ 25 ಲಕ್ಷ  ರೂಪಾಯಿ ಲಾಭ ಮಾಡಿಕೊಂಡರಂತೆ!

1987ರಲ್ಲಿರಾಕೇಶ್‌ ಅವರು ರೇಖಾ ಎಂಬವರನ್ನು ವಿವಾಹವಾದರು. ಪತ್ನಿ ಕೂಡ ಷೇರು ಪೇಟೆ ಹೂಡಿಕೆದಾರೆ. 2003ರಲ್ಲಿಇವರಿಬ್ಬರು ತಮ್ಮದೇ ಸ್ಟಾಕ್‌ ಟ್ರೇಡಿಂಗ್‌ ಕಂಪನಿ ಶುರು ಮಾಡಿದರು. ಅದಕ್ಕೆ ತಮ್ಮಿಬ್ಬರ ಹೆಸರಿನ ಮೊದಲನೇ ಅಕ್ಷ ರಗಳನ್ನು ಸೇರಿಸಿ ‘ರೇರಾ(್ಕಛ್ಟಿa) ಎಂಟರ್‌ಪ್ರೈಸಸ್‌’ ಎಂದು ಕರೆದಿದ್ದಾರೆ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಷೇರುಪೇಟೆ ವ್ಯವಹಾರದಲ್ಲಿರಾಕೇಶ್‌ ಅವರನ್ನೇ ಅನುಸರಿಸುವ ಬಹುದೊಡ್ಡ ವರ್ಗವೇ ಇದೆ. ಅವರ ಒಂದು ಸಣ್ಣ ಇಶಾರೆಯೂ ಕಂಪನಕ್ಕೆ ಕಾರಣವಾಗುತ್ತದೆ. ತಮ್ಮ ಖಾಸಗಿ ರೇರಾ ಸ್ಟಾಕ್‌ ಟ್ರೇಡಿಂಗ್‌ ಕಂಪನಿ ಮೂಲಕ ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಟೈಟನ್‌, ಕ್ರಿಸಿಲ್‌, ಅರಬಿಂದೋ ಫಾರ್ಮಾ, ಪ್ರಜ್‌ ಇಂಡಸ್ಟ್ರೀಜ್‌, ಎನ್‌ಸಿಸಿ, ಆಪ್ಟೇಕ್‌ ಲಿ., ಅಯಾನ್‌ ಎಕ್ಸ್‌ಚೇಂಜ್‌, ಎಂಸಿಎಕ್ಸ್‌, ಫೋರ್ಟಿಸ್‌ ಹೆಲ್ತ್‌ಕೇರ್‌, ಲುಪಿನ್‌, ವಿಐಪಿ ಇಂಡಸ್ಟ್ರೀಜ್‌, ಜಿಯೋಜಿತ್‌ ಫೈನಾನ್ಷಿಯಲ್‌ ಸವೀರ್‍ಸಸ್‌, ರಾರ‍ಯಲಿಸ್‌ ಇಂಡಿಯಾ, ಜುಬಿಲಿಯೆಂಟ್‌ ಲೈಫ್‌ ಸೈನ್ಸೀಸ್‌, ಸ್ಟಾರ್‌ ಹೆಲ್ತ್‌ ಇನ್ಶೂರೆನ್ಸ್‌ ಹೀಗೆ ಹಲವಾರು ಕಂಪನಿಗಳಲ್ಲಿರಾಕೇಶ್‌ ಹೂಡಿಕೆ ಮಾಡಿದ್ದಾರೆ. ಜೊತೆಗೆ, ಷೇರು ವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆಯನ್ನೂ ಎದುರಿಸುತ್ತಿದ್ದಾರೆ!

ಷೇರುಪೇಟೆ ಬಿಟ್ಟು ಅವರ ಮತ್ತೊಂದು ಆಸಕ್ತಿಯ ಕ್ಷೇತ್ರ ಬಾಲಿವುಡ್‌. ಹಲವು ಹಿಂದಿ ಚಿತ್ರಗಳನ್ನು ನಿರ್ಮಿಸಿದ್ದಾರೆ. ಶ್ರೀದೇವಿ ಅಭಿಯನದ ‘ಇಂಗ್ಲಿಷ್‌ ವಿಂಗ್ಲಿಷ್‌’, ಕರಿನಾ ಕಪೂರ್‌ ಅಭಿನಯದ ‘ಕೀ ಆ್ಯಂಡ್‌ ಕಾ’ ಚಿತ್ರಗಳನ್ನು ಹೆಸರಿಸಬಹುದು. ರಾಕೇಶ್‌ ಮಾನವ ಹಿತಾಕಾಂಕ್ಷಿ ಆಗಿಯೂ ಹೆಸರುವಾಸಿಯಾಗಿದ್ದಾರೆ. ವಿಶೇಷವಾಗಿ ಷೌಷ್ಟಿಕತೆ ಮತ್ತು ಶಿಕ್ಷ ಣಕ್ಕೆ ಸಂಬಂಧಿಸಿ ತೊಡಗಿಸಿಕೊಂಡಿದ್ದಾರೆ. ತಮ್ಮ ಆದಾಯದ ಶೇ.25ರಷ್ಟು ಹಣವನ್ನು ಸಮಾಜಮುಖಿ ಕೆಲಸಗಳಿಗೆ ಬಳುಸುತ್ತಿದ್ದಾರೆ. ಕ್ಯಾನ್ಸರ್‌ಪೀಡಿತ ಮಕ್ಕಳಿಗೆ ಆಶ್ರಯ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ಜಾಗೃತಿ ಮೂಡಿಸುವ ಸಂಸ್ಥೆಗಳಿಗೆ ಸಹಾಯ ಮಾಡುತ್ತಿದ್ದಾರೆ. ಮುಂಬೈಯಲ್ಲಿಕಣ್ಣಿನ ಆಸ್ಪತ್ರೆ ಕಟ್ಟಿಸಿ ಅದರ ಮೂಲಕ ಉಚಿತವಾಗಿ 15,000 ಕಣ್ಣಿನ ಚಿಕಿತ್ಸೆ ನಡೆಸುವ ಗುರಿ. 

ಹೂಡಿಕೆ ಮಾಡಿದರೆ ‘ಹೊಳೆಯಲ್ಲಿಹುಣಸೆ ಹಣ್ಣು ತೊಳೆ’ದಂತೆ ಭಾವಿಸಲಾಗುತ್ತಿರುವ ವಿಮಾನಯಾನ ಕ್ಷೇತ್ರದಲ್ಲಿಹಣ ಸುರಿಯಲು ಜುಂಜುನ್‌ವಾಲಾ ಮುಂದಾಗಿದ್ದಾರೆಂದರೆ, ಅವರ ಲೆಕ್ಕಾಚಾರ ಸರಿಯಾಗೇ ಇರಬೇಕು. ಸದ್ಯ ಬಸವಳಿದಂತೆ ಕಾಣುತ್ತಿರುವ ವಿಮಾನಯಾನ ಮುಂಬರುವ ವರ್ಷಗಳಲ್ಲಿಪುಟಿದೇಳುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಸೊರಗುತ್ತಿರುವ ಭಾರತೀಯ ವಿಮಾನಯಾನ ಕ್ಷೇತ್ರಕ್ಕೆ ರಾಕೇಶ್‌ ಜುಂಜುನ್‌ವಾಲಾ ಅವರ ಆಕಾಶ್‌ ಏರ್‌ ಸಂಸ್ಥೆ ಬಲ ನೀಡಲಿದೆ ಎಂಬ ವಿಶ್ಲೇಷಣೆಗಳೂ ನಡೆಯುತ್ತಿವೆ. ಎಲ್ಲವೂ ಲೆಕ್ಕಾಚಾರದಂತೆ ನಡೆದರೆ ಈ ವರ್ಷಾಂತ್ಯ ಇಲ್ಲವೇ ಮುಂದಿನ ವರ್ಷದ ಆರಂಭದಲ್ಲಿಜುಂಜುನ್‌ವಾಲಾ ಅವರ ‘ಆಕಾಶ ಏರ್‌’ ವಿಮಾನದಲ್ಲಿಹಾರಾಡಬಹುದು.


ಈ ಲೇಖನವು ವಿಜಯ ಕರ್ನಾಟಕದ 2021ರ ಆಗಸ್ಟ್ 1ರ ಸಂಚಿಕೆಯಲ್ಲಿ ಪ್ರಕಟವಾಗಿದೆ


ಶುಕ್ರವಾರ, ಜುಲೈ 23, 2021

clubhouse vs twitter spaces: ಕ್ಲಬ್‌ಹೌಸ್ ಬೇಡ್ವಾ, ಸ್ಪೇಸಸ್‌ಗೆ ಬನ್ನಿ!

- ಮಲ್ಲಿಕಾರ್ಜುನ ತಿಪ್ಪಾರ
ಪಾಡ್‌ಕಾಸ್ಟ್‌ಗೆ ಅಷ್ಟೇ ಸೀಮಿತವಾಗಿದ್ದ ಆಡಿಯೋ ವೇದಿಕೆಗೆ ಹೊಸ ಖದರ್ ತಂದುಕೊಟ್ಟಿದ್ದು ‘ಕ್ಲಬ್‌ಹೌಸ್’ ಆ್ಯಪ್. ಈ ವರ್ಷದ ಆರಂಭದಲ್ಲಿ ಆಂಡ್ರಾಯ್ಡ್ ಸಾಧನಗಳಲ್ಲೂ ಬಳಕೆಗೆ ಅವಕಾಶ ಸಿಗುತ್ತಿದಂತೆ ಕ್ಲಬ್‌ಹೌಸ್‌ನ ಬಳಕೆಯ ಒಟ್ಟು ಸಾಧ್ಯತೆಯೇ ಬದಲಾಗಿ ಹೋಗಿದೆ. ಭಾರತದಲ್ಲಂತೂ ಈ ಕ್ಲಬ್‌ಹೌಸ್ ನಾಗಾಲೋಟದಲ್ಲಿ ಓಡುತ್ತಿದೆ. ಅತಿ ಕಡಿಮೆ ಅವಧಿಯಲ್ಲಿ 20 ಲಕ್ಷ ಸಕ್ರಿಯ ಬಳಕೆದಾರರನ್ನು ಹೊಂದಿರುವ ಈ ಆ್ಯಪ್ ಒಟ್ಟು 50 ಲಕ್ಷಕ್ಕೂ ಅಧಿಕ ಡೌನ್‌ಲೋಡ್ ಕಂಡಿದೆ. 

ಕ್ಲಬ್‌ಹೌಸ್‌ನ ಈ ಜನಪ್ರಿಯತೆಗೆ ಬೆಚ್ಚಿಬಿದ್ದಿರುವ ಸೋಷಿಯಲ್ ಮೀಡಿಯಾ ದೈತ್ಯ ಕಂಪನಿಗಳಾದ ೇಸ್‌ಬುಕ್, ಟ್ವಿಟರ್ ಅಂಥದ್ದೇ ವೇದಿಕೆಯನ್ನು ಸೃಷ್ಟಿಸಲು ಮುಂದಾಗಿವೆ. ಈ ನಿಟ್ಟಿನಲ್ಲಿ ಟ್ವಿಟರ್‌ನ ‘ಸ್ಪೇಸಸ್’ ವೇದಿಕೆ ಸಕ್ರಿಯವಾಗಿದೆ. ಇದು ಕೂಡ ಕ್ಲಬ್‌ಹೌಸ್ ಆ್ಯಪ್ ರೀತಿಯಲ್ಲೇ ಆಡಿಯೋ ವೇದಿಕೆಯಾಗಿದೆ. ಐಒಎಸ್ ಮತ್ತು ಆಂಡ್ರಾಯ್ಡ್ ಸಾಧನಗಳಿಗೆ ಇದು ಸಪೋರ್ಟ್ ಮಾಡುತ್ತದೆ. ನೀವು ಟ್ವಿಟರ್‌ನ ಈ ಸ್ಪೇಸಸ್‌ನಲ್ಲಿ ಮಾತುಗಳನ್ನು ಕೇಳಬಹುದು; ನೀವೇ ಸ್ಪೀಕರ್ ಆಗಬಹುದು; ನಿಮಗೆ ಬೇಕಾದ ವೇದಿಕೆಗಳಿಗೆ ಹೋಗಿ ಕುಳಿತುಕೊಳ್ಳಬಹುದು. ಸದ್ಯಕ್ಕೆ ಈ ಸ್ಪೇಸ್ ವೆಬ್‌ನಲ್ಲಿ ಸಿಗುವುದಿಲ್ಲ, ಆದರೆ ನೀವು ಕೇಳುಗರಾಗಿ ಸೇರಿಕೊಳ್ಳಬಹುದು.

ಸ್ಪೇಸಸ್ ಶುರು ಮಾಡುವುದು ಹೇಗೆ?

ನೀವು ಐಒಎಸ್ ಬಳಕೆದಾರರಾಗಿದ್ದರೆ, ಎರಡು ರೀತಿಯಲ್ಲಿ ಟ್ವಿಟರ್‌ನಲ್ಲಿ ಸ್ಪೇಸ್ ಚರ್ಚೆ ಆರಂಭಿಸಬಹುದು. ನಿಮ್ಮ ಹೋಮ್ ಟೈಮ್‌ಲೈನ್ ಟ್ವೀಟ್ ಕಾಂಪೋಸ್ ಮೇಲೆ ದೀರ್ಘಾವಧಿಗೆ ಒತ್ತಿ ಹಿಡಿಯಬೇಕು. ಆಗ ಕಾಣಿಸಿಕೊಳ್ಳುವ ಸ್ಪೇಸಸ್ ಐಕಾನ್ ಮೇಲೆ ಟ್ಯಾಪ್ ಮಾಡಿ, ಆಗ ನೀವು ಸ್ಪೇಸ್ ಹಾಸ್ಟ್ ಆಗಿ ಎಂಟ್ರಿ ಪಡೆದುಕೊಳ್ಳುತ್ತೀರಿ. ಅಥವಾ ನಿಮ್ಮ ಪ್ರೊೈಲ್ ಇಮೇಜ್ ಮೇಲೆ ಟ್ಯಾಪ್ ಮಾಡಿ ಮತ್ತು ಬಲಬದಿಗೆ ಸ್ಕ್ರಾಲ್ ಮಾಡಿ ಮತ್ತು ಸ್ಪೇಸಸ್ ಮೇಲೆ ಟ್ಯಾಪ್ ಮಾಡುವ ಮೂಲಕ ಆರಂಭಿಸಬಹುದು. ಆಂಡ್ರಾಯ್ಡ್ ೆನ್‌ಗಳಲ್ಲಾದರೆ, ಮೊದಲಿಗೆ ಟ್ವಿಟರ್ ಆ್ಯಪ್ ಓಪನ್ ಮಾಡಿ, ಸ್ಕ್ರೀನ್‌ನ ಬಲಬದಿಯ ಕೆಳ ತುದಿಯಲ್ಲಿ ಕಾಣುವ ಟ್ವೀಟ್ ಕಾಂಪೋಸ್ ಮಾಡುವ ಐಕಾನ್ ಮೇಲೆ ಟ್ಯಾಪ್ ಮಾಡಿ. ಆಗ ನಿಮಗೆ ಸ್ಪೇಸಸ್, ೆಟೋಸ್, ಜಿಐಎ್ ಮತ್ತು ಟ್ವೀಟ್ ಎಂಬ ಪದಗಳು ಐಕಾನ್ ಸಹಿತ ಕಾಣುತ್ತವೆ. ಸ್ಪೇಸಸ್ ಐಕಾನ್ ಮೇಲೆ ಟ್ಯಾಪ್ ಮಾಡಿದಾಗ,  ಸ್ಟಾರ್ಟ್ ಯುವರ್ ಸ್ಪೇಸ್ ಪಾಪ್ ಅಪ್ ಕಾಣಿಸಿಕೊಳ್ಳುತ್ತದೆ. ಅಲ್ಲಿಯೇ ನಿಮ್ಮ ಚರ್ಚೆಗೆ ಹೆಸರನ್ನು ಕೂಡ ದಾಖಲಿಸಬಹುದು. ಬಳಿಕ ಸ್ಟಾರ್ಟ್ ಯುವರ್ ಸ್ಪೇಸ್ ಬಟನ್ ಮೇಲೆ ಟ್ಯಾಪ್ ಮಾಡಿದಾಗ ನೀವು ಹೋಸ್ಟ್ ಆಗಿ  ಸಕ್ರಿಯರಾಗುತ್ತೀರಿ ಮತ್ತು ನಿಮ್ಮ ಚಾಟ್ ರೂಮ್‌ಗೆ ಉಳಿದವರನ್ನು ಆಮಂತ್ರಿಸಬಹುದು.

ಯಾರೆಲ್ಲ ಜಾಯಿನ್ ಆಗಬಹುದು? 
ಸ್ಪೇಸಸ್ ವೇದಿಕೆ ಮುಕ್ತವಾಗಿದ್ದು, ಯಾರು ಬೇಕಾದರೂ ಕೇಳುಗರಾಗಿ ಸೇರಿಕೊಳ್ಳಬಹುದು. ಟ್ವಿಟರ್‌ನಲ್ಲಿ ನಿಮ್ಮನ್ನು ಾಲೋ ಮಾಡದೇ ಇರುವುವರು ಕೂಡ ಇದರಲ್ಲಿ ಕೇಳುಗರಾಗಿ ಬಂದು ಕುಳಿತುಕೊಳ್ಳಲು ಅವಕಾಶವಿದೆ. ಲಿಂಕ್ ಕಳುಹಿಸುವ ಮೂಲಕ ನೇರವಾಗಿ ಕೇಳುಗರನ್ನೂ ಆಮಂತ್ರಿಸಬಹುದು. ನಿಮ್ಮ ಸ್ಪೇಸಸ್ ಲಿಂಕ್ ಅನ್ನು ಟ್ವೀಟ್ ಮಾಡುವ ಮೂಲಕ ಅಥವಾ ಇತರೆ ವೇದಿಕೆಗಳಲ್ಲಿ ಅದನ್ನು ಷೇರ್ ಮಾಡುವುದರೊಂದಿಗೆ ಕೇಳುಗರನ್ನು ಕರೆದುಕೊಳ್ಳಬಹುದಾಗಿದೆ.

ಒದಗಿಸಲಾದ ನಿಗದಿತ ವೇಳೆಯಲ್ಲಿ  ಈ ವೇದಿಕೆಯಲ್ಲಿ 11 ಜನರು ಮಾತ್ರವೇ ಸ್ಪೀಕರ್ ಆಗಲು ಅವಕಾಶವಿದೆ. ಯಾವಾಗ ನೀವು ಹೊಸ ಸ್ಪೇಸ್ ಸೃಷ್ಟಿಸುತ್ತೀರಿ ಆಗ ನಿಮ್ಮ ಸ್ಪೇಸ್‌ಗೆ ಹೆಸರು ಕೊಡಲು ಅವಕಾಶವಿರುವುದನ್ನು ಕಾಣಬಹುದು ಮತ್ತು ಆ ಮೂಲಕ ಸ್ಪೇಸ್ ಸ್ಟಾರ್ಟ್ ಮಾಡಬಹುದು. ನೀವು ನಿಮ್ಮ ಸ್ಪೇಸ್ ಅನ್ನು ಶೆಡ್ಯೂಲ್ ಮಾಡಬಹುದು ಕೂಡ. 

ಒಮ್ಮೆ ಸ್ಪೇಸಸ್ ಶುರುವಾದ ಮೇಲೆ ಹೋಸ್ಟ್ ಮಾಡುವವರು, ಪೀಪಲ್ ಐಕಾನ್ ಮೇಲೆ ಟ್ಯಾಪಿಂಗ್ ಮಾಡುವ ಮೂಲಕ ಸ್ಪೀಕರ್ ಆಗಲು ಕೇಳುಗರಿಗೆ ರಿಕ್ವೆಸ್ಟ್ ಕಳುಹಿಸಬಹುದು. ಹಾಗೆಯೇ, ಕೇಳುಗರಲ್ಲಿ ಯಾರಿಗಾದರೂ ಮಾತನಾಡಬೇಕು ಎನಿಸಿದರೆ, ಮೈಕೋ್ರೆನ್ ಕೆಳಗಡೆ ಕಾಣುವ ರಿಕ್ವೆಸ್ಟ್ ಐಕಾನ್ ಮೇಲೆ ಟ್ಯಾಪ್ ಮಾಡುವ ಮೂಲಕ ಅನುಮತಿಯನ್ನು ಪಡೆದುಕೊಳ್ಳಬಹುದು. 

ಕ್ಲಬ್‌ಹೌಸ್ ಆ್ಯಪ್‌ಗೆ ಒಗ್ಗಿಕೊಂಡವರಿಗೆ ಟ್ವಿಟರ್‌ನ ಸ್ಪೇಸಸ್ ತುಸು ಕಷ್ಟ ಎನ್ನಬಹುದು. ಕ್ಲಬ್‌ಹೌಸ್‌ನಷ್ಟು ಇದು ಬಳಕೆದಾರಸ್ನೇಹಿಯಂತೆ ಕಾಣುತ್ತಿಲ್ಲಘಿ. ಸ್ಪೇಸಸ್ ಈಗಷ್ಟೇ ಆರಂಭವಾಗಿದೆ. ಮುಂಬರುವ ದಿನಗಳಲ್ಲಿ ಟ್ವಿಟರ್ ಈ ವೇದಿಕೆಯನ್ನು ಇನ್ನಷ್ಟು ಹೆಚ್ಚು ಆಪ್ತವಾಗಿಸಬಹುದು.


ಈ ಲೇಖನವು ವಿಜಯ ಕರ್ನಾಟಕ ಟೆಕ್ ನೋ ಪುರವಣಿಯಲ್ಲಿ 2021ರ ಜುಲೈ 23ರಂದು ಪ್ರಕಟವಾಗಿದೆ.


ಭಾನುವಾರ, ಜುಲೈ 18, 2021

India-Born Sirisha Bandla flies to Space ಆಕಾಶದೆತ್ತರದ ಕನಸು ಬೆಂಬತ್ತಿದ ಬಾಂಡ್ಲಾ

ಬಾಹ್ಯಾಕಾಶ ಯಾನ ಕೈಗೊಳ್ಳಲಿರುವ ರಿಚರ್ಡ್‌ ಬ್ರಾನ್ಸನ್‌ ನೇತೃತ್ವದ ತಂಡದಲ್ಲಿಭಾರತೀಯ ಸಂಜಾತೆ, 34 ವರ್ಷದ ಸಿರಿಶಾ ಬಾಂಡ್ಲಾಇರುವುದು ಭಾರತೀಯರಾದ ನಮಗೆ ಹೆಮ್ಮೆ.

ಮಲ್ಲಿಕಾರ್ಜುನ ತಿಪ್ಪಾರ
ಭಾನುವಾರ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಲಿರುವ ಭಾರತೀಯ ಸಂಜಾತೆ ಅಮೆರಿಕನ್‌ ಸಿರಿಶಾ ಬಾಂಡ್ಲಾಅವರ ವಿಷಯದಲ್ಲಿ ‘ಕನಸು ಕಂಡರಷ್ಟೇ ಅದನ್ನು ಸಾಕಾರಗೊಳಿಸುವುದು ಸಾಧ್ಯ’ ಎಂಬ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್‌ ಕಲಾಂ ಅವರ ಉಕ್ತಿ ಅಕ್ಷ ರಶಃ ನಿಜವಾಗಿದೆ!

ಕಂಡ ಕನಸನ್ನು ಬೆನ್ನಟ್ಟಿ ಅದನ್ನು ನಿಜವಾಗಿಸುವ ಪ್ರಯತ್ನದ ಅನುಭವ ಕೊಡುವ ಥ್ರಿಲ್‌ ಬೇರೆ ಯಾವುದರಿಂದಲೂ ದೊರೆಯಲು ಸಾಧ್ಯವಿಲ್ಲ. ಅಮೆರಿಕದ ಬಾಹ್ಯಾಕಾಶದ ಚಟುವಟಿಕೆಗಳ ಕೇಂದ್ರ ಸ್ಥಾನ ನಾಸಾದ ಜಾನ್ಸನ್‌ ಸ್ಪೇಸ್‌ ಸೆಂಟರ್‌ ಸಮೀಪದ ಹೂಸ್ಟನ್‌ನಲ್ಲಿ ಆಡಿ ಬೆಳೆದ ಹುಡುಗಿ ಗಗನಯಾತ್ರಿಯಾಗುವ ಕನಸು ಕಾಣುವುದು ಸಾಮಾನ್ಯ. ಆದರೆ, ಆ ಕನಸನ್ನು ಬೆಂಬತ್ತಿ ಅದನ್ನು ನನಸಾಗಿಸಿಕೊಳ್ಳುವ ಗುಣ ಸಿರಿಶಾ ಅವರಿಗೆ ಚಿಕ್ಕಂದಿನಿಂದಲೇ ಇತ್ತು. ನಾಸಾದಲ್ಲಿಗಗನಯಾತ್ರಿಯಾಗುವ ಕನಸು ಕಂಡರು. ಆದರೆ, ದೃಷ್ಟಿ ದೋಷದಿಂದಾಗಿ ಪೈಲಟ್‌ ಅಥವಾ ಗಗನಯಾತ್ರಿಧಿಯಾಗುವ ಅರ್ಹತೆಗಳನ್ನು ಪೂರೈಸಲು ಸಾಧ್ಯವಾಗಲಿಲ್ಲ. ಹಾಗಾಗಿ, ಏರ್‌ಫೋರ್ಸ್‌ ಮೂಲಕ ನಾಸಾ ಕದ ತಟ್ಟುವ ಕನಸು ಕೈಗೂಡಲಿಲ್ಲ. ಆದರೇನಂತೆ, ಒಂದಿಲ್ಲಒಂದು ದಿನ ಬಾಹ್ಯಾಕಾಶಕ್ಕೆ ನೆಗೆದೇ ನೆಗೆಯುತ್ತೇನೆ ಎಂಬ ಛಲದಲ್ಲಿಯಾವುದೇ ಕೊರತೆ ಇರಲಿಲ್ಲ. ಕಂಡ ಕನಸನ್ನು ನಿಜವಾಗಿಸಿಕೊಳ್ಳುವ ಯಾವುದೇ ಪ್ರಯತ್ನವನ್ನು ಅವರು ಬಿಡಲಿಲ್ಲ. ಅದಕ್ಕೀಗ ಫಲ ದೊರೆಯುತ್ತಿದೆ. ಅಗತ್ಯ ವಿದ್ಯಾಭ್ಯಾಸವನ್ನು ಪೂರೈಸಿಕೊಂಡ ಅವರೀಗ ತಮ್ಮ ಕನಸನ್ನು ನಿಜವಾಗಿಸಿಕೊಧಿಳ್ಳುತ್ತಿಧಿದ್ದಾರೆ; ಬಾಹ್ಯಾಕಾಶಕ್ಕೆ ಕಾಲಿಡುತ್ತಿರುವ ನಾಲ್ಕನೇ ಭಾರತೀಯ ಸಂಜಾತೆ ಎಂಬ ಕೀರ್ತಿಗೆ ಪಾತ್ರರಾಗುತ್ತಿದ್ದಾರೆ. 

ನಾಸಾ ಗಗನಯಾತ್ರಿಯಾಗಿದ್ದ ಕಲ್ಪನಾ ಚಾವ್ಲಾಅವರು 2003ರಲ್ಲಿಕೊಲಂಬಿಯಾ ಬಾಹ್ಯಾಕಾಶ ನೌಕೆಯಲ್ಲಿಭೂಮಿಗೆ ಮರಳುವಾಗ ದುರ್ಘಟನೆ ಸಂಭವಿಸಿ ಮೃತಧಿರಾಗಿದ್ದರು. ಇದಕ್ಕೂ ಮೊದಲ ರಾಕೇಶ್‌ ಶರ್ಮಾ ಬಾಹ್ಯಾಕಾಶಕ್ಕೆ ತೆರಳಿದ ಮೊದಲ ಇಂಡಿಯನ್‌. ಮತ್ತೊಬ್ಬರು ಭಾರತೀಯ ಮೂಲದ ಸುನೀತಾ ವಿಲಯಮ್ಸ್‌. ಸಿರಿಶಾ ಬಾಹ್ಯಾಕಾಶಕ್ಕೆ ತಲುಪಿದರೆ ಈ ವರೆಗೆ ಭಾರತ ಮೂಲದ ನಾಲ್ವರು ಇಂಥ ಸಾಧನೆ ಮಾಡಿದ ಕೀರ್ತಿಗೆ ಪಾತ್ರರಾಗುತ್ತಾರೆ. ಸಿರಿಶಾ ಬಾಹ್ಯಾಕಾಶ ಕನಸಿಗೆ ಪ್ರೇರಣೆಯಾದವರು ರಾಕೇಶ್‌ ಶರ್ಮಾ! 

ಬಾಹ್ಯಾಕಾಶಕ್ಕೆ ತೆರಳಲಿರುವ ವರ್ಜಿನ್‌ ಸಂಸ್ಥಾಪಕ ಸರ್‌ ರಿಚರ್ಡ್‌ ಬ್ರಾನ್ಸನ್‌ ನೇತೃತ್ವದ ತಂಡದಲ್ಲಿಒಟ್ಟು ಆರು ಜನರಿದ್ದು, ರಿಚರ್ಡ್‌ ಬ್ರಾನ್ಸ್‌ನ ಗಗನಯಾತ್ರಿ 001 ಆದರೆ ಸಿರಿಶಾ ಗಗನಯಾತ್ರಿ 004. ಇವರ ಜೊತೆಗೆ, ಮುಖ್ಯ ಗಗನಯಾತ್ರಿ ಬೆಥ್‌ ಮೋಸೆಸ್‌(ಗಗನಯಾತ್ರಿ 002), ಮುಖ್ಯ ಕಾರ್ಯಾಚರಣೆ ಎಂಜಿನಿಯರ್‌ ಕೊಲಿನ್‌ ಬೆನ್ನೆಟ್‌(ಗಗನಯಾತ್ರಿ 003) ಹಾಗೂ ಡೇವ್‌ ಮ್ಯಾಕೆ ಮತ್ತು ಮಸೂಚಿ ಇಬ್ಬರು ಪೈಲಟ್‌ಗಳಿದ್ದಾರೆ. ಈ ಆರು ಜನರನ್ನು ಹೊತ್ತ ವರ್ಜಿನ್‌ ಗ್ಯಾಲಕ್ಟಿಕ್‌ ವಿಎಸ್‌ಎಸ್‌ ಯೂನಿಟಿ ಗಗನ ನೌಕೆ  ಭಾನುವಾರ ನ್ಯೂ ಮೆಕ್ಸಿಕೊದಿಂದ ಬಾಹ್ಯಾಕಾಶಕ್ಕೆ ಪ್ರಯಾಣ ಆರಂಭಿಸಲಿದೆ. ಇದರಲ್ಲಿಕಂಪನಿಯ ಮಾಲೀಕ ಬ್ರಾನ್ಸನ್‌ ಅವರದ್ದು ‘ಗ್ರಾಹಕರ ಬಾಹ್ಯಾಕಾಶ ಹಾರಾಟದ ಅನುಭವವ ಮೌಲ್ಯಮಾಪನ’ ಮಾಡುವ ಜವಾಬ್ದಾರಿಯಾದರೆ, ಏರೋನಾಟಿಕಲ್‌ ಎಂಜಿನಿಯರ್‌ ಆಗಿರುವ ಸಿರಿಶಾ ಅವರದ್ದು ‘ಸಂಶೋಧಕರ ಅನುಭವ’ವನ್ನು ಕಟ್ಟಿಕೊಡುವ ಹೊಣೆಯನ್ನ ಹೊತ್ತುಕೊಡಿದ್ದಾರೆ. ಬೆಳಕಿನ ವೇಗಕ್ಕಿಂತಲೂ ಮೂರುವರೆ ಪಟ್ಟು ವೇಗದಲ್ಲಿಈ ಸ್ಪೇಸ್‌ ಪ್ಲೇನ್‌ ಹಾರಲಿದೆ. 

ಬ್ರಾನ್ಸ್‌ನ ಒಡೆತನದ ‘ವರ್ಜಿನ್‌ ಗ್ಯಾಲಕ್ಟಿಕ್‌’ನಲ್ಲಿ ಸರಕಾರಕ್ಕೆ ಸಂಬಂಧಿಸಿದ ವ್ಯವಹಾರ ವಿಭಾಗ ಮತ್ತು ಸಂಶೋಧನಾ ಕಾರ್ಯಚರಣೆಗಳ ವೈಸ್‌ ಪ್ರೆಸಿಡೆಂಟ್‌ ಆಗಿ ಕಾರ್ಯಧಿನಿರ್ವಧಿಹಿಸುತ್ತಿದ್ದಾರೆ.  ಆಂಧ್ರದ ಗುಂಟೂರು ಜಿಲ್ಲೆಧಿಯಲ್ಲಿ1988ರಲ್ಲಿಸಿರಿಶಾ ಜನಿಸಿದರು. ತಂದೆ ಕೃಷಿ ವಿಜ್ಞಾನಿ ಡಾ.ಮುರಳಿ, ತಾಯಿ ಅನುರಾಧಾ. ಸಿರಿಶಾಗೆ ನಾಲ್ಕು ವರ್ಷವಿದ್ದಾಗ ಅವರ ಕುಟುಂಬವು ಅಮೆರಿಕದ ಹೂಸ್ಟನ್‌, ಟೆಕ್ಸಾಸ್‌ಗೆ ಸ್ಥಳಾಂತಧಿರಗೊಂಡಿತು. ಸದ್ಯ ವಾಷಿಂಗ್ಟನ್‌ನಲ್ಲಿವಾಸವಾಗಿದ್ದಾರೆ. ಟೆಕ್ಸಾಸ್‌ನ ಸ್ಥಳೀಯ ಶಾಲೆಯಲ್ಲಿಶಿಕ್ಷ ಣ ಪೂರೈಸಿದ ಬಳಿಕ 2006ರಲ್ಲಿಸಿರಿಶಾ ಪರ್ಡೂ್ಯ ವಿವಿ ಸೇರಿದರು. ಏರೋನಾಟಿಕಲ್‌, ಏರೋ ಸ್ಪೇಸ್‌ ಮತ್ತು ಆಸ್ಟ್ರೋನಾಟಿಕಲ್‌ ಎಂಜಿನಿಧಿಯರಿಂಗ್‌ ಪದವಿಯನ್ನು 2011ರಲ್ಲಿಪಡೆದುಕೊಂಡರು. 2015ರಲ್ಲಿಜಾರ್ಜಿಯಾ ವಾಷಿಂಗ್ಟನ್‌ ವಿಶ್ವವಿದ್ಯಾಲಯದಿಂದ ಬಿಸಿನೆಸ್‌ ಅಡ್ಮಿನಿಸ್ಪ್ರೇಷನ್‌ನಲ್ಲಿಸ್ನಾತಕೋತ್ತರ ಪದವಿಯನ್ನು ಗಳಿಸಿಕೊಂಡರು. 

ಸಿರಿಶಾ ಅವರು ಶಿಕ್ಷ ಣದ ಜೊತೆ ಜತೆಗೆಯೇ 2012ರಲ್ಲಿಕಮರ್ಷಿಯಲ್‌ ಸ್ಪೇಸ್‌ಫ್ಲೈಟ್‌ ಫೆಡರೇಷನ್‌ನಲ್ಲಿಅಸೋಸಿಯೇಟ್‌ ಡೈರೆಕ್ಟರ್‌ ಆಗಿ ಮೂರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಬಹುಶಃ 2015ರ ನಂತರ ಅವರು ಕನಸು ಕೈಗೂಡುವ ದಿನಗಳ ಶುರುವಾದವು ಎನ್ನಬಹುದು! ಯಾಕೆಂದರೆ, 2015ರಲ್ಲಿಅವರು ವರ್ಜಿನ್‌ ಗ್ಯಾಲಕ್ಟಿಕ್‌ ಕಂಪನಿ ಸೇರಿ, 2020ರವರೆಗೂ ವ್ಯವಹಾರ ಅಭಿವೃದ್ಧಿ ಮತ್ತು ಸರಕಾರಿ ವ್ಯವಹಾರಗಳ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದರು. ಬಳಿಕ ಅವರು ವರ್ಜಿನ್‌ ಆರ್ಬಿಟ್‌ನಲ್ಲಿವಾಷಿಂಗ್ಟನ್‌ ಆಪರೇಷನ್‌ನ ಡೈರೆಕ್ಟರ್‌ ಆಗಿದ್ದರು. 

2021ರಿಂದ ಸಿರಿಶಾ ವರ್ಜಿನ್‌ ಗ್ಯಾಲಕ್ಟಿಕ್‌ನ ಸರಕಾರ ವ್ಯವಹಾರಗಳ ಉಪಾಧ್ಯಕ್ಷ ರಾಗಿ ಬಡ್ತಿ ಪಡೆದುಕೊಂಡರು. ವರ್ಜಿನ್‌ ಗ್ಯಾಲಕ್ಟಿಕ್‌ ಎನ್ನುವುದು ರಿಚರ್ಡ್‌ ಬ್ರಾನ್ಸನ್‌ ಅವರು ಸ್ಥಾಪಿಸಿದ ಅಮೆರಿಕನ್‌ ಸ್ಪೇಸ್‌ಕ್ರಾಫ್ಟ್‌ ಕಂಪನಿಯಾಗಿದೆ. ಬಾಹ್ಯಾಕಾಶ ಪ್ರವಾಸೋದ್ಯಮ ಹಿನ್ನೆಲೆಯಲ್ಲಿವರ್ಜನ್‌ ಕಂಪನಿ ಕೈಗೊಂಡಿರುವ ಬಾಹ್ಯಾಕಾಶದಂಚಿನ ಪಯಣವು ಮೈಲುಗಲ್ಲಾಗಲಿದೆ. ಆ ಐತಿಹಾಸಿಕ ಪ್ರಯತ್ನದಲ್ಲಿಭಾರತೀಯ ಸಂಜಾತೆಯೊಬ್ಬಳು ಭಾಗಿಯಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. 

ಭೂಮಿಯಿಂದ ಮೂರು ಲಕ್ಷ  ಅಡಿ ಎತ್ತರದಲ್ಲಿಹಾರಾಟ ನಡೆಸಲಿರುವ ಸಿರಿಶಾಗೆ ಅಮ್ಮ ಮಾಡುವ ಊಟ ತಂಬ ಇಷ್ಟ. ಹಾಗಂತಲೇ ಅವರ ತಾಯಿ, ಫೇವರಿಟ್‌ ಮಟನ್‌ ಬಿರಿಯಾನಿ ಮಾಡಿಕೊಂಡು ಬಂದಿಧಿದ್ದರಂತೆ. ಅವರಿಗೆ ಆಂಧ್ರದ ವಿಶಿಷ್ಟ ‘ಪಪ್ಪು’(ಅನ್ನ) ತುಂಬ ಇಷ್ಟ. ಬಾಹ್ಯಾಕಾಶದಿಂದ ಮರಳಿದ ಬಳಿಕ ಅಮ್ಮನ ಕೈಯಿಂದ ಮಾಡಿದ ‘ಪಪ್ಪು’ ತಿನ್ನವ ಬಯಕೆಯನ್ಯೂ ಹೊಂದಿದ್ದಾರೆ.

ರಿಚರ್ಡ್‌  ಬ್ರಾನ್ಸನ್‌ ಬಳಿಕ ಅಮೆಜಾನ್‌ ಸಂಸ್ಥಾಪಕ ಜೆಫ್‌ ಬೆಜೂಸ್‌ ಕೂಡ ಜುಲೈ 20ರಂದು ಬ್ಲೂಒರಿಜಿನ್‌ ಕಂಪನಿಯ ನ್ಯೂ ಶೇಪರ್ಡ್‌ ಮೂಲಕ ಬಾಹ್ಯಾಕಾಶ ಯಾನ ಕೈಗೊಳ್ಳಲಿದ್ದಾರೆ. ಜಗತ್ತಿನ ಇಬ್ಬರು ಶ್ರೀಮಂತ ಉದ್ದಿಮೆದಾರರು ನಡೆಸುತ್ತಿರುವ ಈ ಯಾನವು ಮುಂಬರುವ ದಿನಗಳಲ್ಲಿಹೊಸ ‘ಉದ್ಯಮ ಸ್ಥಾಪನೆ’ಗೂ ಕಾರಣವಾಗಬಹುದು!

ಈ ಎಲ್ಲಕಾರಣಗಳಿಂದಾಗಿಯೇ ಖಾಸಗಿ ಬಾಹ್ಯಾಕಾಶ ಯಾನ ಹೆಚ್ಚು ಚರ್ಚಿತವಾಗುತ್ತಿದೆ ಮತ್ತು ಅಂಥ ಒಂದು ಪ್ರಯತ್ನದಲ್ಲಿಭಾರತ ಸಂಜಾತೆ ಸಿರಿಶಾ ಭಾಗಿಯಾಗುತ್ತಿದ್ದಾರೆ. ಬಾಹ್ಯಾಕಾಶಕ್ಕೆ ತೆರಳುತ್ತಿರುವ ಸಿರಿಶಾ, ತನ್ನೊಂದಿಗೆ ಭಾರತವನ್ನು ಎತ್ತರಕ್ಕೆ ಕೊಂಡೊಯ್ಯುವ ಹೆಮ್ಮೆಯ  ಭಾವ ಹೊಂದಿದ್ದಾರೆ. ಇದನ್ನು ಅವರು ಸ್ವತಃ ಹೇಳಿಕೊಂಡಿದ್ದಾರೆ ಕೂಡ, ‘‘ನಾನು ಸ್ವಲ್ಪ ಭಾರತವನ್ನು ನನ್ನೊಂದಿಗೆ ಕರೆದೊಯ್ಯುತ್ತಿದ್ದೇನೆ ಎಂದು ನನಗೆ ಅನಿಸುತ್ತದೆ’’ ಎಂದು ಹೇಳಿಕೊಂಡಿದ್ದಾರೆ. 

ಬಾಹ್ಯಾಕಾಶದ ಗೀಳಿನ ಹೊರತಾಗಿಯೂ ಸಿರಿಶಾ ಹಲವು ವಿಷಯಗಳಲ್ಲಿವಿಶಿಷ್ಟ ಆಸಕ್ತಿಗಳನ್ನು ಬೆಳೆಸಿಕೊಂಡಿದ್ದಾರೆ. ಹೊಸ ಹೊಸ ಸಂಗತಿಗಳಿಗೆ ಬಹಳ ಬೇಗ ಆಕರ್ಷಿತವಾಗಿವ ಅವರಿಗೆ ಬೋಟಿಂಗ್‌ ಮಾಡುವುದು ತುಂಬ ಇಷ್ಟ. ಇದರ ಜತೆಗೆ ಬಾಸ್ಕೆಟ್‌ಬಾಲ್‌ ಆಟವನ್ನು ನೋಡುವುದು ತುಂಬ ಎಂಜಾಯ್‌ ಮಾಡುತ್ತಾರೆ. ಬೆಕ್ಕು ಮತ್ತು ನಾಯಿ ಅಕ್ಕರೆ ಸಂಗಾತಿಗಳು. ನೆಚ್ಚಿನ ನಾಯಿ ‘ಚಾನ್ಸ್‌’ ಅವರ ಜೀವನದ ಭಾಗವೇ ಆಗಿದೆ. ಸಹೋದರಿ ಹಾಗೂ ಕುಟುಂಬದ ಸದಸ್ಯರೊಂದಿಗೆ ಎಲ್ಲಹಬ್ಬಗಳನ್ನು ಆಚರಿಸುತ್ತಾರೆ. ಪ್ರವಾಸವನ್ನು ಹೆಚ್ಚಿಗೆ ಇಷ್ಟ ಪಡುವ ಸಿರಿಶಾ ಭಾರತವು ಸೇರಿದಂತೆ ಹಲವು ದೇಶಗಳನ್ನು ಸುತ್ತಿ ವಿಶಿಷ್ಟ ಅನುಭವವನ್ನು ಪಡೆದುಕೊಂಡಿದ್ದಾರೆ. 

ರಿಚರ್ಡ್‌ ಬ್ರಾನ್ಸನ್‌ ತಂಡದೊಂದಿಗೆ ಸಿರಿಶಾ ಬಾಂಡ್ಲಾ ಕೈಗೊಳ್ಳುತ್ತಿರುವ ಬಾಹ್ಯಾಕಾಶ ಯಾನ ಇತಿಹಾಸ ಸೃಷ್ಟಿಸುವುದು ಖಚಿತ. ಜೊತೆಗೆ, ಏನಾದರೂ ಹೊಸದನ್ನು ಮಾಡುವ ಹುಮ್ಮಸ್ಸು ಹೊಂದಿರುವ, ಜಗತ್ತಿನ ಪ್ರತಿಭಾವಂತ ಅಸಂಖ್ಯ ಹೆಣ್ಣುಮಕ್ಕಳಿಗೆ ಸಿರಿಶಾ ಅವರ ಈ ಜರ್ನಿ ಹುರುಪು ತುಂಬಲಿದೆ; ಕನಸುಗಳನ್ನು ಕಾಣಲು ದಾರಿ ಮಾಡಿಕೊಡಲಿದೆ. ಅಂಥದೊಂದು ಪ್ರೇರಣೆಗೆ ಕಾರಣವಾಧಿಗುತ್ತಿರುವ ಸಿರಿಶಾ ಬಾಹ್ಯಾಕಾಶ ಪಯಣಕ್ಕೆ ಗುಡ್‌ಲಕ್‌ ಹೇಳೋಣ.


ಈ ಲೇಖನವು ವಿಜಯ ಕರ್ನಾಟಕದ 2021 ಜುಲೈ 10 ಸಂಚಿಕೆಯಲ್ಲಿ ಪ್ರಕಟವಾಗಿದೆ



ಸೋಮವಾರ, ಜೂನ್ 14, 2021

Sunil Chhetri overtakes Lionel Messi - ಕಾಲ್ಚೆಂಡು ಮಾಂತ್ರಿಕ ಸುನಿಲ್‌ ಛೆತ್ರಿ

ರಾಷ್ಟ್ರೀಯ ಫುಟ್ಬಾಲ್‌ ತಂಡದ ನಾಯಕ ಸುನಿಲ್‌ , ಅಂತಾರಾಷ್ಟ್ರೀಯ ಸಕ್ರಿಯ ಫುಟ್ಬಾಲಿಗರ ಪೈಕಿ ಅತಿ ಹೆಚ್ಚು ‘ಗೋಲ್‌’ ಬಾರಿಸಿದವರ ಪಟ್ಟಿಯಲ್ಲಿಮೆಸ್ಸಿಯನ್ನೇ ಮೀರಿಸಿದ್ದಾರೆ!


ಮಲ್ಲಿಕಾರ್ಜುನ ತಿಪ್ಪಾರ
ಆರಾಧಿಸುವ ವ್ಯಕ್ತಿಯ ಸಾಧನೆಯನ್ನು ನೀವೇ ಹಿಂದಿಕ್ಕಿ ಮುನ್ನಡೆದರೆ ಆಗ ಆಗುವ ಆನಂದವನ್ನು ಅಭಿವ್ಯಕ್ತಿಸಲಾದೀತೆ? ಏನಿದ್ದರೂ ಆ ಅನುಭವವನ್ನು ಅನುಭವಿಸಬೇಕಷ್ಟೇ. ಇಂಥದ್ದೇ ಮನಸ್ಥಿತಿಯಲ್ಲಿದ್ದಾರೆ ಭಾರತೀಯ ಫುಟ್ಬಾಲ್‌ ತಂಡದ ನಾಯಕ ಸುನಿಲ್‌ ಛೆತ್ರಿ. 

‘ಜಗತ್ತಿನ ಸಾರ್ವಕಾಲಿಕ  ಶ್ರೇಷ್ಠ ಫುಟ್ಬಾಲಿಗ’ ಎಂದು ಗುರುತಿಸಿಕೊಳ್ಳುತ್ತಿ­ರುವ ಅರ್ಜೆಂಟೀನಾದ ಆಟಗಾರ ಲಿಯೋನೆಲ್‌ ಮೆಸ್ಸಿ ಸಾಧನೆಯನ್ನು ನಮ್ಮ ಸುನಿಲ್‌ ಹಿಂದಿಕ್ಕಿದ್ದಾರೆ. ಸಕ್ರಿಯ ಫುಟ್ಬಾಲ್‌ ಆಟಗಾರರ ಪೈಕಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಗೋಲ್‌ಗಳನ್ನು ಗಳಿಸಿದವರು ಪಟ್ಟಿಯಲ್ಲಿಪೋರ್ಚುಗಲ್‌ ಫುಟ್ಬಾಲ್‌ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ(103) ಅಗ್ರ ಸ್ಥಾನದಲ್ಲಿದ್ದರೆ, ಲಿಯೋನೆಲ್‌ ಮೆಸ್ಸಿ 72 ಗೋಲುಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರು. ಈಗ ಭಾರತದ ಸುನಿಲ್‌ ಬಾಂಗ್ಲಾದೇಶದ ವಿರುದ್ಧ ಏಷ್ಯಾ ಕಪ್‌ ಅರ್ಹತಾ ಸುತ್ತಿನ ಪಂದ್ಯದಲ್ಲಿ2 ಗೋಲು ಬಾರಿಸಿ, ತಮ್ಮ ಗೋಲುಗಳ ಸಂಖ್ಯೆಯನ್ನು 74ಕ್ಕೆ ಹೆಚ್ಚಿಸಿಕೊಂಡು, ಮೆಸ್ಸಿ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈವರೆಗೆ ಅವರು 117 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

ಅಂತಾರಾಷ್ಟ್ರೀಯ ಗೋಲುಗಳ ಪಟ್ಟಿಯಲ್ಲಿಮೆಸ್ಸಿಯನ್ನು ಅವರು ಹಿಂದೆ ಹಾಕುತ್ತಿದ್ದಂತೆ, ಮೆಸ್ಸಿಗಿಂತ ಯೇ ಶ್ರೇಷ್ಠ ಎಂಬ ವಾದ ಸೋಷಿಯಲ್‌ ಮೀಡಿಯಾಗಳಲ್ಲಿಜೋರಾಗಿತ್ತು. ಇದಕ್ಕೆಲ್ಲಉತ್ತರ ನೀಡಿರುವ ಸುನಿಲ್‌, ‘‘ಮೆಸ್ಸಿಯ ಅಸಂಖ್ಯ ಅಭಿಮಾನಿಗಳಲ್ಲಿನಾನೂ ಒಬ್ಬ. ನನ್ನ ಮತ್ತು ಅವರ(ಮೆಸ್ಸಿ) ಮಧ್ಯೆ ಹೋಲಿಕೆ ಸರಿ­ಯಲ್ಲ,’’ ಎಂದಿದ್ದಾರೆ. ‘‘ಲಿಯೋನೆಲ್‌ ಮೆಸ್ಸಿ­ಯನ್ನು ಭೇಟಿ ಮಾಡುವ ಅವಕಾಶ ಸಿಕ್ಕರೆ, ಕೈ ಕುಲುಕಿ ನಾನು ನಿಮ್ಮ ದೊಡ್ಡ ಅಭಿಮಾನಿ ಎಂದು ಹೇಳುವೆ,’’ ಎನ್ನುವ ಅವರಿಗೆ ಅದು ಪಕ್ಕಾ ಫ್ಯಾನ್‌ಬಾಯ್‌ ಮೊಮೆಂಟ್‌!

ಕ್ರಿಕೆಟ್‌ನ್ನೇ ಉಸಿರಾಡುವ ಭಾರತದಂಥ ರಾಷ್ಟ್ರದಲ್ಲಿಫುಟ್ಬಾಲ್‌ ಆಟಗಾರರೊಬ್ಬರ ಈ ಸಾಧನೆಗೆ ಹೆಚ್ಚಿನ ಮಹತ್ವವಿದೆ. ಕ್ರಿಕೆಟ್‌ನ ಅಬ್ಬರದಲ್ಲಿಫುಟ್ಬಾಲ್‌ ಸೇರಿದಂತೆ ಇತರ ಆಟಗಳಿಗೆ ಪ್ರಾಧಾನ್ಯ, ಪ್ರಾಯೋಜಕತ್ವ ಸಿಗು­ವುದು ಕಷ್ಟ. ಹಾಗಿದ್ದೂ, ಹಲವು ಗುಂಪು ಆಟಗಾರರು ಮತ್ತು ಅಥ್ಲೀಟ್‌ಗಳು ದೇಶದ ಕೀರ್ತಿಯನ್ನು ಆಗಾಗ ಗಗನಕ್ಕೆ ಏರಿಸುತ್ತಲೇ ಇರುತ್ತಾರೆ. ಅಂಥ ಅಭಿಮಾನದ ಕ್ಷ ಣಕ್ಕೆ ಸುನಿಲ್‌ ಈಗ ಕಾರಣವಾಗಿದ್ದಾರೆ.

ದಂತಕತೆ ಬೈಚುಂಗ್‌ ಭುಟಿಯಾ ಬಳಿಕ ಸುನಿಲ್‌ ಛೆತ್ರಿ ಭಾರತೀಯ ಫುಟ್ಬಾಲ್‌ ನೊಗವನ್ನು ಸಮರ್ಥವಾಗಿ ಎಳೆಯುತ್ತಿದ್ದಾರೆ. ಇಂಡಿಯನ್‌ ಸೂಪರ್‌ ಲೀಗ್‌(ಐಸಿಎಲ್‌)ನಲ್ಲಿಬೆಂಗಳೂರು ಫುಟ್ಬಾಲ್‌ ಕ್ಲಬ್‌(ಬಿಎಫ್‌ಸಿ) ಪರವಾಗಿಯೂ ಆಡುತ್ತಿರುವ  ‘ಕ್ಯಾಪ್ಟನ್‌ ಫೆಂಟಾಸ್ಟಿಕ್‌’ ಸುನೀಲ್‌ ಛೆತ್ರಿ ಹುಟ್ಟಿದ್ದು ಈಗಿನ ತೆಲಂಗಾಣದ ಸಿಕಂದರಾಬಾದ್‌ನಲ್ಲಿ1984ರ ಆಗಸ್ಟ್‌ 3ರಂದು. ತಂದೆ ಕೆ.ಬಿ.ಛೆತ್ರಿ, ತಾಯಿ ಸುಶೀಲಾ. ತಂದೆ ಭಾರತೀಯ ಸೇನೆಯಲ್ಲಿಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಮೆಕಾನಿಕಲ್‌ ಎಂಜಿನಿಯರ್‌ ಅಧಿಕಾರಿ. ಸುನಿಲ್‌ ಅವರು ತಂದೆ ಅವರೂ ಭಾರತೀಯ ಸೇನೆಯ ಪರವಾಗಿ ಫುಟ್ಬಾಲ್‌ ಆಡಿದ್ದಾರೆ. ತಾಯಿ ಸುಶೀಲಾ ಹಾಗೂ ಅವರ ಇಬ್ಬರು ಅವಳಿ ಸಹೋದರಿಯರು ನೇಪಾಳದ ಮಹಿಳಾ ರಾಷ್ಟ್ರೀಯ ಫುಟ್ಬಾಲ್‌ ತಂಡಕ್ಕೆ ಆಡುತ್ತಿದ್ದರು. ತಂದೆ ತಾಯಿ ಇಬ್ಬರೂ ಫುಟ್ಬಾಲ್‌ ಆಟಗಾರರು; ಸುನಿಲ್‌ಗೆ ಫುಟ್ಬಾಲ್‌ ರಕ್ತಗತ.

ತಂದೆ ಸೇನೆಯಲ್ಲಿಅಧಿಕಾರಿಯಾಗಿದ್ದರಿಂದಾಗಿ ಸುನಿಲ್‌ ಶಾಲಾ ಶಿಕ್ಷ ಣ ಒಂದೇ ರಾಜ್ಯಕ್ಕೆ ಸಿಮೀತವಾಗಲಿಲ್ಲ. ಸಿಕ್ಕಿಮ್‌ನ ಗ್ಯಾಂಗ್ಟಕ್‌ನ ಬಹಾಯಿ ಸ್ಕೂಲ್‌, ಪಶ್ಚಿಮ ಬಂಗಾಳದ ಡಾರ್ಜೀಲಿಂಗ್‌ ಬೆತ್ನೀಸ್‌ ಸ್ಕೂಲ್‌, ಕೋಲ್ಕೊತಾದ ಲೊಯೊಲಾ ಸ್ಕೂಲ್‌ ಮತ್ತು ದಿಲ್ಲಿಯ ಆರ್ಮಿ ಪಬ್ಲಿಕ್‌ ಸ್ಕೂಲ್‌ನಲ್ಲಿಶಾಲಾ ಶಿಕ್ಷ ಣವನ್ನು ಪೂರೈಸಿದ್ದಾರೆ. ಕೋಲ್ಕೊತಾದ ಅಶುತೋಷ ಕಾಲೇಜ್‌ನಲ್ಲಿಪ್ರವೇಶ ಪಡೆದು, 12ನೇ ತರಗತಿಯಲ್ಲಿಓದುತ್ತಿದ್ದಾಗಲೇ 2001ರಲ್ಲಿಮಲೇಷ್ಯಾದಲ್ಲಿಆಯೋಜಿಸಲಾಗಿದ್ದ ಏಷ್ಯನ್‌ ಸ್ಕೂಲ್‌ ಚಾಂಪಿಯನ್‌ಶಿಪ್‌ಗೆ ಭಾರತೀಯ ತಂಡಧಿವನ್ನು ಪ್ರತಿನಿಧಿಸುವ ಅವಕಾಶ ಒದಗಿ ಬಂತು. ಕಾಲೇಜು ಶಿಕ್ಷ ಣಧಿಧಿಧಿವನ್ನು ಅರ್ಧಕ್ಕೆ ಮೊಟಕುಧಿಗೊಳಿಸಧಿಬೇಕಾ­ಧಿಯಿತು. ಮುಂದಿನ ನಾಲ್ಕೈದು ವರ್ಷದಲ್ಲಿಅವರು ಭಾರತೀಯ ರಾಷ್ಟ್ರೀಯ ಫುಟ್ಬಾಲ್‌ ತಂಡಕ್ಕೆ ಪ್ರವೇಶ ಪಡೆದರು. ನಂತರ ನಡೆದಿದ್ದೆಲ್ಲಇತಿಹಾಸ.

ಸುನಿಲ್‌ ತಮ್ಮ ಬಹುಕಾಲದ ಗೆಳತಿ ಸೋನಂ ಭಟ್ಟಾಚಾರ್ಯ ಅವರನ್ನು 2017ರಲ್ಲಿಮದುವೆಯಾದರು. ಈ ಸೋನಮ್‌ ಬೇರೆ ಯಾರೂ ಅಲ್ಲ. ರಾಷ್ಟ್ರೀಯ ಫುಟ್ಬಾಲ್‌ ತಂಡದ ಮಾಜಿ ಆಟಗಾರ, ಮೋಹನ್‌ ಬಗಾನ್‌ ತಂಡದ ದಂತಕತೆ ಸುಬ್ರತ ಭಟ್ಟಾಚಾರ್ಯ ಅವರ ಪುತ್ರಿ. ಇವರು ಛೆತ್ರಿ ಮೆಂಟರ್‌ ಕೂಡ. ಸುನಿಲ್‌ ಅವರ ಆಟ ಹಾಗೂ ವ್ಯಕ್ತಿತ್ವದ ಮೇಲೆ ಅವರ ತಾಯಿ ದಟ್ಟ ಪ್ರಭಾವ ಬೀರಿದ್ದಾರೆಂಬುದು ಅವರ ಮಾತುಗಳನ್ನು ಕೇಳಿದರೆ ಅರಿವಾ­ಗುತ್ತದೆ. ‘‘ಆಟದ ಬಗ್ಗೆ ಹೇಳುವುದಾದರೆ ಅದು ನನ್ನ ತಂದೆ, ತಾಯಿಂದಲೇ ಆರಂಭವಾಗುತ್ತದೆ, ವಿಶೇಷವಾಗಿ ನನ್ನ ತಾಯಿ. ತಾಯಿಯೊಂದಿಗೆ ಕೇರಂ, ಚೆಸ್‌, ಚೀನೀಸ್‌ ಚೆಕರ್ಸ್‌ ಮತ್ತು ಇತರ ಹೊರಾಂಗಣ ಕ್ರೀಡೆಗಳನ್ನು ಆಡುವುದು ತೀರಾ ಸಾಮಾನ್ಯವಾಗಿತ್ತು. ನನಗೆ 13 ವರ್ಷವಾಗೋವರೆಗೂ ಈ ಯಾವುದೇ ಆಟದಲ್ಲೂನನ್ನ ತಾಯಿಯನ್ನು ಸೋಲಿಸಲು ನನ್ನಿಂದಾ­ಗಲಿಲ್ಲ. ಅವರೂ ಎಂದು ಸೋಲಲು ಒಪ್ಪುತ್ತಿರಲಿಲ್ಲ. ಸೋಲು ಒಪ್ಪಿಕೊಳ್ಳ­ದಿರುವ ಗುಣ ನನ್ನ ತಾಯಿಯಿಂದಲೇ ಬಂದಿದೆ ನನಗೂ ಬಂದಿದೆ,’’  ಎನ್ನುತ್ತಾರೆ ಅವರು. ಬೈಚುಂಗ್‌ ಭುಟಿಯಾ ಅವರಿಂದಲೂ ಸಾಕಷ್ಟು ಕಲಿತಿದ್ದೇನೆ. ಅವರ ಸರಳ ವ್ಯಕ್ತಿತ್ವ ತುಂಬಾ ಇಷ್ಟ ಎನ್ನುತ್ತಾರೆ ಅವರು.

ರಾಷ್ಟ್ರೀಯ ತಂಡದ ಪರವಾಗಿ ಅತಿ ಹೆಚ್ಚು ಪಂದ್ಯಗಳು ಹಾಗೂ ಗೋಲು ಬಾರಿಸಿರುವ ದಾಖಲೆಯನ್ನು ಹೊಂದಿರುವ ಸುನಿಲ್‌ಅವರು ತಮ್ಮ ವೃತ್ತಿಪರ ಫುಟ್ಬಾಲ್‌ ಆಟವನ್ನು 2002ರಲ್ಲಿಏಷ್ಯಾದ ಹಳೆಯ ಕ್ಲಬ್‌ಗಳಲ್ಲಿಒಂದಾಗಿರುವ ಮೋಹನ್‌ ಬಗಾನ್‌ ಕ್ಲಬ್‌ನೊಂದಿಗೆ ಆರಂಭಿಸಿಧಿದರು. ಬಳಿಕ ಜೆಸಿಟಿ ಕ್ಲಬ್‌ಗೆ ವಲಸೆ ಬಂದು, 48 ಪಂದ್ಯಗಳಲ್ಲಿ21 ಗೋಲು ಬಾರಿಸಿ ಗಮನ ಸೆಳೆದರು. 2010ರಲ್ಲಿಮೇಜರ್‌ ಲೀಗ್‌ ಸಾಕರ್‌ನಲ್ಲಿಕನ್ಸಾಸ್‌ ಸಿಟಿ ವಿಜಾರ್ಡ್ಸ್‌ನೊಂದಿಗೆ ಗುರುಧಿತಿಸಿಧಿಕೊಂಡರು. ಈ ಮೂಲಕ ವಿದೇಶದ ಕ್ಲಬ್‌ ಪರವಾಗಿ ಆಟವಾಡಿದ ಭಾರತೀಯ ಉಪಖಂಡದ ಮೂರನೇ ಆಟಗಾರ ಎನಿಸಿಕೊಂಡರು. ಅಲ್ಲಿಂದ ಹಿಂದಿರುಗಿದ ಬಳಿಕ ಚಿರಾಗ್‌ ಯುನೈಟೆಡ್‌, ಮೋಹನ್‌ ಬಗಾನ್‌ ಪರವಾಗಿ ಐ ಲೀಗ್‌ನಲ್ಲಿಆಡಿದರು. ಮತ್ತೆ ವಿದೇಶಕ್ಕೆ ತೆರಳಿ ಪೋರ್ಚುಗಲ್‌ನ ಸ್ಪೋರ್ಟಿಂಗ್‌ ಕ್ಲಬ್‌ ಸೇರಿದರು. 2005ರಲ್ಲಿಭಾರತೀಯ ರಾಷ್ಟ್ರೀಯ ಫುಟ್ಬಾಲ್‌ ತಂಡವನ್ನು ಸೇರಿ, ತಮ್ಮ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡಿದರು. ಈ ಪಂದ್ಯದಲ್ಲಿಅವರು ತಮ್ಮ ಮೊದಲ ಅಂತಾರಾಷ್ಟ್ರೀಯ ಗೋಲು ಹೊಡೆದರು.

ಸುನಿಲ್‌ ಛೆತ್ರಿ ಅವರ ನೆರವಿನಿಂದಾಗಿ ಭಾರತ ತಂಡವು 2007, 2009 ಮತ್ತು 2012ರಲ್ಲಿನೆಹರು ಕಪ್‌ ಮತ್ತು 2011ರ ಎಸ್‌ಎಎಫ್‌ಎಫ್‌ ಚಾಂಪಿ­ಯನ್‌ಶಿಪ್‌ ಗೆದ್ದುಕೊಂಡಿತು. 2008ರ ಏಷ್ಯನ್‌ ಫುಟ್ಬಾಲ್‌ ಕಾನೆಧಿಡೆರಷನ್‌(ಎಎಫ್‌ಸಿ) ಚಾಲೆಂಜ್‌ ಕಪ್‌ ಗೆಲ್ಲುವಲ್ಲಿಯೂ ಅವರ ಪಾತ್ರ ಮಹತ್ವ­ದ್ದಾಗಿತ್ತು. ಈ ಗೆಲುವಿನಿಂದಾಗಿಯೇ ಭಾರತವು 27 ವರ್ಷಗಳ ಬಳಿಕ ಎಎಫ್‌ಸಿ ಏಷ್ಯನ್‌ ಕಪ್‌ ಪಂದ್ಯಾವಳಿಯಲ್ಲಿಆಡಲು ಅರ್ಹತೆ ಪಡೆದು­ಕೊಂಡಿತು. 2007, 2011, 2013, 2014, 2017 ಮತ್ತು 2019 ಹೀಗೆ ದಾಖಲೆಯ ಆರು ಬಾರಿ ಎಐಎಫ್‌ಎಫ್‌(ಆಲ್‌ ಇಂಡಿಯಾ ಫುಟ್ಬಾಲ್‌ ಫೆಡರೆಷನ್‌) ವರ್ಷದ ಆಟಗಾರ ಎಂದು ಅವರನ್ನು ಹೆಸರಿಸಲಾಗಿದೆ. 2014ರಲ್ಲಿಇವರ ನೇತೃತ್ವದಲ್ಲಿಬೆಂಗಳೂರು ಫುಟ್ಬಾಲ್‌ ಕ್ಲಬ್‌ ಚೊಚ್ಚಿಲ ಋುತುವಿನಲ್ಲಿಪ್ರಶಸ್ತಿ ಗೆದ್ದುಕೊಂಡಿತು.

ಭಾರತದಲ್ಲಿಕ್ರಿಕೆಟ್‌ ನಂತರ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆಟ ಫುಟ್ಬಾಲ್‌. 36 ವರ್ಷದ ಸುನಿಲ್‌  ಭಾರಧಿತೀಯ ಫುಟ್ಬಾಲ್‌ ತಂಡದ ಧ್ರುವತಾರೆ. ಹೊಸ ಪೀಳಿಗೆಯ ಆಟಗಾರರಿಗೆ ಅವರು ರೋಲ್‌ಮಾಡೆಲ್‌. ಭಾರತದ ಕ್ರೀಡಾಕ್ಷೇತ್ರದ ಪ್ರಮುಖ ಪ್ರಶಸ್ತಿ ಅರ್ಜುನ್‌ ಅವಾರ್ಡ್‌ಧಿ (2011), ದೇಶದ ನಾಲ್ಕನೇ ಅತ್ಯುಚ್ಚ ನಾಗರಿಕ ಪ್ರಶಸ್ತಿ ಪದ್ಮಶ್ರೀ ಮತ್ತು ದಿಲ್ಲಿಫುಟ್ಬಾಲ್‌ ಅಸೋಷಿಯೇಷನ್‌ನ ಫುಟ್ಬಾಲ್‌ ರತ್ನ ಅವಾರ್ಡ್‌  ಸಾಧನೆಯ ಕಿರೀಟಧಿವನ್ನು ಅಲಂಕರಿಸಿವೆ. ಶಾರುಖ್‌ ಖಾನ್‌ ಮತ್ತು ಸಚಿನ್‌ ತೆಂಡೂಲ್ಕರ್‌ ಅವರನ್ನು ಇಷ್ಟಪಡುವ ಅವರಿಗೆ ಸಂಗೀತ ಕೇಳುವುದು ಸಿಕ್ಕಾಪಟ್ಟೆ ಇಷ್ಟ. ಹಾಬಿಯಾಗಿ ಕ್ರಿಕೆಟ್‌, ಬ್ಯಾಡ್ಮಿಂಟ್‌, ಟೆನ್ನಿಸ್‌ ಕೂಡ ಆಡುತ್ತಾರೆ. ಬೆಂಗಳೂರು ಎಫ್‌ಸಿ ಮೂಲಕ  ಅವರು ಕನ್ನಡ ನಾಡಿಗೆ ಇನ್ನಷ್ಟು ಹತ್ತಿರವಾಗಿದ್ದೆರಂಬುದೂ ನಮಗೆ ಹೆಮ್ಮೆಯೇ ಸರಿ.


ಈ ಲೇಖನವು ವಿಜಯ ಕರ್ನಾಟಕ ಪತ್ರಿಕೆಯ 2021ರ ಜೂನ್ 13ರ ಸಂಚಿಕೆಯಲ್ಲಿ ಪ್ರಕಟವಾಗಿದೆ.


ಶನಿವಾರ, ಜೂನ್ 12, 2021

Dr siddalingaiah- 'ಊರು ಕೇರಿ' ಬಿಟ್ಟು ನಡೆದ ಕವಿ ಸಿದ್ದಲಿಂಗಯ್ಯ

 ಕವಿ ಡಾ. ಸಿದ್ದಲಿಂಗಯ್ಯ ನಿಧನದಿಂದಾಗಿ ನಮ್ಮ ನೆಲದ ಹೋರಾಟದ, ಸಾಂಸ್ಕೃತಿಕ ಚಿಂತನೆಯ ದೊಡ್ಡದೊಂದು ಸತ್ವ ನಮ್ಮೊಳಗಿಂದ ಕಳೆದುಹೋದ ಭಾವ. ನಾಡಿನೆಲ್ಲೆಡೆ ದಲಿತ ಪ್ರಜ್ಞೆ ವಿಸ್ತರಿಸಿ, ಸಾಮೂದಾಯಿಕ ಜಾಗೃತಿಯನ್ನು ತಮ್ಮ ಬಂಡಾಯ ಭಾವದ ಕವಿತೆಗಳ ಮೂಲಕವೇ ಇವರು ಅಭಿವ್ಯಕ್ತಿಸಿದ್ದರು. ಇವರ ಬರಹ, ಹೋರಾಟಗಳೆಲ್ಲವೂ ಅನುಕರಣೀಯ, ದಾರಿದೀಪ.


ಡಾ.  ಸಿದ್ದಲಿಂಗಯ್ಯ ಅವರು ದಲಿತ ಸಮುದಾಯದ ಒಳಬೇಗುದಿ, ನೋವು, ಶೋಷಣೆ, ಅಪಮಾನ, ಮಡುಗಟ್ಟಿದ ಆಕ್ರೋಶವನ್ನು ಅಭಿವ್ಯಕ್ತಿಸಲು ಬಳಸಿದ ಪದಗಳು ನಿಗಿ ನಿಗಿ ಕೆಂಡ. ಅವು ಅಷ್ಟೇ ಆಗಿದ್ದರೆ, ವ್ಯಕ್ತಿಗತ ಆಕ್ರೋಶದ ನುಡಿಗಳಾ ಗಿರುತ್ತಿದ್ದವು; ಹಾಗಾಗಲಿಲ್ಲ. ಬಂಡಾಯ, ಪ್ರತಿಭಟನೆಯ ಸತ್ವ ದೊಂದಿಗೆ ಸಾಹಿತ್ಯಿಕ ಗುಣ ಅವರ ಕವಿತೆಗಳಲ್ಲಿದ್ದುದರಿಂದ ಸಾರ್ವತ್ರಿಕ ಎನಿಸಿಕೊಂಡವು. 

ಅವರ ಪ್ರಸಿದ್ಧ ಕವಿತೆ ‘ಇಕ್ರಲಾ ವದೀರ್ಲಾ...’ ಸಾಲುಗಳು ಮೇಲ್ನೋಟಕ್ಕೆ ರೋಷವನ್ನು ಅಭಿವ್ಯಕ್ತಿಸಿದರೂ ಆಳದಲ್ಲಿನೋವಿನ ನುಡಿಗಳೇ ಆಗಿವೆ. ನೋವು ಮತ್ತು ಆಕ್ರೋಶದ ಮೂಲಕವೇ ಅಭಿಧಿಧಿವ್ಯಕ್ತಿಯ ದಾರಿಯನ್ನು ಕಂಡುಕೊಂಡವರು ಅವರು. 

ಬರೆದ ಪ್ರತಿ ಕವಿತೆಯೂ, ಪ್ರತಿ ಪದವೂ ಸ್ವರೂಪದಲ್ಲಿಬಂಡಾಯವನ್ನು ಪ್ರತಿನಿಧಿಸುತ್ತವೆ. ಅವರು ಸಾಹಿತ್ಯ ಕೃಷಿ ಆರಂಭಿಸಿದ ಕಾಲದ ಸಂದರ್ಭವು ಕಾವ್ಯಕ್ಕೆ ಸೂಧಿರ್ತಿಯಾಗಿತ್ತು. ಡಾ. ಸಿದ್ದಲಿಂಗಯ್ಯ ಅವರು ತಮ್ಮ ಕವಿತೆ, ನಾಟಕ, ಪ್ರಬಂಧ, ವಿಮರ್ಶೆ, ಗದ್ಯದ ಮೂಲಕ ದಲಿತರ ಪ್ರಜ್ಞೆಯನ್ನು ವಿಸ್ತರಿಸಿಧಿದರು; ಸಾಮೂದಾಯಿಕ ಜಾಗೃತಿ ಹೆಚ್ಚಿಸಿದರು.  ಈ ಮೂಲಕ ನಾಡಿನ ಬಂಡಾಯ ಮತ್ತು ದಲಿತ ಸಾಹಿತ್ಯಕ್ಕೆ ಹೊಸ ಕಸುವು ತುಂಬಿದರು. ಪ್ರತಿಭಟನಾಸ್ತ್ರವನ್ನಾಗಿ ಸಾಹಿತ್ಯವನ್ನು ಬಳಸಿಕೊಂಡು ಜಾಗೃತಿಯ ದೀವಿಟಿಗೆಯನ್ನು ಮತ್ತೊಂದು ಪೀಳಿಗೆಗೆ ದಾಟಿಸಿದರು. ಕರ್ನಾಟಕದ ಮಟ್ಟಿಗೆ ದಲಿತ ಸಾಹಿತ್ಯದ ಇತಿಹಾಸವನ್ನು ಬರೆದರೆ ಅದು ಡಾ. ಸಿದ್ದಲಿಂಗಯ್ಯ ಅವರ ಸಾಹಿತ್ಯದ ಇತಿಹಾಸವೂ ಆಗುತ್ತದೆ. 

ಈಗಿನ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದ ಬಡ, ಶೋಷಿತ ಕುಟುಂಬದಲ್ಲಿ1954 ಫೆಬ್ರವರಿ 3ರಂದು ಸಿದ್ದಲಿಂಗಯ್ಯ ಅವರು ಜನಿಸಿದರು. ತಂದೆ ದೇವಯ್ಯ, ತಾಯಿ ವೆಂಕಮ್ಮ. ಹಳ್ಳಿಯಲ್ಲಿಪ್ರಾಥಮಿಕ ಶಾಲೆ ಮುಗಿಸಿ ಬಂದು ಸೇರಿದ್ದು ಬೆಂಗಳೂರಿನ ಮಲ್ಲೇಶ್ವರದ ಸರಕಾರಿ ಹೈಸ್ಕೂಲ್‌ಗೆ. ಹಾಸ್ಟೆಲ್‌ನಲ್ಲಿವಾಸ್ತವ್ಯ. ಬಳಿಕ ಬೆಂಗಳೂರು ವಿವಿಯಿಂದ ಕನ್ನಡದಲ್ಲಿಎಂಎ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಪದವಿ ಪಡೆದುಕೊಂಡರು. ಕವಿ ಜಿ ಎಸ್‌ ಶಿವರುದ್ರಪ್ಪ ಅವರು ಸಿದ್ದಲಿಂಗಯ್ಯ ಅವರನ್ನು ಸಂಶೋಧಕ ಸಹಾಯಕರನ್ನಾಗಿ ನೇಮಕ ಮಾಡಿಕೊಂಡರು. ಮುಂದೆ ಬೆಂಗಳೂರು ವಿವಿಯ ಕನ್ನಡ ಪ್ರಧ್ಯಾಪಕರಾಗಿ, ಕನ್ನಡ ವಿಭಾಗ ಮುಖ್ಯಸ್ಥರಾದರು. ಡಾ. ಅಂಬೇಡ್ಕರ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. 

ಸಾಹಿತ್ಯ ಕೃತಿಗಳು: 1975ರಲ್ಲಿಪ್ರಕಟಗೊಂಡ ‘ಹೊಲೆ ಮಾದಿಗರ ಹಾಡು’ ಸಿದ್ದಲಿಂಗಯ್ಯರ ಮೊದಲ ಕವನ ಸಂಕಲನ.  ಆ ಬಳಿಕ ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು, ಮೆರವಣಿಗೆ, ನನ್ನ ಜನಗಳು ಮತ್ತು ಇತರ ಕವಿತೆಗಳು, ಆಯ್ದ ಕವನಗಳು, ಅಲ್ಲೆಕುಂತವರೆ ಕವನ ಸಂಕಲನಗಳು ಪ್ರಕಟಗೊಂಡು ಜನಮನ್ನಣೆ ಗಳಿಸಿದವು.  ಏಕಲವ್ಯ(1986), ನೆಲಸಮ(1980), ಪಂಚಮ (1980) ಅವರು ರಚಿಸಿದ ನಾಟಕಗಳು. ಹಕ್ಕಿ ನೋಟ, ರಸಗಳಿಗೆಗಳು, ಎಡಬಲ, ಉರಿಕಂಡಾಯ ಅವರ ವಿಮರ್ಶಾ ಕೃತಿಗಳು. ‘ಊರು ಕೇರಿ’ ಅವರ ಸಿದ್ದಲಿಂಗಯ್ಯ ಆತ್ಮಚರಿತ್ರೆಯಾಗಿದೆ. ಇದು ಸಂಪುಟಗಳಲ್ಲಿಪ್ರಕಟವಾಗಿದೆ. ಅವತಾರಗಳು, ಸದನದಲ್ಲಿಸಿದ್ದಲಿಂಗಯ್ಯ ಭಾಗ -1, ಸದನದಲ್ಲಿಸಿದ್ದಲಿಂಗಯ್ಯ ಭಾಗ -2 ಮತ್ತು ಜನಸಂಸ್ಕೃತಿ ಅವರ ಲೇಖನ ಸಂಗ್ರಹಗಳು.

ಎರಡು ಬಾರಿ ಎಂಎಲ್ಸಿ
ಡಾ. ಸಿದ್ದಲಿಂಗಯ್ಯ ಅವರು 1988ರಿಂದ 1994 ಮತ್ತು  1995ರಿಂದ 2001ರ ತನಕ ಎರಡು ಅವಧಿಗೆ ಕರ್ನಾಟಕ ವಿಧಾನ ಪರಿಷತ್‌ ಸದಸ್ಯರಾಗಿದ್ದರು. ಈ ಅವಧಿಯಲ್ಲಿನಾಡು ನುಡಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಗಮನ ಸೆಳೆಯುವಲ್ಲಿಯಶಸ್ವಿಯಾಗಿದ್ದರು. ಜೊತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಪುಸ್ತಕ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಗಿಯೂ ಗಮನಾರ್ಹ ಕೆಲಸ ಮಾಡಿದ್ದಾರೆ.

ಇಕ್ರಲಾ ವದಿರ್ಲಾ...!
ಸಿದ್ದಲಿಂಗಯ್ಯ ಅವರ ಕವಿತೆಗಳು ಬಂಡಾಯದ ಕಹಳೆಯೂದಿ ಕ್ರಾಂತಿ ಗೀತೆಗಳು ಎನಿಸಿಧಿಕೊಂಡವು. ಆ ಪೈಕಿ ‘ಇಕ್ರಲಾ ವದೀರ್ಲಾ/ ಈ ನನ್ನ ಮಕ್ಕಳ ಚರ್ಮ ಎಬ್ರಲಾ...’, ‘ನಿನ್ನೆ ದಿನ/ ನನ್ನ ಜನ/ ಬೆಟ್ಟದಂತೆ ಬಂದರು...’, ‘ಯಾರಿಗೆ ಬಂತು, ಎಲ್ಲಿಗೆ ಬಂತು ನಲ್ವತ್ತೇಳರ ಸ್ವಾತಂತ್ರ್ಯ..’,  ‘ಹಸಿವಿನಿಂದ ಸತ್ತೋರು, ಸೈಜುಗಲ್ಲುಹೊತ್ತೋರು/ ವದಿಸಿಕೊಂಡು ವರಗಿದವರು ನನ್ನ ಜನರು...’ ಕವಿತೆಗಳು ಪ್ರಮುಖವಾದವು. ಇಕ್ರಲಾ ವದೀರ್ಲಾ ಕವಿತೆಯಂತೂ ಧ್ವನಿಸುವ ಪ್ರತಿಭಟನೆ, ಬಂಡಾಯ, ಆಕ್ರೋಶದಿಂದಾಗಿ ಹೆಚ್ಚು ಜನಪ್ರಿಯವಾಗಿತ್ತು. ಇಂಥ ಕವಿತೆಗಳನ್ನು ಬರೆದಿದ್ದ ಸಿದ್ದಲಿಂಗಯ್ಯನವರು, ಆ ಬೆಟ್ಟದಲಿ ಸುಳಿದಾಡ ಬೇಡ ಗೆಳತಿ... ಎಂಬ ನವಿರು ಪ್ರೇಮಗೀತೆಯನ್ನು ಬರೆದು ಅಚ್ಚರಿ ಮೂಡಿಸಿದ್ದರು.

ಪ್ರಶಸ್ತಿಗಳು
ಪಂಪ, ನೃಪತುಂಗ, ಆಳ್ವಾಸ್‌ ನುಡಿಸಿರಿ, ನಾಡೋಜ, ಸಂದೇಶ, ಡಾ. ಅಂಬೇಡ್ಕರ್‌, ಜಾನಪದ ತಜ್ಞ, ರಾಜ್ಯೋತ್ಸವ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ. ಉತ್ತಮ ಚಲನಚಿತ್ರ ಗೀತ ರಚನೆಗಾಗಿ ಕರ್ನಾಟಕ ಸರಕಾರದಿಂದ ಪ್ರಶಸ್ತಿ ಕೂಡ ಬಂದಿದೆ.  ಶ್ರವಣಬೆಳಗೊಳ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ರಾಗಿದ್ದರು.

(2021ರ ಜೂನ್ 12ರ ವಿಜಯ ಕರ್ನಾಟಕ ವರದಿಯಲ್ಲಿ ಪ್ರಕಟವಾದ ವರದಿ)

ಗುರುವಾರ, ಜೂನ್ 3, 2021

George Fernandes- The Statesman: ಜಾರ್ಜ್... ನೀವು ಸದಾ ನೆನಪಿನಲ್ಲಿರುತ್ತೀರಿ

ಕಾರ್ಮಿಕ ಚಳವಳಿಯ ಅಗ್ರಮಾನ್ಯ ನಾಯಕರಾಗಿ, ಸಮಾಜವಾದಿ ಚಿಂತಕರಾಗಿ ಜಾರ್ಜ್ ಫರ್ನಾಂಡಿಸ್ ಅವರು ಏರಿದ ಎತ್ತರ ಅಷ್ಟಿಷ್ಟಲ್ಲ. ರಾಜಕಾರಣಿಗಳಿಗೆ ಅವರು ರೋಲ್ ಮಾಡೆಲ್. ಜೂನ್ 3 ಜಾರ್ಜ್ ಫರ್ನಾಂಡಿಸ್ ಹುಟ್ಟಿದ ದಿನ. ಅವರ ನೆನಪಿನಲ್ಲಿ...

 

- ಮಲ್ಲಿಕಾರ್ಜುನ ತಿಪ್ಪಾರ
ಹೋರಾಟದ ಮೂಲಕವೇ ರಾಜಕೀಯ ಏಳ್ಗೆ ಕಂಡು, ಜನ ಮತ್ತು ದೇಶಕ್ಕೆ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯದನ್ನು ಮಾಡಿದವರು ಜಾರ್ಜ್ ಫರ್ನಾಂಡಿಸ್. ಅವರನ್ನು ಕೇವಲ ರಾಜಕಾರಣಿ ಎಂಬ ಒಂದೇ ಪದದಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಹೋರಾಟಗಾರ, ಕಾರ್ಮಿಕ ಮುಖಂಡ, ಪ್ರಖರ ಸಮಾಜವಾದಿ, ಸಮತಾವಾದಿ, ಅತ್ಯುತ್ತಮ ವಾಗ್ಮಿ... ಹೀಗೆ ಏನೆಲ್ಲ ವಿಶೇಷಣಗಳನ್ನು ಅವರಿಗೆ ಧಾರಾಳವಾಗಿ ನೀಡಬಹುದು. ಅವರು ಎಂದೂ ತಾವು ನಂಬಿದ ಸಿದ್ಧಾಂತಕ್ಕೆ ತಿಲಾಂಜಲಿ ಇಡಲಿಲ್ಲ. ರಾಜಕೀಯದಲ್ಲಿ ಏರಬೇಕಾದ ಎಲ್ಲ ಮಜಲುಗಳನ್ನು ಏರಿದರು; ಯಾವುದಕ್ಕೂ ರಾಜಿಯಾಗಲಿಲ್ಲ. ಅಧಿಕಾರ ಸುಖ ಅವರನ್ನು ಆಲಸಿಯಾಗಿ ಮಾಡಲಿಲ್ಲ; ಗರ್ವಿಷ್ಠರನ್ನಾಗಿಸಲಿಲ್ಲ. ಅಧಿಕಾರ ಬರುವ ಮುಂಚೆ ಹೇಗಿದ್ದರೋ, ಕುರ್ಚಿಯಲ್ಲಿ ಕುಳಿತಾಗಲೂ ಹಾಗೆಯೇ ಇದ್ದರು. ತಾವು ಏರಿದ ಪ್ರತಿ ಹುದ್ದೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದರು.

ಅವರ ಉಡುಗೆ ತೊಡುಗೆ ಸಿಂಪಲ್‌. ಒಂದು ಖಾದಿ ಪ್ಯಾಂಟ್‌; ಇಸ್ತ್ರಿಯಾಗದ ಖಾದಿ ಜುಬ್ಬಾ, ಇಷ್ಟೆ ಅವರ ತೊಡುಗೆ. ಬಿಳಿ ಕೂದಲು ತುಂಬಿದ ತಲೆ, ಮುಖಕ್ಕೊಂದು ಅಗಲವಾದ ಕನ್ನಡಕ ಅವರ ಒಟ್ಟು ವ್ಯಕ್ತಿತ್ವಕ್ಕೆ ಒಂದು ಗಂಭೀರತೆಯನ್ನು ತಂದುಕೊಟ್ಟಿತ್ತು. ಆದರೆ, ಅವರ ಜೀವನ ಮಾತ್ರ ಸರಳವಾಗಿರಲಿಲ್ಲ. ಮೂಲತಃ ಕರ್ನಾಟಕದವರಾದರೂ ಇಡೀ ಭಾರತವೇ ಅವರ ಹೋರಾಟದ ಅಂಗಣವಾಗಿತ್ತು. ಅವರು ಕಾಲಿಟ್ಟ ಕಡೆ ಹೋರಾಟದ ಹೆಜ್ಜೆಗಳು ಮೂಡುತ್ತಿದ್ದವು. ಮಂಗಳೂರು, ಬೆಂಗಳೂರು, ಮುಂಬಯಿ, ಬಿಹಾರ, ದಿಲ್ಲಿ... ಹೀಗೆ ಅವರ ಕಾರ್ಯಕ್ಷೇತ್ರ ಹರಡಿಕೊಳ್ಳುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಗ್ಗೆ ಯಾವಾಗಲೂ ಚಿಂತನೆಗಳಿರುತ್ತಿದ್ದವು. ಕಾರ್ಮಿಕರ ಶ್ರೇಯೋಭಿವೃದ್ಧಿಯೇ ಮೂಲಮಂತ್ರವಾಗಿತ್ತು. ಅವರ ಹಿತರಕ್ಷ ಣೆಗೆ ಎಂಥ ಹೋರಾಟಕ್ಕೂ ಅಣಿಯಾಗುತ್ತಿದ್ದರು. ಒಮ್ಮೆ ಅವರ ಮುಷ್ಕರ ಕರೆಗೆ ಇಡೀ ದೇಶವೇ ಸ್ತಬ್ಧವಾಗಿತ್ತು; ಅಂಥ ಧೀಃಶಕ್ತಿ ಅವರಲ್ಲಿತ್ತು. ಆದರೆ, ಅವರ ಕೊನೆಯ ದಿನಗಳು ಮಾತ್ರ ಯಾತನಾಮಯವಾಗಿದ್ದವು ಎಂಬುದು ಅವರನ್ನು ಇಷ್ಟಪಡೋರಿಗೆ ಅರಗಿಸಿಕೊಳ್ಳಲಾಗದ ಸಂಗತಿ.

ಕನ್ನಡದ ಕುವರ
ಜಾರ್ಜ್‌ ಫರ್ನಾಂಡಿಸ್‌ ಕನ್ನಡದವರು ಎಂಬುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಅವರು ಕರಾವಳಿಯ ಮಂಗಳೂರಿನವರು.
1930 ಜೂನ್‌ 3ರಂದು ಮಂಗಳೂರಿನ ಕ್ಯಾಥೋಲಿಕ್‌ ಕುಟುಂಬದಲ್ಲಿ ಜನಿಸಿದರು. ತಂದೆ ಜೋಸೆಫ್‌ ಫರ್ನಾಂಡಿಸ್‌, ತಾಯಿ ಅಲಿಶಾ ಮಾರ್ಥಾ ಫರ್ನಾಂಡಿಸ್‌. ಇವರಿಗೆ ಆರು ಮಕ್ಕಳು. ಜಾರ್ಜ್‌ ಹಿರಿಯರು. ಕುಟುಂಬದಲ್ಲಿ ಜಾರ್ಜ್‌ ಅವರನ್ನು ಪ್ರೀತಿಯಿಂದ ಎಲ್ಲರೂ ಜರ್ರಿ ಎಂದು ಕರೆಯುತ್ತಿದ್ದರು. ಜೋಸೆಫ್‌ ಅವರದ್ದು ಕ್ರಿಶ್ಚಿಯನ್‌ ಸಂಪ್ರದಾಯಸ್ಥ ಕುಟುಂಬ. ಹಾಗಾಗಿ, ಹಿರಿಯ ಮಗ ಪಾದ್ರಿಯಾಗಲಿ ಎಂದು ಅವರನ್ನು ಪಾದ್ರಿ ತರಬೇತಿಗೆ ಬೆಂಗಳೂರಿಗೆ ಕಳುಹಿಸಿಕೊಟ್ಟರು. ಆದರೆ ಜಾರ್ಜ್‌ ಪಾದ್ರಿಯಾಗಲಿಲ್ಲ. ಬೆಂಗಳೂರು ಬಿಟ್ಟು ಸೀದಾ ಮುಂಬೈ(ಅಂದಿನ ಬಾಂಬೆ)ಗೆ ತೆರಳಿದರು. ಆಗ ಅವರಿಗೆ ಕೇವಲ 19 ವರ್ಷ. ಮುಂಬೈನ ಬೀದಿಗಳಲ್ಲಿ ಅಲೆಯುತ್ತಿದ್ದ ಜಾರ್ಜ್‌ಗೆ ಪರಿಚಯದವರು ಯಾರೂ ಇರಲಿಲ್ಲ. ಎಷ್ಟೋ ಸಾರಿ ಅವರು ಸಮುದ್ರ ತೀರ ಮತ್ತು ರಸ್ತೆಗಳಲ್ಲಿ ಮಲಗುತ್ತಿದ್ದರು. ಸ್ಥಳೀಯ ಪತ್ರಿಕೆಯೊಂದರಲ್ಲಿ ಕೆಲಸ ಸಿಗುವವರೆಗೂ ಕೈಗೆ ಸಿಕ್ಕ ಕೆಲಸಗಳನ್ನು ಮಾಡಿದರು. ಮುಂಬೈಯಲ್ಲಿ ಅವರದ್ದು ಅಕ್ಷರಶಃ ಕಷ್ಟದ ಜೀವನವೇ ಆಗಿತ್ತು.

ಜಾರ್ಜ್ ಫರ್ನಾಂಡಿಸ್ (ಚಿತ್ರ ಕೃಪೆ-ಇಂಟರ್ನೆಟ್)
ಲೋಹಿಯಾ ಮತ್ತು ಡಿಮೆಲ್ಲೊ ಸಂಪರ್ಕ
ಮುಂಬೈ ಜೀವನದಲ್ಲಿ ಹೋರಾಟ ಬದುಕು ನಡೆಸುತ್ತಿರುವಾಗಲೇ ಸಮಾಜವಾದಿ ನಾಯಕ ರಾಮಮನೋಹರ ಲೋಹಿಯಾ ಮತ್ತು ಹಿರಿಯ ಕಾರ್ಮಿಕ ಮುಖಂಡ ಡಿ'ಮೆಲ್ಲೊ ಅವರ ಸಂಪರ್ಕ ಜಾರ್ಜ್‌ಗೆ ದೊರಕಿತು. ಇಲ್ಲಿಂದಲೇ ಜಾರ್ಜ್‌ ಅವರ ಹೋರಾಟದ ಮಜಲುಗಳು ಆರಂಭವಾದವು. ಅದು ಕಾರ್ಮಿಕ ಚಳವಳಿಕ ಉಚ್ಛ್ರಾಯ ಕಾಲ. ಹಾಗಾಗಿ, ನಿಧಾನವಾಗಿ ಕಾರ್ಮಿಕ ಚಳವಳಿಯಲ್ಲಿ ಜಾರ್ಜ್‌ ಅಗ್ರಗಣ್ಯ ನಾಯಕರಾಗಿ ರೂಪುಗೊಂಡರು. ಅಲ್ಲಿಂದ ಅವರು 1961ರಲ್ಲಿ ಬಾಂಬೆ ಮುನ್ಸಿಪಲ್‌ ಕಾರ್ಪೊರೇಷನ್‌ಗೆ ಸ್ಪರ್ಧಿಸಿ ಆಯ್ಕೆಯಾದರು. ಹೋರಾಟದ ಜತೆಗೆ ರಾಜಕೀಯ ಜೀವನವನ್ನು ಆರಂಭಿಸಿದರು.

ಜಾರ್ಜ್‌ ದಿ ಜೈಂಟ್‌ ಕಿಲ್ಲರ್‌!
ಕಾರ್ಪೊರೇಷನ್‌ಗೆ ಆಯ್ಕೆಯಾದ ಆರು ವರ್ಷದ ಬಳಿಕ ಜಾರ್ಜ್‌ ಲೋಕಸಭೆ ಸ್ಪರ್ಧೆಗೆ ಮುಂದಾದರು. ದಕ್ಷಿಣ ಮುಂಬೈ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸಿದರು. ಅವರ ಎದುರಾಳಿ
, ಮಹಾರಾಷ್ಟ್ರದ ಅಂದಿನ ಪ್ರಖ್ಯಾತ ಕಾಂಗ್ರೆಸ್‌ ನಾಯಕ ಎಸ್‌.ಕೆ.ಪಾಟೀಲ್‌. ಈ ಚುನಾವಣೆಯಲ್ಲಿ ಜಾರ್ಜ್‌ ಅವರನ್ನು ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ, ಫಲಿತಾಂಶ ಪ್ರಕಟವಾದಾಗ ಮಾತ್ರ ಎಲ್ಲರಿಗೂ ಆಶ್ಚರ್ಯವಾಗಿತ್ತು. ಪ್ರಭಾವಿ ಪಾಟೀಲ್‌ರನ್ನು ಸೋಲಿಸಿ ಜಾರ್ಜ್‌ ಆಯ್ಕೆಯಾಗಿದ್ದರು. ಅಲ್ಲಿಂದಲೇ ಅವರಿಗೆ The Giant Killer ಎಂಬ ಹೆಸರು ಬಂತು. ಇಲ್ಲಿಂದ ಅವರು ರಾಜಕೀಯದಲ್ಲಿ ಹಿಂದಿರುಗಿ ನೋಡಲಿಲ್ಲ. ಹೋರಾಟದ ಜತೆಗೆ ರಾಜಕೀಯದಲ್ಲಿ ಒಂದೊಂದೇ ಮೆಟ್ಟಿಲು ಮೇಲೇರಿದರು.

ಭೂಗತ ನಾಯಕ
1974ರ ಹೊತ್ತಿಗೆ ದೇಶದಲ್ಲಿ ಜಾರ್ಜ್‌ ಜನಪ್ರಿಯ ಹೆಸರಾಗಿತ್ತು. ಈ ಅವಧಿಯಲ್ಲಿ ಅವರು ರೇಲ್ವೆ ಕಾರ್ಮಿಕರ ಮುಷ್ಕರಕ್ಕೆ ಕರೆ ಕೊಟ್ಟಿದ್ದರು. ಅದು ಎಷ್ಟು ಪರಿಣಾಮಕಾರಿ ಕರೆಯಾಗಿತ್ತು ಎಂದರೆ, ಇಡೀ ದೇಶ ಅಕ್ಷ ರಶಃ ಸ್ತಬ್ಧವಾಗಿತ್ತು. ಈ ಮುಷ್ಕರಕ್ಕೆ ದೇಶದ ಎಲ್ಲ ಉದ್ಯಮ ವಲಯಗಳಿಂದ ಬೆಂಬಲ ದೊರಕಿತ್ತು. ಮೂರು ವಾರಗಳ ಈ ಮುಷ್ಕರ ಅಂದಿನ ಪ್ರಧಾನಿ ಇಂದಿರಾ ಗಾಂಧಿಯಲ್ಲೂ ಅಭದ್ರತೆ ಹುಟ್ಟು ಹಾಕಿತ್ತು ಎಂದರೆ ಅದರ ಪರಿಣಾವನ್ನು ಯಾರಾದರೂ ಊಹಿಸಬಹುದು. ಇದೇ ಸಂದರ್ಭದಲ್ಲಿ 'ಲೋಕ ನಾಯಕ' ಜಯಪ್ರಕಾಶ್‌ ನಾರಾಯಣ್‌ ಅವರ ಮೂವ್‌ಮೆಂಟ್‌ ಫಾರ್‌ ಚೇಂಜ್‌ ಚಳವಳಿಯಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದರು. ಆಂತರಿಕವಾಗಿ ಹೆಚ್ಚುತ್ತಿದ್ದ ಸರಕಾರ ವಿರೋಧಿ ಧೋರಣೆ ಮತ್ತೊಂದೆಡೆ ಕೋರ್ಟ್‌ನಲ್ಲಾದ ಹಿನ್ನಡೆಯನ್ನು ಅರಗಿಸಿಕೊಳ್ಳಲಾಗದ ಇಂದಿರಾ ಗಾಂಧಿ 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಪ್ರತಿಪಕ್ಷ ನಾಯಕರು ಜೈಲು ಪಾಲಾದರು. ಆಗ ಜಾರ್ಜ್‌ ಮತ್ತು ಅವರ ಜತೆಗಿದ್ದವರು ಭೂಗತರಾದರು. ಈ ಸಂದರ್ಭದಲ್ಲಿ ಬರೋಡಾದಿಂದ ಡೈನಮೈಟ್‌ ತಂದು ಸರಕಾರಿ ಕಚೇರಿಗಳನ್ನು ಧ್ವಂಸಗೊಳಿಸುವ ಯೋಜನೆ ಜಾರ್ಜ್‌ ಅವರದ್ದಾಗಿತ್ತು. ಆದರೆ, ಕೋಲ್ಕತಾ(ಅಂದಿನ ಕಲ್ಕತ್ತಾ)ದಲ್ಲಿ ಸೆರೆ ಸಿಕ್ಕರು. ಡೈನಮೈಟ್‌ ಕದ್ದ ಆರೋಪವನ್ನು ಜಾರ್ಜ್‌ ಮೇಲೆ ಹಾಕಿ ಅವರನ್ನು 9 ತಿಂಗಳು ಕಾಲ ತಿಹಾರ್‌ ಜೈಲಿನಲ್ಲಿ ಇಡಲಾಯಿತು. ಈ ಪ್ರಕರಣವೇ ಮುಂದೆ 'ಬರೋಡಾ ಡೈನಮೈಟ್‌' ಎಂದು ಪ್ರಖ್ಯಾತವಾಯಿತು. ಜೈಲಿನಲ್ಲಿದ್ದುಕೊಂಡೇ ಬಿಹಾರದ ಮುಜಾಫರ್‌ನಗರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ, ಮೂರು ಲಕ್ಷ ಮತಗಳ ಅಂತರದಿಂದ ಗೆದ್ದರು. ಜಾರ್ಜ್‌ ಅವರನ್ನು ಬಂಧಿಸಿದ ಕ್ಷ ಣದಲ್ಲಿ ಅವರ ಕೋಳ ತೊಟ್ಟ ಕೈ ಮೇಲತ್ತಿದ ಫೋಟೋ ಈ ಗೆಲುವಿನಲ್ಲಿ ಭಾರಿ ಪ್ರಭಾವ ಬೀರಿತ್ತು!

ಸಚಿವರಾದರು ಜಾರ್ಜ್‌
ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿತು. ಇದೇ ಮೊದಲ ಬಾರಿಗೆ ಮೊರಾರ್ಜಿ ದೇಸಾಯಿ ನೇತೃತ್ವದ ಪ್ರಥಮ ಕಾಂಗ್ರೆಸ್ಸೇತರ ಸರಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂತು. ತುರ್ತು ಪರಿಸ್ಥಿತಿಯಲ್ಲಿ ಜೈಲುಪಾಲಾಗಿದ್ದ ನಾಯಕರೆಲ್ಲ ಬಿಡುಗಡೆಗೊಂಡರು. ಜಾರ್ಜ್‌ ಅವರು ದೇಸಾಯಿ ಸಂಪುಟದಲ್ಲಿ ಕೈಗಾರಿಕಾ ಸಚಿವರಾದರು. ಬಂಡವಾಳ ಹೂಡಿಕೆ ನಿಯಮಗಳನ್ನು ಉಲ್ಲಂಘಿಸಿದ್ದ ಅಮೆರಿಕ ಐಬಿಎಂ ಮತ್ತು ಕೊಕಾಕೋಲಾ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡ ಫಲವಾಗಿ ಅವರೆಡೂ ಕಂಪನಿಗಳು ಭಾರತದಿಂದ ಕಾಲು ಕೀಳಬೇಕಾಯಿತು. ಮುಂದೆ ಜನತಾ ದಳ ನಾಯಕ ವಿ.ಪಿ. ಸಿಂಗ್‌ ನೇತೃತ್ವದ ಸರಕಾರದಲ್ಲಿ ರೇಲ್ವೆ ಸಚಿವರಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರು. ಪಶ್ಚಿಮ ಕರಾವಳಿಯನ್ನು ಸಂಪರ್ಕಿಸುವ ಕೊಂಕಣ ರೇಲ್ವೆ ಯೋಜನೆ ಅನುಷ್ಠಾನಗೊಳಿಸಿದರು.

ಬಿಜೆಪಿಯ ಸಖ್ಯ
ಜೆಪಿ ಚಳವಳಿಯಲ್ಲಿ ಉದಯಿಸಿದ ನಾಯಕರ ಜನತಾ ಪರಿವಾರ ದಿಕ್ಕಾಪಾಲಾದ ಸಂದರ್ಭ ಅದು. ರಾಜಕೀಯ ಅನಿವಾರ್ಯತೆ ಮತ್ತು ಕಾಂಗ್ರೆಸ್‌ ವಿರೋಧಿ ನೀತಿಯ ಪ್ರಮುಖ ಧ್ಯೇಯದಿಂದಾಗಿ ಜಾರ್ಜ್‌ ಅವರು ಅನಿವಾರ್ಯವಾಗಿ ಬಿಜೆಪಿಯ ಅಟಲ್‌ ಬಿಹಾರಿ ವಾಜಪೇಯಿ, ಎಲ್‌.ಕೆ.ಆಡ್ವಾಣಿ ಜತೆ ಕೈ ಜೋಡಿಸಬೇಕಾಯಿತು. ವಿಶೇಷ ಎಂದರೆ, ಆರ್‌ಎಸ್‌ಎಸ್‌ ನೀತಿಯನ್ನು ಜಾರ್ಜ್‌ ಟೀಕಿಸುತ್ತಿದ್ದರು. ಹಾಗಿದ್ದೂ ಅವರು ಬಿಜೆಪಿ ಜತೆ ಹೆಜ್ಜೆ ಹಾಕಬೇಕಾಯಿತು. ಜತೆಗೆ ಬಿಜೆಪಿ ನೇತೃತ್ವದ ನ್ಯಾಷನಲ್‌ ಡೆಮಾಕ್ರಟಿಕ್‌ ಅಲಯನ್ಸ್‌-ಎನ್‌ಡಿಎ ಸಂಚಾಲಕರಾದರು. ಯಾರೂ ನಿರೀಕ್ಷಿಸದ ರೀತಿಯಲ್ಲಿ
1998ರಲ್ಲಿ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು. ಆಗ ಜಾರ್ಜ್‌ ಅವರಿಗೆ ರಕ್ಷಣಾ ಸಚಿವ ಸ್ಥಾನ ತಾನಾಗಿಯೇ ಒಲಿದು ಬಂತು. ವಿಪರ್ಯಾಸ ಎಂದರೆ, ಜಾರ್ಜ್‌ ತಮ್ಮ ಬದುಕಿನುದ್ದಕ್ಕೂ ಅಣ್ವಸ್ತ್ರಗಳನ್ನು ವಿರೋಧಿಸುತ್ತಲೇ ಬಂದಿದ್ದರು. ಆದರೆ, ಅದೇ ಜಾರ್ಜ್‌ ಅವರು ಅಣ್ವಸ್ತ್ರ ಪರೀಕ್ಷೆಯಲ್ಲಿ ವಾಜಪೇಯಿ ಜತೆ ಪಾಲುದಾರರಾದರು!

ಬೆನ್ನತ್ತಿದ ವಿವಾದಗಳು
ಜಾರ್ಜ್‌ ಅವರು ರಕ್ಷಣಾ ಸಚಿವರಾಗಿದ್ದಾಗಲೇ ಬಾರಾಕ್‌ ಕ್ಷಿಪಣಿ ಮತ್ತು ತೆಹಲ್ಕಾ ಹಗರಣಗಳು ಬೆನ್ನು ಹತ್ತಿದವು. ಇದಕ್ಕಾಗಿ ಅವರು ರಕ್ಷಣಾ ಸಚಿವ ಸ್ಥಾನವನ್ನು ತೊರೆಯಬೇಕಾಯಿತು. ಮುಂದೆ ತನಿಖೆ ವೇಳೆ ಜಾರ್ಜ್‌ ಅವರು ನಿರ್ದೋಷಿ ಎಂದು ಸಾಬೀತಾದ ಮೇಲೆ ಮತ್ತೆ ರಕ್ಷ ಣಾ ಸಚಿವರಾದರು. ಆದರೆ, ಕಾರ್ಗಿಲ್‌ ಯುದ್ಧದ ವೇಳೆ ಖರೀದಿಸಲಾದ ಶವಪೆಟ್ಟಿಗೆಗಳ ಹಗರಣ ಮತ್ತೆ ಜಾರ್ಜ್‌ ತಲೆಯೇರಿತು. ತೀರಾ ಇತ್ತೀಚೆಗಷ್ಟೇ ಈ ಹಗರಣದಲ್ಲೂ ಜಾರ್ಜ್‌ ಅವರು ನಿರ್ದೋಷಿ ಎಂದು ಸಾಬೀತಾಯಿತಾದರೂ, ಅದನ್ನು ಕೇಳಿ ಸಂತೋಷ ಪಡುವ ಸ್ಥಿತಿಯಲ್ಲಿ ಜಾರ್ಜ್‌ ಇರಲಿಲ್ಲ. ಸಾಮಾನ್ಯವಾಗಿ ಭಾರತದ ಮಗ್ಗಲು ಮುಳ್ಳು ಪಾಕಿಸ್ತಾನ ಎಂದು ಬಹುತೇಕ ರಾಜಕಾರಣಿಗಳು ಹೇಳುತ್ತಾರೆ. ಆದರೆ, ಜಾರ್ಜ್‌ ಮಾತ್ರ ಭಾರತದ ನಂ.1ವೈರಿ ಪಾಕಿಸ್ತಾನವಲ್ಲ ಚೀನಾ ಎಂದು ಬಹಿರಂಗವಾಗಿ ಹೇಳುವ ಮೂಲಕ ಭಾರಿ ಸಂಚಲನಕ್ಕೆ ಕಾರಣವಾಗಿದ್ದರು.

ನೇಪಥ್ಯಕ್ಕೆ ಜಾರಿದ ಜಾರ್ಜ್‌
2004ರಲ್ಲಿ ವಾಜಪೇಯಿ ನೇತೃತ್ವದ ಎನ್‌ಡಿಎ ಮರಳಿ ಅಧಿಕಾರ ಹಿಡಿಯಲಿದೆ ಎಂದೇ ಭಾವಿಸಲಾಗಿತ್ತು. ಆದರೆ, ಯಾರೂ ನಿರೀಕ್ಷಿಸದ ರೀತಿಯಲ್ಲಿ ಎನ್‌ಡಿಎ ಸೋಲು ಕಂಡು ಕಾಂಗ್ರೆಸ್‌ ನೇತೃತ್ವದ ಯುಪಿಎ ಅಧಿಕಾರಕ್ಕೆ ಬಂತು. ಈ ಅವಧಿಯಲ್ಲಿ ದೇಶದ ಇಬ್ಬರು ಪ್ರಮುಖ ನಾಯಕರು ನೇಪಥ್ಯಕ್ಕೆ ಜಾರುವಂತಾಯಿತು. ಒಬ್ಬರು ಪ್ರಧಾನಿಯಾಗಿದ್ದ ಅಟಲ್‌ ಬಿಹಾರಿ ವಾಜಪೇಯಿ, ಮತ್ತೊಬ್ಬರು ಜಾರ್ಜ್‌. ನಂತರ ಅವರಿಗೆ ಅಲ್ಜೈಮರ್‌ ಕಾಯಿಲೆ ಉಲ್ಬಣಗೊಂಡು ಸಂಪೂರ್ಣವಾಗಿ ಸಾರ್ವಜನಿಕ ಜೀವನದಿಂದ ಮರೆಯಾಗಬೇಕಾಯಿತು.

ಮರಳಿ ಬಾರದ ಲೋಕಕ್ಕೆ
ಜಾರ್ಜ್‌ ಅದ್ಭುತ ಮಾತುಗಾರರು. ಅವರು ಭಾಷಣಕ್ಕೆ ನಿಂತರೆ ಇಡೀ ಜನಸಮೂಹ ತದೇಕ ಚಿತ್ತದಿಂದ ಆಲಿಸುತ್ತಿತ್ತು. ಸಂಸತ್ತಿನಲ್ಲಿ ಮಾತನಾಡಲು ಆರಂಭಿಸಿದರೆ ಇಡೀ ಸಂಸತ್ತೇ ಕಿವಿಯಾಗುತ್ತಿತ್ತು. ಕೊಂಕಣಿ, ಕನ್ನಡ, ಇಂಗ್ಲಿಷ್‌, ಹಿಂದಿ, ಮರಾಠಿ, ತುಳು, ತಮಿಳು, ಉರ್ದು ಸೇರಿದಂತೆ 10 ಭಾಷೆಗಳಲ್ಲಿ ಜಾರ್ಜ್‌ ನಿರರ್ಗಳವಾಗಿ ಮಾತನಾಡುತ್ತಿದ್ದರು. ಪ್ರಖರ ಸಮಾಜವಾದಿಯಾಗಿದ್ದ ಜಾರ್ಜ್‌ ತುಂಬ ದಿನಗಳ ಕಾಲ ಅನಾರೋಗ್ಯಪೀಡಿತರಾಗಿ ಕೊನೆಯ ದಿನಗಳನ್ನು ಅತ್ಯಂತ ಯಾತನೆಯಲ್ಲಿ ಕಳೆದರು. 2019ರ ಜನವರಿ 29ರಂದು ಇಹಲೋಕ ತ್ಯಜಿಸಿದರು.

ವಿಯೆಟ್ನಾಮಿಯಾಗಿ ಹುಟ್ಟುವೆ!
''ಒಂದು ವೇಳೆ ಪುನರ್ಜನ್ಮ ಎಂಬುದಿದ್ದರೆ ನಾನು ವಿಯೆಟ್ನಾಮಿಯಾಗಿ(ವಿಯೆಟ್ನಾಮ್‌ ಪ್ರಜೆ) ಹುಟ್ಟುವೆ,'' ಎಂದು ಜಾರ್ಜ್‌ ಒಮ್ಮೆ ಹೇಳಿದ್ದರು. ಒಂದುವರೆ ದಶಕದ ಹಿಂದೆ ಬೆಂಗಳೂರಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಈ ಬಯಕೆಯನ್ನು ಅವರು ಹೊರಹಾಕಿದ್ದರು. ''ವಿಯೆಟ್ನಾಮಿ ಜನರು ತಮ್ಮ ಬದ್ಧತೆಯನ್ನು ಪೂರೈಸಲು ಸಾಯಲು ಸಿದ್ಧರಾಗಿರುತ್ತಾರೆ. ಅಂಥ ಶಿಸ್ತು ಅವರಲ್ಲಿರುತ್ತದೆ. ನಾನು ವಿಯೆಟ್ನಾಮ್‌ನ ಅಭಿಮಾನಿ,'' ಎಂದು ಹೇಳಿದ್ದರು.